News Kadaba

ಶೀಘ್ರದಲ್ಲೇ ಮತದಾರರ ಚೀಟಿ ಜತೆ ಆಧಾರ್‌ ಜೋಡಣೆ!

(ನ್ಯೂಸ್ ಕಡಬ) newskadaba.com ಮಾ. 19 : ಮತದಾರರ ಗುರುತಿನ ಚೀಟಿಗೆ ಆಧಾರ್‌ ಸಂಖ್ಯೆ ಜೋಡಣೆ ಮಾಡುವ ಕೆಲಸಕ್ಕೆ ಶೀಘ್ರವೇ ಚಾಲನೆ ನೀಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಆದರೆ ಈ ಹಿಂದೆ ಕೇಂದ್ರ ಸರ್ಕಾರ ಸುಪ್ರೀಂಗೆ ಮಾಹಿತಿ ನೀಡಿದಂತೆ ಇದನ್ನು ಕಡ್ಡಾಯ ಮಾಡುವ ಬದಲು ಐಚ್ಛಿಕ ಮಾಡುವ ಸಾಧ್ಯತೆ ಇದೆ. ಈ ಸಂಬಂಧ ಕೇಂದ್ರ ಗೃಹ ಸಚಿವಾಲಯ, ವಿಶಿಷ್ಠ ಗುರುತಿನ ಚೀಟಿ ಪ್ರಾಧಿಕಾರ ಸೇರಿ ವಿವಿಧ ಇಲಾಖೆಗಳ ಜೊತೆ ಮಂಗಳವಾರ ಸಭೆ ನಡೆಸಿದ ಕೇಂದ್ರ ಚುನಾವಣಾ ಆಯೋಗ ಬಳಿಕ […]

ಶೀಘ್ರದಲ್ಲೇ ಮತದಾರರ ಚೀಟಿ ಜತೆ ಆಧಾರ್‌ ಜೋಡಣೆ! Read More »

ಕರ್ನಾಟಕ

ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಕೊಟ್ಟ ಮಾತನ್ನ ನಾವು ಈಡೇರಿಸಿದ್ದೇವೆ ಎಂದ ಟ್ರಂಪ್

(ನ್ಯೂಸ್ ಕಡಬ) newskadaba.com ಮಾ. 19 : ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದ ಭಾರತೀಯ ಮೂಲದ ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಮತ್ತು ಗಗನಯಾತ್ರಿ ಬುಚ್ ವಿಲ್ಮೋರ್ ಅವರು ಯಶಸ್ವಿಯಾಗಿ ಭೂಮಿಗೆ ಮರಳಿದ್ದಾರೆ. ಇದೀಗ ಕೊಟ್ಟ ಮಾತನ್ನು ನಾವು ಈಡೇರಿಸಿದ್ದೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಸ್ಪೇಸ್‌ಎಕ್ಸ್‌ನ ಡ್ರ‍್ಯಾಗನ್ ಕ್ಯಾಪ್ಸುಲ್ ಮೂಲಕ ಸುರಕ್ಷಿತವಾಗಿ ಭೂಮಿಗೆ ಲ್ಯಾಂಡ್ ಆಗಿರುವ ಬಗ್ಗೆ ಮಾತನಾಡಿದ ಅವರು, ನಾನು ಅಧಿಕಾರಕ್ಕೆ ಬಂದಾಗ ಅವರನ್ನು ಮರಳಿ ಕರೆ ತರಬೇಕು ಎಂದು

ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಕೊಟ್ಟ ಮಾತನ್ನ ನಾವು ಈಡೇರಿಸಿದ್ದೇವೆ ಎಂದ ಟ್ರಂಪ್ Read More »

ಬ್ರೇಕಿಂಗ್ ನ್ಯೂಸ್

ಅಮಿತಾಭ್ ಬಚ್ಚನ್: ಭಾರತದಲ್ಲಿ ಅತೀ ಹೆಚ್ಚು ತೆರಿಗೆ ಪಾವತಿಸಿದ ಹೀರೋ!

(ನ್ಯೂಸ್ ಕಡಬ) newskadaba.com ಮಾ. 18 : ನವದೆಹಲಿ: ನಟ ಅಮಿತಾಭ್ ಬಚ್ಚನ್ ಅವರು 2024-25ನೇ ಸಾಲಿನಲ್ಲಿ ಎಷ್ಟು ತೆರಿಗೆ ಪಾವತಿ ಮಾಡಿದ್ದಾರೆ ಎಂಬ ವಿಚಾರ ರಿವೀಲ್ ಆಗಿದೆ. ಅವರು 120 ಕೋಟಿ ರೂಪಾಯಿ ತೆರಿಗೆ ಪಾವತಿ ಮಾಡಿದ್ದಾರೆ, ಈ ಮೂಲಕ ಭಾರತದಲ್ಲಿ ಅತಿ ಹೆಚ್ಚು ತೆರಿಗೆ ಪಾವತಿಸಿದ ಹೀರೋ ಎನಿಸಿಕೊಂಡಿದ್ದಾರೆ.  ಅಮಿತಾಭ್ ಬಚ್ಚನ್ ಹಂತ ಹಂತವಾಗಿ ತೆರಿಗೆ ಪಾವತಿ ಮಾಡಿದ್ದಾರೆ. ಕೊನೆಯ ಕಂತಿನಲ್ಲಿ ಅವರು 52.50 ಕೋಟಿ ರೂಪಾಯಿ ತೆರಿಗೆ ಪಾವತಿ ಮಾಡಿದ್ದಾರೆ. ಈ ಆರ್ಥಿಕ ವರ್ಷದಲ್ಲಿ ಅವರು 350 ಕೋಟಿ ರೂ.

ಅಮಿತಾಭ್ ಬಚ್ಚನ್: ಭಾರತದಲ್ಲಿ ಅತೀ ಹೆಚ್ಚು ತೆರಿಗೆ ಪಾವತಿಸಿದ ಹೀರೋ! Read More »

ಬ್ರೇಕಿಂಗ್ ನ್ಯೂಸ್

ಪ್ರಜಾಪ್ರಭುತ್ವದ ದೇಶ ಪೊಲೀಸ್ ದೇಶದಂತೆ ವರ್ತಿಸಬಾರದು-ಸುಪ್ರೀಂ

(ನ್ಯೂಸ್ ಕಡಬ) newskadaba.com ಮಾ. 18 : ನವದೆಹಲಿ: ತುಂಬಾ ಗಂಭೀರವಲ್ಲದ ಪ್ರಕರಣಗಳಲ್ಲಿ ತನಿಖೆಗಳು ಈಗಾಗಲೇ ಪೂರ್ಣಗೊಂಡಿದ್ದರೂ ಕೂಡ ವಿಚಾರಣಾ ನ್ಯಾಯಾಲಯಗಳು ಜಾಮೀನು ಅರ್ಜಿಗಳನ್ನು ತಿರಸ್ಕರಿಸಿದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಅಸಮಾಧಾನ ವ್ಯಕ್ತಪಡಿಸಿದೆ. ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು, ಪ್ರಜಾಪ್ರಭುತ್ವ ರಾಷ್ಟ್ರವು ಪೊಲೀಸ್ ರಾಜ್ಯದಂತೆ ಕಾರ್ಯನಿರ್ವಹಿಸಬಾರದು. ಪೊಲೀಸ್ ರಾಜ್ಯದಲ್ಲಿ ಕಾನೂನು ಜಾರಿ ಸಂಸ್ಥೆಗಳು ಅವಶ್ಯಕತೆಯೇ ಇಲ್ಲದೆ ವ್ಯಕ್ತಿಗಳನ್ನು ಬಂಧಿಸಲು ಅನಿಯಂತ್ರಿತ ಅಧಿಕಾರವನ್ನು ಬಳಸುತ್ತವೆ ಎಂದಿದೆ. ಎರಡು ದಶಕಗಳ ಹಿಂದೆ, ಸಣ್ಣ ಪ್ರಕರಣಗಳ ಜಾಮೀನು ಅರ್ಜಿಗಳು ಅತ್ಯಂತ

ಪ್ರಜಾಪ್ರಭುತ್ವದ ದೇಶ ಪೊಲೀಸ್ ದೇಶದಂತೆ ವರ್ತಿಸಬಾರದು-ಸುಪ್ರೀಂ Read More »

ಬ್ರೇಕಿಂಗ್ ನ್ಯೂಸ್

ಪುಸ್ತಕ ರೂಪದಲ್ಲಿ ಪುನೀತ್ ರಾಜ್ ಕುಮಾರ್ ರವರ ಜೀವನ

(ನ್ಯೂಸ್ ಕಡಬ) newskadaba.com ಮಾ. 18 : ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ ಬಯೋಗ್ರಫಿ ಬರೆಯಲಾಗಿದೆ. ಈ ಕುರಿತು ಪುನೀತ್ ಅವರ ಜನ್ಮದಿನದ ಪ್ರಯುಕ್ತ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಘೋಷಣೆ ಮಾಡಿದ್ದಾರೆ. ಈ ವಿಚಾರ ತಿಳಿದು ಅಪ್ಪು ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ. ಇದರ ಅಧಿಕೃತ ದಿನಾಂಕ ಇನ್ನಷ್ಟೇ ತಿಳಿಯಬೇಕಿದೆ. ‘ಅಪ್ಪು’ ಅನ್ನೋ ಶೀರ್ಷಿಕೆಯಲ್ಲೇ ಪುನೀತ್ ಬಯೋಗ್ರಫಿ ಬರೆಯಲಾಗಿದೆ. ಅಶ್ವಿನಿ ಮತ್ತು ಪ್ರಕೃತಿ ಬನವಾಸಿ ಒಟ್ಟಾಗಿ ಸೇರಿ ಈ ಪುಸ್ತಕ ಬರೆದಿದ್ದಾರೆ. ಎರಡು ವರ್ಷಗಳ ಪ್ರಯತ್ನದಿಂದ ಈ

ಪುಸ್ತಕ ರೂಪದಲ್ಲಿ ಪುನೀತ್ ರಾಜ್ ಕುಮಾರ್ ರವರ ಜೀವನ Read More »

ಕರ್ನಾಟಕ

ಆರೋಗ್ಯ ವಿಮೆ ಕ್ಷೇತ್ರಕ್ಕೆ ಕಾಲಿಟ್ಟ ಎಲ್‌ಐಸಿ, ಮಾರ್ಚ್‌ 31ಕ್ಕೆ ಅಧಿಕೃತ ಘೋಷಣೆ!

(ನ್ಯೂಸ್ ಕಡಬ) newskadaba.com ಮಾ. 18 ಮುಂಬೈ: ಇಲ್ಲಿಯವರೆಗೂ ಜೀವವಿಮೆ ಕ್ಷೇತ್ರ ಬಿಟ್ಟು ಬೇರೆ ಯಾವ ಸೇವೆ ಕೂಡ ನೀಡದೇ ಇದ್ದ ಭಾರತೀಯ ಜೀವ ವಿಮಾ ಕಂಪನಿ ಅಂದರೆ ಎಲ್‌ಐಸಿ ಯು ಶೀಘ್ರದಲ್ಲಿಯೇ ಆರೋಗ್ಯ ವಿಮೆ ಕ್ಷೇತ್ರಕ್ಕೆ ಕಾಲಿಡಲಿದೆ. ಈ ಬಗ್ಗೆ ಲೈಫ್‌ ಇನ್ಶುರೆನ್ಸ್ ಕಾರ್ಪೋರೇಷಷನ್‌ ಆಫ್‌ ಇಂಡಿಯಾದ ಸಿಇಒ ಸಿದ್ಧಾರ್ಥ್‌ ಮೊಹಾಂತಿ ಮಾತನಾಡಿದ್ದು, ಆರೋಗ್ಯ ವಿಮೆ ಕ್ಷೇತ್ರಕ್ಕೆ ಪ್ರವೇಶಿಸುವ ನಿಟ್ಟಿನಲ್ಲಿ ಕಂಪನಿಯೊಂದರ ಷೇರುಗಳ ಸ್ವಾಧೀನ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಮಾರ್ಚ್ 31 ರ ಮೊದಲು ಒಪ್ಪಂದವನ್ನು ಅಂತಿಮಗೊಳಿಸುವ ಗುರಿಯನ್ನು ಕಂಪನಿಯು ಹೊಂದಿದೆ

ಆರೋಗ್ಯ ವಿಮೆ ಕ್ಷೇತ್ರಕ್ಕೆ ಕಾಲಿಟ್ಟ ಎಲ್‌ಐಸಿ, ಮಾರ್ಚ್‌ 31ಕ್ಕೆ ಅಧಿಕೃತ ಘೋಷಣೆ! Read More »

ಆರೋಗ್ಯ ಮಾಹಿತಿ

ಉಡುಪಿ: ಮಂಗಳೂರು-ಮಡಂಗಾವ್ ವಂದೇ ಭಾರತ್ ರೈಲು ಮುಂದುವರಿಕೆ

(ನ್ಯೂಸ್ ಕಡಬ) newskadaba.com ಮಾ. 18 ಮಂಗಳೂರು: ಮಂಗಳೂರು-ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್ ರದ್ದತಿಯ ಬಗ್ಗೆ ಊಹಾಪೋಹಗಳ ನಡುವೆ, ಸೇವೆಯನ್ನು ರದ್ದುಪಡಿಸುವ ಬದಲು ಮುಂಬೈಗೆ ವಿಸ್ತರಿಸುವಂತೆ ಸಚಿವರಿಗೆ ಮನವಿ ಮಾಡಲಾಗಿತ್ತು. ಮಂಗಳೂರು ಮತ್ತು ಉಡುಪಿಯ ಆರ್ಥಿಕ ಅಂಶಗಳ ಕುರಿತು ವರದಿಯನ್ನು ಸಚಿವರಿಗೆ ಸಲ್ಲಿಸಲಾಯಿತು. ಮುಂಬೈಗೆ ರೈಲು ಸೇವೆಯನ್ನು ವಿಸ್ತರಿಸುವ ಅಗತ್ಯವನ್ನು ಸಚಿವರಿಗೆ ತಿಳಿಸಲಾಯಿತು. ಭವಿಷ್ಯದಲ್ಲಿ ಸ್ಲೀಪರ್ ವಂದೇ ಭಾರತ್ ರೈಲುಗಳನ್ನು ಪರಿಚಯಿಸಿದಾಗ, ಮಂಗಳೂರು ಮತ್ತು ಮುಂಬೈ ನಡುವೆ ಒಂದನ್ನು ಓಡಿಸಲು ಆದ್ಯತೆ ನೀಡಬೇಕೆಂದು ಮನವಿ ಮಾಡಲಾಯಿತು. ಸಚಿವ ಅಶ್ವಿನಿ ವೈಷ್ಣವ್ ಅವರು ಗಮನವಿಟ್ಟು ಆಲಿಸಿ

ಉಡುಪಿ: ಮಂಗಳೂರು-ಮಡಂಗಾವ್ ವಂದೇ ಭಾರತ್ ರೈಲು ಮುಂದುವರಿಕೆ Read More »

ಕರಾವಳಿ

ಇನ್ನು ಕೆಲವೇ ಗಂಟೆಗಳಲ್ಲಿ ಸುನೀತಾ ವಿಲಿಯಮ್ಸ್ ಬಾಹ್ಯಕಾಶದಿಂದ ಭೂಮಿಗೆ

(ನ್ಯೂಸ್ ಕಡಬ) newskadaba.com ಮಾ. 18 ವಾಷಿಂಗ್ಟನ್:  ಒಂಭತ್ತು ತಿಂಗಳಿಗೂ ಹೆಚ್ಚು ಕಾಲ ಬಾಹ್ಯಕಾಶದಲ್ಲಿ ಅದ್ಭುತ ಸಾಹಸ ಮುಗಿಸಿ ಗಗನಯಾತ್ರಿ ಸುನೀತಾ ವಿಲಿಯಮ್ಸ್ ನಾಳೆ ಬೆಳಗ್ಗಿನಜಾವ ಭೂಮಿಗೆ ವಾಪಸ್ಸಾಗಲಿದ್ದಾರೆ. ನಾಸಾ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಲೋರ್ ಅವರು ಅಮೆರಿಕದ ಸ್ಥಳೀಯ ಕಾಲಮಾನದ ಪ್ರಕಾರ ಮಂಗಳವಾರ ಸಂಜೆ 5.57ಕ್ಕೆ (ಭಾರತೀಯ ಕಾಲಮಾನ ಬುಧವಾರ ಬೆಳಗ್ಗೆ 3:27) ಭೂಮಿಗೆ ತಲುಪಲಿದ್ದಾರೆ ಎಂದು ನಾಸಾ ತಿಳಿಸಿದೆ. ಸುನಿತಾ ವಿಲಿಯಮ್ಸ್, ಬುಚ್ ವಿಲ್ಲೋರ್ ಮತ್ತು ಮತ್ತೊಬ್ಬ ಅಮೇರಿಕನ್ ಗಗನಯಾತ್ರಿ ನಿಕ್ ಹೇಗ್ ಮತ್ತು ರಷ್ಯಾದ

ಇನ್ನು ಕೆಲವೇ ಗಂಟೆಗಳಲ್ಲಿ ಸುನೀತಾ ವಿಲಿಯಮ್ಸ್ ಬಾಹ್ಯಕಾಶದಿಂದ ಭೂಮಿಗೆ Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್

ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಹೆಚ್.ಎಂ ರೇವಣ್ಣ ಹಲ್ಲೆ-ದೂರು ದಾಖಲು

(ನ್ಯೂಸ್ ಕಡಬ) newskadaba.com ಮಾ. 18 ಬೆಂಗಳೂರು: ಮಾಜಿ ಸಚಿವ ಹೆಚ್.ಎಂ.ರೇವಣ್ಣ ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಹಲ್ಲೆ ಮಾಡಿರುವ ಆರೋಪದ ಮೇರೆಗೆ ಬೆಂಗಳೂರಿನ ಹೈ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ ಅವರು ಕುಮಾರಕೃಪಾ ಅತಿಥಿಗೃಹದಲ್ಲಿ ಮಾರ್ಚ್ 17 ರಂದು ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರು ಆರೋಪಿಸಿದ್ದಾರೆ. ಈ ಸಂಬಂಧ ಹೆಚ್‌ಎಂ ರೇವಣ್ಣ ವಿರುದ್ಧ ಆಕೆ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು, ಸಾಕ್ಷ್ಯಧಾರಗಳನ್ನು ನೀಡುವಂತೆ ಕೈ ಕಾರ್ಯಕರ್ತೆಗೆ ನೋಟಿಸ್

ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಹೆಚ್.ಎಂ ರೇವಣ್ಣ ಹಲ್ಲೆ-ದೂರು ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೋಲ್ಕತ್ತಾದಲ್ಲಿ ಪತ್ತೆಯಾದ HKU1 ಎಂಬ ಹೊಸ ವೈರಸ್ ಪತ್ತೆ

(ನ್ಯೂಸ್ ಕಡಬ) newskadaba.com ಮಾ. 18 ಬೆಂಗಳೂರು: ಕೋವಿಡ್ ನಂತರ ಈಗ ಮತ್ತೊಂದು ವೈರಸ್‌ವೊಂದು ಪತ್ತೆಯಾಗಿದೆ. ಮಾನವ ಕೊರೊನಾ ವೈರಸ್ ಅಥವಾ ಹ್ಯುಮನ್ ಕೊರೊನಾ ವೈರಸ್ ಅಥವಾ  HKU1 ಎಂದು ಕರೆಯಲ್ಪಡುವ ವೈರಸೊಂದು ಕೋಲ್ಕತ್ತಾ ಮೂಲದ ಮಹಿಳೆಯಲ್ಲಿ ಕಾಣಿಸಿಕೊಂಡಿದ್ದು, ಇದು ಕೂಡ ಉಸಿರಾಟಕ್ಕೆ ಸಮಸ್ಯೆ ತಂಡೊಡ್ಡುವ ಕಾಯಿಲೆಯಾಗಿದೆ. ಇದು ತೀವ್ರ ಸ್ವರೂಪ ಪಡೆದಲ್ಲಿ ಶೀತ ಹಾಗೂ ನ್ಯುಮೋನಿಯಾ ಉಂಟು ಮಾಡಬಹುದು. ಆದರೆ ಭಯಪಡುವ ಅಗತ್ಯವಿಲ್ಲ ಆದರು ಬಹಳ ಎಚ್ಚರಿಕೆಯಿಂದ ಇರುವಂತೆ ಎಂದು ತಜ್ಞರು ಸೂಚಿಸಿದ್ದಾರೆ. ಕೋಲ್ಕತ್ತಾದ ಗರಿಯಾ ನಿವಾಸಿಯಾದ 45 ವರ್ಷದ

ಕೋಲ್ಕತ್ತಾದಲ್ಲಿ ಪತ್ತೆಯಾದ HKU1 ಎಂಬ ಹೊಸ ವೈರಸ್ ಪತ್ತೆ Read More »

ಆರೋಗ್ಯ ಮಾಹಿತಿ, ಬ್ರೇಕಿಂಗ್ ನ್ಯೂಸ್
Scroll to Top