News Kadaba

ಟ್ರಕ್‌- ಬಸ್ ಡಿಕ್ಕಿ : 5 ಮಂದಿ ಮೃತ್ಯು, 15 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಲಕ್ನೋ, ನ. 21. ಟ್ರಕ್‌ಗೆ ಹಿಂಬದಿಯಿಂದ ಡಬಲ್ ಡೆಕ್ಕರ್ ಬಸ್ ಡಿಕ್ಕಿ ಹೊಡೆದ ಪರಿಣಾಮ 5 ತಿಂಗಳ ಮಗು ಸೇರಿ ಐವರು ಮೃತಪಟ್ಟಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಅಲಿಘರ್‌ನ ಯಮುನಾ ಎಕ್ಸ್‌ ಪ್ರೆಸ್‌ ವೇಯಲ್ಲಿ ನಡೆದಿದೆ. ದೆಹಲಿಯಿಂದ ಅಜಂಗಢಕ್ಕೆ ತೆರಳುತ್ತಿದ್ದ ಬಸ್ ಹಿಂಬದಿಯಿಂದ ಟ್ರಕ್‌ಗೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಗುದ್ದಿದ ರಭಸಕ್ಕೆ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಪ್ರಯಾಣಿಕರು ಬಸ್ ಒಳಗೆ ಸಿಲುಕಿಕೊಂಡಿದ್ದಾರೆ. ಸ್ಥಳೀಯರು ಬಸ್ಸಿನ ಗಾಜುಗಳನ್ನು […]

ಟ್ರಕ್‌- ಬಸ್ ಡಿಕ್ಕಿ : 5 ಮಂದಿ ಮೃತ್ಯು, 15 ಮಂದಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮನೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ವಿಟ್ಲ, ನ. 21. ವ್ಯಕ್ತಿಯೋರ್ವರ ಶವ ಮನೆಯಲ್ಲಿ ಪತ್ತೆಯಾದ ಘಟನೆ ವಿಟ್ಲದ ಕನ್ಯಾನದ ಪಂಜಿಗದ್ದೆ ದೇಲಂತಬೆಟ್ಟು ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮನೆಯಲ್ಲಿ ಒಬ್ಬರೇ ವಾಸವಾಗಿದ್ದ ಮೌರಿಸ್ ಡಿಸೋಜಾ(61) ಎಂದು ಗುರುತಿಸಲಾಗಿದೆ. ಮೌರಿಸ್ ರವರು ಮನೆಯಲ್ಲಿ ಒಬ್ಬರೇ ವಾಸವಿದ್ದು ಕೆಲಸದವರು ಮೃತಪಟ್ಟಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಎರಡು ದಿನಗಳ ಹಿಂದೆಯೇ ಮೃತಪಟ್ಟಿದ್ದು ವಿಟ್ಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಸಾವಿನ ಕಾರಣದ ಬಗ್ಗೆ ತನಿಖೆ ನಡೆಸುತ್ತಿದ್ದು ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ

ಮನೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಭೂವಿಜ್ಞಾನ ಇಲಾಖೆ ಅಧಿಕಾರಿಯ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ದಾಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 21. ಬೆಳ್ಳಂಬೆಳಗ್ಗೆ ಅಧಿಕಾರಿಗಳ ಮನೆ ಹಾಗೂ ಕಚೇರಿಗಳಿಗ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಇಂದು ಬೆಳಿಗ್ಗೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್ ಪಿ ನಟರಾಜ್ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಮೂರು ವಾಹನಗಳಲ್ಲಿ ಆಗಮಿಸಿ ಕಚೇರಿ ಮತ್ತು ಮನೆ ಮೇಲೆ ದಾಳಿ ನಡೆಸಿದೆ. ಮನೆ, ಕಚೇರಿ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ ಅಧಿಕಾರಿಗಳ

ಭೂವಿಜ್ಞಾನ ಇಲಾಖೆ ಅಧಿಕಾರಿಯ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ದಾಳಿ Read More »

ಕರಾವಳಿ, ಕ್ರೈಮ್ ನ್ಯೂಸ್

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 21. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ (80) ನಿಧನರಾಗಿದ್ದಾರೆ. ಹಾನಗಲ್ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಮನೋಹರ್ ತಹಶೀಲ್ದಾರ್ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಶಂಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. 2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಇವರು 2023ರ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಇಂದು

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ನಿಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಚಿನ್ನಾಭರಣ ಕಳವು: ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ನ. 21. ಹೋಮ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಮನೆಯಿಂದ 31,17,100 ರೂ.ಮೌಲ್ಯದ ಚಿನ್ನಾಭರಣ ಹಾಗೂ ವಜ್ರಾಭರಣಗಳನ್ನು ಕಳವು ಮಾಡಿದ್ದ ಹೋಮ್ ನರ್ಸ್ ಒಬ್ಬರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ನವೆಂಬರ್ 19 ರಂದು ಕೊಪ್ಪಳ ಜಿಲ್ಲೆ ಕುಸ್ತಗಿ ತಾಲೂಕಿನ ನಿವಾಸಿ ಸಿದ್ದಪ್ಪ ಕೆ ಕೋಡ್ಲಿ (23) ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಹೆಚ್ಚಿನ ತನಿಖೆಯ ನಂತರ, ತಂಡವು 374.45 ಗ್ರಾಂ ಚಿನ್ನ, ಬೆಳ್ಳಿ ಮತ್ತು ವಜ್ರದ ಆಭರಣಗಳು ಸೇರಿದಂತೆ ಅಂದಾಜು 30,00,000 ರೂ

ಚಿನ್ನಾಭರಣ ಕಳವು: ಆರೋಪಿ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಎನ್ಕೌಂಟರ್ ಗೆ ಬಲಿಯಾದ ನಕ್ಸಲ್‌ ನಾಯಕ ವಿಕ್ರಂ ಗೌಡನ  ಹುಟ್ಟೂರಿನಲ್ಲಿ ಅಂತ್ಯ ಸಂಸ್ಕಾರ

(ನ್ಯೂಸ್ ಕಡಬ) newskadaba.com ಕಾರ್ಕಳ, ನ. 21. ನಕ್ಸಲ್ ನಿಗ್ರಹ ದಳ ನಡೆಸಿದ ಎನ್ಕೌಂಟರ್ ಗೆ ಸೋಮವಾರದಂದು ಬಲಿಯಾದ ಮಾವೋವಾದಿ ನಾಯಕ ವಿಕ್ರಂ ಗೌಡನ ಅಂತ್ಯ ಸಂಸ್ಕಾರವನ್ನು ಆತನ‌ ಹುಟ್ಟೂರು ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಕೂಡ್ಲುವಿನ ಮೈರೋಳಿ ಎಂಬಲ್ಲಿ  ನೆರವೇರಿಸಲಾಯಿತು. ವಿಕ್ರಮ್ ಗೌಡನ ಸಹೋದರ ಸುರೇಶ್ ಅಂತ್ಯ ಸಂಸ್ಕಾರದ ವಿಧಿವಿಧಾನಗಳನ್ನು ನೆರವೇರಿಸಿದರು. ಸಹೋದರಿ ಸುಗುಣ ಹಾಗೂ ಸ್ಥಳೀಯರು, ಸ್ವಬಂಧುಗಳು ಅಂತ್ಯ ಸಂಸ್ಕಾರ ಸಂದರ್ಭದಲ್ಲಿ ಪಾಲ್ಗೊಂಡರು. ಹೆಚ್ಚುವರಿ ಎಸ್ಪಿ ಸಿದ್ದಲಿಂಗಪ್ಪ ಮಾರ್ಗದರ್ಶನದಲ್ಲಿ ಎ ಎನ್ ಎಫ್ ಪಡೆ ಹಾಗೂ

ಎನ್ಕೌಂಟರ್ ಗೆ ಬಲಿಯಾದ ನಕ್ಸಲ್‌ ನಾಯಕ ವಿಕ್ರಂ ಗೌಡನ  ಹುಟ್ಟೂರಿನಲ್ಲಿ ಅಂತ್ಯ ಸಂಸ್ಕಾರ Read More »

ಕರಾವಳಿ, ಕ್ರೈಮ್ ನ್ಯೂಸ್

ದ.ಕ ಕಾರ್ಯನಿರತ ಪತ್ರಕರ್ತರ ಸಂಘದ 5ನೆ ಜಿಲ್ಲಾ ಸಮ್ಮೇಳನದ ಲಾಂಛನ ಬಿಡುಗಡೆ

(ನ್ಯೂಸ್ ಕಡಬ) newskadaba.com ಪುತ್ತೂರು, ನ. 21. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 5ನೇ ಜಿಲ್ಲಾ ಸಮ್ಮೇಳನದ ಲಾಂಛನವನ್ನು ನ.20ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಮತ್ತು ರಾಜ್ಯ ಸಭಾ ಸದಸ್ಯ ಡಾ.ಡಿ. ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿ, ಕಾರ್ಯಕ್ರಮದ ಯಶಸ್ವಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಧರ್ಮೋತ್ಥಾನ ಟ್ರಸ್ಟ್ ಕಾರ್ಯದರ್ಶಿ ಎ. ವಿ ಶೆಟ್ಟಿ, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ

ದ.ಕ ಕಾರ್ಯನಿರತ ಪತ್ರಕರ್ತರ ಸಂಘದ 5ನೆ ಜಿಲ್ಲಾ ಸಮ್ಮೇಳನದ ಲಾಂಛನ ಬಿಡುಗಡೆ Read More »

ಕರಾವಳಿ

ಮಹಾರಾಷ್ಟ್ರ ಚುನಾವಣೆ: ಮೊದಲ ಬಾರಿಗೆ EVM ನಲ್ಲಿ ಕನ್ನಡ ಭಾಷೆಯಲ್ಲಿ ಅಭ್ಯರ್ಥಿಗಳ ಹೆಸರು

(ನ್ಯೂಸ್ ಕಡಬ) newskadaba.com ಬೆಳಗಾವಿ, ನ.21. ಬೆಳಗಾವಿಯ ಕರ್ನಾಟಕ-ಮಹಾರಾಷ್ಟ್ರ ಗಡಿ ಗ್ರಾಮಗಳ ಉದ್ದಕ್ಕೂ ಮರಾಠಿ ಭಾಷಿಗರನ್ನು ಓಲೈಸಲು ಮಹಾರಾಷ್ಟ್ರದ ರಾಜಕೀಯ ನಾಯಕರು ಚುನಾವಣೆಯ ಸಮಯದಲ್ಲಿ ಭಾಷೆ ಮತ್ತು ಗಡಿ ವಿಷಯಗಳನ್ನು ಮತ್ತೆ ಮತ್ತೆ ತರುತ್ತಾರೆ. ಆದರೆ ಮಹಾರಾಷ್ಟ್ರದ ಗಡಿ ಗ್ರಾಮಗಳಲ್ಲಿ ಲಕ್ಷಾಂತರ ಮಂದಿ ಕನ್ನಡ ಮಾತನಾಡುವವರಿದ್ದಾರೆ, ಅವರ ಧ್ವನಿಯನ್ನು ದಶಕಗಳಿಂದ ಹತ್ತಿಕ್ಕಲಾಗಿದೆ. ಇದೀಗ ಮೊದಲ ಬಾರಿಗೆ ಮಹಾರಾಷ್ಟ್ರದ ಚುನಾವಣಾ ಆಯೋಗವು ನೆರೆಯ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಲ್ಲಿ ಇವಿಎಂ ಯಂತ್ರಗಳಲ್ಲಿ ಕನ್ನಡ ಹಾಗೂ ಮರಾಠಿಯಲ್ಲಿ ಅಭ್ಯರ್ಥಿಗಳ ಹೆಸರನ್ನು

ಮಹಾರಾಷ್ಟ್ರ ಚುನಾವಣೆ: ಮೊದಲ ಬಾರಿಗೆ EVM ನಲ್ಲಿ ಕನ್ನಡ ಭಾಷೆಯಲ್ಲಿ ಅಭ್ಯರ್ಥಿಗಳ ಹೆಸರು Read More »

ಬ್ರೇಕಿಂಗ್ ನ್ಯೂಸ್

ಹೆಜ್ಜೇನು ದಾಳಿಗೆ ಇಬ್ಬರ ಸ್ಥಿತಿ ಗಂಭೀರ

(ನ್ಯೂಸ್ ಕಡಬ) newskadaba.com ಕೋಟ, ನ. 21. ಇಲ್ಲಿನ ಕೋಟತಟ್ಟು ಗ್ರಾಮಪಂಚಾಯತ್ ವ್ಯಾಪ್ತಿಯ ಕೋಟತಟ್ಟು ಪರಿಸರದಲ್ಲಿ ಹೆಜ್ಜೇನು ದಾಳಿಗೆ ಇಬ್ಬರ ಸ್ಥಿತಿ ಗಂಭೀರ ಘಟನೆ ನಡೆದಿದೆ. ಕೋಟತಟ್ಟು ಗ್ರಾ.ಪಂ ಉಪಾಧ್ಯಕ್ಷೆ ಸರಸ್ವತಿ ಹಾಗೂ ಪುತ್ರಿ ಸೌಜನ್ಯ ಇವರು ದಾಳಿಗೆ ತುತ್ತಾದವರು. ಗುರುವಾರ ಮುಂಜಾನೆ ಇಬ್ಬರು ತನ್ನ ಮೂಲ ನಾಗಬನಕ್ಕೆ ಪ್ರಾರ್ಥನೆ ಸಲ್ಲಿಸಲು ತೆರಳಿದ್ದರು. ಈ ಸಂದರ್ಭದಲ್ಲಿ ಹೆಜ್ಜೇನು ಪೂರ್ಣಪ್ರಮಾಣದಲ್ಲಿ ದಾಳಿಗೈದಿದ್ದು ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ಮತ್ತಿತರ ಸ್ಥಳೀಯರು ಧಾವಿಸಿ ಜೀವದ ಹಂಗು

ಹೆಜ್ಜೇನು ದಾಳಿಗೆ ಇಬ್ಬರ ಸ್ಥಿತಿ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

(ನ್ಯೂಸ್ ಕಡಬ) newskadaba.com ಕಡಬ, ನ.21. ಮಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಗುರುವಾರದಂದು ಬೆಳಿಗ್ಗೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್ ಪಿ ನಟರಾಜ್ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಮೂರು ವಾಹನಗಳಲ್ಲಿ ಆಗಮಿಸಿ ಕಚೇರಿ ಮತ್ತು ಮನೆ ಮೇಲೆ ದಾಳಿ ನಡೆಸಿದೆ. ಮನೆ, ಕಚೇರಿ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ ಅಧಿಕಾರಿಗಳ ತಂಡ ಮಂಗಳೂರಿನ ವೆಲೆನ್ಸಿಯಾದಲ್ಲಿರುವ ಮನೆಗೆ ಹಾಗೂ ನಗರದ ಮಲ್ಲಿಕಟ್ಟೆಯಲ್ಲಿರುವ ಕಚೇರಿ ಮೇಲೆ ದಾಳಿ

ಮಂಗಳೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ Read More »

ಕರಾವಳಿ, ಕರ್ನಾಟಕ
Scroll to Top