newskadaba

ವಿಧಾನಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭರ್ಜರಿ ಗೆಲುವು

(ನ್ಯೂಸ್ ಕಡಬ) newskadaba.com ಅ.24. ಜಿಲ್ಲೆಯಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಬಿಜೆಪಿಯ ಕಿಶೋರ್ ಕುಮಾರ್ ಪುತ್ತೂರು ಅವರು 1693 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಿಶೋರ್ ಕುಮಾರ್ ಅವರು ಎಂ.ಎ. ಸ್ನಾತಕೋತ್ತರ ಪದವೀಧರರಾಗಿದ್ದು, ಅವರ ವಿದ್ಯಾರ್ಥಿ ಜೀವನದಿಂದಲೇ ಸಂಘ ಪರಿವಾರದ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದವರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನಲ್ಲಿ (ಎಬಿವಿಪಿ) ವಿವಿಧ ಹುದ್ದೆಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಪ್ರಸ್ತುತ ಅವರು ದ.ಕ. ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೋಟ ಶ್ರೀನಿವಾಸ […]

ವಿಧಾನಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭರ್ಜರಿ ಗೆಲುವು Read More »

ಕರಾವಳಿ

“ಸಾಹಸ ಪ್ರವಾಸೋದ್ಯಮ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ಕುತ್ಲೂರಿನ ಮೂವರಿಗೆ ಗೌರವ ಸಮರ್ಪಣೆ

(ನ್ಯೂಸ್ ಕಡಬ) newskadaba.com ಅ.24. ಅಂತರಾಷ್ಟ್ರೀಯ ಪ್ರವಾಸೋದ್ಯಮ ದಿನದ ಅಂಗವಾಗಿ ಕೇಂದ್ರ ಸರಕಾರ ಮತ್ತು ಕೇಂದ್ರ ಪ್ರವಾಸೋದ್ಯಮ ಇಲಾಖೆ ಆಯೋಜಿಸಿದ್ದ ಅತ್ಯುತ್ತಮ ಪ್ರವಾಸಿ ತಾಣಗಳು ಸ್ಪರ್ಧೆಯಲ್ಲಿ “ಸಾಹಸ ಪ್ರವಾಸೋದ್ಯಮ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ಕುತ್ಲೂರು ಗ್ರಾಮದ ಪ್ರತಿನಿಧಿಗಳಾಗಿದ್ದ ಹರೀಶ್ ಡಾಕಯ್ಯ ಮತ್ತು ಶಿವರಾಜ್ ಅಂಚನ್ ಇವರಿಗೆ ಸಪ್ಟೆಂಬರ್‌ 27 ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾನ್ಯ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಘನ ಉಪಸ್ಥಿತಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರು ಮತ್ತು ಇತರ ಗಣ್ಯರು ಪ್ರಶಸ್ತಿ ನೀಡಿ

“ಸಾಹಸ ಪ್ರವಾಸೋದ್ಯಮ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ಕುತ್ಲೂರಿನ ಮೂವರಿಗೆ ಗೌರವ ಸಮರ್ಪಣೆ Read More »

ಕರಾವಳಿ

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಅ.24. ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮವನ್ನು ಮಂಗಳೂರಿನ ಮ್ಯಾಪ್ಸ್ ಕಾಲೇಜಿನಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ರಾಣಿ ಚೆನ್ನಮ್ಮರ ಭಾವಚಿತ್ರಕ್ಕೆ ಹೂವು ಹಾಕಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಪತ್ರಾಂಕಿತ ಸಹಾಯಕರು ಹಾಗೂ ಬರಹಗಾರರಾದ ಬೆನೆಟ್ ಜಿ. ಅಮ್ಮಣ್ಣ ಮಾತನಾಡಿ, ಕಿತ್ತೂರು ರಾಣಿ ಚೆನ್ನಮ್ಮ 200 ವರ್ಷಗಳ ಹಿಂದೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ದೇಶಕ್ಕಾಗಿ ಪ್ರಾಣ ತೆತ್ತ ವೀರ ವನಿತೆ ಎಂದು

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮ Read More »

ಕರಾವಳಿ

ಮೈಸೂರು ವಿಭಾಗ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಅ.24. ಜವಾಹರಲಾಲ್ ನೆಹರು ತಾರಾಲಯ, ಬೆಂಗಳೂರು ಇವರು ರಾಜ್ಯ ಮಟ್ಟದಲ್ಲಿ ಆಯೋಜಿಸಿರುವ ಕನ್ನಡದಲ್ಲಿ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯ ಅಂಗವಾಗಿ ಮೈಸೂರು ವಿಭಾಗ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯನ್ನು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿತ್ತು. ತಾರಾಲಯದ ನಿರ್ದೇಶಕ ಡಾ. ಬಿ ಆರ್. ಗುರುಪ್ರಸಾದ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ರಸಪ್ರಶ್ನೆ ಸ್ಪರ್ಧೆಯ ಉದ್ದೇಶಗಳನ್ನು ವಿವರಿಸಿದರು. ಈ ಸ್ಪರ್ಧೆ ವಿದ್ಯಾರ್ಥಿಗಳಲ್ಲಿ ವಿಷಯವನ್ನು ಅರ್ಥಮಾಡಿಕೊಳ್ಳಲು ಸಹಾಯಕ ಆತ್ಮವಿಶ್ವಾಸವನ್ನು ಬೆಳೆಸುವ ಉತ್ತಮ ಸಾಧನ ಎಂದು ಹೇಳಿ ಪ್ರೌಢಶಾಲಾ

ಮೈಸೂರು ವಿಭಾಗ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ Read More »

ಕರಾವಳಿ

ಐಟಿಐ ಖಾಲಿ ಸೀಟುಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ.24. ನಗರದ ಸರ್ಕಾರಿ ಐ.ಟಿ.ಐ, ಮಹಿಳಾ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ಪಾಸಾದ ಅಭ್ಯರ್ಥಿಗಳಿಗೆ ತರಬೇತಿ ಪಡೆಯಲು ಸೀಟುಗಳು ಖಾಲಿಯಿದ್ದು,  ಕರ್ನಾಟಕದಲ್ಲಿ 5 ವರ್ಷ ವ್ಯಾಸಂಗ ಮಾಡಿರುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅಕ್ಟೋಬರ್ 30ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಎಲೆಕ್ಟ್ರೀಷಿಯನ್- 2 ವರ್ಷ, ಖಾಲಿ ಇರುವ ಸೀಟುಗಳು 6. ಎಲೆಕ್ಟ್ರಾನಿಕ್ ಮೆಕ್ಯಾನಿಕ್ – 2 ವರ್ಷ, ಖಾಲಿ ಇರುವ ಸೀಟುಗಳು 18. ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್ – 2 ವರ್ಷ, ಖಾಲಿ ಇರುವ ಸೀಟುಗಳು 7.

ಐಟಿಐ ಖಾಲಿ ಸೀಟುಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಬಿಜೆಪಿ ಸಕ್ರಿಯ ಸದಸ್ಯತ್ವ ಅಭಿಯಾನ – ಸಂಸದ ಚೌಟರಿಂದ ಸದಸ್ಯತ್ವ ಮರು ನೋಂದಣಿ

(ನ್ಯೂಸ್ ಕಡಬ) newskadaba.com ಅ.24. ಸಕ್ರಿಯ ಸದಸ್ಯತ್ವ ಅಭಿಯಾನದ ಭಾಗವಾಗಿ ಭಾರತೀಯ ಜನತಾ ಪಾರ್ಟಿಯ ಸಕ್ರಿಯ ಸದಸ್ಯನಾಗಿ ಕ್ಯಾ. ಬ್ರಿಜೇಶ್ ಚೌಟ ಅವರು ತಮ್ಮ ಸದಸ್ಯತ್ವವನ್ನು ಮರು ನೋಂದಣಿ ಮಾಡಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆದ ಸಕ್ರಿಯ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಅವರ ಸಮ್ಮುಖದಲ್ಲಿ ಕ್ಯಾ. ಚೌಟ ಅವರು ಸಕ್ರಿಯ ಸದಸ್ಯನಾಗಿ ನೋಂದಣಿ ಮಾಡಿಕೊಂಡರು. ಈ ವೇಳೆ ಮಾತನಾಡಿದ ಕ್ಯಾ. ಚೌಟ ಅವರು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು

ಬಿಜೆಪಿ ಸಕ್ರಿಯ ಸದಸ್ಯತ್ವ ಅಭಿಯಾನ – ಸಂಸದ ಚೌಟರಿಂದ ಸದಸ್ಯತ್ವ ಮರು ನೋಂದಣಿ Read More »

ಕರಾವಳಿ

ವಿಧಾನ ಪರಿಷತ್ ಉಪಚುನಾವಣೆ- ಮತ ಎಣಿಕೆ ಕಾರ್ಯ ಆರಂಭ

(ನ್ಯೂಸ್ ಕಡಬ) newskadaba.com ಅ.24. ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ಅ. 22ರಂದು ನಡೆದ ವಿಧಾನ ಪರಿಷತ್‌ ಉಪಚುನಾವಣೆಯ ಮತ ಎಣಿಕೆ ಕಾರ್ಯವು ಇಂದು ಬೆಳಗ್ಗೆ 8 ಗಂಟೆಯಿಂದ ಮಂಗಳೂರಿನ ಸಂತ ಅಲೋಷಿಯಸ್‌ ಪದವಿ ಪೂರ್ವ ಕಾಲೇಜಿನಲ್ಲಿ ಆರಂಭಗೊಂಡಿದೆ. ಪ್ರಾರಂಭದಲ್ಲಿ ಮತಪೆಟ್ಟಿಗೆಗಳನ್ನು ತೆರೆದು ಮೊದಲ ಹಂತದ ಒಟ್ಟು ಮತಗಳ ಎಣಿಕೆ ಕಾರ್ಯ ನಡೆಯಲಿದೆ. ಎರಡನೇ ಹಂತದಲ್ಲಿ ಮತಪತ್ರಗಳ ಸಿಂಧುತ್ವ ಪರಿಶೀಲನೆ ಮಾಡಲಾಗುವುದು. ನಂತರ ನಿಗದಿತ ಕೋಟಾವನ್ನು ಮೊದಲ ಪ್ರಾಶಸ್ತ್ಯದಲ್ಲಿ ಪಡೆದ ಅಭ್ಯರ್ಥಿಯ ಆಯ್ಕೆ ಮಾಡಿ, ಘೋಷಣೆ

ವಿಧಾನ ಪರಿಷತ್ ಉಪಚುನಾವಣೆ- ಮತ ಎಣಿಕೆ ಕಾರ್ಯ ಆರಂಭ Read More »

ಕರಾವಳಿ, ಕರ್ನಾಟಕ

ವಿವಿ ತುಳು ಎಂಎ ಅಧ್ಯಯನ ಪ್ರವೇಶ ಶುಲ್ಕ ಕಡಿತಕ್ಕೆ ಸಂಸದ ಚೌಟ ಮನವಿ – ಪ್ರವೇಶ ಶುಲ್ಕದಲ್ಲಿ ರಿಯಾಯಿತಿ ನೀಡುವಂತೆ ಶಿಕ್ಷಣ ಸಚಿವರಿಗೆ ಪತ್ರ

(ನ್ಯೂಸ್ ಕಡಬ) newskadaba.com ಅ.24. ತುಳು ಭಾಷೆ ಉತ್ತೇಜನ ಹಾಗೂ ಬೆಳವಣಿಗೆಗೆ ಪೂರಕವಾಗಿ ಮಂಗಳೂರು ವಿಶ್ವವಿದ್ಯಾಲಯ ಆರಂಭಿಸಿರುವ ತುಳು ಸ್ನಾತಕೋತ್ತರ ಪ್ರವೇಶ ಶುಲ್ಕವನ್ನು ಏಕಾಏಕಿ ಏರಿಕೆ ಮಾಡಿರುವುದನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರವಾಗಿ ಖಂಡಿಸಿದ್ದು, ಸರ್ಕಾರ ಕೂಡಲೇ ಶುಲ್ಕ ಕಡಿತಗೊಳಿಸುವುದಕ್ಕೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.   ಈ ಕುರಿತು ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರಿಗೆ ಪತ್ರ ಬರೆದಿರುವ ಕ್ಯಾ. ಚೌಟ ಅವರು, ಮಂಗಳೂರು ವಿವಿಯಲ್ಲಿ ತುಳು ಸ್ನಾತಕೋತ್ತರ

ವಿವಿ ತುಳು ಎಂಎ ಅಧ್ಯಯನ ಪ್ರವೇಶ ಶುಲ್ಕ ಕಡಿತಕ್ಕೆ ಸಂಸದ ಚೌಟ ಮನವಿ – ಪ್ರವೇಶ ಶುಲ್ಕದಲ್ಲಿ ರಿಯಾಯಿತಿ ನೀಡುವಂತೆ ಶಿಕ್ಷಣ ಸಚಿವರಿಗೆ ಪತ್ರ Read More »

ಕರಾವಳಿ, ಕರ್ನಾಟಕ

ಕಡಬ: ದೀಪಾವಳಿ ಪ್ರಯುಕ್ತ ‘ಎಸ್ಇಎಸ್ ಬರ್ಲಿನ್’ ಮೆನ್ಸ್ ಶೋರೂಂ ನಲ್ಲಿ ಭರ್ಜರಿ ಆಫರ್..!

(ನ್ಯೂಸ್ ಕಡಬ) newskadaba.com ಕಡಬ, ಅ. 24. ಇಲ್ಲಿನ ಸೈಂಟ್ ಜೋಕಿಮ್ಸ್ ಕಾಂಪ್ಲೆಕ್ಸ್ ನಲ್ಲಿ ಕಳೆದ ಕೆಲವು ವರ್ಷಗಳಿಂದ ಕಾರ್ಯಾಚರಿಸುತ್ತಿರುವ ‘ಎಸ್ಇಎಸ್ ಬರ್ಲಿನ್’ ಮೆನ್ಸ್ ಶೋರೂಂ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಆಫರ್ ನಡೆಯಲಿದೆ. ಪ್ಯಾಂಟ್ ಶರ್ಟ್ ವಿಥ್ ಸ್ಟಿಚ್ಚಿಂಗ್ ಕೇವಲ 899ರೂ., ಕುರ್ತಾ ಸೆಟ್ ಚಿಕನ್ ವರ್ಕ್ ವಿಥ್ ಸ್ಟಿಚ್ಚಿಂಗ್ ಕೇವಲ 1099 ರೂ., ಸಿಲ್ಕ್ ಮೆಟೀರಿಯಲ್ ಕುರ್ತಾ ಸೆಟ್ ಎಂವಿ ಕೋಟ್ ವಿಥ್ ಸ್ಟಿಚ್ಚಿಂಗ್ ಕೇವಲ 1799ರೂ. ಈ ಆಫರ್ ಇಂದಿನಿಂದ(ಅ.24) ನವೆಂಬರ್ 10ರ

ಕಡಬ: ದೀಪಾವಳಿ ಪ್ರಯುಕ್ತ ‘ಎಸ್ಇಎಸ್ ಬರ್ಲಿನ್’ ಮೆನ್ಸ್ ಶೋರೂಂ ನಲ್ಲಿ ಭರ್ಜರಿ ಆಫರ್..! Read More »

ಕರಾವಳಿ

ನಿಶ್ಚಿತಾರ್ಥ ಮಾಡಿಸಿಕೊಂಡ ‘ಪಾರು’ ಧಾರವಾಹಿ ಖಳನಾಯಕಿ..!

(ನ್ಯೂಸ್ ಕಡಬ) newskadaba.com ಅ.23. ಕಿರುತೆರೆಯ ಪಾರು ಧಾರವಾಹಿಯಲ್ಲಿ ಖಳನಾಯಕಿಯಾಗಿ ನಟಿಸಿದ್ದ ಮಾನ್ಸಿ ಜೋಶಿ ಇದೀಗ ರಾಘವ್ ಎಂಬವರ ಜೊತೆ ಎಂಗೇಜ್ಮೆಂಟ್ ಮಾಡಿಕೊಂಡಿದ್ದು, ಫ್ಯಾನ್ಸ್ಗೆ ಶುಭ ಸುದ್ದಿ ಕೊಟ್ಟಿದ್ದಾರೆ. ನಟಿ ಮಾನ್ಸಿ ಎಂಗೇಜ್‌ಮೆಂಟ್ ಮಾಡಿಕೊಂಡಿರುವ ಸುಂದರ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನಟಿ ಮಾನ್ಸಿ ಅವರು ಸಾಫ್ಟ್ವೇರ್ ಇಂಜಿನಿಯರ್ ರಾಘವ್ ಜೊತೆ ಬೆಂಗಳೂರಿನ ಬನಶಂಕರಿಯಲ್ಲಿ ಅದ್ಧೂರಿಯಾಗಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಕುಟುಂಬಸ್ಥರು, ಆಪ್ತರ ಸಮ್ಮುಖದಲ್ಲಿ ಈ ಸಮಾರಂಭ ಜರುಗಿದೆ. ಮುಂದಿನ ವರ್ಷ ಫೆಬ್ರವರಿಯಲ್ಲಿ ಮಾನ್ಸಿ ಮದುವೆ ನಡೆಯಲಿದೆ.

ನಿಶ್ಚಿತಾರ್ಥ ಮಾಡಿಸಿಕೊಂಡ ‘ಪಾರು’ ಧಾರವಾಹಿ ಖಳನಾಯಕಿ..! Read More »

ಸಿನಿಮಾ
Scroll to Top