News Kadaba

ರೈಲ್ವೆ ಪರೀಕ್ಷೆಯಲ್ಲಿ ತಾಳಿ, ಜನಿವಾರ ತೆಗೆಸದಿರಲು ಸಚಿವ ವಿ. ಸೋಮಣ್ಣ ಸೂಚನೆ

(ನ್ಯೂಸ್ ಕಡಬ) newskadaba.com ಎ. 28 ಮಂಗಳೂರು: ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಜನಿವಾರ ಮತ್ತು ಮಂಗಳಸೂತ್ರ ತೆಗೆಸಬಾರದು ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪರೀಕ್ಷೆಗೆ ಹಾಜರಾಗುವವರು ಧಾರ್ಮಿಕ ಸಂಕೇತಗಳು ಮತ್ತು ಮಂಗಳಸೂತ್ರವನ್ನು ತೆಗೆದು ಬರಬೇಕು ಎಂದು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಇದಕ್ಕೆ ಹಿಂದೂ ಪರ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಸಿಇಟಿ ಪರೀಕ್ಷೆಯಲ್ಲಿ ಉಂಟಾದ ಜನಿವಾರ ವಿವಾದದಿಂದಾಗಿ ಇದಕ್ಕೆ ಇನ್ನಷ್ಟು ಕಾವು […]

ರೈಲ್ವೆ ಪರೀಕ್ಷೆಯಲ್ಲಿ ತಾಳಿ, ಜನಿವಾರ ತೆಗೆಸದಿರಲು ಸಚಿವ ವಿ. ಸೋಮಣ್ಣ ಸೂಚನೆ Read More »

ಕರಾವಳಿ

ಭಾರತ – ಪಾಕ್ ಉದ್ವಿಗ್ನತೆ ನಡುವೆ ರಾಜನಾಥ್ ಸಿಂಗ್‌ರನ್ನು ಭೇಟಿಯಾದ ರಕ್ಷಣಾ ಪಡೆಗಳ ಮುಖ್ಯಸ್ಥ

(ನ್ಯೂಸ್ ಕಡಬ) newskadaba.com ಎ. 28 ಭೂಪಾಲ್: ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನವನ್ನು ಎದುರಿಸಲು ಸೇನೆಯು ತೆಗೆದುಕೊಂಡ ಪ್ರಮುಖ ನಿರ್ಧಾರಗಳ ಬಗ್ಗೆ ವಿವರಿಸಲು ಜನರಲ್ ಸ್ಟಾಫ್ (ಸಿಡಿಎಸ್) ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಭಾನುವಾರ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ನಿವಾಸಕ್ಕೆ ಆಗಮಿಸಿದರು. ಏಪ್ರಿಲ್ 22 ರಂದು ನಡೆದ ಭೀಕರ ದಾಳಿಗೆ ಪ್ರತಿಕ್ರಿಯೆಯಾಗಿ ಈ ಸಭೆ ಕರೆಯಲಾಗಿತ್ತು, ಈ ದಾಳಿಯಲ್ಲಿ 26 ಜನರು, ಹೆಚ್ಚಾಗಿ ನೇಪಾಳಿ ಪ್ರಜೆಯೊಬ್ಬರು ಸೇರಿದಂತೆ ಪ್ರವಾಸಿಗರು ಕ್ರೂರವಾಗಿ

ಭಾರತ – ಪಾಕ್ ಉದ್ವಿಗ್ನತೆ ನಡುವೆ ರಾಜನಾಥ್ ಸಿಂಗ್‌ರನ್ನು ಭೇಟಿಯಾದ ರಕ್ಷಣಾ ಪಡೆಗಳ ಮುಖ್ಯಸ್ಥ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತೆರೆದ ಬಾವಿಗೆ ವ್ಯಾನ್ ಬಿದ್ದು 12 ಮಂದಿ ದುರ್ಮರಣ

(ನ್ಯೂಸ್ ಕಡಬ) newskadaba.com ಎ. 28 ಭೂಪಾಲ್: ವೇಗವಾಗಿ ಬಂದ ವ್ಯಾನ್ ನಿಯಂತ್ರಣ ತಪ್ಪಿ ತೆರೆದ ಬಾವಿಗೆ ಬಿದ್ದ ಪರಿಣಾಮ 12 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಮಂದಸೌರ್ ಜಿಲ್ಲೆಯಲ್ಲಿ ನಡೆದಿದೆ. ಈ ಅಪಘಾತದಲ್ಲಿ 12 ಜನರು ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡಿದ್ದಾರೆ. ಜಿಲ್ಲೆಯ ನಾರಾಯಣಗಢ ಪೊಲೀಸ್ ಠಾಣೆ ವ್ಯಾಪ್ತಿಯ ಕಚರಿಯಾ ಗ್ರಾಮದಲ್ಲಿ ವೇಗವಾಗಿ ಬಂದ ವ್ಯಾನ್ ನಿಯಂತ್ರಣ ತಪ್ಪಿ ಆಳವಾದ ಬಾವಿಗೆ ಬಿದ್ದ ಕಾರಣ ಈ ದುರ್ಘಟನೆ ನಡೆದಿದೆ. ಮೃತಪಟ್ಟ 12 ಮಂದಿಯಲ್ಲಿ ಬಾವಿಗೆ ಬಿದ್ದವರನ್ನು ರಕ್ಷಿಸಲು ಹೋದ

ತೆರೆದ ಬಾವಿಗೆ ವ್ಯಾನ್ ಬಿದ್ದು 12 ಮಂದಿ ದುರ್ಮರಣ Read More »

ಕರ್ನಾಟಕ

ಭಾರತದಲ್ಲಿ ನೂರಾರು ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್ಗಳಿಗೆ ನಿಷೇಧ

(ನ್ಯೂಸ್ ಕಡಬ) newskadaba.com ಎ. 28 ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಪ್ರಚೋದನಕಾರಿ ಮತ್ತು ಕೋಮು ಸೂಕ್ಷ್ಮ ವಿಷಯವನ್ನು ಹರಡಿದ್ದಕ್ಕಾಗಿ ಒಟ್ಟು 63 ಮಿಲಿಯನ್ ಚಂದಾದಾರರನ್ನು ಹೊಂದಿರುವ ಹದಿನಾರು ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳನ್ನು ಭಾರತದಲ್ಲಿ ನಿಷೇಧಿಸಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಕೇಂದ್ರ ಗೃಹ ಸಚಿವಾಲಯದ ಶಿಫಾರಸಿನ ಮೇರೆಗೆ ಯೂಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಲಾಗಿದೆ. ನಿಷೇಧಿತಗಳಲ್ಲಿ ಡಾನ್, ಸಮಾ ಟಿವಿ, ಎಆರ್‌ವೈ ನ್ಯೂಸ್, ಬೋಲ್ ನ್ಯೂಸ್, ರಫ್ತಾರ್, ಜಿಯೋ ನ್ಯೂಸ್ ಮತ್ತು ಸುನೋ ನ್ಯೂಸ್ ಸುದ್ದಿ ಸಂಸ್ಥೆಗಳ ಯೂಟ್ಯೂಬ್

ಭಾರತದಲ್ಲಿ ನೂರಾರು ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್ಗಳಿಗೆ ನಿಷೇಧ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಗ್ರರ ದಾಳಿ ಬಳಿಕ ದೇಶದ ರಕ್ತ ಕುದಿಯುತ್ತಿದೆ-ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ಎ. 28 ನವದೆಹಲಿ: ಮತ್ತೊಮ್ಮೆ ಹೇಳುತ್ತೇನೆ, ಪಹಲ್ಗಾಂ ಉಗ್ರ ದಾಳಿ ಸಂತ್ರಸ್ತರಿಗೆ ನ್ಯಾಯ ಸಿಕ್ಕೇ ಸಿಗುತ್ತದೆ. 26 ಮಂದಿಯನ್ನು ಬಲಿ ಪಡೆದ ಭಯೋತ್ಪಾದಕರು ಮತ್ತು ದಾಳಿ ಹಿಂದಿನ ರೂವಾರಿಗಳಿಗೆ ಕಠಿಣ ಶಿಕ್ಷೆ ಆಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಮೂಲಕ ಉಗ್ರರು ಮತ್ತು ಉಗ್ರರ ಪೋಷಕ ರಾಷ್ಟ್ರ ಪಾಕಿಸ್ತಾನಕ್ಕೆ ಕಠಿಣ ಶಿಕ್ಷೆ ಕಾದಿದೆ ಎಂಬ ಸ್ಪಷ್ಟ ಸಂದೇಶವನ್ನು ಮತ್ತೊಮ್ಮೆ ರವಾನಿಸಿದ್ದಾರೆ.. ಭಾನುವಾರ ಪ್ರಸಾರಗೊಂಡ ಮಾಸಿಕ ‘ಮನ್‌ ಕಿ ಬಾತ್‌’ ಕಾರ್ಯಕ್ರಮದಲ್ಲಿ ಪಹಲ್ಗಾಂ

ಉಗ್ರರ ದಾಳಿ ಬಳಿಕ ದೇಶದ ರಕ್ತ ಕುದಿಯುತ್ತಿದೆ-ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಅಣ್ಣಾಮಲೈ

(ನ್ಯೂಸ್ ಕಡಬ) newskadaba.com, ಎ.04  : ತಮಿಳುನಾಡು ಬಿಜೆಪಿಯಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ. ಇದೀಗ ಮಹತ್ವದ ಬೆಳವಣಿಗೆಯಲ್ಲಿ  ತಮಿಳುನಾಡು ಬಿಜೆಪಿ ಅಧ್ಯಕ್ಷ ರೇಸ್‌ನಿಂದ ಹಿಂದೆಯ ಸರಿಯಲು ಅಣ್ಣಾಮಲೈ ನಿರ್ಧರಿಸಿದ್ದಾರೆ. ಶೀಘ್ರದಲ್ಲೇ ಅಣ್ಣಾಮಲೈ ಹಾಲಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಎರಡು ವಾರದಲ್ಲಿ ತಮಿಳುನಾಡಿಗೆ ಹೊಸ ಬಿಜೆಪಿ ಅಧ್ಯಕ್ಷರ ಆಯ್ಕೆ ನಡೆಯಲಿದೆ. ಅಣ್ಣಾಮಲೈ ರಾಜೀನಾಮೆ ನಿರ್ಧಾರಕ್ಕೆ ಕೆಲ ಪ್ರಮುಖ ಕಾರಣಗಳು ಬಹಿರಂಗವಾಗಿದೆ. ಎಐಎಡಿಎಂಕೆ ಷರತ್ತಿನಿಂದ ಅಣ್ಣಾಮಲೈ ರಾಜೀನಾಮೆಗೆ ಮುಂಜಾಗಿದ್ದಾರೆ ಅನ್ನೋ ಮಾಹಿತಿಗಳು ಬಹಿರಂಗವಾಗಿದೆ. ಬಿಜೆಪಿ ತಮಿಳುನಾಡು ಘಟಕದ

ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಅಣ್ಣಾಮಲೈ Read More »

ಬ್ರೇಕಿಂಗ್ ನ್ಯೂಸ್

ಕೇಂದ್ರ ನಾಗರಿಕ ವಿಮಾನ ಯಾನ ಖಾತೆ ಸಚಿವರನ್ನು ಭೇಟಿ ಮಾಡಿದ ಸಿಎಂ-ವಿಮಾನ ನಿಲ್ದಾಣಗಳ ಅಭಿವೃದ್ಧಿ ಕುರಿತು ಮನವಿ

(ನ್ಯೂಸ್ ಕಡಬ) newskadaba.com, ಎ.04  : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ಕೇಂದ್ರ ನಾಗರಿಕ ವಿಮಾನ ಯಾನ ಖಾತೆ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಭೇಟಿ ಮಾಡಿ ಮೈಸೂರು, ಕಲಬುರಗಿ, ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿ ಮನವಿ ಪತ್ರ ಸಲ್ಲಿಸಿದರು. ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ರಾಜ್ಯ ಸರ್ಕಾರವು ದಿನಾಂಕ 6-10-2005 ರಂದು ಒಪ್ಪಂದ ಮಾಡಿಕೊಂಡಿದೆ. ಒಪ್ಪಂದದ ನಿಯಮ

ಕೇಂದ್ರ ನಾಗರಿಕ ವಿಮಾನ ಯಾನ ಖಾತೆ ಸಚಿವರನ್ನು ಭೇಟಿ ಮಾಡಿದ ಸಿಎಂ-ವಿಮಾನ ನಿಲ್ದಾಣಗಳ ಅಭಿವೃದ್ಧಿ ಕುರಿತು ಮನವಿ Read More »

ಕರ್ನಾಟಕ

ಶೇಖ್ ಹಸೀನಾ ಪದಚ್ಯುತಿ ನಂತರ ಮೊದಲ ಬಾರಿಗೆ ಪ್ರಧಾನಿ ಮೋದಿ-ಮೊಹಮ್ಮದ್ ಯೂನುಸ್ ಭೇಟಿ

(ನ್ಯೂಸ್ ಕಡಬ) newskadaba.com, ಎ.04  ಬ್ಯಾಂಕಾಕ್: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬಾಂಗ್ಲಾದೇಶ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮೊಹಮ್ಮದ್ ಯೂನುಸ್ ಅವರನ್ನು ಬ್ಯಾಂಕಾಕ್ ನಲ್ಲಿ ಭೇಟಿ ಮಾಡಿದ್ದಾರೆ. ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಶೇಖ್ ಹಸೀನಾ ಅವರು ಪ್ರಧಾನಿ ಹುದ್ದೆಯಿಂದ ಪದಚ್ಯುತಗೊಂಡ ನಂತರ ಉಭಯ ನಾಯಕರ ಮೊದಲ ಭೇಟಿ ಇದಾಗಿದೆ. ಬಂಗಾಳ ಕೊಲ್ಲಿ ಬಹು-ವಲಯ ಮತ್ತು ತಾಂತ್ರಿಕ ಸಹಕಾರ (BIMSTEC) ಗುಂಪಿನ ನಾಯಕರ ಶೃಂಗಸಭೆಯ ಹೊರಗೆ ಉಭಯ ನಾಯಕರು ಭೇಟಿ ಮಾಡಿದ್ದಾರೆ. ವಿದೇಶಾಂಗ ಸಚಿವ ಎಸ್. ಜೈಶಂಕರ್

ಶೇಖ್ ಹಸೀನಾ ಪದಚ್ಯುತಿ ನಂತರ ಮೊದಲ ಬಾರಿಗೆ ಪ್ರಧಾನಿ ಮೋದಿ-ಮೊಹಮ್ಮದ್ ಯೂನುಸ್ ಭೇಟಿ Read More »

ಕರ್ನಾಟಕ

ಬ್ರಹ್ಮಾವರ : ಟಿಪ್ಪರ್ ಢಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರೆ ಮೃತ್ಯು

(ನ್ಯೂಸ್ ಕಡಬ) newskadaba.com, ಎ.04  ಬೆಂಗಳೂರು: ಬ್ರಹ್ಮಾವರ : ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66 ರ ಮಾಬುಕಳ ಸೇತುವೆ ಸಮೀಪ ನಡೆದ ಭೀಕರ ಅಪಘಾತದಲ್ಲಿ ಮಹಿಳೆಯೊರ್ವರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಮಮ್ತಾಜ್‌ (44) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಮಾಬುಕಳ ಸೇತುವೆ ಸಮೀಪ ಸ್ಕೂಟರ್ ಮತ್ತು ಟಿಪ್ಪ‌ರ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ

ಬ್ರಹ್ಮಾವರ : ಟಿಪ್ಪರ್ ಢಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರೆ ಮೃತ್ಯು Read More »

ಕರಾವಳಿ

ರಾಜ್ಯದ ಹಲವೆಡೆ ಇಂದು ಗುಡುಗು-ಮಿಂಚಿನ ಸಹಿತ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com, ಎ.04  ಬೆಂಗಳೂರು: ಪೂರ್ವ ಮುಂಗಾರು ಮಳೆ ಚೇತರಿಕೆ ಕಂಡಿದ್ದು, ನಿನ್ನೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಿದೆ. ಕೆಲವೆಡೆ ಸಾಧಾರಣ ಮಳೆಯಾಗಿದ್ದರೆ, ಕೆಲವೆಡೆ ಭಾರಿ ಮಳೆಯಾಗಿದೆ.   ಗಾಳಿ, ಮಳೆಗೆ ಬೆಂಗಳೂರು ಸೇರಿದಂತೆ ಕೆಲವೆಡೆ ಮರ, ವಿದ್ಯುತ್ ಕಂಬಗಳು ಮುರಿದು ಬಿದ್ದು, ಕೆಲ ಕಾಲ ಸಾರ್ವಜನಿಕರಿಗೆ ತೊಂದರೆ ಉಂಟಾಗಿತ್ತು. ಹಾಸನ, ದಕ್ಷಿಣ ಕನ್ನಡ, ಬೆಂಗಳೂರು, ಚಿತ್ರದುರ್ಗ, ಬಾಗಲಕೋಟೆ, ವಿಜಯಪುರ, ವಿಜಯನಗರ, ಬಳ್ಳಾರಿ, ಕೊಪ್ಪಳ, ರಾಯಚೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಕೆಲವೆಡೆ

ರಾಜ್ಯದ ಹಲವೆಡೆ ಇಂದು ಗುಡುಗು-ಮಿಂಚಿನ ಸಹಿತ ಮಳೆ ಸಾಧ್ಯತೆ Read More »

ಕರ್ನಾಟಕ
Scroll to Top