News Kadaba

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಫೆ.28: ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಒಣಹವೆ ಇರಲಿದ್ದು, ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೋಲಾರದಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಾಕಿಸ್ತಾನ-ಅಫ್ಘಾನಿಸ್ತಾನ ಗಡಿ ಉದ್ವಿಗ್ನತೆ – ಮಿಲಿಟರಿ ದಾಳಿಗಳಲ್ಲಿ 55 ಪಾಕ್ ಸೈನಿಕರ ಹತ್ಯೆ, 23 ಸೆರೆ

(ನ್ಯೂಸ್‌ ಕಡಬ) newskadaba.com,ಫೆ.27 : ಪಾಕಿಸ್ತಾನದ ವಾಯುದಾಳಿಗೆ ಪ್ರತೀಕಾರವಾಗಿ ಅಫ್ಘಾನಿಸ್ತಾನ ನಡೆಸಿದ ಮಿಲಿಟರಿ ದಾಳಿಯಲ್ಲಿ 55 ಪಾಕಿಸ್ತಾನಿ ಸೈನಿಕರು ಹತ್ಯೆಗೀಡಾಗಿದ್ದು, 23 ಮಂದಿ ಜೀವಂತವಾಗಿ ಸೆರೆಹಿಡಿಯಲ್ಪಟ್ಟಿದ್ದಾರೆ. ಈ ದಾಳಿಗೆ ತಕ್ಷಣವೇ ಪಾಕಿಸ್ತಾನವು ಪ್ರತೀಕಾರ ವಾಯುದಾಳಿ ನಡೆಸಿದೆ. ಶುಕ್ರವಾರ ಬೆಳಗ್ಗೆ ಕಾಬೂಲ್, ಕಂದಹಾರ್ ಮತ್ತು ಪಕ್ತಿಯಾ ಪ್ರಾಂತ್ಯಗಳ ಮೇಲೆ ನಡೆದ ಬಾಂಬ್ ದಾಳಿಗಳಲ್ಲಿ ಸಂಕಷ್ಟಕರ ಪರಿಸ್ಥಿತಿ ನಿರ್ಮಾಣವಾಗಿದೆ. ಡುರಾಂಡ್ ರೇಖೆಯ 2,611 ಕೀಮೀ ಉದ್ದದ ಗಡಿ ಮತ್ತು ಟೋರ್ಖಾಮ್ ಭಾಗದಲ್ಲಿ ಉಭಯ ದೇಶಗಳ ನಡುವೆ ಭಾರೀ ಗುಂಡಿನ ಚಕಮಕಿ

ಪಾಕಿಸ್ತಾನ-ಅಫ್ಘಾನಿಸ್ತಾನ ಗಡಿ ಉದ್ವಿಗ್ನತೆ – ಮಿಲಿಟರಿ ದಾಳಿಗಳಲ್ಲಿ 55 ಪಾಕ್ ಸೈನಿಕರ ಹತ್ಯೆ, 23 ಸೆರೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

​ಕೋಲ್ಕತ್ತಾದಲ್ಲಿ ಭೂಕಂಪದ ಭೀತಿ: ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆ ದಾಖಲು; ಜನರಲ್ಲಿ ಆವರಿಸಿದ ಆತಂಕ.

(ನ್ಯೂಸ್‌ ಕಡಬ) newskadaba.com,ಫೆ.27 : ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ಇಂದು ಮಧ್ಯಾಹ್ನ ಭೂಕಂಪ ಸಂಭವಿಸಿದೆ. ಮಧ್ಯಾಹ್ನ 1:22 ಸುಮಾರಿಗೆ 5.4 ತೀವ್ರತೆಯ ಭೂಕಂಪ ಸಂಭವಿಸಿದೆ.ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರದ ಪ್ರಕಾರ, ಬಾಂಗ್ಲಾದೇಶದ ಢಾಕಾದ ಅಗರ್‌ಗಾಂವ್‌ನಲ್ಲಿರುವ 35 ಕಿ.ಮೀ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ. ಭೂಮಿ ಕಂಪಿಸುತ್ತಿದ್ದಂತೆ ಕಟ್ಟಡಗಳಿಂದ ಜನರು ಭಯದಿಂದ ಹೊರಗಡೆ ಓಡಿಕೊಂಡು ಬಂದಿದ್ದಾರೆ. ಬಾಂಗ್ಲಾದಲ್ಲಿ ಭೂಕಂಪವಾದರೂ ಪಶ್ಚಿಮ ಬಂಗಾಳದ ಹಲವೆಡೆ ಕಂಪನ ಅನುಭವವಾಗಿದೆ. ಕೋಲ್ಕತ್ತಾದಲ್ಲಿ ವೇದಿಕೆಯ ಮೇಲೆ ಕೇಂದ್ರ ಸಚಿವ ಸುಕಾಂತ ಮಜುಂದಾರ್ ಮಾತನಾಡುತ್ತಿರುವಾಗಲೇ ಭೂಮಿ

​ಕೋಲ್ಕತ್ತಾದಲ್ಲಿ ಭೂಕಂಪದ ಭೀತಿ: ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆ ದಾಖಲು; ಜನರಲ್ಲಿ ಆವರಿಸಿದ ಆತಂಕ. Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಾಳೆಯಿಂದ ದ್ವಿತೀಯ ಪಿಯುಸಿ ‘ಅಗ್ನಿಪರೀಕ್ಷೆ’: ನಕಲು ತಡೆಗೆ ಸಜ್ಜಾದ ಶಿಕ್ಷಣ ಇಲಾಖೆ

(ನ್ಯೂಸ್‌ ಕಡಬ) newskadaba.com,ಫೆ.27 : ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಈ ವೇಳೆ ಯಾವುದೇ ರೀತಿಯ ಅಕ್ರಮ ನಡೆಯದಂತೆ ಪರೀಕ್ಷಾ ಮಂಡಳಿ ಹದ್ದಿನ ಕಣ್ಣಿಟ್ಟಿದೆ. ಮಾ.೧೭ರವರೆಗೆ ಪರೀಕ್ಷೆ ನಡೆಯಲಿದ್ದು, ೭,೧೦,೩೬೩ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯಾದ್ಯಂತ ೧,೨೧೭ ಕೇಂದ್ರಗಳಲ್ಲಿ ಬೆಳಗ್ಗೆ ೧೦ ಗಂಟೆಯಿಂದ ಮಧ್ಯಾಹ್ನ ೧ ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ. ಹೀಗಾಗಿ ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟೆಚ್ಚರ, ಸೋಶಿಯಲ್ ಮೀಡಿಯಾದ ಮೇಲೂ ಬೋರ್ಡ್ ಕಣ್ಣಿಟ್ಟಿದೆ. ಜತೆಗೆ ಪೇಪರ್ ಸೋರಿಕೆ ಆಗದಂತೆ ಮುನ್ನೆಚ್ಚರಿಕೆ ಕ್ರಮವಹಿಸಲಾಗಿದೆ. ಪ್ರಶ್ನೆಪತ್ರಿಕೆ ರವಾನೆಗೂ

ನಾಳೆಯಿಂದ ದ್ವಿತೀಯ ಪಿಯುಸಿ ‘ಅಗ್ನಿಪರೀಕ್ಷೆ’: ನಕಲು ತಡೆಗೆ ಸಜ್ಜಾದ ಶಿಕ್ಷಣ ಇಲಾಖೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತಾಯಿ ಕಣ್ಣೆದುರೇ ಮಗನ ಅಂತ್ಯ: ಹಳೇ ಹಗೆತನಕ್ಕೆ ರೌಡಿಶೀಟರ್ ಬಲಿ; ಬೆಚ್ಚಿಬಿದ್ದ ಜನತೆ

(ನ್ಯೂಸ್‌ ಕಡಬ) newskadaba.com,ಫೆ.27 : ಹಳೇ ದ್ವೇಷದ ಹಿನ್ನೆಲೆಯಲ್ಲಿ ರೌಡಿಶೀಟರ್‌ನನ್ನು ಆತನ ತಾಯಿಯ ಎದುರೇ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ರುವ ಘಟನೆ ಥಣಿಸಂದ್ರದ ಅಮರ ಜ್ಯೋತಿ ಲೇಔಟ್ ನಲ್ಲಿ ನಡೆದಿದೆ.ಡಿ.ಜೆ. ಹಳ್ಳಿ ಪೊಲೀಸ್ ಠಾಣೆಯ ರೌಡಿಶೀಟರ್‌ ಆಗಿದ್ದ ಪವನ್ ಕುಮಾರ್ (25) ಎಂಬಾತನನ್ನು ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ತಣಿಸಂದ್ರದ ಅಮರಜ್ಯೋತಿ ಲೇಔಟ್ ನಿವಾಸಿಯಾಗಿದ್ದ ಪವನ್, ತನ್ನ ಬೇಕರಿ ಮುಚ್ಚಿ ಬೈಕ್ ನಲ್ಲಿ ಮನೆಗೆ ಮರಳುತ್ತಿದ್ದ. ಈ

ತಾಯಿ ಕಣ್ಣೆದುರೇ ಮಗನ ಅಂತ್ಯ: ಹಳೇ ಹಗೆತನಕ್ಕೆ ರೌಡಿಶೀಟರ್ ಬಲಿ; ಬೆಚ್ಚಿಬಿದ್ದ ಜನತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಶೇಷಚೇತನರ ಬಾಳಿಗೆ ಆಸರೆಯಾದ ಇಂದಿರಾ ಕ್ಯಾಂಟೀನ್: ಜಿಬಿಎ ಕಡೆಯಿಂದ ಹೊಸ ಉದ್ಯೋಗ ಯೋಜನೆ!

(ನ್ಯೂಸ್‌ ಕಡಬ) newskadaba.com,ಫೆ.27 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಯೋಜನೆಯಾದ ಇಂದಿರಾ ಕ್ಯಾಂಟೀನ್‌ಗೆ ಹೊಸ ರೂಪ ನೀಡಲು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಗ್ರೇಟರ್‌ ಪ್ಲಾನ್‌ ಮಾಡಿದೆ.ಗುಣಮಟ್ಟದ ಆಹಾರ ಮತ್ತು ಸೇವೆಯಲ್ಲಿ ಕೆಲವು ಕಾಲದಿಂದ ಉಂಟಾಗಿದ್ದ ಅಸಮಾಧಾನಕ್ಕೆ ಪರಿಹಾರ ಕಂಡುಹಿಡಿಯಲು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಇಂದಿರಾ ಕ್ಯಾಂಟೀನ್‌ಗಳಿಗೆ ಕಾಯಕಲ್ಪ ಕಲ್ಪಿಸಲು ಮನಸು ಮಾಡಿದೆ. ಇಂದಿರಾ ಕ್ಯಾಂಟೀನ್‌ಗಳಲ್ಲಿ ಅಂಧರು, ವಿಶೇಷಚೇತನರು ಸೇರಿದಂತೆ ವಿವಿಧ ವಿಶೇಷ ಚೇತನರಿಗೆ ಉದ್ಯೋಗ ನೀಡುವ ಯೋಜನೆಗೆ ಜಿಬಿಎ ರೂಪುರೇಷೆ ಸಿದ್ಧಪಡಿಸಿದೆ. ಮಹಿಳಾ ಮತ್ತು ಮಕ್ಕಳ

ವಿಶೇಷಚೇತನರ ಬಾಳಿಗೆ ಆಸರೆಯಾದ ಇಂದಿರಾ ಕ್ಯಾಂಟೀನ್: ಜಿಬಿಎ ಕಡೆಯಿಂದ ಹೊಸ ಉದ್ಯೋಗ ಯೋಜನೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗಾಢ ನಿದ್ರೆಗೆ ಜಾರಿದ ವಿದ್ಯಾರ್ಥಿ 7 ಗಂಟೆಗಳ ಕಾಲ ಸತತ ಬಸ್ ಪಯಣ!

(ನ್ಯೂಸ್‌ ಕಡಬ) newskadaba.com,ಫೆ.27 : ನೋಯ್ಡಾದ ಖಾಸಗಿ ಶಾಲೆಯಲ್ಲಿ ಐದು ವರ್ಷದ ವಿದ್ಯಾರ್ಥಿಯನ್ನು ಬೆಳಿಗ್ಗೆ ಪ್ರಯಾಣದ ಸಮಯದಲ್ಲಿ ನಿದ್ರೆಗೆ ಜಾರಿದ ನಂತರ ಸುಮಾರು 7 ಗಂಟೆಗಳ ಕಾಲ ಶಾಲಾ ಬಸ್ಸಿನೊಳಗೆ ಬೀಗ ಹಾಕಲಾಗಿದೆ ಎಂದು ಆರೋಪಿಸಲಾಗಿದೆ. ಮಗು ಶಾಲಾ ಬಸ್ ಹತ್ತಿತು. ಆದರೆ ಹಿಂದಿನ ಸೀಟಿನಲ್ಲಿ ನಿದ್ರೆಗೆ ಜಾರಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಬಸ್ ಶಾಲೆಯನ್ನು ತಲುಪಿದಾಗ, ಇತರ ಮಕ್ಕಳು ಕೆಳಗಿಳಿದರು, ಆದರೆ ಸಿಬ್ಬಂದಿ ಸುಮಾರು 25 ಕಿ.ಮೀ ದೂರದ ಬಸ್ ಯಾರ್ಡ್ ನಲ್ಲಿ ವಾಹನವನ್ನು ನಿಲ್ಲಿಸುವ

ಗಾಢ ನಿದ್ರೆಗೆ ಜಾರಿದ ವಿದ್ಯಾರ್ಥಿ 7 ಗಂಟೆಗಳ ಕಾಲ ಸತತ ಬಸ್ ಪಯಣ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿ ಮತ್ತೆ ಏರಿಕೆ

(ನ್ಯೂಸ್‌ ಕಡಬ) newskadaba.com,ಫೆ.27 ಬೆಂಗಳೂರು: ಚಿನ್ನದ ದರದಲ್ಲಿಂದು ಮತ್ತೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಶುಕ್ರವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 50 ರೂ. ಏರಿಕೆ ಕಂಡು ಬಂದಿದ್ದು, ಬೆಲೆ 14,810 ರೂ. ಇದೆ. ಇನ್ನು 24 ಕ್ಯಾರಟ್‌ನ ಒಂದು ಗ್ರಾಂಗೆ 55 ರೂ. ಏರಿಕೆಯಾಗಿ 16,157 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ ನೀವು 1,18,480 ರೂ. ಹಾಗೂ 10 ಗ್ರಾಂ ಚಿನ್ನಕ್ಕೆ ನೀವು 1,48,100 ರೂ. ಹಾಗೂ 100 ಗ್ರಾಂ ಗೆ ನೀವು 14,81,000

ಚಿನ್ನದ ದರದಲ್ಲಿ ಮತ್ತೆ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ- ಸವಾರ ಮೃತ್ಯು

(ನ್ಯೂಸ್‌ ಕಡಬ) newskadaba.com,ಫೆ.27 : ಲಾರಿ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಸಂಜೆ ಮಂಗಳೂರು ಹೊರವಲಯ ಪಣಂಬೂರು ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಮುಂಭಾಗ ನಡೆದಿದೆ. ಮೃತ ಬೈಕ್ ಸವಾರನನ್ನು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕು ನಿವಾಸಿ ಸದ್ಯ ಮಂಗಳೂರು ಬಿಜೈಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ಶಿವದಾಸ್ ಗಣಪತಿ ನಾಯ್ಕ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಶಿವದಾಸ್ ಗಣಪತಿ ನಾಯ್ಕ ಅವರು ಬೈಕಂಪಾಡಿಯ ಔಷಧಿ ತಯಾರಕ

ಮಂಗಳೂರು : ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ- ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಂಚ್ ಕೋತಿಯಿಂದ ಸಮಾಜಕ್ಕೆ ‘ಪಂಚ್’; ಗಮನ ಸೆಳೆಯುತ್ತಿದೆ ಈ ಕ್ಯೂಟ್ ಅಂಬಾಸಿಡರ್

(ನ್ಯೂಸ್‌ ಕಡಬ) newskadaba.com,ಫೆ.27 : ಮುಂಬೈ ಪೊಲೀಸ್ ಇಲಾಖೆ ತುರ್ತು ಸಹಾಯವಾಣಿ 112 ಬಗ್ಗೆ ಜಾಗೃತಿ ಮೂಡಿಸಲು ಜಪಾನಿನ ಕೋತಿ ಪಂಚ್‌ನನ್ನು ಬಳಸಿದ್ದಾರೆ. ತನ್ನ ಮುಗ್ಧತೆಯ ಮೂಲಕ ಹೆಸರುವಾಸಿಯಾದ ಪಂಚ್ ಕೋತಿ ಇದೀಗ ಸಾಮಾಜಿಕ ಜವಾಬ್ದಾರಿ ಹೊತ್ತಿದೆ. ​ ​ ಜಪಾನಿನ ಇಚಿಕಾವಾ ಸಿಟಿ ಮೃಗಾಲಯದಲ್ಲಿ ಹುಟ್ಟಿದ ಪಂಚ್, ತಾಯಿಯಿಂದ ದೂರಾಗಿ ಒಬ್ಬಂಟಿಯಾಗಿತ್ತು. ಅಲ್ಲಿನ ಉಳಿದ ಕೋತಿಗಳಿಂದ ಹಿಂಸೆ ಅನುಭವಿಸುತ್ತಿದ್ದರೂ, ಪಂಚ್ ಸದಾ ಗೊಂಬೆಯೊಂದರ ಜತೆ ಇರುತ್ತಿತ್ತು. ಈ ಕಷ್ಟಕರ ಅನುಭವವನ್ನು ಗಮನದಲ್ಲಿಟ್ಟುಕೊಂಡು ಮುಂಬೈ ಪೊಲೀಸರು 112 ತುರ್ತು

ಪಂಚ್ ಕೋತಿಯಿಂದ ಸಮಾಜಕ್ಕೆ ‘ಪಂಚ್’; ಗಮನ ಸೆಳೆಯುತ್ತಿದೆ ಈ ಕ್ಯೂಟ್ ಅಂಬಾಸಿಡರ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top