newskadaba

Crime

ಬೆಳ್ಳಾರೆ: ಪಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನ- ದೂರು ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ, ಅ. 14. ಮಹಿಳೆ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿರುವ ಕುರಿತು ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲರ್ಪೆ ನಿವಾಸಿ ಮಹಿಳೆಯೋರ್ವರು ಶನಿವಾರದಂದು ರಾತ್ರಿ ಮನೆಯಲ್ಲಿ ಮಲಗಿದ್ದ ಸಂದರ್ಭ ಮಹಿಳೆಯ ಬಾವ ಶಂಕರ ಅವರು ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಲಾಗಿದೆ. ಗಂಭೀರ ಗಾಯಗೊಂಡಿರುವ ಮಹಿಳೆಯನ್ನು ಸಂಬಂಧಿಕರು ಸುಳ್ಯದ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬೆಂಕಿ ಹಚ್ಚಿರುವ […]

ಬೆಳ್ಳಾರೆ: ಪಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ರೈಲು ಢಿಕ್ಕಿ ಹೊಡೆದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 14. ರೈಲು ಡಿಕ್ಕಿಯಾಗಿ ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯೋರ್ವನ ಮೃತದೇಹ ಬಿಸಿರೋಡಿನ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಮೃತಪಟ್ಟವರನ್ನು ಬಂಟ್ವಾಳ ‌ಕಾಮಾಜೆ ನಿವಾಸಿ ಕರುಣಾಕರ (35) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಮರದ ಕೆಲಸ ಮಾಡುತ್ತಿದ್ದ ಕರುಣಾಕರ ಅವರು ಮನೆಯ ಆಧಾರಸ್ತಂಭವಾಗಿದ್ದರು. ಸುಮಾರು 11 ಗಂಟೆಯ ವೇಳೆ ಬಿಜಾಪುರದಿಂದ ಮಂಗಳೂರಿಗೆ ಆಗಮಿಸುವ ರೈಲು ಡಿಕ್ಕಿಯಾಗಿರಿವುದಾಗಿ ತಿಳಿದುಬಂದಿದೆ. ಬಿಸಿರೋಡಿನ ರೈಲು ಸ್ಟೇಷನ್ ನ ಸಮೀಪದಲ್ಲಿ ಕುತ್ತಿಗೆ ಹಾಗೂ ದೇಹ ಎರಡು ಮಾರ್ಪಾಡು ಆಗಿರುವ ಸ್ಥಿತಿಯಲ್ಲಿ ಈತನ

ರೈಲು ಢಿಕ್ಕಿ ಹೊಡೆದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ನದಿ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಅ. 14 . ನದಿಗೆ ಇಳಿದಿದ್ದ ಯುವಕನೋರ್ವ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟ ಘಟನೆ ನೆರಿಯ ಗ್ರಾಮದಲ್ಲಿ ಸಂಭವಿಸಿದೆ.   ಮೃತ ಯುವಕನನ್ನು ನೆರಿಯ ಗ್ರಾಮದ ತೋಟತ್ತಾಡಿ ಪಿತ್ತಿಲು ನಿವಾಸಿ ಶಿವಕುಮಾರ್ ಎಮದು ಗುರುತಿಸಲಾಗಿದೆ. ಯುವಕ. ಈತ ಭಾನುವಾರದಂದು ಗೆಳೆಯರೊಂದಿಗೆ ಮೀನು ಹಿಡಿಯಲೆಂದು ನೆರಿಯ ಗ್ರಾಮದ ಎಸ್ಟೇಟ್ ಒಂದರ ಸಮೀಪ ನದಿಗೆ ಹೋಗಿದ್ದ ಎನ್ನಲಾಗಿದೆ. ನದಿಯಲ್ಲಿ ಸಂಜೆಯ ವೇಳೆ ನಾಪತ್ತೆಯಾಗಿದ್ದ ಈತನನ್ನು ಸ್ಥಳೀಯರ ನೇತೃತ್ವದಲ್ಲಿ ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ.

ನದಿ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಏಕಾಏಕಿ ಚಲಿಸಲಾರಂಭಿಸಿದ ಬೆಂಕಿ ಹೊತ್ತಿ ಉರಿಯುತ್ತಿದ್ದ ಕಾರು- ವಿಡಿಯೋ ವೈರಲ್..!

(ನ್ಯೂಸ್ ಕಡಬ) newskadaba.com ಅ. 14 . ಬೆಂಕಿ ಹೊತ್ತಿ ಉರಿಯುತ್ತಿದ್ದ ಕಾರೊಂದು ತನ್ನಿಂದ ತಾನಾಗಿಯೇ ಚಲಿಸಿರುವ ಘಟನೆ ರಾಜಸ್ಥಾನದ ಜೈಪುರದ ಅಜ್ಮೀರ್ ರಸ್ತೆಯ ಸುದರ್ಶನಪುರದ ಬಳಿ ನಡೆದಿದೆ. ಸದ್ಯ ಬೆಂಕಿಯೊಂದಿಗೆ ಕಾರು ಚಲಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವ್ಯಕ್ತಿಯೊಬ್ಬರು ಚಲಾಯಿಸಿಕೊಂಡು ಹೋಗುತ್ತಿದ್ದ ಕಾರಿನ ಎ.ಸಿ.ಯಲ್ಲಿ ಸಮಸ್ಯೆ ಕಾಣಿಸಿಕೊಂಡು ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ತಕ್ಷಣವೇ ಕಾರಿನಿಂದ ಚಾಲಕ ಕೆಳಗಿಳಿದಿದ್ದರು. ನೋಡನೋಡುತ್ತಿದ್ದಂತೆ ಬೆಂಕಿ ಧಗಧಗನೇ ಉರಿಯತೊಡಗಿದ್ದು, ಬಳಿಕ ಕಾರು ಇದ್ದಕ್ಕಿದ್ದಂತೆ ಮುಂದೆ ಚಲಿಸಿದೆ. ಇದರಿಂದ ಸುತ್ತಲೂ

ಏಕಾಏಕಿ ಚಲಿಸಲಾರಂಭಿಸಿದ ಬೆಂಕಿ ಹೊತ್ತಿ ಉರಿಯುತ್ತಿದ್ದ ಕಾರು- ವಿಡಿಯೋ ವೈರಲ್..! Read More »

ರಾಷ್ಟ್ರೀಯ ನ್ಯೂಸ್, ವೀಡಿಯೋ

ಚಾರ್ಮಾಡಿ ಘಾಟ್, ಮುಳ್ಳಯ್ಯನಗಿರಿ ಅಪಾಯಕಾರಿ ಪ್ರದೇಶ; 88 ಕಡೆ ಡೇಂಜರ್- ಸರ್ವೇ ವರದಿ

(ನ್ಯೂಸ್ ಕಡಬ) newskadaba.com ಅ. 14 . ಅಲ್ಲಲ್ಲಿ ಉಂಟಾಗುತ್ತಿರುವ ಭೂಕುಸಿತದಿಂದಾಗಿ ರಾಜ್ಯದ ಅಪಾಯಕಾರಿ ಪ್ರದೇಶಗಳ ಬಗ್ಗೆ ಪರೀಲನೆಗೆ ಸರಕಾರ ಆದೇಶಿಸಿದ್ದು, ಅದರಂತೆ ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತ ಸಾಲು, ಚಾರ್ಮಾಡಿ ಘಾಟಿಗಳು ಸಂಭಾವ್ಯ ಭೂಕುಸಿತದ ಅಪಾಯಕಾರಿ ತಾಣಗಳಾಗಿ ಪರಿಣಮಿಸಿವೆ ಎಂದು ಭೌಗೋಳಿಕ ಸರ್ವೆಯೊಂದು ವರದಿ ಮಾಡಿದೆ. ಈ ವರ್ಷದ ಮಳೆಗಾಲದಲ್ಲಿ ಅಂದರೆ ಜುಲೈ ತಿಂಗಳಿನಲ್ಲಿ ನಡೆದ ಕೇರಳದ ವಯನಾಡು ಗುಡ್ಡ ಕುಸಿತ ದುರಂತದ ಬಳಿಕ‌ ಕರ್ನಾಟಕದಲ್ಲಿಯೂ ಸಂಭಾವ್ಯ ಅಪಾಯಕರ ಪ್ರದೇಶಗಳ ಬಗ್ಗೆ ಪರಿಶೀಲನೆ ನಡೆಸುವಂತೆ

ಚಾರ್ಮಾಡಿ ಘಾಟ್, ಮುಳ್ಳಯ್ಯನಗಿರಿ ಅಪಾಯಕಾರಿ ಪ್ರದೇಶ; 88 ಕಡೆ ಡೇಂಜರ್- ಸರ್ವೇ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೃದಯಾಘಾತ- ಗ್ರಾಮ ಸಹಾಯಕ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಅ. 14. ಹೃದಯಘಾತದಿಂದಾಗಿ ಗ್ರಾಮ ಸಹಾಯಕರೋರ್ವರು ಮೃತಪಟ್ಟ ಘಟನೆ ರಾಮಕುಂಜ ಗ್ರಾಮದಿಂದ ವರದಿಯಾಗಿದೆ. ಮೃತಪಟ್ಟವರನ್ನು ರಾಮಕುಂಜ ಗ್ರಾಮದ ದೊಡ್ಡ ಉರ್ಕ ನಿವಾಸಿ, ರಾಮಕುಂಜ ಗ್ರಾಮ ಸಹಾಯಕ ಲಿಂಗಪ್ಪ ಗೌಡ ಎಂದು‌ ಗುರುತಿಸಲಾಗಿದೆ. ಇವರಿಗೆ ಐದು ದಿನದ ಹಿಂದೆ ಎದೆ ನೋವು ಕಾಣಿಸಿಕೊಂಡಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಂಡು ಮನೆಗೆ ವಾಪಸಾಗಿದ್ದರು. ಆದರೆ ಅ.13ರಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿರುವುದಾಗಿ ತಿಳಿದುಬಂದಿದೆ. ಲಿಂಗಪ್ಪ ಗೌಡ ಅವರು 30ಕ್ಕೂ ಹೆಚ್ಚು ವರ್ಷಗಳಿಂದ ರಾಮಕುಂಜ

ಹೃದಯಾಘಾತ- ಗ್ರಾಮ ಸಹಾಯಕ ನಿಧನ Read More »

ಕರಾವಳಿ

ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಚಿ. ದತ್ತರಾಜ್ ವಿಧಿವಶ

(ನ್ಯೂಸ್ ಕಡಬ) newskadaba.com ಅ. 14 . ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಚಿ.ದತ್ತರಾಜ್ ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಮೃತರಿಗೆ 87 ವರ್ಷ ವಯಸ್ಸಾಗಿತ್ತು. ಚಿ.ದತ್ತರಾಜ್, ಖ್ಯಾತ ಸಾಹಿತಿ ದಿ.ಚಿ.ಉದಯಶಂಕರ್ ಅವರ ಸಹೋದರ. ಡಾ. ರಾಜಕುಮಾರ್ ಅಭಿನಯದ ಕೆರಳಿದ ಸಿಂಹ, ಕಾಮನಬಿಲ್ಲು, ಅದೇ ಕಣ್ಣು, ಶೃತಿ ಸೇರಿದಾಗ, ಶಿವರಾಜಕುಮಾರ್ ಅಭಿನಯದ ಮೃತ್ಯುಂಜಯ, ಆನಂದ ಜ್ಯೋತಿ ಹಾಗೂ ಮಂಜುಳ ಅವರು ನಟಿಸಿದ್ದ ರುದ್ರಿ ಮುಂತಾದ ಚಿತ್ರಗಳನ್ನು ಚಿ.ದತ್ತರಾಜ್ ನಿರ್ದೇಶಿಸಿದ್ದರು‌. ಇಂದು ಮಧ್ಯಾಹ್ನ 1.30ಕ್ಕೆ ಹರಿಶ್ಚಂದ್ರ ಘಾಟ್‌ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಚಿ. ದತ್ತರಾಜ್ ವಿಧಿವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್
Crime

ಪ್ರಿಯಕರನೊಂದಿಗೆ ಸೇರಿ ಹೆತ್ತ ಮಕ್ಕಳನ್ನು ಕೊಂದ ಕ್ರೂರಿ ತಾಯಿ..!

(ನ್ಯೂಸ್ ಕಡಬ) newskadaba.com ಅ. 14 . ಪತಿಗೆ ಕೈ ಕೊಟ್ಟು ಪರಾರಿಯಾಗಿದ್ದ ಮಹಿಳೆಯೋರ್ವಳು ಪ್ರಿಯಕರನೊಂದಿಗೆ ಸೇರಿ ತಾನು ಜನ್ಮ ನೀಡಿದ್ದ ಕರುಳ ಕುಡಿಗಳನ್ನೇ ಕೊಲೆ ಮಾಡಿ ಸ್ಮಶಾನದಲ್ಲಿ ಹೂತು ಹಾಕಿರುವ ಘಟನೆ ರಾಮನಗರದ ಐಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ಡಿಜೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಟ್ಯಾನರಿ ರಸ್ತೆಯಲ್ಲಿರುವ ಎ.ಕೆ ಕಾಲೋನಿ ನಿವಾಸಿ 24 ವರ್ಷದ ಮಹಿಳೆ ತನ್ನ ಮೂರು ವರ್ಷ ಹಾಗೂ 11 ತಿಂಗಳ ಕರುಳ ಕುಡಿಗಳನ್ನೇ ಬಲಿ ಪಡೆದ ಕ್ರೂರಿ ತಾಯಿ.

ಪ್ರಿಯಕರನೊಂದಿಗೆ ಸೇರಿ ಹೆತ್ತ ಮಕ್ಕಳನ್ನು ಕೊಂದ ಕ್ರೂರಿ ತಾಯಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Crime

ನಾಪತ್ತೆಯಾಗಿದ್ದ ಬಾಲಕ ಸೆಫ್ಟಿಂಕ್ ಟ್ಯಾಂಕ್‌ ನಲ್ಲಿ ಶವವಾಗಿ ಪತ್ತೆ..!

(ನ್ಯೂಸ್ ಕಡಬ) newskadaba.com ಅ. 14 . ಸ್ನೇಹಿತರ ಜೊತೆ ಆಟವಾಡುತ್ತಿದ್ದ ಬಾಲಕ ನಾಪತ್ತೆಯಾಗಿ ಮೂರು ದಿನಗಳ ಬಳಿಕ ಮೃತದೇಹ ಪತ್ತೆಯಾಗಿರುವ ಘಟನೆ ಕಲಬುರಗಿ ನಗರ ಹೊರವಲಯದ ಕೋಟನೂರ (ಡಿ)ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ನಾಲ್ಕನೇ ತರಗತಿಯ ಹೇರೂರು(ಬಿ) ಗ್ರಾಮದ ಶೇಖರ ಶಾಣಪ್ಪ ಎಂದು ಗುರುತಿಸಲಾಗಿದೆ. ಕೋಟನೂರ(ಡಿ) ಗ್ರಾಮದಲ್ಲಿ ಅಪಾರ್ಟಮೆಂಟ್‌ ಗಳ ನಿರ್ಮಾಣಕ್ಕಾಗಿ ಹಾಕಲಾಗಿರುವ ಖಾಲಿ ಲೇಔಟ್ ನಲ್ಲಿ ನಿರ್ಮಾಣ ಮಾಡಲಾಗಿದ್ದ ಸೆಪ್ಟಿಂಕ್ ಟ್ಯಾಂಕ್‌ ಒಳಗೆ ಬಾಲಕನ ಮೃತದೇಹ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಮೃತ ಬಾಲಕ ಮೂಲತಃ ಹೇರೂರ

ನಾಪತ್ತೆಯಾಗಿದ್ದ ಬಾಲಕ ಸೆಫ್ಟಿಂಕ್ ಟ್ಯಾಂಕ್‌ ನಲ್ಲಿ ಶವವಾಗಿ ಪತ್ತೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top