News Kadaba

ಐಸಿಸ್‌ ಜೊತೆ ಸಂಪರ್ಕ; 19 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಮಾ.17 ಐಸಿಸ್ (ISIS) ಆನ್‌ಲೈನ್ ಮಾಡ್ಯೂಲ್ ಜೊತೆ ಸಂಪರ್ಕ ಹೊಂದಿದ್ದ 19 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ.. ಸಹರಾನ್‌ಪುರ ಜಿಲ್ಲೆಯ ನಿವಾಸಿ ಹರಿಶ್‌ ಅಲಿ ಬಂಧಿತ ಆರೋಪಿ. ನಿಷೇಧಿತ ಭಯೋತ್ಪಾದಕ ಸಂಘಟನೆ ಐಸಿಸ್‌ನ ಆನ್‌ಲೈನ್ ಮಾಡ್ಯೂಲ್‌ನೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಮೊರಾದಾಬಾದ್‌ನಲ್ಲಿ ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್‌) ಈತನನ್ನು ಬಂಧಿಸಿದೆ… ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಐಸಿಸ್ ಸಂಬಂಧಿತ ಆನ್‌ಲೈನ್ ನೆಟ್‌ವರ್ಕ್‌ಗಳ ಚಟುವಟಿಕೆಗಳ ಕುರಿತು ನಡೆಯುತ್ತಿರುವ ತನಿಖೆಯ ಸಂದರ್ಭದಲ್ಲಿ ಈತನನ್ನು […]

ಐಸಿಸ್‌ ಜೊತೆ ಸಂಪರ್ಕ; 19 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿ ಆರೆಸ್ಟ್ Read More »

ಬ್ರೇಕಿಂಗ್ ನ್ಯೂಸ್

ಮಧ್ಯಪ್ರಾಚ್ಯ ಉದ್ವಿಗ್ನತೆಯ ನಡುವೆಯೂ ಎಲ್‌ಪಿಜಿ ಪೂರೈಕೆ ಸ್ಥಿರ: ‘ಶಿವಾಲಿಕ್’ ಹಡಗು ಮುಂದ್ರಾ ಬಂದರಿಗೆ ಸುರಕ್ಷಿತ ಆಗಮನ

(ನ್ಯೂಸ್‌ ಕಡಬ) newskadaba.com,  ಮಾ.17 ಮಂಗಳೂರು/ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಯುದ್ಧ ಭೀತಿ ಮುಂದುವರಿದಿರುವ ನಡುವೆಯೂ ದೇಶದ ಅಡುಗೆ ಅನಿಲ ಪೂರೈಕೆಯ ಕುರಿತು ಉಂಟಾಗಿದ್ದ ಆತಂಕ ಕಡಿಮೆಯಾಗಿದೆ. ಎಲ್‌ಪಿಜಿ ಸಾಗಿಸುತ್ತಿದ್ದ ‘ಶಿವಾಲಿಕ್’ ಹಡಗು ಹೊರ್ಮುಜ್ ಜಲಸಂಧಿಯನ್ನು ಯಾವುದೇ ಅಡಚಣೆಯಿಲ್ಲದೆ ದಾಟಿ ಗುಜರಾತ್‌ನ ಮುಂದ್ರಾ ಬಂದರನ್ನು ಸುರಕ್ಷಿತವಾಗಿ ತಲುಪಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿಎಲ್)ಗಾಗಿ ತರಲಾಗುತ್ತಿರುವ ಒಟ್ಟು 46 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿಯಲ್ಲಿ, ಮೊದಲ ಹಂತವಾಗಿ ಮುಂದ್ರಾ ಬಂದರಿನಲ್ಲಿ 20 ಸಾವಿರ ಟನ್ ಅನಿಲವನ್ನು ಇಳಿಸಲಾಗುತ್ತದೆ. ಈ ಪ್ರಕ್ರಿಯೆ ಪೂರ್ಣಗೊಂಡ

ಮಧ್ಯಪ್ರಾಚ್ಯ ಉದ್ವಿಗ್ನತೆಯ ನಡುವೆಯೂ ಎಲ್‌ಪಿಜಿ ಪೂರೈಕೆ ಸ್ಥಿರ: ‘ಶಿವಾಲಿಕ್’ ಹಡಗು ಮುಂದ್ರಾ ಬಂದರಿಗೆ ಸುರಕ್ಷಿತ ಆಗಮನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಕಸ ಸ್ವಚ್ಛಗೊಳಿಸುವಾಗ ಹಗ್ಗ ತುಂಡಾಗಿ ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

(ನ್ಯೂಸ್‌ ಕಡಬ) newskadaba.com,  ಮಾ.17 ಕಸವನ್ನು ಸ್ವಚ್ಛಗೊಳಿಸುವ ವೇಳೆ ಹಗ್ಗ ತುಂಡಾಗಿ ಬಾವಿಗೆ ಬಿದ್ದ ವ್ಯಕ್ತಿಯೋರ್ವರನ್ನು ರಕ್ಷಿಸಿದ ಘಟನೆ ಮಂಗಳೂರು ನಗರದ ಬೋಳಾರದ ಮುಳಿಹಿತ್ತಲು ಬಳಿ ನಡೆದಿದೆ. ಬೆಳಗಾವಿಯ ಸವದತ್ತಿ ತಾಲೂಕಿನ ಪಂಚಪ್ಪ(44) ಎಂಬುವವರು ಬಾವಿಯ ಸುತ್ತಮುತ್ತಲಿನ ಕಸವನ್ನು ಸ್ವಚ್ಛಗೊಳಿಸುತ್ತಿದ್ದರು. ಈ ವೇಳೆ ಹಗ್ಗ ತುಂಡಾಗಿ ಬಾವಿಗೆ ಬಿದ್ದಿದ್ದಾರೆ. ಬಳಿಕ ಅವರನ್ನು ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಅಧಿಕಾರಿ ಹಾಗು ಸಿಬ್ಬಂದಿಯವರು ಬಾವಿಗೆ ಇಳಿದು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ. ಗಾಯಾಳುವನ್ನು ಆಂಬುಲೆನ್ಸ್ ಮೂಲಕ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಮಂಗಳೂರು: ಕಸ ಸ್ವಚ್ಛಗೊಳಿಸುವಾಗ ಹಗ್ಗ ತುಂಡಾಗಿ ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು ಜಾತ್ರೆಗೆ ದೇವರ ಪೂರ್ಣಾನುಗ್ರಹ: ಭಕ್ತರಲ್ಲಿ ಹರ್ಷ

(ನ್ಯೂಸ್‌ ಕಡಬ) newskadaba.com,  ಮಾ.17 ಬಿಲ್ವಪತ್ರೆ-ಮಲ್ಲಿಗೆ ಭೂಸ್ಪರ್ಶ- ಬ್ರಹ್ಮರಥ ಕಟ್ಟುವ ಕೆಲಸ ಆರಂಭ ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹಾಲಿಂಗೇಶ್ವರ ದೇವಳದಲ್ಲಿ ಏ.೧೦ರಿಂದ ನಡೆಯಲಿರುವ ‘ಪುತ್ತೂರ್‍ದ ಜಾತ್ರೆಗೆ ಬ್ರಹ್ಮರಥೋತ್ಸವದ ಸಿದ್ಧತೆಗಾಗಿ ಸೋಮವಾರ ರಥಮಂದಿರದಿಂದ ಬ್ರಹ್ಮರಥವನ್ನು ರಥಬೀದಿಗೆ ತರುವ ಮುಹೂರ್ತ ನಡೆಯಿತು. ರಥಕಟ್ಟು ಸ್ಥಳದಲ್ಲಿ ಬಿಲ್ವಪತ್ರೆ ಮತ್ತು ಮಲ್ಲಿಗೆ ಭೂಸ್ಪರ್ಶಗೊಂಡು ಜಾತ್ರೆಗೆ ಪೂರ್ಣಾನುಗ್ರಹ ಸೂಚಿಸುವುದರೊಂದಿಗೆ ಜಾತ್ರೆಯ ಕ್ಷಣಗಣನೆ ಆರಂಭಗೊಂಡಿದೆ. ಬೆಳಿಗ್ಗೆ ಶುಭ ಮುಹೂರ್ತದಲ್ಲಿ ದೇವಳದ ಪ್ರಧಾನ ಅರ್ಚಕ ವೇ.ಮೂ ವಸಂತ ಕೆದಿಲಾಯ ಅವರು ಬ್ರಹ್ಮರಥಕ್ಕೆ ಮಲ್ಲಿಗೆ ಪುಷ್ಪ, ಗಂಧ,

ಪುತ್ತೂರು ಜಾತ್ರೆಗೆ ದೇವರ ಪೂರ್ಣಾನುಗ್ರಹ: ಭಕ್ತರಲ್ಲಿ ಹರ್ಷ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೇವಸ್ಥಾನ, ಕಲ್ಯಾಣ ಮಂಟಪಗಳಲ್ಲಿ ‘ಬಾಲ್ಯವಿವಾಹ ನಿಷೇಧ’ ಫಲಕ ಕಡ್ಡಾಯ: ಹೈಕೋರ್ಟ್ ಕಠಿಣ ಸೂಚನೆ

(ನ್ಯೂಸ್‌ ಕಡಬ) newskadaba.com,  ಮಾ.17 ಬೆಂಗಳೂರು: ‘ಕಾನೂನು ಪ್ರಕಾರ ಬಾಲ್ಯವಿವಾಹ ನಿಷೇಧಿಸಲಾಗಿದೆ’ ಎಂಬ ಫಲಕಗಳನ್ನು ದೇವಸ್ಥಾನಗಳು, ಕಲ್ಯಾಣ ಮಂಟಪಗಳು ಸೇರಿದಂತೆ ವಿವಾಹಗಳು ನಡೆಯುವ ಎಲ್ಲಾ ಸ್ಥಳಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕೆಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.ದೇವನಹಳ್ಳಿ ನ್ಯಾಯಾಲಯದಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ರದ್ದುಪಡಿಸುವಂತೆ ಎನ್. ಮಂಜುನಾಥ್ ಸೇರಿ ಐವರು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ನಿರ್ದೇಶನ ನೀಡಿದೆ. ನ್ಯಾಯಪೀಠವು ಬಾಲ್ಯವಿವಾಹ ಪ್ರಕರಣಗಳ ಏರಿಕೆಗೆ ತೀವ್ರ ಕಳವಳ ವ್ಯಕ್ತಪಡಿಸಿ, ‘ಬಾಲ್ಯವಿವಾಹ ನಿರ್ಮೂಲನೆ

ದೇವಸ್ಥಾನ, ಕಲ್ಯಾಣ ಮಂಟಪಗಳಲ್ಲಿ ‘ಬಾಲ್ಯವಿವಾಹ ನಿಷೇಧ’ ಫಲಕ ಕಡ್ಡಾಯ: ಹೈಕೋರ್ಟ್ ಕಠಿಣ ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ

(ನ್ಯೂಸ್‌ ಕಡಬ) newskadaba.com,  ಮಾ.17 ರಾಜ್ಯದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳ ದಿನಗಣನೆ ಆರಂಭವಾಗುತ್ತಿದ್ದಂತೆ, ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಧಿಕಾರಿಗಳು ಮಹತ್ವದ ಕ್ರಮವೊಂದನ್ನು ಘೋಷಿಸಿದ್ದಾರೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು ಪ್ರಕಟಿಸಿದ್ದು, ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಸಾವಿರಾರು ವಿದ್ಯಾರ್ಥಿಗಳಿಗೆ ಇದು ದೊಡ್ಡ ಸಮಾಧಾನ ತಂದಿದೆ. 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ ೧೮ ರಿಂದ ಏಪ್ರಿಲ್ 2 ರವರೆಗೆ ನಡೆಯಲಿದ್ದು, ಪ್ರತಿದಿನ ಬೆಳಿಗ್ಗೆ 10 ರಿಂದ ಮಧ್ಯಾಹ್ನ ೧:೧೫ ರವರೆಗೆ ಪರೀಕ್ಷೆಗಳು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಸವಣೂರು ವಲಯದ ಸಭೆ

(ನ್ಯೂಸ್‌ ಕಡಬ) newskadaba.com,  ಮಾ.17 ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್(KSTA) ಸವಣೂರು ವಲಯದ ಸಾಮಾನ್ಯ ಸಭೆಯು ಸವಣೂರಿನಲ್ಲಿ ಸಮಿತಿಯ ಅಧ್ಯಕ್ಷರಾದ ಮೋಹನ್ ಕೆಡೆಂಜಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಹೊಸ ಸದಸ್ಯರ ಸೇರ್ಪಡೆ, ರಿನೀವಲ್‌ ಹಾಗೂ ಕಾರ್ಮಿಕ ಆಯುಕ್ತರ ಮುಖಾಂತರ NPS ಪಿಂಚಣಿ ಯೋಜನೆ ಹಾಗೂ ಸ್ಮಾರ್ಟ್ ಕಾರ್ಡ್ ಮಾಡುವ ಮೂಲಕ ಸರಕಾರದ ಸೌಲಭ್ಯಗಳನ್ನು ಪಡೆಯುವ ಬಗ್ಗೆ ಚರ್ಚೆ ನಡೆಸಲಾಯಿತು. ಈ ಸಂದರ್ಭದಲ್ಲಿ ಜಗನ್ನಾಥ ಅಮೈ ಬೇಬಿ ಕುಮಾರಮಂಗಲ, ಸರಸ್ವತಿ ಶುಭಲಕ್ಷ್ಮಿ ಪ್ರಮೀಳಾ ಇಡ್ಯಾಡಿ,ಜಯಂತಿ, ಮೋಹಿನಿ,ಗೌತಮಿ ಸುನಿತಾ,ನೇತ್ರಾವತಿ, ಬೇಬಿ

ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಸವಣೂರು ವಲಯದ ಸಭೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಮಾ.17 ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಬೀಸುತ್ತಿದ್ದು, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 3 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

​ಗ್ರಾಮೀಣ ಭಾಗದ ಗ್ಯಾಸ್ ಬಳಕೆದಾರರಿಗೆ ಗುಡ್ ನ್ಯೂಸ್? 25 ದಿನದ ಮರು ಬುಕ್ಕಿಂಗ್ ನಿಯಮಕ್ಕೆ ಅಶ್ರಫ್ ಗುಂಡಿ ಮನವಿ.

(ನ್ಯೂಸ್‌ ಕಡಬ) newskadaba.com,  ಮಾ.16: ನಗರ ಪ್ರದೇಶದ ಗ್ಯಾಸ್ ಬಳಕೆದಾರರಿಗೆ ಗ್ಯಾಸ್ ಸಿಲಿಂಡರ್ ಮರು ಬುಕ್ಕಿಂಗ್ ಅವಧಿಯನ್ನು 25 ದಿನಗಳು ನಿಗಧಿಪಡಿಸಿದಂತೆ ಗ್ರಾಮೀಣ ಪ್ರದೇಶದಲ್ಲಿಯು 45 ದಿನಗಳ ಬದಲು 25 ದಿನಗಳಿಗೆ ಸೀಮಿತಗೊಳಿಸಬೇಕೆಂದು ಸುಳ್ಯ ತಾಲೂಕು ಕೆ.ಡಿಪಿ ಸದಸ್ಯ ಅಶ್ರಫ್ ಗುಂಡಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿರುತ್ತಾರೆ. ಅಲ್ಲದೆ ಮುಂದೆ ಬರುವ ಯುಗಾದಿ ಮತ್ತು ರಂಜಾನ್ ಹಬ್ಬಕ್ಕೆ ಅಡುಗೆ ಅನಿಲ ಸಿಲಿಂಡರ್ ಕೊರತೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿರುತ್ತಾರೆ..

​ಗ್ರಾಮೀಣ ಭಾಗದ ಗ್ಯಾಸ್ ಬಳಕೆದಾರರಿಗೆ ಗುಡ್ ನ್ಯೂಸ್? 25 ದಿನದ ಮರು ಬುಕ್ಕಿಂಗ್ ನಿಯಮಕ್ಕೆ ಅಶ್ರಫ್ ಗುಂಡಿ ಮನವಿ. Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟ್ರಾಫಿಕ್ ರೂಲ್ಸ್ ಉಲ್ಲಂಘನೆ: ಸವಾರನಿಗೆ ದಂಡ, 15 ದಿನ ಜನಜಾಗೃತಿ ಸೇವೆ

(ನ್ಯೂಸ್‌ ಕಡಬ) newskadaba.com,  ಮಾ.16 ಮಂಗಳೂರು: ಪದೇ ಪದೇ ಸಂಚಾರ ನಿಯಮಗಳನ್ನು ಗಾಳಿಗೆ ತೂರುತ್ತಿದ್ದ ಸವಾರನೊಬ್ಬನಿಗೆ ಸುಳ್ಯದ ನ್ಯಾಯಾಲಯವು ದಂಡದ ಜೊತೆಗೆ ಸಾರ್ವಜನಿಕವಾಗಿ ಸಂಚಾರ ನಿಯಮಗಳ ಅರಿವು ಮೂಡಿಸುವ ವಿಶಿಷ್ಟ ಶಿಕ್ಷೆಯನ್ನು ವಿಧಿಸಿದೆ. ದಿನಾಂಕ 12/03/2026 ರಂದು ಸುಳ್ಯ ನಿವಾಸಿ ರಕ್ಷಿತ್ ಜಿ. ಎಂಬುವವರು ಸುಳ್ಯ ಪೇಟೆಯಲ್ಲಿ ಸಂಚಾರ ನಿಯಮಗಳನ್ನು ಸತತವಾಗಿ ಉಲ್ಲಂಘಿಸಿದ್ದರು. ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಸಂತೋಷ್ ಬಿ.ಪಿ. ಅವರು ಐಎಂವಿ ಕಾಯ್ದೆಯಡಿ (IMV Act) ವಿವಿಧ ಕಲಂಗಳಡಿ (119

ಟ್ರಾಫಿಕ್ ರೂಲ್ಸ್ ಉಲ್ಲಂಘನೆ: ಸವಾರನಿಗೆ ದಂಡ, 15 ದಿನ ಜನಜಾಗೃತಿ ಸೇವೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top