News Kadaba

ಕಾಲೇಜು ಕಟ್ಟಡದಿಂದ ಹಾರಿ 21 ವರ್ಷದ ವಿದ್ಯಾರ್ಥಿನಿ ಸಾವು

(ನ್ಯೂಸ್ ಕಡಬ) newskadaba.com ಮಾ. 22: ಬೆಂಗಳೂರು: ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ಮಧ್ಯಾಹ್ನ 21 ವರ್ಷದ ಬಿಸಿಎ ವಿದ್ಯಾರ್ಥಿನಿ ಖಾಸಗಿ ಎಂಜಿನಿಯರಿಂಗ್ ಕಾಲೇಜು ಕಟ್ಟಡದ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತಳನ್ನು ಕೇರಳದ ಕೋಝಿಕ್ಕೋಡ್ ಮೂಲದ ಲಕ್ಷ್ಮಿ ಮಿತ್ರ ಎಂದು ಗುರುತಿಸಲಾಗಿದೆ. ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆರನೇ ಸೆಮಿಸ್ಟರ್ ಬಿಸಿಎ (ವಿಮಾನಯಾನ) ವಿದ್ಯಾರ್ಥಿನಿಯಾಗಿದ್ದಳು. ಮಧ್ಯಾಹ್ನ 1.30 ರ ಸುಮಾರಿಗೆ ಲಕ್ಷ್ಮಿ ಕಾಲೇಜಿನ ನಾಲ್ಕನೇ ಮಹಡಿಯಿಂದ ಹಾರಿ ಈ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ. ಕಾಲೇಜು ಸಿಬ್ಬಂದಿ ಆಕೆಯನ್ನು ಹತ್ತಿರದ […]

ಕಾಲೇಜು ಕಟ್ಟಡದಿಂದ ಹಾರಿ 21 ವರ್ಷದ ವಿದ್ಯಾರ್ಥಿನಿ ಸಾವು Read More »

ಕರ್ನಾಟಕ

‘ಕನ್ನಡಿಗರಿಗಾಗಿ ಕರೆದ ಬಂದ್ ರಾಜ್ಯಾದ್ಯಂತ ಯಶಸ್ವಿ ಆಗಿದೆ’- ವಾಟಾಳ್ ನಾಗರಾಜ್

(ನ್ಯೂಸ್ ಕಡಬ) newskadaba.com ಮಾ. 22: ಕನ್ನಡಿಗರಿಗಾಗಿ ಕರೆದ ಬಂದ್ ಇಡೀ ರಾಜ್ಯಾದ್ಯಂತ ಬಂದ್ ಯಶಸ್ವಿಯಾಗಿದೆ. ಇದಕ್ಕೆ ಹೋರಾಟ ಮಾಡಿದ ಸಂಘಟನೆಗಳಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಾಜಿ ಶಾಸಕ, ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ. ಕರ್ನಾಟಕ ಬಂದ್ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಜಿಲ್ಲೆಗಳಲ್ಲಿ ಬಂದ್ ಅವರದ್ದೇ ರೂಪದಲ್ಲಿ ನಡೆದಿದೆ. ಕೆಲವು ಕಡೆ ಬಸ್ ಓಡಾಡುತ್ತಿದ್ದಾವೆ, ಜನ ಇಲ್ಲ. ಬಸ್ ನಿಲ್ದಾಣದಲ್ಲಿ ಜನ ಇಲ್ಲ. ಬಂದ್‌ನ ಬೇಡಿಕೆ ಎಲ್ಲವನ್ನೂ ಜನರ ಮುಂದೆ ಸರ್ಕಾರದ ಮುಂದೆ ಇಟ್ಟಿದ್ದೇವೆ ಎಂದು ತಿಳಿಸಿದರು.

‘ಕನ್ನಡಿಗರಿಗಾಗಿ ಕರೆದ ಬಂದ್ ರಾಜ್ಯಾದ್ಯಂತ ಯಶಸ್ವಿ ಆಗಿದೆ’- ವಾಟಾಳ್ ನಾಗರಾಜ್ Read More »

ಕರ್ನಾಟಕ

ಸುಳ್ಯ: ಬಸ್‌ನ ಟಯರ್ ಸ್ಫೋಟ; ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ತೊಂದರೆ

(ನ್ಯೂಸ್ ಕಡಬ) newskadaba.com ಮಾ. 22: ಕೆಎಸ್‌ಆರ್‌ಟಿಸಿ ಬಸ್‌ನ ಟಯರ್ ಸ್ಫೋಟಗೊಂಡು ಟಯರ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಬಸ್ ಬಾಕಿಯಾದ ಘಟನೆ ಅರಂಬೂರು ಬಳಿ ಮಾ.21ರಂದು ನಡೆದಿದೆ. ಕೊಯನಾಡಿನಿಂದ ಸುಳ್ಯ ಕಡೆಗೆ ಬರುತ್ತಿದ್ದ ಬಸ್ ಅರಂಬೂರು ಬಳಿ ಬರುತ್ತಿದ್ದಂತೆ ಬಸ್‌ನ ಟಯರ್ ಸ್ಪೋಟಗೊಂಡು ಬೆಂಕಿ ಕಾಣಿಸಿಕೊಂಡಿತು. ಈ ಬಸ್‌ನಲ್ಲಿ ಪ್ರಯಾಣಿಕರಲ್ಲದೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲೆಂದು ಸುಳ್ಯಕ್ಕೆ ಬರುತ್ತಿದ್ದರು. ಬಸ್ ಕೈಕೊಟ್ಟ ನಂತರ ವಿದ್ಯಾರ್ಥಿಗಳು ರಿಕ್ಷಾ, ಬೈಕ್ ಹಾಗೂ ಜೀಪ್‌ಗಳಲ್ಲಿ ತೆರಳಿದರೆಂದು ತಿಳಿದುಬಂದಿದೆ.

ಸುಳ್ಯ: ಬಸ್‌ನ ಟಯರ್ ಸ್ಫೋಟ; ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ತೊಂದರೆ Read More »

ಕರಾವಳಿ

ಸ್ಪೀಕರ್ ಪೀಠಕ್ಕೆ ಅಗೌರವ : ವಿಧಾನಸಭೆ ಕಲಾಪದಿಂದ 18 ಬಿಜೆಪಿ ಶಾಸಕರು 6 ತಿಂಗಳು ಅಮಾನತು

(ನ್ಯೂಸ್ ಕಡಬ) newskadaba.com ಮಾ. 22 ಬೆಂಗಳೂರು: ಸ್ಪೀಕರ್‌ ಪೀಠಕ್ಕೆ ಅಗೌರವ ತೋರಿದ ಹಿನ್ನಲೆಯಲ್ಲಿ ಬಿಜೆಪಿಯ 18 ಶಾಸಕರನ್ನು ವಿಧಾನಸಭೆ ಕಲಾಪದಿಂದ 6 ತಿಂಗಳುಗಳ ಕಾಲ ಅಮಾನತು ಮಾಡಿ ಸ್ಪೀಕರ್‌ ಯು.ಟಿ.ಖಾದರ್‌ ಆದೇಶ ಹೊರಡಿಸಿದ್ದಾರೆ. ದೊಡ್ಡಣ್ಣ ಗೌಡ ಪಾಟೀಲ್, ಸಿ.ಕೆ.ರಾಮಮೂರ್ತಿ, ಅಶ್ವತ್ಥ ನಾರಾಯಣ, ಎಸ್.ಆರ್.ವಿಶ್ವನಾಥ್, ಬೈರತಿ ಬಸವರಾಜ, ಎಂ ಆರ್ ಪಾಟೀಲ್, ಚನ್ನಬಸಪ್ಪ, ಬಿ ಸುರೇಶ್ ಗೌಡ, ಉಮನಾಥ್ ಕೋಟ್ಯಾನ್, ಶರಣು ಸಲಗಾರ್, ಶೈಲೇಂದ್ರ ಬೆಲ್ದಾಳೆ, ಯಶಪಾಲ್ ಸುವರ್ಣ, ಹರೀಶ್ ಬಿಪಿ, ಡಾ. ಭರತ್ ಶೆಟ್ಟಿ, ಮುನಿರತ್ನ, ಬಸವರಾಜ ಮತ್ತಿಮೋಡ್, ಧೀರಜ್ ಮುನಿರಾಜು,

ಸ್ಪೀಕರ್ ಪೀಠಕ್ಕೆ ಅಗೌರವ : ವಿಧಾನಸಭೆ ಕಲಾಪದಿಂದ 18 ಬಿಜೆಪಿ ಶಾಸಕರು 6 ತಿಂಗಳು ಅಮಾನತು Read More »

ಕರ್ನಾಟಕ

ಕರ್ನಾಟಕ ಬಂದ್: ಬೆಂಗಳೂರಿನಲ್ಲಿ ಪೊಲೀಸರ ಕಟ್ಟೆಚ್ಚರ; ಸ್ಯಾಟಲೈಟ್, ಮೆಜೆಸ್ಟಿಕ್‌ನಲ್ಲಿ ತಗ್ಗಿದ ಪ್ರಯಾಣಿಕರ ಸಂಖ್ಯೆ -ಹಲವೆಡೆ ನೀರಸ ಪ್ರತಿಕ್ರಿಯೆ

(ನ್ಯೂಸ್ ಕಡಬ) newskadaba.com ಮಾ. 22 ಬೆಂಗಳೂರು: ಕೆಎಸ್‌ಆರ್‌ಟಿಸಿ ನಿರ್ವಾಹಕನ ಮೇಲೆ ಮರಾಠಿಗರು ಹಲ್ಲೆ ಮಾಡಿರುವುದು ಸೇರಿದಂತೆ ವಿವಿಧ ಘಟನೆಗಳನ್ನು ಖಂಡಿಸಿ ವಾಟಾಳ್‌ ನಾಗರಾಜ್‌ ನೇತೃತ್ವದ ಗುಂಪು ಶನಿವಾರ ‘ಕರ್ನಾಟಕ ಬಂದ್’ಗೆ ಕರೆ ನೀಡಿವೆ.   ಬಂದ್‌ಗೆ ಓಲಾ ಉಬರ್‌ ಡ್ರೈವರ್ಸ್ ಅಂಡ್ ಓನರ್ಸ್ ಅಸೋಸಿಯೇಷನ್, ಆಟೊ ರಿಕ್ಷಾ ಸಂಘಟನೆಗಳು ಬೆಂಬಲ ನೀಡಿದ್ದರೆ, ಕೆಎಸ್‌ಆರ್‌ಟಿಸಿ, ಮೆಟ್ರೊ ಬೆಂಬಲ ನೀಡಿಲ್ಲ. ಹೋಟೆಲ್‌ ಮಾಲೀಕರು ನೈತಿಕ ಬೆಂಬಲ ಮಾತ್ರ ನೀಡಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು

ಕರ್ನಾಟಕ ಬಂದ್: ಬೆಂಗಳೂರಿನಲ್ಲಿ ಪೊಲೀಸರ ಕಟ್ಟೆಚ್ಚರ; ಸ್ಯಾಟಲೈಟ್, ಮೆಜೆಸ್ಟಿಕ್‌ನಲ್ಲಿ ತಗ್ಗಿದ ಪ್ರಯಾಣಿಕರ ಸಂಖ್ಯೆ -ಹಲವೆಡೆ ನೀರಸ ಪ್ರತಿಕ್ರಿಯೆ Read More »

ಕರ್ನಾಟಕ
crime, arrest, suspected

ಮಣಿಪುರದಲ್ಲಿ ನಿಷೇಧಿತ ಕಾಂಗ್ಲಿಪಾಕ್ ಉಗ್ರರ ಸೆರೆ

(ನ್ಯೂಸ್ ಕಡಬ) newskadaba.com ಮಾ. 21 : ಬೆಂಗಳೂರು: ಮಣಿಪುರದ ಪಶ್ಚಿಮ ಜಿಲ್ಲೆಯಲ್ಲಿ ನಿಷೇಧಿತ ಕಾಂಗ್ಲೀಪಾಕ್ ಕಮ್ಯುನಿಸ್ಟ್ ಪಕ್ಷದ (ಎಂಎಫ್ ಎಲ್) ಮೂವರು ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ಅಹೀಬಾಮ್ ಗಾಂಧಿ (35), ದೊಂಗಮ್ ನೌಬಾ ಮೈಟಿ (21) ಮತ್ತು ನಿಂಗೌಬಾ ಮೊಮೊಚಾ ಸಿಂಗ್ ಎಂದು ಗುರುತಿಸಲಾಗಿದೆ. ಅಪಹರಣ ಪ್ರಕರಣದಲ್ಲಿ ಉಗ್ರರು ನಮಗೆ ಬೇಕಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರಿಂದ ನಾಲ್ಕು ಚಕ್ರದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಮತ್ತೊಂದೆಡೆ, ಕಳೆದ 24 ಗಂಟೆಗಳಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು

ಮಣಿಪುರದಲ್ಲಿ ನಿಷೇಧಿತ ಕಾಂಗ್ಲಿಪಾಕ್ ಉಗ್ರರ ಸೆರೆ Read More »

ಬ್ರೇಕಿಂಗ್ ನ್ಯೂಸ್

ನಾಳೆ ಕರ್ನಾಟಕ ಬಂದ್‌ ಖಚಿತ

(ನ್ಯೂಸ್ ಕಡಬ) newskadaba.com ಮಾ. 21 : ಬೆಂಗಳೂರು: ಕನ್ನಡ ಪರ ಸಂಘಟನೆಗಳು ಮಾರ್ಚ್​ 22ರಂದು ಕರ್ನಾಟಕ ಬಂದ್​ಗೆ ಕರೆ ನೀಡಿದ್ದು, ಸಾರಿಗೆ ಸಂಸ್ಥೆಗಳು ಸೇರಿ ಹಲವರು ಬೆಂಬಲ ಸೂಚಿಸಿರುವುದರಿಂದ, ನಾಳೆ ಬಂದ್‌ ಬಹುತೇಕ ಯಶಸ್ವಿಯಾಗುವುದು ಖಚಿತವಾಗಿದೆ. ಬೆಳಗಾವಿ ಗಡಿಯಲ್ಲಿ ಮರಾಠಿ ಪುಂಡರ ಹಾವಳಿ ವಿರೋಧಿಸಿ ಹಾಗೂ ರಾಜ್ಯದ ಹಿತಾಸಕ್ತಿ ಸಂಬಂಧಿತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕನ್ನಡ ಸಂಘಟನೆಗಳು ಬಂದ್‌ಗೆ ಕರೆ ನೀಡಿವೆ. ಬಂದ್ ಬಗ್ಗೆ ನೀವು ತಿಳಿದಿರಬೇಕಾದ ಮಾಹಿತಿ ಇಲ್ಲಿದೆ. ಶಾಲಾ ಕಾಲೇಜು ನಡೆಸುವ ಹಾಗೂ ಪರೀಕ್ಷೆಗಳನ್ನು ನಡೆಸುವುದಕ್ಕೆ ಸಂಬಂಧಿಸಿ

ನಾಳೆ ಕರ್ನಾಟಕ ಬಂದ್‌ ಖಚಿತ Read More »

ಕರ್ನಾಟಕ

ಮಂಗಳೂರು : ಶನಿವಾರದ ಬಸ್ ಬಂದ್ ಗೆ ಸ್ಪಂದಿಸಲ್ಲ – ಕೆನರಾ, ದ.ಕ. ಬಸ್ ಮಾಲಕರ ಸಂಘ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮಾ. 21 : ಬೆಳಗಾವಿಯಲ್ಲಿ ಮರಾಠಿಗರ ಪುಂಡಾಡಿಕೆ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಲವು ಕನ್ನಡ ಪರ ಸಂಘಟನೆಗಳು ಮಾ.2 ರಂದು ರಾಜ್ಯ ಬಂದ್ ಗೆ ನೀಡಿರುವ ಕರೆಗೆ ದಕ್ಷಿಣ ಕನ್ನಡ ಬಸ್ ಮಾಲಕರ ಸಂಘ ಹಾಗೂ ಕೆನರಾ ಬಸ್ ಮಾಲಕರ ಸಂಘ ಸ್ಪಂದಿಸುವುದಿಲ್ಲ ಎಂದು ತಿಳಿಸಿದೆ. ಎಲ್ಲ ಸಂಘಟನೆಗಳ ಬೇಡಿಕೆಗೆ ನಮ್ಮ ಸಹಮತ, ಸಹಾನುಭೂತಿ ಇದೆ. ಬಸ್ ಮಾಲಕರು ಕೂಡ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ ಶನಿವಾರ ಬಸ್ ಬಂದ್ ಮಾಡುವುದಿಲ್ಲ. ಇತರ

ಮಂಗಳೂರು : ಶನಿವಾರದ ಬಸ್ ಬಂದ್ ಗೆ ಸ್ಪಂದಿಸಲ್ಲ – ಕೆನರಾ, ದ.ಕ. ಬಸ್ ಮಾಲಕರ ಸಂಘ ಸ್ಪಷ್ಟನೆ Read More »

ಕರಾವಳಿ

ಭಾರಿ ಮಳೆ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ, RCB vs KKR ಪಂದ್ಯ ನಡೆಯೋದು ಅನುಮಾನ!

(ನ್ಯೂಸ್ ಕಡಬ) newskadaba.com ಮಾ. 21 : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 18ನೇ ಆವೃತ್ತಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಶನಿವಾರ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಜತ್ ಪಾಟೀದಾರ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವನ್ನು ಎದುರಿಸಲಿದೆ. ಪಂದ್ಯ ಆರಂಭಕ್ಕೆ ಕೇವಲ ಒಂದು ದಿನ ಬಾಕಿ ಉಳಿದಿದ್ದು, ಕೋಲ್ಕತ್ತಾದಿಂದ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಈ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದ್ದು, ಉದ್ಘಾಟನಾ

ಭಾರಿ ಮಳೆ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ, RCB vs KKR ಪಂದ್ಯ ನಡೆಯೋದು ಅನುಮಾನ! Read More »

ಕರಾವಳಿ

ವಿಧಾನಸಭೆಯಲ್ಲಿ ಸ್ಪೀಕರ್ ಮೇಲೆ ಪೇಪರ್ ಎಸೆದ ಶಾಸಕರು

(ನ್ಯೂಸ್ ಕಡಬ) newskadaba.com ಮಾ. 21 : ಹನಿಟ್ರ‍್ಯಾಪ್ ಪ್ರಕರಣದ ತನಿಖೆಯನ್ನು ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ಆಗ್ರಹಿಸಬೇಕೆಂದು ಆಗ್ರಹಿಸಿ ವಿಪಕ್ಷಗಳ ಸದಸ್ಯರು ಇಂದು ವಿಧಾನಸಭೆಯ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ಈ ವೇಳೆ ಸ್ಪೀಕರ್ ಯು.ಟಿ ಖಾದರ್ ಅವರ ಮೇಲೆ ಶಾಸಕರು ಪೇಪರ್ ಎಸೆದಿದ್ದಾರೆ. ಇಂದು ವಿಧಾನಸಭೆಯ ಅಧಿವೇಶನದ ಕೊನೆಯ ದಿನವಾದ ಕಾರಣ ಬೆಳಗ್ಗೆ ವಿಧಾನಸಭೆ ಆರಂಭಗೊಳ್ಳುತ್ತಿದ್ದಂತೆ ಅಶೋಕ್ ಮತ್ತು ಸುನಿಲ್ ಕುಮಾರ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಸರ್ಕಾರದ ಸಚಿವರೇ ತನ್ನ ಮೇಲೆ ಹನಿಟ್ರ‍್ಯಾಪ್ ನಡೆದಿದೆ ಎಂದು ಆರೋಪಿಸಿದ್ದಾರೆ.

ವಿಧಾನಸಭೆಯಲ್ಲಿ ಸ್ಪೀಕರ್ ಮೇಲೆ ಪೇಪರ್ ಎಸೆದ ಶಾಸಕರು Read More »

ಕರ್ನಾಟಕ
Scroll to Top