News Kadaba

ಎಪಿಎಲ್‌ ಕಾರ್ಡ್‌ಗಳಿಗೆ ಗ್ರಹಣ , ಮಧ್ಯಮ ವರ್ಗದವರಿಗೂ ಸಂಕಷ್ಟ

ನ್ಯೂಸ್‌ ಕಡಬ) newskadaba.com,  ಫೆ.13 : ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಎಪಿಎಲ್‌ ಕಾರ್ಡ್‌ಗಳಿಗೂ ಅವಕಾಶ ನೀಡದ ಪರಿಣಾಮ ರೈತರು ನಾನಾ ಕೃಷಿ ಪತ್ತಿನ ಬ್ಯಾಂಕ್‌ ಹಾಗೂ ಇತರೆ ಬ್ಯಾಂಕ್‌ಗಳಲ್ಲಿ ಸೌಲಭ್ಯಗಳನ್ನು ಪಡೆಯಲಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಷ್ಟೇ ಅಲ್ಲ, ರೈತರು, ವಿಶೇಷಚೇತನರು, ಅನಾರೋಗ್ಯಪೀಡಿತರು ಯಶಸ್ವಿನಿ ಕಾರ್ಡ್‌, ಆಯುಷ್ಮಾನ್‌ ಭಾರತ್‌ ಸೇರಿದಂತೆ ಆರೋಗ್ಯ ಕಾರ್ಡ್‌ಗಳನ್ನು ಮಾಡಿಸಲೂ ಆಗುತ್ತಿಲ್ಲ. ಕೃಷಿ ಪತ್ತಿನ ಬ್ಯಾಂಕ್‌ ಹಾಗೂ ಇತರೆ ಕೋ ಆಪರೇಟಿವ್‌ ಬ್ಯಾಂಕ್‌ಗಳಲ್ಲಿ ಬೆಳೆ ಸಾಲ ಸೇರಿದಂತೆ ಕೆಲವು ಸೇವೆಗಳನ್ನು ಪಡೆಯಲು ಪಡಿತರ ಚೀಟಿ […]

ಎಪಿಎಲ್‌ ಕಾರ್ಡ್‌ಗಳಿಗೆ ಗ್ರಹಣ , ಮಧ್ಯಮ ವರ್ಗದವರಿಗೂ ಸಂಕಷ್ಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ ನಗರಸಭೆಗೆ ತೆರಿಗೆ ವಂಚನೆ: ನಕಲಿ ಬ್ಯಾಂಕ್ ಸೀಲ್ ಬಳಸಿ ಹಣ ಲೂಟಿ

(ನ್ಯೂಸ್‌ ಕಡಬ) newskadaba.com,  ಫೆ.13 ಉಡುಪಿ: ನಗರಸಭೆಯ ಆಸ್ತಿ ತೆರಿಗೆ ಪಾವತಿಯಲ್ಲಿ ಭಾರೀ ಅಕ್ರಮ ನಡೆದಿದ್ದು, ಯೂನಿಯನ್ ಬ್ಯಾಂಕ್‌ನ ನಕಲಿ ಸೀಲು ಬಳಸಿ ಸಾರ್ವಜನಿಕರ ಹಣವನ್ನು ಲೂಟಿ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರಸಭೆ ಪೌರಾಯುಕ್ತರಾದ ಮಹಾಂತೇಶ್ ಹಂಗರಗಿ ಅವರು ಫೆಬ್ರವರಿ 3ರಂದು ತೆರಿಗೆ ಪಾವತಿಗಳ ಮರುಪರಿಶೀಲನೆ ನಡೆಸುತ್ತಿದ್ದಾಗ ಈ ಜಾಲ ಪತ್ತೆಯಾಗಿದೆ. ಜನವರಿ 28ರಂದು ಬ್ಯಾಂಕ್ ಸೀಲು ಹೊಂದಿದ್ದ ಚಲನ್ ದಾಖಲೆಯಲ್ಲಿದ್ದರೂ, ಬ್ಯಾಂಕ್ ಸ್ಟೇಟ್‌ಮೆಂಟ್‌ನಲ್ಲಿ

ಉಡುಪಿ ನಗರಸಭೆಗೆ ತೆರಿಗೆ ವಂಚನೆ: ನಕಲಿ ಬ್ಯಾಂಕ್ ಸೀಲ್ ಬಳಸಿ ಹಣ ಲೂಟಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ವಿದ್ಯಾರ್ಥಿಗಳನ್ನು ಪಿಕಪ್‌, ಟಿಪ್ಪರ್‌ನಲ್ಲಿ ಕರೆದೊಯ್ದ ಪ್ರಕರಣ; ಮುಖ್ಯ ಶಿಕ್ಷಕ ಕಿರಣ್ ಅಮಾನತು

(ನ್ಯೂಸ್‌ ಕಡಬ) newskadaba.com,  ಫೆ.13: ವಿದ್ಯಾರ್ಥಿಗಳನ್ನು ಕಾನೂನು ಬಾಹಿರವಾಗಿ ಸರಕು ಸಾಗಣೆ ಮಾಡುವ ಪಿಕಪ್ ಮತ್ತು ಟಿಪ್ಪರ್ ವಾಹನದಲ್ಲಿ ಅಧ್ಯಯನಕ್ಕೆ ಕರೆದುಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಶಿಕ್ಷಕನನ್ನ ಶಿಕ್ಷಣ ಇಲಾಖೆ ಅಮಾನತುಗೊಳಿಸಿದ್ದು, ವೇಣೂರು ಪೊಲೀಸ್ ಠಾಣೆಯಲ್ಲಿ ಎರಡು ವಾಹನ ಮತ್ತು ಚಾಲಕರ ವಿರುದ್ಧ ಪ್ರಕರಣ ದಾಖಲಾಗಿದೆ… ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳನ್ನು ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ನೇತೃತ್ವದಲ್ಲಿ ಫೆ.9ರಂದು ಪಿಕಪ್ ಮತ್ತು ಟಿಪ್ಪರ್ ವಾಹನಗಳಲ್ಲಿ ಅಧ್ಯಯನ ಪ್ರವಾಸದ

ಬೆಳ್ತಂಗಡಿ: ವಿದ್ಯಾರ್ಥಿಗಳನ್ನು ಪಿಕಪ್‌, ಟಿಪ್ಪರ್‌ನಲ್ಲಿ ಕರೆದೊಯ್ದ ಪ್ರಕರಣ; ಮುಖ್ಯ ಶಿಕ್ಷಕ ಕಿರಣ್ ಅಮಾನತು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವೀವ್ಸ್‌ಗಾಗಿ ಸಾಹಸಕ್ಕೆ ಹೋಗಿ ಪ್ರಾಣ ಕಳೆದುಕೊಂಡ ಫುಡ್ ಇನ್ಫ್ಲುಯೆನ್ಸರ್ ವಿಷಕಾರಿ ಏಡಿ ತಿಂದಿದ್ದೇ ಮೃತ್ಯುವಿಗೆ ಕಾರಣ

(ನ್ಯೂಸ್‌ ಕಡಬ) newskadaba.com,  ಫೆ.13: ಸೋಷಿಯಲ್ ಮೀಡಿಯಾ ವೀವ್ಸ್ ಗೆ ವಿಷಕಾರಿ ‘ಡೆವಿಲ್ ಕಾರ್ಬ್’ ತಿಂದು ಫುಡ್ ಇನ್ಫ್ಲುಯೆನ್ಸರ್ ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ.ಎಮ್ಮಾ ಅಮಿತ್ ಮೃತ ಫುಡ್ ಇನ್ಫ್ಲುಯೆನ್ಸರ್. ಈಕೆ ತನ್ನ ಸ್ನೇಹಿತರೊಂದಿಗೆ ಪಲವಾನ್‌ನ ಪೋರ್ಟೊ ಪ್ರಿನ್ಸೆಸಾ ಬಳಿಯ ಮ್ಯಾಂಗ್ರೋವ್ ಕಾಡಿನಲ್ಲಿ ಚಿಪ್ಪು ಮೀನುಗಳನ್ನು ಹಿಡಿದಿದ್ದರು. ಎಮ್ಮಾ ಅವರು ಮೀನುಗಳನ್ನು ಬೇಯಿಸಿ ತಿನ್ನುವುದನ್ನು ಟಿಕ್‌ಟಾಕ್ ಮತ್ತು ಫೇಸ್‌ಬುಕ್‌ಗಾಗಿ ವಿಡಿಯೋ ಮಾಡಿದ್ದರು. ಮರುದಿನ ಏಡಿಯ ವಿಷದಿಂದ ಆಕೆ ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ಆಕೆಯು ಪ್ರಜ್ಞೆ ಕಳೆದುಕೊಂಡಿದ್ದು, ಆಕೆಯ ತುಟಿಗಳು

ವೀವ್ಸ್‌ಗಾಗಿ ಸಾಹಸಕ್ಕೆ ಹೋಗಿ ಪ್ರಾಣ ಕಳೆದುಕೊಂಡ ಫುಡ್ ಇನ್ಫ್ಲುಯೆನ್ಸರ್ ವಿಷಕಾರಿ ಏಡಿ ತಿಂದಿದ್ದೇ ಮೃತ್ಯುವಿಗೆ ಕಾರಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಗಾರ ಹಾಗೂ ಬೆಳ್ಳಿ ಬೆಲೆಯಲ್ಲಿ ಇಂದು ಭಾರೀ ಕುಸಿತ

(ನ್ಯೂಸ್‌ ಕಡಬ) newskadaba.com,  ಫೆ.13: ಸತತ ಚಿನ್ನದ ಬೆಲೆಯಲ್ಲಿ ಏರಿಕೆ ಕಾಣುತ್ತಿದ್ದು, ಈ ಏರಿಕೆಯ ಓಟಕ್ಕೆ ಗುರುವಾರ ಅಂದರೆ ನಿನ್ನೆ ಬ್ರೇಕ್ ಬಿದ್ದಿತ್ತು. ಆದರೆ ಬೆಳ್ಳಿ ಬೆಲೆಯಲ್ಲಿ ನಿನ್ನೆ ಕೊಂಚ ಏರಿಕೆ ಕಂಡಿತ್ತು. ಆದರೆ ಇದೀಗ ಶುಕ್ರವಾರ ಚಿನ್ನ ಹಾಗೂ ಬೆಳ್ಳಿ ಖರೀದಿಸುವವರ ಪಾಲಿಗೆ ಶುಭಶುಕ್ರವಾರವಾಗಿ ಪರಿಣಮಿಸಿದ್ದು, ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಮಹಾ ಕುಸಿತ ಕಂಡಿದೆ. ಗುರುವಾರ 24 ಕ್ಯಾರಟ್ ಪ್ರತಿ 10 ಗ್ರಾಮ್ ಚಿನ್ನದ ಬೆಲೆಯಲ್ಲಿ 1,200 ರುಪಾಯಿ ಇಳಿಕೆ ಕಂಡಿತ್ತು. ಇದೀಗ ಶುಕ್ರವಾರ

ಬಂಗಾರ ಹಾಗೂ ಬೆಳ್ಳಿ ಬೆಲೆಯಲ್ಲಿ ಇಂದು ಭಾರೀ ಕುಸಿತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಲಿಸುತ್ತಿದ್ದ ಓಮ್ನಿಯಲ್ಲಿ ಅಗ್ನಿ ದುರಂತ ಪ್ರಾಣಾಪಾಯದಿಂದ ಪಾರಾದ ಚಾಲಕ ; ಸ್ಥಳೀಯರಲ್ಲಿ ಆತಂಕ

(ನ್ಯೂಸ್‌ ಕಡಬ) newskadaba.com,  ಫೆ.13: ಚಲಿಸುತ್ತಿದ್ದ ಓಮ್ನಿ ವ್ಯಾನ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಹಿಂದಿನಿಂದ ಬರುತ್ತಿದ್ದ ವಾಹನ ಸವಾರರ ಸಮಯಪ್ರಜ್ಞೆಯಿಂದಾಗಿ ಚಾಲಕ ಪಾರಾಗಿರುವ ಘಟನೆ ಕೋಟೆಕಾರಿನ ಅಡ್ಕ ಎಂಬಲ್ಲಿ ಗುರುವಾರ ಸಂಭವಿಸಿದೆ. ತಲಪಾಡಿ ನಿವಾಸಿ ರಿಯಾಜ್ ಎಂಬವರು ಗುರುವಾರ ಮಧ್ಯಾಹ್ನ ಅಡ್ಕದ ಗ್ಯಾರೇಜ್‌ನಿಂದ ರಿಪೇರಿ ಮುಗಿದಿದ್ದ ತಮ್ಮ ವ್ಯಾನ್ ಅನ್ನು ಪಡೆದುಕೊಂಡು ಬರುತ್ತಿದ್ದರು. ಪೆಟ್ರೋಲ್ ಬಂಕ್‌ನಲ್ಲಿ ಇಂಧನ ತುಂಬಿಸಿ ತಲಪಾಡಿಯತ್ತ ತೆರಳುತ್ತಿದ್ದಾಗ ವಾಹನದಲ್ಲಿ ಹೊಗೆ ಕಾಣಿಸಿಕೊಂಡಿದೆ. ಆದರೆ, ವಾಹನಕ್ಕೆ ಬೆಂಕಿ ತಗುಲಿರುವುದು ರಿಯಾಜ್ ಅವರ ಗಮನಕ್ಕೆ ಬಂದಿರಲಿಲ್ಲ.

ಚಲಿಸುತ್ತಿದ್ದ ಓಮ್ನಿಯಲ್ಲಿ ಅಗ್ನಿ ದುರಂತ ಪ್ರಾಣಾಪಾಯದಿಂದ ಪಾರಾದ ಚಾಲಕ ; ಸ್ಥಳೀಯರಲ್ಲಿ ಆತಂಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್ಸೆಸ್ಸೆಲ್ಸಿ, ದ್ವಿತೀಯ PUC ವಿದ್ಯಾರ್ಥಿಗಳಿಗೆ ಪರೀಕ್ಷೆ ದಿನ ಹಾಲ್ ಟಿಕೆಟ್ ತೋರಿಸಿ ಉಚಿತ ಪ್ರಯಾಣ

(ನ್ಯೂಸ್‌ ಕಡಬ) newskadaba.com,  ಫೆ.13:  2026ರ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ಸಿಹಿ ಸುದ್ದಿ ನೀಡಿದ್ದು, ಪರೀಕ್ಷಾ ದಿನಗಳಂದು ಬಿಎಂಟಿಸಿ ಮತ್ತು ಕೆಎಸ್ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ. ​ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹೋಗಲು ಪ್ರತ್ಯೇಕ ಪಾಸ್ ಪಡೆಯುವ ಅಗತ್ಯವಿಲ್ಲ. ಬಸ್ ಕಂಡಕ್ಟರ್‌ಗೆ ತಮ್ಮ ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಪ್ರಯಾಣಿಸಬಹುದು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ಕೇಂದ್ರಗಳ ಹತ್ತಿರ ಬಸ್ ನಿಲುಗಡೆ ನೀಡಲು ಚಾಲಕ ಮತ್ತು ನಿರ್ವಾಹಕರಿಗೆ

ಎಸ್ಸೆಸ್ಸೆಲ್ಸಿ, ದ್ವಿತೀಯ PUC ವಿದ್ಯಾರ್ಥಿಗಳಿಗೆ ಪರೀಕ್ಷೆ ದಿನ ಹಾಲ್ ಟಿಕೆಟ್ ತೋರಿಸಿ ಉಚಿತ ಪ್ರಯಾಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ

(ನ್ಯೂಸ್‌ ಕಡಬ) newskadaba.com,  ಫೆ.13:  ನಿತ್ಯ ನೀತಿ : ಅಧರ್ಮದಿಂದ ಶತ್ರು ಕೆಲವು ಬಾರಿ ಗೆಲ್ಲಬಹುದು.! ಆದರೆ ಕರ್ಮ ಎದುರಾಗುವ ವೇಳೆಗೆ ಧರ್ಮ ಅವನನ್ನು ಸುಡಲು ಪ್ರಾರಂಭಿಸಿರುತ್ತದೆ. ಅವನ ನಿರ್ನಾಮ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ.! -ಭಗವದ್ಗೀತೆ ಪಂಚಾಂಗ : ಶುಕ್ರವಾರ ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಮಾಘ / ಪಕ್ಷ: ಕೃಷ್ಣ / ತಿಥಿ: ಏಕಾದಶಿ / ನಕ್ಷತ್ರ: ಮೂಲಾ / ಯೋಗ: ವಜ್ರ / ಕರಣ: ಕೌಲವ ಸೂರ್ಯೋದಯ

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಆನ್ ಲೈನ್ ಮೂಲಕ 2.37 ಲಕ್ಷ ರೂಪಾಯಿ ಕ್ರೆಡಿಟ್ ಕಾರ್ಡ್ ವಂಚನೆ; ಆರೋಪಿ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಫೆ.13:  ಪುತ್ತೂರು ನಿವಾಸಿಯೊಬ್ಬರಿಗೆ ಆನ್‌ಲೈನ್ ಮೂಲಕ 2.37 ಲಕ್ಷ ರೂಪಾಯಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸರು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಯು ಮೂಲತಃ ಮಹಾರಾಷ್ಟ್ರದವನಾಗಿದ್ದು, ಸದ್ಯ ಮಂಡ್ಯದ ಕೃಷ್ಣರಾಜಪೇಟೆಯಲ್ಲಿ ವಾಸವಿರುವ ಅವಿನಾಶ್ ರಮೇಶ್ ಗೌಡ (24) ಎಂದು ಗುರುತಿಸಲಾಗಿದೆ.   ಪುತ್ತೂರಿನ ನಿವಾಸಿ ಯಶೋಧರ ಎಂಬವರು ನೀಡಿದ ದೂರಿನ ಪ್ರಕಾರ, ಅಪರಿಚಿತ ವ್ಯಕ್ತಿಯೊಬ್ಬ ವಿಮಾ ಕಂಪನಿಯ ಪ್ರತಿನಿಧಿ ಎಂದು ಹೇಳಿಕೊಂಡು ವಿವಿಧ ಮೊಬೈಲ್ ಸಂಖ್ಯೆಗಳಿಂದ

ಪುತ್ತೂರು: ಆನ್ ಲೈನ್ ಮೂಲಕ 2.37 ಲಕ್ಷ ರೂಪಾಯಿ ಕ್ರೆಡಿಟ್ ಕಾರ್ಡ್ ವಂಚನೆ; ಆರೋಪಿ ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಕೆಂತಲೆ ಗುಡ್ಡದಲ್ಲಿ ಕಾಣಿಸಿಕೊಂಡ ಆಕಸ್ಮಿಕ ಅಗ್ನಿ; ಮರ-ಗಿಡಗಳು ಸುಟ್ಟು ಭಸ್ಮ

(ನ್ಯೂಸ್‌ ಕಡಬ) newskadaba.com,  ಫೆ.13:  ಕುಕ್ಕಿಪಾಡಿ ಗ್ರಾಮದ ಕೆಂತಲೆ ಎಂಬಲ್ಲಿನ ಗುಡ್ಡವೊಂದರಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿದ್ದು, ಗಿಡ -ಮರಗಳು ಸುಟ್ಟು ಭಸ್ಮವಾಗಿದೆ.ನಿತ್ಯಾನಂದ ಪೂಜಾರಿ ಎಂಬವರಿಗೆ ಸೇರಿದ ಜಾಗದಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಘಟನಾ ಸ್ಥಳದಿಂದ ದಟ್ಟವಾದ ಹೊಗೆ ಆವರಿಸಿತ್ತು. ಬೆಂಕಿ ಕಾಣಿಸಿಕೊಂಡ ತಕ್ಷಣ ನಿತ್ಯಾನಂದ ಅವರು ಬಂಟ್ವಾಳ, ಮೂಡುಬಿದಿರೆ ಮತ್ತು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗಳಿಗೆ ಮಾಹಿತಿ ನೀಡಿದ್ದರು. ಆದರೆ, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬರುವುದು ತಡವಾದ ಕಾರಣ, ಸ್ಥಳೀಯ ನಿವಾಸಿಗಳೇ ನೀರು ಹಾಯಿಸಿ ಬೆಂಕಿಯನ್ನು ನಂದಿಸುವಲ್ಲಿ

ಬಂಟ್ವಾಳ: ಕೆಂತಲೆ ಗುಡ್ಡದಲ್ಲಿ ಕಾಣಿಸಿಕೊಂಡ ಆಕಸ್ಮಿಕ ಅಗ್ನಿ; ಮರ-ಗಿಡಗಳು ಸುಟ್ಟು ಭಸ್ಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top