News Kadaba

ಮಂಗಳೂರು: ಪಾರ್ಟ್ ಟೈಮ್ ಜಾಬ್ ಹೆಸರಲ್ಲಿ 28,18,065ರೂ. ವಂಚನೆ

(ನ್ಯೂಸ್ ಕಡಬ) newskadaba.com .ಡಿ. 11. ಮಂಗಳೂರು: ಪಾರ್ಟ್ ಟೈಮ್ ಜಾಬ್ ಹೆಸರಲ್ಲಿ ವ್ಯಕ್ತಿಯೊಬ್ಬರಿಗೆ 28,18,065ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 2024ರ ಜುಲೈ 21ರಂದು ಪಾರ್ಟ್ ಟೈಮ್ ಜಾಬ್ ನ ಬಗ್ಗೆ ದೂರುದಾರರಿಗೆ ಪೋನ್ ನಂಬರ್‌ಗೆ ವಾಟ್ಸಾಪ್ ಮೆಸೇಜ್ ಬಂದಿರುತ್ತದೆ. ಆರೋಪಿಗಳು ದೂರುದಾರರ ವಾಟ್ಸಾಪ್ ಗೆ ಟೆಲಿಗ್ರಾಮ್ ಆಪ್ ನ ಲಿಂಕ್ ಕಳುಹಿಸಿ ಓಪನ್ ಮಾಡುವಂತೆ ತಿಳಿಸಿದ್ದಾರೆ. ಅದರಂತೆ ದೂರುದಾರರು ಟೆಲಿಗ್ರಾಮ್ ಆಪ್ ಅನ್ನು ಓಪನ್ ಮಾಡಿದಾಗ ಟೆಲಿಗ್ರಾಮ್ ನಲ್ಲಿ ಪಾರ್ಟ್ […]

ಮಂಗಳೂರು: ಪಾರ್ಟ್ ಟೈಮ್ ಜಾಬ್ ಹೆಸರಲ್ಲಿ 28,18,065ರೂ. ವಂಚನೆ Read More »

ಕರಾವಳಿ

ಅರಿಶಿಣದ ಫಸಲಿನ ನಡುವೆ 211 ಕೆಜಿ ತೂಕದ 185 ಗಾಂಜಾ ಬೆಳೆದ ವೃದ್ಧನ ಬಂಧನ

(ನ್ಯೂಸ್ ಕಡಬ) newskadaba.com ಡಿ. 11.  ಅರಿಶಿನ ಫಸಲಿನ ನಡುವೆ ಹುಲುಸಾಗಿ ಗಾಂಜಾ ಬೆಳೆದಿದ್ದವನ್ನು ಬಂಧಿಸಿರುವ ಘಟನೆ ಹನೂರು ತಾಲೂಕಿನ ಕುರಟ್ಟಿ ಹೊಸೂರು ಗ್ರಾಮದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಹನೂರು ತಾಲೂಕಿನ  ಕೆಂಪನಟ್ಟಿ ಗ್ರಾಮದ ಮಾರ(68) ಎಂದು ಗುರುತಿಸಲಾಗಿದೆ.‌ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿರುವ ಕುರಿತು ಖಚಿತ ಮಾಹಿತಿಯನ್ನು ಆಧರಿಸಿ ರಾಮಪುರ ಪೊಲೀಸರು ಕಾರ್ಯಾಚರಣೆ ನಡೆಸಿ ವೃದ್ಧನನ್ನು ಬಂಧಿಸಿದ್ದಾರೆ. ಅರಿಶಿನ ಫಸಲಿನ ಮಧ್ಯದಲ್ಲಿ ಬೆಳೆಯಲಾಗಿದ್ದ ಲಕ್ಷಾಂತರ ರೂಪಾಯಿ ಬೆಲೆಬಾಳುವ 211 ಕೆಜಿ ತೂಕದ 185 ಗಾಂಜಾ ವಶಕ್ಕೆ  ಪಡೆದಿದ್ದಾರೆ.

ಅರಿಶಿಣದ ಫಸಲಿನ ನಡುವೆ 211 ಕೆಜಿ ತೂಕದ 185 ಗಾಂಜಾ ಬೆಳೆದ ವೃದ್ಧನ ಬಂಧನ Read More »

ಕ್ರೈಮ್ ನ್ಯೂಸ್

ಪ್ರಧಾನಿ ಮೋದಿಯನ್ನು ಭೇಟಿಯಾದ ಕರೀನಾ ಕಪೂರ್ ಕುಟುಂಬ

(ನ್ಯೂಸ್ ಕಡಬ) newskadaba.com ಡಿ. 11.  ಬಾಲಿವುಡ್ ಬ್ಯೂಟಿ ಕರೀನಾ ಕಪೂರ್ ಕುಟುಂಬ ಪಿಎಂ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಈ ಕುರಿತು ಸ್ಪೆಷಲ್ ಪೋಸ್ಟ್‌ವೊಂದನ್ನು ನಟಿ ಹಂಚಿಕೊಂಡಿದ್ದಾರೆ. ರಾಜ್ ಕಪೂರ್ 100ನೇ ವರ್ಷದ ಹುಟ್ಟುಹಬ್ಬದ ಹಿನ್ನೆಲೆ ಮೋದಿಗೆ ಕಪೂರ್‌ ಕುಟುಂಬ ಆಹ್ವಾನ ನೀಡಿದೆ. ಇದೇ ಡಿ.14ರಂದು ನಟ, ನಿರ್ಮಾಪಕ ರಾಜ್ ಕಪೂರ್ ಅವರ ಹುಟ್ಟಿದ ದಿನವಾಗಿದ್ದು, 2024ಕ್ಕೆ 100ನೇ ವರ್ಷದ ಬರ್ತ್ಡೇ ಸಂಭ್ರಮ. ರಾಜ್ ಕಪೂರ್ 100ನೇ ವರ್ಷದ ಜನ್ಮ ದಿನದ ಗೌರವಾರ್ಥವಾಗಿ ಅವರ

ಪ್ರಧಾನಿ ಮೋದಿಯನ್ನು ಭೇಟಿಯಾದ ಕರೀನಾ ಕಪೂರ್ ಕುಟುಂಬ Read More »

ಸಿನಿಮಾ

ಬಂಡುಕೋರರ ವಶದಲ್ಲಿರುವ ಸಿರಿಯಾದ 75 ಭಾರತೀಯ ಪ್ರಜೆಗಳನ್ನು ಸ್ಥಳಾಂತರ

(ನ್ಯೂಸ್ ಕಡಬ) newskadaba.com .ಡಿ. 11. ನವದೆಹಲಿ: ಸಿರಿಯಾ ಅಧ್ಯಕ್ಷ ಬಶರ್ ಅಲ್ ಅಸ್ಸಾದ್ ಅವರನ್ನು ಇಸ್ಲಾಮಿಕ್ ಬಂಡುಕೋರರು ಪದಚ್ಯುತಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಸಿರಿಯಾದಿಂದ 75 ಮಂದಿ ಭಾರತೀಯರನ್ನು ಸ್ಥಳಾಂತರಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ. ವಿದೇಶದಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಭದ್ರತೆಗೆ ಸರ್ಕಾರವು ಹೆಚ್ಚಿನ ಆದ್ಯತೆಯನ್ನು ನೀಡುತ್ತದೆ ಎಂದು ಸಚಿವಾಲಯ ಒತ್ತಿ ಹೇಳಿದೆ. ಸಿರಿಯಾದಲ್ಲಿ ಇತ್ತೀಚಿನ ಬೆಳವಣಿಗೆಗಳ ನಂತರ ಭಾರತ ಸರ್ಕಾರವು ಇಂದು 75 ಭಾರತೀಯ ಪ್ರಜೆಗಳನ್ನು ಸಿರಿಯಾದಿಂದ ಸ್ಥಳಾಂತರಿಸಿದೆ.

ಬಂಡುಕೋರರ ವಶದಲ್ಲಿರುವ ಸಿರಿಯಾದ 75 ಭಾರತೀಯ ಪ್ರಜೆಗಳನ್ನು ಸ್ಥಳಾಂತರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೀದಿ ನಾಯಿ ದಾಳಿ: ಯುವತಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಡಿ. 11.  ಬೀದಿ ನಾಯಿಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಬಿದ್ದು ತಲೆಗೆ ಪೆಟ್ಟಾದ ಪರಿಣಾಮ ಯುವತಿಯೊಬ್ಬಳು ಕೋಮಾ ಸ್ಥಿತಿಗೆ ತಲುಪಿರುವ ಘಟನೆ ಜಿಲ್ಲೆಯ ಮಡ್ಡಿಪೇಟೆಯಲ್ಲಿ ನಡೆದಿದೆ. ಯುವತಿಯನ್ನು 20 ವರ್ಷದ ಮಹಾದೇವಿ ಎಂದು ಗುರುತಿಸಲಾಗಿದೆ. ಇಂದು (ಡಿ.11) ಬೆಳಿಗ್ಗೆ ಯುವತಿ ದೇವಾಲಯಕ್ಕೆ ಹೊರಟಿದ್ದ ವೇಳೆ ನಾಯಿ ದಾಳಿ ನಡೆಸಿದೆ. ನಾಯಿಯಿಂದ ತಪ್ಪಿಸಿಕೊಳ್ಳಲು ಹೋಗಿ ಕೆಳಗೆ ಬಿದ್ದ ಪರಿಣಾಮ ತಲೆಗೆ ಬಲವಾದ ಪೆಟ್ಟಾಗಿದೆ. ಕೆಳಗೆ ಬಿದ್ದ ಯುವತಿಯನ್ನು ನಾಯಿಗಳು ಎಳೆದಾಡಿವೆ. ಯುವತಿಯನ್ನು ರಾಯಚೂರಿನ

ಬೀದಿ ನಾಯಿ ದಾಳಿ: ಯುವತಿಗೆ ಗಂಭೀರ ಗಾಯ Read More »

ಕ್ರೈಮ್ ನ್ಯೂಸ್

ಕಾರ್ಕಳ: ಕಡವೆ ಹತ್ಯೆ ಪ್ರಕರಣ; 10 ಜನರ ತಂಡ ಭಾಗಿ ಶಂಕೆ

(ನ್ಯೂಸ್ ಕಡಬ) newskadaba.com .ಡಿ. 11. ಕಾರ್ಕಳ: ಕುದುರೆಮುಖ ರಕ್ಷಿತಾರಣ್ಯ ಪ್ರದೇಶದಲ್ಲಿ ಕಡವೆ ಜಾತಿಯ ವನ್ಯಪ್ರಾಣಿಯನ್ನು ಗುಂಡುಹಾರಿಸಿ  ಹತ್ಯೆಗೈದಿರುವ ಮಾಹಿತಿ ಬೆಳಕಿಗೆ ಬಂದಿದ್ದು,  ಹತ್ಯೆಗೀಡಾದ ಭಾರೀ ಗಾತ್ರದ ಕಡವೆಯನ್ನು ಹೊತ್ತು ತಂದ ತಂಡದಲ್ಲಿ ಹತ್ತು ಮಂದಿ ಭಾಗಿಯಾಗಿದ್ದು, ಇಬ್ಬರ ವಿರುದ್ಧ ಮಾತ್ರ ಕೇಸು ದಾಖಲಾಗಿರುವ ಬಗ್ಗೆ ಆರೋಪ ಕೇಳಿ ಬರುತ್ತಿವೆ. ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಒಂದಾಗಿರುವ ಬೆಳ್ತಂಗಡಿ ತಾಲೂಕು ಕುತ್ಲೂರು ಗ್ರಾಮದ ಹೌತೊಟ್ಟು ಎಂಬಲ್ಲಿ ಅಕ್ಟೋಬರ್ ೨28ರಂದು ಈ ಘಟನೆ ನಡೆದಿತ್ತು.ಪ್ರಕರಣದಲ್ಲಿ ಒಂದನೇ ಆರೋಪಿ ಎಂದು ದಾಖಲಾಗಿರುವ

ಕಾರ್ಕಳ: ಕಡವೆ ಹತ್ಯೆ ಪ್ರಕರಣ; 10 ಜನರ ತಂಡ ಭಾಗಿ ಶಂಕೆ Read More »

ಕರಾವಳಿ

ಆಟವಾಡುತ್ತಿದ್ದ ವೇಳೆ ಇಬ್ಬರು ಮಕ್ಕಳು ಬಾವಿಗೆ ಬಿದ್ದು ಮೃತ್ಯು..!

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಡಿ. 11.  ಮನೆಯಂಗಳದಲ್ಲಿ ಆಟ ಆಡುತ್ತಿದ್ದ ಇಬ್ಬರು ಹೆಣ್ಣು ಮಕ್ಕಳು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಕೊಪ್ಪ ತಾಲೂಕಿನ ಅಮ್ಮಡಿ ಎಸ್ಟೇಟ್ ನಲ್ಲಿ ಮಂಗಳವಾರ ಸಂಜೆ ನಡೆದಿದೆ. ಮೃತಪಟ್ಟ ಮಕ್ಕಳನ್ನು ಮಧ್ಯಪ್ರದೇಶದ ನಝೀರಾಬಾದ್ ನಿವಾಸಿಗಳಾದ ಸುನೀತಾ ಮತ್ತು ಅರ್ಜುನ್ ಸಿಂಗ್ ದಂಪತಿಯ ಪುತ್ರಿಯರಾದ ಸೀಮಾ (6) ಮತ್ತು ರಾಧಿಕಾ (2) ಎಂದು ಗುರುತಿಸಲಾಗಿದೆ. ಅರ್ಜುನ್ ಸಿಂಗ್ ನಝೀರಾಬಾದ್ ನಲ್ಲೇ ವಾಸವಿದ್ದು, ಮೂವರು ಮಕ್ಕಳೊಂದಿಗೆ ಸುನೀತಾ ಬಾಯಿ ಕೂಲಿ ಕೆಲಸ ಅರಸಿ ಬಂದವರು

ಆಟವಾಡುತ್ತಿದ್ದ ವೇಳೆ ಇಬ್ಬರು ಮಕ್ಕಳು ಬಾವಿಗೆ ಬಿದ್ದು ಮೃತ್ಯು..! Read More »

ಕ್ರೈಮ್ ನ್ಯೂಸ್

ಮಂಗಳೂರು: ಖಾಸಗಿ ಬಸ್ ಗಳಿಗೆ ಬಾಗಿಲು ಅಳವಡಿಸುವ ನಿಯಮ ಪಾಲಿಸುವಲ್ಲಿ ವಿಫಲ

(ನ್ಯೂಸ್ ಕಡಬ) newskadaba.com .ಡಿ. 11. ಪ್ರಯಾಣಿಕರ ಸುರಕ್ಷತೆಯ ಹಿನ್ನೆಲೆ ಡಿಸೆಂಬರ್ 10ರೊಳಗೆ ಎಲ್ಲಾ ಖಾಸಗಿ ಬಸ್‌ಗಳಿಗೆ ಬಾಗಿಲು ಅಳವಡಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಮುಲ್ಲೈ ಮುಗಿಲನ್ ಅವರು ಪದೇ ಪದೇ ನಿರ್ದೇಶನ ನೀಡಿದ್ದರೂ, ನಿಯಮ ಪಾಲಿಸುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಲೇ ಇವೆ. ಕಳೆದ ತಿಂಗಳು ಡಿಸಿ ಅಧ್ಯಕ್ಷತೆಯಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ (ಆರ್‌ಟಿಎ) ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿತ್ತು. ಮಂಗಳೂರಿನಿಂದ ಬರುವ ನಗರ ಸಾರಿಗೆ ಬಸ್‌ಗಳನ್ನು ಹೊರತುಪಡಿಸಿ ಎಲ್ಲಾ ಖಾಸಗಿ ಬಸ್‌ಗಳು

ಮಂಗಳೂರು: ಖಾಸಗಿ ಬಸ್ ಗಳಿಗೆ ಬಾಗಿಲು ಅಳವಡಿಸುವ ನಿಯಮ ಪಾಲಿಸುವಲ್ಲಿ ವಿಫಲ Read More »

ಕರಾವಳಿ

ವಿಧಾನಸೌಧ ಆವರಣದಲ್ಲಿ ಎಸ್.ಎಂ.ಕೃಷ್ಣ ಪುತ್ಥಳಿ ಸ್ಥಾಪಿಸುವಂತೆ ಮನವಿ

(ನ್ಯೂಸ್ ಕಡಬ) newskadaba.com ಡಿ. 11.  ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಹಾಗೂ ವಿಶೇಷವಾಗಿ ರಾಜಧಾನಿ ಬೆಂಗಳೂರಿನ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಪುತ್ಥಳಿಯನ್ನು ವಿಧಾನಸೌಧದ ಆವರಣದಲ್ಲಿ ಸ್ಥಾಪಿಸಬೇಕು ಎಂದು ಮುಖ್ಯಮಂತ್ರಿಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಮನವಿ ಮಾಡಿದರು. ಮಂಗಳವಾರ ವಿಧಾನಸಭೆಯಲ್ಲಿ ಸಂತಾಪ ಸೂಚಕ ನಿರ್ಣಯದ ಮೇಲೆ ಮಾತನಾಡಿದ ಅವರು, ಆಲಮಟ್ಟಿ, ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕಾಗಿಯೂ ಅವರ ಕೊಡುಗೆ ಅಪಾರವಿದೆ. ಮಹಾರಾಷ್ಟ್ರದಿಂದ ನಿಪ್ಪಾಣಿ ಭಾಗಕ್ಕೆ 3 ಟಿಎಂಸಿ

ವಿಧಾನಸೌಧ ಆವರಣದಲ್ಲಿ ಎಸ್.ಎಂ.ಕೃಷ್ಣ ಪುತ್ಥಳಿ ಸ್ಥಾಪಿಸುವಂತೆ ಮನವಿ Read More »

ಕರ್ನಾಟಕ

ಲಿಂಗಾಯತ ಪಂಚಮಸಾಲಿ ಲಾಠಿಚಾರ್ಜ್ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ

(ನ್ಯೂಸ್ ಕಡಬ) newskadaba.com .ಡಿ. 11. ಬೆಳಗಾವಿ: ಬೆಳಗಾವಿ  ಸುವರ್ಣಸೌಧದ  ಮುಂದೆ ಲಿಂಗಾಯತ ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿಚಾರ್ಜ್‌ ಮಾಡಿದ್ದನ್ನು ಖಂಡಿಸಿ ಡಿಸೆಂಬರ್ 12ರಂದು ರಾಜ್ಯಾದ್ಯಂತ ಪ್ರತಿಭಟನೆ ಘೋಷಣೆ ಮಾಡಲಾಗಿದೆ. ಲಾಠಿಚಾರ್ಜ್‌ ಮಾಡಿದ ಸರ್ಕಾರದ ಕ್ರಮವನ್ನು ಖಂಡಿಸಿ ನಾಳೆ ರಾಜ್ಯದಾದ್ಯಂತ ಹೋರಾಟ ಮಾಡಲು ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ. ನಿನ್ನೆ ಸುವರ್ಣಸೌಧದ ಮುಂದೆ ನಡೆಯುತ್ತಿದ್ದ ಹೋರಾಟ ಹಿಂಸಾಚಾರಕ್ಕೆ ತಿರುಗಿತ್ತು. ಮಂಗಳವಾರ ರಾತ್ರಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸ್ವಾಮೀಜಿ, ‘ನಮ್ಮ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ.

ಲಿಂಗಾಯತ ಪಂಚಮಸಾಲಿ ಲಾಠಿಚಾರ್ಜ್ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ Read More »

ಕರ್ನಾಟಕ
Scroll to Top