News Kadaba

ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ವಾಹನದ ಮೇಲೆ ಭಯೋತ್ಪಾದಕರ ದಾಳಿ

(ನ್ಯೂಸ್ ಕಡಬ) newskadaba.com ಶ್ರೀನಗರ್, ಅ.28. ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್‌ನಲ್ಲಿ ಭದ್ರತಾ ಪಡೆಗಳ ವಾಹನಗಳ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಭದ್ರತಾ ಪಡೆಗಳು ಉಗ್ರರನ್ನು ಹಿಡಿಯಲು ಶೋಧ ಕಾರ್ಯಾಚರಣೆ ಕೈಗೊಂಡಿವೆ ಎಂದು ಮಾಧ್ಯಮಗಳಿಗೆ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಮೂರರಿಂದ ನಾಲ್ಕು ಉಗ್ರಗಾಮಿಗಳು 15ರಿಂದ 20 ಸುತ್ತು ಗುಂಡಿನ ದಾಳಿ ನಡೆಸಿದ್ದರು. ಈ ಘಟನೆಯಲ್ಲಿ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಬಟ್ಟಲ್ ಎಂಬಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ಗುಂಪೊಂದರ ಮಧ್ಯೆ ಗುಂಡಿನ ಚಕಮಕಿ […]

ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ವಾಹನದ ಮೇಲೆ ಭಯೋತ್ಪಾದಕರ ದಾಳಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು: ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಉಡುಪಿ, ಅ.28. ಈಶ್ವರ ನಗರದ ನಗರಸಭೆ ಪಂಪ್ ಹೌಸ್ ಬಳಿ ಹೆದ್ದಾರಿಯಲ್ಲಿ ಭಾನುವಾರ ಬೆಳಿಗ್ಗೆ ಒಂದು ಕಾರು ಹಾಗೂ ಸಂಜೆ ವೇಳೆಗೆ ಮತ್ತೊಂದು ಕಾರು ಚರಂಡಿಗೆ ಬಿದ್ದ ಘಟನೆ ನಡೆದಿದೆ. ಬೆಳಗ್ಗೆ ಉಡುಪಿಯಿಂದ ಕುದುರೆಮುಖಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಚರಂಡಿಗೆ ಬಿದ್ದಿದೆ. ಸಂಜೆಯ ವೇಳೆಗೆ ಹಿರೇಬೆಟ್ಟುವಿನಲ್ಲಿ ‘ಎರಳ ಗ್ಯಾರಂಟಿ ಅತ್ತ’ ನಾಟಕ ಪ್ರದರ್ಶನಕ್ಕೆಂದು ಹೊರಟಿದ್ದ ತುಳು ರಂಗಭೂಮಿ ಹಾಗೂ ಸಿನಿಮಾ ಕಲಾವಿದರನ್ನು, ಸಹ ಕಲಾವಿದರೊಂದಿಗೆ ವಾಹನವೂ ಚರಂಡಿಗೆ

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು: ಅಪಾಯದಿಂದ ಪಾರು Read More »

ಕರಾವಳಿ

ಮುಡಾ ಹಗರಣ: ಇಡಿ ದಾಳಿ ಬೆನ್ನಲ್ಲೇ ವಾಕಿಂಗ್‌ ಮಾಡುತ್ತಿದ್ದ ಮಾಜಿ ಆಯುಕ್ತ ಪರಾರಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.28. ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣ ಸಂಬಂಧಿಸಿದಂತೆ ಸೋಮವಾರ ಜಾರಿ ನಿರ್ದೇಶನಾಲಯ ದಾಳಿ ನಡೆಸಿದ ಬೆನ್ನಲ್ಲೇ ಮುಡಾದ ಮಾಜಿ ಆಯುಕ್ತ , ಐಎಎಸ್‌ ಅಧಿಕಾರಿ ದಿನೇಶ್‌ಕುಮಾರ್‌ ಪರಾರಿಯಾಗಿದ್ದಾರೆ. ಇಂದು ಬೆಳಗ್ಗೆ ದಿನೇಶ್‌ ಕುಮಾರ್‌ ನೆಲೆಸಿದ್ದ ಬಾಣಸವಾಡಿಯ ದೀಪಿಕಾ ರಾಯಲ್ ಅಪಾರ್ಟ್‌ಮೆಂಟ್‌ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇಡಿ ಅಧಿಕಾರಿಗಳ ದಾಳಿಯ ವೇಳೆ ದಿನೇಶ್‌ ಕುಮಾರ್‌ ವಾಕಿಂಗ್‌ ಮಾಡುತ್ತಿದ್ದರು. ಮನೆ ಮೇಲೆ ದಾಳಿ ನಡೆದ ವಿಚಾರ ತಿಳಿದು ವಾಕಿಂಗ್‌ ಮಾಡುತ್ತಿದ್ದ

ಮುಡಾ ಹಗರಣ: ಇಡಿ ದಾಳಿ ಬೆನ್ನಲ್ಲೇ ವಾಕಿಂಗ್‌ ಮಾಡುತ್ತಿದ್ದ ಮಾಜಿ ಆಯುಕ್ತ ಪರಾರಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ದೇಶದಲ್ಲೇ ನಿರ್ಮಾಣವಾಗಲಿರುವ ಸರಕು ಸಾಗಾಣೆ ವಿಮಾನ – ಟಾಟಾ ಏರ್‌ಕ್ರಾಫ್ಟ್ ಕಾಂಪ್ಲೆಕ್ಸ್‌ ಲೋಕಾರ್ಪಣೆ

ನ್ಯೂಸ್ ಕಡಬ) newskadaba.com ವಡೋದರ, ಅ.28. ಸೇನಾ ಸರಕು ಸಾಗಣೆಗೆ ನೆರವಾಗುವ ಸ್ಪೇನ್‌ನ ಸಿ-295 (C-295) ಅತ್ಯಾಧುನಿಕ ವಿಮಾನಗಳು ಮೇಕ್‌ ಇನ್‌ ಇಂಡಿಯಾ ಅಡಿ ದೇಶದಲ್ಲೇ ತಯಾರಾಗಲಿದೆ. ಇಂದು ಗುಜರಾತ್‌ನ ವಡೋದರಾದಲ್ಲಿ ಸಿ-295 ಅತ್ಯಾಧುನಿಕ ವಿಮಾನಗಳನ್ನು ತಯಾರಿಸಲಿರುವ ಟಾಟಾ ಏರ್‌ಕ್ರಾಫ್ಟ್ ಕಾಂಪ್ಲೆಕ್ಸ್‌ ಅನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಸ್ಪೇನ್‌ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ಜಂಟಿಯಾಗಿ ಲೋಕಾರ್ಪಣೆ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಮೋದಿ, ಟಾಟಾ-ಏರ್‌ಬಸ್ ಉತ್ಪಾದನಾ ಸೌಲಭ್ಯವು ಭಾರತ-ಸ್ಪೇನ್ ಸಂಬಂಧಗಳನ್ನು ಮತ್ತು ಮೇಕ್ ಇನ್ ಇಂಡಿಯಾ,

ದೇಶದಲ್ಲೇ ನಿರ್ಮಾಣವಾಗಲಿರುವ ಸರಕು ಸಾಗಾಣೆ ವಿಮಾನ – ಟಾಟಾ ಏರ್‌ಕ್ರಾಫ್ಟ್ ಕಾಂಪ್ಲೆಕ್ಸ್‌ ಲೋಕಾರ್ಪಣೆ Read More »

ರಾಷ್ಟ್ರೀಯ ನ್ಯೂಸ್

2025ರಿಂದ ದೇಶದಾದ್ಯಂತ ಜನಗಣತಿ ಆರಂಭ

(ನ್ಯೂಸ್ ಕಡಬ) newskadaba.com ನವದೆಹಲಿ, ಅ.28. ನಾಲ್ಕು ವರ್ಷಗಳ ಸುದೀರ್ಘ ವಿಳಂಬದ ನಂತರ 2025ರಲ್ಲಿ ದೇಶದ ಜನಸಂಖ್ಯೆಯ ಅಧಿಕೃತ ಸಮೀಕ್ಷೆಯಾದ ಜನಗಣತಿಯನ್ನು ಸರ್ಕಾರ ಪ್ರಾರಂಭಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿರುವ ಬಗ್ಗೆ ಇಂದು ವರದಿ ಮಾಡಿದೆ. ಜನಗಣತಿ ಪ್ರಕ್ರಿಯೆಯು 2025ರಲ್ಲಿ ಪ್ರಾರಂಭವಾಗುತ್ತದೆ ಮತ್ತು 2026ರವರೆಗೆ ಮುಂದುವರಿಯುವ ನಿರೀಕ್ಷೆಯಿದೆ. ಜನಗಣತಿಯ ನಂತರ ಲೋಕಸಭಾ ಸ್ಥಾನಗಳ ಮರುವಿಂಗಡನೆ ಪ್ರಾರಂಭವಾಗಲಿದ್ದು, ಈ ಪ್ರಕ್ರಿಯೆ 2028ರ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

2025ರಿಂದ ದೇಶದಾದ್ಯಂತ ಜನಗಣತಿ ಆರಂಭ Read More »

ರಾಷ್ಟ್ರೀಯ ನ್ಯೂಸ್

ಐರನ್ ಮ್ಯಾನ್ ಸವಾಲು ಜಯಿಸಿದ ತೇಜಸ್ವಿ ಸೂರ್ಯ: ಪ್ರಧಾನಿ ಮೋದಿ ಅಭಿನಂದನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಅ.28. ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಭಾನುವಾರ ಐರನ್ ಮ್ಯಾನ್ 70.3 ಸವಾಲನ್ನು ಸಮರ್ಥವಾಗಿ ಜಯಿಸಿದ್ದಾರೆ. ಗೋವಾದಲ್ಲಿ ನಡೆದ ಈ ಟ್ರಯತ್ಲಾನ್ ಸ್ಪರ್ಧೆಯಲ್ಲಿ 1.9 ಕಿಲೋಮೀಟರ್ ಈಜು, 90 ಕಿಲೋಮೀಟರ್ ಸೈಕ್ಲಿಂಗ್ ಮತ್ತು 21.1 ಕಿಲೋಮೀಟರ್ ಓಟ ಹೀಗೆ 113 ಕಿಲೋಮೀಟರ್ (70.3 ಮೈಲು) ಕ್ರಮಿಸಬೇಕು. ಇದನ್ನು ಯಶಸ್ವಿಯಾಗಿ ಪೂರೈಸುವ ಮೂಲಕ ತೇಜಸ್ವಿಸೂರ್ಯ ಈ ಸಾಧನೆ ಮಾಡಿದ ಮೊಟ್ಟಮೊದಲ ಸಂಸದ ಎನಿಸಿಕೊಂಡಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದರಾಗಿರುವ ತೇಜಸ್ವಿ ಸೂರ್ಯ, ತಮ್ಮ

ಐರನ್ ಮ್ಯಾನ್ ಸವಾಲು ಜಯಿಸಿದ ತೇಜಸ್ವಿ ಸೂರ್ಯ: ಪ್ರಧಾನಿ ಮೋದಿ ಅಭಿನಂದನೆ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ತಿರುಪತಿ: ಇಸ್ಕಾನ್ ದೇಗುಲಕ್ಕೆ ಮತ್ತೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ)newskadaba.com, ಅ.28,ಅಮರಾವತಿ: ತಿರುಪತಿ ಇಸ್ಕಾನ್ ದೇಗುಲಕ್ಕೆ ಸೋಮವಾರ ಮತ್ತೆ ಬಾಂಬ್ ಬೆದರಿಕೆ ಬಂದಿದ್ದು, ಕೇವಲ 3 ದಿನಗಳ ಅಂತರದಲ್ಲಿ 4ನೇ ಬಾರಿಗೆ ಬೆದರಿಕೆ ಇ-ಮೇಲ್ ಬಂದಿದೆ.ಅ.27ರ ತಡರಾತ್ರಿ ಬಾಂಬ್ ಬೆದರಿಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ದೇವಸ್ಥಾನದ ಭದ್ರತೆಯನ್ನು ಹೆಚ್ಚಿಸಲಾಗಿದೆ. ‘ಪಾಕಿಸ್ತಾನದ ಐಎಸ್‌ಐ ಸಂಘಟನೆಯ ಉಗ್ರರು ದೇವಾಲಯವನ್ನು ಸ್ಫೋಟಿಸಲಿದ್ದಾರೆ’ ಎಂದು ಹೇಳುವ ಇಮೇಲ್‌ ಒಂದು ದೇವಸ್ಥಾನದ ಸಿಬ್ಬಂದಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.  

ತಿರುಪತಿ: ಇಸ್ಕಾನ್ ದೇಗುಲಕ್ಕೆ ಮತ್ತೆ ಬಾಂಬ್ ಬೆದರಿಕೆ Read More »

ಬ್ರೇಕಿಂಗ್ ನ್ಯೂಸ್

ಬೈಕ್- 3 ಕಾರುಗಳ ಮಧ್ಯೆ ಸರಣಿ ಅಪಘಾತ: ನಾಲ್ವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಕಲಬುರಗಿ, ಅ.28. ಬೈಕ್ ಹಾಗೂ ಮೂರು ಕಾರುಗಳ ಮಧ್ಯೆ ಸರಣಿ ಅಪಘಾತವಾಗಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಕಲಬುರಗಿ ತಾಲೂಕಿನ ಅವರಾದ್ ಗ್ರಾಮದಲ್ಲಿ ಸಮೀಪ ನಡೆದಿರುವ ಬಗ್ಗೆ ವರದಿಯಾಗಿದೆ. ಗಾಯಾಳುಗಳನ್ನು ಮಲ್ಲಿಕಾರ್ಜುನ್, ರವಿ, ಅಂಬರೀಶ್ ಹಾಗೂ ನರೇಶ್ ಎಂದು ಗುರುತಿಸಲಾಗಿದೆ. ಬೈಕ್‌ಗೆ ಕಾರು ಢಿಕ್ಕಿ ಹೊಡೆದಿದ್ದು, ಬಳಿಕ ಕಾರಿನ ಹಿಂಬದಿಯಿಂದ ಮತ್ತೆರಡು ಕಾರುಗಳು ಕಾರುಗಳು ಢಿಕ್ಕಿಯಾಗಿವೆ. ಅಪಘಾತದಲ್ಲಿ ಬೈಕ್ ಸವಾರ ಸೇರಿದಂತೆ, ಕಾರಿನಲ್ಲಿದ್ದ ಮೂವರು ಗಂಭೀರ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಾಯಾಳುಗಳನ್ನು ಕಲಬುರಗಿ ನಗರದ

ಬೈಕ್- 3 ಕಾರುಗಳ ಮಧ್ಯೆ ಸರಣಿ ಅಪಘಾತ: ನಾಲ್ವರಿಗೆ ಗಂಭೀರ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

”ಜಾತ್ಯತೀತ” ಎಂದಿರುವಾಗ “ಜಾತಿಗಣತಿ” ಯ ಅಗತ್ಯವೇನಿದೆ? : ಪೇಜಾವರ

(ನ್ಯೂಸ್ ಕಡಬ)newskadaba.com, ಅ.28, ಮಂಗಳೂರು: ಜಾತಿ ವ್ಯವಸ್ಥೆಯನ್ನು ಅನಿಷ್ಠ ಎಂದಿರುವವರೇ ಅದನ್ನು ಪೋಷಿಸುವ ಕೆಲಸ ಮಾಡುತ್ತಿದ್ದಾರೆ. ಜಾತ್ಯಾತೀತ ಎಂದು ಹೇಳುವಾಗ ಜಾತಿ ಗಣತಿ ಅಗತ್ಯ ಏನಿದೆ? ಎಂದು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಪ್ರಶ್ನೆ ಮಾಡಿದ್ದಾರೆ. ಜೊತೆಗೆ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಂಗಳೂರಿನ ಕುಳಾಯಿ ಚಿತ್ರಾಪುರ ಮಠದಲ್ಲಿ ನಡೆದ ಧರ್ಮಸಭೆಯಲ್ಲಿ ಮಾತನಾಡಿದ ಅವರು, ಒಂದು ಕಡೆ ನಾವು ಜಾತ್ಯಾತೀತರು ಎನ್ನುವುದು. ಇನ್ನೊಂದು ಎಲ್ಲಾ ವಲಯದಲ್ಲೂ ಅದನ್ನ ಪೋಷಿಸುವುದು. ಜಾತಿ ವ್ಯವಸ್ಥೆಯನ್ನು ಅನಿಷ್ಟಗಳಿಗೆ

”ಜಾತ್ಯತೀತ” ಎಂದಿರುವಾಗ “ಜಾತಿಗಣತಿ” ಯ ಅಗತ್ಯವೇನಿದೆ? : ಪೇಜಾವರ Read More »

ಕರಾವಳಿ

ಲೆಟರ್‌ಹೆಡ್, ನಕಲಿ ಸೀಲು ಬಳಸಿ ವಂಚನೆ: ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಅ.28. ಶಿವಳ್ಳಿ ಸ್ಪಂದನ ಮಂಗಳೂರು ಎಂಬ ಸಂಸ್ಥೆಯ ಹೆಸರಿನಲ್ಲಿ ಸಂಸ್ಥೆಯ ಲೆಟರ್‌ಹೆಡ್ ಮತ್ತು ನಕಲಿ ಸೀಲು ಬಳಸಿ ವಂಚಿಸಿರುವ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಂಘದ ಕಾರ್ಯದರ್ಶಿ ಹೆಸರಿನಲ್ಲಿ ಆರೋಪಿ ಭಾಸ್ಕರ್ ಭಟ್ ಎಂಬಾತ ಲೆಟರ್‌ಹೆಡ್ ಮತ್ತು ಸೀಲ್‌ನ್ನು ನಕಲಿ ಮಾಡಿದ್ದು, ಸಂಘಕ್ಕೆ ಸಂಬಂಧಿಸಿದ ದಾಖಲೆಗಳನ್ನು ತನ್ನಲ್ಲಿ ಇರಿಸಿಕೊಂಡಿದ್ದಾನೆ ಎಂದು ಆರೋಪಿಸಿ ಕಾರ್ಯದರ್ಶಿ ಕೃಷ್ಣ ಭಟ್ ಎಂಬವರು ಶನಿವಾರ ಕದ್ರಿ ಪೊಲೀಸರಿಗೆ ದೂರು ನೀಡಿದ್ದಾರೆ.    

ಲೆಟರ್‌ಹೆಡ್, ನಕಲಿ ಸೀಲು ಬಳಸಿ ವಂಚನೆ: ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top