News Kadaba

ಮಸ್ಕ್‌ ನ ಸ್ಪೇಸ್‌ಎಕ್ಸ್ ರಾಕೆಟ್‌ನಲ್ಲಿ ಭಾರತೀಯ ಉಪಗ್ರಹ ಉಡಾವಣೆ ಯಶಸ್ವಿ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ನ. 20. ಇದೇ ಮೊದಲ ಬಾರಿಗೆ ಇಸ್ರೋ ಸಂಸ್ಥೆ ವಿಶ್ವದ ಶ್ರೀಮಂತ ಉದ್ಯಮಿ ಎಲೋನ್‌ ಮಸ್ಕ್‌ ಮಾಲೀಕತ್ವದ ಸ್ಪೇಸ್‌ಎಕ್ಸ್‌ ಕಂಪನಿಯ ರಾಕೆಟ್‌ ಬಳಸಿ ಉಪಗ್ರಹವನ್ನು ಕಕ್ಷೆಗೆ ಸೇರಿಸಿ ಯಶಸ್ಸಿಯಾಗಿದೆ. ಇಸ್ರೋದ ಜಿಸ್ಯಾಟ್‌ -20 ಸಂವಹನ ಉಪಗ್ರಹವನ್ನು ಹೊತ್ತುಕೊಂಡಿದ್ದ ಸ್ಪೇಸ್‌ಎಕ್ಸ್‌ ನ ಫಾಲ್ಕನ್ 9 ರಾಕೆಟ್ ಭಾರತೀಯ ಕಾಲಮಾನ ಸೋಮವಾರ ರಾತ್ರಿ 23:45ಕ್ಕೆ ಅಮೆರಿಕದ ಫ್ಲೋರಿಡಾ ರಾಜ್ಯದ ಕೇಪ್ ಕೆನವೆರಲ್‌ ಉಡಾವಣಾ ಕೇಂದ್ರದಿಂದ ಉಡಾವಣೆಗೊಂಡಿದೆ. 34 ನಿಮಿಷದಲ್ಲಿ ರಾಕೆಟ್‌ ಉಪಗ್ರಹವನ್ನು ಕಕ್ಷೆಗೆ ಯಶಸ್ವಿಯಾಗಿ […]

ಮಸ್ಕ್‌ ನ ಸ್ಪೇಸ್‌ಎಕ್ಸ್ ರಾಕೆಟ್‌ನಲ್ಲಿ ಭಾರತೀಯ ಉಪಗ್ರಹ ಉಡಾವಣೆ ಯಶಸ್ವಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ದೆಹಲಿ ವಾಯುಮಾಲಿನ್ಯ: ಆಸ್ಪತ್ರೆಗಳಲ್ಲಿ ಉಸಿರಾಟದ ಸಮಸ್ಯೆ ರೋಗಿಗಳು ಹೆಚ್ಚಳ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 20. ದೆಹಲಿ ಹಾಗೂ ಸುತ್ತಮುತ್ತ ವಾಯುಗುಣಮಟ್ಟದ ಹದಗೆಡುವಿಕೆ ಮುಂದುವರೆದಿದ್ದು ರೈಲು, ವಿಮಾನ ಸಂಚಾರ ಹಾಗೂ ಸಾಮಾನ್ಯ ಜನಜೀವನ ಅಸ್ತವ್ಯಸ್ತವಾಗಿದೆ. ಸಾಲದ್ದಕ್ಕೆ ಜನರ ಉಸಿರಾಟಕ್ಕೂ ಸಮಸ್ಯೆ ಆಗುತ್ತಿದ್ದು, ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆಗೆ ಬರುವವರ ಸಂಖ್ಯೆ ಶೇ.300ರಷ್ಟು ಏರಿದೆ. ದಿಲ್ಲಿಯ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯುಐ) ಅತಿ ಗಂಭೀರ ಎಂದು ಪರಿಗಣಿಸಲಾಗುವ 488 ಅಂಕ ತಲುಪಿದೆ. ಈ ಪೈಕಿ ದಿಲ್ಲಿಯ ಅಲಿಪುರ ಹಾಗೂ ಸೋನಿಯಾ ವಿಹಾರ ಪ್ರದೇಶದಲ್ಲಿ 500 ಅಂಕ ದಾಖಲಾಗಿದೆ.

ದೆಹಲಿ ವಾಯುಮಾಲಿನ್ಯ: ಆಸ್ಪತ್ರೆಗಳಲ್ಲಿ ಉಸಿರಾಟದ ಸಮಸ್ಯೆ ರೋಗಿಗಳು ಹೆಚ್ಚಳ Read More »

ರಾಷ್ಟ್ರೀಯ ನ್ಯೂಸ್

ಇಟಲಿ ಪ್ರಧಾನಿ ಮೆಲೋನಿಯವರನ್ನು ಭೇಟಿಯಾದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ಬ್ರೆಜಿಲ್, ನ. 14. ಇಟಲಿ ಪ್ರಧಾನಿ ಮೆಲೋನಿಯವರನ್ನು ಬ್ರೆಜಿಲ್​ನಲ್ಲಿ ನಡೆದ ಜಿ-20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭೇಟಿಯಾದರು. ಈ ವೇಳೆ ಬ್ರೆಜಿಲ್, ಸಿಂಗಾಪುರ, ಬ್ರಿಟನ್, ಇಟಲಿ, ಫ್ರಾನ್ಸ್, ಇಂಡೋನೇಷ್ಯಾ ಸೇರಿದಂತೆ ಹಲವು ಜಾಗತಿಕ ನಾಯಕರ ಜತೆ ಮಾತುಕತೆ ನಡೆಸಿದರು. ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ಪ್ರಧಾನಿ ಮೋದಿ ದ್ವಿಪಕ್ಷೀಯ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಉಭಯ ದೇಶಗಳ ನಡುವಿನ ರಕ್ಷಣೆ, ಭದ್ರತೆ ಮತ್ತಿತರ ಸಂಬಂಧಗಳ ಬಲವರ್ಧನೆ ಕುರಿತು ಚರ್ಚಿಸಲಾಯಿತು. ಬ್ರೆಜಿಲ್‌ನಲ್ಲಿ

ಇಟಲಿ ಪ್ರಧಾನಿ ಮೆಲೋನಿಯವರನ್ನು ಭೇಟಿಯಾದ ಪ್ರಧಾನಿ ಮೋದಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ತಿರುಪತಿ ಭಕ್ತರಿಗೊಂದು ಸಿಹಿಸುದ್ದಿ- ಇನ್ನು ಮುಂದೆ 3 ಗಂಟೆಗಳಲ್ಲಿ ತಿಮ್ಮಪ್ಪನ ದರ್ಶನ ಭಾಗ್ಯ

(ನ್ಯೂಸ್ ಕಡಬ) newskadaba.com ಚೆನ್ನೈ, ನ. 14. ತಿರುಪತಿ ದೇವಸ್ಥಾನದಲ್ಲಿ ಭಕ್ತರು ದಿನಗಟ್ಟಲೆ ತಿಮ್ಮಪ್ಪನ ದರ್ಶನಕ್ಕಾಗಿ ಕಾದು ಕುಳಿತುಕೊಳ್ಳುವ ಅಗತ್ಯವಿಲ್ಲ. ಇನ್ನು ಮುಂದೆ ಮೂರು ಗಂಟೆಗಳನ್ನೇ ದರ್ಶನ ಮಾಡುವ ವ್ಯವಸ್ಥೆಗೆ ಸರ್ಕಾರ ಮುಂದಾಗಿದೆ. ಆಂಧ್ರಪ್ರದೇಶದ ತಿರುಮಲದಲ್ಲಿರುವ ತಿರುಪತಿ ದೇವಸ್ಥಾನದಲ್ಲಿ ದರ್ಶನ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗುತ್ತಿದೆ. ಭಕ್ತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಿರುಮಲ ತಿರುಪತಿ ದೇವಸ್ಥಾನ ಮಂಡಳಿಯು ಕೃತಕ ಬುದ್ಧಿಮತ್ತೆ ಮತ್ತು ಅತ್ಯಾಧುನಿಕ ತಂತ್ರಜ್ಞಾನದ ಸಹಾಯದಿಂದ ಹೊಸ ದರ್ಶನ ವ್ಯವಸ್ಥೆಯನ್ನು ಮಾಡಲು ನಿರ್ಧರಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಹೊಸ ವ್ಯವಸ್ಥೆಯಲ್ಲಿ

ತಿರುಪತಿ ಭಕ್ತರಿಗೊಂದು ಸಿಹಿಸುದ್ದಿ- ಇನ್ನು ಮುಂದೆ 3 ಗಂಟೆಗಳಲ್ಲಿ ತಿಮ್ಮಪ್ಪನ ದರ್ಶನ ಭಾಗ್ಯ Read More »

ಕರ್ನಾಟಕ

ಪಾಕ್ ವಶದಲ್ಲಿದ್ದ 7 ಭಾರತೀಯ ಮೀನುಗಾರರನ್ನು ಕರಾವಳಿ ಕಾವಲು ಪಡೆ ರಕ್ಷಣೆ

(ನ್ಯೂಸ್ ಕಡಬ) newskadaba.com ಗಾಂಧಿನಗರ, ನ. 14. ಭಾರತ – ಪಾಕಿಸ್ತಾನ ಸಮುದ್ರ ಗಡಿಯ ಮಧ್ಯೆ ಪಾಕಿಸ್ತಾನ ಕರಾವಳಿ ಭದ್ರತಾ ಏಜೆನ್ಸಿ ವಶದಲ್ಲಿದ್ದ ಏಳು ಭಾರತೀಯ ಮೀನುಗಾರರನ್ನು ಗುಜರಾತ್ ಕರಾವಳಿ ಕಾವಲು ಪಡೆ ರಕ್ಷಣೆ ಮಾಡಿದೆ. ನ. 18ರ ಮಧ್ಯಾಹ್ನ 3:30ರ ಸುಮಾರಿಗೆ ಮೀನುಗಾರಿಕೆ ರಹಿತ ಪ್ರದೇಶದಲ್ಲಿ ಭಾರತೀಯ ಮೀನುಗಾರರ ದೋಣಿ ಕಂಡಿದ್ದು, ಬಳಿಕ ಇನ್ನೊಂದು ದೋಣಿ ‘ಕಾಲ್ ಭೈರವ್’ ಅನ್ನು ಪಾಕಿಸ್ತಾನ ಕಡಲ ಭದ್ರತಾ ಸಂಸ್ಥೆ ತಡೆಹಿಡಿದಿದೆ. ಜೊತೆಗೆ ಆ ಹಡಗಿನಲ್ಲಿ 7 ಮೀನುಗಾರರು ಇರುವುದಾಗಿ

ಪಾಕ್ ವಶದಲ್ಲಿದ್ದ 7 ಭಾರತೀಯ ಮೀನುಗಾರರನ್ನು ಕರಾವಳಿ ಕಾವಲು ಪಡೆ ರಕ್ಷಣೆ Read More »

ರಾಷ್ಟ್ರೀಯ ನ್ಯೂಸ್

ಹಿರಿಯ ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ. 19. ಹಿರಿಯ ಪತ್ರಕರ್ತ ಭುವನೇಂದ್ರ ಪುದುವೆಟ್ಟು (42)ರವರು ಇಂದು ಕೊನೆಯುಸಿರೆಳೆದಿದ್ದಾರೆ. ಪುಡುವೆಟ್ಟು ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ವೇಳೆ ಪಿತ್ತಕೋಶದಲ್ಲಿ ಕಲ್ಲು ಇರುವುದರಿಂದ ಅಕ್ಯುಟ್ ಪ್ರಾಂಕಿಯಾಸಿಸ್ ಇರುವುದು ಗೊತ್ತಾಗಿತ್ತು. ತಕ್ಷಣ ಅವರನ್ನು ಮಂಗಳೂರು ಅತ್ತಾವರದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ

ಹಿರಿಯ ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ಇಬ್ಬರು ಪಾದಚಾರಿಗಳಿಗೆ ಗಾಯ

(ನ್ಯೂಸ್ ಕಡಬ) newskadaba.com ಉಡುಪಿ, ನ. 19. ರಾಷ್ಟ್ರೀಯ ಹೆದ್ದಾರಿ 66ರ ಸಂತೆಕಟ್ಟೆಯಲ್ಲಿ 2024ರ ನ.17ರಂದು ಎರಡು ಪ್ರತ್ಯೇಕ ರಸ್ತೆ ಅಪಘಾತಗಳು ನಡೆದಿದ್ದು, ಪಾದಚಾರಿಗಳಿಗೆ ಗಾಯಗೊಂಡ ಘಟನೆ ನಡೆದಿದೆ. ಪುತ್ತೂರು ಗ್ರಾಮದ ಆಶೀರ್ವಾದದ ಬಳಿ ಸಂತೆಕಟ್ಟೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬಸ್ಸನ್ನು ಚಾಲಕ ಅಜಾಗರೂಕತೆಯಿಂದ ಮತ್ತು ನಿರ್ಲಕ್ಷ್ಯತನದಿಂದ ಚಲಾಯಿಸಿ ರಸ್ತೆ ಬದಿ ನಿಂತಿದ್ದ ಬಾಗಲಕೋಟೆ ಜಿಲ್ಲೆಯ ಜೈನಬಿ ನದಾಫ್ (27) ಎಂಬ ಪಾದಚಾರಿಗೆ ಡಿಕ್ಕಿ ಹೊಡೆದಿದ್ದಾನೆ. ಜೈನಬಿಯ ಎಡಗೈ ಮತ್ತು ಕೆನ್ನೆಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಉಡುಪಿಯ ಆದರ್ಶ

ರಸ್ತೆ ಅಪಘಾತ: ಇಬ್ಬರು ಪಾದಚಾರಿಗಳಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ

(ನ್ಯೂಸ್ ಕಡಬ) newskadaba.com ಮಣಿಪಾಲ, ನ. 19. ಮಣಿಪಾಲ ಸರಳಬೆಟ್ಟು ಬಾಲಮಿತ್ರ ಯಕ್ಷಗಾನ ಮಂಡಳಿಯ ಸಂಚಾಲಕ, ಆರ್ಯಭಟ ಪ್ರಶಸ್ತಿ ಪುರಸ್ಕೃತ ರಾದ ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನರಾಗಿದ್ದಾರೆ. ಯಕ್ಷಗಾನ ಕಲೆಯನ್ನು ವಿದ್ಯಾರ್ಥಿಗಳಲ್ಲಿ ಬಾಲ ಪ್ರತಿಭೆಗಳನ್ನುರೂಪಿಸಿವಲ್ಲಿ ಬಾಲ ಮಿತ್ರ ಯಕ್ಷಗಾನ ಮಂಡಳಿ ಮಣಿಪಾಲದ ಸರಳ ಬೆಟ್ಟು ವಿನಲ್ಲಿ ಸ್ಥಾಪಿಸಿದ್ದರು. ಅಂತರಾಷ್ಟ್ರೀಯ ಮಟ್ಟದಲ್ಲಿ ಸೌತ್ ಆಫ್ರಿಕಾ, ದುಬೈ, ಮೊದಲಾದ ದೇಶಗಳಲ್ಲಿ ಯಕ್ಷಗಾನ ಪ್ರದರ್ಶನ ನೀಡಿದ್ದರು . ದೆಹಲಿ, ಮುಂಬೈ ,ಬೆಂಗಳೂರು, ಮೊದಲಾದ ಕಡೆಯಲ್ಲಿಯೂ ಮಕ್ಕಳ ಯಕ್ಷಗಾನದ ಪ್ರದರ್ಶನ

ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕರ್ನಾಟಕದ ಮೊದಲ ಸ್ಲೀಪರ್ ‘ವಂದೇ ಭಾರತ್’ ರೈಲು ಆರಂಭ

(ನ್ಯೂಸ್ ಕಡಬ) newskadaba.com ನ. 19. ಕೇಂದ್ರ ಸರ್ಕಾರ ರಾಜ್ಯದ ಜನತೆಗೆ ಮತ್ತೊಂದು ಗುಡ್‌ ನ್ಯೂಸ್‌ ನೀಡಿದೆ. ಕರ್ನಾಟಕದ ಮೊದಲ ʼವಂದೇ ಭಾರತ್ʼ ಸ್ಲೀಪರ್ ರೈಲು ಆರಂಭಕ್ಕೆ ಸಿದ್ದತೆ ನಡೆದಿದ್ದು, ಮುಂದಿನ ತಿಂಗಳಿನಿಂದ ಈ ರೈಲು ಸಂಚಾರ ನಡೆಸಲಿದೆ. ಈ ಹೊಸ ಸೇವೆಯು ಬೆಂಗಳೂರು ಮತ್ತು ಬೆಳಗಾವಿಯನ್ನು ಸಂಪರ್ಕಿಸಲಿದ್ದು, ಪ್ರಯಾಣಿಕರಿಗೆ ವೇಗ ಮತ್ತು ಹೆಚ್ಚು ಆರಾಮದಾಯಕ ಪ್ರಯಾಣದ ಆಯ್ಕೆಯನ್ನು ನೀಡುತ್ತದೆ. ಕೇಂದ್ರ ಸಚಿವ ವಿ. ಸೋಮಣ್ಣ ಅವರು ಮುಂದಿನ ತಿಂಗಳು ರೈಲು ಸಂಚಾರ ಆರಂಭಿಸಲಿದೆ ಎಂದು ಘೋಷಿಸಿದ್ದು,

ಕರ್ನಾಟಕದ ಮೊದಲ ಸ್ಲೀಪರ್ ‘ವಂದೇ ಭಾರತ್’ ರೈಲು ಆರಂಭ Read More »

ಕರ್ನಾಟಕ

ಅನರ್ಹ ಬಿಪಿಎಲ್‌ ಕಾರ್ಡುದಾರರಿಗೆ ಬಿಗ್‌ ಶಾಕ್‌..! 14 ಲಕ್ಷ BPL ಕಾರ್ಡ್‌ ಶೀಘ್ರವೇ ರದ್ದು..!

(ನ್ಯೂಸ್ ಕಡಬ) newskadaba.com ನ. 19. ರಾಜ್ಯ ಸರ್ಕಾರ ಇಂದಿನಿಂದ ‘ಆಪರೇಷನ್ ರೇಷನ್ ಕಾರ್ಡ್’ ಶುರುಮಾಡಿದೆ. ಅನರ್ಹ ಫಲಾನುಭವಿಗಳ ರೇಷನ್ ಕಾರ್ಡ್ ಕ್ಯಾನ್ಸಲ್ ಮಾಡಲು ಮುಂದಾಗಿದೆ. ನೆರೆಯ ತಮಿಳುನಾಡು, ಆಂಧ್ರ ಮತ್ತು ತೆಲಂಗಾಣದಲ್ಲಿ ಸುಮಾರು ಶೇಕಡಾ 50ರಷ್ಟು ಜನ ರೇಷನ್ ಕಾರ್ಡ್ ವ್ಯಾಪ್ತಿಗೆ ಸೇರಿದ್ದಾರೆ. ಆದರೆ ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇಕಡಾ 80ರಷ್ಟು  ರೇಷನ್ ಕಾರ್ಡ್ ವ್ಯಾಪ್ತಿಯಲ್ಲಿ ಇದ್ದಾರೆ. ವಾಸ್ತವ ಏನು ಎಂದರೆ ನಿಜಕ್ಕೂ ರಾಜ್ಯದ ಶೇಕಡಾ 80ರಷ್ಟು ಜನ ಬಡತನ ರೇಖೆಗಿಂತ ಕೆಳಗೆ ಇಲ್ಲ. ತುಂಬಾ

ಅನರ್ಹ ಬಿಪಿಎಲ್‌ ಕಾರ್ಡುದಾರರಿಗೆ ಬಿಗ್‌ ಶಾಕ್‌..! 14 ಲಕ್ಷ BPL ಕಾರ್ಡ್‌ ಶೀಘ್ರವೇ ರದ್ದು..! Read More »

ಕರ್ನಾಟಕ
Scroll to Top