News Kadaba

”ಭಾರತ್ ಗ್ಲೋಬಲ್ ಕಲ್ಚರಲ್ ಎಕ್ಸ್ಪೊ” ಲೋಗೋ ಅನಾವರಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 18. ದೇಶ ವಿದೇಶಗಳ ಸಂಸ್ಕೃತಿಯನ್ನು ಪ್ರತಿನಿಧಿಸುವ ’ಭಾರತ್ ಗ್ಲೋಬಲ್ ಕಲ್ಚರಲ್ ಎಕ್ಸ್‌ಪೋ ’ದ ಲೋಗೋವನ್ನು ಸುಪ್ರೀಂ ಕೋರ್ಟ್ ಹಾಗೂ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿಗಳಾದ ಸಂತೋಷ ಹೆಗಡೆ ಅನಾವರಣ ಮಾಡಿದರು.ಮಿರಾಯ ಇವೆಂಟ್ಸ್ ಪ್ರೈವೇಟ್ ಲಿಮಿಟೆಡ್ ಇವರ ವತಿಯಿಂದ ಹಾಗು ಕರ್ನಾಟಕದ ಸರ್ಕಾರದ ಪ್ರವಾಸೋದ್ಯಮ ಇಲಾಖೆ ಇವರ ಸಹಯೋಗದೊಂದಿಗೆ ’ಭಾರತ್ ಗ್ಲೋಬಲ್ ಕಲ್ಚರಲ್ ಎಕ್ಸ್ಪೋ ’ ಎನ್ನುವ ಶೀರ್ಷಿಕೆಯನ್ನು ಹೊಂದಿರುವ ವಿನೂತನ ಕಾರ್ಯಕ್ರಮ ೨೦೨೫ರ ಏಪ್ರಿಲ್ ೯ ರಿಂದ ೧೪ರವರೆಗೆ ಬೆಂಗಳೂರಿನ ಅರಮನೆ […]

”ಭಾರತ್ ಗ್ಲೋಬಲ್ ಕಲ್ಚರಲ್ ಎಕ್ಸ್ಪೊ” ಲೋಗೋ ಅನಾವರಣ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ರಷ್ಯಾ ವಿರುದ್ಧ ಯುದ್ಧ ನಡೆಸುವಂತೆ ಉಕ್ರೇನ್‌ ಗೆ ಅಮೆರಿಕದ ಅಧ್ಯಕ್ಷ ಅನುಮತಿ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ನ. 18. ರಷ್ಯಾ ವಿರುದ್ಧ ಯುದ್ಧ ನಡೆಸುವಂತೆ ಉಕ್ರೇನ್‌ಗೆ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ಅನುಮತಿ ನೀಡಿದ್ದಾರೆ ಎಂದು ವರದಿಯಾಗಿದೆ. ಈ ಹಿಂದೆ ಅಮೆರಿಕ ಉಕ್ರೇನ್‌ಗೆ ದೂರ ಸಾಗಬಲ್ಲ ಕ್ಷಿಪಣಿಯನ್ನು ನೀಡಿತ್ತು. ಆದರೆ ಈ ಕ್ಷಿಪಣಿಯನ್ನು ಬಳಸದಂತೆ ನಿಬ ನಿರ್ಬಂಧಿಸಿತ್ತು. ಎರಡು ತಿಂಗಳು ಅಧಿಕಾರದಲ್ಲಿರುವ ಜೋ ಬೈಡೆನ್ ಅವರು ತಮ್ಮ ಅಧಿಕಾರದ ಕೊನೆ ಅವಧಿಯಲ್ಲಿ ಕ್ಷಿಪಣಿಗೆ ವಿಧಿಸಿದ್ದ ನಿರ್ಬಂಧವನ್ನು ತೆಗೆದುಹಾಕಿದ್ದಾರೆ. ಮುಂಬರುವ ದಿನಗಳಲ್ಲಿ ಉಕ್ರೇನ್ ತನ್ನ ಮೊದಲ ದೀರ್ಘ-ಶ್ರೇಣಿಯ ದಾಳಿಯನ್ನು

ರಷ್ಯಾ ವಿರುದ್ಧ ಯುದ್ಧ ನಡೆಸುವಂತೆ ಉಕ್ರೇನ್‌ ಗೆ ಅಮೆರಿಕದ ಅಧ್ಯಕ್ಷ ಅನುಮತಿ Read More »

ಅಂತರ್ರಾಷ್ಟ್ರೀಯ ನ್ಯೂಸ್

31 ಲಕ್ಷಕ್ಕೂ ಹೆಚ್ಚು ಮೌಲ್ಯದ ಬೆಳೆಬಾಳುವ ಕದ್ದ ಹೋಂನರ್ಸ್

(ನ್ಯೂಸ್ ಕಡಬ) newskadaba.com ಉಡುಪಿ, ನ. 18. ವೃದ್ಧೆಯೊರ್ವರ ಆರೈಕೆಗಾಗಿ ಇರಿಸಿದ್ದ ಹೋಮ್ ನರ್ಸ್ ಒಬ್ಬಳು ವೃದ್ಧೆಯ ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ಕದ್ದೊಯ್ದಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ಬಡಗುಬೆಟ್ಟು ನಿವಾಸಿ ಪ್ರಸಾದ್ ರವರು 15 ದಿನಗಳ ಹಿಂದೆ ಉಡುಪಿಯ ಪರ್ಕಳ ಪ್ರದೇಶದಲ್ಲಿನ ಹೆಲ್ತ್ ಕೇರ್ ಸರ್ವಿಸ್ ಮೂಲಕ ಹೋಮ್ ನರ್ಸ್ ಸಿದ್ದಪ್ಪ ಕೆ ಕೋಡ್ಲಿ ಅವರನ್ನು ತಮ್ಮ ತಂದೆಯ ಆರೈಕೆಗಾಗಿ ನೇಮಿಸಿಕೊಂಡಿದ್ದರು. ನ. 17 ಆದಿತ್ಯವಾರದಂದು , ಸಿದ್ದಪ್ಪರವರು ಮನೆಯಲ್ಲಿ ಇರಿಸಲಾಗಿದ್ದ ಅಂದಾಜು 43,800 ಮೌಲ್ಯದ

31 ಲಕ್ಷಕ್ಕೂ ಹೆಚ್ಚು ಮೌಲ್ಯದ ಬೆಳೆಬಾಳುವ ಕದ್ದ ಹೋಂನರ್ಸ್ Read More »

ಕರಾವಳಿ

ಬ್ರೆಜಿಲ್‌ಗೆ ಆಗಮಿಸಿದ ಪ್ರಧಾನಿ ಮೋದಿಗೆ ವೇದಮಂತ್ರಗಳ ಸ್ವಾಗತ

(ನ್ಯೂಸ್ ಕಡಬ) newskadaba.com ಹಾಸನ, ನ. 18. ಐದು ದಿನಗಳ ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನೈಜೀರಿಯಾ ಭೇಟಿ ಬಳಿಕ ಜಿ20 ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಬ್ರೆಜಿಲ್‌ ಗೆ ಆಗಮಿಸಿದ್ದಾರೆ. ರಿಯೊ ಡಿ ಜನೈರೊಗೆ ಭಾರತೀಯ ಕಾಲಮಾನ ಪ್ರಕಾರ ಇಂದು ಬೆಳಗ್ಗೆ ಆಗಮಿಸಿದ ಪ್ರಧಾನಿ ಮೋದಿ ಭರ್ಜರಿ ಸ್ವಾಗತ ದೊರೆತಿದೆ. ಬ್ರೆಜಿಲ್‌ನಲ್ಲಿರುವ ಭಾರತೀಯ ಸಮುದಾಯವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆತ್ಮೀಯ ಸ್ವಾಗತವನ್ನು ನೀಡಿದೆ. ಜಿಲ್ ನ ವೇದ ವಿದ್ವಾಂಸರು ಪ್ರಧಾನಮಂತ್ರಿ ಮೋದಿಯವರ ಮುಂದೆ ವೇದ

ಬ್ರೆಜಿಲ್‌ಗೆ ಆಗಮಿಸಿದ ಪ್ರಧಾನಿ ಮೋದಿಗೆ ವೇದಮಂತ್ರಗಳ ಸ್ವಾಗತ Read More »

ಬ್ರೇಕಿಂಗ್ ನ್ಯೂಸ್

ಕೆಲಸದ ವೇಳೆ ಕುಸಿದುಬಿದ್ದು ಕಾರ್ಮಿಕ ಸಾವು: ಮೃತದೇಹವನ್ನು ರಸ್ತೆ ಬದಿ ಇಟ್ಟು ಹೋದ ದುರುಳ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 18. ತೀವ್ರ ಅಸ್ವಸ್ಥಗೊಂಡು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಕುಸಿದು ಬಿದ್ದ ಮೃತಪಟ್ಟ ಕಾರ್ಮಿಕನ ಮೃತದೇಹವನ್ನು ಪಿಕಪ್ ವಾಹನದಲ್ಲಿ ತಂದು, ಆತನ ಮನೆಯ ಸಮೀಪದ ರಸ್ತೆ ಬದಿಯಲ್ಲಿ ಇಟ್ಟುಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದಲ್ಲಿ ಶನಿವಾರ ನಡೆದಿದೆ. ಮೃತ ವ್ಯಕ್ತಿಯನ್ನು ಸಾಲ್ಮರ ತಾರಿಗುಡ್ಡೆ ನಿವಾಸಿ ಶಿವಪ್ಪ ಎಂದು ಗುರುತಿಸಲಾಗಿದ್ದು, ಇವರು ಸಾಲ್ಮರ ಕೆರೆಮೂಲೆ ನಿವಾಸಿ ವುಡ್‌ ಸಂಸ್ಥೆಯೊಂದರ ಮಾಲೀಕ ಹೆನ್ರಿ ತಾವ್ರೋ ಎಂಬುವರ ಗಿರಣಿಯಲ್ಲಿ ಕೆಲಸ

ಕೆಲಸದ ವೇಳೆ ಕುಸಿದುಬಿದ್ದು ಕಾರ್ಮಿಕ ಸಾವು: ಮೃತದೇಹವನ್ನು ರಸ್ತೆ ಬದಿ ಇಟ್ಟು ಹೋದ ದುರುಳ Read More »

ಕರಾವಳಿ
Death, deadbody, Waterfall

ಸಮುದ್ರದಲ್ಲಿ ಮುಳುಗಿ ಬಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com ಕಾಸರಗೋಡು, ನ. 18. ದುಬೈಯಲ್ಲಿ ಸಮುದ್ರಕ್ಕಿಳಿದ ಕಾಸರಗೋಡು ಮೂಲದ ಬಾಲಕನೋರ್ವ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ವರದಿಯಾಗಿದೆ. ಮೃತಪಟ್ಟ ಬಾಲಕನನ್ನು ಮೂಲತಃ ಚೆಂಗಳ ನಿವಾಸಿ ಅಬ್ದುಲ್ಲ ಮಫಾಝ್(15) ಎಂದು ಗುರುತಿಸಲಾಗಿದೆ. ದುಬೈ ನ್ಯೂ ಇಂಡಿಯನ್ ಮಾಡೆಲ್ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದ ಈತ ಶುಕ್ರವಾರ ಮಮ್ಝಾರ್ ಬೀಚ್ ಗೆ ತೆರಳಿದ್ದ ವೇಳೆ ಘಟನೆ ನಡೆದಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.    

ಸಮುದ್ರದಲ್ಲಿ ಮುಳುಗಿ ಬಾಲಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಾಂಬ್ ಸ್ಫೋಟ: ಮೂವರು ಯೋಧರು ಮೃತ್ಯು

(ನ್ಯೂಸ್ ಕಡಬ) newskadaba.com ಹಾಸನ, ನ. 18. ಇರಾಕ್‍ನ ಯೋಧರು ಪ್ರಯಾಣಿಸುತ್ತಿದ್ದ ವಾಹನವನ್ನು ಗುರಿಯಾಗಿಸಿ ರಸ್ತೆ ಬದಿ ಇರಿಸಿದ್ದ ಬಾಂಬ್ ಸ್ಫೋಟಿಸಿ ಮೂವರು ಯೋಧರು ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಇರಾಕ್‍ ನ ಸಲಾದೀನ್ ಪ್ರಾಂತದ ಆಗ್ನೇಯದಲ್ಲಿರುವ ತುಜ್ ಖರ್ಮಾತು ಪಟ್ಟಣದ ಬಳಿ ರವಿವಾರ ನಡೆದ ಸ್ಫೋಟದಲ್ಲಿ ಇತರ ಮೂವರು ಯೋಧರು ತೀವ್ರವಾಗಿ ಗಾಯಗೊಂಡಿರುವುದಾಗಿ ಭದ್ರತಾ ಪಡೆಯ ಮೂಲಗಳು ಹೇಳಿವೆ. ರಸ್ತೆ ಬದಿ ಇರಿಸಲಾಗಿದ್ದ ಸ್ಫೋಟಕವನ್ನು ಇರಾಕ್ ಸೇನೆಯ ಗಸ್ತುವಾಹನ ಬರುತ್ತಿದ್ದಂತೆಯೇ ದೂರ ನಿಯಂತ್ರಕ ಸಾಧನದ ಮೂಲಕ ಸ್ಫೋಟಿಸಲಾಗಿದೆ. ಸ್ಫೋಟದ

ಬಾಂಬ್ ಸ್ಫೋಟ: ಮೂವರು ಯೋಧರು ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಆಕಸ್ಮಿಕ ಬೆಂಕಿ: ಹೊತ್ತಿ ಉರಿದ ಲಾರಿ

(ನ್ಯೂಸ್ ಕಡಬ) newskadaba.com ಹಾಸನ, ನ. 18. ನಗರದ 80 ಅಡಿ ರಸ್ತೆಯಲ್ಲಿ ಪ್ಲಾಸ್ಟಿಕ್‌ ತುಂಬಿದ್ದ ಲಾರಿ ಆಕಸ್ಮಿಕ ಬೆಂಕಿಗೆ ಸಂಪೂರ್ಣ ಆಹುತಿಯಾಗಿರುವ ಘಟನೆ ರವಿವಾರ ರಾತ್ರಿ ನಡೆದಿದೆ. ಮೂಡಿಗೆರೆ ಮೂಲದ ಲಾರಿ ಪ್ಲಾಸ್ಟಿಕ್‌ ತುಂಬಿಕೊಂಡು ಹಾಸನದಿಂದ ಬೆಂಗಳೂರಿಗೆ ತೆರಳುತ್ತಿತ್ತು. ವಾಹನ ಚಾಲಕ ನಗರದವರೇ ಆಗಿದ್ದು, ರಾತ್ರಿ 7.30ರ ಸಮಯದಲ್ಲಿ ರಸ್ತೆ ಪಕ್ಕದ ಸೇತುವೆ ಬಳಿ ಲಾರಿ ನಿಲ್ಲಿಸಿ ಊಟಕ್ಕೆ ತೆರಳಿದ್ದರು. ಸ್ಥಳೀಯರು ಕಸಕ್ಕೆ ಹಾಕಿದ್ದ ಬೆಂಕಿ ಲಾರಿಗೆ ವ್ಯಾಪಿಸಿ ಹೊತ್ತಿ ಉರಿಯಿತು ಎನ್ನಲಾಗಿದೆ. ಅಗ್ನಿಶಾಮಕ ಸಿಬ್ಬಂದಿ

ಆಕಸ್ಮಿಕ ಬೆಂಕಿ: ಹೊತ್ತಿ ಉರಿದ ಲಾರಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೂವರು ಯುವತಿಯರ ಮೃತ್ಯು ಪ್ರಕರಣ: ಇಬ್ಬರು ಅರೆಸ್ಟ್

(ನ್ಯೂಸ್ ಕಡಬ) newskadaba.com ಉಳ್ಳಾಲ, ನ. 18. ಉಚ್ಚಿಲದ ವಾಝ್ಕೋ ಬೀಚ್ ರೆಸಾರ್ಟ್ ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರೆಸಾರ್ಟ್ ಮಾಲೀಕ ಮನೋಹರ್ ಹಾಗೂ ಮೆನೇಜರ್ ಭರತ್ ಎಂದು ಗುರುತಿಸಲಾಗಿದೆ. ಅವರ ನಿರ್ಲಕ್ಷ್ಯ ಧೋರಣೆಯಿಂದ ಈ ಅನಾಹುತ ಸಂಭವಿಸಿದ್ದು, ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಈಜು ಕೊಳದಲ್ಲಿ ಮೃತಪಟ್ಟ ಕೀರ್ತನ, ನಿಶಿತಾ ಹಾಗೂ ಪಾರ್ವತಿ ಅವರ ಪೋಷಕರು ರವಿವಾರ ತಡರಾತ್ರಿ

ಮೂವರು ಯುವತಿಯರ ಮೃತ್ಯು ಪ್ರಕರಣ: ಇಬ್ಬರು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರಧಾನಿ ಮೋದಿಗೆ ನೈಜೀರಿಯಾದ ಎರಡನೇ ಅತ್ಯುನ್ನತ ನಾಗರೀಕ ಗೌರವ

(ನ್ಯೂಸ್ ಕಡಬ) newskadaba.com ನೈಜೀರಿಯಾ , ನ. 18. ಪ್ರಧಾನಿ ನರೇಂದ್ರ ಮೋದಿಯವರು ನೈಜೀರಿಯಾ ಪ್ರವಾಸದಲ್ಲಿದ್ದು, ಇದೀಗ ಅಲ್ಲಿನ ಸರ್ಕಾರ ತನ್ನ ದೇಶದ 2ನೇ ಅತ್ಯುತ್ತಮ ನಾಗರಿಕ ಪ್ರಶಸ್ತಿಯಾದ ‘ದಿ ಗ್ರಾಂಡ್‌ ಕಮಾಂಡರ್‌ ಆಫ್‌ ದಿ ಆರ್ಡರ್ ಆಫ್‌ ದಿ ನೈಗರ್‌’ ಬ ಪ್ರಶಸ್ತಿ ನೀಡಿ ಗೌರವಿಸಿದೆ. 3 ದೇಶಗಳ ಪ್ರವಾಸ ಕೈಗೊಂಡಿರುವ ಮೋದಿ ಮೊದಲ ಭಾಗವಾಗಿ ನೈಜಿರಿಯಾ ಪ್ರಧಾನಿ ಬೋಲಾ ಅಹ್ಮದ್ ಟಿನುಬು ಆಹ್ವಾನದ ಮೇರೆಗೆ ನೈಜೀರಿಯಾಗೆ ಬಂದಿದ್ದಾರೆ. 17 ವರ್ಷದ ಬಳಿಕ ಭಾರತದ ಪ್ರಧಾನಿಯೊಬ್ಬರು

ಪ್ರಧಾನಿ ಮೋದಿಗೆ ನೈಜೀರಿಯಾದ ಎರಡನೇ ಅತ್ಯುನ್ನತ ನಾಗರೀಕ ಗೌರವ Read More »

ರಾಷ್ಟ್ರೀಯ ನ್ಯೂಸ್
Scroll to Top