News Kadaba

ನನ್ನ ಮೇಲಿನ ಮುಡಾ ಹಗರಣ, ವಕ್ಫ್ ಅವ್ಯವಹಾರ, 150 ಕೋಟಿಯ ಆರೋಪವನ್ನೂ ಸಿಬಿಐ ತನಿಖೆಗೆ ವಹಿಸಿ-ಬಿ.ವೈ.ವಿ

(ನ್ಯೂಸ್ ಕಡಬ) newskadaba.com ಡಿ. 16 ಬೆಳಗಾವಿ:  ಮೈಸೂರಿನ ಮುಡಾ ಹಗರಣ, ವಕ್ಫ್ ಅವ್ಯವಹಾರ ಸಂಬಂಧಿಸಿದ ಅನ್ವರ್ ಮಾಣಿಪ್ಪಾಡಿ ಅವರ ವರದಿ, ನನ್ನ ಮೇಲಿನ 150 ಕೋಟಿಯ ಆರೋಪ- ಇವೆಲ್ಲವುಗಳ ಸಮಗ್ರ ಸಿಬಿಐ ತನಿಖೆಗೆ ನೀವೇ ಆದೇಶ ಮಾಡಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಒತ್ತಾಯಿಸಿದರು. ಬೆಳಗಾವಿ ಸುವರ್ಣ ಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ವಕ್ಫ್ ಜಾಗದ ವಿಚಾರದಲ್ಲಿ ಲಕ್ಷ ಲಕ್ಷ ಕೋಟಿಯ […]

ನನ್ನ ಮೇಲಿನ ಮುಡಾ ಹಗರಣ, ವಕ್ಫ್ ಅವ್ಯವಹಾರ, 150 ಕೋಟಿಯ ಆರೋಪವನ್ನೂ ಸಿಬಿಐ ತನಿಖೆಗೆ ವಹಿಸಿ-ಬಿ.ವೈ.ವಿ Read More »

ಕರ್ನಾಟಕ

ಇಂದು ಪರಪ್ಪನ ಅಗ್ರಹಾರದಿಂದ ಪವಿತ್ರ ಗೌಡ ಬಿಡುಗಡೆ

(ನ್ಯೂಸ್ ಕಡಬ) newskadaba.com ಡಿ. 16 ಬೆಂಗಳೂರು:  ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ  ಜೈಲು ಸೇರಿದ್ದ ಪವಿತ್ರಾ ಗೌಡ ಇಂದು ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಲಿದ್ದಾರೆ. 6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್‌ ಗೆಳತಿ ಪವಿತ್ರಾ ಗೌಡ ಮತ್ತು ಇತರರಿಗೆ ಶುಕ್ರವಾರ ಹೈಕೋರ್ಟ್‌ನ ನ್ಯಾ. ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿತ್ತು. ಪರಪ್ಪನ ಅಗ್ರಹಾರದಿಂದ ಪವಿತ್ರಾ, ಅನುಕುಮಾರ್, ಪ್ರದೂಶ್ ಬಿಡುಗಡೆಯಾದರೆ ಶಿವಮೊಗ್ಗ ಜೈಲಿನಿಂದ ಜಗದೀಶ್, ಲಕ್ಷಣ್, ಕಲಬುರಗಿಯಿಂದ ನಾಗರಾಜ್ ರಿಲೀಸ್‌ ಆಗಲಿದ್ದಾರೆ. ಇಂದು

ಇಂದು ಪರಪ್ಪನ ಅಗ್ರಹಾರದಿಂದ ಪವಿತ್ರ ಗೌಡ ಬಿಡುಗಡೆ Read More »

ಕರ್ನಾಟಕ

ಜಾಮೀನು ಸಿಗುತ್ತಿದ್ದಂತೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಟ ದರ್ಶನ್

(ನ್ಯೂಸ್ ಕಡಬ) newskadaba.com ಡಿ. 16 ಬೆಂಗಳೂರು: ನಟ ದರ್ಶನ್ ಜಾಮೀನು ಸಿಗುತ್ತಿದ್ದಂತೆ ಸಂಪೂರ್ಣವಾಗಿ ಗುಣಮುಖರಾದಂತೆ ಕಾಣಿಸುತ್ತಿದೆ. ಅವರು ವೈದ್ಯರ ಸಲಹೆ ಪಡೆದು ಆಸ್ಪತ್ರೆಯಿಂದ ಹೊರ ಬಂದಿದ್ದಾರೆ. ಬೆನ್ನು ನೋವಿನ ಕಾರಣ ನಿಡಿ ಮಧ್ಯಂತರ ಜಾಮೀನು ಪಡೆದಿದ್ದರು. ಕಳೆದ ಒಂದೂವರೆ ತಿಂಗಳಿಂದ ಅವರು ಆಸ್ಪತ್ರೆಯಲ್ಲಿಯೇ ಇದ್ದರು. ದರ್ಶನ್​ಗೆ ಶಸ್ತ್ರಚಿಕಿತ್ಸೆ ಮಾಡಿಸದೇ ಇದ್ದರೆ ಪಾರ್ಶ್ವವಾಯು ಆಗುತ್ತದೆ ಎಂಬುವುದಾಗಿ ವೈದ್ಯರು ವರದಿ ನೀಡಿದ್ದರು. ಇದೇ ವರದಿ ನೀಡಿ ದರ್ಶನ್ ಅವರು ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆ ಸೇರಿದ್ದರು. ಒಂದೂವರೆ ತಿಂಗಳು ಕಳೆದರೂ

ಜಾಮೀನು ಸಿಗುತ್ತಿದ್ದಂತೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಟ ದರ್ಶನ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೂರನೇ ಟೆಸ್ಟ್; ಸೋಲಿನ ಭೀತಿಯಲ್ಲಿ ಭಾರತ

(ನ್ಯೂಸ್ ಕಡಬ) newskadaba.com ಡಿ. 16 ಬ್ರಿಸ್ಬೇನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ  3ನೇ ಟೆಸ್ಟ್‌ ಪಂದ್ಯದ ಮೂರನೇ ದಿನದಾಟವೂ ಹಲವು ಬಾರಿ ಮಳೆಯಿಂದ ಅಡಚಣೆಯಾಗಿ ಅರ್ಧಕ್ಕೆ ದಿನದಾಟವನ್ನು ರದ್ದುಗೊಳಿಸಲಾಯಿತು. ಸದ್ಯ ಭಾರತ 51 ರನ್‌ಗೆ 4 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಇನ್ನೂ 394 ಬಾರಿಸಬೇಕಿದೆ. ರೋಹಿತ್‌(0) ಮತ್ತು ರಾಹುಲ್‌(33) ಕ್ರೀಸ್‌ನಲ್ಲಿದ್ದಾರೆ. 7 ವಿಕೆಟ್‌ಗೆ 405 ರನ್‌ ಗಳಿಸಿದ್ದಲ್ಲಿಂದ ಸೋಮವಾರ ಆಟ ಮುಂದುವರಿಸಿದ ಆಸ್ಟ್ರೇಲಿಯಾ 445 ರನ್‌ಗೆ ಆಲೌಟ್‌ ಆಯಿತು. 45 ರನ್‌ ಬಾರಿಸಿದ್ದ ಅಲೆಕ್ಸ್‌ ಕ್ಯಾರಿ

ಮೂರನೇ ಟೆಸ್ಟ್; ಸೋಲಿನ ಭೀತಿಯಲ್ಲಿ ಭಾರತ Read More »

ಕ್ರೀಡಾ ನ್ಯೂಸ್
Death, deadbody, Waterfall

ಉಳ್ಳಾಲ: ಪಿಂಡ ಪ್ರದಾನಕ್ಕೆಂದು ಬಂದಿದ್ದ ಮಹಿಳೆ ಸಮುದ್ರಪಾಲು

(ನ್ಯೂಸ್ ಕಡಬ) newskadaba.com ಡಿ. 16 ಉಳ್ಳಾಲ: ತಂಗಿಯ ಗಂಡನ ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಮಹಿಳೆಯೊಬ್ಬರು ಸಮುದ್ರಪಾಲಾಗಿ ಮೃತಪಟ್ಟ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ದೇರೆಬೈಲ್ ನ ದಿವಂಗತ ಜಗದೀಶ್ ಭಂಡಾರಿ ಎಂಬವರ ಪತ್ನಿ ಉಷಾ ಮೃತಪಟ್ಟವರು. ಉಷಾ ಅವರ ತಂಗಿಯ ಪತಿ ನಿಧನರಾಗಿದ್ದು, ಇಂದು ಅವರ ಪಿಂಡ ಪ್ರದಾನ ವಿಧಿಗಾಗಿ ಕುಟುಂಬಸ್ಥರು ಸೋಮೇಶ್ವರಕ್ಕೆ ಬಂದಿದ್ದರು. ಇವರ ಜೊತೆಗೆ ಉಷಾ ಕೂಡಾ ಬಂದಿದ್ದರು. ಪಿಂಡ ಪ್ರದಾನದ ಬಳಿಕ ಸಮುದ್ರದಲ್ಲಿ ಸ್ನಾನ ಪ್ರಕ್ರಿಯೆ

ಉಳ್ಳಾಲ: ಪಿಂಡ ಪ್ರದಾನಕ್ಕೆಂದು ಬಂದಿದ್ದ ಮಹಿಳೆ ಸಮುದ್ರಪಾಲು Read More »

ಕರಾವಳಿ

ಸೊಡಿಯಂ ಬ್ಲಾಸ್ಟ್ ಕೇಸ್: ಡ್ರೋನ್ ಪ್ರತಾಪ್ಗೆ 10ದಿನ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಡಿ. 16 ಬೆಂಗಳೂರು: ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲಾಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ  ಡ್ರೋನ್ ಪ್ರತಾಪ್‌ಗೆ 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಪ್ರಧಾನ ಹಿರಿಯ ಸಿವಿಲ್ ಮತ್ತು ಜೆಎಮ್‌ಎಫ್‌ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. 3 ದಿನ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಡ್ರೋನ್ ಪ್ರತಾಪ್‌ನನ್ನು ಮಿಡಿಗೇಶಿ ಪೊಲೀಸರು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯಕ್ಕೆ ಕರೆತರುವ ಮುನ್ನ ಮಧುಗಿರಿ ತಾಲೂಕು ಆಸ್ಪತ್ರೆಯಲ್ಲಿ ಡ್ರೋನ್ ಪ್ರತಾಪ್‌ಗೆ ಆರೋಗ್ಯ ತಪಾಸಣೆ ಮಾಡಲಾಗಿತ್ತು. ಕೋರ್ಟ್ ಡಿ.26ರವರೆಗೆ ನ್ಯಾಯಾಂಗ

ಸೊಡಿಯಂ ಬ್ಲಾಸ್ಟ್ ಕೇಸ್: ಡ್ರೋನ್ ಪ್ರತಾಪ್ಗೆ 10ದಿನ ನ್ಯಾಯಾಂಗ ಬಂಧನ Read More »

ಕರ್ನಾಟಕ

ಇಂದಿನ ಚಿನ್ನದ ದರ

(ನ್ಯೂಸ್ ಕಡಬ) newskadaba.com ಡಿ. 16 ಬೆಂಗಳೂರು: ಚಿನ್ನದ ದರದಲ್ಲಿ  ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 90 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 98 ರೂ. ಕಡಿಮೆಯಾಗಿದ್ದು, ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,140 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,789 ರೂ.ಗೆ ಇದೆ. ಇಂದಿನ 22 ಕ್ಯಾರಟ್‌ ಚಿನ್ನದರ 22 ಕ್ಯಾರಟ್‌ನ 8 ಗ್ರಾಂ

ಇಂದಿನ ಚಿನ್ನದ ದರ Read More »

ಕರ್ನಾಟಕ

ಪ್ರಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ ನಿಧನ

(ನ್ಯೂಸ್ ಕಡಬ) newskadaba.com ಡಿ. 16 ದೆಹಲಿ: ತಬಲಾ ಮಾಂತ್ರಿಕ ಜಾಕಿರ್ ಹುಸೇನ್ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ಸೋಮವಾರ ತಿಳಿಸಿದೆ. ಅವರಿಗೆ 73 ವರ್ಷ. ಜಾಕಿರ್ ಹುಸೇನ್ ಅವರು ಇಡಿಯೋಪಥಿಕ್ ಪಲ್ಮನರಿ ಫೈಬ್ರೋಸಿಸ್‌ನಿಂದ ಉಂಟಾಗುವ ತೊಂದರೆಗಳಿಂದ ಸಾವನ್ನಪ್ಪಿದ್ದಾರೆ ಎಂದು ಕುಟುಂಬ ಹೇಳಿಕೆಯಲ್ಲಿ ತಿಳಿಸಿದೆ. ಕಳೆದ ಎರಡು ವಾರಗಳಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜಾಕಿರ್ ಹುಸೇನ್​ಗೆ 2009ರಲ್ಲಿ ಗ್ರ್ಯಾಮಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. 1988 ರಲ್ಲಿ ಪದ್ಮಶ್ರೀ ಮತ್ತು

ಪ್ರಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ ನಿಧನ Read More »

ಬ್ರೇಕಿಂಗ್ ನ್ಯೂಸ್

ಕಾರ್ಕಳದಲ್ಲಿ ರಸ್ತೆ ಮೇಲಿನ ಜಲ್ಲಿಕಲ್ಲಿನ ರಾಶಿಗೆ ಡಿಕ್ಕಿ ಹೊಡೆದು ಕಾರು ಪಲ್ಟಿ – ಇಬ್ಬರಿಗೆ ಗಾಯ, ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಡಿ. 16 ಕಾರ್ಕಳ: ರಾಷ್ಟ್ರೀಯ ಹೆದ್ದಾರಿಯ ಬೇಕಾಬಿಟ್ಟಿ ಕಾಮಗಾರಿಯಿಂದಾಗಿ ರಸ್ತೆಯ ಮೇಲೆ ಹಾಕಿದ್ದ ಜಲ್ಲಿಕಲ್ಲಿನ ರಾಶಿಗೆ ಕಾರು ಡಿಕ್ಕಿ ಹೊಡೆದು, ಪಲ್ಟಿಯಾದ ಪರಿಣಾಮ ಪ್ರಯಾಣಿಕರೊಬ್ಬರು ಗಂಭೀರ ಸ್ವರೂಪದಲ್ಲಿ ಗಾಯಗೊಂಡಿರುವ ಘಟನೆ ಕಾರ್ಕಳದ ಸಾಣೂರು ಎಂಬಲ್ಲಿ ಸೋಮವಾರ ಮುಂಜಾನೆ ಸಂಭವಿಸಿದೆ. ಮೂಡಬಿದ್ರೆ ಮೂಲದ ತೇಜಸ್ ಹಾಗೂ ಪ್ರಸಾದ್ ಅಪಘಾತದ ಗಾಯಾಳುಗಳು. ಇಬ್ಬರು ಗಾಯಾಳುಗಳ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಬ್ರಹ್ಮಾವರದಲ್ಲಿ ನಡೆದಿದ್ದ ವಾಲಿಬಾಲ್ ಪಂದ್ಯಾವಳಿಯನ್ನು ಮುಗಿಸಿಕೊಂಡು ವಾಪಸ್ ಬರುವಾಗ ಕಾರ್ಕಳ ಸಮೀಪ ಸಾಣೂರು

ಕಾರ್ಕಳದಲ್ಲಿ ರಸ್ತೆ ಮೇಲಿನ ಜಲ್ಲಿಕಲ್ಲಿನ ರಾಶಿಗೆ ಡಿಕ್ಕಿ ಹೊಡೆದು ಕಾರು ಪಲ್ಟಿ – ಇಬ್ಬರಿಗೆ ಗಾಯ, ಓರ್ವ ಗಂಭೀರ Read More »

ಕರಾವಳಿ

‘ಕಾಡಾನೆಗಳನ್ನು ಗುಂಡಿಕ್ಕಿ ಸಾಯಿಸಬೇಕು’ ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕ್ಷಮೆ ಕೇಳಬೇಕು’- ನವೀನ್ ಸಾಲ್ಯಾನ್

(ನ್ಯೂಸ್ ಕಡಬ) newskadaba.com ಡಿ. 16 ಉಡುಪಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ “ಕಾಡಾನೆಗಳನ್ನು ಗುಂಡಿಕ್ಕಿ ಸಾಯಿಸಬೇಕು” ಎಂದು ಬೇಜವಾಬ್ದಾರಿ ಹೇಳಿಕೆ ನೀಡುತ್ತಿರುವ ಇವರು ಶಾಸಕ ಸ್ಥಾನಕ್ಕೆ ನಾಲಾಯಕ್,  ಅರಣ್ಯ ಭೂಮಿಯಲ್ಲಿ ನಡೆಯುತ್ತಿರುವ ಎಸ್ಟೇಟ್ ಗಳ ಒತ್ತುವರಿಯ ಅಕ್ರಮ ಗಣಿಗಾರಿಕೆ, ಅಕ್ರಮ ಹೋಂ ಸ್ಟೇಗಳನ್ನು ತೆರವುಗೊಳಿಸಲು ಧೈರ್ಯ ಮಾಡಲಿ ಎಂದು ಯುವ ಕಾಂಗ್ರೆಸ್ ಮುಖಂಡ ನವೀನ್ ಸಾಲ್ಯಾನ್ ಆಗ್ರಹಿಸಿದ್ದಾರೆ. ಈ ಬಗ್ಗೆ ಹೇಳಿಕೆ ನೀಡುವ ಶಾಸಕ ಹರೀಶ್ ಪೂಂಜಾ ಕಾಡನ್ನು ಒತ್ತುವರಿ ಮಾಡಿಕೊಂಡು ಪರಿಸರ ನಾಶ ಪಡಿಸುತ್ತಿರುವ

‘ಕಾಡಾನೆಗಳನ್ನು ಗುಂಡಿಕ್ಕಿ ಸಾಯಿಸಬೇಕು’ ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕ್ಷಮೆ ಕೇಳಬೇಕು’- ನವೀನ್ ಸಾಲ್ಯಾನ್ Read More »

ಕರಾವಳಿ
Scroll to Top