newskadaba

ಕಡಬ: ದೀಪಾವಳಿ ಪ್ರಯುಕ್ತ ಮರ್ಧಾಳದ ‘ಎಲೈಟ್ ಮಂದಿ ಹೋಟೆಲ್’ನಲ್ಲಿ 5 ದಿನಗಳ ಕಾಲ ಭರ್ಜರಿ ಆಫರ್..!

(ನ್ಯೂಸ್ ಕಡಬ) newskadaba.com ಅ. 29. ಇತ್ತೀಚೆಗೆ ಸುಬ್ರಹ್ಮಣ್ಯ- ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪ ಶುಭಾರಂಭಗೊಂಡಿರುವ ಕಡಬ ತಾಲೂಕಿನ ಏಕೈಕ ಮಂದಿ ಬಿರಿಯಾನಿ ಹೋಟೆಲ್ “ಎಲೈಟ್ಸ್ ಮಂದಿ ಹೋಟೆಲ್ & ಜ್ಯೂಸ್ ಪಾಯಿಂಟ್‌” ನಲ್ಲಿ ದೀಪಾವಳಿ ಪ್ರಯುಕ್ತ ಇಂದಿನಿಂದ (ಅ.29) ನ.02ರ ಶನಿವಾರದವರೆಗೆ ಐದು ದಿನಗಳ ಕಾಲ ಭರ್ಜರಿ ಆಫರ್ ನಡೆಯಲಿದೆ. ಫುಲ್ ಅಲ್-ಫಹಮ್ ಮಂದಿ, ಫುಲ್ ಚಿಕನ್ ಲಾಲಿ ಪಾಪ್, ಮಯೋನಿಸ್, ಸಲಾಡ್, 5 ಪರೋಟಾ & ಗ್ರೇವಿ, 1 ltr. Sprite ಕೇವಲ […]

ಕಡಬ: ದೀಪಾವಳಿ ಪ್ರಯುಕ್ತ ಮರ್ಧಾಳದ ‘ಎಲೈಟ್ ಮಂದಿ ಹೋಟೆಲ್’ನಲ್ಲಿ 5 ದಿನಗಳ ಕಾಲ ಭರ್ಜರಿ ಆಫರ್..! Read More »

ಕರಾವಳಿ

“ವಿಶ್ವ ಸ್ಟ್ರೋಕ್ ದಿನ – ಅಕ್ಟೋಬರ್-29”

(ನ್ಯೂಸ್ ಕಡಬ) newskadaba.com ಅ.29. ಪ್ರತಿ ವರ್ಷ ವಿಶ್ವದಾದ್ಯಂತ ಅಕ್ಟೋಬರ್ 29ರಂದು “ವಿಶ್ವ ಸ್ಟ್ರೋಕ್ ದಿವಸ” ಎಂದು ಆಚರಿಸಿ ಮೆದುಳಿನ ಆಘಾತ ಅಥವಾ ಸ್ಟ್ರೋಕ್ ಬಗ್ಗೆ ಜಾಗೃತಿ ಮೂಡಿಸಿ, ಸ್ಟ್ರೋಕ್ ಉಂಟಾಗುವ ಸಾಧ್ಯತೆಯನ್ನು ಕಡಿಮೆ ಮಾಡುವ ಪ್ರಯತ್ನವನ್ನು ಮಾಡಲಾಗುತ್ತದೆ. ಈ ಸ್ಟ್ರೋಕ್ ಎನ್ನುವುದು ಯಾರಿಗೆ ಬೇಕಾದರೂ, ಯಾವಾಗ ಬೇಕಾದರೂ, ಯಾವುದೇ ಹೊತ್ತಿನಲ್ಲಿ ಸಂಭವಿಸಬಹುದು. ಪ್ರತೀ ನಾಲ್ಕು ವಯಸ್ಕರಲ್ಲಿ ಒಬ್ಬರಿಗೆ ಜೀವನದಲ್ಲಿ ಒಮ್ಮೆಯಾದರೂ ಸ್ಟ್ರೋಕ್ ಆಗುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ವರದಿ ತಿಳಿಸಿದೆ. ಜಾಗತಿಕವಾಗಿ  ಸಾವಿಗೆ ಅತೀ ಹೃದಯಾಘಾತದ

“ವಿಶ್ವ ಸ್ಟ್ರೋಕ್ ದಿನ – ಅಕ್ಟೋಬರ್-29” Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಶಕ್ತಿ ವಿದ್ಯಾಸಂಸ್ಥೆಯ ಸಂಸ್ಥಾಪಕ ಡಾ. ಕೆ.ಸಿ.ನಾೈಕ್ ಅವರಿಗೆ ಸನ್ಮಾನ ಸಮಾರಂಭ

(ನ್ಯೂಸ್ ಕಡಬ) newskadaba.com ಅ.29. ಮಂಗಳೂರಿನ ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯಲ್ಲಿರುವ ರೇಷ್ಮ ಮೆಮೋರಿಯಲ್ ಸಭಾಂಗಣದಲ್ಲಿ ಸಂಸ್ಥಾಪಕರಾದ ಡಾ. ಕೆ.ಸಿ.ನಾೈಕ್‍ರವರು ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ ಕರ್ನಾಟಕ, ರುಪ್ಸ ಕರ್ನಾಟಕ ವತಿಯಿಂದ ಶಿಕ್ಷಣ ಭೀಷ್ಮ ಪ್ರಶಸ್ತಿ ಪಡೆದುಕೊಂಡಿರುವುದಕ್ಕಾಗಿ ಶಕ್ತಿ ವಿದ್ಯಾ ಸಂಸ್ಥೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಂದ ಸನ್ಮಾನ ಸಮಾರಂಭವನ್ನು ಆಯೋಜಿಸಲಾಯಿತು. ಈ ಸಮಾರಂಭದಲ್ಲಿ ಶಿಕ್ಷಣ ತಜ್ಞರು ಮತ್ತು ಯುನೈಟೆಡ್ Nation Devolopment Project ಮತ್ತು ಸಂಪನ್ಮೂಲ ವ್ಯಕ್ತಿಗಳು ಆಗಿರುವ ಡಾ. ಎನ್.ಸಂತೋಷ್ ಕುಮಾರ್ ಅವರು

ಶಕ್ತಿ ವಿದ್ಯಾಸಂಸ್ಥೆಯ ಸಂಸ್ಥಾಪಕ ಡಾ. ಕೆ.ಸಿ.ನಾೈಕ್ ಅವರಿಗೆ ಸನ್ಮಾನ ಸಮಾರಂಭ Read More »

ಕರಾವಳಿ

ಜಾಗೃತಿ ಅರಿವು ಸಪ್ತಾಹ: ಪ್ರತಿಜ್ಞೆ ಸ್ವೀಕಾರ

(ನ್ಯೂಸ್ ಕಡಬ) newskadaba.com ಅ.29. ರಾಜ್ಯಾದ್ಯಂತ ಅಕ್ಟೋಬರ್ 28ರಿಂದ ನವೆಂಬರ್ 3ರ ವರೆಗೆ ಜಾಗೃತಿ ಅರಿವು ಸಪ್ತಾಹದ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಂಗಳೂರು ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂಧಿಗಳು ಪ್ರತಿಜ್ಞೆ ಸ್ವೀಕರಿಸಿದರು. ವಾರ್ತಾ ಮತ್ತು ಸರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಬಿ.ಎ ಖಾದರ್ ಶಾ, ಸಿಬ್ಬಂದಿಗಳಾದ ದಿವ್ಯಾ ಆರ್.ಶೆಟ್ಟಿ, ಅರುಣಾಕಾಂತ, ವೇಣುಗೋಪಾಲ್, ಜೋಗಿ, ರುಚಿತಾ ಪ್ರತಿಜ್ಞೆ ಸ್ಪೀಕರಿಸಿದರು.

ಜಾಗೃತಿ ಅರಿವು ಸಪ್ತಾಹ: ಪ್ರತಿಜ್ಞೆ ಸ್ವೀಕಾರ Read More »

ಕರಾವಳಿ

ಇಂದು ಮಕ್ಕಳ ಸಂಸತ್ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಅ.29. ಮುಖ್ಯಮಂತ್ರಿಗಳೊಂದಿಗೆ ನವೆಂಬರ್ 14ರಂದು ರಾಜ್ಯಮಟ್ಟದಲ್ಲಿ ನಡೆಯುವ ಮಕ್ಕಳ ಹಕ್ಕುಗಳ ಸಂಸತ್ ನ ಪೂರ್ವಭಾವಿಯಾಗಿ, ದ.ಕ ಜಿಲ್ಲಾ ಮಟ್ಟದ ಮಕ್ಕಳ ಹಕ್ಕುಗಳ ಸಂಸತ್-24 ಅಧಿಕಾರಿಗಳೊಂದಿಗೆ ಮಕ್ಕಳ ಸಂವಾದ ಕಾರ್ಯಕ್ರಮ ಅಕ್ಟೋಬರ್ 29ರಂದು ಬೆಳಿಗ್ಗೆ 9.30ರಿಂದ ಕದ್ರಿ ಬಾಲಭವನದಲ್ಲಿ ನಡೆಯಲಿದೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಧೀಶರು ಮತ್ತು ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಉಸ್ಮಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಇಂದು ಮಕ್ಕಳ ಸಂಸತ್ ಕಾರ್ಯಕ್ರಮ Read More »

ಕರಾವಳಿ

ಇಂದು ‘ಮನೋಸ್ಥೆರ್ಯ’ ತರಬೇತಿ ಕಾರ್ಯಗಾರ

(ನ್ಯೂಸ್ ಕಡಬ) newskadaba.com ಅ.29. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ “ಮನೋಸ್ಥೆರ್ಯ” ಪ್ರೌಢಶಾಲಾ ಶಿಕ್ಷಕರಿಗೆ ಮಾನಸಿಕ ಆರೋಗ್ಯದ ತರಬೇತಿ ಕಾರ್ಯಗಾರವನ್ನು ಅಕ್ಟೋಬರ್ 29ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಜಿಲ್ಲಾ ಆರೋಗ್ಯ ಮತ್ತು

ಇಂದು ‘ಮನೋಸ್ಥೆರ್ಯ’ ತರಬೇತಿ ಕಾರ್ಯಗಾರ Read More »

ಕರಾವಳಿ

ವಿವಿಧ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ

(ನ್ಯೂಸ್ ಕಡಬ) newskadaba.com ಅ.29. ಮಂಗಳೂರು ಲೋಕಾಯುಕ್ತ ಕಚೇರಿಯ ಅಧಿಕಾರಿಯವರು ಮಂಗಳೂರಿನಲ್ಲಿರುವ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಹಾಗೂ ಮೀನುಗಾರಿಕೆ ಇಲಾಖೆಯಲ್ಲಿನ ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಪರಿಶೀಲನೆ ವೇಳೆ ಕಚೇರಿ ನಿರ್ವಹಣೆಯಲ್ಲಿ ಮತ್ತು ಆಡಳಿತದಲ್ಲಿ ಸಾಕಷ್ಟು ಲೋಪದೋಷಗಳು ಕಂಡುಬಂದಿದ್ದು ಈ ಬಗ್ಗೆ  ಮಾಹಿತಿ ಸಂಗ್ರಹಿಸಿ ಸಮಗ್ರ ವರದಿಯನ್ನು ಲೋಕಾಯುಕ್ತ ಕೇಂದ್ರ ಕಚೇರಿಗೆ ಮಾಹಿತಿ ನೀಡಲಾಗುವುದು ಎಂದು ಮಂಗಳೂರು ವಿಭಾಗ, ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎ

ವಿವಿಧ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ Read More »

ಕರಾವಳಿ

ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ.29. ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆ.ಜಿ.ಟಿ.ಟಿ.ಐ.), ಮಂಗಳೂರು ಸಂಸ್ಥೆಯಲ್ಲಿ ಸಿಸ್ಕೊ ಐ.ಟಿ. ಎಸೆನ್ಸಿಯಲ್ಸ್, ಸಿಸ್ಕೊ ಸರ್ಟಿಫೈಡ್ ನೆಟ್‍ವರ್ಕ್ ಅಸೋಸಿಯೇಟ್, ಟ್ಯಾಲಿ ಪ್ರೈಮ್, ಬೇಸಿಕ್ ವೆಲ್ಡಿಂಗ್, ಟಿಗ್ ವೆಲ್ಡಿಂಗ್, ಮಿಗ್ ವೆಲ್ಡಿಂಗ್, ರೆಫ್ರಿಜರೇಶನ್ ಮತ್ತು ಏರ್ ಕಂಡೀಷನಿಂಗ್ ಉದ್ಯೋಗಾಧಾರಿತ ಕೋರ್ಸ್‍ ಗಳಲ್ಲಿ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ ಅಲ್ಪಾವಧಿ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕದ್ರಿ ಹಿಲ್ಸ್ ನಲ್ಲಿರುವ ಸರಕಾರಿ ಮಹಿಳಾ ಐ.ಟಿ.ಐ ನ ಎರಡನೇ ಮಹಡಿಯಲ್ಲಿರುವ

ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನ Read More »

ಕರಾವಳಿ

ಇಂದು 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ

(ನ್ಯೂಸ್ ಕಡಬ) newskadaba.com ಅ.29. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಆಯುಷ್ ಕಾಲೇಜುಗಳು ಇವರ ಸಂಯುಕ್ತ ಆಶ್ರಯದಲ್ಲಿ 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮವು ಅಕ್ಟೋಬರ್ 29ರಂದು ಬೆಳಿಗ್ಗೆ 10 ಗಂಟೆಗೆ ನಗರದ ವೆನ್‍ ಲಾಕ್ ಆಸ್ಪತ್ರೆ ಆವರಣದಲ್ಲಿರುವ ಆಯುಷ್ ಸಂಯುಕ್ತ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದೆ. ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಅವರ ಉಪಸ್ಥಿತಿಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಇಂದು 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ Read More »

ಕರಾವಳಿ

ಕಾರ್ಮಿಕರ ಕಾನೂನು ಅರಿವು: ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಅ.29. ಕಾರ್ಮಿಕ ಇಲಾಖೆಯ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಐ.ಇ.ಸಿ ಚಟುವಟಿಕೆಗಳಡಿ ಸಂಘಟಿತ ಮತ್ತು ಅಸಂಘಟಿತ ವರ್ಗದ ಎಲ್ಲಾ ಕಾರ್ಮಿಕರಿಗೆ, ಕಾರ್ಮಿಕ ಸಂಘಟನೆಗಳಿಗೆ, ವಿವಿಧ ಸಂಘ ಸಂಸ್ಥೆಗಳಿಗೆ ಹಾಗೂ ಆಡಳಿತ ವರ್ಗದವರಿಗೆ ಇಲಾಖೆ ಅನುಷ್ಠಾನಗೊಳಿಸುತ್ತಿರುವ ಕಾನೂನುಗಳ ಬಗ್ಗೆ ಮತ್ತು ಜಾರಿಗೊಳಿಸುತ್ತಿರುವ ವಿವಿಧ ಯೋಜನೆಗಳ ಬಗ್ಗೆ ಕಾನೂನು ಅರಿವು ಕಾರ್ಯಾಗಾರವನ್ನು ನವೆಂಬರ್ 4ರಂದು ಜಿಲ್ಲಾ ಪಂಚಾಯತ್‍ ನೇತ್ರಾವತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಮಂಗಳೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಮಿಕರ ಕಾನೂನು ಅರಿವು: ಕಾರ್ಯಾಗಾರ Read More »

ಕರಾವಳಿ
Scroll to Top