News Kadaba

ಕೆನಡಾ ನೂತನ ಪ್ರಧಾನಿ ಮಾರ್ಕ್ ಕಾರ್ನಿ: ಲಿಬರಲ್ ಪಕ್ಷದ ನಾಯಕರಾಗಿ ಆಯ್ಕೆ

(ನ್ಯೂಸ್ ಕಡಬ) newskadaba.com ಮಾ. 10 ಒಟ್ಟಾವಾ: ಕೆನಡಾದ ಲಿಬರಲ್ ಪಕ್ಷವು ದೇಶದ ಮುಂದಿನ ಪ್ರಧಾನಿಯಾಗಿ ಮಾರ್ಕ್ ಕಾರ್ನಿ ಅವರನ್ನು ಬಹುಮತದಿಂದ ಆಯ್ಕೆ ಮಾಡಿದೆ. ಕಾರ್ನಿಯವರು ಆಯ್ಕೆಯಾಗುತ್ತಿದ್ದಂತೆ ಅಮೆರಿಕಾ ಅಧ್ಯಕ್ಷರ ಮೇಲೆ ಹರಿಹಾಯ್ದಿದ್ದು, ಕೆನಡಾದ ಕಾರ್ಮಿಕರು, ಕುಟುಂಬಗಳು ಮತ್ತು ವ್ಯವಹಾರಗಳ ಮೇಲೆ ಅಮೆರಿಕ ದಾಳಿ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಅವರನ್ನು ಯಶಸ್ವಿಯಾಗಲು ನಾವು ಬಿಡುವುದಿಲ್ಲ ಎಂದು 59 ವರ್ಷದ ಮಾರ್ಕ್ ಕಾರ್ನಿಯವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಡುಗಿದ್ದಾರೆ. ನಿರ್ಗಮಿತ ಲಿಬರಲ್ ನಾಯಕ ಪ್ರಧಾನಿ ಜಸ್ಟಿನ್ ಟ್ರುಡೊ […]

ಕೆನಡಾ ನೂತನ ಪ್ರಧಾನಿ ಮಾರ್ಕ್ ಕಾರ್ನಿ: ಲಿಬರಲ್ ಪಕ್ಷದ ನಾಯಕರಾಗಿ ಆಯ್ಕೆ Read More »

ಬ್ರೇಕಿಂಗ್ ನ್ಯೂಸ್

ಮಹಿಳಾ ವೈದ್ಯರಿಗೆ ಭದ್ರತೆ: ರಾಜ್ಯ ಸರ್ಕಾರದಿಂದ ಸುರಕ್ಷತಾ ಶಿಷ್ಟಾಚಾರ ಕೈಪಿಡಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಾ. 10 ಬೆಂಗಳೂರು: ರಾಜ್ಯದಾದ್ಯಂತ, ವೈದ್ಯರು, ನರ್ಸ್ ಗಳು ಮತ್ತು ಸಹಾಯಕ ಸಿಬ್ಬಂದಿ ಸೇರಿದಂತೆ ಆರೋಗ್ಯ ವೃತ್ತಿಪರರು ರಾತ್ರಿಯಿಡೀ ಅವಿಶ್ರಾಂತವಾಗಿ ಕೆಲಸ ಮಾಡುವ ಮೂಲಕ ಲಕ್ಷಾಂತರ ಜನರ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳುತ್ತಾರೆ. 6,000 ಕ್ಕೂ ಹೆಚ್ಚು ಗ್ರಾಮ ಪಂಚಾಯತ್‌ಗಳು, 30 ಪ್ರಮುಖ ಜಿಲ್ಲಾ ಆಸ್ಪತ್ರೆಗಳು, 175 ತಾಲ್ಲೂಕು ಆಸ್ಪತ್ರೆಗಳು ಮತ್ತು ಸರ್ಕಾರಿ ಹಾಗೂ ಖಾಸಗಿ ಸೇರಿದಂತೆ 60ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜುಗಳು ತಮ್ಮದೇ ಆದ ಆಸ್ಪತ್ರೆಗಳನ್ನು ಹೊಂದಿದ್ದು, ರಾಜ್ಯದ ಆರೋಗ್ಯ ವ್ಯವಸ್ಥೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ

ಮಹಿಳಾ ವೈದ್ಯರಿಗೆ ಭದ್ರತೆ: ರಾಜ್ಯ ಸರ್ಕಾರದಿಂದ ಸುರಕ್ಷತಾ ಶಿಷ್ಟಾಚಾರ ಕೈಪಿಡಿ ಬಿಡುಗಡೆ Read More »

ಕರ್ನಾಟಕ

ಸಂಸತ್ತು ಬಜೆಟ್ ಅಧಿವೇಶನ ಎರಡನೇ ಹಂತ ಇಂದು ಆರಂಭ: ವಕ್ಫ್ ಮಸೂದೆ, ಕ್ಷೇತ್ರ ವಿಂಗಡಣೆ ವಿರುದ್ಧ ತರಾಟೆಗೆ ಪ್ರತಿಪಕ್ಷಗಳು ಸಜ್ಜು

(ನ್ಯೂಸ್ ಕಡಬ) newskadaba.com ಮಾ. 10 ನವದೆಹಲಿ: ಮತದಾರರ ಪಟ್ಟಿಗಳಲ್ಲಿ ಅಕ್ರಮ ನಡೆದಿರುವ ಆರೋಪ, ವಕ್ಫ್ ಮಸೂದೆ, ಕ್ಷೇತ್ರ ವಿಂಗಡಣೆ ಮತ್ತು ಅಮೆರಿಕದ ಡೊನಾಲ್ಡ್ ಟ್ರಂಪ್ ಆಡಳಿತದ ಸುಂಕದ ಹಕ್ಕುಗಳ ವಿಷಯಗಳ ಕುರಿತು ವಿರೋಧ ಪಕ್ಷಗಳು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಜ್ಜಾಗಿರುವುದರ ಮಧ್ಯೆ ಇಂದು ಸೋಮವಾರದಿಂದ ಸಂಸತ್ತು ಬಜೆಟ್ ಅಧಿವೇಶನ ಎರಡನೇ ಹಂತ ಆರಂಭವಾಗುತ್ತಿದೆ. ಕ್ಷೇತ್ರ ವಿಂಗಡಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ತಮಿಳುನಾಡು ಸರ್ಕಾರದ ನಡುವಿನ ತಿಕ್ಕಾಟ ಸಂಸತ್ತಿನಲ್ಲಿ ಪ್ರತಿಧ್ವನಿಸುವ ಸೂಚನೆ ಸಿಕ್ಕಿದೆ. ತಮಿಳು ನಾಡಿನ

ಸಂಸತ್ತು ಬಜೆಟ್ ಅಧಿವೇಶನ ಎರಡನೇ ಹಂತ ಇಂದು ಆರಂಭ: ವಕ್ಫ್ ಮಸೂದೆ, ಕ್ಷೇತ್ರ ವಿಂಗಡಣೆ ವಿರುದ್ಧ ತರಾಟೆಗೆ ಪ್ರತಿಪಕ್ಷಗಳು ಸಜ್ಜು Read More »

ಕರ್ನಾಟಕ

ನಮ್ಮ ಮೆಟ್ರೋ ಟಿಕೆಟ್‌ ದರ ಏರಿಕೆ ಖಂಡಿಸಿ ರೈಲಿನೊಳಗೇ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಾ. 10 ಬೆಂಗಳೂರು: ರಾಜಧಾನಿಯಲ್ಲಿ ನಮ್ಮ ಮೆಟ್ರೋ ಪ್ರಯಾಣ ದರವನ್ನು ದುಪ್ಪಟ್ಟು ಹೆಚ್ಚಿಸಿದ ಕ್ರಮವನ್ನು ಖಂಡಿಸಿ, ದರವನ್ನು ಕಡಿಮೆ ಮಾಡುವಂತೆ ಒತ್ತಾಯಿಸಿ ಭಾನುವಾರ ಮೆಟ್ರೋ ರೈಲಿನ ಒಳಗಡೆ ಗ್ರೀನ್ ಪೀಸ್ ಇಂಡಿಯಾ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮೆಟ್ರೋ ದರ ಏರಿಕೆಯ ಒಂದು ತಿಂಗಳ ನಂತರವೂ ಜನರ ಆಕ್ರೋಶ, ಪ್ರತಿಭಟನೆ ನಿಂತಿಲ್ಲ. ನಿನ್ನೆ ಮೆಟ್ರೋದ ಒಳಗೆ ಗ್ರೀನ್‌ ಪೀಸ್‌ ಇಂಡಿಯಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ಹತ್ತಿದ ಕಾರ್ಯಕರ್ತರು, ರೈಲಿನ

ನಮ್ಮ ಮೆಟ್ರೋ ಟಿಕೆಟ್‌ ದರ ಏರಿಕೆ ಖಂಡಿಸಿ ರೈಲಿನೊಳಗೇ ಪ್ರತಿಭಟನೆ Read More »

ಕರ್ನಾಟಕ

ಮಾರ್ಚ್ 11-12 ರಂದು ದಲ್ಲಿ ಪೂರ್ವ ಮುಂಗಾರು ಮಳೆಯಾಗುವ ಸಾಧ್ಯತೆ- ಐಎಂಡಿ ಮುನ್ಸೂಚನೆ

(ನ್ಯೂಸ್ ಕಡಬ) newskadaba.com ಮಾ. 10 ಬೆಂಗಳೂರು: ಬೆಂಗಳೂರು ದಕ್ಷಿಣ ಒಳನಾಡು ಮತ್ತು ಕರಾವಳಿ ಕರ್ನಾಟಕ ಭಾಗಗಳಲ್ಲಿ ಈ ವಾರ ಮುಂಗಾರುಪೂರ್ವ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 11 ಮತ್ತು 12 ರಂದು ದಕ್ಷಿಣ ಕರ್ನಾಟಕದ ಕೆಲವು ಭಾಗಗಳು ಮತ್ತು ಕರಾವಳಿ ಪ್ರದೇಶದಲ್ಲಿ ಹಗುರ ಮಳೆಯಾಗುವ ನಿರೀಕ್ಷೆಯಿದ್ದು, ಬಿಸಿಲಿನಿಂದ ತಾತ್ಕಾಲಿಕವಾಗಿ ವಿಶ್ರಾಂತಿ ದೊರೆಯಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವು ಈ ಪ್ರದೇಶದ ಹವಾಮಾನದ ಮೇಲೆ ಪ್ರಭಾವ ಬೀರುತ್ತಿದೆ ಎಂದು ಹವಾಮಾನ

ಮಾರ್ಚ್ 11-12 ರಂದು ದಲ್ಲಿ ಪೂರ್ವ ಮುಂಗಾರು ಮಳೆಯಾಗುವ ಸಾಧ್ಯತೆ- ಐಎಂಡಿ ಮುನ್ಸೂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು ವಿ.ವಿಗೆ ಡಾ. ಮನಮೋಹನ್ ಸಿಂಗ್ ಯೂನಿವರ್ಸಿಟಿ ಮರುನಾಮಕರಣ

(ನ್ಯೂಸ್ ಕಡಬ) newskadaba.com ಮಾ. 07 ಬೆಂಗಳೂರು: ಜ್ಞಾನಭಾರತಿ ಕ್ಯಾಂಪಸ್​ನಲ್ಲಿರುವ ಬೆಂಗಳೂರು ವಿಶ್ವವಿದ್ಯಾಲಯದ ಹೆಸರನ್ನು ಬದಲಾಯಿಸಲಾಗುತ್ತಿದೆ. ಮಾಜಿ ಪ್ರಧಾನಿ, ದಿವಂಗತ ಡಾ| ಮನಮೋಹನ್ ಸಿಂಗ್ ಅವರ ಹೆಸರನ್ನು ಬೆಂಗಳೂರು ವಿವಿಗೆ ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್​​ನಲ್ಲಿ ತಿಳಿಸಿದ್ದಾರೆ. ಎರಡು ಅವಧಿಗೆ ಒಟ್ಟು ಹತ್ತು ವರ್ಷ ಕಾಲ ಭಾರತದ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ 2024ರ ಡಿಸೆಂಬರ್ ತಿಂಗಳಲ್ಲಿ ಇಹಲೋಕ ತ್ಯಜಿಸಿದ್ದಾರೆ. ಭಾರತದ ಆಧುನಿಕ ಆರ್ಥಿಕತೆಯ ರೂವಾರಿಗಳಲ್ಲಿ ಒಬ್ಬರೆಂದು ಪರಿಗಣಿಸಲಾಗಿರುವ ಮನಮೋಹನ್ ಸಿಂಗ್ ಅವರ ಗೌರವ ಸೂಚಕವಾಗಿ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಅವರ ಹೆಸರನ್ನು

ಬೆಂಗಳೂರು ವಿ.ವಿಗೆ ಡಾ. ಮನಮೋಹನ್ ಸಿಂಗ್ ಯೂನಿವರ್ಸಿಟಿ ಮರುನಾಮಕರಣ Read More »

ಕರ್ನಾಟಕ

ಪತ್ರಕರ್ತರಿಗೆ ‘ಮಾಧ್ಯಮ ಸಂಜೀವಿನಿ’ ಯೋಜನೆ – 5 ಲಕ್ಷ ರೂ. ನಗದು ರಹಿತ ಚಿಕಿತ್ಸೆ

(ನ್ಯೂಸ್ ಕಡಬ) newskadaba.com ಮಾ. 07 ಬೆಂಗಳೂರು: ಮಾನ್ಯತೆ ಹೊಂದಿರುವ ಪತ್ರಕರ್ತರು ಹಾಗೂ ಅವಲಂಬಿತ ಕುಟುಂಬ ಸದಸ್ಯರಿಗೆ 5 ಲಕ್ಷ ರೂ.ವರೆಗೆ ನಗದುರಹಿತ ಚಿಕಿತ್ಸೆಗಾಗಿ ‘ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ’ ಯೋಜನೆ ಅನುಷ್ಠಾನ ಮಾಡುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿದೆ. ರಾಜ್ಯದ ಪತ್ರಕರ್ತರಿಗೆ ನೀಡಲಾಗುತ್ತಿದ್ದ ಮಾಸಾಶನವನ್ನು 12 ಸಾವಿರ ರೂ.ನಿಂದ 15ಸಾವಿರ ರೂ.ಗಳಿಗೆ ಹಾಗೂ ಕುಟುಂಬ ಮಾಸಾಶನ 7,500 ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ.

ಪತ್ರಕರ್ತರಿಗೆ ‘ಮಾಧ್ಯಮ ಸಂಜೀವಿನಿ’ ಯೋಜನೆ – 5 ಲಕ್ಷ ರೂ. ನಗದು ರಹಿತ ಚಿಕಿತ್ಸೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸ್ವರ್ಣಪ್ರಿಯರಿಗೆ ಗುಡ್‌ನ್ಯೂಸ್‌- ಚಿನ್ನದ ದರದಲ್ಲಿ ಕೊಂಚ ಇಳಿಕೆ

(ನ್ಯೂಸ್ ಕಡಬ) newskadaba.com ಮಾ. 07 ಬೆಂಗಳೂರು: ಚಿನ್ನದ ದರದಲ್ಲಿ ಇಂದು ಮತ್ತೆ ಇಳಿಕೆ ಕಂಡಿದೆ. 22 ಕ್ಯಾರಟ್‌ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಕ್ರಮವಾಗಿ 30 ರೂ. ಮತ್ತು 33 ರೂ. ಇಳಿಕೆ ಆಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,990 ರೂ.ಗೆ ತಲುಪಿದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ8,716 ರೂ. ಪಾವತಿಸಬೇಕು. 22 ಕ್ಯಾರಟ್‌ನ 8 ಗ್ರಾಂ ಚಿನ್ನ 63,920 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು

ಸ್ವರ್ಣಪ್ರಿಯರಿಗೆ ಗುಡ್‌ನ್ಯೂಸ್‌- ಚಿನ್ನದ ದರದಲ್ಲಿ ಕೊಂಚ ಇಳಿಕೆ Read More »

ಬ್ರೇಕಿಂಗ್ ನ್ಯೂಸ್

ಸಬ್-ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಕಸದ ಬುಟ್ಟಿಯಲ್ಲಿ 20.000 ರೂ. ನಗದು ಪತ್ತೆ

(ನ್ಯೂಸ್ ಕಡಬ) newskadaba.com ಮಾ. 07 ಬೆಂಗಳೂರು: ಭ್ರಷ್ಟಾಚಾರ, ದುರಾಡಳಿತ ಕುರಿತು ಸಾಲು ಸಾಲು ದೂರು ಹಿನ್ನೆಲೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್, ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಮತ್ತು ನ್ಯಾಯಮೂರ್ತಿ ಬಿ. ವೀರಪ್ಪ ಅವರು ಗುರುವಾರ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಾದ್ಯಂತ ಸಬ್-ರಿಜಿಸ್ಟ್ರಾರ್ ಕಚೇರಿಗಳ ಮೇಲೆ ದಿಢೀರ್ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದರು. 2022ನೇ ಸಾಲಿನಲ್ಲಿ ಕಾರ್ಯಾಚರಣೆ ಕೈಗೊಂಡ ಸಬ್ ರಿಜಿಸ್ಟ್ರಾರ್ ಗಳಿಗೆ ಮತ್ತೆ ದಿಢೀರ್ ಭೇಟಿ ನೀಡಿದಾಗಲೂ ಅದೇ ನ್ಯೂನತೆ ಕಂಡು ಬಂದಿದ್ದು, ಈ ವೇಳೆ ಅಧಿಕಾರಿಗಳನ್ನು

ಸಬ್-ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಕಸದ ಬುಟ್ಟಿಯಲ್ಲಿ 20.000 ರೂ. ನಗದು ಪತ್ತೆ Read More »

ಕರ್ನಾಟಕ

2025-26ನೇ ಸಾಲಿನ ರಾಜ್ಯ ಬಜೆಟ್: ದಾಖಲೆಯ 16ನೇ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಮಾ. 07 ಬೆಂಗಳೂರು: 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭವಾಗಿದ್ದು, 16ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸುತ್ತಿದ್ದಾರೆ. ಈ ಮೂಲಕ ದಾಖಲೆ ಸೃಷ್ಟಿಸಿದ್ದಾರೆ. 1995ರಲ್ಲಿ. ಎಚ್.ಡಿ ದೇವೇಗೌಡರು ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ಅವರು ಮೊದಲ ಬಜೆಟ್‌ ಮಂಡಿಸಿದ್ದರು. 1995 ಮತ್ತು 1996ರಲ್ಲಿ ದೇವೇಗೌಡರು ಸಿಎಂ ಆಗಿದ್ದಾಗ, 1997, 1998, 1999ರಲ್ಲಿ ಜೆ.ಎಚ್‌. ಪಟೇಲ್‌ ಸಂಪುಟದಲ್ಲಿ ಹಣಕಾಸು ಸಚಿವರಾಗಿ ಸಿದ್ದರಾಮಯ್ಯ ಅವರು ಬಜೆಟ್‌ ಮಂಡಿಸಿದ್ದರು. 2013ರಲ್ಲಿ ಮೊದಲ ಬಾರಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಅವರು 2013, 2014, 2015,

2025-26ನೇ ಸಾಲಿನ ರಾಜ್ಯ ಬಜೆಟ್: ದಾಖಲೆಯ 16ನೇ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ
Scroll to Top