News Kadaba

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಮಾ.27:  ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಆಲಿಕಲ್ಲು ಮಳೆ ಏ.1ರವರೆಗೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಶಿವಮೊಗ್ಗ, ವಿಜಯನಗರದಲ್ಲಿ ಗುಡುಗು, ಮಿಂಚು ಜಾಸ್ತಿ ಕಾಣಿಸಿಕೊಳ್ಳುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ರೈತರು, ಕುರಿಗಾಹಿಗಳು ಎಚ್ಚರಿಕೆವಹಿಸುವಂತೆ ಇಲಾಖೆ ಸಲಹೆ ಕೊಟ್ಟಿದೆ. ಬೆಂಗಳೂರಿನಲ್ಲಿ […]

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬದಲ್ಲಿ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ 65ನೇ ವರ್ಷದ ಏಕಹಾ ಭಜನಾ ಮಹೋತ್ಸವ

(ನ್ಯೂಸ್‌ ಕಡಬ) newskadaba.com,  ಮಾ.26:    ಆತ್ಮೀಯರೇ,,, ದಿನಾಂಕ 03-04-2026 ನೇ ಶುಕ್ರವಾರ ಕಡಬ 65 ನೇ ವರ್ಷದ ಏಕಹಾ ಭಜನಾ ಸಂದರ್ಭದಲ್ಲಿ ಮದ್ಯಾಹ್ನ ಅನ್ನ ಬಡಿಸುವ ಸ್ವಯಂಸೇವಕರಾಗಿ ನಮ್ಮ ಸಮಾಜ ಎಲ್ಲಾ ಸದಸ್ಯರ ಸಹಕಾರವನ್ನು ಕೇಳಿಕೊಂಡಿದ್ದಾರೆ. ಹಾಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿ ಮಾಡಿಕೊಡಬೇಕಾಗಿ ತಮ್ಮೆಲ್ಲರಲ್ಲಿ ವಿನಯಪೂರ್ವಕ ವಿನಂತಿ .. ನಮ್ಮ ಬಿಲ್ಲವ ಸಮಾಜದ ಎಲ್ಲಾ ಹೆಚ್ಚಿನ ಕಾರ್ಯಕ್ರಮ ಮತ್ತು ಮೀಟಿಂಗ್ ಇತ್ಯಾದಿ ಚಟುವಟಿಕೆಗಳು ನಡೆಯುವ ಸ್ಥಳ ಶ್ರೀ ದುರ್ಗಾಂಬಿಕಾ ಅಮ್ಮನವರ ಸನ್ನಿದಿ ಹಾಗಾಗಿ ತಾಯಿಯ ಮಡಿಲಿನಲ್ಲಿ

ಕಡಬದಲ್ಲಿ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ 65ನೇ ವರ್ಷದ ಏಕಹಾ ಭಜನಾ ಮಹೋತ್ಸವ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಶ್ವದ ಅತ್ಯಂತ ಜನಪ್ರಿಯ ನಾಯಕ ಮೋದಿ ಮತ್ತೆ ನಂ.1!

(ನ್ಯೂಸ್‌ ಕಡಬ) newskadaba.com,  ಮಾ.26:    ಜಾಗತಿಕ ಮಟ್ಟದಲ್ಲಿ ನಾಯಕರ ಜನಪ್ರಿಯತೆ ಮತ್ತು ವಿಶ್ವಾಸಾರ್ಹತೆಯನ್ನು ಅಳೆಯುವ ಬೆಳಿಗ್ಗೆ ಸಮಾಲೋಚನೆ ಸಂಸ್ಥೆಯ “ಗ್ಲೋಬಲ್ ಲೀಡರ್ ಅಪ್ರೂವಲ್ ರೇಟಿಂಗ್ ಟ್ರ್ಯಾಕರ್”ನಲ್ಲಿ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತೊಮ್ಮೆ ಅಗ್ರಸ್ಥಾನ ಪಡೆದಿದ್ದಾರೆ. ಮಾರ್ಚ್ 2026ರ ಮೊದಲ ವಾರದಲ್ಲಿ ಸಂಗ್ರಹಿಸಿದ ದತ್ತಾಂಶದ ಆಧಾರದಲ್ಲಿ ಸಿದ್ಧಗೊಂಡ ಈ ಸಮೀಕ್ಷೆಯಲ್ಲಿ ಮೋದಿ ಅವರಿಗೆ ಶೇ. 68ರಷ್ಟು ಅನುಮೋದನೆ ರೇಟಿಂಗ್ ದೊರೆತಿದೆ. ಈ ಪಟ್ಟಿಯಲ್ಲಿ ದಕ್ಷಿಣ ಕೊರಿಯಾದ ಅಧ್ಯಕ್ಷ ಲೀ ಜೇ-ಮ್ಯುಂಗ್ ಅವರು ಶೇ. 62 ರೇಟಿಂಗ್‌ನೊಂದಿಗೆ ಎರಡನೇ

ವಿಶ್ವದ ಅತ್ಯಂತ ಜನಪ್ರಿಯ ನಾಯಕ ಮೋದಿ ಮತ್ತೆ ನಂ.1! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಮಕ್ಕಳ ಬೇಸಿಗೆ ಶಿಬಿರಕ್ಕೆ ಸಜ್ಜಾದ ಸೈಂಟ್ ಜೋಕಿಮ್ಸ್ ಶಿಕ್ಷಣ ಸಂಸ್ಥೆಗಳು

(ನ್ಯೂಸ್‌ ಕಡಬ) newskadaba.com,  ಮಾ.26 ಕಡಬ: ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಕೌಶಲ್ಯಾಭಿವೃದ್ಧಿ ಮತ್ತು ಆತ್ಮವಿಶ್ವಾಸವನ್ನು ಬೆಳೆಸುವ ಉದ್ದೇಶದಿಂದ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಗಳ ವತಿಯಿಂದ ಮಕ್ಕಳಿಗಾಗಿ ವಿಶೇಷ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ.ಮಾರ್ಚ್ 28ರಿಂದ ಆರಂಭವಾಗುವ ಈ ಶಿಬಿರವು ಪ್ರತಿದಿನ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ಶಿಬಿರದಲ್ಲಿ ವಿವಿಧ ಕ್ರಿಯಾತ್ಮಕ ಚಟುವಟಿಕೆಗಳು, ಕಲಾ ಅಭ್ಯಾಸ, ಆಟಗಳು ಹಾಗೂ ಮನರಂಜನಾ ಕಾರ್ಯಕ್ರಮಗಳನ್ನು ಒಳಗೊಂಡಿದ್ದು, ಮಕ್ಕಳ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಶಿಬಿರವು ಕಡಬದಲ್ಲಿರುವ ಸೈಂಟ್ ಜೋಕಿಮ್ಸ್ ಚರ್ಚ್ ಸಮುದಾಯ ಭವನದಲ್ಲಿ

ಕಡಬ: ಮಕ್ಕಳ ಬೇಸಿಗೆ ಶಿಬಿರಕ್ಕೆ ಸಜ್ಜಾದ ಸೈಂಟ್ ಜೋಕಿಮ್ಸ್ ಶಿಕ್ಷಣ ಸಂಸ್ಥೆಗಳು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೆಬ್ರಿ: ರಜೆಯಲ್ಲಿ ಕೆಲಸಕ್ಕೆ ತೆರಳಿದ್ದ ಪಿಯುಸಿ ವಿದ್ಯಾರ್ಥಿ ಏಣಿ ಮೇಲಿಂದ ಬಿದ್ದು ಮೃತ್ಯು

(ನ್ಯೂಸ್‌ ಕಡಬ) newskadaba.com,  ಮಾ.26:  ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ ಬಿದ್ದು ಹೆಬ್ರಿಯ ಬೆಳಂಜೆಯ ನಿವಾಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾತ್ವಿಕ್ ಎಂಬುವವರು ಮೃತಪಟ್ಟ ಘಟನೆ ಹೆಬ್ರಿಯ ಹುತ್ತುರ್ಕೆಯಲ್ಲಿ ಸಂಭವಿಸಿದೆ. ಕೆಲಸದಲ್ಲಿ ನಿರತರಾಗಿದ್ದಾಗ ಆಯತಪ್ಪಿ ಏಣಿಯಿಂದ ಕೆಳಕ್ಕೆ ಬಿದ್ದಿದ್ದರಿಂದ ಸಾತ್ವಿಕ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಸಾತ್ವಿಕ್ ಇತ್ತೀಚೆಗಷ್ಟೇ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಗಿಸಿದ್ದರು ಮತ್ತು ಪದವಿ ವ್ಯಾಸಂಗ ಮಾಡುವ ಕನಸುಕಂಡಿದ್ದರು. ತನ್ನ ಓದಿನ ಖರ್ಚು ಹಾಗೂ ಕುಟುಂಬದ ಆರ್ಥಿಕ ಹೊರೆಗೆ ನೆರವಾಗುವ ಉದ್ದೇಶದಿಂದ, ರಜಾ ದಿನಗಳಲ್ಲಿ ಕೆಲಸಕ್ಕೆ

ಹೆಬ್ರಿ: ರಜೆಯಲ್ಲಿ ಕೆಲಸಕ್ಕೆ ತೆರಳಿದ್ದ ಪಿಯುಸಿ ವಿದ್ಯಾರ್ಥಿ ಏಣಿ ಮೇಲಿಂದ ಬಿದ್ದು ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಂದಾಪುರ: ವರದಕ್ಷಿಣೆ ಕಿರುಕುಳ ಆರೋಪ ಸಾಬೀತು; ಆರೋಪಿಗೆ 2 ವರ್ಷ ಜೈಲು ಶಿಕ್ಷೆ

(ನ್ಯೂಸ್‌ ಕಡಬ) newskadaba.com,  ಮಾ.26: ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಸಿದ್ದಾಪುರ ಗ್ರಾಮದ ಅಕ್ಕುಂಜೆ ನಿವಾಸಿ ಶಶಿಕಾಂತ್ ಶೆಟ್ಟಿ (44) ಎಂಬಾತನ ಮೇಲಿನ ಆರೋಪಗಳು 10 ವರ್ಷಗಳ ನಂತರ ಸಾಬೀತಾಗಿದ್ದು, ಕುಂದಾಪುರ ನ್ಯಾಯಾಲಯವು 2 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಪ್ರಕರಣ ದಾಖಲಾದ ನಂತರ ಕಳೆದ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು, ಕುಂದಾಪುರ ಗ್ರಾಮಾಂತರ ಪೊಲೀಸರು ಮಾರ್ಚ್ 1 ರಂದು ಪಶ್ಚಿಮ ಬಂಗಾಳದಲ್ಲಿ ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಆರೋಪಿಯ ಪತ್ನಿ ನೀಡಿದ

ಕುಂದಾಪುರ: ವರದಕ್ಷಿಣೆ ಕಿರುಕುಳ ಆರೋಪ ಸಾಬೀತು; ಆರೋಪಿಗೆ 2 ವರ್ಷ ಜೈಲು ಶಿಕ್ಷೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಮಾ.26: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಏಪ್ರಿಲ್ 16ರಿಂದ 20ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ “ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವ ವೈಭವ-2026” ಕಾರ್ಯಕ್ರಮಕ್ಕೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ  ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಆಹ್ವಾನಿಸಲಾಯಿತು. ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯೊಂದಿಗೆ ದೇವಸ್ಥಾನದ ಪ್ರಸಾದವನ್ನು ನೀಡಿ, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಲಾಯಿತು.

ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಣ್ಮೂರು ನೇಮೋತ್ಸವಕ್ಕೆ ಸಜ್ಜಾಗುತ್ತಿರುವ ಗರಡಿ: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಕರಸೇವಕರಿಂದ ಭಕ್ತಿಪೂರ್ವಕ ಶ್ರಮದಾನ

(ನ್ಯೂಸ್‌ ಕಡಬ) newskadaba.com,  ಮಾ.26:ಎಣ್ಮೂರು ಕೋಟಿ ಚೆನ್ನಯ್ಯ ಆದಿ ಬೈದರುಗಳ ನೇಮೋತ್ಸವವು ಏಪ್ರಿಲ್ 1ರಂದು ಅದ್ಧೂರಿಯಾಗಿ ನಡೆಯಲಿರುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಿದ್ಧತೆಗಳು ಜೋರಾಗಿ ನಡೆಯುತ್ತಿವೆ. ಈ ಪ್ರಯುಕ್ತ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಶ್ರಮದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ನಿತ್ಯ ಕರಸೇವಕರು ಗರಡಿಯ ಒಳಾಂಗಣ ಹಾಗೂ ಹೊರಾಂಗಣ ಪ್ರದೇಶದಲ್ಲಿ ವ್ಯಾಪಕವಾಗಿ ಸ್ವಚ್ಛತಾ ಕಾರ್ಯವನ್ನು ನಡೆಸಿದರು. ಕಾರ್ಯಕ್ರಮದಲ್ಲಿ ಕಟ್ಟಬೀಡು ರಾಮಕೃಷ್ಣ ಶೆಟ್ಟಿ, ಅನೂಪ್ ಅಳ್ವ ಸೇರಿದಂತೆ ಹಲವರು ಉಪಸ್ಥಿತರಿದ್ದು, ನೇಮೋತ್ಸವ ಯಶಸ್ವಿಗಾಗಿ ಸಹಕಾರ ನೀಡಿದರು.

ಎಣ್ಮೂರು ನೇಮೋತ್ಸವಕ್ಕೆ ಸಜ್ಜಾಗುತ್ತಿರುವ ಗರಡಿ: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಕರಸೇವಕರಿಂದ ಭಕ್ತಿಪೂರ್ವಕ ಶ್ರಮದಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದಯಾಮರಣ: ಸಾವಿನ ನಿರೀಕ್ಷೆಯ ಮೌನ ಆಕ್ರಂದನ !

(ನ್ಯೂಸ್‌ ಕಡಬ) newskadaba.com,  ಮಾ.26: ತನ್ನ ಬದುಕಿನ ದಾರಿ ಸುಗಮಗೊಳಿಸುವ ನೆಪ ಮಾಡಿಕೊಂಡು, ಒಬ್ಬ ಮತ್ತೊಬ್ಬನನ್ನು ಸಾಯಿಸಲು ಕಾರಣ-ನೆಪ ಹುಡುಕುವ ಘಟನೆಗಳನ್ನು ಕಾಲಾಂತರದಲ್ಲಿ ಈ ಜಗತ್ತು ನೋಡಿದೆ! ಶಾಂತಿ ಸ್ಥಾಪನೆ, ಸ್ಥಳೀಯ ಜನರ ಸುರಕ್ಷತೆ ಮುಂತಾದ ಹೆಸರಿನಲ್ಲಿ ಅಮೆರಿಕ, ರಷ್ಯಾ ಮುಂತಾದ ದೇಶಗಳು ನಡೆಸುತ್ತಿರುವ ನರಮೇಧಗಳೂ ನಮ್ಮ ಕಣ್ಣೆದುರು ಇವೆ. ಹೀಗೆ ಸಾಯಿಸುವುದಕ್ಕೆ ನೂರಾರು ಕಾರಣಗಳು, ಸಾವಿರಾರು ಸಮರ್ಥನೆಗಳು. ಇವೆಲ್ಲವೂ ತಂತಮ್ಮ ಮೂಗಿನ ನೇರಕ್ಕೆ ಮಾತ್ರ ಸರಿ ತೋರುವ ವಿಚಾರಗಳು- ಲೋಕದ ದೃಷ್ಟಿಯಲ್ಲಿ ಇಂತಹವೆಲ್ಲವೂ ಜನರ ಮಾರಣ

ದಯಾಮರಣ: ಸಾವಿನ ನಿರೀಕ್ಷೆಯ ಮೌನ ಆಕ್ರಂದನ ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಂದಾಪುರ: ಕುಂಭಾಶಿಯಲ್ಲಿ ರಾ.ಹೆ. ಡಿವೈಡರ್ ಏರಿ ಹೊಂಡಕ್ಕೆ ಬಿದ್ದ ಲಾರಿ; ಚಾಲಕ ಗಂಭೀರ

(ನ್ಯೂಸ್‌ ಕಡಬ) newskadaba.com,  ಮಾ.26 ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿ, ವಿರುದ್ಧ ದಿಕ್ಕಿನ ರಸ್ತೆಗೆ ನುಗ್ಗಿ ಪಕ್ಕದ ಹೊಂಡಕ್ಕೆ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕುಂಭಾಶಿ ಎಂಬಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ. ಉಡುಪಿಯಿಂದ ಕುಂದಾಪುರ ಕಡೆಗೆ ಶಿಲೆಕಲ್ಲು ಜಲ್ಲಿ ಸಾಗಿಸುತ್ತಿದ್ದ ಲಾರಿ, ಕುಂಭಾಶಿ ತಲುಪಿದಾಗ ಹಠಾತ್ತಾಗಿ ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ವೇಗವಾಗಿ ಬಂದ ಲಾರಿ ಡಿವೈಡರ್ ಏರಿ ರಸ್ತೆಯ ವಿರುದ್ಧ ದಿಕ್ಕಿಗೆ ಚಲಿಸಿ ಕೊನೆಗೆ ರಸ್ತೆ ಪಕ್ಕದ ಹೊಂಡಗೆ ಬಿದ್ದಿದೆ. ಅಪಘಾತದ ತೀವ್ರತೆಗೆ

ಕುಂದಾಪುರ: ಕುಂಭಾಶಿಯಲ್ಲಿ ರಾ.ಹೆ. ಡಿವೈಡರ್ ಏರಿ ಹೊಂಡಕ್ಕೆ ಬಿದ್ದ ಲಾರಿ; ಚಾಲಕ ಗಂಭೀರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top