News Kadaba

ಗುಜರಾತ್‌ನಲ್ಲಿ 3.4 ತೀವ್ರತೆಯ ಭೂಕಂಪನ

(ನ್ಯೂಸ್ ಕಡಬ) newskadaba.com, ಮೇ.03. ಅಹಮದಾಬಾದ್: ಉತ್ತರ ಗುಜರಾತ್‌ನಲ್ಲಿ ಇಂದು ಮುಂಜಾನೆ 3.4 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ಭೂಕಂಪಶಾಸ್ತ್ರ ಸಂಶೋಧನಾ ಸಂಸ್ಥೆ (ಐಎಸ್‌ಆರ್) ತಿಳಿಸಿದೆ. ಜಿಲ್ಲಾಡಳಿತದ ಪ್ರಕಾರ, ಯಾವುದೇ ಸಾವುನೋವು ಅಥವಾ ಆಸ್ತಿಪಾಸ್ತಿ ಹಾನಿಯ ಬಗ್ಗೆ ವರದಿಯಾಗಿಲ್ಲ.ಬನಸ್ಕಾಂತ ಜಿಲ್ಲೆಯ ವಾವ್ ಬಳಿ ಮುಂಜಾನೆ 3.35 ಕ್ಕೆ ಭೂಕಂಪದ ಕೇಂದ್ರಬಿಂದು ದಾಖಲಾಗಿದೆ ಎಂದು ಐಎಸ್‌ಆರ್ ತನ್ನ ಇತ್ತೀಚಿನ ವರದಿಯಲ್ಲಿ ತಿಳಿಸಿದೆ. ವಾವ್‌ನಿಂದ ಪೂರ್ವ-ಈಶಾನ್ಯಕ್ಕೆ (ಇಎನ್‌ಇ) 27 ಕಿ.ಮೀ ದೂರದಲ್ಲಿ 4.9 ಕಿ.ಮೀ ಆಳದಲ್ಲಿ ಭೂಕಂಪನ ದಾಖಲಾಗಿದೆ ಎಂದು ಗಾಂಧಿನಗರ […]

ಗುಜರಾತ್‌ನಲ್ಲಿ 3.4 ತೀವ್ರತೆಯ ಭೂಕಂಪನ Read More »

ಬ್ರೇಕಿಂಗ್ ನ್ಯೂಸ್

ಶಿರಗಾವ್‌ ದೇವಸ್ಥಾನದಲ್ಲಿ ಕಾಲ್ತುಳಿತ; 7 ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com, ಮೇ.03. ಮಂಗಳೂರು: ಉತ್ತರ ಗೋವಾದ ಶಿರ್ಗಾವ್​​​ ದೇವಸ್ಥಾನದ ಜಾತ್ರಾ ಮಹೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 7 ಜನರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ ಜನರಿಗೆ ಗಾಯಗಳಾಗಿರುವಂತಹ ಘಟನೆ ನಡೆದಿದೆ. ಗೋವಾದ ಶಿರ್ಗಾಂವ್ ಗ್ರಾಮದಲ್ಲಿ ಲೈರೈ ದೇವಿ ವಾರ್ಷಿಕ ಜಾತ್ರಾ ಮಹೋತ್ಸವ ಜರುಗಿತ್ತು. ಶತಮಾನಗಳಷ್ಟು ಹಳೆಯದಾದ ಈ ದೇವಿ ದೇವಸ್ಥಾನದ ಆಚರಣೆಗಳನ್ನು ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದ ವೇಳೆ ಈ ಅವಘಡ ಸಂಭವಿಸಿದೆ. ಜಾತ್ರಾ ಮಹೋತ್ಸವ ವೇಳೆ ಜನರು ಒಂದು ಗುಂಪೊಂದು ನಿಯಂತ್ರಣ ಕಳೆದುಕೊಂಡು ಕಾಲ್ತುಳಿತ

ಶಿರಗಾವ್‌ ದೇವಸ್ಥಾನದಲ್ಲಿ ಕಾಲ್ತುಳಿತ; 7 ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ Read More »

ಬ್ರೇಕಿಂಗ್ ನ್ಯೂಸ್

ಸುಹಾಸ್ ಶೆಟ್ಟಿ ಕೊಲೆ : ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಭಾವನೆ ಕೆರಳಿಸಿದವರ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com, ಮೇ.03. ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ನಿಪದವು ಬಳಿ ನಡೆದ ಸುಹಾಸ್ ಶೆಟ್ಟಿ ಹತ್ಯೆ ಸಂಬಂಧವಾಗಿ ಕೆಲವು ಸಾಮಾಜಿಕ ಜಾಲತಾಣಗಳಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟುಮಾಡುವ ಉದ್ದೇಶದಿಂದ ಕೆಲವು ವ್ಯಕ್ತಿಗಳು ಹಾಗೂ ಗ್ರೂಪುಗಳು ಸಾಮಾಜಿಕ ಮಾಧ್ಯಮದ ಮೂಲಕ ಒಂದು ಸಮುದಾಯವನ್ನು ಮತ್ತೊಂದು ಸಮುದಾಯದ ವಿರುದ್ಧ ದ್ವೇಷ ಭಾವನೆ ಹುಟ್ಟುವಂತೆ ಪೋಸ್ಟ್ ಮಾಡುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ ಠಾಣೆಗಳಲ್ಲಿ ಕೆಳಗಿನಂತೆ ಪ್ರಕರಣಗಳನ್ನುದಾಖಲಿಸಿದೆ.

ಸುಹಾಸ್ ಶೆಟ್ಟಿ ಕೊಲೆ : ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಭಾವನೆ ಕೆರಳಿಸಿದವರ ವಿರುದ್ದ ಪ್ರಕರಣ ದಾಖಲು Read More »

ಕರಾವಳಿ

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ

(ನ್ಯೂಸ್ ಕಡಬ) newskadaba.com ಮೇ.01: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಮುಕ್ತಾಯಗೊಂಡು, ಇದೀಗ ಮೌಲ್ಯಮಾಪನ ಕೂಡ ಮುಕ್ತಾಯಗೊಂಡಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಶುಕ್ರವಾರ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿ ನಡೆಸಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 12.30ರ ನಂತರ ವೆಬ್‌ಸೈಟ್‌ನಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಲಭ್ಯವಾಗಲಿದೆ. https://karresults.nic.in/ ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಎಸ್‌ಎಸ್‌ಎಲ್‌ಸಿ

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ Read More »

ಕರ್ನಾಟಕ

ಗುಂಪು ಹತ್ಯೆ ಘಟನೆಗೆ ಸಂಬಂಧಿಸಿದಂತೆ ಪ್ರಚೋದನಕಾರಿ ಸುಳ್ಳು ಪೋಸ್ಟ್: ಮಂಗಳೂರು ಪೊಲೀಸರಿಂದ 3 ಕೇಸ್ ದಾಖಲು

(ನ್ಯೂಸ್ ಕಡಬ) newskadaba.com ಮೇ.01: ಮಂಗಳೂರು: ಮಂಗಳೂರಿನ ಕುಡುಪುನಲ್ಲಿ ಇತ್ತೀಚೆಗೆ ನಡೆದ ಗುಂಪು ಹತ್ಯೆ ಘಟನೆಗೆ ಸಂಬಂಧಿಸಿದಂತೆ ನಗರದಲ್ಲಿ ಅಶಾಂತಿ ಉಂಟುಮಾಡುವ ಉದ್ದೇಶದಿಂದ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ನಕಲಿ ಮತ್ತು ಪ್ರಚೋದನಕಾರಿ ವಿಷಯ ಪೋಸ್ಟ್ ಮಾಡಿದವರ ವಿರುದ್ಧ ಮಂಗಳೂರು ನಗರ ಪೊಲೀಸರು ಪ್ರಕರಣಗಳನ್ನು ದಾಖಲಿಸಿದ್ದಾರೆ. ಕುಡುಪು ಬಳಿ ಇತ್ತೀಚೆಗೆ ನಡೆದ ದಿನಗೂಲಿ ಕಾರ್ಮಿಕನ ಹತ್ಯೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸುಳ್ಳು ಮತ್ತು ದಾರಿತಪ್ಪಿಸುವ ಮಾಹಿತಿ ಹರಿದಾಡುತ್ತಿರುವುದು ಕಂಡುಬಂದಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್

ಗುಂಪು ಹತ್ಯೆ ಘಟನೆಗೆ ಸಂಬಂಧಿಸಿದಂತೆ ಪ್ರಚೋದನಕಾರಿ ಸುಳ್ಳು ಪೋಸ್ಟ್: ಮಂಗಳೂರು ಪೊಲೀಸರಿಂದ 3 ಕೇಸ್ ದಾಖಲು Read More »

ಕರಾವಳಿ

ಕಾರಿನ ಟೈರ್‌ ಸ್ಪೋಟಗೊಂಡು ಡಿವೈಡರ್‌ಗೆ ಡಿಕ್ಕಿ , ಗೋವಾ ಪ್ರವಾಸಕ್ಕೆ ತೆರಳುತ್ತಿದ್ದ ಮೂವರ ಸಾವು

(ನ್ಯೂಸ್ ಕಡಬ) newskadaba.com ಮೇ.01: ಗೋವಾ ಪ್ರವಾಸಕ್ಕೆ ತೆರಳುತ್ತಿದ್ದ ಇನ್ನೋವಾ ಕಾರಿನ ಟೈರ್‌ ಸ್ಪೋಟಗೊಂಡು ಚಾಲಕನ ನಿಯಂತ್ರೆಣ ತಪ್ಪಿ ರಸ್ತೆ ಮಧ್ಯದ ಡಿವೈಡರ್‌ಗೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಪರಿಣಾಮ ಮೂವರು ಸಾವನಪ್ಪದ್ದು, 6 ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಕಾತ್ರಾಳ್‌ ಗ್ರಾಮದ ಬಳಿ ಇಂದು ಬೆಳಿಗ್ಗೆ ನಡೆದಿದೆ. ಮೃತರನ್ನು ತಮಿಳುನಾಡಿನ ಅರ್ಜುನ್‌ (28), ಶರವಣ (31), ಸೇಂದಿಲ್‌ (29) ಎಂದು ಗುರುತಿಸಲಾಗಿದೆ. ಅತಿಯಾದ ವೇಗ ಹಾಗೂ ಅಜಾಗರೂಕತೆಯಿಂದ ಕಾರು ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದು

ಕಾರಿನ ಟೈರ್‌ ಸ್ಪೋಟಗೊಂಡು ಡಿವೈಡರ್‌ಗೆ ಡಿಕ್ಕಿ , ಗೋವಾ ಪ್ರವಾಸಕ್ಕೆ ತೆರಳುತ್ತಿದ್ದ ಮೂವರ ಸಾವು Read More »

ಬ್ರೇಕಿಂಗ್ ನ್ಯೂಸ್

ಬಾಟಲಿ ಬೆಟ್ಟಿಂಗ್‌ಗೆ ವ್ಯಕ್ತಿ ಬಲಿ – ಹಣಕ್ಕಾಗಿ ಹೆಣವಾದ ಯುವಕ

(ನ್ಯೂಸ್ ಕಡಬ) newskadaba.com ಮೇ.01: ಬೆಟ್ಟಿಂಗ್‌ ಹುಚ್ಚಿಗೆ ಒಂದು ಜೀವವೇ ಬಲಿಯಾಗಿದೆ. ಹೌದು ಅಜಾಗರೂಕ ಬೆಟ್ಟಿಂಗ್ ನಿಂದಾಗಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಐದು ಪೂರ್ಣ ಬಾಟಲಿ ಮದ್ಯವನ್ನು ನೀರು ಬೆರೆಸದೆ ಸೇವಿಸಿ ಸಾವನ್ನಪ್ಪಿದ ಆಘಾತಕಾರಿ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಪೂಜಾರಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತನನ್ನು ಕಾರ್ತಿಕ್ ಎಂದು ಗುರುತಿಸಲಾಗಿದ್ದು, ಒಂದು ವರ್ಷದ ಹಿಂದೆಯಷ್ಟೇ ವಿವಾಹವಾಗಿದ್ದ ಈತ, ಅದೇ ಗ್ರಾಮದ ಸ್ಥಳೀಯರಾದ ವೆಂಕಟರೆಡ್ಡಿ, ಸುಬ್ರಮಣಿ ಮತ್ತು ಇತರ ಮೂವರೊಂದಿಗೆ ಬೆಟ್ಟಿಂಗ್ ನಡೆಸಿ, ಒಂದು ಹನಿ ನೀರಿಲ್ಲದೆ ಐದು

ಬಾಟಲಿ ಬೆಟ್ಟಿಂಗ್‌ಗೆ ವ್ಯಕ್ತಿ ಬಲಿ – ಹಣಕ್ಕಾಗಿ ಹೆಣವಾದ ಯುವಕ Read More »

ಕರ್ನಾಟಕ

ನೆಲಮಂಗಲ : ಅನಿಲ ಸೋರಿಕೆಯಿಂದ ಮನೆಗೆ ಬೆಂಕಿ ಬಿದ್ದು ಇಬ್ಬರ ಸಾವು, ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಮೇ.01 ನೆಲಮಂಗಲ: ಅನಿಲ ಸೋರಿಕೆಯಿಂದ ಮನೆಗೆ ಬೆಂಕಿ ಬಿದ್ದು ಇಬ್ಬರು ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಡಕಮಾರನಹಳ್ಳಿಯ ಓವರ್‌ ಟ್ಯಾಂಕ್‌ ಬಳಿ ನಡೆದಿದೆ.ನಾಗರಾಜ್‌ (50), ಶ್ರೀನಿವಾಸ್‌‍ (50) ಮೃತ ದುರ್ದೈವಿಗಳು. ಅಡಕಮಾರನಹಳ್ಳಿಯಲ್ಲಿ ನೆಲಮಂಗಲ ಮೂಲದ ಗಂಗಯ್ಯ ಅವರಿಗೆ ದೇರಿದ ಎರಡು ಮನೆಯನ್ನು ಬಾಡಿಗೆಗೆ ನೀಡಲಾಗಿದೆ ಒಂದು ಮನೆಯಲ್ಲಿ ಬಳ್ಳಾರಿ ಮೂಲದ ನಾಗರಾಜ್‌ ಪತ್ನಿ ಲಕ್ಷ್ಮಿ ದೇವಿ (35), ಮಕ್ಕಳಾದ ಬಸನಗೌಡ (19), ಅಭಿಷೇಕ್‌ ಗೌಡ (18) ಎರಡು ವರ್ಷದಿಂದ ವಾಸಿಸುತ್ತಿದ್ದರು. ನಾಗರಾಜ್‌

ನೆಲಮಂಗಲ : ಅನಿಲ ಸೋರಿಕೆಯಿಂದ ಮನೆಗೆ ಬೆಂಕಿ ಬಿದ್ದು ಇಬ್ಬರ ಸಾವು, ಮೂವರಿಗೆ ಗಾಯ Read More »

ಕರ್ನಾಟಕ

ಅಮೃತಸರ : ಪಾಕ್‌ಗೆ ವಾಪಸ್ಸಾಗಬೇಕಿದ್ದ ವ್ಯಕ್ತಿ ಹೃದಯಘಾತದಿಂದ ಸಾವು

(ನ್ಯೂಸ್ ಕಡಬ) newskadaba.com ಮೇ.01 ನವದೆಹಲಿ : ತನ್ನ ದೇಶಕ್ಕೆ ವಾಪಸ್ ಕಳುಹಿಸಬೇಕಿದ್ದ 69 ವರ್ಷದ ಪಾಕಿಸ್ತಾನಿ ಪ್ರಜೆಯೊಬ್ಬರು ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಬ್ದುಲ್ ವಹೀದ್ ನನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶ್ರೀನಗರದಿಂದ ಪಾಕಿಸ್ತಾನಕ್ಕೆ ವಾಪಸು ಕಳುಹಿಸಲು ಕರೆತಂದಿದ್ದರು. ಅವರು ಕಳೆದ 17 ವರ್ಷಗಳಿಂದ ಭಾರತದಲ್ಲಿ ವಾಸಿಸುತ್ತಿದ್ದರು ಮತ್ತು ಅವಧಿ ಮೀರಿದ ವೀಸಾದೊಂದಿಗೆ ಪೊಲೀಸರು ಪತ್ತೆ ಮಾಡಿದ್ದಾರೆ ಎಂದು ಅವರು ಹೇಳಿದರು. ಏತನ್ಮಧ್ಯೆ, ಭಾರತಕ್ಕೆ ಮರಳಲು ಯಾವುದೇ ಬಾಧ್ಯತೆ (ಎನ್‌ಒಆರ್‌ಐ) ವೀಸಾಗಳನ್ನು ಹೊಂದಿರದ

ಅಮೃತಸರ : ಪಾಕ್‌ಗೆ ವಾಪಸ್ಸಾಗಬೇಕಿದ್ದ ವ್ಯಕ್ತಿ ಹೃದಯಘಾತದಿಂದ ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ – ಅಪ್ರಚೋದಿತ ಗುಂಡಿನ ದಾಳಿ

(ನ್ಯೂಸ್ ಕಡಬ) newskadaba.com ಮೇ.01 ನವದೆಹಲಿ : ಪಾಕಿಸ್ತಾನ ಪಡೆಗಳು ಸತತ ಏಳನೇ ದಿನವೂ ನಿಯಂತ್ರಣ ರೇಖೆ (ಎಲ್‌ಒಸಿ)ಯಲ್ಲಿ ಗುಂಡು ಹಾರಿಸಿವೆ ಎಂದು ಭಾರತೀಯ ಸೇನೆ ಗುರುವಾರ ತಿಳಿಸಿದೆ. ಸತತ 7ನೇ ರಾತ್ರಿಯೂ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದೆ. ಪಾಕಿಸ್ತಾನದ ನಿರಂತರ ಅಪ್ರಚೋದಿತ ಉಲ್ಲಂಘನೆಗಳ ಕುರಿತು ಚರ್ಚಿಸಲು ಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒ) ಬುಧವಾರ ಹಾಟ್‌ಲೈನ್‌ನಲ್ಲಿ ಮಾತನಾಡಿದರೂ ಕದನ ವಿರಾಮ ಉಲ್ಲಂಘನೆ ಸಂಭವಿಸಿದೆ. ಎಲ್‌ಒಸಿ ಮತ್ತು ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಸೇನೆಯ ಉಲ್ಲಂಘನೆಗಳ ವಿರುದ್ಧ

ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ – ಅಪ್ರಚೋದಿತ ಗುಂಡಿನ ದಾಳಿ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top