News Kadaba

ಮಂಗಳೂರು: ಕರಾವಳಿಯ ರಸ್ತೆಗಿಳಿದ ಮೊದಲ ಖಾಸಗಿ ಎಲೆಕ್ಟ್ರಿಕ್ ಬಸ್‌ ಪರಿಸರ ಸ್ನೇಹಿ ಪಯಣಕ್ಕೆ ಚಾಲನೆ

(ನ್ಯೂಸ್‌ ಕಡಬ) newskadaba.com,ಫೆ.27 ನಗರದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಹೊಸ ಅಧ್ಯಾಯ ಆರಂಭಗೊಂಡಿದ್ದು, ಗುರುವಾರ ಮಾರ್ಗನ್ಸ್ ಗೇಟ್‌ನ ಪಾಲಾ ಮಾರ್ ಗಾರ್ಡನ್‌ನಲ್ಲಿ ನಡೆದ ಸಮಾರಂಭದಲ್ಲಿ ಮಂಗಳೂರಿನ ಮೊದಲ ಖಾಸಗಿ ಎಲೆಕ್ಟ್ರಿಕ್ ಬಸ್‌ಗೆ ಅಧಿಕೃತವಾಗಿ ಹಸಿರು ನಿಶಾನೆ ತೋರಿಸಲಾಯಿತು. ನಗರದ ಪ್ರಮುಖ ಸರ್ಕ್ಯೂಟ್ ಆಗಿರುವ ‘ಮಾರ್ಗ ಸಂಖ್ಯೆ 27’ರಲ್ಲಿ ಈ ಹವಾನಿಯಂತ್ರಿತ (ಎಸಿ) ವಿದ್ಯುತ್ ಬಸ್ ಸಂಚಾರ ಆರಂಭಿಸಿದ್ದು, ದೈನಂದಿನ ಪ್ರಯಾಣಿಕರಿಗೆ ಸುಸ್ಥಿರ, ಪರಿಸರ ಸ್ನೇಹಿ ಮತ್ತು ಸುಗಮ ಪ್ರಯಾಣದ ಅನುಭವವನ್ನು ನೀಡುವ ಉದ್ದೇಶ ಹೊಂದಿದೆ. ಮಂಗಳೂರಿನ ಖಾಸಗಿ […]

ಮಂಗಳೂರು: ಕರಾವಳಿಯ ರಸ್ತೆಗಿಳಿದ ಮೊದಲ ಖಾಸಗಿ ಎಲೆಕ್ಟ್ರಿಕ್ ಬಸ್‌ ಪರಿಸರ ಸ್ನೇಹಿ ಪಯಣಕ್ಕೆ ಚಾಲನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಫೆಬ್ರವರಿ 28ರಿಂದ ದ್ವಿತೀಯ ಪಿಯು ಪರೀಕ್ಷೆ-1 ಶುರು! 7.10 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ

(ನ್ಯೂಸ್‌ ಕಡಬ) newskadaba.com,ಫೆ.27 ಬೆಂಗಳೂರು: ನಿಗದಿತ ವೇಳಾಪಟ್ಟಿಯಂತೆ ಫೆ.28ರಿಂದ ರಾಜ್ಯಾದ್ಯಂತ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಆರಂಭವಾಗಲಿದ್ದು, ಈ ಬಾರಿ 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಮಾ.17ರವರೆಗೆ ನಡೆಯುವ ಪರೀಕ್ಷೆಗೆ ರಾಜ್ಯಾದ್ಯಂತ 1,217 ಕೇಂದ್ರಗಳನ್ನು ಗುರುತಿಸಲಾಗಿದ್ದು ಯಾವುದೇ ಅಕ್ರಮ, ಗೊಂದಲಗಳಿಗೆ ಅವಕಾಶವಾಗದೆ ಸುಸೂತ್ರವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಹಾಗೂ ಭದ್ರತಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ. ಪರೀಕ್ಷೆಗೆ ನೋಂದಾಯಿಸಿರುವ 7.10 ಲಕ್ಷಕ್ಕೂ ಅಧಿಕ ವಿದ್ಯಾರ್ಥಿ ಪರೀಕ್ಷೆಗೆ ನೋಂದಾಯಿಸಿರುವ

ಫೆಬ್ರವರಿ 28ರಿಂದ ದ್ವಿತೀಯ ಪಿಯು ಪರೀಕ್ಷೆ-1 ಶುರು! 7.10 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗಂಗೊಳ್ಳಿ: ಸಮುದ್ರದಲ್ಲಿ ಬೋಟ್ ಮುಳುಗಡೆ; ಸಮಯಪ್ರಜ್ಞೆಯಿಂದ ಮೀನುಗಾರರ ಪ್ರಾಣಾಪಾಯ ಮುಕ್ತ

(ನ್ಯೂಸ್‌ ಕಡಬ) newskadaba.com,ಫೆ.27: ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟ ಬೋಟೊಂದು ನೀರು ತುಂಬಿ ಮುಳುಗಡೆ ಯಾದ ಘಟನೆ ಕುಂದಾಪುರ ಹಾಗೂ ಗಂಗೊಳ್ಳಿ ಮಧ್ಯದ ಸಮುದ್ರದಲ್ಲಿ ಸಂಭವಿಸಿದ್ದು, ಬೋಟಿನಲ್ಲಿದ್ದ ಐವರು ಮೀನುಗಾರರನ್ನು ಮತ್ತೊಂದು ಬೋಟಿನ ಮೀನುಗಾರರು ರಕ್ಷಿಸಿದ್ದಾರೆ. ಬೋಟಿನಲ್ಲಿದ್ದ ಮೀನುಗಾರರಾದ ಕುಮಟಾ ಮೂಲದ ಪ್ರಕಾಶ್, ರಂಜಿತ್, ರಾಘವೇಂದ್ರ, ರಾಮ ಹಾಗೂ ಶ್ರೀನಿವಾಸ ಪಾರಾದವರು. ಫೆ.23ರ ರಾತ್ರಿ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟ ಕೆಮ್ಮಣ್ಣಿನ ನಾಗರಾಜ್ ಪುತ್ರನ್ ಅವರ ಶ್ರೀದುರ್ಗಾಪರಮೇಶ್ವರಿ ಬೋಟಿನ ಅಡಿಭಾಗಕ್ಕೆ ಫೆ.24ರಂದು ಸಮುದ್ರದಲ್ಲಿ ಯಾವುದೋ ವಸ್ತು ತಾಗಿ,

ಗಂಗೊಳ್ಳಿ: ಸಮುದ್ರದಲ್ಲಿ ಬೋಟ್ ಮುಳುಗಡೆ; ಸಮಯಪ್ರಜ್ಞೆಯಿಂದ ಮೀನುಗಾರರ ಪ್ರಾಣಾಪಾಯ ಮುಕ್ತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಡ್ರಗ್ಸ್ ಅಮಲಿನಲ್ಲಿ ಅಸಭ್ಯ ವರ್ತನೆ ಬಂಟ್ವಾಳ ಪೊಲೀಸರ ಬಲೆಗೆ ಬಿದ್ದ ಇಬ್ಬರು ಕಿಡಿಗೇಡಿಗಳು

(ನ್ಯೂಸ್‌ ಕಡಬ) newskadaba.com,ಫೆ.27: ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ ಘಟನೆ ಬಿ ಮೂಡ ಗ್ರಾಮದ ಪಲ್ಲಮಜಲು ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಬಂಟ್ವಾಳ ನಿವಾಸಿಗಳಾದ ಅಬ್ದುಲ್ ರಜಾಕ್ ಹಾಗೂ ಫೆಬಿಯಸ್ ಜೈಸನ್ ಪಿರೇರಾ (24) ಎಂದು ಗುರುತಿಸಲಾಗಿದೆ. ಫೆ 25 ರಂದು ಬೆಳಿಗ್ಗೆ ಬಂಟ್ವಾಳ ತಾಲೂಕು ಬಿ ಮೂಡಾ ಗ್ರಾಮದ ಪಲ್ಲಮಜಲು ಎಂಬಲ್ಲಿ, ಸಾರ್ವಜನಿಕ ಮೈದಾನದಲ್ಲಿ 2  ವ್ಯಕ್ತಿಗಳು ಮಾದಕ ವಸ್ತು ಸೇವಿಸಿ ನಶೆ

ಡ್ರಗ್ಸ್ ಅಮಲಿನಲ್ಲಿ ಅಸಭ್ಯ ವರ್ತನೆ ಬಂಟ್ವಾಳ ಪೊಲೀಸರ ಬಲೆಗೆ ಬಿದ್ದ ಇಬ್ಬರು ಕಿಡಿಗೇಡಿಗಳು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಫೆ.27: ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಒಣಹವೆ ಇರಲಿದ್ದು, ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೋಲಾರದಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ : ಸಂಸ್ಥೆಯ ಮುಖ್ಯಸ್ಥರೊಬ್ಬರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಒಬ್ಬ ಆರೆಸ್ಟ್

(ನ್ಯೂಸ್‌ ಕಡಬ) newskadaba.com,   ಫೆ.24: ಶಾಲಾ ಮಕ್ಕಳಿಗೆ ಸಂವಹನ ಕೌಶಲ ತರಬೇತಿ ನೀಡುವ ನಗರದ ಸಂಸ್ಥೆಯೊಂದರ ಮುಖ್ಯಸ್ಥರನ್ನು ಅದೇ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿಯೊಬ್ಬ ಖಾಸಗಿ ವೀಡಿಯೋ ಇದೆ ಎಂದು ಬ್ಲ್ಯಾಕ್ ಮೇಲ್ ಮಾಡಿ ಈಗ ಬಂಧಿತನಾಗಿದ್ದಾನೆ. ಆರೋಪಿ ಉಡುಪಿ ಕಾಪುವಿನ ಅಭಿಷೇಕ್‌ ಸುರೇಂದ್ರ ಪೂಜಾರಿ ಬಂಧಿತ. ಮಾರ್ಫ್‌ ಮಾಡಲಾದ ವೀಡಿಯೋ ಇರಿಸಿಕೊಂಡು ಬ್ಲ್ಯಾಕ್ ಮೇಲ್ ಮಾಡಿರುವುದಾಗಿ ಸಂಸ್ಥೆ ಮಾಲಕರ ಪುತ್ರಿ ನೀಡಿದ ದೂರಿನನ್ವಯ ಉರ್ವಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನ ವಿಧಿಸಲಾಗಿದೆ……

ಉಡುಪಿ : ಸಂಸ್ಥೆಯ ಮುಖ್ಯಸ್ಥರೊಬ್ಬರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಒಬ್ಬ ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಫೆ.26ಕ್ಕೆ ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ ಭಾರತಕ್ಕೆ ಭೇಟಿ

(ನ್ಯೂಸ್‌ ಕಡಬ) newskadaba.com,ಫೆ.24: ಫೆ.26ಕ್ಕೆ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಭಾರತಕ್ಕೆ ಆಗಮಿಸಲಿದ್ದಾರೆ. ಫೆ.26ರಿಂದ ಮಾ.7ರವರೆಗೆ ಭಾರತ, ಆಸ್ಟ್ರೇಲಿಯಾ ಮತ್ತು ಜಪಾನ್‌ಗೆ ಪ್ರಯಾಣ ಬೆಳೆಸಲಿರುವ ಮಾರ್ಕ್ ಕಾರ್ನಿ ಅವರು ಮೊದಲು ಮುಂಬೈಗೆ ಭೇಟಿ ನೀಡಲಿದ್ದಾರೆ. ನಂತರ ದೆಹಲಿಗೆ ಭೇಟಿ ನೀಡಿ, ಅಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ.. ಭೇಟಿ ವೇಳೆ, ನಾಯಕರು ಕೆನಡಾ-ಭಾರತ ಸಂಬಂಧವನ್ನು ಉನ್ನತೀಕರಿಸುವ ಮತ್ತು ವಿಸ್ತರಿಸುವತ್ತ ಗಮನಹರಿಸಲಿದ್ದಾರೆ. ವ್ಯಾಪಾರ, ಇಂಧನ, ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆ, ಪ್ರತಿಭೆ ಮತ್ತು ಸಂಸ್ಕೃತಿ ಮತ್ತು ರಕ್ಷಣೆಯಲ್ಲಿ ಮಹತ್ವಾಕಾಂಕ್ಷೆಯ

ಫೆ.26ಕ್ಕೆ ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ ಭಾರತಕ್ಕೆ ಭೇಟಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಜೇಶ್ವರ : ವ್ಯಕ್ತಿಯ ಅಪಹರಣ- ನಾಲ್ಕು ಮಂದಿ ಆರೆಸ್ಟ್

(ನ್ಯೂಸ್‌ ಕಡಬ) newskadaba.com,ಫೆ.24: ವ್ಯಕ್ತಿ ಯೋರ್ವನನ್ನು ಕಾರಿನಲ್ಲಿ ಬಲವಂತವಾಗಿ ಅಪಹರಿಸಿದ ಘಟನೆ ಮಂಜೇಶ್ವರದ ಪಾವೂರು ನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಪಟ್ಟಂತೆ ನಾಲ್ವರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಫೆಬ್ರವರಿ 20 ರಂದು ರಾತ್ರಿ ಘಟನೆ ನಡೆದಿತ್ತು. ಪಾವೂರು ಕೊಂಬಗುಡಿಯ ಅಬ್ದುಲ್ ರಹಮಾನ್ ಎಂಬವರನ್ನು ರಾತ್ರಿ 10.30 ರ ಸುಮಾರಿಗೆ ಕಾರಿನಲ್ಲಿ ಬಂದ ತಂಡವೊಂದು ಬಲವಂತವಾಗಿ ಅಪಹರಿಸಿತ್ತು. ಈ ಬಗ್ಗೆ ಪತ್ನಿ ತಾಹಿರಾ ಮಂಜೇಶ್ವರ ಠಾಣಾ ಪೊಲೀಸರಿಗೆ ದೂರು ನೀಡಿದ್ದರು. ಘಟನೆಗೆ ಸಂಬಂಧಪಟ್ಟಂತೆ ಪಾವೂರು ಕುಂಡಾಪು ವಿನ ಗಫೂರ್

ಮಂಜೇಶ್ವರ : ವ್ಯಕ್ತಿಯ ಅಪಹರಣ- ನಾಲ್ಕು ಮಂದಿ ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ದರ

(ನ್ಯೂಸ್‌ ಕಡಬ) newskadaba.com,ಫೆ.24: ಜಾಗತಿಕ ಮಾರುಕಟ್ಟೆಗಳ ಏರಿಳಿತದಿಂದ ಚಿನ್ನ ಬೆಳ್ಳಿ ದರದಲ್ಲೂ ಏರಿಳಿತ ಕಂಡುಬರುತ್ತಿದೆ. ಚಿನ್ನದ ದರದಲ್ಲಿ ಹಾಗೂ ಬೆಳ್ಳಿಯಲ್ಲಿ ಇಂದು ಕುಸಿತ ಉಂಟಾಗಿದೆ. ಅಮೆರಿಕದ ಡಾಲರ್ ನಿಂದಾಗಿ ಒತ್ತಡಕ್ಕೊಳಗಾಗಿ, ಮೌಲ್ಯ ಹೆಚ್ಚಾಗಿದ್ದರಿಂದ ಲೋಹಗಳ ಬೆಲೆ ಇಳಿಕೆ ಆಗಿದೆ. ಪ್ರತಿಸುಂಕ ಹಾವಳಿ, ಅಮೆರಿಕ-ಇರಾನ್ ಸಂಘರ್ಷದ ನಡುವೆಯೂ ಡಾಲರ್ ಬಲಗೊಂಡ ಕಾರಣ ಚಿನ್ನ ಬೆಳ್ಳಿ ದರ ಕುಸಿದಿದೆ. ಆದರೆ ಈ ಇಳಿಕೆ ತಾತ್ಕಾಲಿಕವಾಗಿದ್ದು ಮತ್ತೆ ಬೆಲೆ ಏರಿಳಿತ ಕಾಣುವ ಸಾಧ್ಯತೆ ಇದೆ. ಚಿನ್ನದ ಇಂದಿನ ದರ ಎಷ್ಟಿದೆ? ಫೆಬ್ರವರಿ

ಇಂದಿನ ಚಿನ್ನದ ದರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾ.11ರಿಂದ ಸರ್ಕಾರಿ ಆಸ್ಪತ್ರೆ ಒಪಿಡಿ ಬಂದ್‌ : ಎಚ್ಚರ

(ನ್ಯೂಸ್‌ ಕಡಬ) newskadaba.com,ಫೆ.24: ವರ್ಗಾವಣೆ ನೀತಿ ಬದಲಾವಣೆ, ಖಾಲಿ ಹುದ್ದೆಗಳ ಭರ್ತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ವೈದ್ಯರು ಮಾರ್ಚ್ 11 ರಿಂದ 15 ರವರೆಗೆ ಹೊರರೋಗಿಗಳ (ಒಪಿಡಿ) ಸೇವೆಯನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ… ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಡಾ.ರವೀಂದ್ರನಾಥ್‌ ಎಂ.ಮೇಟಿ ಅವರು, ರಾಜ್ಯ ಸರ್ಕಾರ ಪ್ರತಿಭಟನೆಗೆ ಸ್ಪಂದಿಸಿ ಬೇಡಿಕೆಗಳನ್ನು ಈಡೇರಿಸದಿದ್ದರೆ ಮಾರ್ಚ್ 16 ರಿಂದ ಆರೋಗ್ಯ ಇಲಾಖೆಯ ಎಲ್ಲಾ

ಮಾ.11ರಿಂದ ಸರ್ಕಾರಿ ಆಸ್ಪತ್ರೆ ಒಪಿಡಿ ಬಂದ್‌ : ಎಚ್ಚರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top