News Kadaba

ರಾಜ್ಯ ಸರಕಾರ ಮಣ್ಣು ತಿನ್ನುವ ಕೆಲಸ ಮಾಡುತ್ತಿದೆ: ವಿಜಯೇಂದ್ರ

(ನ್ಯೂಸ್ ಕಡಬ)newskadaba.com, ಅ. 29 ಬೆಂಗಳೂರು: ರಾಜ್ಯ ಸರಕಾರ ಮಣ್ಣು ತಿನ್ನುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಕಿಡಿ ಕಾರಿದ್ದಾರೆ. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಲತಲಾಂತರದಿಂದ ಇದ್ದ ಪಿತ್ರಾರ್ಜಿತ ಆಸ್ತಿಯನ್ನು ರಾತ್ರೋರಾತ್ರಿ ವಕ್ಫ್ ಆಸ್ತಿ ಎಂದು ಘೋಷಿಸಿದರೆ ರೈತರು ಬೀದಿಗೆ ಬಂದು ಏನು ಮಾಡಬೇಕು ಎಂದು ಪ್ರಶ್ನಿಸಿದರು. ನಾವಿದರ ವಿರುದ್ಧ ಹೋರಾಟ ಮಾಡುತ್ತೇವೆ. ರೈತರಿಗೆ ಧ್ವನಿಗೂಡಿಸುತ್ತೇವೆ. ಅವರ ಬೆಂಬಲಕ್ಕೆ ನಿಲ್ಲುವುದಾಗಿ ಹೇಳಿದರೆ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ […]

ರಾಜ್ಯ ಸರಕಾರ ಮಣ್ಣು ತಿನ್ನುವ ಕೆಲಸ ಮಾಡುತ್ತಿದೆ: ವಿಜಯೇಂದ್ರ Read More »

ಕರ್ನಾಟಕ

ದೇಶದಲ್ಲಿ 10 ಲಕ್ಷಕ್ಕೂ ಅಧಿಕ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಗುರಿ ಹೊಂದಿದೆ- ಪ್ರಲ್ಹಾದ್‌ ಜೋಶಿ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಅ. 29. ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ರೋಜಗಾರ್ ಯೋಜನೆ ಮುಖೇನ ದೇಶದಲ್ಲಿ 10 ಲಕ್ಷಕ್ಕೂ ಅಧಿಕ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಗುರಿ ಹೊಂದಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದರು. ಧಾರವಾಡದಲ್ಲಿ ಇಂದು ಆಯೋಜಿಸಿದ್ದ ರೋಜಗಾರ್ ಉದ್ಯೋಗ ಮೇಳದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರ ವಿತರಿಸಿ ಮಾತನಾಡಿದರು. ರೋಜಗಾರ್ ಮೇಳದಲ್ಲಿ ದೇಶಾದ್ಯಂತ ಇಂದು 51 ಸಾವಿರ ಉದ್ಯೋಗಿಗಳಿಗೆ ನೇಮಕಾತಿ ಆದೇಶ ಪತ್ರ ನೀಡಲಾಗಿದೆ. ಮುಂದಿನ ದಿನ ಇದು

ದೇಶದಲ್ಲಿ 10 ಲಕ್ಷಕ್ಕೂ ಅಧಿಕ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಗುರಿ ಹೊಂದಿದೆ- ಪ್ರಲ್ಹಾದ್‌ ಜೋಶಿ Read More »

ಉದ್ಯೋಗ, ಕರ್ನಾಟಕ

ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದ ದೀಪಾವಳಿ ಶುಭಾಶಯ ತಿಳಿಸಿದ ಸುನೀತಾ ವಿಲಿಯಮ್ಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 29. ಭಾರತೀಯ ಮೂಲದ ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಪ್ರಸ್ತುತ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿದ್ದಾರೆ. ಅಲ್ಲೇ ದೀಪಾವಳಿ ಆಚರಿಸಿರುವ ಅವರು ಅಮೆರಿಕ ಮತ್ತು ಪ್ರಪಂಚದಾದ್ಯಂತ ಹಬ್ಬ ಆಚರಿಸುವ ಜನರಿಗೆ ದೀಪಾವಳಿ ಶುಭಾಶಯ ಹೇಳಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದ ಶುಭಾಶಯಗಳು ಎಂದು ಅವರು ಹೇಳಿದ್ದಾರೆ. ಶ್ವೇತಭವನದಲ್ಲಿ ಮತ್ತು ಪ್ರಪಂಚದಾದ್ಯಂತ ಇಂದು ಹಬ್ಬ ಆಚರಿಸುತ್ತಿರುವ ಎಲ್ಲರಿಗೂ ದೀಪಾವಳಿಯ ಶುಭಾಶಯಗಳನ್ನು ತಿಳಿಸಲು ನಾನು ಬಯಸುತ್ತೇನೆ ಎಂದು ವಿಡಿಯೊ ಸಂದೇಶ ಕಳುಹಿಸಿದ್ದಾರೆ.    

ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದ ದೀಪಾವಳಿ ಶುಭಾಶಯ ತಿಳಿಸಿದ ಸುನೀತಾ ವಿಲಿಯಮ್ಸ್ Read More »

ಕರ್ನಾಟಕ
crime, arrest, suspected

ವಿಮಾನಯಾನ, ಹೊಟೇಲ್‌ಗಳಿಗೆ ಹುಸಿ ಬಾಂಬ್‌ ಬೆದರಿಕೆ: ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಅ. 29. ವಿಮಾನಯಾನ, ಹೋಟೇಲ್‌ಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆಯೊಡ್ಡಿ ವಿಮಾನ ಸಂಚಾರಕ್ಕೆ ತಡೆಯೊಡ್ಡಿದ್ದ ಆರೋಪಿಯನ್ನು ನಾಗ್ಪುರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಜಗದೀಶ್ ಉಯ್ಕೆ ಎಂದು ಗುರುತಿಸಲಾಗಿದೆ. ಆತ 2021 ರ ಪ್ರಕರಣದಲ್ಲಿ ಬಂಧನ ದಾಖಲೆಯನ್ನು ಹೊಂದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ (ಡಿಸಿಪಿ) ಶ್ವೇತಾ ಖೇಡ್ಕರ್ ನೇತೃತ್ವದ ತನಿಖಾ ತಂಡ ಬಂಧಿಸಿದೆ.      

ವಿಮಾನಯಾನ, ಹೊಟೇಲ್‌ಗಳಿಗೆ ಹುಸಿ ಬಾಂಬ್‌ ಬೆದರಿಕೆ: ಆರೋಪಿ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಾಡ್ ಸೇನೆ ಮೇಲೆ ದಾಳಿ: 40 ಸೈನಿಕರು ಹುತಾತ್ಮ

(ನ್ಯೂಸ್ ಕಡಬ) newskadaba.com ಚಾಡ್, ಅ. 29. ಆಫ್ರಿಕಾದ ಚಾಡ್ ದೇಶದಲ್ಲಿ ಬೋಕೊ ಹರಾಮ್ ಭಯೋತ್ಪಾದಕರು ಚಾಡ್ ಸೇನೆಯ ಮೇಲೆ ದಾಳಿ ನಡೆಸಿದ್ದರಿಂದ 40 ಸೈನಿಕರು ಹುತಾತ್ಮರಾಗಿದ್ದಾರೆ. ಈ ದಾಳಿಯಲ್ಲಿ ಯುನಿಟ್ ಕಮಾಂಡರ್ ಕೂಡ ಮೃತಪಟ್ಟಿದ್ದಾರೆ ಎಂದು ಚಾಡ್ ಸೇನಾ ವಕ್ತಾರರು ಹೇಳಿದ್ದಾರೆ. ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಚಾಡ್ ಅಧ್ಯಕ್ಷ ಮಹಮತ್ ಇಡ್ರಿಸ್ ಡೆಬಿ ಅವರು, ‘ನಮ್ಮ ಮೇಲೆ ದಾಳಿ ಮಾಡಿದ ಉಗ್ರರನ್ನು ಪ್ರತಿ ದಾಳಿ ಮಾಡಿ ಹತ್ಯೆ ಮಾಡಿದ್ದೇವೆ. ಸ್ಥಳದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ

ಚಾಡ್ ಸೇನೆ ಮೇಲೆ ದಾಳಿ: 40 ಸೈನಿಕರು ಹುತಾತ್ಮ Read More »

ಅಂತರ್ರಾಷ್ಟ್ರೀಯ ನ್ಯೂಸ್

ಜಮ್ಮು: ಭದ್ರತಾ ಪಡೆಗಳಿಂದ 3 ಭಯೋತ್ಪಾದಕರ ಹತ್ಯೆ

(ನ್ಯೂಸ್ ಕಡಬ)newskadaba.com, ಅ. 29 ಜಮ್ಮು: ಜಮ್ಮು ಕಾಶ್ಮೀರದ ಅಖ್ನೂರ್ ಸೆಕ್ಟರ್ನ ಹಳ್ಳಿಯೊಂದರ ಸಮೀಪ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಇದರಿಂದಾಗಿ ಗಡಿ ನಿಯಂತ್ರಣ ರೇಖೆ ಬಳಿ ಕಳೆದ 27 ಗಂಟೆಗಳ ಅವಧಿಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ಬೆಳಗ್ಗೆ ಗಡಿ ನಿಯಂತ್ರಣ ರೇಖೆ ಬಳಿ ಸಾಗುತ್ತಿದ್ದ ಬೆಂಗಾವಲು ಪಡೆಯ ಸೇನಾ ಆಂಬ್ಯುಲೆನ್ಸ್ ಗೆ ಗುಂಡು ಹಾರಿಸಿದ ಮೂವರು ಭಯೋತ್ಪಾದಕರಲ್ಲಿ ಓರ್ವ

ಜಮ್ಮು: ಭದ್ರತಾ ಪಡೆಗಳಿಂದ 3 ಭಯೋತ್ಪಾದಕರ ಹತ್ಯೆ Read More »

ರಾಷ್ಟ್ರೀಯ ನ್ಯೂಸ್

ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ಮ್ಯಾಥ್ಯೂ ವೇಡ್ ನಿವೃತ್ತಿ ಘೋಷಣೆ

(ನ್ಯೂಸ್ ಕಡಬ) newskadaba.com ಕ್ಯಾನ್ ಬೆರಾ, ಅ. 29. ಆಸ್ಟ್ರೇಲಿಯಾ ತಂಡದ ವಿಕೆಟ್ ಕೀಪರ್ ಬ್ಯಾಟರ್ ಮ್ಯಾಥ್ಯೂ ವೇಡ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಮ್ಯಾಥ್ಯೂ ವೇಡ್ ಅವರು ಮೂರು ಸ್ವರೂಪಗಳಲ್ಲೂ ಆಸ್ಟ್ರೇಲಿಯಾ ತಂಡವನ್ನು ಪ್ರತಿನಿಧಿಸಿದ್ದು, 2021 ರಲ್ಲಿ ಆಸೀಸ್ ಪಡೆ ಟಿ20 ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ ತಮ್ಮ 13 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಬದುಕಿಗೆ ವಿದಾಯ ಹೇಳಲಿದ್ದಾರೆ. 2012ರ ಫೆಬ್ರವರಿಯಲ್ಲಿ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ಹಾಗೇಯೇ 2021ರ ಜುಲೈನಲ್ಲಿ ವೆಸ್ಟ್

ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ಮ್ಯಾಥ್ಯೂ ವೇಡ್ ನಿವೃತ್ತಿ ಘೋಷಣೆ Read More »

ಕ್ರೀಡಾ ನ್ಯೂಸ್

ಅಪ್ಪು ಅಗಲಿಕೆಗೆ 3 ವರ್ಷ- ರಾಜ್ಯಾದ್ಯಂತ ಪುಣ್ಯಸ್ಮರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 29. ನಗುವಿನ ಅರಸ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅಗಲಿಕೆಗೆ ಭರ್ತಿ ಮೂರು ವರ್ಷ. 3 ವರ್ಷವಲ್ಲ, ಇನ್ನೂ ನೂರು ವರ್ಷ ಕಳೆದರೂ ಅಪ್ಪು  ಮರೆಯಲಾಗದ ಮಾಣಿಕ್ಯ. ಪುಣ್ಯಸ್ಮರಣೆಯಲ್ಲಿ ಪತ್ನಿ ಅಶ್ವಿನಿ, ರಾಘವೇಂದ್ರ ರಾಜ್‌ಕುಮಾರ್, ವಿನಯ್  ರಾಜ್‌ಕುಮಾರ್, ಯುವರಾಜ್ ಕುಮಾರ್, ಅಪ್ಪು ಪುತ್ರಿಯರು ಭಾಗಿಯಾಗಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸಮಾಧಿ ಬಳಿ ಇಷ್ಟದ ತಿನಿಸುಗಳನ್ನಿಟ್ಟು ಪೂಜೆ ಸಲ್ಲಿಸಿದ್ದಾರೆ. ಸಮಾಧಿಯನ್ನ ವಿಶೇಷವಾಗಿ ಹೂವುಗಳಿಂದ, ದೀಪಗಳಿಂದ ಅಲಂಕಾರ ಮಾಡಲಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳ

ಅಪ್ಪು ಅಗಲಿಕೆಗೆ 3 ವರ್ಷ- ರಾಜ್ಯಾದ್ಯಂತ ಪುಣ್ಯಸ್ಮರಣೆ Read More »

ಕರ್ನಾಟಕ, ಸಿನಿಮಾ

ಅಡುಗೆ ಎಣ್ಣೆಯ ಬೆಲೆ ಏರಿಕೆ

(ನ್ಯೂಸ್ ಕಡಬ)newskadaba.com, ಅ. 29 ಬೆಂಗಳೂರು: ದೀಪಾವಳಿ ಹಬ್ಬ ಬರುತ್ತಿದ್ದಂತೆಯೇ ಅಡುಗೆ ಎಣ್ಣೆಯ ಬೆಲೆ ಒಂದು ಲೀಟರ್‌ಗೆ  ₹1ರಿಂದ  ₹5 ರವರೆಗೆ ಹೆಚ್ಚಾಗಿದೆ. ಈಗಾಗಲೇ ಅಗತ್ಯ ವಸ್ತು, ತರಕಾರಿ ಬೆಲೆ ಏರಿಕೆಯಾಗಿರುವ ನಡುವೆಯೇ ಪುನಃ ಅಡುಗೆ ಎಣ್ಣೆ ದರ ಹೆಚ್ಚಾಗಿದ್ದು ಬಡ, ಮಧ್ಯಮ ವರ್ಗದ ಗ್ರಾಹಕರನ್ನು ಕಂಗೆಡಿಸಿದೆ. ಕಳೆದ ತಿಂಗಳಷ್ಟೇ ಕೇಂದ್ರ ಸರ್ಕಾರ ಅಡುಗೆ ಎಣ್ಣೆಯ ಆಮದು ಸುಂಕವನ್ನು ಶೇ.20ರಷ್ಟು ಹೆಚ್ಚಳ ಮಾಡಿದ್ದರಿಂದ ಏಕಾಏಕಿ ಅಡುಗೆ ಎಣ್ಣೆ ದರ ₹20ರಿಂದ ₹25ರವರೆಗೆ ಹೆಚ್ಚಳವಾಗಿತ್ತು. ಇದೀಗ ಪುನಃ ಅಡುಗೆ

ಅಡುಗೆ ಎಣ್ಣೆಯ ಬೆಲೆ ಏರಿಕೆ Read More »

ಬ್ರೇಕಿಂಗ್ ನ್ಯೂಸ್

ಇಂದಿನ ಹವಮಾನ ವರದಿ

(ನ್ಯೂಸ್ ಕಡಬ)newskadaba.com, ಅ. 29 ಬೆಂಗಳೂರು: ಇಂದು ರಾಜ್ಯದಲ್ಲಿ ಕೆಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ನಗರ ಮತ್ತು ಬೆಂ. ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಚಿಕ್ಕಮಗಳೂರು, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಒಣ ಹವಾಮಾನ ಇರಲಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನ ಹವಮಾನ ವರದಿ Read More »

ಕರ್ನಾಟಕ
Scroll to Top