News Kadaba

ದ. ಕ ಜಿಲ್ಲೆಯಲ್ಲಿ ಮಳೆಯ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಡಿಸಿ ಮುಲ್ಲೈ ಮುಹಿಲನ್ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 04. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ (ಡಿಸಿ) ಮುಲ್ಲೈ ಮುಹಿಲನ್ ತಿಳಿಸಿದ್ದಾರೆ. ಕೆಲವೆಡೆ ಮನೆಗಳಿಗೆ ನೀರು ನುಗ್ಗಿ ಹಾನಿ ಸಂಭವಿಸಿದ್ದು, ಅಧಿಕಾರಿಗಳು ಕ್ಷಿಪ್ರವಾಗಿ ಕ್ರಮಕೈಗೊಂಡಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಪರಿಹಾರ ಕಾರ್ಯಾಚರಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಾರ್ಷಿಕ ಜಾತ್ರೆ ನಡೆಯುತ್ತಿರುವುದರಿಂದ ಪ್ರವಾಸಿಗರು ಮುನ್ನೆಚ್ಚರಿಕೆ ಕ್ರಮವಾಗಿ ನದಿಗೆ ಇಳಿಯದಂತೆ ಸೂಚಿಸಲಾಗಿದೆ.  

ದ. ಕ ಜಿಲ್ಲೆಯಲ್ಲಿ ಮಳೆಯ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಡಿಸಿ ಮುಲ್ಲೈ ಮುಹಿಲನ್ ಸೂಚನೆ Read More »

ಕರಾವಳಿ

ರಸ್ತೆ ಅಪಘಾತ: ಸವಾರನಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಡಿ. 04. ಟಿಪ್ಪರ್ ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಕಾಲು ಕಳೆದುಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದಲ್ಲಿ ಇಂದು ಬೆಳಗ್ಗೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಆರ್.ಟಿ.ಒ. ಸರ್ಕಲ್ ನಲ್ಲಿ ಈ ಅಪಘಾತ ಸಂಭವಿಸಿದೆ. ಕೇರಳದ ಮಲ್ಲಪುರಂ ನಿವಾಸಿ ಜಾಸ್ಮೀನ್ (35) ಕಾಲು ಕಳೆದುಕೊಂಡಿರುವ ಯುವಕ. ಟಿಪ್ಪರ್ ಬೈಕ್ ಗೆ ಗುದ್ದಿ 20 ಮೀಟರ್ ದೂರು ಎಳೆದೊಯ್ದಿದೆ. ಇದರಿಂದ ಬೈಕ್ ಸವಾರ ಜಾಸ್ಮೀನ್ ಗೆ

ರಸ್ತೆ ಅಪಘಾತ: ಸವಾರನಿಗೆ ಗಂಭೀರ ಗಾಯ Read More »

ಕರ್ನಾಟಕ

ಬೆಂಗಳೂರನ್ನು ಆರೋಗ್ಯ ಸಿಟಿ ಮಾಡಲು ಸರ್ಕಾರ ಸಿದ್ಧ: ಸಚಿವ ದಿನೇಶ್ ಗುಂಡೂರಾವ್

(ನ್ಯೂಸ್ ಕಡಬ) newskadaba.com ಡಿ. 04 ಬೆಂಗಳೂರು: ದೇಶದಲ್ಲಿಯೇ ಮೊದಲ ಆರೋಗ್ಯ ನಗರವನ್ನಾಗಿ ಬೆಂಗಳೂರನ್ನು ಪರಿವರ್ತಿಸುವ ಆರೋಗ್ಯ ಸಿಟಿ ದೃಷ್ಠಿಕೋನವನ್ನು ಬೆಂಬಲಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಂಗಳವಾರ ಹೇಳಿದರು. ನಗರದ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಆರೋಗ್ಯ ವಲ್ಡ್, ರೋಟರಿ ಮತತು ಬಿ-ಪ್ಯಾಕ್ ಸಹಯೋಗದಲ್ಲಿ ನಡೆದ ಆರೋಗ್ಯ ಸಿಟಿ ಸಮ್ಮಿಟ್-2024 ಉದ್ಘಾಟಿಸಿ ಸಚಿವರು ಮಾತನಾಡಿದರು. ಆರೋಗ್ಯ ನಮ್ಮೆಲ್ಲರ ಮೊದಲ ಪ್ರಾಶಸ್ತ್ಯವಾಗಬೇಕು. ಆದರೆ, ಇಂದು ಒಬೆಸಿಟಿ, ಡಯಾಬಿಟಿಸ್, ಬಿಪಿ, ಒತ್ತಡ ಹೀಗೆ

ಬೆಂಗಳೂರನ್ನು ಆರೋಗ್ಯ ಸಿಟಿ ಮಾಡಲು ಸರ್ಕಾರ ಸಿದ್ಧ: ಸಚಿವ ದಿನೇಶ್ ಗುಂಡೂರಾವ್ Read More »

ಕರ್ನಾಟಕ

ನಿರ್ಮಾಣ ಹಂತದ ಕಟ್ಟಡದಲ್ಲಿ ಯುವಕನ ಮೃತದೇಹ ಪತ್ತೆ: ಕೊಲೆ ಶಂಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 04. ಯುವಕನೋರ್ವನ ಮೃತದೇಹವು ಇಲ್ಲಿನ ಬಸ್ ನಿಲ್ದಾಣದ ಬಳಿ ನಿರ್ಮಾಣ ಹಂತದಲ್ಲಿರುವ ಗ್ರಾ.ಪಂ.ನ ಗ್ರಂಥಾಲಯ ಕಟ್ಟಡದ ಮೇಲೆ ಇಂದು ಬೆಳಗ್ಗೆ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬರಬೇಕಿಗಿದೆ.  

ನಿರ್ಮಾಣ ಹಂತದ ಕಟ್ಟಡದಲ್ಲಿ ಯುವಕನ ಮೃತದೇಹ ಪತ್ತೆ: ಕೊಲೆ ಶಂಕೆ Read More »

ಕ್ರೈಮ್ ನ್ಯೂಸ್

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಇಂದಿನಿಂದ “ಭಾರತೀಯ ಭಾಷಾ ಉತ್ಸವ”

(ನ್ಯೂಸ್ ಕಡಬ) newskadaba.com ಡಿ. 04 ಬೆಂಗಳೂರು: ರಾಜ್ಯದ ಎಲ್ಲಾ ಶಾಲೆಗಳಲ್ಲಿ ಇಂದಿನಿಂದ ‘ಭಾರತೀಯ ಭಾಷಾ ಉತ್ಸವ’ ಕಾರ್ಯಕ್ರಮವನ್ನು ಆಯೋಜಿಸುವಂತೆ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ದೇಶದ ವಿವಿಧ ಭಾಷೆಗಳ ಬಗ್ಗೆ ಅರಿವು ಹಾಗೂ ಮೆಚ್ಚುಗೆ ಬೆಳೆಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ʼಭಾರತೀಯ ಭಾಷಾ ಉತ್ಸವ’ವನ್ನು ಸ್ವಾತಂತ್ರ್ಯ ಹೋರಾಟಗಾರ, ಮಹಾಕವಿ ಸುಬ್ರಮಣ್ಯ ಭಾರತೀ ಅವರ ಜನ್ಮದಿನಾಚರಣೆಯ ಅಂಗವಾಗಿ ಡಿಸೆಂಬರ್‌ 4ರಿಂದ 11ರವರೆಗೆ ಆಚರಿಸಲಾಗುತ್ತದೆ. ಶಾಲಾ ಹಂತದಲ್ಲಿ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಂಡು ‘ಭಾಷೆಗಳ ಮೂಲಕ ಏಕತೆ

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಇಂದಿನಿಂದ “ಭಾರತೀಯ ಭಾಷಾ ಉತ್ಸವ” Read More »

ಕರ್ನಾಟಕ

ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್- ಫೈನಲ್‌ ರೇಸ್‌ನಿಂದ ಹೊರಬಿದ್ದ ನ್ಯೂಜಿಲ್ಯಾಂಡ್

(ನ್ಯೂಸ್ ಕಡಬ) newskadaba.com ಡಿ. 04. ನ್ಯೂಜಿಲ್ಯಾಂಡ್‌ ಕ್ರಿಕೆಟ್ ತಂಡದ ವಿಶ್ಟ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್ ಹಾದಿ ಈಗ ಕಡು ಕಠಿಣವಾಗಿದೆ. ಇದಕ್ಕೆ ಕಾರಣ ದಂಡ ಶಿಕ್ಷೆಗೆ ಒಳಗಾಗಿ ಡಬ್ಲ್ಯುಟಿಸಿಯಲ್ಲಿ 3 ಅಂಕ ಕಳೆದುಕೊಂಡಿರುವುದು. ಕಿವೀಸ್‌ನ ಈ ಮೂರು ಅಂಕದ ಕಡಿತದಿಂದ ಭಾರತ, ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡದ ಫೈನಲ್‌ ರೇಸ್‌ನ ಹಾದಿ ಮತ್ತಷ್ಟು ಸುಗಮಗೊಂಡಿದೆ. ಅತ್ತ ನ್ಯೂಜಿಲ್ಯಾಂಡ್‌ ಫೈನಲ್‌ ರೇಸ್‌ನಿಂದ ಬಹುತೇಕ ಹೊರಬಿದ್ದಿದೆ. ಕ್ರೈಸ್ಟ್‌ಚರ್ಚ್‌ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದಿದ್ದ ಮೊದಲ ಟೆಸ್ಟ್‌ ಪಂದ್ಯದಲ್ಲಿ ನಿಗದಿಯ

ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್- ಫೈನಲ್‌ ರೇಸ್‌ನಿಂದ ಹೊರಬಿದ್ದ ನ್ಯೂಜಿಲ್ಯಾಂಡ್ Read More »

ಕ್ರೀಡಾ ನ್ಯೂಸ್

ಭ್ರಷ್ಟಾಚಾರ ಪ್ರಕರಣ: ಬಿಎಸ್‌ ಯಡಿಯೂರಪ್ಪ ವಿರುದ್ಧ ತನಿಖೆಗೆ ರಾಜ್ಯಪಾಲರ ಅನುಮತಿ ಕೋರಿದ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 04. ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕೆಂದು ರಾಜ್ಯ ಸರ್ಕಾರ, ರಾಜ್ಯಪಾಲರಿಗೆ ಮನವಿ ಮಾಡಿದೆ. ಈ ಹಿಂದೆ ಸಚಿವ ಸಂಪುಟದಲ್ಲಿ ತೆಗೆದುಕೊಂಡ ತೀರ್ಮಾನದಂತೆ ಬಿಡಿಎ ಹೌಸಿಂಗ್​ ನಿರ್ಮಾಣ ಪ್ರಕರಣದಲ್ಲಿ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಕಡತ ರವಾನಿಸಿದೆ.​ ಬಿಡಿಎ ಹೌಸಿಂಗ್​ ನಿರ್ಮಾಣ ಪ್ರಕರಣ ಸಂಬಂಧ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿಗೆ ಅನುಮತಿ ಕೋರಿ ಮತ್ತೊಮ್ಮೆ ರಾಜ್ಯಪಾಲರಿಗೆ ಮನವಿ ಮಾಡಲು ಕಳೆದ

ಭ್ರಷ್ಟಾಚಾರ ಪ್ರಕರಣ: ಬಿಎಸ್‌ ಯಡಿಯೂರಪ್ಪ ವಿರುದ್ಧ ತನಿಖೆಗೆ ರಾಜ್ಯಪಾಲರ ಅನುಮತಿ ಕೋರಿದ ಸರ್ಕಾರ Read More »

ಕರ್ನಾಟಕ

ಫೆಂಗಲ್ ಚಂಡಮಾರುತ- ರಾಜ್ಯದಲ್ಲಿ ಈ ವಾರವೂ ಮುಂದುವರಿಯಲಿದೆ ಮಳೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 04. ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ ಕರ್ನಾಟಕದಲ್ಲಿ ಈ ವಾರವೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕರಾವಳಿ ಕರ್ನಾಟಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಮುಂದಿನ ಐದು ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಒಳನಾಡಿನ ಜಿಲ್ಲೆಗಳಿಗೂ ಸಾಧಾರಣ ಮಳೆಯಾಗುವ ಸಂಭವವಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಸಾಧಾರಣ ಮಳೆಯಾಗುವ

ಫೆಂಗಲ್ ಚಂಡಮಾರುತ- ರಾಜ್ಯದಲ್ಲಿ ಈ ವಾರವೂ ಮುಂದುವರಿಯಲಿದೆ ಮಳೆ Read More »

ಕರ್ನಾಟಕ

ಫೆಂಗಲ್ ಚಂಡಮಾರುತ ಎಫೆಕ್ಟ್: ಕರ್ನಾಟಕದಲ್ಲಿ ಇಂದು, ನಾಳೆ ಮಳೆ

(ನ್ಯೂಸ್ ಕಡಬ) newskadaba.com ಡಿ. 04 ಬೆಂಗಳೂರು: ಫೆಂಗಲ್ ಚಂಡಮಾರುತದ ಅಬ್ಬರದಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರ ಭಾರೀ ಮಳೆಯಾಗಿದ್ದು, ಮುಂದಿನ ಒಂದೆರಡು ದಿನ ಕರಾವಳಿ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಫೆಂಗಲ್ ಚಂಡಮಾರುತ ತಮಿಳುನಾಡು, ರಾಜ್ಯದ ದಕ್ಷಿಣ ಒಳನಾಡಿನ ಮೂಲಕ ಇದೀಗ ಅರಬ್ಬಿ ಸಮುದ್ರ ಸೇರಿಕೊಂಡಿದೆ. ಚಂಡಮಾರುತದ ಪ್ರಭಾವ ಕಡಿಮೆಯಾಗಿದ್ದರೂ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರ ಭಾರೀ ಪ್ರಮಾಣದ ಮಳೆಯಾಗಿದೆ.  ಒಟ್ಟಾರೆ ರಾಜ್ಯದಲ್ಲಿ ಡಿ.9ರ ವರೆಗೆ

ಫೆಂಗಲ್ ಚಂಡಮಾರುತ ಎಫೆಕ್ಟ್: ಕರ್ನಾಟಕದಲ್ಲಿ ಇಂದು, ನಾಳೆ ಮಳೆ Read More »

ಕರ್ನಾಟಕ

ನೇತ್ರಾವದಿ ನದಿಯಲ್ಲಿ ಮುಳುಗಿ ಆರ್‌ಎಸ್‌ಎಸ್‌ ಕಾರ್ಯಕರ್ತ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 04. ನೇತ್ರಾವದಿ ನದಿಯಲ್ಲಿ ಈಜಾಡಲು ತೆರಳಿ ನೀರುಪಾಲಾಗಿದ್ದ ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38) ಅವರ ಮೃತದೇಹ ಪತ್ತೆಯಾಗಿದೆ. ಇವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿದ್ದರು. ಸೋಮವಾರ ನೇತ್ರಾವತಿ ಈಜಾಡಲು ಸಂಜೆ ನದಿಯಲ್ಲಿ ಮೂವರು ಇಳಿದಿದ್ದರು. ಈ ವೇಳೆ ಪ್ರಸಾದ್ ನೀರಿನ ಸೆಳೆತಕ್ಕೆಸಿಲುಕಿ ಮುಳುಗಿ ನಾಪತ್ತೆಯಾಗಿದ್ದರು. ಸೋಮವಾರ ತಡರಾತ್ರಿ ಶವವನ್ನು ಮೇಲೆತ್ತಲಾಗಿದೆ. ಉಳಿದ ಇಬ್ಬರನ್ನು ರಕ್ಷಿಸಲಾಗಿತ್ತು. ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ಎಂಬಲ್ಲಿಯ ಓಡಿ ಎಂಬವರ

ನೇತ್ರಾವದಿ ನದಿಯಲ್ಲಿ ಮುಳುಗಿ ಆರ್‌ಎಸ್‌ಎಸ್‌ ಕಾರ್ಯಕರ್ತ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top