News Kadaba

ಹಂಚಿನಾಳ ಕ್ಯಾಂಪ್ ನಲ್ಲಿ ಸಹಕಾರ ಸಂಘದ ಸಹಯೋಗದಲ್ಲಿ ನೂತನ ಜೋಳ ಖರೀದಿ ಕೇಂದ್ರ ಪ್ರಾರಂಭ

(ನ್ಯೂಸ್‌ ಕಡಬ) newskadaba.com, ಮಾ.21 ಸಿಂಧನೂರು : ಕರ್ನಾಟಕ ಸರ್ಕಾರವು ರೈತರಿಂದ ಬೆಂಬಲ ಬೆಲೆಯಲ್ಲಿ (MSP) ಮುಂಗಾರು ಮತ್ತು ಹಿಂಗಾರು ಜೋಳ/ಮೆಕ್ಕೆಜೋಳವನ್ನು ಖರೀದಿಸಲು ರಾಜ್ಯದ ವಿವಿಧ ಎಪಿಎಂಸಿ (APMC) ಮಾರುಕಟ್ಟೆಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಿದ್ದು. ಕೆಎಂಎಫ್ (KMF) ಮೂಲಕ ರೈತರಿಂದ ನೇರವಾಗಿ ಪ್ರತಿ ಕ್ವಿಂಟಾಲ್‌ಗೆ ಬೆಂಬಲ ಬೆಲೆ (ಉದಾಹರಣೆಗೆ ₹2,400-₹3,000) ನಿಗದಿಪಡಿಸಿ, ಒಬ್ಬ ರೈತರಿಂದ ಗರಿಷ್ಠ 20-25 ಕ್ವಿಂಟಾಲ್ ವರೆಗೆ ಖರೀದಿ ಮಾಡಲಾಗುತ್ತದೆ.ಈ ಹಿನ್ನೆಲೆಯಲ್ಲಿ ಸಿಂಧನೂರು ತಾಲೂಕಿನ ಹಂಚಿನಾಳ ಕ್ಯಾಂಪ್ ನ ಸಹಕಾರ ಸಂಘದ ವತಿಯಿಂದ ಇಂದು […]

ಹಂಚಿನಾಳ ಕ್ಯಾಂಪ್ ನಲ್ಲಿ ಸಹಕಾರ ಸಂಘದ ಸಹಯೋಗದಲ್ಲಿ ನೂತನ ಜೋಳ ಖರೀದಿ ಕೇಂದ್ರ ಪ್ರಾರಂಭ Read More »

ಬ್ರೇಕಿಂಗ್ ನ್ಯೂಸ್

ಇಂಧನ ಉಳಿತಾಯಕ್ಕೆ ಐಇಎ ಕಠಿಣ ಶಿಫಾರಸು: ಮತ್ತೆ ಕೋವಿಡ್ ನಿಯಮ ಜಾರಿ ಸಾಧ್ಯತೆ?

(ನ್ಯೂಸ್‌ ಕಡಬ) newskadaba.com, ಮಾ.21 : ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಯುದ್ಧದ ಭೀತಿಯಿಂದ ಜಗತ್ತಿನಾದ್ಯಂತ ಇಂಧನ ಬಿಕ್ಕಟ್ಟು ಎದುರಾಗಿದೆ. ಈ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಅಂತರಾಷ್ಟ್ರೀಯ ಇಂಧನ ಸಂಸ್ಥೆ (IEA) ಹಲವು ಪ್ರಮುಖ ಶಿಫಾರಸುಗಳನ್ನು ಮಾಡಿದೆ. ಇಂಧನ ಮತ್ತು ಗ್ಯಾಸ್ ಬಳಕೆಯನ್ನು ತಕ್ಷಣವೇ ಕಡಿತಗೊಳಿಸುವಂತೆ ಸೂಚಿಸಿದೆ… ಪೆಟ್ರೋಲ್ ಮತ್ತು ಡೀಸೆಲ್ ಉಳಿಸಲು ಉದ್ಯೋಗಿಗಳಿಗೆ ‘ಮನೆಯಿಂದಲೇ ಕೆಲಸ’ಮಾಡಲು ಉತ್ತೇಜಿಸುವಂತೆ ಸಂಸ್ಥೆ ಸಲಹೆ ನೀಡಿದೆ. ಇದು ಕೋವಿಡ್ ಕಾಲದ ಲಾಕ್‌ಡೌನ್ ನಿಯಮಗಳನ್ನು ನೆನಪಿಸುತ್ತಿದ್ದು, ಸಾರಿಗೆ ವೆಚ್ಚ ತಗ್ಗಿಸಲು

ಇಂಧನ ಉಳಿತಾಯಕ್ಕೆ ಐಇಎ ಕಠಿಣ ಶಿಫಾರಸು: ಮತ್ತೆ ಕೋವಿಡ್ ನಿಯಮ ಜಾರಿ ಸಾಧ್ಯತೆ? Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ ಜ್ಞಾನದೀಪ ನವೋದಯ ತರಬೇತಿ ಕೇಂದ್ರದ 16 ವಿದ್ಯಾರ್ಥಿಗಳು ನವೋದಯ ವಿದ್ಯಾಲಯಕ್ಕೆ ಆಯ್ಕೆ

(ನ್ಯೂಸ್‌ ಕಡಬ) newskadaba.com, ಮಾ.21 : ನವೋದಯ ವಿದ್ಯಾಲಯ ಸಮಿತಿ ಜನವರಿ ತಿಂಗಳಲ್ಲಿ ನಡೆಸಿದ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಬೆಳ್ಳಾರೆ, ಕಡಬ ಮತ್ತು ಸುಳ್ಯದ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆದ ಒಟ್ಟು 16 ವಿದ್ಯಾರ್ಥಿಗಳು ಮುಡಿಪು ಜವಾಹರ್ ನವೋದಯ ವಿದ್ಯಾಲಯದ ಪ್ರವೇಶಕ್ಕೆ ಅರ್ಹತೆ ಪಡೆದುಕೊಂಡಿದ್ದಾರೆ. ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ಬೈರಮೂಲೆ ಸುಬ್ಬಪ್ಪ ಪಾಟಾಳಿ ಮತ್ತು ವೇದಾವತಿ ಎ ದಂಪತಿಗಳ ಪುತ್ರ  ಸುಬ್ರಹ್ಮಣ್ಯದ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ

ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ ಜ್ಞಾನದೀಪ ನವೋದಯ ತರಬೇತಿ ಕೇಂದ್ರದ 16 ವಿದ್ಯಾರ್ಥಿಗಳು ನವೋದಯ ವಿದ್ಯಾಲಯಕ್ಕೆ ಆಯ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಚ್ಚಾ ತೈಲ-ಗ್ಯಾಸ್ ಬಿಕ್ಕಟ್ಟು: ಅಗತ್ಯ ಸರಕುಗಳ ಕಾಯ್ದೆ ಸೆಕ್ಷನ್ 3 ಜಾರಿ, ಮಾರುಕಟ್ಟೆಯಲ್ಲಿ ಆತಂಕ

(ನ್ಯೂಸ್‌ ಕಡಬ) newskadaba.com, ಮಾ.21: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಅಮೆರಿಕ–ಇಸ್ರೇಲ್ ಹಾಗೂ ಇರಾನ್ ನಡುವಿನ ಸಂಘರ್ಷದ ಪರಿಣಾಮ ಭಾರತದಲ್ಲೂ ಆರ್ಥಿಕ ತಲ್ಲಣ ಉಂಟಾಗಿದ್ದು, ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲ ಪೂರೈಕೆಯ ಆತಂಕದ ಹಿನ್ನೆಲೆ ಕೇಂದ್ರ ಸರ್ಕಾರ ಅಗತ್ಯ ಸರಕುಗಳ ಕಾಯ್ದೆಯ ಸೆಕ್ಷನ್ 3 ಅನ್ನು ಜಾರಿಗೊಳಿಸಿದೆ. ಸಂಘರ್ಷವು 21ನೇ ದಿನಕ್ಕೆ ಕಾಲಿಟ್ಟಿರುವ ಹಿನ್ನೆಲೆ, ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಕೊರತೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಗ್ಯಾಸ್ ಅನ್ನು ಅಗತ್ಯ ಸರಕುಗಳ ಪಟ್ಟಿಗೆ ಸೇರಿಸಿದ್ದ

ಕಚ್ಚಾ ತೈಲ-ಗ್ಯಾಸ್ ಬಿಕ್ಕಟ್ಟು: ಅಗತ್ಯ ಸರಕುಗಳ ಕಾಯ್ದೆ ಸೆಕ್ಷನ್ 3 ಜಾರಿ, ಮಾರುಕಟ್ಟೆಯಲ್ಲಿ ಆತಂಕ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಾರ್ಮುಜ್ ಜಲಸಂಧಿ ಬಳಿ ತೈಲ ಸಾಗಿಸುತ್ತಿದ್ದ ಹಡಗಿನಲ್ಲಿ ರಾಂಚಿಯ ವ್ಯಕ್ತಿ ಮೃತ್ಯು

(ನ್ಯೂಸ್‌ ಕಡಬ) newskadaba.com, ಮಾ.21: ಹಾರ್ಮುಜ್ ಜಲಸಂಧಿ ಬಳಿ ತೈಲ ಸಾಗಿಸುತ್ತಿದ್ದ ಹಡಗಿನಲ್ಲಿ ರಾಂಚಿಯ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಅವರ ಮೃತದೇಹವನ್ನು ತಾಯ್ನಾಡಿಗೆ ತರಲು ಸಹಾಯ ಮಾಡುವಂತೆ ಕೇಂದ್ರ ಮತ್ತು ಜಾರ್ಖಂಡ್ ಸರ್ಕಾರಕ್ಕೆ ಕುಟುಂಬಸ್ಥರು ಮನವಿ ಮಾಡಿಕೊಂಡಿದ್ದಾರೆ. ರಾಂಚಿ ಮೂಲದ ಕ್ಯಾಪ್ಟನ್ ರಾಕೇಶ್ ರಂಜನ್ ಮೃತ ವ್ಯಕ್ತಿ. ಫೆಬ್ರವರಿ 2 ರಂದು ಖಾಸಗಿ ಕಂಪನಿಯ ಒಡೆತನದ ‘ASP ಅವನಾ- RPSL-MUM-172’ ಹಡಗನ್ನು ಸೇರಿಕೊಂಡಿದ್ದರು. ಅವರು ಮಾರ್ಚ್ 18 ರಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಈ ಪ್ರದೇಶದಲ್ಲಿ ಹಡಗು

ಹಾರ್ಮುಜ್ ಜಲಸಂಧಿ ಬಳಿ ತೈಲ ಸಾಗಿಸುತ್ತಿದ್ದ ಹಡಗಿನಲ್ಲಿ ರಾಂಚಿಯ ವ್ಯಕ್ತಿ ಮೃತ್ಯು Read More »

ಬ್ರೇಕಿಂಗ್ ನ್ಯೂಸ್

ಪುತ್ತೂರು: ಕೌಟುಂಬಿಕ ಕಲಹಕ್ಕೆ ಪತ್ನಿ ಬಲಿ; ಪತಿ ಆತ್ಮಹತ್ಯೆಗೆ ಯತ್ನ

(ನ್ಯೂಸ್‌ ಕಡಬ) newskadaba.com, ಮಾ.21: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಹತ್ಯೆಗೈದು, ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲ ಎಂಬಲ್ಲಿ ಶುಕ್ರವಾರ ನಡೆದಿದೆ. ಮೃತ ಮಹಿಳೆಯನ್ನು ಕುಮಾರಮಂಗಲ ಮೂಲದ ಸಾವಿತ್ರಿ (42) ಎಂದು ಗುರುತಿಸಲಾಗಿದೆ. ಆರೋಪಿ ಪತಿಯನ್ನು ಎಮೆಟ್ಟಿ ನಿವಾಸಿ ಪುರುಷೋತ್ತಮ ಅಲಿಯಾಸ್ ಬೈರಪ್ಪ ಎಂದು ಗುರುತಿಸಲಾಗಿದೆ.ದಂಪತಿಗಳ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿದ್ದು, ಈ ಸಂದರ್ಭದಲ್ಲಿ ಪುರುಷೋತ್ತಮ ತನ್ನ ಪತ್ನಿಯನ್ನು ಹತ್ಯೆ ಮಾಡಿದ್ದಾನೆ

ಪುತ್ತೂರು: ಕೌಟುಂಬಿಕ ಕಲಹಕ್ಕೆ ಪತ್ನಿ ಬಲಿ; ಪತಿ ಆತ್ಮಹತ್ಯೆಗೆ ಯತ್ನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com, ಮಾ.21: ರಾಜ್ಯದ ಹಲವೆಡೆ ಕಳೆದ ಕೆಲವು ದಿನಗಳಿಂದ ಗುಡುಗು ಮಿಂಚು ಸಹಿತ ಮಳೆಯಾಗುತ್ತಿದೆ. ಇಂದು ಸಹ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.   ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ದಾವಣಗೆರೆ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ತುಮಕೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ..

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಗ್ಯಾಸ್ ಅಕ್ರಮ ಮರುಪೂರಣ – ಇಬ್ಬರು ಆರೋಪಿಗಳ ಆರೆಸ್ಟ್

(ನ್ಯೂಸ್‌ ಕಡಬ) newskadaba.com,ಮಾ.19: ನಗರದ ಕುದ್ರೋಳಿ ಕಂಡತ್‌ಪಳ್ಳಿ ಎಂಬಲ್ಲಿ ಗ್ಯಾಸ್ ಹಂಡೆಯಿಂದ ಇನ್ನೊಂದು ಗ್ಯಾಸ್ ಹಂಡೆಗೆ ಅಕ್ರಮವಾಗಿ ಗ್ಯಾಸ್ ಮರುಪೂರಣ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರನ್ನು ಬಂದರು ಪೊಲೀಸರು ಬಂಧಿಸಿದ್ದಾರೆ. ದಿನೇಶ್ ಸಾಲಿಯಾನ್ ಮತ್ತು ಸುನೀಲ್ ನಾಯಕ್ ಬಂಧಿತ ಆರೋಪಿಗಳಾಗಿದ್ದಾರೆ. ಮಾ.17ರಂದು ಮಧ್ಯಾಹ್ನ 1:30ಕ್ಕೆ ನಗರದ ನ್ಯೂಚಿತ್ರಾ ಜಂಕ್ಷನ್ ಬಸವನಗುಡಿ ಲಕ್ಷ್ಮೀನಾರಾಯಣ ಟೆಂಪಲ್ ಕಡೆಯಿಂದ ಕಂಡತ್‌ಪಳ್ಳಿ ಕಡೆಗೆ ಹೋಗುವ ರಸ್ತೆಯಲ್ಲಿರುವ ಗ್ಯಾಸ್ ಪಾಯಿಂಟ್ ವೊಂದರ ಪಕ್ಕದಲ್ಲಿರುವ ಗೋದಾಮಿನಲ್ಲಿ ಈ ಇಬ್ಬರು ಆರೋಪಿಗಳು ಅಕ್ರಮವಾಗಿ ಗ್ಯಾಸ್ ಸಿಲೆಂಡರ್‌ಗಳನ್ನು ಸಂಗ್ರಹಿಸಿ

ಮಂಗಳೂರು : ಗ್ಯಾಸ್ ಅಕ್ರಮ ಮರುಪೂರಣ – ಇಬ್ಬರು ಆರೋಪಿಗಳ ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಮಕುಂಜದಲ್ಲಿ ಔಷಧಿ ಸೇವಿಸಿ ಅಸ್ವಸ್ಥಗೊಂಡಿದ್ದ ಬಾಲಕ ಚಿಕಿತ್ಸೆ ಫಲಿಸದೆ ಮೃತ್ಯು

(ನ್ಯೂಸ್‌ ಕಡಬ) newskadaba.com,ಮಾ.19 ಪುತ್ತೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಔಷಧಿ ಸೇವಿಸಿದ ಬಾಲಕನೋರ್ವ ಅಸ್ವಸ್ಥಗೊಂಡು ಮೃತಪಟ್ಟ ದಾರುಣ ಘಟನೆ ರಾಮಕುಂಜದಲ್ಲಿ ಬುಧವಾರ (ಮಾ. 18) ಸಂಭವಿಸಿದೆ. ರಾಮಕುಂಜ ನಿವಾಸಿ ಸಂಜೀವ ಪೂಜಾರಿ ಅವರ ಪುತ್ರ, 4ನೇ ತರಗತಿ ವಿದ್ಯಾರ್ಥಿ ‘’ಕಳೆದ ಕೆಲವು ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದ ಬಾಲಕನಿಗೆ ಮನೆಯಲ್ಲಿ ಔಷಧಿ ನೀಡಲಾಗಿತ್ತು. ಆದರೆ, ಔಷಧಿ ಸೇವಿಸಿದ ಕೆಲವೇ ಸಮಯದ ನಂತರ ಬಾಲಕ ತೀವ್ರವಾಗಿ ಅಸ್ವಸ್ಥಗೊಂಡಿದ್ದಾನೆ ಎನ್ನಲಾಗಿದೆ. ಬಾಲಕ ಅಸ್ವಸ್ಥಗೊಳ್ಳುತ್ತಿದ್ದಂತೆ ಗಾಬರಿಗೊಂಡ ಪೋಷಕರು ತಕ್ಷಣವೇ ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ರಾಮಕುಂಜದಲ್ಲಿ ಔಷಧಿ ಸೇವಿಸಿ ಅಸ್ವಸ್ಥಗೊಂಡಿದ್ದ ಬಾಲಕ ಚಿಕಿತ್ಸೆ ಫಲಿಸದೆ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆರ್ಥಿಕ ಬಿಕ್ಕಟ್ಟಿನ ಎಫೆಕ್ಟ್: ಪಾಕಿಸ್ತಾನದ ‘ಗಣರಾಜ್ಯೋತ್ಸವ’ ಆಚರಣೆ ಅಧಿಕೃತವಾಗಿ ರದ್ದು

(ನ್ಯೂಸ್‌ ಕಡಬ) newskadaba.com,ಮಾ.19: ಇಸ್ಲಾಮಾಬಾದ್: ತೀವ್ರ ಆರ್ಥಿಕ ಮುಗ್ಗಟ್ಟು ಮತ್ತು ಇಂಧನ ಕೊರತೆಯಿಂದ ತತ್ತರಿಸುತ್ತಿರುವ ಪಾಕಿಸ್ತಾನ ಸರ್ಕಾರವು ಈ ಬಾರಿ ಮಾರ್ಚ್ 23 ರಂದು ನಡೆಯಬೇಕಿದ್ದ ತನ್ನ ‘ಗಣರಾಜ್ಯೋತ್ಸವ’ ಆಚರಣೆಯನ್ನು ರದ್ದುಗೊಳಿಸಿದೆ. ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ತೈಲ ಮತ್ತು ಅನಿಲ ಬಿಕ್ಕಟ್ಟು ದೇಶದ ಮೇಲೆ ಭೀಕರ ಪರಿಣಾಮ ಬೀರಿದ್ದು, ಈ ಅನಿವಾರ್ಯ ನಿರ್ಧಾರ ಕೈಗೊಳ್ಳಲಾಗಿದೆ. ಅದ್ಧೂರಿತನಕ್ಕೆ ಬ್ರೇಕ್, ಸರಳತೆಗೆ ಆದ್ಯತೆ ಪ್ರತಿ ವರ್ಷ ಮಾರ್ಚ್ 23 ರಂದು ಅದ್ಧೂರಿ ಮಿಲಿಟರಿ ಪರೇಡ್ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ

ಆರ್ಥಿಕ ಬಿಕ್ಕಟ್ಟಿನ ಎಫೆಕ್ಟ್: ಪಾಕಿಸ್ತಾನದ ‘ಗಣರಾಜ್ಯೋತ್ಸವ’ ಆಚರಣೆ ಅಧಿಕೃತವಾಗಿ ರದ್ದು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top