News Kadaba

ಕುಂದಾಪುರ: ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿನೋದ್ ಕ್ರಾಸ್ಟೋ ನೇಮಕ

(ನ್ಯೂಸ್ ಕಡಬ) newskadaba.com ಕುಂದಾಪುರ, ನ. 13.  ವಿನೋದ್ ಕ್ರಾಸ್ಟೋ ಅವರ ತಂದೆ ತಾಯಿ ಜನಸೇವೆಯಲ್ಲಿ ಗುರುತಿಸಿಕೊಂಡವರು. ಇವರು ಕೂಡಾ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ನಿರಂತರವಾಗಿ ಸೇವೆ ಸಲ್ಲಿಸುತ್ತಾ ಬಂದವರು. ಅವರ ಸೇವೆಯನ್ನು ಪಕ್ಷ ಗುರುತಿಸಿದ್ದು, ಕುಂದಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಪಕ್ಷದ ಮುಖಂಡರಾದ ದಿನೇಶ ಹೆಗ್ಡೆ ಮೊಳಹಳ್ಳಿ, ಮಲ್ಯಾಡಿ ಶಿವರಾಮ ಶೆಟ್ಟಿ, ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಕೆದೂರು ಸದಾನಂದ […]

ಕುಂದಾಪುರ: ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿನೋದ್ ಕ್ರಾಸ್ಟೋ ನೇಮಕ Read More »

ಕರಾವಳಿ

ಮಂಗಳೂರು: ಬೊಂದೆಲ್ ಸಂತ ಲಾರೆನ್ಸರ ಚರ್ಚ್ ಗೆ ತ್ರಿವಳಿ ಸಂಭ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 13.  ಮಂಗಳೂರಿನಿಂದ ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಹಾದಿಯಲ್ಲಿ ಮಂಗಳೂರಿನಿಂದ 8 ಕಿ.ಮೀ ದೂರದಲ್ಲಿ ಪ್ರಕೃತಿಯ ಮಡಿಲಲ್ಲಿ ಕಂಗೊಳಿಸುವ ಬೊಂದೆಲ್ ಎಂಬಲ್ಲಿ ರಸ್ತೆಯ ಬಲ ಪಾರ್ಶ್ವದಲ್ಲಿ ಇರುವ ಸಂತ ಲಾರೆನ್ಸರ ಸುಂದರ ದೇವಾಲಯ ಹಾಗೂ ಪುಣ್ಯಕ್ಷೇತ್ರ ಹಲವಾರು ಭಕ್ತಾಭಿಮಾನಿಗಳನ್ನು ತನ್ನತ್ತ ಸೆಳೆಯುತ್ತಿದೆ. ಈಗಾಗಲೇ ನೂರು ಸಂವತ್ಸರಗಳನ್ನು ಪೂರೈಸಿದ ಈ ಚರ್ಚ್ ಹಾಗೂ ಪುಣ್ಯಕ್ಷೇತ್ರಕ್ಕೆ ಇದೀಗ ತ್ರಿವಳಿ ಸಂಭ್ರಮ. ಈ ಬಗ್ಗೆ ಮಂಗಳೂರಿನ ಪತ್ರಿಕಾ ಭವನದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಲಾಗಿದ್ದು,

ಮಂಗಳೂರು: ಬೊಂದೆಲ್ ಸಂತ ಲಾರೆನ್ಸರ ಚರ್ಚ್ ಗೆ ತ್ರಿವಳಿ ಸಂಭ್ರಮ Read More »

ಕರಾವಳಿ

ಕೃಷ್ಣಾ ನದಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ಭೇಟಿ

(ನ್ಯೂಸ್ ಕಡಬ) newskadaba.com ರಾಯಚೂರು,  ನ. 13. ವಿದ್ಯುತ್ ಕೇಂದ್ರಗಳು ಎಗ್ಗಿಲ್ಲದೇ ಕೃಷ್ಣಾ ನದಿಗೆ ರಾಸಾಯನಿಕ ವಸ್ತುಗಳನ್ನು ಹರಿಬಿಡುತ್ತಿದ್ದು, ಈ ಕುರಿತು ಮಾಧ್ಯಮದಲ್ಲಿ  ಸುದ್ದಿಗಳು ಪ್ರಕಟಗೊಂಡ ಬೆನ್ನಲ್ಲೇ ಎಚ್ಚೆತ್ತುಕೊಂಡ ಮಾಲಿನ್ಯ ನಿಯಂತ್ರಣ ಮಂಡಳಿಯು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಬೃಹತ್ ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳಾದ ಆರ್‌ಟಿಪಿಎಸ್ ಹಾಗೂ ವೈಟಿಪಿಎಸ್ ಜಿಲ್ಲೆಯ ಹೆಮ್ಮೆ. ಇದರಲ್ಲಿ ವಿದ್ಯುತ್ ಕೇಂದ್ರಗಳು ಜೀವಮಾರಕವಾಗಿರುವ ರಾಸಾಯನಿಕವನ್ನು ನೇರವಾಗಿ ಕೃಷ್ಣಾ ನದಿಗೆ ಹರಿಬಿಡುತ್ತಿದೆ. ವಿದ್ಯುತ್ ಕೇಂದ್ರದ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ, ಬೇಜವಾಬ್ದಾರಿತನದ ಬಗ್ಗೆ ವರದಿಯಾದ

ಕೃಷ್ಣಾ ನದಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ಭೇಟಿ Read More »

ಕರ್ನಾಟಕ

ಸಿಂಧೂ ನದಿಗೆ ಉರುಳಿದ ಬಸ್: 26 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಡೈಮರ್, ನ. 13.  ಮದುವೆ ಮನೆಯಿಂದ ಜನರನ್ನು ಹೊತ್ತು ಬರುತ್ತಿದ್ದ ಬಸ್ ಸಿಂಧೂ ನದಿಗೆ ಉರುಳಿ ಬಿದ್ದು 26 ಮಂದಿ ಮೃತಪಟ್ಟ ಘಟನೆ ಪಾಕಿಸ್ತಾನದ ಉತ್ತರ ಗಿಲ್ಗಿಟ್-ಬಾಲ್ಟಿಸ್ತಾನ್ (ಜಿಬಿ) ಪ್ರದೇಶದಲ್ಲಿ ಸಂಭವಿಸಿದೆ. ಬಸ್ 28 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ ಡೈಮರ್ ಜಿಲ್ಲೆಯ ಥಾಲಿಚಿ ಪ್ರದೇಶದಲ್ಲಿ ನದಿಗೆ ಉರುಳಿದೆ. ಸ್ಥಳೀಯರು ಮತ್ತು ರಕ್ಷಣಾ ತಂಡಗಳು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದ್ದು, ಇಬ್ಬರ ಜೀವ ಉಳಿಸುವಲ್ಲಿ ಯಶಸ್ವಿಯಾದರು. ಇನ್ನು ಈ ಘಟನೆಗೆ ಪಾಕಿಸ್ತಾನ

ಸಿಂಧೂ ನದಿಗೆ ಉರುಳಿದ ಬಸ್: 26 ಮಂದಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಅನಾರೋಗ್ಯಕ್ಕೆ ತುತ್ತಾಗಿ ಯುವ ಕಬ್ಬಡ್ಡಿ ಆಟಗಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ. 13.  ಉಜಿರೆ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ, ಯುವ ಪ್ರತಿಭೆ ಚಿನ್ಮಯ ಗೌಡ ಪಿ.ಕೆ. (18) ಅವರು ಅನಾರೋಗ್ಯದಿಂದ ನ.12ರಂದು ಕೊನೆಯುಸಿರೆಳೆದಿದ್ದಾರೆ. ಮೂಲತಃ ಮಂಡ್ಯದವರಾದ ಚಿನ್ಮಯ ಗೌಡ ಹಾಸ್ಟೆಲ್‌ನಲ್ಲಿದ್ದು, ಉಜಿರೆ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಉತ್ತಮ ಕಬಡ್ಡಿ ಪಟುವಾಗಿದ್ದ ಅವರು ಕಾಲೇಜಿಗೆ ಹಲವಾರು ಪ್ರಶಸ್ತಿಗಳನ್ನು ಗೆದ್ದುಕೊಟ್ಟಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಡ್ಯದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ

ಅನಾರೋಗ್ಯಕ್ಕೆ ತುತ್ತಾಗಿ ಯುವ ಕಬ್ಬಡ್ಡಿ ಆಟಗಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ವಿಧಾನಸಭೆ ಚುನಾವಣೆ: 43 ಕ್ಷೇತಗಳಿಗೆ ಇಂದು ಮತದಾನ ಆರಂಭ

(ನ್ಯೂಸ್ ಕಡಬ) newskadaba.com ರಾಂಚಿ, ನ. 13. ಜಾರ್ಖಂಡ್‌ನ 81 ವಿಧಾನಸಭಾ ಕ್ಷೇತ್ರಗಳ ಪೈಕಿ 43 ಕ್ಷೇತಗಳಿಗೆ ಇಂದು ಮತದಾನ ಆರಂಭವಾಗಿದ್ದು, ಒಟ್ಟು ೬೮೩ ಅಭ್ಯರ್ಥಿಗಳು ಚುನಾವನೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಜಾರ್ಖಂಡ್‌ನ 15 ಜಿಲ್ಲೆಗಳಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಚುನಾವಣಾ ಆಯೋಗವು ರಾಜ್ಯಾದ್ಯಂತ ಒಟ್ಟು 15,344 ಮತಗಟ್ಟೆಗಳನ್ನು ಸ್ಥಾಪನೆ ಮಾಡಿದ್ದು, 225 ಸೂಕ್ಷ್ಮ ಮತಗಟ್ಟೆಗಳು ಎಂದು ಘೋಷಣೆ ಮಾಡಿದೆ. ಮತದಾನದ ವೇಳೆ ಭದ್ರತಾ ಸುವ್ಯವಸ್ಥೆ ಕಾಪಾಡಲು 200 ಕಂಪನಿಗಳ ಭದ್ರತಾ

ವಿಧಾನಸಭೆ ಚುನಾವಣೆ: 43 ಕ್ಷೇತಗಳಿಗೆ ಇಂದು ಮತದಾನ ಆರಂಭ Read More »

ರಾಷ್ಟ್ರೀಯ ನ್ಯೂಸ್

ಅಂತಾರಾಷ್ಟ್ರೀಯ ಯೋಗ ಗುರು ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ) newskadaba.com ಮೈಸೂರು, ನ. 13. ಮೈಸೂರು ಮೂಲದ ಖ್ಯಾತ ಅಂತಾರಾಷ್ಟ್ರೀಯ ಯೋಗ ಗುರು ಶರತ್‌ ಜೋಯಿಸ್‌ (53) ಅವರು ಅಮೆರಿಕದಲ್ಲಿ ಕೊನೆಯುಸಿರೆಳೆದಿದ್ದಾರೆ. ಶರತ್‌ ಜೋಯಿಸ್‌ ಅವರು ಯೋಗಾಭ್ಯಾಸ ಮತ್ತು ಯೋಗಪಾಠಕ್ಕೆ ತಮ್ಮ ಬದುಕನ್ನು ಮೀಸಲಾಗಿಟ್ಟಿದ್ದರು. ಖ್ಯಾತ ಪಾಪ್‌ ಗಾಯಕಿ ಮಡೋನಾ ಸೇರಿದಂತೆ ಹಲವರಿಗೆ ಯೋಗ ಕಲಿಸಿದ ಖ್ಯಾತಿಯೂ ಅವರಿಗಿದೆ. ಅವರು ಹೆಸರಾಂತ ಯೋಗ ಗುರು ಮೈಸೂರು ಮೂಲದ ಕೆ. ಪಟ್ಟಾಭಿ ಜೋಯಿಸ್‌ ಅವರ ಮೊಮ್ಮಗರಾಗಿದ್ದಾರೆ. ಅಮೆರಿಕದಲ್ಲಿ ನೆಲೆಸಿದ್ದ ಅವರು ಯೋಗಗುರುವಾಗಿ ತಾತನ ಹಾದಿಯಲ್ಲೇ ಸಾಗಿದ್ದರು.

ಅಂತಾರಾಷ್ಟ್ರೀಯ ಯೋಗ ಗುರು ಹೃದಯಾಘಾತದಿಂದ ನಿಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಿಸಿ ಊಟ ಸೇವಿಸಿ 45 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

(ನ್ಯೂಸ್ ಕಡಬ) newskadaba.com ಬಳ್ಳಾರಿ, ನ. 13. ಬಿಸಿ ಊಟ ಸೇವಿಸಿ 45 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬಳ್ಳಾರಿ ಜಿಲ್ಲೆ ಕಂಪ್ಲಿ ತಾಲೂಕಿನ ಮೆಟ್ರಿ ಹೊನ್ನಳಿ ಗ್ರಾಮದಲ್ಲಿ ನಡೆದಿದೆ. ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಧ್ಯಾಹ್ನ ಬಿಸಿ ಊಟ ಸೇವಿಸಿದ ಬಳಿಕ ವಿದ್ಯಾರ್ಥಿಗಳಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಕಂಪ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಡುಗೆ ಸಿಬ್ಬಂದಿ ನಿರ್ಲಕ್ಷದಿಂದಲೇ ಮಕ್ಕಳು ಅಸ್ವಸ್ಥರಾಗಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.  

ಬಿಸಿ ಊಟ ಸೇವಿಸಿ 45 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇಂದು ರಾಜ್ಯದ 3 ಕ್ಷೇತ್ರಗಳ ಉಪಚುನಾವಣೆ ಮತದಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 13. ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ವಿಧಾನಸಭೆ ಉಪಚುನಾವಣೆ ಮತದಾನ ನಡೆಯಲಿದ್ದು, ಈ ಪೈಕಿ ಚನ್ನಪಟ್ಟಣ ಕ್ಷೇತ್ರ ಹೆಚ್ಚು ಕುತೂಹಲ ಮೂಡಿಸಿದೆ. ಕುತೂಹಲ ಕೆರಳಿಸಿರುವ ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧಿಸುತ್ತಿದ್ದಾರೆ. ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್‌ ಹಾಗೂ 32 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಭರತ್‌ ಬೊಮ್ಮಾಯಿ ಸ್ಪರ್ಧಿಸಿದ್ದಾರೆ.

ಇಂದು ರಾಜ್ಯದ 3 ಕ್ಷೇತ್ರಗಳ ಉಪಚುನಾವಣೆ ಮತದಾನ Read More »

ಕರ್ನಾಟಕ

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ನ. 13. ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರೊಂದು ಬ್ರೇಕ್ ಫೇಲ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ವಿಟ್ಲದ ಮುಚ್ಚಿರಪದವು ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಅಪಘಾತದಲ್ಲಿ ಹಲವು ವಿದ್ಯಾರ್ಥಿಗಳು ಹಾಗೂ ಕಾರು ಚಾಲಕ ಗಾಯಗೊಂಡಿದ್ದಾರೆ. ಪೆರುವಾಯಿ ಮಿತ್ತಮೂಲೆ ಎಂಬಲ್ಲಿಂದ ವಿಟ್ಲದ ಶಾಲೆಗೆ ತೆರಳುವ ಮಕ್ಕಳನ್ನು ವಿಟ್ಲಕ್ಕೆ ಹೋಗುವ ಬಸ್ಸಿಗೆ ಹತ್ತಿಸಲು ಕರೆದೊಯ್ದುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಬ್ರೇಕ್ ವೈಫಲ್ಯಕ್ಕೀಡಾಗಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಪಲ್ಟಿಯಾಗಿದೆ. ಕಾರು ಚಾಲಕ

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಹಲವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top