News Kadaba

ಚನ್ನಪಟ್ಟಣ ಉಪಚುನಾವಣೆ: ಸಿಪಿ ಯೋಗೇಶ್ವರ್ಗೆ ಭರ್ಜರಿ ಗೆಲುವು

(ನ್ಯೂಸ್ ಕಡಬ) newskadaba.com ನ. 23. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಸಿಪಿ ಯೋಗೇಶ್ವರ್ ಅವರು, ಕೊನೆ ಕ್ಷಣದಲ್ಲಿ ಬಿಜೆಪಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಆದರೂ ಚನ್ನಪಟ್ಟಣದ ಮತದಾರರು ಯೋಗೇಶ್ವರ್ ಕೈ ಹಿಡಿದಿದ್ದಾರೆ. ಇನ್ನು ನಿಖಿಲ್ ಕುಮಾರಸ್ವಾಮಿ ಅವರು ಮೂರನೇ ಬಾರಿಯೂ ಸೋಲೊಪ್ಪಿಕೊಂಡಿದ್ದಾರೆ.  

ಚನ್ನಪಟ್ಟಣ ಉಪಚುನಾವಣೆ: ಸಿಪಿ ಯೋಗೇಶ್ವರ್ಗೆ ಭರ್ಜರಿ ಗೆಲುವು Read More »

ಕರ್ನಾಟಕ

ವಂದೇಬಾರತ್ ರೈಲಿಗೆ ಕಲ್ಲು ತೂರಾಟ: ಇಬ್ಬರು ಅರೆಸ್ಟ್

(ನ್ಯೂಸ್ ಕಡಬ)newskadaba.com   ಪಟ್ನಾ, ನ.22: ವಂದೇ ಭಾರತ್‌ ರೈಲಿಗೆ ಮತ್ತೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ವರದಿಯಾಗಿದೆ. ಬಿಹಾರದ ಗಯಾದಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ಕಿಡಿಗೇಡಿಗಳನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ ಎಂದು ರೈಲ್ವೆ ರಕ್ಷಣಾ ಪಡೆ  ಅಧಿಕಾರಿಗಳು ತಿಳಿಸಿದ್ದಾರೆ. ಕಲ್ಲು ತೂರಿದ ಪರಿಣಾಮ ರೈಲಿನ ಕಿಟಕಿ ಗಾಜುಗಳು ಬಿರುಕು ಬಿಟ್ಟಿವೆ. ಘಟನೆಯ ಬಗ್ಗೆ ಮಾಹಿತಿ ಸಿಕ್ಕ ಬೆನ್ನಲ್ಲೇ ಗಯಾ ಆರ್‌ಪಿಎಫ್‌ ತಂಡವು ವಿಶೇಷ ತಂಡವೊಂದನ್ನು ರಚಿಸಿ ಘಟನಾ ಸ್ಥಳಕ್ಕೆ ಭೇಟಿ ಕೊಟ್ಟು ಆರೋಪಿಗಳನ್ನು ಪತ್ತೆ

ವಂದೇಬಾರತ್ ರೈಲಿಗೆ ಕಲ್ಲು ತೂರಾಟ: ಇಬ್ಬರು ಅರೆಸ್ಟ್ Read More »

ಕರ್ನಾಟಕ

ವಿಧಾನಸಭಾ ಕ್ಷೇತ್ರದ ಉಪಚುನಾವಣೆ: ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ

(ನ್ಯೂಸ್ ಕಡಬ) newskadaba.com ಬಳ್ಳಾರಿ, ನ. 23. ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಗೆಲುವು ಸಾಧಿಸಿದ್ದಾರೆ. ಇನ್ನು ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಅನ್ನಪೂರ್ಣ ಅವರು 9 ಸಾವಿರಕ್ಕೂ ಹೆಚ್ಚು ಮತಗಳಿಂದ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ಅವರು ಸೋಲನ್ನು ಕಂಡಿದ್ದಾರೆ. ಸೋಲನ್ನು ಸವಾಲಾಗಿ ಸ್ವೀಕರಿಸುತ್ತೇವೆ. ಕಾಂಗ್ರೆಸ್ ಹಣ ಬಲದಿಂದ ಗೆದ್ದಿದೆ. ನಾವು 2028ರ ಚುನಾವನೆಯಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ತಿಳಿಸಿದರು.  

ವಿಧಾನಸಭಾ ಕ್ಷೇತ್ರದ ಉಪಚುನಾವಣೆ: ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ Read More »

ಕರ್ನಾಟಕ

CPIM ದ.ಕ.ಜಿಲ್ಲಾ ನೂತನ ಕಾರ್ಯದರ್ಶಿಯಾಗಿ ಮುನೀರ್ ಕಾಟಿಪಳ್ಳ ಆಯ್ಕೆ

(ನ್ಯೂಸ್ ಕಡಬ) newskadaba.com ನ. 23. ಇತ್ತೀಚಿಗೆ ನಡೆದ ಸಿಪಿಐಎಂ ನ 24ನೇ ದ.ಕ.ಜಿಲ್ಲಾ ಸಮ್ಮೇಳನದಲ್ಲಿ ಮುಂಬರುವ ಮೂರು ವರ್ಷಗಳ ಕಾಲಾವಧಿಗೆ ನೂತನ ಜಿಲ್ಲಾ ಸಮಿತಿಯನ್ನು ರಚಿಸಲಾಯಿತು. ಸಿಪಿಐಎಂ ನ ನೂತನ ಜಿಲ್ಲಾ ಕಾರ್ಯದರ್ಶಿಯಾಗಿ ಮುನೀರ್ ಕಾಟಿಪಳ್ಳ ಅವರು ಸರ್ವಾನುಮತದಿಂದ ಆಯ್ಕೆಗೊಂಡರು. ಜಿಲ್ಲಾ ಕಾರ್ಯದರ್ಶಿ ಮಂಡಳಿಗೆ ಕೆ ಯಾದವ ಶೆಟ್ಟಿ, ಸುನಿಲ್ ಕುಮಾರ್ ಬಜಾಲ್, ಡಾ.ಕ್ರಷ್ಣಪ್ಪ ಕೊಂಚಾಡಿ, ಸುಕುಮಾರ್ ತೊಕ್ಕೋಟ್ಟು, ವಸಂತ ಆಚಾರಿ, ಸದಾಶಿವದಾಸ್,ಬಿ ಎಂ ಭಟ್, ಜಯಂತಿ ಶೆಟ್ಟಿಯವರು ಆಯ್ಕೆಯಾದರು. ನೂತನ ಜಿಲ್ಲಾ ಸಮಿತಿಗೆ ಶೇಖರ್

CPIM ದ.ಕ.ಜಿಲ್ಲಾ ನೂತನ ಕಾರ್ಯದರ್ಶಿಯಾಗಿ ಮುನೀರ್ ಕಾಟಿಪಳ್ಳ ಆಯ್ಕೆ Read More »

ಕರಾವಳಿ

‘ಬಿಜೆಪಿಯವರು 3 ಕ್ಷೇತ್ರಗಳಲ್ಲಿ ಗೆಲ್ಲುವ ಹಗಲುಗನಸು ಕಾಣುತ್ತಿದ್ದರು’- ಎಂ.ಬಿ ಪಾಟೀಲ್

(ನ್ಯೂಸ್ ಕಡಬ)newskadaba.com   ಬೆಂಗಳೂರು, ನ.22: ಬಿಜೆಪಿಯವರು 3 ಸೀಟು ಗೆಲ್ಲುವ ಹಗಲುಗನಸು ಕಾಣುತ್ತಿದ್ದರು. ಇದೀಗ ಜನರು ಅವರಿಗೆ ಉತ್ತರ ಕೊಟ್ಟಿದ್ದಾರೆ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 3 ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಮುನ್ನಡೆಯಿದೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ 18 ಸಾವಿರ ಲೀಡ್ ಇದೆ. ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಈ 3 ಕ್ಷೇತ್ರದಲ್ಲಿಯೂ ನಾವು ಗೆಲ್ಲುತ್ತೇವೆ ಎಮದು ವಿಶ್ವಾಸ ವ್ಯಕ್ತಪಡಿಸಿದರು. ಬೊಮ್ಮಾಯಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು,. ಬೊಮ್ಮಾಯಿ ವಿರುದ್ದ ಅಲ್ಪಸಂಖ್ಯಾತ ಅಭ್ಯರ್ಥಿ ಇದ್ದಾರೆ

‘ಬಿಜೆಪಿಯವರು 3 ಕ್ಷೇತ್ರಗಳಲ್ಲಿ ಗೆಲ್ಲುವ ಹಗಲುಗನಸು ಕಾಣುತ್ತಿದ್ದರು’- ಎಂ.ಬಿ ಪಾಟೀಲ್ Read More »

ಕರ್ನಾಟಕ

ವಕ್ಫ್ ವಿರುದ್ಧ ಸಿಡಿದೆದ್ದ ಬಿಜೆಪಿ: ‘ನಮ್ಮ ಭೂಮಿ, ನಮ್ಮ ಹಕ್ಕು’ ಘೋಷಣೆಯಡಿ ರಾಜ್ಯಾದ್ಯಂತ ಪ್ರತಿಭಟನೆ ಆರಂಭ

(ನ್ಯೂಸ್ ಕಡಬ) newskadaba.com ನ. 23. ವಕ್ಫ್ ನೋಟಿಸ್​ಗಳ ವಿರುದ್ಧ ಸಿಡಿದೆದ್ದಿರುವ ಬಿಜೆಪಿ, ರಾಜ್ಯದಾದ್ಯಂತ ‘ನಮ್ಮ ಭೂಮಿ, ನಮ್ಮ ಹಕ್ಕು ಘೋಷಣೆಯಡಿ’ ಪ್ರತಿಭಟನೆ ಆರಂಭಿಸಿದೆ. ಕೋಲಾರದಿಂದ ಮಂಗಳೂರಿನವರೆಗೆ, ಬೆಂಗಳೂರಿನಿಂದ ವಿಜಯಪುರದವರೆಗ ವಕ್ಫ್ ವಿವಾದ ವಿರೋಧಿಸಿ ಪ್ರತಿಭಟನೆಗಳಿದಿದೆ. ಕೂಡಲೇ ಗೆಜೆಟ್ ನೋಟಿಫಿಕೇಷನ್ ರದ್ದು ಮಾಡಬೇಕೆಂದು ಆಗ್ರಹಿಸಿದೆ. ಶುಕ್ರವಾರ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಬಿಜೆಪಿ ನಾಯಕರು, ರೈತ ವಿರೋಧಿ ಸಚಿವ ಜಮೀರ್ ಅಹಮ್ಮದ್ ಖಾನ್ ವಜಾಗೊಳಿಸಿ, ಅಲ್ಪಸಂಖ್ಯಾತರ ಓಲೈಕೆಗಾಗಿ ರೈತರ ಬದುಕಿಗೆ ಕೊಳ್ಳೆ

ವಕ್ಫ್ ವಿರುದ್ಧ ಸಿಡಿದೆದ್ದ ಬಿಜೆಪಿ: ‘ನಮ್ಮ ಭೂಮಿ, ನಮ್ಮ ಹಕ್ಕು’ ಘೋಷಣೆಯಡಿ ರಾಜ್ಯಾದ್ಯಂತ ಪ್ರತಿಭಟನೆ ಆರಂಭ Read More »

ಕರ್ನಾಟಕ

ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಹಾವು ಕಡಿತಕ್ಕೆ ಚುಚ್ಚುಮದ್ದು ದಾಸ್ತಾನು ಕಡ್ಡಾಯ: ಈಶ್ವರ ಖಂಡ್ರೆ

(ನ್ಯೂಸ್ ಕಡಬ)newskadaba.com   ಬೆಂಗಳೂರು, ನ.23: ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಮತ್ತು ಆರೋಗ್ಯ ಕೇಂದ್ರಗಳಲ್ಲಿ ವಿಷ ನಿವಾರಕ ಚುಚ್ಚುಮದ್ದು ಸಾಕಷ್ಟು ದಾಸ್ತಾನು ಇರುವಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ, ಪರಿಸರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು. ಪಶ್ಚಿಮ ಘಟ್ಟಕ್ಕೆ ಸ್ಥಳೀಯವಾಗಿರುವ ನಾಲ್ಕು ಹೊಸಕಾಳಿಂಗ ಸರ್ಪ ಪ್ರಭೇದಗಳ ಆವಿಷ್ಕಾರದ ಘೋಷಣೆಯನ್ನು ಉದ್ಘಾಟಿಸಿ ಮಾತನಾಡಿದ ಖಂಡ್ರೆ, ಆಸ್ಪತ್ರೆಗಳಲ್ಲಿ ವಿಷ ನಿವಾರಕಗಳು ಲಭ್ಯವಿದ್ದರೂ, ಜನರಲ್ಲಿ ಅವುಗಳ ಬಳಕೆ ಮತ್ತು ಮಾಹಿತಿಯ ಬಗ್ಗೆ ಅರಿವು ಸೀಮಿತವಾಗಿದೆ.

ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಹಾವು ಕಡಿತಕ್ಕೆ ಚುಚ್ಚುಮದ್ದು ದಾಸ್ತಾನು ಕಡ್ಡಾಯ: ಈಶ್ವರ ಖಂಡ್ರೆ Read More »

ಕರಾವಳಿ

ಕೋವಿಡ್ ವರದಿ ಬಗ್ಗೆ ವಿವಾದಾತ್ಮಕ ಹೇಳಿಕೆ; ನ್ಯಾಯಮೂರ್ತಿಗಳಿಗೆ ಕ್ಷಮೆ ಕೋರಿದ ಸಚಿವ ಪ್ರಹ್ಲಾದ್ ಜೋಶಿ!*

(ನ್ಯೂಸ್ ಕಡಬ)newskadaba.com   ನವದೆಹಲಿ, ನ.22: ಕೋವಿಡ್ ಚಿಕಿತ್ಸೆಗೆ ಸಂಬಂಧಪಟ್ಟ ವರದಿ ಬಗ್ಗೆ ನೀಡಿದ ಹೇಳಿಕೆ ವಿವಾದ ಸೃಷ್ಟಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನ್ಯಾಯಮೂರ್ತಿ ಮೈಕೆಲ್ ಡಿ.ಕುನ್ಹಾ ಅವರಿಗೆ ನೇರವಾಗಿ ಪತ್ರ ಬರೆದು ಕ್ಷಮೆ ಕೋರಿದ್ದಾರೆ. ಈ ಹಿಂದೆ ರಾಜ್ಯ ವಿಧಾನಸಭೆ ಉಪ ಚುನಾವಣೆ ವೇಳೆ ಸಚಿವರು ಪ್ರಚಾರ ಭಾಷಣದಲ್ಲಿ ‘ಬಿಜೆಪಿ ಸರ್ಕಾರದ ಅವಧೀಲಿ ಕೋವಿಡ್ ಹಗರಣ ನಡೆದಿದೆ’ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸುವಾಗ ನ್ಯಾಯಮೂರ್ತಿ ಮೈಕೆಲ್ ಡಿ.ಕುನ್ಹಾ ವರದಿ ಬಗ್ಗೆ ಪ್ರಸ್ತಾಪಿಸಿದ್ದು ವಿವಾದ ಹುಟ್ಟು

ಕೋವಿಡ್ ವರದಿ ಬಗ್ಗೆ ವಿವಾದಾತ್ಮಕ ಹೇಳಿಕೆ; ನ್ಯಾಯಮೂರ್ತಿಗಳಿಗೆ ಕ್ಷಮೆ ಕೋರಿದ ಸಚಿವ ಪ್ರಹ್ಲಾದ್ ಜೋಶಿ!* Read More »

ಕರ್ನಾಟಕ

ವಯನಾಡಿನಲ್ಲಿ 1,91,000 ಮತಗಳ ಭರ್ಜರಿ ಮುನ್ನಡೆ ಸಾಧಿಸಿದ ಪ್ರಿಯಾಂಕಾ ಗಾಂಧಿ

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ನ. 23. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಕೇರಳ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ 1 ಲಕ್ಷದ 91 ಸಾವಿರ ಮತಗಳೊಂದಿಗೆ ಮುನ್ನಡೆ ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದ್ದಾರೆ. ಇನ್ನು 1 ಲಕ್ಷದ 91 ಮತಗಳನ್ನು ಪಡೆಯುವ ಮೂಲಕ ಪ್ರಿಯಾಂಕಾ ಗಾಂಧಿ ಅವರು ಸಾವಿರ ಚೊಚ್ಚಲ ಗೆಲುವು ಸಾಧಿಸುವ

ವಯನಾಡಿನಲ್ಲಿ 1,91,000 ಮತಗಳ ಭರ್ಜರಿ ಮುನ್ನಡೆ ಸಾಧಿಸಿದ ಪ್ರಿಯಾಂಕಾ ಗಾಂಧಿ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧನ

(ನ್ಯೂಸ್ ಕಡಬ)newskadaba.com   ಮುಂಬೈ, ನ.22: ಕುಖ್ಯಾತ ರೌಡಿಶೀಟರ್ ದಾವೂದ್  ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರ ತಂಡವು ನ.22ರಂದು ಬಂಧಿಸಿದ್ದಾರೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್, ಬಂಧಿತ ದಾವೂದ್ ಉಳ್ಳಾಲದ ಧರ್ಮನಗರ ನಿವಾಸಿಯಾಗಿದ್ದಾನೆ. ಈತ ಮಂಗಳೂರಿನ ತಲಪಾಡಿ-ದೇವಿಪುರ ರಸ್ತೆ ಬಳಿ ಪ್ರತಿಸ್ಪರ್ಧಿ ಗ್ಯಾಂಗ್ ಸದಸ್ಯರ ವಿರುದ್ಧ ಅಪರಾಧ ಎಸಗಲು ಸಂಚು ರೂಪಿಸುತ್ತಿದ್ದ ವೆಳೆ ಬಂಧಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಪಿಎಸ್ ಐ ನರೇಂದ್ರ ನೇತೃತ್ವದ ಸಿಸಿಬಿ ತಂಡ ದಾವೂದ್ ನನ್ನು ಬಂಧಿಸಲು ಮುಂದಾಗಿದೆ. ಕಾರ್ಯಾಚರಣೆ ವೇಳೆ ದಾವೂದ್

ಮಂಗಳೂರು: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧನ Read More »

ಕರಾವಳಿ
Scroll to Top