News Kadaba

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ

(ನ್ಯೂಸ್‌ ಕಡಬ) newskadaba.com,  ಮಾ.27 : ಯುವ ಜನತಾದಳ (ಜಾ) ದಕ್ಷಿಣ ಕನ್ನಡ ಜಿಲ್ಲಾ ಪ್ರಮುಖ ಪದಾಧಿಕಾರಿಗಳ ಸಭೆ ಮಂಗಳೂರಿನ ಜಿಲ್ಲಾ ಯುವ ಜನತಾದಳ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತುಸಭೆಯಲ್ಲಿ ಮಾತನಾಡಿದ ಅಕ್ಷಿತ್ ಸುವರ್ಣ ಅವರು, ಪಕ್ಷ ಸಂಘಟನೆಯ ಬಲವರ್ಧನೆಗೆ ಹೆಚ್ಚಿನ ಒತ್ತು ನೀಡುವ ಅಗತ್ಯವಿದೆ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ನಡೆಯಲಿರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಯುವಕರನ್ನು ಸಂಘಟಿಸುವ ಮೂಲಕ ಗ್ರಾಮ ಹಾಗೂ ನಗರ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಬೇಕು ಎಂದರು…ಮುಂಬರುವ ಚುನಾವಣೆಯಲ್ಲಿ ಮಾಜಿ […]

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಬಾಲಕನಿಗೆ ಕಿವಿ ಮರುಜೋಡಣೆ ಶಸ್ತ್ರಚಿಕಿತ್ಸೆ

(ನ್ಯೂಸ್‌ ಕಡಬ) newskadaba.com,  ಮಾ.27 : ಹದಿಮೂರರ ಹರೆಯದ ಬಾಲಕನಿಗೆ ನಗರದ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜರಿ ವಿಭಾಗದ ವೈದ್ಯರು ಅತ್ಯಂತ ಸಂಕೀರ್ಣವಾದ ಕಿವಿ ಮರುಜೋಡನೆ ಶಸ್ತ್ರಚಿಕಿತ್ಸೆ ಯನ್ನು ಯಶಸ್ವಿಯಾಗಿ ನೆರವೇರಿಸಿದ್ದಾರೆ. ಘಟನೆಯ ವಿವರ: ಹುಟ್ಟಿನಿಂದ ‘ಮೈಕ್ರೋಟಿಯಾ’ ಸಮಸ್ಯೆಯಿಂದ ಬಳಲುತ್ತಿದ್ದ ೧೩ ವರ್ಷದ ಬಾಲಕನೊಬ್ಬನಿಗೆ ಒಂದು ಕಿವಿಯ ಗಾತ್ರ ಚಿಕ್ಕದಾಗಿತ್ತು. ಇದು ಕೇವಲ ದೈಹಿಕ ರೂಪದ ಮೇಲಲ್ಲದೆ, ಬಾಲಕನ ಆತ್ಮವಿಶ್ವಾಸದ ಮೇಲೂ ಪರಿಣಾಮ ಬೀರಿತ್ತು. ಸುಧಾರಿತ ಚಿಕಿತ್ಸೆಗಾಗಿ ಕುಟುಂಬವು ಫಾದರ್ ಮುಲ್ಲರ್ ಆಸ್ಪತ್ರೆಯನ್ನು

ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಬಾಲಕನಿಗೆ ಕಿವಿ ಮರುಜೋಡಣೆ ಶಸ್ತ್ರಚಿಕಿತ್ಸೆ Read More »

ಆರೋಗ್ಯ ಮಾಹಿತಿ, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ : ದೇವಸ್ಥಾನದ ಕುರಿತಾದ ಶತಮಾನಗಳ ನಂಬಿಕೆ ಸಾಕ್ಷ್ಯಚಿತ್ರ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಮಾ.27 : ದೃಷ್ಟಿ ಮೀಡಿಯಾ ಸಂಸ್ಥೆಯ ನಿರ್ಮಾಣದಲ್ಲಿ ತಯಾರಿಸಿರುವ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಕುರಿತಾದ ಶತಮಾನಗಳ ನಂಬಿಕೆ ಎಂಬ ಸಾಕ್ಷ್ಯಚಿತ್ರದ ಬಿಡುಗಡೆ ಸುಳ್ಯದಲ್ಲಿ ನಡೆಯಿತು. ಪದ್ಮಶ್ರೀ ಪುರಸ್ಕೃತ ಡಾ। ಗಿರೀಶ್ ಭಾರದ್ವಾಜ್ ಅವರು ಸಾಕ್ಷ್ಯಚಿತ್ರ ಬಿಡುಗಡೆ ಮಾಡಿ ಮಾತನಾಡಿ, ತೊಡಿಕಾನ ದೇವಸ್ಥಾನದ ಕುರಿತಾದ ಸಾಕ್ಷ್ಯಚಿತ್ರ ಇಲ್ಲಿನ ಸುಂದರ ಪ್ರಕೃತಿ ಸೌಂದರ್ಯವನ್ನು ತೋರಿಸುವ ಜತೆಗೆ ಕ್ಷೇತ್ರದ ಪರಿಚಯ, ವಿಶೇಷತೆಯನ್ನು ನಮಗೆ ತಿಳಿಸಿದೆ. ಇಂತಹ ಸಾಕ್ಷಚಿತ್ರಗಳು ಸುಳ್ಯದ ಪ್ರವಾಸೋದ್ಯಮದ ಬೆಳವಣಿಗೆಗೆ ಕೊಡುಗೆ

ಸುಳ್ಯ : ದೇವಸ್ಥಾನದ ಕುರಿತಾದ ಶತಮಾನಗಳ ನಂಬಿಕೆ ಸಾಕ್ಷ್ಯಚಿತ್ರ ಬಿಡುಗಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನವೋದಯ ಪ್ರವೇಶ ಪರೀಕ್ಷೆಗೆ ಜ್ಞಾನದೀಪದಿಂದ ತರಬೇತಿ – ಸೀಮಿತ ಸೀಟುಗಳಿಗೆ ಮಾತ್ರ ಅವಕಾಶ!

(ನ್ಯೂಸ್‌ ಕಡಬ) newskadaba.com,  ಮಾ.27  ಬೆಳ್ಳಾರೆ: ಗುಣಮಟ್ಟದ ಶಿಕ್ಷಣ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಸುಳ್ಯದ ‘ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆ’ ವತಿಯಿಂದ 2026-27ನೇ ಸಾಲಿನ ನವೋದಯ ಮತ್ತು ಮೊರಾರ್ಜಿ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗಾಗಿ ಒಂದು ತಿಂಗಳ ವಿಶೇಷ ಪೂರ್ವ ಸಿದ್ಧತಾ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. ​ಅರ್ಹತೆ: ಪ್ರಸ್ತುತ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಸುಸಂದರ್ಭ ಒದಗಿಬಂದಿದೆ. ​ತರಬೇತಿ ವಿಷಯಗಳು: ಗಣಿತ, ಮಾನಸಿಕ ಸಾಮರ್ಥ್ಯ

ನವೋದಯ ಪ್ರವೇಶ ಪರೀಕ್ಷೆಗೆ ಜ್ಞಾನದೀಪದಿಂದ ತರಬೇತಿ – ಸೀಮಿತ ಸೀಟುಗಳಿಗೆ ಮಾತ್ರ ಅವಕಾಶ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗೂಗಲ್‌ ಮ್ಯಾಪ್‌ ತಂದಿಟ್ಟ ಅನಾಹುತ, ಲಾರಿ ಡಿಕ್ಕಿಯಾಗಿ ಕಾರು ಚಾಲಕ ಮೃತ್ಯು ,ಗೋಡೌನ್‌ಗೆ ಅಗ್ನಿ!!!

(ನ್ಯೂಸ್‌ ಕಡಬ) newskadaba.com,  ಮಾ.27: ಬೆಂಗಳೂರಿನಲ್ಲಿ ಗೂಗಲ್ ಮ್ಯಾಪ್‌ ನಂಬಿ ಓಡಿಸಿದ ಟ್ರಕ್‌ ಚಾಲಕನಿಂದ ದೊಡ್ಡ ಅನಾಹುತವೇ ನಡೆದಿದೆ. ಗೋಡೌನ್‌ಗೆ ಹಾಗೂ ಕಾರಿಗೆ ಟ್ರಕ್ ಡಿಕ್ಕಿ ಆಗಿ ಕಾರಿನಲ್ಲಿ ಮಲಗಿದ್ದ ವ್ಯಕ್ತಿ ಸಾವನಪ್ಪಿದ್ದಾರೆ. ಕುರುಬರಹಳ್ಳಿ ಬಳಿ ಈ ಘಟನೆ ನಡೆದಿದೆ. ಮೊದಲು ಕಾರಿಗೆ, ನಂತರ ರಾಜಕಾಲುವೆಗೆ ಡಿಕ್ಕಿ ಹೊಡೆದ ಬಳಿಕ ಟ್ರಕ್‌ ಟ್ಕ್ರಾಪ್‌ ಗೋಡೌನ್‌ಗೆ ನುಗ್ಗಿದೆ. ಆಂಧ್ರ ಪ್ರದೇಶದಿಂದ ಕಬ್ಬಿಣದ ಸರಳುಗಳನ್ನು ಹೊತ್ತು ಬಂದ ಲಾರಿ ಸುಂಕದಕಟ್ಟೆ ಕಡೆಗೆ ಸಾಗುತ್ತಿತ್ತು. ಗೂಗಲ್ ಮ್ಯಾಪ್ ನೋಡಿಕೊಂಡು ಚಾಲಕ ಲಾರಿ

ಗೂಗಲ್‌ ಮ್ಯಾಪ್‌ ತಂದಿಟ್ಟ ಅನಾಹುತ, ಲಾರಿ ಡಿಕ್ಕಿಯಾಗಿ ಕಾರು ಚಾಲಕ ಮೃತ್ಯು ,ಗೋಡೌನ್‌ಗೆ ಅಗ್ನಿ!!! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನವ ಮಂಗಳೂರು ಬಂದರು ಪ್ರಾಧಿಕಾರಕ್ಕೆ 40,000ನೇ ಹಡಗು ಆಗಮನ

(ನ್ಯೂಸ್‌ ಕಡಬ) newskadaba.com,  ಮಾ.27: ನವ ಮಂಗಳೂರು ಬಂದರು ಪ್ರಾಧಿಕಾರವು ಗುರುವಾರ ಸಂಜೆ 4 ಗಂಟೆಗೆ ಬರ್ತ್ ಸಂಖ್ಯೆ 13ಕ್ಕೆ ಎಲ್‌ಪಿಜಿ ಟ್ಯಾಂಕರ್ ಎಂ.ಟಿ. ಅಪೋಲೋ ಓಶನ್ ಆಗಮನದೊಂದಿಗೆ ಮಹತ್ವದ ಮೈಲುಗಲ್ಲನ್ನು ದಾಖಲಿ ಸಿದೆ. ಈ ಹಡಗು ಬಂದರು ಸ್ಥಾಪನೆಯ ನಂತರ ಆಗಮಿಸಿದ 40,000ನೇ ಹಡಗು ಎಂಬ ವಿಶೇಷ ದಾಖಲೆಯನ್ನು ಮಾಡಿದೆ. ಪ್ರಾಧಿಕಾರದ ಉಪಾಧ್ಯಕ್ಷೆ ಎಸ್. ಶಾಂತಿ ಹಡಗಿನ ಕ್ಯಾಪ್ಟನ್ ಅವರನ್ನು ಸನ್ಮಾನಿಸಿ ಹಡಗನ್ನು ಅಧಿಕೃತವಾಗಿ ಸ್ವಾಗತಿಸಿದರು. ಈ ಸಂದರ್ಭ ಬಂದರುದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಎಂ.ಟಿ.

ನವ ಮಂಗಳೂರು ಬಂದರು ಪ್ರಾಧಿಕಾರಕ್ಕೆ 40,000ನೇ ಹಡಗು ಆಗಮನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಬ್ರಾಯ ಚೊಕ್ಕಾಡಿಯವರಿಗೆ ಪ್ರತಿಷ್ಠಿತ ‘ಡಾ. ದ. ರಾ. ಬೇಂದ್ರೆ ಕಾವ್ಯ ಪ್ರಶಸ್ತಿ’ ಗೌರವ

(ನ್ಯೂಸ್‌ ಕಡಬ) newskadaba.com,  ಮಾ.27: ಖ್ಯಾತ ಕವಿ ಹಾಗೂ ಸುಳ್ಯ ತಾಲೂಕಿನ ಚೊಕ್ಕಾಡಿ ನಿವಾಸಿಯಾದ ಸುಬ್ರಾಯ ಚೊಕ್ಕಾಡಿಯವರಿಗೆ ಶಿವಮೊಗ್ಗದ ಕರ್ನಾಟಕ ಸಂಘವು ನೀಡುವ ಪ್ರತಿಷ್ಠಿತ “ಡಾ. ದ. ರಾ. ಬೇಂದ್ರೆ ಕಾವ್ಯ ಪ್ರಶಸ್ತಿ” ಜೀವಮಾನ ಸಾಧನೆಗಾಗಿ ಘೋಷಿಸಲಾಗಿದೆ. ನಗದು ಬಹುಮಾನ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಅವರ ದೀರ್ಘಕಾಲದ ಸೇವೆ ಮತ್ತು ಕಾವ್ಯಸಾಧನೆಗೆ ಈ ಗೌರವ ನೀಡಲಾಗಿದೆ ಎಂದು ಸಂಘ ತಿಳಿಸಿದೆ. ಪ್ರಶಸ್ತಿ ಪ್ರದಾನ ಸಮಾರಂಭವನ್ನು ಶೀಘ್ರದಲ್ಲೇ ಆಯೋಜಿಸಲಾಗುವುದು ಎಂದು ಕರ್ನಾಟಕ ಸಂಘ

ಸುಬ್ರಾಯ ಚೊಕ್ಕಾಡಿಯವರಿಗೆ ಪ್ರತಿಷ್ಠಿತ ‘ಡಾ. ದ. ರಾ. ಬೇಂದ್ರೆ ಕಾವ್ಯ ಪ್ರಶಸ್ತಿ’ ಗೌರವ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್, ವಿಶೇಷ ಲೇಖನಗಳು

ಪೆಟ್ರೋಲ್-‌ ಡೀಸೆಲ್ ಮೇಲಿನ ಅಬಕಾರಿ ಸುಂಕ ಭಾರಿ ಕಡಿತ: ಪೆಟ್ರೋಲ್ ₹3, ಡೀಸೆಲ್ ಶೂನ್ಯ

(ನ್ಯೂಸ್‌ ಕಡಬ) newskadaba.com,  ಮಾ.27:  ದೇಶದ ಜನರಿಗೆ ದೊಡ್ಡ ನಿರಾಳ ನೀಡುವ ಕ್ರಮವಾಗಿ ಕೇಂದ್ರ ಸರ್ಕಾರ ಶುಕ್ರವಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಭಾರಿ ಪ್ರಮಾಣದಲ್ಲಿ ಕಡಿತ ಮಾಡಿದೆ. ಪೆಟ್ರೋಲ್ ಮೇಲಿನ ಸುಂಕವನ್ನು ಲೀಟರ್‌ಗೆ ₹13ರಿಂದ ₹3ಕ್ಕೆ ಇಳಿಸಲಾಗಿದ್ದು, ಡೀಸೆಲ್ ಮೇಲಿನ ₹10 ಸುಂಕವನ್ನು ಸಂಪೂರ್ಣವಾಗಿ ರದ್ದುಪಡಿಸಲಾಗಿದೆ. ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧ ಮತ್ತು ಅದರ ಪರಿಣಾಮವಾಗಿ ಟೆಹ್ರಾನ್ ಹೇರಿದ ಹಾರ್ಮುಜ್ ಜಲಸಂಧಿಯ ದಿಗ್ಬಂಧನದಿಂದಾಗಿ ಜಾಗತಿಕ ಇಂಧನ ಬಿಕ್ಕಟ್ಟಿನ ಮಧ್ಯೆ ಈ ಕಡಿತ ಸಂಭವಿಸಿದೆ.

ಪೆಟ್ರೋಲ್-‌ ಡೀಸೆಲ್ ಮೇಲಿನ ಅಬಕಾರಿ ಸುಂಕ ಭಾರಿ ಕಡಿತ: ಪೆಟ್ರೋಲ್ ₹3, ಡೀಸೆಲ್ ಶೂನ್ಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಿ.ಟಿ.ಟಿ.ಸಿ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಮಾ.27:  ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ), ಬೈಕಂಪಾಡಿ ಮಂಗಳೂರು ಇಲ್ಲಿ ಬಿ.ಇ ( ಕಂಪ್ಯೂಟರ್ ಸೈನ್ಸ್) ಅಥವಾ ಬಿ.ಇ (ಇನ್ಫಾರ್ಮೇಶನ್ ಸೈನ್ಸ್) ಮತ್ತು ಬಿ.ಇ ( ಮೆಕ್ಯಾನಿಕಲ್) ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅದೇ ರೀತಿ ಪದವಿ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರುವವರಿಂದ ಆಫೀಸು ಕ್ಲರ್ಕ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ದೂ.ಸಂ: 9008263660, 8073208137, 0824-2408003 ಸಂಪರ್ಕಿಸಬಹುದು ಎಂದು ಜಿ.ಟಿ.ಟಿ.ಸಿ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿ.ಟಿ.ಟಿ.ಸಿ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣ ಉಚಿತ: ಕೇಂದ್ರ ಸರ್ಕಾರ

(ನ್ಯೂಸ್‌ ಕಡಬ) newskadaba.com,  ಮಾ.27:  ಕೇಂದ್ರ ಸರ್ಕಾರವು ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯಿಂದ ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣವನ್ನು ಉಚಿತವಾಗಿ ನೀಡಲು, ಜೊತೆಗೆ ಅವರ ಕುಟುಂಬದ ಕೆಲವು ವರ್ಗಗಳಿಗೂ ಈ ಸೌಲಭ್ಯ ವಿಸ್ತರಣೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಶೌರ್ಯ ಪ್ರಶಸ್ತಿ ಪಡೆದ ಸಶಸ್ತ್ರ ಪಡೆಗಳ ಎಲ್ಲಾ ಸಿಬ್ಬಂದಿ, ಪ್ರಶಸ್ತಿ ಪಡೆದವರು ಮೃತಪಟ್ಟಿದ್ದರೆ ಅವರ ಹೆಂಡತಿ ಅಥವಾ ಗಂಡ ಹಾಗೂ ಅವರು ಮರುಮದುವೆಯಾಗುವವರೆಗೂ ಪ್ರಯೋಜನ ಪಡೆಯಬಹುದು. ಒಂದು ವೇಳೆ ಮೃತರಾದ ಬಳಿಕ ಪ್ರಶಸ್ತಿ ಘೋಷಣೆಯಾಗಿದ್ದರೆ

ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣ ಉಚಿತ: ಕೇಂದ್ರ ಸರ್ಕಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top