newskadaa

ನಿರುದ್ಯೋಗ- ಯುವಕನಿಂದ ಆತ್ಮಹತ್ಯೆಗೆ ಯತ್ನ – ಸ್ಥಳೀಯರಿಂದ ರಕ್ಷಣೆ

(ನ್ಯೂಸ್‌ ಕಡಬ) newskadaba.com ಬಂಟ್ವಾಳ, ಫೆ. 19. ನಿರುದ್ಯೋಗಿ ಯುವಕನೋರ್ವ ಮನನೊಂದು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದುದನ್ನು ಗಮನಿಸಿದ ಸ್ಥಳೀಯ ಯುವಕರ ತಂಡ ಆತನನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಸೋಮವಾರ ಪಾಣೆಮಂಗಳೂರಿನ ನೇತ್ರಾವತಿ ಸೇತುವೆ ಬಳಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಪುತ್ತೂರಿನ ನಿಶ್ಚಿತ್ (25) ಎಂದು ಗುರುತಿಸಲಾಗಿದೆ. ಈತ ಎಂ ಎಸ್ ಡಬ್ಲ್ಯು ಪದವೀಧರನಾಗಿದ್ದು, ಸೂಕ್ತ ಉದ್ಯೋಗ ದೊರೆಯದ ಹಿನ್ನಲೆ ಮಾನಸಿಕ ಖಿನ್ನತೆಗೊಳಗಾಗಿ ಈ ಕೃತ್ಯಕ್ಕೆ ಮುಂದಾಗಿದ್ದಾನೆ ಎನ್ನಲಾಗಿದೆ. ದ್ವಿಚಕ್ರ ವಾಹನದಲ್ಲಿ ಬಂದಿದ್ದ ಈತ […]

ನಿರುದ್ಯೋಗ- ಯುವಕನಿಂದ ಆತ್ಮಹತ್ಯೆಗೆ ಯತ್ನ – ಸ್ಥಳೀಯರಿಂದ ರಕ್ಷಣೆ Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 15. ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ತುಮಕೂರಿನ  ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರದಂದು ಬೆಳಿಗ್ಗೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ತುಮಕೂರು ಜಿಲ್ಲೆಯ ನಯನ ಎಂ.ಜಿ. ಎಂದು ಆಕೆಯ ಬ್ಯಾಗ್ ನಲ್ಲಿ ಸಿಕ್ಕಿರುವ ಆಧಾರ್ ಕಾರ್ಡ್ ನ ಮಾಹಿತಿಯಂತೆ ರೈಲ್ವೇ ಪೋಲೀಸರು ಬಂಟ್ವಾಳ ನಗರ ಠಾಣಾ ಪೋಲೀಸರಿಗೆ ನೀಡಿದ್ದಾರೆ. ಕಣ್ಣೂರು-ಬೆಂಗಳೂರು-ಮಂಗಳೂರು ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಬಿಸಿರೋಡಿನ ನೇತ್ರಾವತಿ ನದಿಯ ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ರೈಲಿನಿಂದ ಹಾರಿ ಆತ್ಮಹತ್ಯೆ

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ Read More »

ಕರಾವಳಿ

ಫೆ. 15ರಂದು ಲೋಕಾಯುಕ್ತ ಜನಸಂಪರ್ಕ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 13. ಲೋಕಾಯುಕ್ತ ಮಂಗಳೂರು ವಿಭಾಗದ ಅಧಿಕಾರಿಗಳು ಫೆಬ್ರವರಿ 15ರಂದು ಬೆಳಗ್ಗೆ 11 ಗಂಟೆಯಿಂದ ಮೂಡಬಿದ್ರೆಯ ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆಯನ್ನು ಹಮ್ಮಿಕೊಂಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಮತ್ತು ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಈ ಸಭೆಯಲ್ಲಿ ದೂರು ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಪೊಲೀಸ್ ಅಧೀಕ್ಷಕರ ಕಚೇರಿ:0824-2950997, 9364062517, ಪೊಲೀಸ್ ಉಪಾಧೀಕ್ಷಕರ ಕಚೇರಿ-1: 0824-2453420, 9364062579, ಪೊಲೀಸ್ ಉಪಾಧೀಕ್ಷಕರ ಕಚೇರಿ-2: 0824-2453420.

ಫೆ. 15ರಂದು ಲೋಕಾಯುಕ್ತ ಜನಸಂಪರ್ಕ ಸಭೆ Read More »

ಕರಾವಳಿ

ಸುಳ್ಯ: ಆಸ್ಪತ್ರೆಯ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 07. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ತಿಂಗಳಾಡಿ ಮೂಲದ ವ್ಯಕ್ತಿಯೊಬ್ಬರು ಆಸ್ಪತ್ರೆಯ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ತಿಂಗಳಾಡಿ ಮೂಲದ ವಸಂತ ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ವಸಂತರವರು ಪಿಟ್ಸ್ ಕಾಯಿಲೆಯಿಂದ ಬಳಲುತ್ತಿದ್ದು, ಮೂರು ದಿನಗಳ ಹಿಂದೆ ಚಿಕಿತ್ಸೆಗಾಗಿ ಸುಳ್ಯ ಕೆವಿಜಿ ಆಯುರ್ವೇದಿಕ್ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಮುಂಜಾನೆ ಆರು ಗಂಟೆ ಸುಮಾರಿಗೆ ಆಸ್ಪತ್ರೆಯ ಕಟ್ಟಡದ ಮಹಡಿಯಿಂದ ಜಿಗಿದು ಆತ್ಮಹತ್ಯೆ

ಸುಳ್ಯ: ಆಸ್ಪತ್ರೆಯ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಚಲೋ ದೆಹಲಿ ಪ್ರತಿಭಟನೆ- ರಾಷ್ಟ್ರ ರಾಜಧಾನಿ ತಲುಪಿದ ಸಿಎಂ, ಡಿಸಿಎಂ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 07. ಕೇಂದ್ರ ಸರ್ಕಾರದ ವಿರುದ್ದ ದೆಹಲಿಯ ಜಂತರ್‌ ಮಂತರ್‌‌ನಲ್ಲಿ ಹಮ್ಮಿಕೊಂಡಿರುವ “ನನ್ನ ತೆರಿಗೆ ನನ್ನ ಹಕ್ಕು ಚಲೋ ದೆಹಲಿ” ಪ್ರತಿಭಟನೆಯಲ್ಲಿ ಭಾಗವಹಿಸಲು ಕರ್ನಾಟಕ ಮುಖ್ಯಮಂತ್ರಿ ಸಿದ್ಥರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬುಧವಾರದಂದು ಬೆಳಗ್ಗೆ ರಾಷ್ಟ್ರ ರಾಜಧಾನಿಗೆ ತೆರಳಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಯಲಿದ್ದು, ಕನ್ನಡಿಗರ ನ್ಯಾಯಯುತ ತೆರಿಗೆಯ ಪಾಲು ಮತ್ತು ಅನುದಾನ ಹಂಚಿಕೆಯಲ್ಲಿ ಆಗುತ್ತಿರುವ ಧೋರಣೆಯ ವಿರುದ್ಧ ಧ್ವನಿಯೆತ್ತೋಣ ಬನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ

ಚಲೋ ದೆಹಲಿ ಪ್ರತಿಭಟನೆ- ರಾಷ್ಟ್ರ ರಾಜಧಾನಿ ತಲುಪಿದ ಸಿಎಂ, ಡಿಸಿಎಂ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಯುವಕನಿಗಾಗಿ ಮನೆ ಮುಂದೆ ಧರಣಿ ಕುಳಿತ ಯುವತಿ

(ನ್ಯೂಸ್ ಕಡಬ) newskadaba.com ವಿಟ್ಲ, ಫೆ. 07. ಉತ್ತರ ಭಾರತ ಮೂಲದ ಯುವತಿಯೋರ್ವಳು ಕೇಪು ಗ್ರಾಮದ ಅಡ್ಯನಡ್ಕದ ಯುವಕನೊಬ್ಬನ ಮನೆ ಮುಂದೆ ಬಂದು ಯುವಕನನ್ನು ತನಗೆ ಒಪ್ಪಿಸುವಂತೆ ಪ್ರತಿಭಟನೆಗೆ ಕುಳಿತ ವಿಚಿತ್ರ ಘಟನೆ ನಡೆದಿದೆ. ಉತ್ತರ ಭಾರತದ ಜಲಂದರ್ ಮೂಲದ ಯುವತಿಯೋರ್ವಳು ಬೆಂಗಳೂರಿನ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಈ ಸಂದರ್ಭ ಅಡ್ಯನಡ್ಕದ ಯುವಕನ ಪರಿಚಯವಾಗಿ ಪ್ರೇಮಾಂಕುರವಾಗಿ, ಹಣಕಾಸಿನ ವ್ಯವಹಾರಗಳೂ ನಡೆದಿದ್ದವು ಎಂದೆನ್ನಲಾಗಿದೆ. ಇತ್ತ ಮಂಗಳವಾರದಂದು ಸಾಯಂಕಾಲ ಅಡ್ಯನಡ್ಕದಲ್ಲಿರುವ ಯುವಕನ ಮನೆ ಬಳಿಗೆ ಬಂದ ಸಂತ್ರಸ್ತೆಗೆ ಪ್ರೀತಿ ಮಾಡುವುದಾಗಿ ಹೇಳಿದ

ಯುವಕನಿಗಾಗಿ ಮನೆ ಮುಂದೆ ಧರಣಿ ಕುಳಿತ ಯುವತಿ Read More »

ಕರಾವಳಿ, ಕರ್ನಾಟಕ

ಪರಿಪೂರ್ಣ ವ್ಯಕ್ತಿತ್ವದ ಡಾ.ಲಕ್ಷ್ಮಣ್ ಪ್ರಭುಗಳ ಅಗಲಿಕೆಯಿಂದ ಶೂನ್ಯತೆ ಸೃಷ್ಟಿಯಾಗಿದೆ – ಭುವನೇಶ್ವರಿ ಹೆಗಡೆ

(ನ್ಯೂಸ್ ಕಡಬ) newskadaba.com  ಮಂಗಳೂರು, ನ. 22. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ವತಿಯಿಂದ ಇತ್ತೀಚೆಗೆ ನಮ್ಮನ್ನೆಲ್ಲ ಅಗಲಿದ ಕವಿ ಹೃದಯದ ಹಿರಿಯ ಖ್ಯಾತ ವೈದ್ಯ ಡಾ.ಜಿ.ಜಿ.ಲಕ್ಷ್ಮಣ ಪ್ರಭು ಅವರಿಗೆ ಮಂಗಳೂರಿನ ಹೋಟೆಲ್ ವುಡ್‌ಲ್ಯಾಂಡ್ಸ್ ನಲ್ಲಿ ಶೃದ್ಧಾಂಜಲಿ ಸಭೆ ಏರ್ಪಡಿಸಲಾಗಿತ್ತು. ಕ.ಸಾ.ಪ. ಮಂಗಳೂರು ತಾಲೂಕು ಘಟಕದ ಅಧ್ಯಕ್ಷ ಶ್ರೀ.ಮಂಜುನಾಥ್ ಎಸ್. ರೇವಣಕರ್ ರವರು ಅಧ್ಯಕ್ಷತೆ  ವಹಿಸಿದ್ದರು. ನುಡಿನಮನ ಸಲ್ಲಿಸಿ ಮಾತನಾಡಿದ ಶ್ರೀಮತಿ ಭುವನೇಶ್ವರಿ ಹೆಗ್ಗಡೆಯವರು ಡಾ.ಜಿ.ಜಿ.ಲಕ್ಷ್ಮಣ ಪ್ರಭುಗಳ ವ್ಯಕ್ತಿತ್ವ, ಹಾಸ್ಯಪ್ರಿಯತೆ ಮತ್ತು ಕರ್ತವ್ಯ

ಪರಿಪೂರ್ಣ ವ್ಯಕ್ತಿತ್ವದ ಡಾ.ಲಕ್ಷ್ಮಣ್ ಪ್ರಭುಗಳ ಅಗಲಿಕೆಯಿಂದ ಶೂನ್ಯತೆ ಸೃಷ್ಟಿಯಾಗಿದೆ – ಭುವನೇಶ್ವರಿ ಹೆಗಡೆ Read More »

ಕರಾವಳಿ, ಕರ್ನಾಟಕ

ಮತ್ತೆ ಕೊರೋನಾ ಆತಂಕ ➤ ಬೂಸ್ಟರ್ ಡೋಸ್ ಕಡ್ಡಾಯಗೊಳಿಸುವಂತೆ ಸಿದ್ದರಾಮಯ್ಯ ಆಗ್ರಹ

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 22. ಚೀನಾದಿಂದ ರಾಜ್ಯಕ್ಕೆ ಬರುವ ವಿಮಾನಗಳನ್ನು ರದ್ದು ಮಾಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಕೋವಿಡ್ ಕುರಿತು ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿದ ಅವರು, ಸರ್ಕಾರವು ಮುಂಜಾಗೃತಾ ಕ್ರಮ ಕೈಗೊಂಡು ಈ ಕೂಡಲೇ ಚೀನಾದಿಂದ ರಾಜ್ಯಕ್ಕೆ ಬರುವ ವಿಮಾನಗಳನ್ನು ರದ್ದು ಮಾಡಬೇಕು, ಕಡ್ಡಾಯವಾಗಿ ಬೂಸ್ಟರ್ ಡೋಸ್ ನೀಡಿ ಎಂದು ಆಗ್ರಹಿಸಿದರು.   ,

ಮತ್ತೆ ಕೊರೋನಾ ಆತಂಕ ➤ ಬೂಸ್ಟರ್ ಡೋಸ್ ಕಡ್ಡಾಯಗೊಳಿಸುವಂತೆ ಸಿದ್ದರಾಮಯ್ಯ ಆಗ್ರಹ Read More »

ಕರಾವಳಿ
Scroll to Top