News Kadaba

ತಿರುಪತಿ: ಹೊಟೇಲ್ ಗಳಿಗೆ ಬಾಂಬ್ ಬೆದರಿಕೆ ಹಿಂದೆ ಉದಯನಿಧಿ ಸ್ಟ್ಯಾಲಿನ್ ಪತ್ನಿ ಕೈವಾಡ-ಇಮೇಲ್ ಸಂದೇಶ

(ನ್ಯೂಸ್ ಕಡಬ) newskadaba.com ಅ.26, ಹೈದರಬಾದ್: ತಿರುಪತಿಯ ಮೂರು ಪ್ರಮುಖ ಹೋಟೆಲ್‌ಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಸಂಗತಿಗಳು ಬೆಳಕಿಗೆ ಬಂದಿವೆ. ಈ ಬೆದರಿಕೆ ಸಂದೇಶದಲ್ಲಿ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟ್ಯಾಲಿನ್‌ ಅವರ ಕುಟುಂಬಸ್ಥರು ಭಾಗಿಯಾಗಿದ್ದಾರೆ ಎಂದು ಉಲ್ಲೇಖಿಸಲಾಗಿತ್ತು. ಉಪ ಮುಖ್ಯಮಂತ್ರಿ ಉದಯನಿಧಿ ಸ್ಟ್ಯಾಲಿನ್‌ ಅವರ ಪತ್ನಿ ಮತ್ತು ರಾಜ್ಯದ ಉನ್ನತ ಪೊಲೀಸ್ ಅಧಿಕಾರಿ ಹೆಸರನ್ನು ಈ ಬೆದರಿಕೆ ಇ-ಮೇಲ್‌ನಲ್ಲಿ ಉಲ್ಲೇಖಿಸಲಾಗಿತ್ತು ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದೆ. ಸಾಲದೆನ್ನುವಂತೆ ಮಾದಕವಸ್ತು ಕಳ್ಳಸಾಗಣೆ […]

ತಿರುಪತಿ: ಹೊಟೇಲ್ ಗಳಿಗೆ ಬಾಂಬ್ ಬೆದರಿಕೆ ಹಿಂದೆ ಉದಯನಿಧಿ ಸ್ಟ್ಯಾಲಿನ್ ಪತ್ನಿ ಕೈವಾಡ-ಇಮೇಲ್ ಸಂದೇಶ Read More »

ಬ್ರೇಕಿಂಗ್ ನ್ಯೂಸ್

ಇರಾನ್‌ ನ ಮಿಲಿಟರಿ ವಿರುದ್ಧ ಇಸ್ರೇಲ್ ದಾಳಿ

(ನ್ಯೂಸ್ ಕಡಬ) newskadaba.com ಇಸ್ರೇಲ್, ಅ.26. ಇರಾನ್ ನಡೆಸಿದ ಕ್ಷಿಪಣಿ ದಾಳಿಗೆ ಇಸ್ರೇಲ್ಖಾರವಾಗಿ ಪ್ರತಿಕ್ರಿಯೆ ನೀಡಿದೆ. ಶುಕ್ರವಾರ ಮಧ್ಯರಾತ್ರಿ 100 ಕ್ಕೂ ಹೆಚ್ಚು ಯುದ್ಧ ವಿಮಾನಗಳ ಮೂಲಕ ಇರಾನ್‌ನ 20 ಕ್ಕೂ ಹೆಚ್ಚು ಮಿಲಿಟರಿ ಸ್ಥಳಗಳಲ್ಲಿ ಇಸ್ರೇಲ್ ಏರ್‌ಸ್ಟ್ರೈಕ್‌ ನಡೆಸಿದೆ‌. ಇಸ್ರೇಲ್ ದಾಳಿಯಿಂದ ಇರಾನ್‌ನಲ್ಲಿ ಭಾರಿ ನಷ್ಟವಾಗಿದೆ ಎಂದು ವರದಿಯಾಗಿದೆ. ಇರಾನ್ ವಿರುದ್ಧ ಇಸ್ರೇಲ್ ದಾಳಿ ಪ್ರಾರಂಭಿಸಿದಾಗ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಅವರು ಟೆಲ್ ಅವಿವ್‌ನಲ್ಲಿರುವ ಮಿಲಿಟರಿ ಪ್ರಧಾನ ಕಚೇರಿಯಲ್ಲಿದ್ದರು

ಇರಾನ್‌ ನ ಮಿಲಿಟರಿ ವಿರುದ್ಧ ಇಸ್ರೇಲ್ ದಾಳಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಡಾನಾ ಚಂಡಮಾರುತ- 2.80 ಲಕ್ಷ ಎಕರೆ ಪ್ರದೇಶ ಜಲಾವೃತ

(ನ್ಯೂಸ್ ಕಡಬ) newskadaba.com ಭುವನೇಶ್ವರ, ಅ.26. ‘ಡಾನಾ’ ಚಂಡಮಾರುತದಿಂದ ಸುರಿದ ಭಾರಿ ಮಳೆಯಿಂದಾಗಿ ರಾಜ್ಯದಲ್ಲಿ ಸುಮಾರು 1.75 ಲಕ್ಷ ಎಕರೆ ಪ್ರದೇಶದ ಬೆಳೆ ಹಾನಿಯಾಗಿದೆ. ಜೊತೆಗೆ, 2.80 ಲಕ್ಷ ಎಕರೆ ಪ್ರದೇಶ ಜಲಾವೃತಗೊಂಡಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಡಾನಾ ಚಂಡಮಾರುತದಿಂದ ಉಂಟಾಗಿರುವ ಬೆಳೆ ನಷ್ಟದ ಕುರಿತು ಜಂಟಿ ಮೌಲ್ಯಮಾಪನ ನಡೆಸುವಂತೆ ಕೃಷಿ ಮತ್ತು ಕಂದಾಯ ಇಲಾಖೆಗಳ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಸೂಚಿಸಿದೆ ಎಂದು ತಿಳಿಸಿದ್ದಾರೆ. ಚಂಡಮಾರುತದ ಹಾನಿ ಕುರಿತು ಶುಕ್ರವಾರ ಪರಿಶೀಲನಾ ಸಭೆ ನಡೆಸಿದ

ಡಾನಾ ಚಂಡಮಾರುತ- 2.80 ಲಕ್ಷ ಎಕರೆ ಪ್ರದೇಶ ಜಲಾವೃತ Read More »

ಕರ್ನಾಟಕ

ಈಜಲು ಹೋದ ಇಬ್ಬರು ಸಮುದ್ರಪಾಲು

(ನ್ಯೂಸ್ ಕಡಬ) newskadaba.com ಅ.26, ಕುಂದಾಪುರ: ಸಮುದ್ರದಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರ ಪಾಲಾಗಿರುವ ಘಟನೆ ಅ.26 ರಂದು ಬೆಳಿಗ್ಗೆ ಬೀಜಾಡಿ ಬೀಚ್ ನಲ್ಲಿ ಸಂಭವಿಸಿದೆ. ಕುಂದಾಪುರ ಮೂಲದ ಅಜಯ್ ಮೃತಪಟ್ಟಿದ್ದು, ಬೆಂಗಳೂರು ದಾಸರಹಳ್ಳಿ ನಿವಾಸಿ ಸಂತೋಷ್ ನೀರುಪಾಲಾದ ಮತ್ತೊಬ್ಬ ಯುವಕನಾಗಿದ್ದು, ಈತನಿಗಾಗಿ ಹುಡುಕಾಟ ಮುಂದುವರೆದಿದೆ. ಜೊತೆಗೆ ಬಂದಿದ್ದ ಮೋಕ್ಷಿತ್ ಮತ್ತು ಶ್ರೀಯಾನ್ ಅಪಾಯದಿಂದ ಪಾರಾಗಿದ್ದಾರೆ. ಕುಂದಾಪುರ ಪೊಲೀಸ್ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈಜಲು ಹೋದ ಇಬ್ಬರು ಸಮುದ್ರಪಾಲು Read More »

ಕರಾವಳಿ

8 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ‘ಕ್ಯಾಪ್ಟನ್’ ಶ್ವಾನಗೆ ನಿವೃತ್ತಿ ಸನ್ಮಾನ

(ನ್ಯೂಸ್ ಕಡಬ) newskadaba.com ಉಡುಪಿ, ಅ.26. ಎಂಟು ವರ್ಷಗಳ ಕಾಲ ನಿಷ್ಠಾವಂತ ಸೇವೆ ಸಲ್ಲಿಸಿದ ಪೊಲೀಸ್ ಶ್ವಾನ ‘ಕ್ಯಾಪ್ಟನ್’ ತನ್ನ ಸೇವೆಯಿಂದ ಅ.25ರಂದು ನಿವೃತ್ತಿ ಹೊಂದಿದೆ. ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ಕ್ಯಾಪ್ಟನ್‌ಗೆ ಪೊಲೀಸ್ ಅಧೀಕ್ಷಕರು ನಿವೃತ್ತಿ ಸನ್ಮಾನ ಮಾಡಿದರು. ಮಾನ್ಯ ಪ್ರಧಾನ ಮಂತ್ರಿಗಳು, ರಾಷ್ಟ್ರಪತಿಗಳು, ಐಪಿಎಲ್ ಟೂರ್ನಿ, ವಿಶ್ವಕಪ್, ಏರ್ ಶೋ, ಬೇರೆ ದೇಶಗಳ ಗೌರವಾನ್ವಿತ ಪ್ರಧಾನಿಗಳು ಹೀಗೆ ರಾಜ್ಯ ಹೊರರಾಜ್ಯ ಹೊರ ಜಿಲ್ಲೆಗಳಲ್ಲಿ ಸರಿ ಸುಮಾರು 400 ಕ್ಕೂ ಅಧಿಕ ವಿದ್ವಂಸಕ ಕೃತ್ಯ ತಪಾಸಣಾ

8 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ‘ಕ್ಯಾಪ್ಟನ್’ ಶ್ವಾನಗೆ ನಿವೃತ್ತಿ ಸನ್ಮಾನ Read More »

ಕರಾವಳಿ

ಲಾರೆನ್ಸ್ ಬಿಷ್ಣೋಯ್‌ ಸಂದರ್ಶನ ಪ್ರಕರಣ- 2 ಡಿಎಸ್‌ಪಿ ಸೇರಿ 7 ಪಂಜಾಬ್ ಪೊಲೀಸರ ಅಮಾನತು

(ನ್ಯೂಸ್ ಕಡಬ) newskadaba.com ನವದೆಹಲಿ, ಅ.26. ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್‌ 2022 ರಲ್ಲಿ ಜೈಲಿನಿಂದ ಮಾಧ್ಯಮಕ್ಕೆ ಸಂದರ್ಶನ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಪ ಅಧೀಕ್ಷಕ ಶ್ರೇಣಿಯ ಅಧಿಕಾರಿಗಳು ಮತ್ತು ಏಳು ಪಂಜಾಬ್ ಪೊಲೀಸರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಶುಕ್ರವಾರ ರಾಜ್ಯ ಗೃಹ ಕಾರ್ಯದರ್ಶಿ ಗುರುಕಿರತ್ ಕಿರ್ಪಾಲ್ ಸಿಂಗ್ ಅವರು ಅಮಾನತು ಆದೇಶವನ್ನು ಹೊರಡಿಸಿದ್ದಾರೆ. ಅಮಾನತುಗೊಂಡ ಇತರ ಪೊಲೀಸರಲ್ಲಿ ಸಬ್-ಇನ್‌ಸ್ಪೆಕ್ಟರ್ ರೀನಾ, ಸಿಐಎ, ಖರಾರ್, ಸಬ್-ಇನ್‌ಸ್ಪೆಕ್ಟರ್ ಜಗತ್ಪಾಲ್ ಜಂಗು, ಎಜಿಟಿಎಫ್, ಸಬ್-ಇನ್‌ಸ್ಪೆಕ್ಟರ್ ಶಗಂಜಿತ್ ಸಿಂಗ್

ಲಾರೆನ್ಸ್ ಬಿಷ್ಣೋಯ್‌ ಸಂದರ್ಶನ ಪ್ರಕರಣ- 2 ಡಿಎಸ್‌ಪಿ ಸೇರಿ 7 ಪಂಜಾಬ್ ಪೊಲೀಸರ ಅಮಾನತು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ನಿವಾಸಕ್ಕೆ ಉಪ‌ರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.26. ಇಂದು ಉಪ‌ರಾಷ್ಟ್ರಪತಿ ಜಗದೀಪ್ ಧನಕರ್ ಅವರು ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರ ನಿವಾಸಕ್ಕೆ ಆಗಮಿಸಿದರು ಎಂದು ವರದಿಯಾಗಿದೆ. ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಹೂಗುಚ್ಛ ನೀಡಿ ಸ್ವಾಗತಿಸಿದರು. ಉಪರಾಷ್ಟ್ರಪತಿ, ಹೆಚ್​ಡಿ ದೇವೇಗೌಡ ಮತ್ತು ಹೆಚ್​ಡಿ ಕುಮಾರಸ್ವಾಮಿ ಅವರ ಜೊತೆಗೆ ಸ್ವಲ್ಪ ಸಮಯ ಮಾತನಾಡಿ ತೆರಳಿದ್ದಾರೆ ಎಂಬುವುದಾಗಿ ಮಾಹಿತಿ ಲಭ್ಯವಾಗಿದೆ.

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ನಿವಾಸಕ್ಕೆ ಉಪ‌ರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ Read More »

ಕರ್ನಾಟಕ

ಕಲುಷಿತ ನೀರು ಕುಡಿದು 70 ಮಂದಿ ಅಸ್ವಸ್ಥ..!

(ನ್ಯೂಸ್ ಕಡಬ) newskadaba.com ಧಾರವಾಡ, ಅ.26. ಕಲುಷಿತ ನೀರು ಕುಡಿದು 70ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮುಟಗಿ ಗ್ರಾಮದಲ್ಲಿ ಗುರುವಾರ ನಡೆದಿದೆ. ಗ್ರಾಮದಲ್ಲಿ ಕಲುಷಿತ ನೀರು ಕುಡಿದ ಬಳಿಕ ಹಲವರಲ್ಲಿ ವಾಂತಿ ಹಾಗೂ ಅತಿಸಾರ ಕಾಣಿಸಿಕೊಂಡಿದೆ. ಅಸ್ವಸ್ಥಗೊಂಡ 70 ಮಂದಿಯ ಪೈಕಿ 10 ಮಂದಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಹಾಗೂ 36 ಮಂದಿ ಕಲಘಟಗಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಔಷಧಿ ಪಡೆದುಕೊಂಡ ಪರಿಣಾಮ ಚೇತರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕಲುಷಿತ ನೀರು ಕುಡಿದು 70 ಮಂದಿ ಅಸ್ವಸ್ಥ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಖಾಲಿ ಇರುವ 2 ಲಕ್ಷ ಹುದ್ದೆ ಭರ್ತಿ: ಪ್ರಿಯಾಂಕ್ ಖರ್ಗೆ

(ನ್ಯೂಸ್ ಕಡಬ) newskadaba.com ಅ.26,ಕಲಬುರಗಿ: ರಾಜ್ಯದಲ್ಲಿರುವ  ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2 ಲಕ್ಷ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಶುಕ್ರವಾರ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ಕಲಬುರಗಿ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ರಾಧಾಕೃಷ್ಣ ದೊಡ್ಡಮನಿರವರು ಚಿತ್ತಾಪುರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಿಯಾಂಕ್ ಖರ್ಗೆಯವರು ಮಾತನಾಡಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಈಗಾಗಲೇ 900 ಎಂಜಿನಿಯರ್‌ಗಳ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಕಲ್ಯಾಣ ಪಥ

ಖಾಲಿ ಇರುವ 2 ಲಕ್ಷ ಹುದ್ದೆ ಭರ್ತಿ: ಪ್ರಿಯಾಂಕ್ ಖರ್ಗೆ Read More »

ಉದ್ಯೋಗ
Scroll to Top