News Kadaba

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಕಾರಿಗೆ ಐರಾವತ ಬಸ್ ಢಿಕ್ಕಿ; ಒಂದೇ ಕುಟುಂಬದ ನಾಲ್ವರ ಮೃತ್ಯು

(ನ್ಯೂಸ್ ಕಡಬ) newskadaba.com , ಏ.03: ಮಂಡ್ಯ : ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇನಲ್ಲಿ ಕಾರಿಗೆ ಐರಾವತ ಬಸ್ ಢಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಗುರುವಾರ ಮಂಡ್ಯ ತಾಲ್ಲೂಕು ತೂಬಿನಕೆರೆ ಬಳಿ ನಡೆದಿದೆ. ಕಾರಿನಲ್ಲಿದ್ದ ಸತ್ಯಾನಂದ ರಾಜೇ ಆರಸ್ (51) ಅವರ ಪತ್ನಿ ನಿಶ್ಚಿತಾ (45), ಚಂದ್ರು(62) ಅವರ ಪತ್ನಿ ಸುವೇದಿನಿ ರಾಣಿ(50) ಮೃತರು ಎಂದು ತಿಳಿದು ಬಂದಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ದಕ್ಷಿಣ ವಲಯ […]

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಕಾರಿಗೆ ಐರಾವತ ಬಸ್ ಢಿಕ್ಕಿ; ಒಂದೇ ಕುಟುಂಬದ ನಾಲ್ವರ ಮೃತ್ಯು Read More »

ಕರ್ನಾಟಕ

ತರಬೇತಿ ಕಾರ್ಯಾಚರಣೆಯ ಜಾಗ್ವಾರ್‌ ಯುದ್ಧ ವಿಮಾನ ಪತನ – ಪೈಲಟ್‌ ಸಾವು

(ನ್ಯೂಸ್ ಕಡಬ) newskadaba.com , ಏ.03: ಗುಜರಾತ್‌ನ ಜಮ್‌ನಗರದಲ್ಲಿ ಬುಧವಾರ ನಡೆದ ರಾತ್ರಿ ಕಾರ್ಯಾಚರಣೆಯಲ್ಲಿ ಜಾಗ್ವಾರ್ ಯುದ್ಧ ವಿಮಾನ ಪತನಗೊಂಡಿದೆ.ಎರಡು ಆಸನಗಳ ಯುದ್ಧ ವಿಮಾನ ಅಪಘಾತಕ್ಕೀಡಾಗಿ, ಭಾರತೀಯ ವಾಯುಪಡೆಯ ಪೈಲಟ್ ಮೃತಪಟ್ಟಿದ್ದಾರೆ. ಇನ್ನೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಪತನಗೊಂಡ ವಿಮಾನದಿಂದ ಒಬ್ಬ ಪೈಲಟ್‌ ರಕ್ಷಿಸಲಾಯಿತು. ಮತ್ತೊಬ್ಬರು ನಾಪತ್ತೆಯಾಗಿದ್ದರು. ರಕ್ಷಿಸಿದ ಪೈಲಟ್‌ನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಪ್ರೇಮ್‌ಸುಖ್ ಡೆಲು ತಿಳಿಸಿದ್ದಾರೆ. ಜಮ್‌ನಗರದಿಂದ ಸುಮಾರು 12 ಕಿ.ಮೀ ದೂರದಲ್ಲಿರುವ ಸುವರ್ಡಾ ಗ್ರಾಮದಲ್ಲಿ ತೆರೆದ ಮೈದಾನದಲ್ಲಿ ಯುದ್ಧ ವಿಮಾನ

ತರಬೇತಿ ಕಾರ್ಯಾಚರಣೆಯ ಜಾಗ್ವಾರ್‌ ಯುದ್ಧ ವಿಮಾನ ಪತನ – ಪೈಲಟ್‌ ಸಾವು Read More »

ಬ್ರೇಕಿಂಗ್ ನ್ಯೂಸ್

ವಕ್ಫ್ ಮಸೂದೆ ಅಂಗೀಕಾರವನ್ನು ಸುಪ್ರಿಂನಲ್ಲಿ ಪ್ರಶ್ನಿಸಲು ಮುಂದಾದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್

(ನ್ಯೂಸ್ ಕಡಬ) newskadaba.com , ಏ.03: ಲೋಕಸಭೆಯಲ್ಲಿ ವಕ್ಫ್ ಮಸೂದೆ ಅಂಗೀಕಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಅವರು ಮಸೂದೆಯ ವಿರುದ್ಧ ತಮ್ಮ ಪಕ್ಷ ಸುಪ್ರೀಂ ಕೋರ್ಟ್ ನಲ್ಲಿ ಮೊಕದ್ದಮೆ ಹೂಡಲಿದೆ ಎಂದು ಹೇಳಿದ್ದಾರೆ. ಮಸೂದೆಯ ಅಂಗೀಕಾರದ ವಿರುದ್ಧ ಪ್ರತಿಭಟಿಸಲು ಕಪ್ಪು ಬ್ಯಾಡ್ಜ್ ಧರಿಸಿ ವಿಧಾನಸಭೆಗೆ ಬಂದ ಸಿಎಂ, ಭಾರತದಲ್ಲಿ ಬಹುಮತದ ಪಕ್ಷಗಳ ವಿರೋಧದ ಹೊರತಾಗಿಯೂ ಕೆಲವು ಮಿತ್ರಪಕ್ಷಗಳ ಆಜ್ಞೆಯ ಮೇರೆಗೆ ಮುಂಜಾನೆ 2 ಗಂಟೆಗೆ ತಿದ್ದುಪಡಿಯನ್ನು ಅಂಗೀಕರಿಸುವುದು ಸಂವಿಧಾನದ

ವಕ್ಫ್ ಮಸೂದೆ ಅಂಗೀಕಾರವನ್ನು ಸುಪ್ರಿಂನಲ್ಲಿ ಪ್ರಶ್ನಿಸಲು ಮುಂದಾದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ Read More »

ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಕಾಡಿನಲ್ಲಿ ಹೆಣ್ಣು ಮಗು ಪತ್ತೆ ಪ್ರಕರಣ: ಮಗುವಿನ‌ ಹೆತ್ತವರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com , ಏ.03: ಬೆಳ್ತಂಗಡಿಯ ಬೆಳಾಲು ಗ್ರಾಮದ ಕಾಡಿನಲ್ಲಿ 3 ತಿಂಗಳ ಹೆಣ್ಣು ಮಗುವೊಂದು ಪತ್ತೆಯಾದ ಪ್ರಕರಣಕ್ಕೆ ರೋಚಕ ತಿರುವು ಲಭಿಸಿದೆ. ಮಗು ಬೆಳಾಲು ನಿವಾಸಿಯದ್ದು ಎಂಬುವುದು ಬಹಿರಂಗಗೊಂಡಿದೆ. ಇದೀಗ ಪ್ರಕರಣದಲ್ಲಿ ಮಗುವಿನ ಪೋಷಕರನ್ನು ಧರ್ಮಸ್ಥಳ ಪೊಲೀಸರು ಪತ್ತೆ  ಹಚ್ಚಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಾಯ ನಿವಾಸಿ ತಿಮ್ಮಪ್ಪ ಗೌಡರ ಮಗ‌ ಧರ್ಮಸ್ಥಳದಲ್ಲಿ ಸೆಕ್ಯೂರಿಟಿ ಕೆಲಸ ಮಾಡುತ್ತಿದ್ದ ರಂಜಿತ್ ಗೌಡ (27) ಮತ್ತು ಧರ್ಮಸ್ಥಳ ಗ್ರಾಮದ ಕೊಲಂಗಾಜೆಯ ಸುಶ್ಮಿತಾ

ಬೆಳ್ತಂಗಡಿ: ಕಾಡಿನಲ್ಲಿ ಹೆಣ್ಣು ಮಗು ಪತ್ತೆ ಪ್ರಕರಣ: ಮಗುವಿನ‌ ಹೆತ್ತವರು ಪೊಲೀಸ್ ವಶಕ್ಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಭಾರತಕ್ಕೆ ಮುಳುವಾದ ಟ್ರಂಪ್ ಸುಂಕ ನೀತಿ: ಶೇ.26 ರಷ್ಟು ಸುಂಕ ಹೇರಿಕೆ, ಭಾರತದ ಆರ್ಥಿಕತೆಗೆ ಪೆಟ್ಟು

(ನ್ಯೂಸ್ ಕಡಬ) newskadaba.com , ಏ.03: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರವರು ಭಾರತ ಸೇರಿದಂತೆ ವಿಶ್ವದ ಬಹುತೇಕ ಎಲ್ಲಾ ದೇಶಗಳ ಮೇಲೆ ಶೇ 26 ರಷ್ಟು ಪ್ರತಿ ಸುಂಕ ವಿಧಿಸಿದ್ದಾರೆ. ಇದು ದೇಶದ ಅರ್ಥಿಕತೆ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ. ಇದರಿಂದ ಭಾರತವು ಜವಳಿ, ರಾಸಾಯನಿಕಗಳು, ಔಷಧಗಳು ಮತ್ತು ಕೃಷಿ ಉತ್ಪನ್ನಗಳು ಸೇರಿದಂತೆ ವ್ಯಾಪಕ ಶ್ರೇಣಿಯ ಸರಕುಗಳನ್ನು ಅಮೆರಿಕಕ್ಕೆ ರಫ್ತು ಮಾಡುತ್ತದೆ. ಕೆಲವು ವಲಯಗಳಿಗೆ ಟ್ರಂಪ್ ಅವರ ಸುಂಕಗಳಿಂದ ನೇರವಾಗಿ ಪರಿಣಾಮ ಬೀರಿದರೆ, ಇತರ ಕೆಲವು

ಭಾರತಕ್ಕೆ ಮುಳುವಾದ ಟ್ರಂಪ್ ಸುಂಕ ನೀತಿ: ಶೇ.26 ರಷ್ಟು ಸುಂಕ ಹೇರಿಕೆ, ಭಾರತದ ಆರ್ಥಿಕತೆಗೆ ಪೆಟ್ಟು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾದ ಸಂಸದ ಕ್ಯಾ.ಚೌಟ

(ನ್ಯೂಸ್ ಕಡಬ) newskadaba.com , ಏ.03: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಮ್ಮ ತಂದೆ-ತಾಯಿ ಜತೆಗೆ ನಿನ್ನೆ ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದಾರೆ. ಭೇಟಿ ಬಳಿಕ ಪ್ರತಿಕ್ರಿಯಿಸಿರುವ ಸಂಸದ ಕ್ಯಾ ಚೌಟ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ನನ್ನ ಹೆತ್ತವರ ಜತೆಗೆ ಭೇಟಿ ಮಾಡುವ ಅವಕಾಶ ಲಭಿಸಿರುವುದು ಬದುಕಿನಲ್ಲಿನ ಬಹಳ ಖುಷಿಯ ಹಾಗೂ ಸಂತೃಪ್ತಿಯ ಭಾವವನ್ನು ಮೂಡಿಸಿದೆ. ಅವರೊಂದಿಗಿನ ಈ ಭೇಟಿ ವೇಳೆ ಹಲವು ವಿಚಾರಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾದ ಸಂಸದ ಕ್ಯಾ.ಚೌಟ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಗುವನ್ನು ಉಳಿಸಲು ಹೋಗಿ ಮೂವರು ಮುಳುಗಿ ಸಾವು

(ನ್ಯೂಸ್ ಕಡಬ) newskadaba.com , ಏ.03 ಚಿಕ್ಕಬಳ್ಳಾಪುರ: ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಮೂವರು ನೀರುಪಾಲಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಶ್ರೀನಿವಾಸಸಾಗರ ಜಲಾಶಯದಲ್ಲಿ ನಡೆದಿದೆ. ಮೃತರನ್ನು ಚಿಕ್ಕಬಳ್ಳಾಪುರ ನಿವಾಸಿಗಳಾದ ಫರೀನಾ ಬೇಗಂ , ಬಶೀರ್ ಮತ್ತು ಬೆಂಗಳೂರಿನ ಮುನಿರೆಡ್ಡಿಪಾಳ್ಯ ನಿವಾಸಿ ಇಮ್ರಾನ್ ಎಂದು ಗುರುತಿಸಲಾಗಿದೆ. ನೀರಿಗೆ ಬಿದ್ದ ಮಗುವನ್ನು ರಕ್ಷಿಸಲು ಹೋಗಿ ಮೂವರು ಮೃತಪಟ್ಟಿದ್ದಾರೆ. ಅದೃಷ್ಟವಶಾತ್ ಮಗುವನ್ನು ರಕ್ಷಿಸಲಾಗಿದ್ದು ನೀರಿನಲ್ಲಿ ಮುಳುಗಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಫರೀನಾ

ಮಗುವನ್ನು ಉಳಿಸಲು ಹೋಗಿ ಮೂವರು ಮುಳುಗಿ ಸಾವು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಲಾಲೂ ಪ್ರಸಾದ್ ಯಾದವ್ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com , ಏ.02 : ಆರೋಗ್ಯ ಹದಗೆಟ್ಟ ಕಾರಣ ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರನ್ನು ಬಿಹಾರದ ಪರಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ದೆಹಲಿಗೆ ತೆರಳುವ ಸಲುವಾಗಿ ಸಂಜೆ ಪಾಟ್ನಾ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ವೇಳೆ ಲಾಲೂ ಪ್ರಸಾದ್ ಯಾದವ್ ಅವರ ಬ್ಲಡ್ ಶುಗರ್ ಲೆವೆಲ್ ಏರಿಕೆಯಾಗಿ ಆರೋಗ್ಯ ಹದಗೆಟ್ಟಿದೆ. ಏರ್ ಅಂಬುಲೆನ್ಸ್‌ ಮೂಲಕ ಲಾಲೂ ಪ್ರಸಾದ್ ಅವರನ್ನು ದೆಹಲಿಯ ಏಮ್ಸ್‌ಗೆ ಕರೆದೊಯ್ಯುವ ಸಾಧ್ಯತೆಯಿದೆ. ಚಿಂತಿಸುವ ಅಗತ್ಯವಿಲ್ಲ ಎಂದು ಆರ್‌ಜೆಡಿ

ಲಾಲೂ ಪ್ರಸಾದ್ ಯಾದವ್ ಆಸ್ಪತ್ರೆಗೆ ದಾಖಲು Read More »

ಬ್ರೇಕಿಂಗ್ ನ್ಯೂಸ್

ದೆಹಲಿ: ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯು 12 ಗಂಟೆಗಳ ಕಾಲ ನಡೆದ ಚರ್ಚೆ ಬಳಿಕ ಅಂಗೀಕಾರ

(ನ್ಯೂಸ್ ಕಡಬ) newskadaba.com , ಏ.02 : 14 ಗಂಟೆಗಳ ಸುದೀರ್ಘ ಚರ್ಚೆಯ ಬಳಿಕ ವಕ್ಫ್‌ ತಿದ್ದುಪಡಿ ಮಸೂದೆಯನ್ನು ಬುಧವಾರ ಮಧ್ಯರಾತ್ರಿ 1:43 ಗಂಟೆಗೆ ಲೋಕಸಭೆ ಅಂಗೀಕರಿಸಿದೆ. ವಿವಾದಿತ ಮಸೂದೆ ಕುರಿತು ಸಂಸತ್‌ನಲ್ಲಿ 12 ಗಂಟೆಗಳ ಕಾಲ ಚರ್ಚೆ ನಡೆಯಿತು. ನಂತರ 2 ತಾಸುಗಳ ಕಾಲ ಮತದಾನ ನಡೆಯಿತು. ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಮಸೂದೆಗೆ ಸದನ ಅಸ್ತು ಎಂದಿದೆ. ಮಸೂದೆ ಪರ 288 ಹಾಗೂ ಮಸೂದೆ ವಿರುದ್ಧ 232 ಮತ ಬಿದ್ದವು. ಮಸೂದೆಯನ್ನು ಮತಕ್ಕೆ ಹಾಕುವ

ದೆಹಲಿ: ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯು 12 ಗಂಟೆಗಳ ಕಾಲ ನಡೆದ ಚರ್ಚೆ ಬಳಿಕ ಅಂಗೀಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಮನೆಯ ಕಿಟಿಕಿ ಮುರಿದು 1 ಕೆ.ಜಿ. ಚಿನ್ನಾಭರಣ ಕದ್ದೊಯ್ದ ಕಳ್ಳರು

(ನ್ಯೂಸ್ ಕಡಬ) newskadaba.com , ಏ.02 : ಮನೆಯೊಂದರ ಕಿಟಿಕಿಯನ್ನು ಮುರಿದು ಮನೆಯೊಳಗೆ ಲಾಕರ್‌ನಲ್ಲಿದ್ದ ಸುಮಾರು 1 ಕೆ.ಜಿ. ಚಿನ್ನಾಭರಣ ಕಳವು ಮಾಡಲಾದ ಘಟನೆ ಬಜ್ಪೆಯ ಪೆರ್ಮುದೆ ಪೇಟೆಯಲ್ಲಿ ನಡೆದಿದೆ. ಪೆರ್ಮುದೆಯ ಜಾನ್ವಿನ್‌ ಪಿಂಟೋ  ವರ ಮನೆಯಿಂದ ಈ ಕಳ್ಳತನ ನಡೆದಿದೆ. ಅಜಾನ್ವಿನ್‌ ಪಿಂಟೋ ಹಾಗೂ ಅವರ ಪುತ್ರ ಪ್ರವೀಣ್‌ ಪಿಂಟೋ ಕುವೈಟ್‌ನಲ್ಲಿದ್ದಾರೆ. ಮನೆಯಲ್ಲಿ ಯಾರೂ ಇರಲಿಲ್ಲ. ಇವರ ಮನೆಯ ಸುತ್ತ 16 ಸಿಸಿ ಕ್ಯಾಮೆರಾ ಇದ್ದರೂ, ಕೆಮರಾ ಇಲ್ಲದ ಕಡೆಯಿಂದ ಬಂದು ಕೆಮರಾದ ದಿಕ್ಕನ್ನು ಬದಲಿಸಿ

ಮಂಗಳೂರು : ಮನೆಯ ಕಿಟಿಕಿ ಮುರಿದು 1 ಕೆ.ಜಿ. ಚಿನ್ನಾಭರಣ ಕದ್ದೊಯ್ದ ಕಳ್ಳರು Read More »

ಕರಾವಳಿ
Scroll to Top