newskadaba

ತೋಟಕ್ಕೆ ನುಗ್ಗಿದ ಕಾಡಾನೆ- ಸುಳ್ಯದಲ್ಲಿ ಕೃಷಿ ಹಾನಿ

(ನ್ಯೂಸ್ ಕಡಬ) newskadaba.com ಅ.23. ಕಳೆದ ಎರಡು ಮೂರು ದಿನಗಳಿಂದ ಬೀಡುಬಿಟ್ಟಿರುವ ಕಾಡಾನೆಗಳು ಪ್ರತಿನಿತ್ಯ ರಾತ್ರಿ ಸುಳ್ಯದ ಕಾಯರ್ತೋಡಿ ಪರಿಸರದಲ್ಲಿ ಕೃಷಿಕರ ತೋಟಕ್ಕೆ ನುಗ್ಗಿ ಕೃಷಿ ಹಾನಿ ನಡೆಸುತ್ತಿರುವ ಕುರಿತು ವರದಿಯಾಗಿದೆ. ಹಗಲು ಹೊತ್ತಿನಲ್ಲಿ ಸಮೀಪದ ಪೂಮಲೆ ಕಾಡಿನಲ್ಲಿ, ಇರುವ ಅನೆಗಳು ರಾತ್ರಿ ವೇಳೆ ಕೃಷಿಕರ ತೋಟಕ್ಕೆ ಬಂದು ಕೃಷಿ ಹಾನಿ ನಡೆಸುತ್ತಿದೆ. ವಿಜಯ ಪಡ್ಡು ಎಂಬವರ ತೋಟಕ್ಕೆ ನುಗ್ಗಿದ ಆನೆಗಳು 3 ತೆಂಗಿನ ಗಿಡ ಮತ್ತು ಬಾಳೆ ಕೃಷಿ ನಾಶಪಡಿಸಿದೆ. ಈ ಭಾಗದಲ್ಲಿ ಹಳದಿ ರೋಗದಿಂದ […]

ತೋಟಕ್ಕೆ ನುಗ್ಗಿದ ಕಾಡಾನೆ- ಸುಳ್ಯದಲ್ಲಿ ಕೃಷಿ ಹಾನಿ Read More »

ಕರಾವಳಿ, ಕ್ರೈಮ್ ನ್ಯೂಸ್

ಅಪಘಾತದ ಗಾಯಾಳುವನ್ನು ತನ್ನ ಸ್ಕೂಟರ್ ನಲ್ಲೇ ಆಸ್ಪತ್ರೆಗೆ ದಾಖಲಿಸಿದ ಮಹಿಳಾ ಪೇದೆ..! ಕಮಿಷನರ್ ಅನುಪಮ್ ಅಗರ್ವಾಲ್ ಶ್ಲಾಘನೆ

(ನ್ಯೂಸ್ ಕಡಬ) newskadaba.com ಅ.23. ರಸ್ತೆ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೊಬ್ಬರನ್ನು ಮಹಿಳಾ ಕಾನ್ಸ್ ಟೇಬಲ್ ತನ್ನ ಸ್ಕೂಟಿಯಲ್ಲೇ ಆಸ್ಪತ್ರೆಗೆ ದಾಖಲಿಸಿ ಸಮಯಪ್ರಜ್ಞೆ ಮೆರೆದಿರುವ ಕುರಿತು ಮಂಗಳೂರಿನಿಂದ ವರದಿಯಾಗಿದೆ. ಬುಧವಾರದಂದು ಮುಂಜಾವ ಸುಮಾರು 3:40ರ ಸುಮಾರಿಗೆ ನಗರದ ಕೆಪಿಟಿ ಬಳಿ ಪಿಕ್ ಅಪ್ ವಾಹನ ಮತ್ತು ಕಂಟೈನರ್ ಲಾರಿ ಮಧ್ಯೆ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಕ್ಲೀನರ್ ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಮಾಹಿತಿ ಪಡೆದ ಕದ್ರಿ ಠಾಣೆಯ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಮನ್ಶಿದಾ ಬಾನು ತಕ್ಷಣ

ಅಪಘಾತದ ಗಾಯಾಳುವನ್ನು ತನ್ನ ಸ್ಕೂಟರ್ ನಲ್ಲೇ ಆಸ್ಪತ್ರೆಗೆ ದಾಖಲಿಸಿದ ಮಹಿಳಾ ಪೇದೆ..! ಕಮಿಷನರ್ ಅನುಪಮ್ ಅಗರ್ವಾಲ್ ಶ್ಲಾಘನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

MSC ಬ್ಯಾಂಕ್ ವಿವಿಧ ಹುದ್ದೆಗಳಿಗೆ ನೇಮಕಾತಿ

(ನ್ಯೂಸ್ ಕಡಬ) newskadaba.com ಅ.23. ಮಹಾರಾಷ್ಟ್ರ ಸ್ಟೇಟ್ ಕೋ-ಆಪರೇಟಿವ್‌ ಬ್ಯಾಂಕ್ ಲಿಮಿಟೆಡ್‌ (ಎಂಎಸ್‌ಸಿಬಿ) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.   ಹುದ್ದೆಗಳ ವಿವರ: ಟ್ರೈನಿ ಜೂನಿಯ‌ರ್ ಆಫೀಸರ್: 25 ಹುದ್ದೆ ಟ್ರೈನಿ ಅಸೋಸಿಯೇಟ್: 50 ಹುದ್ದೆ ವಿದ್ಯಾರ್ಹತೆ ಪದವಿ ಶಿಕ್ಷಣವನ್ನು ಕನಿಷ್ಠ ಶೇಕಡ. 50 ಅಂಕಗಳೊಂದಿಗೆ ತೆರ್ಗಡೆ ಹೊಂದಿರಬೇಕು. ಕಾನೂನು ಅಥವಾ ಜೆಎಎಲ್‌ಎಲ್‌ಬಿ / CALLB / MSCIT ಸರ್ಟಿಫಿಕೇಟ್ ಅನ್ನು ಹೊಂದಿರಬೇಕು. ಅಥವಾ ಟ್ರೆಸರಿ / ಇಂಟರ್‌ನ್ಯಾಷನಲ್ ಬ್ಯಾಂಕಿಂಗ್ ಡಿವಿಷನ್‌ನಲ್ಲಿ

MSC ಬ್ಯಾಂಕ್ ವಿವಿಧ ಹುದ್ದೆಗಳಿಗೆ ನೇಮಕಾತಿ Read More »

ಉದ್ಯೋಗ
Crime

ತಲವಾರು ದಾಳಿ- ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಅ.23. ಪೂರ್ವದ್ವೇಷದ ಹಿನ್ನೆಲೆ ತಂಡವೊಂದು ತಲವಾರಿನಿಂದ ದಾಳಿ ಮಾಡಿದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿ ನಡೆದಿದೆ. ಪ್ರಕರಣದಲ್ಲಿ ತಸ್ಲಿಮ್ ಹಾಗೂ ಮಹಮ್ಮದ್ ಶಾಕೀರ್ ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ತಲವಾರು ದಾಳಿ- ಇಬ್ಬರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

LSG ತಂಡದಿಂದ ಕೆಎಲ್ ರಾಹುಲ್ ಔಟ್..?

(ನ್ಯೂಸ್ ಕಡಬ) newskadaba.com ಅ.23. ಕ್ರಿಕೆಟ್ ಆಟಗಾರ ಕೆಎಲ್ ರಾಹುಲ್ ಅವರನ್ನು ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ತಂಡದಿಂದ ಕೈ ಬಿಡುವುದು ಬಹುತೇಕ ಖಚಿತವಾಗಿದೆ. ಎಲ್‌ಎಸ್‌ಜಿ ಫ್ರಾಂಚೈಸಿಯ ಮೂಲಗಳ ಮಾಹಿತಿ ಪ್ರಕಾರ, ಲಕ್ನೋ ಸೂಪರ್ ಜೈಂಟ್ಸ್ ತಂಡದ ರಿಟೈನ್ ಲಿಸ್ಟ್​ ನಲ್ಲಿ ಕೆಎಲ್ ರಾಹುಲ್ ಅವರ ಹೆಸರಿಲ್ಲ. ಇದರೊಂದಿಗೆ ಅವರು ಮುಂಬರುವ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದು ಖಚಿತವಾದಂತಾಗಿದೆ. ಈ ಹಿಂದೆ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಕೆಎಲ್ ರಾಹುಲ್ ಅವರನ್ನು ರಿಲೀಸ್ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡಿದ್ದವು.

LSG ತಂಡದಿಂದ ಕೆಎಲ್ ರಾಹುಲ್ ಔಟ್..? Read More »

ಕ್ರೀಡಾ ನ್ಯೂಸ್

ಕಾಂಗ್ರೆಸ್‌ ಸೇರಿ ಯೋಗೇಶ್ವರ್ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ- ಅಶೋಕ್ ವಾಗ್ದಾಳಿ

(ನ್ಯೂಸ್ ಕಡಬ) newskadaba.com ಅ.23. ಕಾಂಗ್ರೆಸ್ ಪಕ್ಷ ಸೇರಿ ಸಿಪಿ ಯೋಗೇಶ್ವರ್ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ. ಸಿಪಿ ಯೋಗೇಶ್ವರ್ ನಂಬಿಕೆಗೆ ಅಪಚಾರ ಮಾಡಿ ಹೋಗಿದ್ದಾರೆ ಎಂದು ಸಿಪಿವೈ ವಿರುದ್ಧ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಸಿಪಿ ಯೋಗೇಶ್ವರ್ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳುವಲ್ಲಿ ಸಾಕಷ್ಟು ಪ್ರಯತ್ನ ಮಾಡಿದ್ದೇವೆ. ಇದೀಗ ಸಿಪಿ ಯೋಗೇಶ್ವರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಸಿಪಿ ಯೋಗೇಶ್ವರ್ ಮೊದಲಿಂದಲೂ ಎಲ್ಲ ಪಕ್ಷಗಳ

ಕಾಂಗ್ರೆಸ್‌ ಸೇರಿ ಯೋಗೇಶ್ವರ್ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ- ಅಶೋಕ್ ವಾಗ್ದಾಳಿ Read More »

ಕರ್ನಾಟಕ

ಸಿಪಿವೈ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತ ಸೇರ್ಪಡೆ…!

(ನ್ಯೂಸ್ ಕಡಬ) newskadaba.com ಅ.23. ಸಿಪಿ ಯೋಗೇಶ್ವರ್ ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಡಿಸಿಎಂ ಡಿಕೆಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಒಂದುಕಡೆ ಚನ್ನಪಟ್ಟಣ ಉಪಚುನಾವಣಾ ಕಣ ರಂಗೇರುತ್ತಿದ್ದು, ಇದರ ಬೆನ್ನಲ್ಲೇ ಎನ್‌ಡಿಎ ಟಿಕೆಟ್‌ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಬಿಜೆಪಿ-ಜೆಡಿಎಸ್‌ ಮೈತ್ರಿ ಪಕ್ಷಗಳಿಗೆ ಸಡ್ಡು ಹೊಡೆದಿದ್ದಾರೆ. ಈ ಮೂಲಕ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಿ.ಪಿ.ಯೊಗೇಶ್ವರ್ ಸ್ಪರ್ಧೆ ಬಹುತೇಕ ಖಚಿತವಾದಂತಾಗಿದೆ. ಬುಧವಾರದಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು

ಸಿಪಿವೈ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತ ಸೇರ್ಪಡೆ…! Read More »

ಕರ್ನಾಟಕ

ಚಲಿಸುತ್ತಿದ್ದ ಓಮ್ನಿ ಕಾರು ಬೆಂಕಿಗಾಹುತಿ…!

(ನ್ಯೂಸ್ ಕಡಬ) newskadaba.com ಅ.23. ಗ್ಯಾರೇಜ್ ನಲ್ಲಿ ರಿಪೇರಿಗೆಂದು ಇರಿಸಿದ್ದ ಓಮ್ನಿ ಕಾರನ್ನು ಮೆಕ್ಯಾನಿಕ್ ಟೆಸ್ಟ್ ಡ್ರೈವ್ ಮಾಡಲು ತೆಗೆದುಕೊಂಡು ಹೋಗುವ ವೇಳೆ ಆಕಸ್ಮಿಕವಾಗಿ ಬೆಂಕಿಗಾಹುತಿಯಾದ ಘಟನೆ ಬೆಳ್ತಂಗಡಿ ನಗರದ ಕಲ್ಲಗುಡ್ಡೆಯಲ್ಲಿ ಮಂಗಳವಾರದಂದು ರಾತ್ರಿ ನಡೆದಿದೆ. ಓಮಿನಿ ಕಾರನ್ನು ಲಾಯಿಲದ ಗ್ಯಾರೇಜಿನ ಮೆಕ್ಯಾನಿಕ್ ಓರ್ವರು ಚಲಾಯಿಸಿಕೊಂಡು ಹೋಗುವಾಗ ಅಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ ಈ ವೇಳೆ ಓಮಿನಿ ಕಾರು ಚರಂಡಿಗೆ ಬಿದ್ದಿದೆ. ಕಾರು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಬಾಳೂರು ನಿವಾಸಿ ಗೀತಾ ಎಂಬವರಿಗೆ ಸೇರಿದ್ದು ಎನ್ನಲಾಗಿದ್ದು, ರಿಪೇರಿಗಾಗಿ ಬೆಳ್ತಂಗಡಿಯ

ಚಲಿಸುತ್ತಿದ್ದ ಓಮ್ನಿ ಕಾರು ಬೆಂಕಿಗಾಹುತಿ…! Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಅಕ್ರಮ ಮೂವರು ಬಾಂಗ್ಲಾ ವಲಸಿಗರ ಬಂಧನ..!

(ನ್ಯೂಸ್ ಕಡಬ) newskadaba.com ಅ.23. ನಕಲಿ ಆಧಾರ್ ಕಾರ್ಡ್ ಬಳಸಿ ನಗರದಲ್ಲಿ ವಾಸವಿದ್ದ ಮೂವರು ಬಾಂಗ್ಲಾ ಪ್ರಜೆಗಳನ್ನು ಜಿಲ್ಲಾ ಅಪರಾಧ ಪತ್ತೆ ದಳ ವಿಭಾಗದ ಪೊಲೀಸರು ಬಂಧಿಸಿರುವ ಕುರಿತು ಶಿವಮೊಗ್ಗದಲ್ಲಿ ನಡೆದಿದೆ. ಬಂಧಿತರನ್ನು ಜಮಾಲ್ ಅಲಿ, ಫಾರೂಕ್ ಅಲಿ ಮತ್ತು ಅಕ್ಟಲ್ ಅಕ್ಕು ಎಂದು ಗುರುತಿಸಲಾಗಿದೆ. ಇವರು ಹಾಸನ ನಗರದ 80 ಅಡಿ ರಸ್ತೆಯ, ಗದ್ದೆಹಳ್ಳದ ನಾಲ್ಕನೇ ಅಡ್ಡ ರಸ್ತೆಯ ಜುಬೇರ್‌ ಎಂಬವರ ಮನೆಯಲ್ಲಿ ವಾಸವಿದ್ದು, ಕಟ್ಟಡದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಪಶ್ಚಿಮ ಬಂಗಾಳದಲ್ಲಿ

ಅಕ್ರಮ ಮೂವರು ಬಾಂಗ್ಲಾ ವಲಸಿಗರ ಬಂಧನ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಂಬಳ ಪ್ರಶ್ನಿಸಿ ಇಂದು ಅರ್ಜಿ ವಿಚಾರಣೆ..!

(ನ್ಯೂಸ್ ಕಡಬ) newskadaba.com ಅ. 23. ನಗರದ ಅರಮನೆ ಮೈದಾನದಲ್ಲಿ ಅಕ್ಟೋಬರ್‌ 26ರಂದು ಬೆಂಗಳೂರು ಕಂಬಳ ಸಮಿತಿ ಆಯೋಜಿಸಲಿರುವ ಕಂಬಳ ಸ್ಪರ್ಧೆಗೆ ಅನುಮತಿ ನೀಡದಂತೆ ರಾಜ್ಯ ಸರಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಬುಧವಾರಕ್ಕೆ ಮುಂದೂಡಿದೆ. ಈ ವಿಚಾರವಾಗಿ ಪೀಪಲ್‌ ಫಾರ್‌ ದಿ ಎಥಿಕಲ್‌ ಟ್ರೀಟ್ಮೆಂಟ್ ಆಫ್ ಎನಿಮಲ್ಸ್ (ಪೆಟಾ) ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ. ಅರವಿಂದ್‌ ಅವರಿದ್ದ ವಿಭಾಗೀಯ ನ್ಯಾಯಪೀಠ

ಕಂಬಳ ಪ್ರಶ್ನಿಸಿ ಇಂದು ಅರ್ಜಿ ವಿಚಾರಣೆ..! Read More »

ಕರ್ನಾಟಕ
Scroll to Top