News Kadaba

ಮಂಗಳೂರು: ಹೆಚ್ಚುತ್ತಿರುವ ತಾಪಮಾನ-ಮೀನು ಉದ್ಯಮದ ಮೇಲೆ ಪರಿಣಾಮ

(ನ್ಯೂಸ್ ಕಡಬ) newskadaba.com ಮಾ. 20 ಶಿವಮೊಗ್ಗ: ಮೀನು ಕದ್ದ ಆರೋಪದ ಮೇಲೆ ಮಲ್ಪೆಯಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಥಳಿಸಲಾಗಿದೆ. ಹಲ್ಲೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಬುಧವಾರ, ಮಾರ್ಚ್ 19 ರಂದು ಈ ಘಟನೆ ಬೆಳಕಿಗೆ ಬಂದಿದೆ. ವೀಡಿಯೊದಲ್ಲಿ, ಮಲ್ಪೆ ಬಂದರಿನಲ್ಲಿ ಮೀನು ಇಳಿಸುವಾಗ ಮೀನುಗಾರ ಮಹಿಳೆಯೊಬ್ಬರು ಇನ್ನೊಬ್ಬ ಮಹಿಳೆಯನ್ನು ಹೊಡೆಯುತ್ತಾ ದೋಣಿಗಳಿಂದ ಮೀನು ಕದ್ದಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಸೀಗಡಿ ಕಳ್ಳತನದ ಆರೋಪದ ಮೇಲೆ ದೋಣಿ ಸಿಬ್ಬಂದಿ ಮಹಿಳೆಯನ್ನು ಪ್ರಶ್ನಿಸಿದಾಗ ಅವರು ಆರಂಭದಲ್ಲಿ ಆರೋಪಗಳನ್ನು […]

ಮಂಗಳೂರು: ಹೆಚ್ಚುತ್ತಿರುವ ತಾಪಮಾನ-ಮೀನು ಉದ್ಯಮದ ಮೇಲೆ ಪರಿಣಾಮ Read More »

ಕರಾವಳಿ

ರಾಜ್ಯದ ಎಲ್ಲಾ ಸಮುದಾಯಗಳಿಗೆ ಶೇ.75 ರಷ್ಟು ಮೀಸಲಾತಿ ಕೊಡಿ: ಸರ್ಕಾರಕ್ಕೆ ಸಚಿವ ಸಂತೋಷ್‌ ಲಾಡ್‌ ಒತ್ತಾಯ

(ನ್ಯೂಸ್ ಕಡಬ) newskadaba.com ಮಾ. 20 ಶಿವಮೊಗ್ಗ: ರಾಜ್ಯದ ಎಲ್ಲಾ ಸಮುದಾಯಗಳಿಗೆ ಶೇ.75 ರಷ್ಟು ಮೀಸಲಾತಿ ನೀಡಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ರಾಜ್ಯ ಸರ್ಕಾರಕ್ಕೆ ಬುಧವಾರ ಒತ್ತಾಯಿಸಿದ್ದಾರೆ. ಶಿವಮೊಗ್ಗ ಜಿಲ್ಲಾ ಕ್ಷತ್ರಿಯ ಮರಾಠಾ ಸೇವಾ ಸಂಘ ಇತ್ತೀಚೆಗೆ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ಮರಾಠಾ ಸಮುದಾಯದ ವೆಬ್‌ಸೈಟ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಹಿಂದ ಸಮುದಾಯಕ್ಕೆ ನೆರೆ ರಾಜ್ಯ ತಮಿಳುನಾಡಿನಲ್ಲ ಶೇ.65ರಷ್ಟು ಮೀಸಲಾತಿ ಇದೆ. ಅಂತೆಯೇ ನಮ್ಮ ರಾಜ್ಯದಲ್ಲಿಯೂ ಶೋಷಿತ ವರ್ಗಗಳು ಮತ್ತು ಅಹಿಂದ ವರ್ಗಗಳ ಎಲ್ಲಾ ಹಿಂದುಳಿದ

ರಾಜ್ಯದ ಎಲ್ಲಾ ಸಮುದಾಯಗಳಿಗೆ ಶೇ.75 ರಷ್ಟು ಮೀಸಲಾತಿ ಕೊಡಿ: ಸರ್ಕಾರಕ್ಕೆ ಸಚಿವ ಸಂತೋಷ್‌ ಲಾಡ್‌ ಒತ್ತಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಕಲಿ ದಾಖಲೆ ತಡೆಗೆ ವರ್ಷದೊಳಗೆ ‘ಲ್ಯಾಂಡ್ ಬೀಟ್ ವ್ಯವಸ್ಥೆ’ ಜಾರಿ: ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಮಾ. 20: ಬೆಂಗಳೂರು: ನಕಲಿ ದಾಖಲೆ ತಡೆಯಲು ವರ್ಷದೊಳಗೆ ‘ಲ್ಯಾಂಡ್ ಬೀಟ್ ವ್ಯವಸ್ಥೆ’ ಜಾರಿಗೆ ತರಲಾಗುವುದು ಎಂದು ರಾಜ್ಯ ಸರ್ಕಾರ ಬುಧವಾರ ಹೇಳಿದೆ. ಪರಿಷತ್ತಿನಲ್ಲಿ ಬುಧವಾರ ಜೆಡಿಎಸ್ ಎಂಎಲ್‌ಸಿ ಶರವಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೇರೈಗೌಡ ಅವರು, ಸರ್ಕಾರಿ ಅಧಿಕಾರಿಗಳ ಜೊತೆ ಶಾಮೀಲಾಗಿರುವ ಕೆಲವರು ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರ್ಕಾರಿ ಭೂಮಿಯನ್ನು ಕಬಳಿಸುತ್ತಿದ್ದಾರೆಂದು. ಇದನ್ನು ತಡೆಯಲು .ವರ್ಷದೊಳಗೆ ‘ಲ್ಯಾಂಡ್ ಬೀಟ್ ವ್ಯವಸ್ಥೆ’ ಜಾರಿಗೆ ತರಲಾಗುವುದು ಎಂದು ಹೇಳಿದರು. ಕೆಲವು ಸರ್ಕಾರಿ ಅಧಿಕಾರಿಗಳ ಸಹಾಯದಿಂದ ಕೆಲವರು

ನಕಲಿ ದಾಖಲೆ ತಡೆಗೆ ವರ್ಷದೊಳಗೆ ‘ಲ್ಯಾಂಡ್ ಬೀಟ್ ವ್ಯವಸ್ಥೆ’ ಜಾರಿ: ರಾಜ್ಯ ಸರ್ಕಾರ Read More »

ಕರ್ನಾಟಕ

‘ಶೀಘ್ರದಲ್ಲೇ ಹೊಸ ಟೋಲ್ ನೀತಿ ಜಾರಿ’ – ಕೇಂದ್ರ ಸಚಿವ ನಿತಿನ್ ಗಡ್ಕರಿ

(ನ್ಯೂಸ್ ಕಡಬ) newskadaba.com ಮಾ. 20: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಬುಧವಾರ, ಸರ್ಕಾರವು ಶೀಘ್ರದಲ್ಲೇ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕಕ್ಕಾಗಿ ಹೊಸ ನೀತಿಯನ್ನು ಪ್ರಕಟಿಸಲಿದ್ದು , ಗ್ರಾಹಕರಿಗೆ ಸಮಂಜಸವಾದ ರಿಯಾಯಿತಿಯನ್ನು ನೀಡಲಿದೆ ಎಂದು ಹೇಳಿದರು. ರಾಜ್ಯಸಭೆಯಲ್ಲಿ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, ಸರ್ಕಾರವು ರಸ್ತೆ ಮೂಲಸೌಕರ್ಯ ನಿರ್ಮಾಣಕ್ಕೆ ಸಾಕಷ್ಟು ಖರ್ಚು ಮಾಡುತ್ತಿದೆ ಮತ್ತು ಆದ್ದರಿಂದ ಟೋಲ್ ಶುಲ್ಕಗಳು ಅಗತ್ಯವಾಗಿವೆ ಎಂದು ಪ್ರತಿಪಾದಿಸಿದರು. “ನೀವು ಉತ್ತಮ ರಸ್ತೆಯನ್ನು ಬಯಸಿದಾಗ, ನೀವು ಅದಕ್ಕೆ ಪಾವತಿಸಬೇಕು ಎಂಬುದು ಇಲಾಖೆಯ ನೀತಿಯಾಗಿದೆ”

‘ಶೀಘ್ರದಲ್ಲೇ ಹೊಸ ಟೋಲ್ ನೀತಿ ಜಾರಿ’ – ಕೇಂದ್ರ ಸಚಿವ ನಿತಿನ್ ಗಡ್ಕರಿ Read More »

ಬ್ರೇಕಿಂಗ್ ನ್ಯೂಸ್

ಬಲು ದುಬಾರಿಯಾದ ಚಿನ್ನ

(ನ್ಯೂಸ್ ಕಡಬ) newskadaba.com ಮಾ. 19 : ಬೆಂಗಳೂರು: ಬೆಂಗಳೂರಿನಲ್ಲಿ ಬುಧವಾರ 22 ಕ್ಯಾರೆಟ್ ಚಿನ್ನದ ದರ ಒಂದು ಗ್ರಾಂ.ಗೆ 8290 ರೂ. ಗೆ ಮಾರಾಟವಾಗಿದೆ. ಅದರಂತೆ ಒಂದು ಪವನ್ ಅಂದರೆ 8 ಗ್ರಾಂ. ಚಿನ್ನದ ದರವು 66320 ರೂ. ನಂತೆ ಮಾರಾಟವಾಗಿದೆ ಎಂದು ವರ್ತಕರು ತಿಳಿಸಿದ್ದಾರೆ. ಅಪ್ಪಟ ಚಿನ್ನ ಅಂದರೆ 24 ಕ್ಯಾರೆಟ್ ಚಿನ್ನದ ದರ ಪ್ರತಿ ಗ್ರಾಂಗೆ 9018.3 ರೂ.ಆಗಿದ್ದು, 460 ರೂ. ಹೆಚ್ಚಾಗಿದೆ.

ಬಲು ದುಬಾರಿಯಾದ ಚಿನ್ನ Read More »

ಕರ್ನಾಟಕ

ಗಂಡನನ್ನು ಕೊಂದು ತುಂಡು ಮಾಡಿ ಡ್ರಮ್‌ನಲ್ಲಿ ಸಿಮೆಂಟ್ ಸುರಿದು ಸೀಲ್ ಮಾಡಿದ್ದ ಪತ್ನಿ, ಪ್ರಿಯಕರ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಾ. 19 : ಬೆಂಗಳೂರು: ಪ್ರಿಯಕರನ ಜೊತೆ ಸೇರಿ ಪತಿಯನ್ನು ಇರಿದು ಕೊಂದ ಪತ್ನಿ ಆತನ ದೇಹವನ್ನು ತುಂಡು ಮಾಡಿ, ಸಿಮೆಂಟ್ ತುಂಬಿದ ಡ್ರಮ್‌ನಲ್ಲಿ ಹಾಕಿ ಸೀಲ್ ಮಾಡಿಮುಚ್ಚಿಟ್ಟ ಭೀಕರ ಘಟನೆ ಉತ್ತರಪ್ರದೇಶದ ಮೀರತ್‌ನಲ್ಲಿ ನಡೆದಿದೆ. ನೌಕಾಪಡೆಯ ಉದ್ಯೋಗಿ ಸೌರಭ್ ರಜಪೂತ್ (29) ಕೊಲೆಯಾದ ವ್ಯಕ್ತಿಯಾಗಿದ್ದು, ಆತನ ಪತ್ನಿ ಮುಸ್ಕಾನ್ (27) ಮತ್ತು ಆಕೆಯ ಪ್ರಿಯಕರ ಸಾಹಿಲ್ ( 25)ನನ್ನು ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಪುರಿಯ ಇಂದ್ರಾನಗರ ಹಂತ 2 ರ ಸೌರಭ್ 2016 ರಲ್ಲಿ ಗೌರಿಪುರದ ಮುಸ್ಕಾನ್

ಗಂಡನನ್ನು ಕೊಂದು ತುಂಡು ಮಾಡಿ ಡ್ರಮ್‌ನಲ್ಲಿ ಸಿಮೆಂಟ್ ಸುರಿದು ಸೀಲ್ ಮಾಡಿದ್ದ ಪತ್ನಿ, ಪ್ರಿಯಕರ ಅರೆಸ್ಟ್ Read More »

ಕ್ರೈಮ್ ನ್ಯೂಸ್

CET ಕನ್ನಡ ಭಾಷೆ ಪರೀಕ್ಷೆ ಏಪ್ರಿಲ್ 15ಕ್ಕೆ ಹಿಂದೂಡಿಕೆ

(ನ್ಯೂಸ್ ಕಡಬ) newskadaba.com ಮಾ. 19 : ಬೆಂಗಳೂರು: ಗಡಿನಾಡು ಮತ್ತು ಹೊರನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಈ ಮೊದಲು ನಿಗದಿಗೊಳಿಸಿದ್ದ CET ಕನ್ನಡ ಭಾಷಾ ಪರೀಕ್ಷೆಯನ್ನು ಏಪ್ರಿಲ್ 18ಕ್ಕೆ ಬದಲಾಗಿ ಏಪ್ರಿಲ್ 15ರಂದೇ ನಡೆಸಲಾಗುವುದು ಎಂದು ಕೆಇಎ ಪ್ರಕಟಿಸಿದೆ. ಏಪ್ರಿಲ್ 18ರಂದು ಶುಭ ಶುಕ್ರವಾರ ಇರುವುದರಿಂದ ಈ ಪರೀಕ್ಷೆ ದಿನಾಂಕವನ್ನು ಬದಲಾಯಿಸಬೇಕೆಂದು ಕೋರಿಕೆಗಳು ಬಂದಿದ್ದವು, ಆ ಹಿನ್ನೆಲೆಯಲ್ಲಿ ಸರಕಾರದ ನಿರ್ದೇಶನದಂತೆ ಈ ಬದಲಾವಣೆ ಮಾಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಪತ್ರಿಕಾ ಪ್ರಕಟಣೆಯಲ್ಲಿ ಈ ಕುರಿತು

CET ಕನ್ನಡ ಭಾಷೆ ಪರೀಕ್ಷೆ ಏಪ್ರಿಲ್ 15ಕ್ಕೆ ಹಿಂದೂಡಿಕೆ Read More »

ಕ್ರೀಡಾ ನ್ಯೂಸ್

ಅಶೋಕ್ ವಿರುದ್ಧದ ಅಕ್ರಮ ಜಮೀನು ಮಂಜೂರು ಕೇಸ್: ಲೋಕಾಯುಕ್ತಕ್ಕೆ ಸುಪ್ರೀಂ ಮಹತ್ವದ ಸೂಚನೆ

(ನ್ಯೂಸ್ ಕಡಬ) newskadaba.com ಮಾ. 19 : ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ವಿರುದ್ಧದ ಜಮೀನು ಅಕ್ರಮ ಮಂಜೂರಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಫಿಡವಿಟ್ ಸಲ್ಲಿಸುವಂತೆ ಲೋಕಾಯುಕ್ತಕ್ಕೆ ಸುಪ್ರೀಂಕೋರ್ಟ್ ಮಹತ್ವದ ಸೂಚನೆ ನೀಡಿದೆ. ಬಗರ್ ಹುಕುಂ ಜಮೀನು ಅಕ್ರಮ ಮಂಜೂರಾತಿ ಆರೋಪದ ಪ್ರಕರಣವನ್ನು ರದ್ದು ಕೋರಿ ಬಿಜೆಪಿ ನಾಯಕ ಆರ್.ಅಶೋಕ್ ಹೈಕೋರ್ಟ್​ಗೆ ಸಲ್ಲಿಸಿದ್ದರು. ಆದ್ರೆ, ಹೈಕೋರ್ಟ್, ಅಶೋಕ್​ ಸಲ್ಲಿಸಿದ್ದ ಅರ್ಜಿ ವಜಾ ಮಾಡಿ, ಪ್ರಕರಣದ ತನಿಖೆ ನಡೆಸಲು 2018ರಲ್ಲಿ ಆದೇಶ ನೀಡಿತ್ತು.

ಅಶೋಕ್ ವಿರುದ್ಧದ ಅಕ್ರಮ ಜಮೀನು ಮಂಜೂರು ಕೇಸ್: ಲೋಕಾಯುಕ್ತಕ್ಕೆ ಸುಪ್ರೀಂ ಮಹತ್ವದ ಸೂಚನೆ Read More »

ಕರ್ನಾಟಕ

ಮಾರ್ಚ್ 22 ರಂದು ಸುಪ್ರೀಂ ಕೋರ್ಟ್ ಐವರು ಜಡ್ಜ್‌ಗಳ ನಿಯೋಗ ಮಣಿಪುರಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಮಾ. 19 : ಮಣಿಪುರ ರಾಜ್ಯದಲ್ಲಿ ಕಾನೂನು ಮತ್ತು ಮಾನವೀಯ ಬೆಂಬಲವನ್ನು ಬಲಪಡಿಸಲು ಸುಪ್ರೀಂ ಕೋರ್ಟ್‌ನ ಆರು ನ್ಯಾಯಾಧೀಶರ ನಿಯೋಗ ಮಾರ್ಚ್ 22 ರಂದು ಭೇಟಿ ನೀಡಲಿದೆ. ಹಿಂಸಾಚಾರಗಳಿಂದಾಗಿ ಸ್ಥಳಾಂತರಗೊಂಡ ಜನರು ವಾಸಿಸುತ್ತಿರುವ ಪರಿಹಾರ ಶಿಬಿರಗಳಿಗೆ ನಿಯೋಗ ಭೇಟಿ ನೀಡಲಿದೆ ಎಂದು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹೇಳಿಕೆಯಲ್ಲಿ ತಿಳಿಸಿದೆ. ಬಿ.ಆರ್.ಗವಾಯಿ, ಸೂರ್ಯ ಕಾಂತ್, ವಿಕ್ರಮ್ ನಾಥ್, ಎಂ.ಎಂ. ಸುಂದರೇಶ್, ಕೆ.ವಿ. ವಿಶ್ವನಾಥನ್ ಮತ್ತು ಎನ್. ಕೋಟೀಶ್ವರ್ ಸಿಂಗ್ ಅವರು ಮಣಿಪುರಕ್ಕೆ ಭೇಟಿ ನೀಡಲಿರುವ ಜಡ್ಜ್‌ಗಳಾಗಿದ್ದಾರೆ.

ಮಾರ್ಚ್ 22 ರಂದು ಸುಪ್ರೀಂ ಕೋರ್ಟ್ ಐವರು ಜಡ್ಜ್‌ಗಳ ನಿಯೋಗ ಮಣಿಪುರಕ್ಕೆ ಭೇಟಿ Read More »

ಬ್ರೇಕಿಂಗ್ ನ್ಯೂಸ್

ಎಸ್.ಎಸ್.ಎಲ್.ಸಿ ಪರೀಕ್ಷೆ : ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಾ. 19 : ಮಂಗಳೂರು – ಎಸ್.ಎಸ್.ಎಲ್.ಸಿ ಪರೀಕ್ಷೆ-೧ ಮಾರ್ಚ್ ೨೧ ರಿಂದ ಎಪ್ರಿಲ್ ೪ ರವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ೨೦೦ ಮೀಟರ್ ಪ್ರದೇಶವನ್ನು ನಿ??ಧಿತ ಪ್ರದೇಶ ಎಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ ಆದೇಶಿಸಿದ್ದಾರೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು

ಎಸ್.ಎಸ್.ಎಲ್.ಸಿ ಪರೀಕ್ಷೆ : ನಿಷೇಧಾಜ್ಞೆ ಜಾರಿ Read More »

ಕರಾವಳಿ, ಕರ್ನಾಟಕ
Scroll to Top