News Kadaba

2026ರ ಡಿಸೆಂಬರ್‌ಗೆ ನಮ್ಮ ಮೆಟ್ರೋ ಪಿಂಕ್ ಲೈನ್ ಆರಂಭ

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 31.  ಅತಿ ಉದ್ದದ ಭೂಗತ ಮೆಟ್ರೋ ಮಾರ್ಗವನ್ನು ಹೊಂದಿರುವ ಪಿಂಕ್ ಲೈನ್ 2026 ರ ಡಿಸೆಂಬರ್ ವೇಳೆಗೆ ಸಂಪೂರ್ಣವಾಗಿ ತೆರೆಯುವ ನಿರೀಕ್ಷೆಯಿದೆ. ನಮ್ಮ ಮೆಟ್ರೋ ಅಧಿಕಾರಿ ತಿಳಿಸಿದ್ದಾರೆ. 21.26 ಕಿ.ಮೀ ಉದ್ದದ ಈ ಮಾರ್ಗವು ಕಾಳೇನ ಅಗ್ರಹಾರ ಮತ್ತು ನಾಗವಾರವನ್ನು ಸಂಪರ್ಕಿಸುತ್ತದೆ. ಮಧ್ಯೆ 12 ಭೂಗತ ಮತ್ತು ಆರು ಎತ್ತರಿಸಿದ ನಿಲ್ದಾಣಗಳಿವೆ. ಪಿಂಕ್ ಲೈನ್ ಎರಡು ಹಂತಗಳಲ್ಲಿ ತೆರೆಯುತ್ತದೆ. 2025ರ ಡಿಸೆಂಬರ್ ವೇಳೆಗೆ 7.5 ಕಿ.ಮೀ ಎತ್ತರಿಸಿದ ವಿಭಾಗ (ಕಾಳೇನ ಅಗ್ರಹಾರ-ತಾವರೆಕೆರೆ) […]

2026ರ ಡಿಸೆಂಬರ್‌ಗೆ ನಮ್ಮ ಮೆಟ್ರೋ ಪಿಂಕ್ ಲೈನ್ ಆರಂಭ Read More »

ಕರ್ನಾಟಕ

ಯೋಧರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ

(ನ್ಯೂಸ್ ಕಡಬ)newskadaba.com, ಅ. 31 ಗುಜಾರಾತ್: ಪ್ರತಿ ವರ್ಷದಂತೆ ಯೋಧರೊಂದಿಗೆ ದೀಪಾವಳಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಗುಜರಾತ್‌ನ ಕಛ್‌ಗೆ ಆಗಮಿಸಿದ್ದಾರೆ. ಬಿಎಸ್ಎಫ್ ಯೋಧರಿಗೆ ಸಿಹಿ ತಿನ್ನಿಸುವ ಮೂಲಕ ಪ್ರಧಾನಿ ಮೋದಿ ಈ ಬಾರಿಯ ದೀಪಾವಳಿ ಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಬಾರಿ ಅವರು ಭಾರತ-ಪಾಕಿಸ್ತಾನ ಗಡಿಗೆ ಸಮೀಪವಿರುವ ಕಛ್‌ನ ಲಕ್ಕಿ ನಾಲಾ ಪ್ರದೇಶದಲ್ಲಿದ್ದಾರೆ. ಬಿಎಸ್‌ಎಫ್‌ನ ಗಡಿ ಪ್ರದೇಶದಲ್ಲಿ ನಿಯೋಜನೆಗೊಂಡಿದ್ದ ಯೋಧರಿಗೆ ಅವರು ಸಿಹಿ ತಿನ್ನಿಸುತ್ತಿರುವುದು ಕಂಡುಬಂದಿದೆ ಎಂದು ವರದಿಯಾಗಿದೆ.

ಯೋಧರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ Read More »

ರಾಷ್ಟ್ರೀಯ ನ್ಯೂಸ್
crime, arrest, suspected

ಜಿಂಕೆ ಮಾಂಸ ಸಾಗಾಟ: ಓರ್ವ ಅರೆಸ್ಟ್

(ನ್ಯೂಸ್ ಕಡಬ)newskadaba.com ಕುಂದಾಪುರ, ಅ. 31.  ಬೈಕ್ ನಲ್ಲಿ ಜಿಂಕೆ ಮಾಂಸ ಸಾಗಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಸಿದ್ದಾಪುರ ವನ್ಯಜೀವಿ ವಲಯ ದ ಸಿಬ್ಬಂದಿಗಳು ಬಂಧಿಸಿದ್ದು ಇಬ್ಬರು ಪರಾರಿಯಾಗಿದ್ದಾರೆ. ಬಂಧಿತ ವ್ಯಕ್ತಿ ಕೊಡ್ಲಾಡಿ ಗ್ರಾಮದ ಜಗದೀಶ್ ಮೇಸ್ತ(49) ನನ್ನು ನವೆಂಬರ್ 8 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಂಧಿತ ವ್ಯಕ್ತಿಯಿಂದ 23kg ಜಿಂಕೆ ಮಾಂಸ, ಬೈಕ್, ಚೂರಿ, ಗನ್ ಪೌಡರ್ ವಶಪಡಿಸಿಕೊಳ್ಳಲಾಗಿದೆ. ಪ್ರಕರಣವನ್ನು ಕುಂದಾಪುರ ಪ್ರಾದೇಶಿಕ ವಲಯಕ್ಕೆಒಪ್ಪಿಸಲಾಗಿದ್ದು ತನಿಖೆ ಮುಂದುವರೆದಿದೆ.    

ಜಿಂಕೆ ಮಾಂಸ ಸಾಗಾಟ: ಓರ್ವ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಇಂದಿನಿಂದಲೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಟ ದರ್ಶನ್‌ಗೆ ಚಿಕಿತ್ಸೆ ಆರಂಭ

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 31.  ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ಅವರು ನಿನ್ನೆ ಸಂಜೆಯಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ಇಂದು ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಲಿದ್ದಾರೆ. ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಇಂದು ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಲಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ದರ್ಶನ್‌ ಕುಟುಂಬದವರು ಹಾಗೂ ಮಿತ್ರರು ಆಸ್ಪತ್ರೆಯ ಆಡಳಿತಾಧಿಕಾರಿಗಳು ಹಾಗೂ ವೈದ್ಯರನ್ನು ಕನ್‌ಸಲ್ಟ್‌

ಇಂದಿನಿಂದಲೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಟ ದರ್ಶನ್‌ಗೆ ಚಿಕಿತ್ಸೆ ಆರಂಭ Read More »

ಕರ್ನಾಟಕ

’ಒನ್ ನೇಷನ್, ಒನ್ ಎಲೆಕ್ಷನ್’ ಶೀಘ್ರದಲ್ಲೇ ಜಾರಿ- ಪ್ರಧಾನಿ ಮೋದಿ ಘೋಷಣೆ

(ನ್ಯೂಸ್ ಕಡಬ)newskadaba.com ಅಹಮದಾಬಾದ್, ಅ. 31.  ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 149ನೇ ಜನ್ಮದಿನದ ಅಂಗವಾಗಿ ಗುಜರಾತ್‌ನ ಏಕತಾ ಪ್ರತಿಮೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪುಷ್ಪ ನಮನ ಸಲ್ಲಿಸಿದರು. ಇದೇ ವೇಳೆ ಮಾತನಾಡಿದ ಅವರು, ಶೀಘ್ರದಲ್ಲೇ ಒಂದು ದೇಶ, ಒಂದು ಎಲೆಕ್ಷನ್‌ ಮತ್ತು ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಲಾಗುತ್ತದೆ ಎಂದು ಘೋಷಿಸಿದ್ದಾರೆ. ಒನ್ ನೇಷನ್, ಒನ್ ಎಲೆಕ್ಷನ್’ ಕನಸು ಶೀಘ್ರದಲ್ಲೇ ನನಸಾಗಲಿದೆ ಎಂದಿರುವ ಪ್ರಧಾನಿ ಮೋದಿ, ದೇಶದ ಎಲ್ಲಾ ಚುನಾವಣೆಗಳನ್ನು ಒಂದೇ ದಿನದಲ್ಲಿ ಅಥವಾ

’ಒನ್ ನೇಷನ್, ಒನ್ ಎಲೆಕ್ಷನ್’ ಶೀಘ್ರದಲ್ಲೇ ಜಾರಿ- ಪ್ರಧಾನಿ ಮೋದಿ ಘೋಷಣೆ Read More »

ರಾಷ್ಟ್ರೀಯ ನ್ಯೂಸ್

ಅಕ್ರಮ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ- 14 ದಿನ ಅವಧಿ ವಿಸ್ತರಣೆ

(ನ್ಯೂಸ್ ಕಡಬ)newskadaba.com ಉಡುಪಿ, ಅ. 31. ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಸಿರುವ ಪ್ರಕರಣದ 10 ಮಂದಿ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಉಡುಪಿ ನ್ಯಾಯಾಲಯ ಬುಧವಾರ ಆದೇಶಿಸಿದೆ. ಉಡುಪಿಯ ಹೂಡೆ, ಸಂತೆಕಟ್ಟೆ, ಕಾರ್ಕಳದ ಮಾಳದಲ್ಲಿ 10 ಮಂದಿ ಆರೋಪಿಗಳನ್ನು ಬಂಧಿಸಿ, ಅವರನ್ನೆಲ್ಲಾ ಹಿರಿಯಡ್ಕದಲ್ಲಿರುವ ಜಿಲ್ಲಾ ಕಾರಾಗೃಹದಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಉಡುಪಿಯ ಪ್ರಧಾನ ಎರಡನೇ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಇದೀಗ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ

ಅಕ್ರಮ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ- 14 ದಿನ ಅವಧಿ ವಿಸ್ತರಣೆ Read More »

ಕರಾವಳಿ, ಕ್ರೈಮ್ ನ್ಯೂಸ್

11 ವರ್ಷದ ಬಳಿಕ ತವರಿನಲ್ಲಿ ಟೆಸ್ಟ್‌ ಆಡಲು ರೋಹಿತ್‌ ಸಜ್ಜು

(ನ್ಯೂಸ್ ಕಡಬ)newskadaba.com ಮುಂಬೈ, ಅ. 31. ನ್ಯೂಜಿಲ್ಯಾಂಡ್‌ ವಿರುದ್ಧ ನಾಳೆಯಿಂದ ವಾಂಖೆಡೆ ಸ್ಟೇಡಿಯಂನಲ್ಲಿ ಆರಂಭವಾಗಲಿರುವ ಮೂರನೇ ಟೆಸ್ಟ್‌ ಟೀಮ್‌ ಇಂಡಿಯಾ ನಾಯಕ ರೋಹಿತ್‌ ಶರ್ಮ ಅವರಿಗೆ ವಿಶೇಷ ಪಂದ್ಯವಾಗಿದೆ. 11 ವರ್ಷಗಳ ಬಳಿಕ ರೋಹಿತ್‌ ತವರಿನಲ್ಲಿ ಆಡುತ್ತಿರುವ ಮೊದಲ ಟೆಸ್ಟ್‌ ಪಂದ್ಯ ಇದಾಗಿದೆ. ಮುಂಬಯಿಯ ವಾಂಖೆಡೆ ಸ್ಟೇಡಿಯಂನಲ್ಲಿ ರೋಹಿತ್‌ ಕೊನೆಯ ಬಾರಿಗೆ ಟೆಸ್ಟ್‌ ಪಂದ್ಯವನ್ನಾಡಿದ್ದು 2013 ರಲ್ಲಿ. ಅದು ಕ್ರಿಕೆಟ್‌ ದೇವರು ಎಂದು ಕರೆಯುವ ಸಚಿನ್‌ ತೆಂಡೂಲ್ಕರ್‌ ಅವರ ವಿದಾಯ ಪಂದ್ಯವಾಗಿತ್ತು. ವಿಂಡೀಸ್‌ ವಿರುದ್ಧದ ಈ ಪಂದ್ಯದಲ್ಲಿ

11 ವರ್ಷದ ಬಳಿಕ ತವರಿನಲ್ಲಿ ಟೆಸ್ಟ್‌ ಆಡಲು ರೋಹಿತ್‌ ಸಜ್ಜು Read More »

ಕ್ರೀಡಾ ನ್ಯೂಸ್

ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ – ಸಿಎಂ ಸ್ಪಷ್ಟನೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 31. ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ ಎಂದು ಡಿಸಿಎಂ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದರು. ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ಕುರಿತು ಡಿಕೆ ಶಿವಕುಮಾರ್ ಹೇಳಿಕೆ ವಿಚಾರವಾಗಿ, ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ. ನಾನು ಮಂತ್ರಿಗಳ ಜೊತೆ ಮಾತಾಡುತ್ತೇನೆ. ಪರಿಷ್ಕರಣೆಯ ಯಾವುದೇ ಉದ್ದೇಶವಿಲ್ಲ.

ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ – ಸಿಎಂ ಸ್ಪಷ್ಟನೆ Read More »

ಕರ್ನಾಟಕ

ಅಮಿತ್ ಶಾ ಮೇಲಿನ ಕೆನಡಾ ಆರೋಪ ಕಳವಳಕಾರಿಯಾಗಿದೆ: ಅಮೇರಿಕಾ

(ನ್ಯೂಸ್ ಕಡಬ)newskadaba.com, ಅ. 31 ವಾಷಿಂಗ್ಟನ್: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧದ ಕೆನಡಾ ಆರೋಪ ಕಳವಳಕಾರಿಯಾಗಿದ್ದು, ಈ ವಿಷಯದ ಕುರಿತು ಕೆನಡಾವನ್ನು ಸಂಪರ್ಕಿಸುವುದನ್ನು ಮುಂದುವರಿಸುತ್ತೇವೆ ಎಂದು ಅಮೆರಿಕ ಬುಧವಾರ ಹೇಳಿದೆ. ಖಾಲಿಸ್ತಾನಿ ಪ್ರತ್ಯೇಕತವಾದಿಗಳನ್ನು ಗುರಿಯಾಗಿಸಿಕೊಂಡು ನಡೆದಿರುವ ದಾಳಿಗಳ ಹಿಂದೆ ಅಮಿತ್ ಶಾ ಕೈವಾಡವಿದೆ ಎಂಬ ವಾಷಿಂಗ್ಟನ್ ಪೋಸ್ಟ್ ವರದಿಗಳನ್ನು ಕೆನಡಾದ ರಾಷ್ಟ್ರೀಯ ಭದ್ರತಾ ಮತ್ತು ಗುಪ್ತಚರ ಸಲಹೆಗಾರ ನಥಾಲಿ ಡ್ರೌಯಿನ್, ಉಪ ವಿದೇಶಾಂಗ ವ್ಯವಹಾರಗಳ ಸಚಿವ ಡೇವಿಡ್ ಮಾರಿಸನ್  ಹಾಗೂ ಕೆನಡಾ ಸಂಸತ್ತಿನ ರಾಷ್ಟ್ರೀಯ

ಅಮಿತ್ ಶಾ ಮೇಲಿನ ಕೆನಡಾ ಆರೋಪ ಕಳವಳಕಾರಿಯಾಗಿದೆ: ಅಮೇರಿಕಾ Read More »

ಅಂತರ್ರಾಷ್ಟ್ರೀಯ ನ್ಯೂಸ್

ದೇಶದೆಲ್ಲೆಡೆ ಏಕತಾ ದಿವಸ ಆಚರಣೆ- ಉಕ್ಕಿನ ಮನುಷ್ಯನಿಗೆ ಪ್ರಧಾನಿ ಮೋದಿಯಿಂದ ಗೌರವಾರ್ಪಣೆ

(ನ್ಯೂಸ್ ಕಡಬ)newskadaba.com ಅಹಮದಾಬಾದ್, ಅ. 31. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 149ನೇ ಜನ್ಮದಿನದ ಅಂಗವಾಗಿ ಗುಜರಾತ್‌ನ ಏಕತಾ ಪ್ರತಿಮೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಪುಷ್ಪ ನಮನ ಸಲ್ಲಿಸಿದರು. ಅಕ್ಟೋಬರ್‌ 31 ರಂದು ಸರ್ದಾರ್‌ ವಲ್ಲಭಭಾಯಿ ಪಟೇಲರ ಜನ್ಮ ದಿನವನ್ನು ಏಕತಾ ದಿವಸ್‌ ಎಂದು ಆಚರಿಸಲಾಗುತ್ತದೆ.  ಗುಜರಾತ್‌ನ ಏಕತಾ ಪ್ರತಿಮೆಯ ಬಳಿ ದೊಡ್ಡ ಕಾರ್ಯಕ್ರಮ ಆಯೋಜಿಸಲಾಗಿದ್ದು, ಪ್ರಧಾನಿ ಭಾಗವಹಿಸಿದ್ದಾರೆ. ಪುಷ್ಪನಮನ ಸಲ್ಲಿಸಿದ ನಂತರ ಮಾತನಾಡಿದ ಮೋದಿ “ಪಟೇಲ್‌ ಒಬ್ಬ ಧೀಮಂತ ನಾಯಕರಾಗಿದ್ದರು. ಅವರ ಕಾರ್ಯಗಳು ಮುಂದಿನ

ದೇಶದೆಲ್ಲೆಡೆ ಏಕತಾ ದಿವಸ ಆಚರಣೆ- ಉಕ್ಕಿನ ಮನುಷ್ಯನಿಗೆ ಪ್ರಧಾನಿ ಮೋದಿಯಿಂದ ಗೌರವಾರ್ಪಣೆ Read More »

ರಾಷ್ಟ್ರೀಯ ನ್ಯೂಸ್
Scroll to Top