News Kadaba

ಪೆಟ್ರೋಲ್‌ ದರ 5 ರೂ., ಡೀಸೆಲ್‌ ಬೆಲೆ 3 ರೂ. ಏರಿಕೆ

(ನ್ಯೂಸ್‌ ಕಡಬ) newskadaba.com,  ಮಾ.26  ರಾಜ್ಯದಲ್ಲಿ ಪೆಟ್ರೋಲ್ ಅಭಾವದ ವದಂತಿ ಹಬ್ಬಿದ ಬೆನ್ನಲ್ಲೇ ವಿವಿಧ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ತುಂಬಿಸಿಕೊಳ್ಳಲು ಜನ ಮುಗಿಬೀಳುತ್ತಿದ್ದಾರೆ. ಬಂಕ್‌ಗಳ ಮುಂದೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಈ ಮಧ್ಯೆ ಚಿಕ್ಕಬಳ್ಳಾಪುರದ ನಯಾರ ಪೆಟ್ರೋಲ್‌ ಬಂಕ್‌ಗಳಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ಮಾಡಲಾಗಿದೆ… ಪೆಟ್ರೋಲ್‌ ಪ್ರತಿ ಲೀಟರ್‌ ಮೇಲಿನ ದರ (Petrol Price) 5 ರೂಪಾಯಿ ಹಾಗೂ ಡೀಸೆಲ್‌ ದರ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಳ ಮಾಡಲಾಗಿದೆ. ಇದರಿಂದ 1 ಲೀಟರ್‌ ಪೆಟ್ರೋಲ್‌ ಬೆಲೆ […]

ಪೆಟ್ರೋಲ್‌ ದರ 5 ರೂ., ಡೀಸೆಲ್‌ ಬೆಲೆ 3 ರೂ. ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಾಹಿತಿ ವೈ.ಎಸ್. ಹರಗಿ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

(ನ್ಯೂಸ್‌ ಕಡಬ) newskadaba.com,  ಮಾ.26  ಸುಳ್ಯದ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಖ್ಯಾತ ಸಾಹಿತಿ ವೈ.ಎಸ್. ಹರಗಿ ಅವರ “ಇಮಾಮ್ ಸಾಹೇಬರ ಕುದುರೆ” ಕಾದಂಬರಿಗೆ 2025ನೇ ಸಾಲಿನ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. 2024ನೇ ಸಾಲಿನ ಅತ್ಯುತ್ತಮ ಕೃತಿ ಎಂದು ಪರಿಗಣಿಸಿ ಈ ಗೌರವವನ್ನು ನೀಡಲಾಗಿದೆ. ಪ್ರಶಸ್ತಿಯೊಂದಿಗೆ ರೂ.25,000 ನಗದು ಬಹುಮಾನ, ಫಲಕ ಹಾಗೂ ಪ್ರಮಾಣ ಪತ್ರ ನೀಡಲಾಗುತ್ತದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವೈ.ಎಸ್. ಹರಗಿ ಅವರು ಕನ್ನಡ

ಸಾಹಿತಿ ವೈ.ಎಸ್. ಹರಗಿ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಣ್ಮೂರುನಲ್ಲಿ ಶ್ರೀ ನಾಗಬ್ರಹ್ಮ ಕೋಟಿ ಚೆನ್ನಯ್ಯ ಆದಿ ಬೈದರುಗಳ ನೇಮೋತ್ಸವಕ್ಕೆ ಗೊನೆ ಮುಹೂರ್ತ

(ನ್ಯೂಸ್‌ ಕಡಬ) newskadaba.com,  ಮಾ.26 ಎಣ್ಮೂರು: ಶ್ರೀ ನಾಗಬ್ರಹ್ಮ ಕೋಟಿ ಚೆನ್ನಯ್ಯ ಆದಿ ಬೈದರುಗಳ ನೇಮೋತ್ಸವಕ್ಕೆ ಪೂರ್ವಭಾವಿಯಾಗಿ ಗೊನೆ ಮುಹೂರ್ತ ಕಾರ್ಯಕ್ರಮವು ಮಾರ್ಚ್ 25ರಂದು ಭಕ್ತಿಭಾವದಿಂದ ನೆರವೇರಿತು. ಈ ಕಾರ್ಯಕ್ರಮವು ಅನುವಂಶಿಕ ಆಡಳಿತದಾರರಾದ ಕಟ್ಟ ಬೀಡು ರಾಮಕೃಷ್ಣ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ನಡೆದಿದ್ದು, ಸಂಪ್ರದಾಯಬದ್ಧ ವಿಧಿವಿಧಾನಗಳೊಂದಿಗೆ ಆಚರಿಸಲಾಯಿತು. ನೇಮೋತ್ಸವದ ಅಂಗವಾಗಿ ನಡೆದ ಈ ಗೊನೆ ಮುಹೂರ್ತ ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಆಶೀರ್ವಾದ ಪಡೆದರು. ಮುಂದಿನ ದಿನಗಳಲ್ಲಿ ನಡೆಯಲಿರುವ ನೇಮೋತ್ಸವಕ್ಕೆ ಗ್ರಾಮಸ್ಥರು ಹಾಗೂ ಭಕ್ತರಲ್ಲಿ

ಎಣ್ಮೂರುನಲ್ಲಿ ಶ್ರೀ ನಾಗಬ್ರಹ್ಮ ಕೋಟಿ ಚೆನ್ನಯ್ಯ ಆದಿ ಬೈದರುಗಳ ನೇಮೋತ್ಸವಕ್ಕೆ ಗೊನೆ ಮುಹೂರ್ತ Read More »

ಕರಾವಳಿ

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಮಾ.26;  ರಾಜ್ಯದಲ್ಲಿ ಬೇಸಿಗೆ ಆರಂಭವಾಗಿದೆ. ಇದರ ನಡುವೆಯೂ ಅಲ್ಲಲ್ಲಿ ಮಳೆಯಾಗುತ್ತಿದೆ. ಇಂದು ಹಾಸನ, ಚಿಕ್ಕಮಗಳೂರು, ಹುಬ್ಬಳ್ಳಿ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಹಾಗೂ ಯಾದಗಿರಿಯಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ

ಬೆಳ್ತಂಗಡಿ : ತ್ಯಾಜ್ಯ ಎಸೆಯುವವರ ವಿರುದ್ಧ ಪಂಚಾಯತ್‌ ವಿನೂತನ ಕ್ರಮ!

(ನ್ಯೂಸ್‌ ಕಡಬ) newskadaba.com,  ಮಾ.24: ನದಿಗೆ ತ್ಯಾಜ್ಯ ಸುರಿದು ಪರಿಸರ ಮಾಲಿನ್ಯ ಉಂಟುಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಬೆಳ್ತಂಗಡಿ ತಾಲ್ಲೂಕಿನ ನಾವೂರು ಗ್ರಾಮ ಪಂಚಾಯತ್ ವಿನೂತನ ಕ್ರಮ ಕೈಗೊಂಡಿದೆ.ನದಿಯ ಸಮೀಪ ಅಳವಡಿಸಿರುವ ಸೂಚನಾ ಫಲಕದಲ್ಲಿ, ತ್ಯಾಜ್ಯ ಎಸೆಯುವವರಿಗೆ ರೂ. 5,000 ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಅಲ್ಲದೆ, ಅಂತಹ ವ್ಯಕ್ತಿಗಳನ್ನು ಗುರುತಿಸಲು ಮಾಹಿತಿ ನೀಡುವವರಿಗೆ ರೂ. 1,000 ಬಹುಮಾನ ನೀಡಲಾಗುವುದು ಎಂದು ಘೋಷಿಸಲಾಗಿದೆ. ಗ್ರಾಮಸ್ಥರ ಪ್ರಕಾರ, ಬಳಸಿದ ಪ್ಲಾಸ್ಟಿಕ್ ವಸ್ತುಗಳು, ಪೇಪರ್ ಪ್ಲೇಟ್‌ಗಳು, ಪ್ಲಾಸ್ಟಿಕ್

ಬೆಳ್ತಂಗಡಿ : ತ್ಯಾಜ್ಯ ಎಸೆಯುವವರ ವಿರುದ್ಧ ಪಂಚಾಯತ್‌ ವಿನೂತನ ಕ್ರಮ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಸ್ಮಾರ್ಟ್‌ಫೋನ್ ಬಳಕೆ ಬ್ರೇಕ್? ಶಿಕ್ಷಣ ಇಲಾಖೆಯಿಂದ ಹೊಸ ನಿಯಮಾವಳಿ ಸಿದ್ಧತೆ

(ನ್ಯೂಸ್‌ ಕಡಬ) newskadaba.com ,ಮಾ.24 : ಬೆಂಗಳೂರು: ರಾಜ್ಯದಲ್ಲಿ ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳ ಗೀಳನ್ನು ನಿಯಂತ್ರಿಸಲು ಮುಂದಾಗಿರುವ ರಾಜ್ಯ ಸರ್ಕಾರದ ಶೀಘ್ರದಲ್ಲೇ ಸಮಗ್ರ ಮಾರ್ಗಸೂಚಿಗಳನ್ನು ಪ್ರಕಟಿಸಲಿದೆ ಎಂದು ತಿಳಿದುಬಂದಿದೆ. ವಿಧಾನಸಭೆಯಲ್ಲಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳ ಮೊಬೈಲ್ ಬಳಕೆಯನ್ನು ನಿಯಂತ್ರಿಸಲು ಮುಂದಿನ ಅಧಿವೇಶನದಲ್ಲಿ ವಿಶೇಷ ಮಾರ್ಗಸೂಚಿಗಳನ್ನು ರಚಿಸಿ ಸದನದಲ್ಲಿ ಮಂಡನೆ ಮಾಡಲಿದ್ದೇವೆಂದು ಹೇಳಿದರು. ವಿರೋಧ ಪಕ್ಷದ ಸದಸ್ಯರು ವಿದ್ಯಾರ್ಥಿಗಳಲ್ಲಿ

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಸ್ಮಾರ್ಟ್‌ಫೋನ್ ಬಳಕೆ ಬ್ರೇಕ್? ಶಿಕ್ಷಣ ಇಲಾಖೆಯಿಂದ ಹೊಸ ನಿಯಮಾವಳಿ ಸಿದ್ಧತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಪರೇಷನ್ ಬೀಸ್ಟ್ ಎಡವಟ್ಟು: ಕಾರ್ಯಾಚರಣೆ ವೇಳೆ ಅರಣ್ಯ ಸಿಬ್ಬಂದಿ ಮೇಲೆ ಹುಲಿ ದಾಳಿ

(ನ್ಯೂಸ್‌ ಕಡಬ) newskadaba.com ,ಮಾ.24 :ಹುಲಿ ಸೆರೆಗೆ ಕೈಗೊಂಡಿದ್ದ ‘ಆಪರೇಷನ್ ಬೀಸ್ಟ್ ’ ಕಾರ್ಯಾಚರಣೆಯ ಎರಡನೇ ಹಂತ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಅಪಾಯಕಾರಿಯ ಘಟನೆ ಸಂಭವಿಸಿರುವುದು ಬೆಳಕಿಗೆ ಬಂದಿದೆ.ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಭೀಮನ ಬೀಡು ಗ್ರಾಮದಲ್ಲಿ ನಡೆದ ಕಾರ್ಯಾಚರಣೆಯ ವೇಳೆ, ಬಂಡೀಪುರ ಅರಣ್ಯ ಸಿಬ್ಬಂದಿ ಕೂಂಬಿಂಗ್ ಕಾರ್ಯದಲ್ಲಿ ಅನುಸರಿಸಬೇಕಾದ ನಿಯಮಗಳನ್ನು ಪಾಲಿಸಿಲ್ಲ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಅರಣ್ಯ ಸಿಬ್ಬಂದಿಯೊಬ್ಬರ ಜೀವಕ್ಕೆ ಅಪಾಯ ಎದುರಾದರೂ, ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದೆ. ಹುಲಿಗೆ

ಆಪರೇಷನ್ ಬೀಸ್ಟ್ ಎಡವಟ್ಟು: ಕಾರ್ಯಾಚರಣೆ ವೇಳೆ ಅರಣ್ಯ ಸಿಬ್ಬಂದಿ ಮೇಲೆ ಹುಲಿ ದಾಳಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಾಹನ ಸವಾರರಿಗೆ ಬೆಲೆ ಏರಿಕೆ ಶಾಕ್: ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ದರ ದುಬಾರಿ!

(ನ್ಯೂಸ್‌ ಕಡಬ) newskadaba.com ,ಮಾ.24 ಬೆಂಗಳೂರು: ಈಗಾಗಲೇ ಇಂಧನ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ಏಪ್ರಿಲ್ 1ರಿಂದ ಅನ್ವಯವಾಗುವಂತೆ ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಟೋಲ್ ದರಗಳು ಏರಿಕೆಯಾಗುವುದು ಬಹುತೇಕ ಖಚಿತವಾಗಿದೆ. ದರ ಏರಿಕೆಯ ಹಿಂದಿನ ಕಾರಣ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು  ಪ್ರತಿ ವರ್ಷದಂತೆ ಈ ಬಾರಿಯೂ ಸಗಟು ಬೆಲೆ ಸೂಚ್ಯಂಕದ ಆಧಾರದ ಮೇಲೆ ಟೋಲ್ ದರಗಳನ್ನು ಪರಿಷ್ಕರಿಸಲು ನಿರ್ಧರಿಸಿದೆ. ಈ ಬಾರಿ ಶೇ 3 ರಿಂದ 5 ರಷ್ಟು

ವಾಹನ ಸವಾರರಿಗೆ ಬೆಲೆ ಏರಿಕೆ ಶಾಕ್: ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ದರ ದುಬಾರಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಾಣಿಜ್ಯ ಸಿಲಿಂಡರ್‌ಗೆ ನೋಂದಣಿ ಕಡ್ಡಾಯ! ಕಾಳ ಸಂತೆಯಲ್ಲಿ ಮಾರಾಟ ತಡೆಗೆ ಕ್ರಮ

(ನ್ಯೂಸ್‌ ಕಡಬ) newskadaba.com ,ಮಾ.24 ಬೆಂಗಳೂರು: ರಾಜ್ಯದ ಎಲ್ಲ ವಾಣಿಜ್ಯ ಗ್ಯಾಸ್‌ ಸಿಲಿಂಡರ್‌ ಬಳಕೆದಾರರು ಗೇಲ್‌ನಲ್ಲಿ (ಗ್ಯಾಸ್‌ ಅಥಾರಿಟಿ ಆಫ್‌ ಇಂಡಿಯಾ ಲಿಮಿಟೆಡ್‌) ಒಂದು ವಾರದೊಳಗೆ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ. ಸೋಮವಾರ ವಸಂತನಗರದ ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಕಚೇರಿಯಲ್ಲಿ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಉಂಟಾದ ಸಮಸ್ಯೆ ಕುರಿತು ನಡೆದ ಐಒಸಿ, ಎಚ್‌ಪಿಸಿ, ಬಿಪಿಸಿ, ಗೇಲ್‌ನ ಅಧಿಕಾರಿಗಳು ಹಾಗೂ ಹೋಟೆಲ್ ಸಂಘದ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದರು. ಕಾಳಸಂತೆಯಲ್ಲಿ

ವಾಣಿಜ್ಯ ಸಿಲಿಂಡರ್‌ಗೆ ನೋಂದಣಿ ಕಡ್ಡಾಯ! ಕಾಳ ಸಂತೆಯಲ್ಲಿ ಮಾರಾಟ ತಡೆಗೆ ಕ್ರಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

12 ವರ್ಷಗಳಿಂದ ಶಾಲೆ-ಕಾಲೇಜು ನಡೆದರೆ ಆ ಖಾಸಗಿ ಜಾಗ ಇನ್ನು ಸರ್ಕಾರದ ವಶ

(ನ್ಯೂಸ್‌ ಕಡಬ) newskadaba.com ,ಮಾ.24: ರಾಜ್ಯದ ಸರ್ಕಾರಿ ಶಾಲೆಮತ್ತು ಪಿಯು ಕಾಲೇಜುಗಳು (PU College) ಕಾರ್ಯನಿರ್ವಹಿಸುತ್ತಿರುವ ಭೂಮಿಯನ್ನು ಸಂರಕ್ಷಿಸಲು ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಸೋಮವಾರ ವಿಧಾನಸಭೆಯಲ್ಲಿ ‘ಕರ್ನಾಟಕ ಸರ್ಕಾರಿ ಶೈಕ್ಷಣಿಕ ಸಂಸ್ಥೆಯ ಭೂಮಿಗಳ (ರಕ್ಷಣೆ ಮತ್ತು ಸಕ್ರಮ) ವಿಧೇಯಕ 2026’ ಅನ್ನು ಮಂಡಿಸಲಾಯಿತು. ಯಾವುದೇ ಖಾಸಗಿ ಜಾಗದಲ್ಲಿ ಕನಿಷ್ಠ 12 ವರ್ಷಗಳಿಂದ ಸತತವಾಗಿ ಸರ್ಕಾರಿ ಶಾಲೆ ಅಥವಾ ಕಾಲೇಜು ನಡೆಯುತ್ತಿದ್ದರೆ, ಆ ಭೂಮಿ ಇನ್ನು ಮುಂದೆ ಅಧಿಕೃತವಾಗಿ ಸರ್ಕಾರದ ಸ್ವತ್ತಾಗಲಿದೆ. ಈ ಭೂಮಿಯ ಮೇಲೆ

12 ವರ್ಷಗಳಿಂದ ಶಾಲೆ-ಕಾಲೇಜು ನಡೆದರೆ ಆ ಖಾಸಗಿ ಜಾಗ ಇನ್ನು ಸರ್ಕಾರದ ವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top