News Kadaba

ಇನ್ಮುಂದೆ ರಸಗೊಬ್ಬರ ಬೇಕಿದ್ರೆ FID ಕಡ್ಡಾಯ

(ನ್ಯೂಸ್‌ ಕಡಬ) newskadaba.com,  ಎ.23:  ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರ ಯೂರಿಯಾದಂತಹ ರಸಗೊಬ್ಬರಗಳ ಅತಿಯಾದ ಬಳಕೆಗೆ ಕಡಿವಾಣ ಹಾಕಲು ಮತ್ತು ವೈಜ್ಞಾನಿಕ ಬಳಕೆಯನ್ನು ಉತ್ತೇಜಿಸಲು ರೈತರಿಗೆ ಫಾರ್ಮರ್ಸ್ ಐಡಿ ಹೊಂದುವುದನ್ನು ಕಡ್ಡಾಯಗೊಳಿಸಿದೆ. ಈ ವರ್ಷದಿಂದ ಯೂರಿಯಾ, ಡಿಎಪಿ ಸೇರಿದಂತೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ ಎಫ್‌ಐಡಿ ಕಡ್ಡಾಯ. ಪ್ರತಿಯೊಬ್ಬ ರೈತರೂ ಎಫ್‌ಐಡಿಯನ್ನು ಮಾಡಿಸಿಕೊಳ್ಳಬೇಕೆಂದು ಕೃಷಿ ಇಲಾಖೆ 20 ದಿನಗಳ ಹಿಂದೆ ಸುತ್ತೋಲೆ ಹೊರಡಿಸಿದೆ… ಏನು ಕೊರತೆ? ಗೊಬ್ಬರ ತಯಾರಿಕೆಗೆ […]

ಇನ್ಮುಂದೆ ರಸಗೊಬ್ಬರ ಬೇಕಿದ್ರೆ FID ಕಡ್ಡಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೂಡುಬಿದಿರೆ : ಕಾಲುಸಂಕ ಮುರಿದುಬಿದ್ದು ಹಲವರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಎ.23:  ತಾಕೋಡೆ ಬರ್ಕೆ ಧರ್ಮನೇಮಕ್ಕೆ ಬಾವದಗುತ್ತುವಿನಿಂದ ಭಂಡಾರವನ್ನು ಪಲ್ಲಕ್ಕಿಯಲ್ಲಿ ಹೊತ್ತು ಮೆರವಣಿಗೆ ಸಾಗಿಸುತ್ತಿದ್ದ ವೇಳೆ ಕಾಲು ಸಂಕ ಮುರಿದು ಬಿದ್ದು ಎಂಟು ಮಂದಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ…….. ಸುನಿಲ್ ಶೆಟ್ಟಿ ಮುಕಾಲ್ದಿ, ಮಾರೂರು, ಲೋಕೇಶ್ ಭಂಡಾರಿ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಘಟನೆ ತಿಳಿದ ಕೂಡಲೇ ಸ್ಥಳೀಯರು ತಕ್ಷಣ ಧಾವಿಸಿ ಗಾಯಾಳುಗಳನ್ನು ರಕ್ಷಿಸಿ, ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸುವಲ್ಲಿ ಸಹಾಯ ಮಾಡಿದ್ದಾರೆ. ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.  

ಮೂಡುಬಿದಿರೆ : ಕಾಲುಸಂಕ ಮುರಿದುಬಿದ್ದು ಹಲವರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ಬೆಲೆ

(ನ್ಯೂಸ್‌ ಕಡಬ) newskadaba.com,  ಎ.23:  ಇಂದು ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. 24 ಕ್ಯಾರೆಟ್ (ಶುದ್ಧ ಚಿನ್ನ): 10 ಗ್ರಾಂ ಚಿನ್ನದ ಬೆಲೆ 1,200 ರೂ. ಇಳಿಕೆಯಾಗಿ 1,53,550 ರೂ. ದಾಖಲಾಗಿದೆ. (1 ಗ್ರಾಂ ಬೆಲೆ: 15,355 ರೂ.) 22 ಕ್ಯಾರೆಟ್ (ಆಭರಣ ಚಿನ್ನ): 10 ಗ್ರಾಂ ಚಿನ್ನದ ಬೆಲೆ 1,100 ರೂ. ಇಳಿಕೆಯಾಗಿ 1,40,750 ರೂ. ತಲುಪಿದೆ. (1 ಗ್ರಾಂ ಬೆಲೆ: 14,075 ರೂ.) ಬೆಳ್ಳಿ ದರ ಬೆಳ್ಳಿಯ ಬೆಲೆಯಲ್ಲಿ ಪ್ರತಿ

ಇಂದಿನ ಚಿನ್ನದ ಬೆಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇನ್ನು ಡಿಜಿಲಾಕರ್ ಮೂಲಕವೇ ಎಸ್ಸೆಸ್ಸೆಲ್ಸಿ ಅಂಕಪಟ್ಟಿ ನೀಡುವುದು ಕಡ್ಡಾಯ

(ನ್ಯೂಸ್‌ ಕಡಬ) newskadaba.com,  ಎ.23: ಕರ್ನಾಟಕ ಸರ್ಕಾರವು ಶಿಕ್ಷಣ ಕ್ಷೇತ್ರದಲ್ಲಿ ಡಿಜಿಟಲೀಕರಣಕ್ಕೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಎಸ್ಎಸ್ಎಲ್ಸಿ (SSLC exam) ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಕಡ್ಡಾಯವಾಗಿ ಡಿಜಿಲಾಕರ್ (Digilocker) ಮೂಲಕವೇ ಅಂಕಪಟ್ಟಿಗಳನ್ನು (SSLC result) ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026-27ರಿಂದ ಭೌತಿಕ ಪ್ರತಿ ಇರುವುದಿಲ್ಲ: 2026-27ನೇ ಶೈಕ್ಷಣಿಕ ಸಾಲಿನಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಈಗ ನೀಡಲಾಗುತ್ತಿರುವ ಕಾಗದದ (Hard Copy) ಅಂಕಪಟ್ಟಿ ವಿತರಣೆಯನ್ನು ಸಂಪೂರ್ಣವಾಗಿ ನಿಲ್ಲಿಸಲಾಗುತ್ತದೆ. ಡಿಜಿಟಲ್ ಅಂಕಪಟ್ಟಿ ಕಡ್ಡಾಯ: ಬದಲಾಗಿ,

ಇನ್ನು ಡಿಜಿಲಾಕರ್ ಮೂಲಕವೇ ಎಸ್ಸೆಸ್ಸೆಲ್ಸಿ ಅಂಕಪಟ್ಟಿ ನೀಡುವುದು ಕಡ್ಡಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತದ ಬಂದರಿಗೆ ಬರುತ್ತಿದ್ದ ಹಡಗನ್ನು ವಶಪಡಿಕೊಂಡ ಇರಾನ್‌ನ ಐಆರ್‌ಜಿಸಿ

(ನ್ಯೂಸ್‌ ಕಡಬ) newskadaba.com,  ಎ.23: ಭಾರತದ ಬಂದರಿಗೆ ಬರುತ್ತಿದ್ದ ಹಡಗನ್ನು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ. ಇಂದು ಒಟ್ಟು ಎರಡು ಹಡಗನ್ನು ಐಆರ್‌ಜಿಸಿ ವಶ ಪಡಿಸಿಕೊಂಡಿದೆ. ಈ ಹಡಗುಗಳು ಸಂಚಾರಿ ನಿಯಮಗಳನ್ನು ಉಲ್ಲಂಘಿಸಿವೆ, ಅಗತ್ಯ ಅನುಮತಿಗಳಿಲ್ಲದೆ ಕಾರ್ಯನಿರ್ವಹಿಸುತ್ತಿವೆ ಮತ್ತು ಸಂಚಾರಿ ವ್ಯವಸ್ಥೆಯಲ್ಲಿ ಹಸ್ತಕ್ಷೇಪ ಮಾಡಿ ಕಡಲ ಭದ್ರತೆಗೆ ಅಪಾಯ ತಂದಿವೆ ಎಂದು ಐಆರ್‌ಜಿಸಿ ತಿಳಿಸಿದೆ. ಎಪಾಮಿನೋಂಡಾಸ್ ಲೈಬೀರಿಯಾ ಧ್ವಜ ಹೊಂದಿರುವ ಈ ಕಂಟೇನರ್ ಹಡಗು ದುಬೈನ ಜೆಬೆಲ್ ಅಲಿಯಿಂದ ಗುಜರಾತ್‌ಗೆ ಬರುತ್ತಿತ್ತು. ಪನಾಮಾ

ಭಾರತದ ಬಂದರಿಗೆ ಬರುತ್ತಿದ್ದ ಹಡಗನ್ನು ವಶಪಡಿಕೊಂಡ ಇರಾನ್‌ನ ಐಆರ್‌ಜಿಸಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ: ಮಗನಿಂದಲೇ ತಂದೆಯ ಕೊಲೆಗೆ ಯತ್ನ; ಆರೋಪಿಯ ಬಂಧನ

(ನ್ಯೂಸ್‌ ಕಡಬ) newskadaba.com,  ಎ.23: ಮದ್ಯದ ಅಮಲಿನಲ್ಲಿ ಮಗನೊರ್ವ ತನ್ನ ತಂದೆಯ ಮೇಲೆಯೇ ಮಚ್ಚಿನಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಆಘಾತಕಾರಿ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ.ಈ ಕೃತ್ಯಕ್ಕೆ ಸಂಬಂಧಿಸಿದಂತೆ ಆರೋಪಿ ಭರತ್ (25) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದವರು ಉಜಿರೆ ಗ್ರಾಮದ ಮಣಿಕೆ ನಿವಾಸಿ, ಗಾರೆ ಕೆಲಸ ಮಾಡುವ ನಾರಾಯಣ (52) ಎಂದು ಗುರುತಿಸಲಾಗಿದ್ದು, ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮರದ ಮಿಲ್‌ನಲ್ಲಿ ಕೆಲಸ ಮಾಡುವ ಭರತ್ ಮತ್ತು ಆತನ ತಂದೆ ನಾರಾಯಣ ಇಬ್ಬರೂ ಮದ್ಯ

ಬೆಳ್ತಂಗಡಿ: ಮಗನಿಂದಲೇ ತಂದೆಯ ಕೊಲೆಗೆ ಯತ್ನ; ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

Karnataka CET exam 2026 ಸಿಇಟಿ: ಇಂದು ಭೌತಶಾಸ್ತ್ರ, ರಸಾಯನಶಾಸ್ತ್ರ ಪರೀಕ್ಷೆ

(ನ್ಯೂಸ್‌ ಕಡಬ) newskadaba.com,  ಎ.23: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆಗಳು ಗುರುವಾರ ಹಾಗೂ ಗಣಿತ ಮತ್ತು ಜೀವಶಾಸ್ತ್ರ ಪರೀಕ್ಷೆಗಳು ಶುಕ್ರವಾರ ನಡೆಯಲಿವೆ. 1,44,380 ವಿದ್ಯಾರ್ಥಿಗಳು ಹಾಗೂ 1,86,099 ವಿದ್ಯಾರ್ಥಿನಿಯರು ಸೇರಿ ಒಟ್ಟು 3,30,479 ಮಂದಿ ಪರೀಕ್ಷೆಗೆ ಹಾಜರಾಗಲಿದ್ದಾರೆ. ಅಭ್ಯರ್ಥಿಗಳು ನಿಗದಿತ ಅವಧಿಗಿಂತ ಎರಡು ಗಂಟೆ ಮುಂಚಿತವಾಗಿ ಹೋಗಿ ಪರಿಶೀಲನೆಗೆ ಒಳಗಾಗಬೇಕು ಎಂದು ಕೆಇಎ ತಿಳಿಸಿದೆ. ಇದೇ ಮೊದಲ ಬಾರಿಗೆ ಪ್ರತಿಯೊಂದು ಪರೀಕ್ಷಾ ಕೇಂದ್ರದಲ್ಲೂ ವಸ್ತ್ರಸಂಹಿತೆ ಪಾಲನೆ

Karnataka CET exam 2026 ಸಿಇಟಿ: ಇಂದು ಭೌತಶಾಸ್ತ್ರ, ರಸಾಯನಶಾಸ್ತ್ರ ಪರೀಕ್ಷೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ : ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಎ.23: ಎರಡು ದಿನಗಳ ಹಿಂದೆ ತಾಲೂಕಿನ ಮಡಂತ್ಯಾರು ಸಮೀಪದ ಪಾರೆಂಕಿ ಎಂಬಲ್ಲಿ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಪಾರೆಂಕಿ ನಿವಾಸಿ ಕೃಷ್ಣ ( 55) ಮೃತ ವ್ಯಕ್ತಿ. ಎ.20 ರಂದು ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಮಾರಿಗುಡಿ ರಾಮನಗರ ಕ್ರಾಸ್ ಬಳಿಯಲ್ಲಿ ಸೈಪುದ್ದೀನ್ ಎಂಬಾತ ಮಡಂತ್ಯಾರುವಿನಿಂದ ಬಳ್ಳಮಂಜ ಕಡೆಗೆ ಬೈಕ್ ನ್ನು ಚಲಾಯಿಸಿಕೊಂಡು ಬಂದು

ಬೆಳ್ತಂಗಡಿ : ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದು ಮಧ್ಯಾಹ್ನ 12ಕ್ಕೆ ಪ್ರಕಟ

(ನ್ಯೂಸ್‌ ಕಡಬ) newskadaba.com,  ಎ.23: ​ ಈ ಬಾರಿ ರಾಜ್ಯದಾದ್ಯಂತ 2,870 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಒಟ್ಟು 8,65,988 ವಿದ್ಯಾರ್ಥಿಗಳು ಹಾಜರಾಗಿದ್ದರು. ಇವರ ಶೈಕ್ಷಣಿಕ ಬದುಕಿನ ಪ್ರಮುಖ ಹಂತವಾದ ಈ ಫಲಿತಾಂಶ ಇಂದು ನಿರ್ಧಾರವಾಗಲಿದೆ. ಫಲಿತಾಂಶ ಪ್ರಕಟವಾದ ನಂತರ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗಳಲ್ಲಿ ತಮ್ಮ ಅಂಕಪಟ್ಟಿಯನ್ನು ಪರಿಶೀಲಿಸಬಹುದು. ತೃತೀಯ ಭಾಷೆ ಹಿಂದಿಗೆ ಅಂಕಗಳ ಬದಲು ಗ್ರೇಡ್ ನೀಡುವ ಬಗ್ಗೆ ಸರ್ಕಾರ ಹಿಂದೆ ಚಿಂತನೆ ನಡೆಸಿತ್ತು. ಆದರೆ ನ್ಯಾಯಾಲಯದ ನಿರ್ದೇಶನದ ಹಿನ್ನೆಲೆಯಲ್ಲಿ, ಈ ಬಾರಿ ಹಿಂದಿಗೂ ಅಂಕಗಳನ್ನು

ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದು ಮಧ್ಯಾಹ್ನ 12ಕ್ಕೆ ಪ್ರಕಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಎ.23: ​ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೊಂದು ವಾರ ಬಿಸಿಲ ಝಳ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈಗಾಗಲೇ ಕರುನಾಡು ಬಿಸಿಲ ಧಗೆಗೆ ಬಳಲಿ ಬೆಂಡಾಗಿದ್ದು, ರಣಬೇಸಿಗೆಗೆ ಜನ ಹೈರಾಣಾಗಿದ್ದಾರೆ. ರಾಯಚೂರು ಹಾಗೂ ಕಲಬುರಗಿಯಲ್ಲಿ ಉಷ್ಣಾಂಶ 41 ಡಿಗ್ರಿ ದಾಟಿದೆ. ಬೆಂಗಳೂರಿನಲ್ಲಿ 36-37 ಡಿಗ್ರಿ ಉಷ್ಣಾಂಶವಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇನ್ನೊಂದು ವಾರ 40-42 ಡಿಗ್ರಿ ಉಷ್ಣಾಂಶ ಇರಲಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top