News Kadaba

ರಾಜ್ಯ ನಿರ್ನಾಮ ಮಾಡಲು ಹವಣಿಸುತ್ತಿರುವ ತ್ರಿವಳಿಗಳು: ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರಗೊಂಡ ಬಿಜೆಪಿ ಹೋರಾಟ

(ನ್ಯೂಸ್ ಕಡಬ) newskadaba.com ಡಿ.31 ಬೆಂಗಳೂರು:  ಬೀದರ್ ಗುತ್ತಿಗೆದಾರರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ಮತ್ತಷ್ಟು ತೀವ್ರಗೊಳಿಸಿದೆ. ಬೆಂಗಳೂರಿನ ರೇಸ್‌ ಕೋರ್ಸ್ ರಸ್ತೆಯಲ್ಲಿ ಬಿಜೆಪಿ ನಾಯಕರು ಪೋಸ್ಟರ್ ಅಭಿಯಾನ ನಡೆಸಿದರು. ಬಿಜೆಪಿ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಸಿಟಿ ರವಿ ಹಾಗೂ ರವಿಕುಮಾರ್ ಸೇರಿದಂತೆ ಅನೇಕ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಗುತ್ತಿಗೆದಾರ ಸಚಿವ ಸಾವಿಗೆ ಸಚಿವ ಪ್ರಿಯಾಂಕ್ ಖರ್ಗೆ ಅವರೇ ಹೊಣೆಗಾರರು ಎಂದು ಘೋಷಣೆ ಕೂಗಿದರು. ಕೈಲಿದ್ದ […]

ರಾಜ್ಯ ನಿರ್ನಾಮ ಮಾಡಲು ಹವಣಿಸುತ್ತಿರುವ ತ್ರಿವಳಿಗಳು: ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರಗೊಂಡ ಬಿಜೆಪಿ ಹೋರಾಟ Read More »

ಕರಾವಳಿ

ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಿಎಂ ಭರವಸೆ

(ನ್ಯೂಸ್ ಕಡಬ) newskadaba.com ಡಿ.31:  ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಎರಡನೇ ಭಾರಿಗೆ ಆಯ್ಕೆಯಾಗಿರುವ ಸಿ.ಎಸ್. ಷಡಾಕ್ಷರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿ ಸಂಘದಿಂದ ಅಭಿನಂದನೆ ಸಲ್ಲಿಸಿದ್ದಾರೆ. ಸಿಎಂ ಗೃಹಕಚೇರಿ ಕೃಷ್ಣದಲ್ಲಿ ಸೋಮವಾರ ಸಂಜೆ ಜಿಲ್ಲೆ, ತಾಲೂಕು ಪದಾಧಿಕಾರಿಗಳು ಹಾಗೂ ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರ ನಿಯೋಗದೊಂದಿಗೆ ಸಿಎಂ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಲಾಯಿತು. ಇದೇ ಸಂಧರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ನೂತನ ಪಿಂಚಣಿ

ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಿಎಂ ಭರವಸೆ Read More »

ಕರ್ನಾಟಕ

ವಯನಾಡ್ ಭೂಕುಸಿತವನ್ನು ತೀವ್ರ ಸ್ವರೂಪದ ವಿಪತ್ತು ಎಂದು ಘೋಷಿಸಿದ ಕೇಂದ್ರ ಸರ್ಕಾರ

(ನ್ಯೂಸ್ ಕಡಬ) newskadaba.com ಡಿ.31: ಹೊಸದಿಲ್ಲಿ : ಕೇರಳ ಸರ್ಕಾರದ ಕೋರಿಕೆಯಂತೆ ವಯನಾಡ್ ಭೂಕುಸಿತವನ್ನು ತೀವ್ರ ಸ್ವರೂಪದ ವಿಪತ್ತು ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಕಾಂಗ್ರೆಸ್ ನಾಯಕಿ ಮತ್ತು ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಈ ನಿರ್ಧಾರವನ್ನು ಸ್ವಾಗತಿಸಿದ್ದು ಮತ್ತು ಇದು ಪುನರ್ವಸತಿಗೆ ಸಹಾಯ ಮಾಡುತ್ತದೆ ಎಂದು ಹೇಳಿದರು. “ವಯನಾಡ್ ದುರಂತವನ್ನು ʼತೀವ್ರ ಸ್ವರೂಪದ ವಿಪತ್ತುʼ ಎಂದು ಘೋಷಿಸಲು ಅಮಿತ್‌ ಶಾ ಅವರು ಅಂತಿಮವಾಗಿ ನಿರ್ಧಾರ ತೆಗೆದುಕೊಂಡಿದ್ದಾರೆ. ಇದು ಪುನರ್ವಸತಿಯನ್ನು ಎದುರುನೋಡುತ್ತಿರುವ ನಿರಾಶ್ರಿತರಿಗೆ ಸಹಾಯ ಮಾಡುವ

ವಯನಾಡ್ ಭೂಕುಸಿತವನ್ನು ತೀವ್ರ ಸ್ವರೂಪದ ವಿಪತ್ತು ಎಂದು ಘೋಷಿಸಿದ ಕೇಂದ್ರ ಸರ್ಕಾರ Read More »

ಬ್ರೇಕಿಂಗ್ ನ್ಯೂಸ್

ಕಾರವಾರ: ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ; ಮೂವರು ಮೃತ್ಯು

(ನ್ಯೂಸ್ ಕಡಬ) newskadaba.com ಡಿ.31: ಕಾರವಾರ: ಕೆಎಸ್ಸಾರ್ಟಿಸಿ ಬಸ್ ಢಿಕ್ಕಿಯಾಗಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರದ ಶರಾವತಿ ಸೇತುವೆ ಮೇಲೆ ನಡೆದಿದೆ. ಮೃತರನ್ನು ಕಾರವಾರ ತಾಲ್ಲೂಕಿನ ಮಾವಿನಕುರ್ವದ ರಾಘವೇಂದ್ರ ಸೋಮಯ್ಯ ಗೌಡ (34), ಸಂಶಿಯ ಗೌರೀಶ ( 25), ಖರ್ವಾದ ರಮೇಶ (22) ಎಂದು ಗುರುತಿಸಲಾಗಿದೆ. ವಿಜಯಪುರದಿಂದ ಮಂಗಳೂರಿಗೆ ಸಾಗುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಹಾಗೂ ಬೈಕ್‌ನಲ್ಲಿದ್ದವರು ಮಂಕಿ ಕಡೆಯಿಂದ ಹೊನ್ನಾವರ ಪಟ್ಟಣಕ್ಕೆ ಹೊರಟಿದ್ದರು ಎನ್ನಲಾಗಿದ್ದು, ಬೈಕ್ ಮತ್ತು ಬಸ್

ಕಾರವಾರ: ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ; ಮೂವರು ಮೃತ್ಯು Read More »

ಕರಾವಳಿ

ಉಡುಪಿ: ಕಾರಿನಲ್ಲಿ ಎಂಡಿಎಂಎ ಡ್ರಗ್ಸ್ ಸಾಗಾಟ: ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಡಿ.31: ಬೆಂಗಳೂರು: ಕಾರಿನಲ್ಲಿ ನಿಷೇಧಿತ ಮಾದಕ ವಸ್ತು ಎಂ ಡಿ ಎಂ ಎ ಪೌಡರ್ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಕೊರಂಗ್ರಪಾಡಿ ಗ್ರಾಮದ ಕೆಮ್ತೂರು ರೈಲ್ವೇ ಬ್ರಿಡ್ಜ್ ಬಳಿ ಬಂಧಿಸಿದ್ದಾರೆ. ಕಟಪಾಡಿ ಕೋಟೆ ಗ್ರಾಮದ ಅಕ್ಬರ್ (32), ಹಾಗೂ ಉಚ್ಚಿಲದ ಮುಕ್ದುಮ್ ಅಲಿ(28) ಬಂಧಿತ ಆರೋಪಿಗಳು. ಇವರಿಂದ ಎಂಡಿಎಂಎ 69.127 ಗ್ರಾಂ , 6 ಮೊಬೈಲ್ ಪೋನ್, 1100ರೂ. ನಗದು, ಕಾರು, ಲ್ಯಾಪ್ಟಾಪ್ ಮತ್ತು ಇತರ ಸೊತ್ತು ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಅಂದಾಜು

ಉಡುಪಿ: ಕಾರಿನಲ್ಲಿ ಎಂಡಿಎಂಎ ಡ್ರಗ್ಸ್ ಸಾಗಾಟ: ಇಬ್ಬರು ಆರೋಪಿಗಳ ಬಂಧನ Read More »

ಕರಾವಳಿ

ಭಯೋತ್ಪಾದಕ ಚಟುವಟಿಕೆ: ಬಾಂಗ್ಲಾದೇಶದ ಪ್ರಜೆಗೆ ಏಳು ವರ್ಷಗಳ ಜೈಲು ಶಿಕ್ಷೆ!

(ನ್ಯೂಸ್ ಕಡಬ) newskadaba.com ಡಿ.31: ಉಗ್ರ ಸಂಘಟನೆ ಜಮಾತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶ (ಜೆಎಂಬಿ-ಇಂಡಿಯಾ) ಚಟುವಟಿಕೆಗಳಿಗೆ ಉತ್ತೇಜನ ನೀಡಿದ ಸರಣಿ ಪ್ರಕರಣಗಳಲ್ಲಿ ಬಾಂಗ್ಲಾದೇಶದ ಪ್ರಜೆ ಜಹೀದುಲ್ ಇಸ್ಲಾಂ ಅಲಿಯಾಸ್ ಕೌಸರ್‌ಗೆ ಬೆಂಗಳೂರಿನ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಶೇಷ ನ್ಯಾಯಾಲಯ ಸೋಮವಾರ ಏಳು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಡಕಾಯಿತಿ, ಪಿತೂರಿ ಮತ್ತು ನಿಧಿ ಸಂಗ್ರಹಿಸುವಿಕೆ ಮತ್ತು ಮದ್ದುಗುಂಡುಗಳ ಖರೀದಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಜಹಿದುಲ್‌ಗೆ ರೂ. 57,000 ದಂಡ ವಿಧಿಸಲಾಗಿದೆ. ಇದರೊಂದಿಗೆ ಈ ಪ್ರಕರಣಗಳಲ್ಲಿ ಒಟ್ಟು 11 ಆರೋಪಿಗಳಿಗೆ

ಭಯೋತ್ಪಾದಕ ಚಟುವಟಿಕೆ: ಬಾಂಗ್ಲಾದೇಶದ ಪ್ರಜೆಗೆ ಏಳು ವರ್ಷಗಳ ಜೈಲು ಶಿಕ್ಷೆ! Read More »

ಬ್ರೇಕಿಂಗ್ ನ್ಯೂಸ್

ಪುತ್ತೂರು: ಚರಂಡಿಯ ಮೇಲ್ಭಾಗದ ಪೈಪ್‌ ನಲ್ಲಿ ಸಿಲುಕಿದ ಮಹಿಳೆ; ರಕ್ಷಣೆ

(ನ್ಯೂಸ್ ಕಡಬ) newskadaba.com ಡಿ.30: ಮುಖ್ಯರಸ್ತೆ ಬದಿಯ ಚರಂಡಿಯ ಮೇಲ್ಭಾಗದಲ್ಲಿ ಹಾಕಲಾಗಿದ್ದ ಪೈಪ್‌ನಲ್ಲಿ ಮಹಿಳೆಯ ಕಾಲು ಸಿಲುಕಿದ ಘಟನೆ ಸೋಮವಾರ ಸಂಜೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ನಗರದ ಹೂವಿನ ಮಾರುಕಟ್ಟೆ ಪಕ್ಕದಲ್ಲೇ ಕಾಲನಿಗೆ ಹೋಗುವ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮುಖ್ಯರಸ್ತೆಯಿಂದ ಕಾಲನಿ ರಸ್ತೆಗೆ ತಿರುಗುವ ಪ್ರದೇಶದಲ್ಲಿ ಚರಂಡಿಗೆ ಪೈಪ್‌ಲೈನ್ ಹಾಕಲಾಗಿತ್ತು. ಇದು ಕೆಲವು ಸಮಯಗಳಿಂದ ತುಂಡಾಗಿದ್ದು, ಸಂಬಂಧಪಟ್ಟವರಿಗೆ ಈ ಬಗ್ಗೆ ವಿಷಯ ತಿಳಿಸುವ ಪ್ರಯತ್ನ ನಡೆಸಲಾಗಿತ್ತು.ಆದರೂ ಈ ಬಗ್ಗೆ ನಗರಾಡಳಿತ ಎಚ್ಚೆತ್ತುಕೊಂಡಿರಲಿಲ್ಲ. ಸೋಮವಾರ ಸಂಜೆ ಪುತ್ತೂರಿಗೆ

ಪುತ್ತೂರು: ಚರಂಡಿಯ ಮೇಲ್ಭಾಗದ ಪೈಪ್‌ ನಲ್ಲಿ ಸಿಲುಕಿದ ಮಹಿಳೆ; ರಕ್ಷಣೆ Read More »

ಕರಾವಳಿ
Death, deadbody, Waterfall

ಸಮುದ್ರದ ಅಲೆಗೆ ಸಿಲುಕಿ ಇಬ್ಬರು ಯುವಕರು ಮೃತ್ಯು

(ನ್ಯೂಸ್ ಕಡಬ) newskadaba.com ಡಿ.30: ಇಬ್ಬರು ಯುವಕರು ಸಮುದ್ರದ ಅಲೆಗೆ ಸಿಲುಕಿ ಮೃತಪಟ್ಟಿರುವ ಘಟನೆ ಹೆಜಮಾಡಿಯ ಅಮಾಸಕರಿಯ ಬಳಿ ನಡೆದಿದೆ. ಮೃತರನ್ನು ಅಮ್ಮಾನ್ (17), ಅಕ್ಷಯ್ (20) ಎಂದು ಗುರುತಿಸಲಾಗಿದೆ. ಇಂದು(ಸೋಮವಾರ) ಮಧ್ಯಾಹ್ನದ ವೇಳೆ ಸಮುದ್ರದ ಅಲೆಗೆ ಸಿಲುಕಿ ಯುವಕರು ಸಮುದ್ರ ಪಾಲಾಗಿದ್ದರು. ಕೂಡಲೇ ಅವರನ್ನು ಸ್ಥಳೀಯರು ಮೇಲೆಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಿದ್ದಾದರೂ, ಯುವಕರು ಮೃತಪಟ್ಟಿದ್ದಾರೆ. ಇನ್ನೊರ್ವ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಸಮುದ್ರದ ಅಲೆಗೆ ಸಿಲುಕಿ ಇಬ್ಬರು ಯುವಕರು ಮೃತ್ಯು Read More »

ಕರಾವಳಿ

ದರ್ಶನ್ ಜಾಮೀನು ರದ್ದಿಗೆ ಮೇಲ್ಮನವಿ ಸಲ್ಲಿಕೆಗೆ ಗ್ರೀನ್ ಸಿಗ್ನಲ್ ನೀಡಿದ ಸರ್ಕಾರ

(ನ್ಯೂಸ್ ಕಡಬ) newskadaba.com ಡಿ.30: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು, ದರ್ಶನ್ ಜಾಮೀನು ರದ್ದಿಗೆ ಮೇಲ್ಮನವಿ ಸಲ್ಲಿಸಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ದರ್ಶನ್ ಜಾಮೀನು ರದ್ದಿಗೆ ಮೇಲ್ಮನವಿ ಸಲ್ಲಿಕೆಗೆ ಗೃಹ ಇಲಾಖೆ ಅಧಿಕಾರಿಗಳಿಂದ ಪೊಲೀಸ್ ಇಲಾಖೆಗೆ ಆದೇಶ ದೊರೆತಿದೆ. ಬೆಂಗಳೂರು ಪೊಲೀಸರ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಲು ಅನಿಲ್ ಸಿ ನಿಶಾನಿ ಹಾಗೂ ಹಿರಿಯ ವಕೀಲ ಸಿದ್ದಾರ್ಥ್ ಲುಥಾರ ಅವರನ್ನು ನೇಮಿಸಲಾಗಿದೆ. ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಲು ಗ್ರೀನ್ ಸಿಗ್ನಲ್

ದರ್ಶನ್ ಜಾಮೀನು ರದ್ದಿಗೆ ಮೇಲ್ಮನವಿ ಸಲ್ಲಿಕೆಗೆ ಗ್ರೀನ್ ಸಿಗ್ನಲ್ ನೀಡಿದ ಸರ್ಕಾರ Read More »

ಕರ್ನಾಟಕ

ಸೇನಾ ವಾಹನ ಕಮರಿಗೆ ಬಿದ್ದು ಗಂಭೀರ ಗಾಯ; ಚಿಕಿತ್ಸೆ ಫಲಿಸದೆ ಕೊಡಗಿನ ಯೋಧ ಹುತಾತ್ಮ!

(ನ್ಯೂಸ್ ಕಡಬ) newskadaba.com ಡಿ.30: ಜಮ್ಮು ಕಾಶ್ಮೀರದಲ್ಲಿ ಸೇನಾ ವಾಹನ ಕಮರಿಗೆ ಬಿದ್ದು ಗಾಯಗೊಂಡಿದ್ದ ಕೊಡಗು ಮೂಲದ ಯೋಧ ದಿವಿನ್ (28) ಚಿಕಿತ್ಸೆ ಫಲಿಸದೆ ಹುತಾತ್ಮರಾಗಿದ್ದಾರೆ. ಕಳೆದ ವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾ ವಾಹನ ಕಮರಿಗೆ ಬಿದ್ದು ನಾಲ್ವರು ಯೋಧರು ಹುತಾತ್ಮರಾಗಿದ್ದರು. ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಿವಿನ್ ಅವರನ್ನು ಶ್ರೀನಗರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಸೇನಾಧಿಕಾರಿಗಳ ತುರ್ತು ಕರೆ ಹಿನ್ನೆಲೆ ಯೋಧನ ತಾಯಿ ಜಯ ಅವರು ಶ್ರೀನಗರಕ್ಕೆ ತೆರಳಿದ್ದರು. ಇದೀಗ ಅವರು ಹುತಾತ್ಮರಾಗಿರುವ

ಸೇನಾ ವಾಹನ ಕಮರಿಗೆ ಬಿದ್ದು ಗಂಭೀರ ಗಾಯ; ಚಿಕಿತ್ಸೆ ಫಲಿಸದೆ ಕೊಡಗಿನ ಯೋಧ ಹುತಾತ್ಮ! Read More »

ರಾಷ್ಟ್ರೀಯ ನ್ಯೂಸ್
Scroll to Top