News kadabas

ದೇಶದ ಟಾಪ್ 10 ಶ್ರೀಮಂತ ಮಹಿಳಾ ಉದ್ಯಮಿಗಳ ಪಟ್ಟಿಯಲ್ಲಿ ಅಗ್ರಸ್ಥಾನ ಗಳಿಸಿದ ಮಂಗಳೂರಿನ ಜಯಶ್ರೀ ಉಳ್ಳಾಲ್

(ನ್ಯೂಸ್‌ ಕಡಬ) newskadaba.com,  ನ.17: ಹುರುನ್ ರೀಸರ್ಚ್ ಪ್ರಕಟಿಸಿದ ಇಂಡಿಯಾ ರಿಚ್ ಲಿಸ್ಟ್ 2025 ರ ಪ್ರಕಾರ ಭಾರತದ ಅತ್ಯಂತ ಶ್ರೀಮಂತ ಮಹಿಳಾ ಉದ್ಯಮಿಗಳ ಪಟ್ಟಿಯಲ್ಲಿ ಮಂಗಳೂರಿನಲ್ಲಿ ಜನಿಸಿದ ಟೆಕ್ ಲೀಡರ್ ಜಯಶ್ರೀ ಉಳ್ಳಾಲ್ ಅವರು 50,170 ಕೋಟಿ ರೂ. ಸಂಪತ್ತಿನೊಂದಿಗೆ ಅಗ್ರಸ್ಥಾನ ಗಳಿಸಿದ್ದಾರೆ. ಜಯಶ್ರೀ ಉಳ್ಳಾಲ್ 2008 ರಿಂದ ಕಂಪ್ಯೂಟರ್ ನೆಟ್‌ವರ್ಕಿಂಗ್ ಸಂಸ್ಥೆಯಾದ ಅರಿಸ್ಟಾ ನೆಟ್‌ವರ್ಕ್ಸ್‌ನ ಅಧ್ಯಕ್ಷೆ ಮತ್ತು ಸಿಇಒ ಆಗಿದ್ದಾರೆ. ಸಾರ್ವಜನಿಕವಾಗಿ ವ್ಯಾಪಾರ ಮಾಡುವ ಕಂಪನಿಯಾದ ಅರಿಸ್ಟಾ ನೆಟ್ವರ್ಕ್ಸ್ ಕಳೆದ ವರ್ಷ 7 ಬಿಲಿಯನ್ ಡಾಲರ್‌ಗಳ […]

ದೇಶದ ಟಾಪ್ 10 ಶ್ರೀಮಂತ ಮಹಿಳಾ ಉದ್ಯಮಿಗಳ ಪಟ್ಟಿಯಲ್ಲಿ ಅಗ್ರಸ್ಥಾನ ಗಳಿಸಿದ ಮಂಗಳೂರಿನ ಜಯಶ್ರೀ ಉಳ್ಳಾಲ್ Read More »

ಬ್ರೇಕಿಂಗ್ ನ್ಯೂಸ್

ಮಂಗಳೂರು: ಲೈಟ್ ಕಂಬವೊಂದರ ಬುಡದಲ್ಲಿ ನವಜಾತ ಶಿಶು ಪತ್ತೆ !!

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.17. ಸ್ಟೇಟ್‌ಬ್ಯಾಂಕ್‌ ಸಮೀಪದ ಸರ್ವಿಸ್‌ ಬಸ್‌ ನಿಲ್ದಾಣದಲ್ಲಿ ನವಜಾತ ಶಿಶುವನ್ನು ಬಿಟ್ಟು ಹೋಗಲಾಗಿದೆ ಎಂದು ಮಂಗಳೂರಿನಲ್ಲಿ ವರದಿಯಾಗಿದೆ. ಲೈಟ್‌ ಕಂಬವೊಂದರ ಬುಡದಲ್ಲಿ ಮಗು ಇರುವುದನ್ನು ಗಮನಿಸಿದ ಚಾಲಕರು ಪೊಲೀಸರಿಗೆ ತಿಳಿಸಿದ್ದಾರೆ. ಪಾಂಡೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ವೆನ್ಲಾಕ್‌ನ ಆಸ್ಪತ್ರೆಯ ಮಕ್ಕಳ ಚಿಕಿತ್ಸಾ ವಿಭಾಗದಲ್ಲಿ ಇದೀಗ ಪೊಲೀಸರು ಮಗುವನ್ನು ದಾಖಲಿಸಿದ್ದಾರೆ. ಮಗುವಿನ ಆರೋಗ್ಯದಲ್ಲಿ ಏರುಪೇರು ಇದ್ದು, ಸುಮಾರು ಒಂದು ವಾರದ ಹಿಂದೆ ಮಗು ಜನಿಸಿರಬಹುದು ಎಂದು ವೈದ್ಯರು ತಿಳಿಸಿದ್ದಾರೆ.  

ಮಂಗಳೂರು: ಲೈಟ್ ಕಂಬವೊಂದರ ಬುಡದಲ್ಲಿ ನವಜಾತ ಶಿಶು ಪತ್ತೆ !! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top