News Kadaba

ಮೀನುಗಾರಿಕೆ ಮಾಡುತ್ತಿರುವ ವೇಳೆ ಮೃತ್ಯು: ಇಲಾಖೆ ವತಿಯಿಂದ ಕುಟುಂಬಕ್ಕೆ 8 ಲಕ್ಷ ರೂ. ಪರಿಹಾರ

(ನ್ಯೂಸ್ ಕಡಬ) newskadaba.com ಕುಂದಾಪುರ, ನ. 23. ಬೀಜಾಡಿ ಮೀನುಗಾರರ ಸಹಕಾರಿ ಸಂಘದ ಸದಸ್ಯರಾದ ಕೋಣಿ ಗ್ರಾಮದ ನಿವಾಸಿ ವನಜಾ ಅವರು ಹೊಳೆಯಲ್ಲಿ ಮೀನುಗಾರಿಕೆ ಮಾಡುತ್ತಿರುವಾಗ ಮೃತಪಟ್ಟಿದ್ದು, ಮೃತರ ವಾರಸುದಾರರಾದ ಪತಿ ವಾಸು ಪೂಜಾರಿ ಅವರಿಗೆ ಮೀನುಗಾರಿಕಾ ಇಲಾಖೆಯ ಸಂಕಷ್ಟ ಪರಿಹಾರ ನಿಧಿಯಿಂದ ಪರಿಹಾರ ಧನ ರೂ.8 ಲಕ್ಷ ದೊರಕಿದೆ. ವಿಶ್ವ ಮೀನುಗಾರಿಕೆ ದಿನಾಚರಣೆಯ ಅಂಗವಾಗಿ ಮುರ್ಡೇಶ್ವರದಲ್ಲಿ ನಡೆದ ಸಮಾರಂಭದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಮತ್ತು ಮೀನುಗಾರಿಕಾ ಸಚಿವರಾದ ಮಂಕಾಳ ಎಸ್.ವೈದ್ಯ ಅವರು ವಾಸು ಪೂಜಾರಿ ಅವರಿಗೆ […]

ಮೀನುಗಾರಿಕೆ ಮಾಡುತ್ತಿರುವ ವೇಳೆ ಮೃತ್ಯು: ಇಲಾಖೆ ವತಿಯಿಂದ ಕುಟುಂಬಕ್ಕೆ 8 ಲಕ್ಷ ರೂ. ಪರಿಹಾರ Read More »

ಕರಾವಳಿ, ಕ್ರೈಮ್ ನ್ಯೂಸ್

ಷೇರುಪೇಟೆಯಲ್ಲಿ ಭಾರಿ ಜಿಗಿತ: ಸೆನ್ಸೆಕ್ಸ್ ನಲ್ಲಿ 2000 ಪಾಯಿಂಟ್ಸ್ ಜಂಪ್

(ನ್ಯೂಸ್ ಕಡಬ) newskadaba.com ಮುಂಬೈ , ನ.22.   ಮುಂಬಯಿ ಷೇರು ಮಾರುಕಟ್ಟೆ ಸಂವೇದಿ ಸೂಚ್ಯಂಕಗಳು ಶುಕ್ರವಾರ ಮತ್ತೆ ಚೇತರಿಕೆ ಕಂಡಿವೆ. ಸೆನ್ಸೆಕ್ಸ್‌ 2,000 ಅಂಕಗಳ ಏರಿಕೆ ದಾಖಲಿಸಿ 79,117ಕ್ಕೆ ದಿನದ ವಹಿವಾಟು ಮುಕ್ತಾಯಗೊಳಿಸಿದರೆ, ನಿಫ್ಟಿ 557 ಅಂಕಗಳ ಏರಿಕೆಯೊಂದಿಗೆ 23,900ಕ್ಕೆ ದಿನದಾಟ ಪೂರ್ಣಗೊಳಿಸಿತು. ಆ ಮೂಲಕ ಹಿಂದಿನ ಸೆಷನ್‌ನಲ್ಲಿ ಐದು ತಿಂಗಳ ಕನಿಷ್ಠ ಮಟ್ಟದಿಂದ ಚೇತರಿಸಿಕೊಂಡಿದೆ. ಈ ಚೇತರಿಕೆ ಅಮೆರಿಕ ಕಾರ್ಮಿಕ ಮಾರುಕಟ್ಟೆಗೆ ಉತ್ತೇಜನ ನೀಡಲಿದೆ. ICICI ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರೀಸ್, SBI, Infosys, ITC, ಮತ್ತು

ಷೇರುಪೇಟೆಯಲ್ಲಿ ಭಾರಿ ಜಿಗಿತ: ಸೆನ್ಸೆಕ್ಸ್ ನಲ್ಲಿ 2000 ಪಾಯಿಂಟ್ಸ್ ಜಂಪ್ Read More »

ಬ್ರೇಕಿಂಗ್ ನ್ಯೂಸ್

ಬೆಂಗಳೂರಿನಲ್ಲಿ ಏರ್ ಇಂಡಿಯಾದಿಂದ ವಿಮಾನ ನಿರ್ವಹಣೆ ತರಬೇತಿ ಸಂಸ್ಥೆ ಸ್ಥಾಪನೆ!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.22.  ಬೆಂಗಳೂರಿನಲ್ಲಿ ಮೂಲಭೂತ ನಿರ್ವಹಣೆ ತರಬೇತಿ ಸಂಸ್ಥೆ ಸ್ಥಾಪಿಸಲಾಗುತ್ತಿದೆ ಎಂದು ಏರ್ ಇಂಡಿಯಾ ಶುಕ್ರವಾರ ಹೇಳಿದೆ. ಇದು ನಾಗರಿಕ ವಿಮಾನಯಾನ ನಿರ್ದೇಶನಾಲಯ ಪ್ರಮಾಣೀಕರಿಸಿದ ಸಂಯೋಜಿತ 2 + 2 ವರ್ಷಗಳ ವಿಮಾನ ನಿರ್ವಹಣೆ ಎಂಜಿನಿಯರಿಂಗ್ ತರಬೇತಿನೀಡಲಿದೆ. ಭಾರತದಲ್ಲಿ ದೃಢವಾದ, ಭವಿಷ್ಯಕ್ಕೆ ಸಿದ್ಧವಾದ ವಾಯುಯಾನ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವತ್ತ ಒಂದು ಹೆಜ್ಜೆಯಾಗಿದೆ ಎಂದು ಏರ್ ಇಂಡಿಯಾ ಕಂಪನಿ ಹೇಳಿದೆ. ವಿಮಾನ ನಿರ್ವಹಣಾ ಎಂಜಿನಿಯರಿಂಗ್ ತರಬೇತಿ ಕಾರ್ಯಕ್ರಮಕ್ಕಾಗಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (BIAL)

ಬೆಂಗಳೂರಿನಲ್ಲಿ ಏರ್ ಇಂಡಿಯಾದಿಂದ ವಿಮಾನ ನಿರ್ವಹಣೆ ತರಬೇತಿ ಸಂಸ್ಥೆ ಸ್ಥಾಪನೆ! Read More »

ಕರ್ನಾಟಕ

ಬಂಟ್ವಾಳದಲ್ಲಿ ನ. 24, 25 ರಂದು ಎಐಸಿಸಿಟಿಯು ಪ್ರಥಮ ಕರ್ನಾಟಕ ರಾಜ್ಯ ಸಮ್ಮೇಳನ

(ನ್ಯೂಸ್ ಕಡಬ)com ಬಂಟ್ವಾಳ, ನ.22. ಕರ್ನಾಟಕದಲ್ಲಿ ಹಲವು ದಶಕಗಳಿಂದಲೂ ಕಾರ್ಮಿಕರ ಕಲ್ಯಾಣಕ್ಕಾಗಿ ಮತ್ತು ಶ್ರಮ ಜೀವಿಗಳ ಅಧಿಕಾರಕ್ಕಾಗಿ ಹೋರಾಟ ನಡೆಸುತ್ತಿರುವ ಎಐಸಿಸಿಟಿಯು ತನ್ನ ಮೊದಲನೇ ರಾಜ್ಯ ಸಮ್ಮೇಳನವನ್ನು ನ. 24, 25 ರಂದು ಬಂಟ್ವಾಳ ತಾಲೂಕು ಬಿ.ಸಿ .ರೋಡಿನ ಅಂಬೇಡ್ಕರ್ ಭವನದಲ್ಲಿಆಯೋಜಿಸಿದೆ. ಎರಡು ದಿನಗಳ ಕಾಲ ನಡೆಯಲಿರುವ ಈ ಸಮ್ಮೇಳನವು ನವೆಂಬರ್ 24 ಭಾನುವಾರ ಬೆಳಿಗ್ಗೆ 10 ಗಂಟೆಗೆ ಬಿ.ಸಿ.ರೋಡ್ ಕೈಕಂಬದಿಂದ ಶ್ರಮಜೀವಿಗಳ ಅಧಿಕಾರದತ್ತ ಜಾಥಾದಿಂದ ಆರಂಭಗೊಳ್ಳಲಿದ್ದು ಡಾ। ಬಿ. ಆರ್. ಅಂಬೇಡ್ಕರ್ ಭವನದಲ್ಲಿ “ಕರ್ನಾಟಕದಲ್ಲಿ ಕ್ರಾಂತಿಕಾರಿ

ಬಂಟ್ವಾಳದಲ್ಲಿ ನ. 24, 25 ರಂದು ಎಐಸಿಸಿಟಿಯು ಪ್ರಥಮ ಕರ್ನಾಟಕ ರಾಜ್ಯ ಸಮ್ಮೇಳನ Read More »

ಕರಾವಳಿ

‘ಅದಾನಿಯನ್ನು ಕೂಡಲೇ ಕೇಂದ್ರ ಸರ್ಕಾರ ಬಂಧನ ಮಾಡಬೇಕು’- ಖರ್ಗೆ ಆಗ್ರಹ

(ನ್ಯೂಸ್ ಕಡಬ) newskadaba.comಮಂಗಳೂರು, ನ.22.ಕೇಂದ್ರ ಸರ್ಕಾರ ಅದಾನಿಗೆ ಸಂಪೂರ್ಣ ಬೆಂಬಲ ನೀಡುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಅದಾನಿ ವಿರುದ್ಧ ಬಂಧನ ವಾರೆಂಟ್ ಜಾರಿ ವಿಚಾರವಾಗಿ ಮಾತನಾಡಿದ ಅವರು, ಗೌತಮ್ ಅದಾನಿಯನ್ನು ಕೂಡಲೇ ಕೇಂದ್ರ ಸರ್ಕಾರ ಬಂಧನ ಮಾಡಬೇಕು. ಆದರೆ ಕೇಂದ್ರ ಸರ್ಕಾರ, ಪ್ರಧಾನಿ ಮೋದಿ, ಅಮಿತ್ ಶಾ ಅದಾನಿಯನ್ನ ರಕ್ಷಣೆ ಮಾಡುತ್ತಿದ್ದಾರೆ. ಈ ವಿಚಾರವನ್ನ ನಾವು ಸಂಸತ್ ಅಧಿವೇಶನದಲ್ಲಿ ಚರ್ಚೆ ಮಾಡುತ್ತೇವೆ. ಅದಾನಿ ಕಾನೂನು ಬಾಹಿರ ಕೆಲಸ ಮಾಡುತ್ತಿದ್ದಾರೆ. ಎಂದು ಅನೇಕ ವರ್ಷಗಳಿಂದ

‘ಅದಾನಿಯನ್ನು ಕೂಡಲೇ ಕೇಂದ್ರ ಸರ್ಕಾರ ಬಂಧನ ಮಾಡಬೇಕು’- ಖರ್ಗೆ ಆಗ್ರಹ Read More »

ಕರ್ನಾಟಕ

ಮಂಗಳೂರು: ಬಾಲಕಿಯ ಮೇಲೆ ಅತ್ಯಾಚಾರ; ಗರ್ಭಪಾತ ಮಾಡಿಸಿದ್ದ ವ್ಯಕ್ತಿಗೆ 20ವರ್ಷ ಶಿಕ್ಷೆ, ದಂಡ

(ನ್ಯೂಸ್ ಕಡಬ) newskadaba.comಮಂಗಳೂರು, ನ.22. ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿಯಾದ ಬೆಳ್ತಂಗಡಿ ಕಡಿರುದ್ಯಾವರ ಗ್ರಾಮದ ಕೊಪ್ಪದಗಂಡಿ ಮನೆಯ ಕೆ. ಸುಧೀರ್  ಎಂಬಾತನಿಗೆ 20 ವರ್ಷಗಳ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ಟಿಎಸ್‌ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಮಂಗಳೂರು: ಬಾಲಕಿಯ ಮೇಲೆ ಅತ್ಯಾಚಾರ; ಗರ್ಭಪಾತ ಮಾಡಿಸಿದ್ದ ವ್ಯಕ್ತಿಗೆ 20ವರ್ಷ ಶಿಕ್ಷೆ, ದಂಡ Read More »

ಕರಾವಳಿ

ಅಪರಾಧ ಹಿನ್ನೆಲೆಯಿರುವ ಅದಾನಿಯವರನ್ನು ಮೋದಿಯವರು ರಕ್ಷಿಸುವುದ್ಯಾಕೆ‌?: ಸಚಿವ ದಿನೇಶ್ ಗುಂಡೂರಾವ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.22. ಅದಾನಿ ಒಬ್ಬ ವೃತ್ತಿಪರ ಅಪರಾಧಿ ಎಂದು ಮತ್ತೊಮ್ಮೆ ಸಾಬೀತಾಗಿದೆ. ಇಂತಹ ಅಪರಾಧ ಹಿನ್ನೆಲೆಯಿರುವ ಅದಾನಿಯವರನ್ನು ಮೋದಿಯವರು ರಕ್ಷಿಸುವುದ್ಯಾಕೆ‌? ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಪ್ರಶ್ನೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಧಾನಿ ಮೋದಿಯವರ ಅತ್ಯಾಪ್ತ ಗೆಳೆಯ ಅದಾನಿ ಬಂಧನಕ್ಕೆ ಅಮೆರಿಕ ಕೋರ್ಟ್ ವಾರೆಂಟ್ ಹೊರಡಿಸಿದೆ. ಅದಾನಿ ಭಾರತದಲ್ಲಿ ತಮ್ಮ ಉದ್ಯಮ ವಿಸ್ತರಿಸಲು ಅಧಿಕಾರಿಗಳಿಗೆ ರೂ2100 ಕೋಟಿಗೂ ಅಧಿಕ ಲಂಚದ ಅಮಿಷ

ಅಪರಾಧ ಹಿನ್ನೆಲೆಯಿರುವ ಅದಾನಿಯವರನ್ನು ಮೋದಿಯವರು ರಕ್ಷಿಸುವುದ್ಯಾಕೆ‌?: ಸಚಿವ ದಿನೇಶ್ ಗುಂಡೂರಾವ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಯು.ಟಿ ಖಾದರ್ ನಿಂದ ಕಲಾಪರ್ಬ ದ ಲಾಂಛನ, ಕರಪತ್ರ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.22. ಶರಧಿ ಪ್ರತಿಷ್ಠಾನದ ವತಿಯಿಂದ ಜ.11 ಮತ್ತು 12 ರಂದು ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿ ನಡೆಯಲಿರುವ ‘ಕಲಾ ಪರ್ಬ’ದ ಲಾಂಛನ ಮತ್ತು ಕರಪತ್ರವನ್ನು ಬುಧವಾರ ನಗರದ ವಿಷ್ಣು ವೈಭವ ಹೊಟೇಲ್‌ನಲ್ಲಿ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ರವರು ಬಿಡುಗಡೆಗೊಳಿಸಿದರು. ಎಳೆಯ ಕಲಾವಿದರಿಗೆ ಸ್ಪೂರ್ತಿ ನೀಡಲು ‘ಕಲಾ ಪರ್ಬ’ ಆಯೋಜಿಸಿರುವುದು ಶ್ಲಾಘನೀಯ. ಕದ್ರಿ ಪಾರ್ಕ್‌ನ ಒಟ್ಟು ಅಭಿವೃದ್ದಿ ಹಾಗೂ ಪಾರ್ಕ್ನ ಒಳಗೆ ವಿವಿಧ ಕಲಾ ಚಟುವಟಿಕೆಗೆ ಅವಕಾಶ ಕಲ್ಪಿಸಲು 1 ಕೋಟಿ ರೂ. ಮೀಸಲಿಡುವ ಬಗ್ಗೆ

ಮಂಗಳೂರು: ಯು.ಟಿ ಖಾದರ್ ನಿಂದ ಕಲಾಪರ್ಬ ದ ಲಾಂಛನ, ಕರಪತ್ರ ಬಿಡುಗಡೆ Read More »

ಕರಾವಳಿ

ಇಂದು ಮತ್ತೆ ಚಿನ್ನದ ದರದಲ್ಲಿ ಏರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.22. ಚಿನ್ನದ ದರದಲ್ಲಿ ದಿನದಿಂದ ದಿನಕ್ಕೆ ಎರಿಕೆ ಕಾಣುತ್ತಿದ್ದು, ಇಂದು ಕೂಡ ಏರಿಕೆ ಕಂಡಿದೆ. ಇಂದು 22 ಕ್ಯಾರಟ್‌ ಚಿನ್ನದ ದರ  ತಲಾ 80 ರೂ.  ಮತ್ತು 24 ಕ್ಯಾರಟ್‌ ಚಿನ್ನದ ದರ ಮತ್ತು ತಲಾ 87 ರೂ. ಏರಿಕೆ ಆಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,225 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,882 ರೂ.ಗೆ ತಲುಪಿದೆ. 22

ಇಂದು ಮತ್ತೆ ಚಿನ್ನದ ದರದಲ್ಲಿ ಏರಿಕೆ Read More »

ಕರ್ನಾಟಕ

ಮೋದಿ ಸರ್ಕಾರದ ಮಹತ್ವದ ಹೆಜ್ಜೆ; ದೇಶದ ಮೊಟ್ಟ ಮೊದಲ ಹೈಡ್ರೋಜನ್ ಚಾಲಿತ ರೈಲಿನ ಸಂಚಾರಕ್ಕೆ ಸಜ್ಜು

(ನ್ಯೂಸ್ ಕಡಬ) newskadaba.com ನವದೆಹಲಿ, ನ.22. ಪುನಃ ಉತ್ಪಾದಿಸಬಹುದಾದ ಪರಿಸರಕ್ಕೆ ಹಿತಕರವಾಗಿರುವ ಇಂಧನದ ಅಳವಡಿಕೆಯಲ್ಲಿ ಕ್ರಾಂತಿಕಾರಿ ಹೆಜ್ಜೆ ಇರಿಸಿರುವ ಭಾರತೀಯ ರೈಲ್ವೆ, ಮುಂದಿನ ತಿಂಗಳು ದೇಶದ ಮೊಟ್ಟಮೊದಲ ಹೈಡ್ರೋಜನ್‌ ರೈಲಿನ ಪ್ರಾಯೋಗಿಕ ಸಂಚಾರಕ್ಕೆ ಸಜ್ಜಾಗಿದೆ. ಇದು ಮೋದಿ ಸರ್ಕಾರದ ಮಹತ್ವದ ಹೆಜ್ಜೆಯಾಗಿದ್ದು, ಡಿಸೆಂಬರ್‌ ತಿಂಗಳಲ್ಲಿ ಹರ್ಯಾಣದ ಜಿಂದ್‌ ಮತ್ತು ಸೋನಿಪತ್‌ ನಡುವಿನ 90 ಕಿ.ಮೀ. ಮಾರ್ಗದಲ್ಲಿ ಜಲಜನಕದಿಂದ ಸಂಚರಿಸುವ ರೈಲು ಪ್ರಾಯೋಗಿಕ ಸಂಚಾರ ನಡೆಸಲಿದೆ.ಈ ಯೋಜನೆಯು ಯಶಸ್ವಿಗೊಂಡಲ್ಲಿ ಮುಂದಿನ ವರ್ಷ ಒಟ್ಟು 35 ಹೈಡ್ರೋಜನ್‌ ರೈಲುಗಳನ್ನು ಓಡಿಸಲು

ಮೋದಿ ಸರ್ಕಾರದ ಮಹತ್ವದ ಹೆಜ್ಜೆ; ದೇಶದ ಮೊಟ್ಟ ಮೊದಲ ಹೈಡ್ರೋಜನ್ ಚಾಲಿತ ರೈಲಿನ ಸಂಚಾರಕ್ಕೆ ಸಜ್ಜು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top