newskadaba

ವಿದ್ಯಾಭಾರತಿ ರಾಷ್ಟ್ರಮಟ್ಟದ ಈಜು ಸ್ಪರ್ಧೆ- ಶಕ್ತಿ ವಿದ್ಯಾಸಂಸ್ಥೆಗೆ ಪದಕ

(ನ್ಯೂಸ್ ಕಡಬ) newskadaba.com ಅ. 25. ವಿದ್ಯಾಭಾರತಿ ರಾಷ್ಟ್ರಮಟ್ಟದ ಈಜು ಸ್ಪರ್ಧೆಯು ಅಕ್ಟೋಬರ್ 1 ರಿಂದ 4ರವರೆಗೆ ಮಧ್ಯಪ್ರದೇಶದ ಮದಸ್ಸೂರ್ ನಲ್ಲಿ ನಡೆಯಿತು.  ಈ ಸ್ಪರ್ಧೆಯಲ್ಲಿ ಶಕ್ತಿ ಪದವಿಪೂರ್ವ ಕಾಲೇಜಿನ ಸ್ಪೀವ್ ಜೆಫ್ ಲೋಬೊ ದ್ವಿತೀಯ ವಿಜ್ಞಾನ ವಿಭಾಗ 4 ಚಿನ್ನದ ಪದಕಗಳು ಹಾಗೂ ಶಕ್ತಿ ವಸತಿ ಶಾಲೆಯ ಕೀರ್ತನ್ ಬೇಕಲ್ 2 ಬೆಳ್ಳಿ ಪದಕಗಳನ್ನು ಪಡೆದು 68ನೇ SಉಈI ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಯಲ್ಲಿ ವಿದ್ಯಾಭಾರತಿ ತಂಡವನ್ನು ಪ್ರತಿನಿಧಿಸಲು ಅಯ್ಕೆಯಾಗಿರುತ್ತಾರೆ ಹಾಗೂ ಶ್ರೀ ವಿಷ್ಣು  ಪ್ರಥಮ […]

ವಿದ್ಯಾಭಾರತಿ ರಾಷ್ಟ್ರಮಟ್ಟದ ಈಜು ಸ್ಪರ್ಧೆ- ಶಕ್ತಿ ವಿದ್ಯಾಸಂಸ್ಥೆಗೆ ಪದಕ Read More »

ಕರಾವಳಿ

ಶ್ರೀನಿವಾಸ ಯೂನಿವರ್ಸಿಟಿ ಸಿಮ್ಸ್ ಮತ್ತು ಆರ್ಸಿ ಓರಿಯಂಟೇಶನ್ ಪ್ರೋಗ್ರಾಂ

(ನ್ಯೂಸ್ ಕಡಬ) newskadaba.com ಅ. 25. ಶ್ರೀನಿವಾಸ ವಿಶ್ವವಿದ್ಯಾಲಯ, ಶ್ರೀನಿವಾಸ ಇನ್‌ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಮತ್ತು ರಿಸರ್ಚ್ ಸೆಂಟರ್ ವತಿಯಿಂದ ಎಂಬಿಬಿಎಸ್ ಓರಿಯಂಟೇಶನ್ ಕಾರ್ಯಕ್ರಮವನ್ನು ಅಕ್ಟೋಬರ್ 24ರಂದು ಮುಕ್ಕ ಕ್ಯಾಂಪಸ್‌ನಲ್ಲಿ ಆಯೋಜಿಸಲಾಗಿತ್ತು. ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿ ಡಾ. ಸಿಎ ಎ.ರಾಘವೇಂದ್ರರಾವ್ ಅವರ ಆಶೀರ್ವಾದದೊಂದಿಗೆ ಗಣ್ಯರು ಕಾರ್ಯಕ್ರಮ ಉದ್ಘಾಟಿಸಿದರು. ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಸಹ ಕುಲಾಧಿಪತಿ ಡಾ.ಎ.ಶ್ರೀನಿವಾಸ್ ರಾವ್ ಮಾತನಾಡಿ, ಎಂಬಿಬಿಎಸ್ ವಿದ್ಯಾರ್ಥಿಗಳು ಆಯ್ಕೆ ಮಾಡುವ ಉದಾತ್ತ ಕೋರ್ಸ್ ಮತ್ತು ಇದು ದೊಡ್ಡ ಪ್ರಯಾಣವಾಗಿದೆ.

ಶ್ರೀನಿವಾಸ ಯೂನಿವರ್ಸಿಟಿ ಸಿಮ್ಸ್ ಮತ್ತು ಆರ್ಸಿ ಓರಿಯಂಟೇಶನ್ ಪ್ರೋಗ್ರಾಂ Read More »

ಕರಾವಳಿ

ಕಾರ್ಮಿಕರ ಕಾನೂನು ಅರಿವು- ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಅ. 25. ಕಾರ್ಮಿಕ ಇಲಾಖೆಯ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಐ.ಇ.ಸಿ ಚಟುವಟಿಕೆಗಳಡಿ ಸಂಘಟಿತ ಮತ್ತು ಅಸಂಘಟಿತ ವರ್ಗದ ಎಲ್ಲಾ ಕಾರ್ಮಿಕರಿಗೆ, ಕಾರ್ಮಿಕ ಸಂಘಟನೆಗಳಿಗೆ, ವಿವಿಧ ಸಂಘ ಸಂಸ್ಥೆಗಳಿಗೆ ಹಾಗೂ ಆಡಳಿತ ವರ್ಗದವರಿಗೆ ಇಲಾಖೆ ಅನುಷ್ಠಾನಗೊಳಿಸುತ್ತಿರುವ ಕಾನೂನುಗಳ ಬಗ್ಗೆ ಮತ್ತು ಜಾರಿಗೊಳಿಸುತ್ತಿರುವ ವಿವಿಧ ಯೋಜನೆಗಳ ಬಗ್ಗೆ ಕಾನೂನು ಅರಿವು ಕಾರ್ಯಾಗಾರವನ್ನು ನವೆಂಬರ್ 4ರಂದು ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಮಂಗಳೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಮಿಕರ ಕಾನೂನು ಅರಿವು- ಕಾರ್ಯಾಗಾರ Read More »

ಕರಾವಳಿ

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 25. ಮೆಟ್ರಿಕ್ ನಂತರದ ಕೋರ್ಸುಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿಗಳಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನ. ಅರ್ಜಿ ಸಲ್ಲಿಸಲು

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ತಾರತಮ್ಯ- ಜಾತಿ ಹಿಂಸಾಚಾರ ಪ್ರಕರಣ: ದೇಶದಲ್ಲಿ ಮೊದಲ ಬಾರಿಗೆ 98 ಮಂದಿಗೆ ಸಾಮೂಹಿಕ ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಕೊಪ್ಪಳ, ಅ.25. ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ದಲಿತರನ್ನು ಗುರಿಯಾಗಿಸಿಕೊಂಡು 2014ರಲ್ಲಿ ನಡೆದ ತಾರತಮ್ಯ ಮತ್ತು ಜಾತಿ ಹಿಂಸಾಚಾರ ಪ್ರಕರಣದಲ್ಲಿ 98 ಮಂದಿಗೆ ಜೀವಾವಧಿ ಶಿಕ್ಷೆ ಹಾಗೂ ಮೂವರಿಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಿ ಸೆಷನ್ಸ್ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ. ನ್ಯಾಯಾಧೀಶ ಚಂದ್ರಶೇಖರ್ ಸಿ ಪ್ರಕರಣದಲ್ಲಿ 101 ಜನರಿಗೆ ಶಿಕ್ಷೆ ವಿಧಿಸಿದರು. ಇದು ಜಾತಿ ಸಂಬಂಧಿತ ಪ್ರಕರಣಗಳಲ್ಲಿ ದೇಶದಲ್ಲಿಯೇ ಅತಿ ಹೆಚ್ಚು ಸಾಮೂಹಿಕ ಶಿಕ್ಷೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಪಬ್ಲಿಕ್

ತಾರತಮ್ಯ- ಜಾತಿ ಹಿಂಸಾಚಾರ ಪ್ರಕರಣ: ದೇಶದಲ್ಲಿ ಮೊದಲ ಬಾರಿಗೆ 98 ಮಂದಿಗೆ ಸಾಮೂಹಿಕ ಶಿಕ್ಷೆ ಪ್ರಕಟ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೀನು ಮಾರಾಟಗಾರರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 25. ಸ್ಥಳೀಯವಾಗಿ ಮೀನು ಸೇವನೆಯನ್ನು ಪ್ರೋತ್ಸಾಹಿಸಲು ಹಾಗೂ ತಾಜಾ ಮೀನು ಮತ್ತು ಮೀನು ಉತ್ಪನ್ನಗಳ ಮಾರಾಟಕ್ಕಾಗಿ “ಮತ್ಸ್ಯವಾಹಿನಿ” ಯೋಜನೆಯಡಿ ತ್ರಿಚಕ್ರ ವಾಹನಗಳನ್ನು ಪರವಾನಿಗೆ ಆಧಾರದಲ್ಲಿ ಪಡೆಯಲು ಆಸಕ್ತ ಮೀನು ಮಾರಾಟಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 10 ವಾಹನಗಳನ್ನು ನೀಡುವ ಗುರಿ ಇದೆ. ಆಯ್ಕೆಯಾಗುವ ಸಾಮಾನ್ಯ ವರ್ಗದ ಅರ್ಜಿದಾರರು ಇಲಾಖೆಗೆ ಭದ್ರತಾ ಠೇವಣಿಯಾಗಿ ರೂ. 1 ಲಕ್ಷ ಹಾಗೂ ಪರಿಶಿಷ್ಟ ಜಾತಿ/ಪಂಗಡ/ಮಹಿಳೆಯರು ರೂ. 50 ಸಾವಿರ ನೀಡಬೇಕು ಹಾಗೂ

ಮೀನು ಮಾರಾಟಗಾರರಿಂದ ಅರ್ಜಿ ಆಹ್ವಾನ Read More »

ಕರಾವಳಿ

ಸರಕಾರಿ ಉದ್ಯೋಗ ಕೊಡಿಸುವುದಾಗಿ 13 ಲಕ್ಷ ರೂ. ವಂಚನೆ – ಪೆರ್ಲದ ಯುವತಿ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಅ. 25. ಸರಕಾರಿ ಉದ್ಯೋಗ ಒದಗಿಸಿಕೊಡುವ ಭರವಸೆ ನೀಡಿ 13.11 ಲಕ್ಷ ರೂ. ಪಡೆದು ವಂಚಿಸಿದ ಆರೋಪದಡಿ ಪೆರ್ಲದ ಸಚಿತಾ ರೈ ಎಂಬಾಕೆಯ ವಿರುದ್ಧ ಕೊಯಿಲ ಗ್ರಾಮ ನಿವಾಸಿ ರಕ್ಷಿತಾ ಕೆ. ನೀಡಿದ ದೂರಿನನ್ವಯ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ದೂರಿನ ಪ್ರಕಾರ, ಪೆರ್ಲದ ಬರಮೇಲು ಮನೆ ನಿವಾಸಿ ಅಶ್ವಿನ್ ಕುಮಾರ್ ಶೆಟ್ಟಿ ಎಂಬವರ ಪತ್ನಿ ರಕ್ಷಿತಾ ಎಂಬವರ ಕ್ಲಾಸ್ ಮೇಟ್ ಆಗಿರುವ ಸಚಿತಾ ರೈ ಎಂಬವರು ಇರಿಗೇಶನ್ ಇಲಾಖೆಯಲ್ಲಿ ಕೆಲಸಕೊಡುವುದಾಗಿ ಹೇಳಿ

ಸರಕಾರಿ ಉದ್ಯೋಗ ಕೊಡಿಸುವುದಾಗಿ 13 ಲಕ್ಷ ರೂ. ವಂಚನೆ – ಪೆರ್ಲದ ಯುವತಿ ವಿರುದ್ದ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ

ಕಡಬ: 7ನೇ ವೇತನ ಆಯೋಗದಡಿ ಪಿಂಚಣಿ ಸೌಲಭ್ಯಕ್ಕೆ ನಿವೃತ್ತ ನೌಕರರ ವೇದಿಕೆಯಿಂದ ಹಕ್ಕೊತ್ತಾಯ-‌ಸದಸ್ಯತ್ವ ಅಭಿಯಾನ

(ನ್ಯೂಸ್ ಕಡಬ) newskadaba.com ಅ.25. ನಿವೃತ್ತ ನೌಕರರಿಗೆ ಸಿಗಬೇಕಾದ ಹಕ್ಕಿನ ಮೊತ್ತ ಸಿಗುತ್ತಿಲ್ಲ. ರಾಜ್ಯ ಸರಕಾರಕ್ಕೆ ನಮ್ಮ ಸಮಸ್ಯೆಯನ್ನು ಮುಟ್ಟಿಸಿ 7ನೇ ವೇತನ ಆಯೋಗದಡಿಯಲ್ಲಿ ಪಿಂಚಣಿ ಸೌಲಭ್ಯ ನೀಡಬೇಕೆಂದು ಹಕ್ಕೊತ್ತಾಯ ಮಂಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಕರ್ನಾಟಕ ರಾಜ್ಯ ನಿವೃತ್ತ ನೌಕರರ ವೇದಿಕೆಯ ಜಿಲ್ಲಾ ಘಟಕದ ಸಹ ಸಂಚಾಲಕಿ ಮಂಜುಳಾ ಹೇಳಿದರು. ಅವರು ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಸಭಾಭವನದಲ್ಲಿ ನಡೆದ 1-7-2022 ರಿಂದ 31-7-2024ರ ಅವಧಿಯಲ್ಲಿ ನಿವೃತ್ತರಾದ ಕರ್ನಾಟಕ ರಾಜ್ಯ ನಿವೃತ್ತ ನೌಕರರ ವೇದಿಕೆಯ ಸದಸ್ವತ್ವ

ಕಡಬ: 7ನೇ ವೇತನ ಆಯೋಗದಡಿ ಪಿಂಚಣಿ ಸೌಲಭ್ಯಕ್ಕೆ ನಿವೃತ್ತ ನೌಕರರ ವೇದಿಕೆಯಿಂದ ಹಕ್ಕೊತ್ತಾಯ-‌ಸದಸ್ಯತ್ವ ಅಭಿಯಾನ Read More »

ಕರಾವಳಿ
Death, deadbody, Waterfall

ಬೆಳ್ಳಾರೆ: ಪಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ – ಗಾಯಗೊಂಡಿದ್ದ ಮಹಿಳೆ ಮೃತ್ಯು..!

(ನ್ಯೂಸ್ ಕಡಬ) newskadaba.com ಅ.25. ವ್ಯಕ್ತಿಯೋರ್ವ ತನ್ನ ತಮ್ಮನ ಪತ್ನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣದಲ್ಲಿ ತೀವ್ರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟ ಕುರಿತು ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದಿಂದ ವರದಿಯಾಗಿದೆ. ಮೃತಪಟ್ಟವರನ್ನು ಜಯಭಾರತಿ ಎಂದು ಗುರುತಿಸಲಾಗಿದೆ. ಅ.12ರಂದು ರಾತ್ರಿ ಮನೆಯ ಕೋಣೆಯಲ್ಲಿ ಮಲಗಿದ್ದ ಜಯಭಾರತಿ ಎಂಬವರ ಪತಿಯ ಅಣ್ಣ ಶಂಕರ ನಾಯಕ್ ಎಂಬಾತ ಕಿಟಕಿಯ ಮೂಲಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಎನ್ನಲಾಗಿದ್ದು, ಘಟನೆಯಲ್ಲಿ ಇಬ್ಬರೂ ಗಾಯಗೊಂಡಿದ್ದರು. ಶೇ. 80 ರಷ್ಟು ಗಾಯಗೊಂಡಿದ್ದ ಮಹಿಳೆ ಜಯಭಾರತಿ

ಬೆಳ್ಳಾರೆ: ಪಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ – ಗಾಯಗೊಂಡಿದ್ದ ಮಹಿಳೆ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಆರೋಗ್ಯ & ಕುಟುಂಬ ಕಲ್ಯಾಣ ಸೊಸೈಟಿಯಲ್ಲಿ ಸರ್ಕಾರಿ ಕೆಲಸ – ಆಸಕ್ತರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ.24.  ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯಲ್ಲಿರುವ ವಿವಿಧ ಹುದ್ದೆಗಳಾದ ತಜ್ಞ ವೈದ್ಯರು, ನರ್ಸಿಂಗ್ ಸೇರಿದಂತೆ ಒಟ್ಟು 14 ಹುದ್ದೆಗಳು ಖಾಲಿಯಿದ್ದು, ಇದರ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಸರ್ಕಾರಿ ಉದ್ಯೋಗ ಪಡೆಯಲು ಆಸಕ್ತಿಯಿರುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 30ರಂದು ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸುವ ಮುನ್ನ ನೇಮಕಾತಿ ಕುರಿತು, ಆನ್‌ಲೈನ್ ಲಿಂಕ್, ಮಾಸಿಕ ವೇತನ, ವಯೋಮಿತಿ ಇತರ ಪೂರ್ಣ ಮಾಹಿತಿ ಇಲ್ಲಿದೆ.  

ಆರೋಗ್ಯ & ಕುಟುಂಬ ಕಲ್ಯಾಣ ಸೊಸೈಟಿಯಲ್ಲಿ ಸರ್ಕಾರಿ ಕೆಲಸ – ಆಸಕ್ತರಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ
Scroll to Top