newskadaba

Crime

ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಅನ್ಯಧರ್ಮದ ವ್ಯಕ್ತಿಗೆ ಹಲ್ಲೆ – ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

(ನ್ಯೂಸ್ ಕಡಬ) newskadaba.com ಅ. 12. ಬೆಂಗಳೂರಿನಿಂದ ಬರುತ್ತಿದ್ದ ರೈಲಿನಲ್ಲಿದ್ದ ಸುಳ್ಯದ ವ್ಯಕ್ತಿಯೋರ್ವರಿಗೆ ಅದೇ ರೈಲಿನಲ್ಲಿ ಬಂದ ನಾಲ್ವರು ಕಬಕ ಪುತ್ತೂರು ರೈಲು ನಿಲ್ದಾಣದಲ್ಲಿ ಹಲ್ಲೆ ನಡೆಸಿ ಪರಾರಿಯಾಗಿದ್ದು, ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ನಾಲ್ವರನ್ನು ಕೆಲವೇ ಕ್ಷಣಗಳಲ್ಲಿ ವಶಕ್ಕೆ ಪಡೆದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಬೆಂಗಳೂರಿನಿಂದ ಪುತ್ತೂರು ಮಾರ್ಗವಾಗಿ ಮಂಗಳೂರಿಗೆ ಹೋಗುತ್ತಿದ್ದ ರೈಲಿನಲ್ಲಿ ಕೆಲವರು ಗಲಾಟೆ ಮಾಡುತ್ತಿರುವುದಾಗಿ ವ್ಯಕ್ತಿಯೊಬ್ಬರು ರೈಲ್ವೇ ಪೊಲೀಸರಿಗೆ ನೀಡಿದ್ದ ಮಾಹಿತಿಯಂತೆ ಪೊಲೀಸರು ನಾಲ್ವರಿಗೆ ಎಚ್ಚರಿಕೆ ನೀಡಿದ್ದರು. ಆದರೆ ಪೊಲೀಸರಿಗೆ ದೂರು ನೀಡಿದ ವ್ಯಕ್ತಿಯನ್ನೇ […]

ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಅನ್ಯಧರ್ಮದ ವ್ಯಕ್ತಿಗೆ ಹಲ್ಲೆ – ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು Read More »

ಕರಾವಳಿ, ಕ್ರೈಮ್ ನ್ಯೂಸ್

ಮೈಸೂರು ದಸರಾ: ‘ಪ್ರಥಮ ಪ್ರಜೆ’ ಇಲ್ಲದೇ ನಡೆಯಲಿದೆ ಜಂಬೂ ಸವಾರಿ

(ನ್ಯೂಸ್ ಕಡಬ) newskadaba.com ಅ. 12. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಹಬ್ಬದ ಸಂಭ್ರಮ ಕಳೆಗಟ್ಟುತ್ತಿದ್ದು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಈಗಾಗಲೇ ಜನರ ಮನಸ್ಸನ್ನು ಸೆಳೆದಿದೆ. ಇಂದು ದಸರಾ ಹಬ್ಬದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಇದೇ ಮೊದಲ ಬಾರಿಗೆ ಮೈಸೂರಿನ ‘ಪ್ರಥಮ ಪ್ರಜೆ’ ಮೇಯರ್ ಇಲ್ಲದೇ ಜಂಬೂ ಸವಾರಿ ನಡೆಯಲಿದೆ. ಶನಿವಾರದಂದು (ಇಂದು) ಅರಮನೆ ಆವರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಸಾಹಿತಿ ಡಾ. ಹಂಪನಾ ಅವರು ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ

ಮೈಸೂರು ದಸರಾ: ‘ಪ್ರಥಮ ಪ್ರಜೆ’ ಇಲ್ಲದೇ ನಡೆಯಲಿದೆ ಜಂಬೂ ಸವಾರಿ Read More »

ಕರ್ನಾಟಕ

ಜಗತ್ ಪ್ರಸಿದ್ಧ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ

(ನ್ಯೂಸ್ ಕಡಬ)newskadaba.com, ಅ. 12 ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಅರಮನೆ ಕೋಟೆ ಆಂಜನೇಯಸ್ವಾಮಿ ದೇವಾಲಯ ಎದುರು ನಂದಿಧ್ವಜಕ್ಕೆ ಪೂಜೆ ನೆರವೇರಿದ ನಂತರ ವಿಜಯದಶಮಿ ಮೆರವಣಿಗೆ ಪ್ರಾರಂಭವಾಗಲಿದೆ. 750 ಕೆಜಿ ತೂಕದ ಅಂಬಾರಿ ಒಳಗೆ ಪ್ರತಿಷ್ಠಾಪಿಸಲಾಗಿರುವ ತಾಯಿ ಚಾಮುಂಡೇಶ್ವರಿ ದೇವಿಯನ್ನು ಹೊತ್ತು ಅಭಿಮನ್ಯು ಆನೆ ರಾಜಬೀದಿಗಳಲ್ಲಿ ಸಾಗಲಿದ್ದಾನೆ. ಬೆಳಗ್ಗೆ 8ಕ್ಕೆ ಚಾಮುಂಡಿ ಬೆಟ್ಟದಿಂದ ಉತ್ಸವ ಮೂರ್ತಿ ಮೆರವಣಿಗೆ ಮೂಲಕ ಅರಮನೆಗೆ ಆಗಮಿಸಲಿದ್ದು, ಬಳಿಕ 10.15ಕ್ಕೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು

ಜಗತ್ ಪ್ರಸಿದ್ಧ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದಸರಾ: ಮೈಸೂರು-ಮಂಗಳೂರು ವಾಹನ ಸಂಚಾರದಲ್ಲಿ ಬದಲಾವಣೆ

(ನ್ಯೂಸ್ ಕಡಬ) newskadaba.com ಅ. 12. ನಾಡಹಬ್ಬ ಮೈಸೂರು ದಸರಾದ ಹಿನ್ನೆಲೆಯಲ್ಲಿ ಇಂದು (ಅ. 12) ಮಧ್ಯಾಹ್ನದಿಂದ ಭಾನುವಾರ ಬೆಳಗ್ಗಿನವರೆಗೆ ಮೈಸೂರು ಕಡೆಯಿಂದ  ಮಂಗಳೂರು ಕಡೆಗೆ ತೆರಳುವ ವಾಹನಗಳ ಮಾರ್ಗ ಬದಲಾಯಿಸಿ ಮಡಿಕೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮೈಸೂರಿನಿಂದ ಮಂಗಳೂರು, ಸುಳ್ಯ, ಪುತ್ತೂರು ಕಡೆಗೆ ತೆರಳುವ ವಾಹನ ಸವಾರರು ಬಿಳಿಕೆರೆ ಜಂಕ್ಷನ್ ನಿಂದ ಬಲಕ್ಕೆ ತಿರುಗಿ ಕೆ.ಆರ್.ನಗರ ಮಾರ್ಗವಾಗಿ ಹಾಸನ ಕಡೆಯಿಂದ ತೆರಳಬೇಕು. ಹಾಗೂ ಹುಣಸೂರಿನಿಂದ ಮಂಗಳೂರಿಗೆ ತೆರಳುವ ವಾಹನಗಳು ಕಟ್ಟೆಮಳಲವಾಡಿ, ಕೆ.ಆರ್.ನಗರ ಮಾರ್ಗವಾಗಿ ಹಾಸನ ಕಡೆಯಿಂದ

ದಸರಾ: ಮೈಸೂರು-ಮಂಗಳೂರು ವಾಹನ ಸಂಚಾರದಲ್ಲಿ ಬದಲಾವಣೆ Read More »

ಕರಾವಳಿ, ಕರ್ನಾಟಕ
crime, arrest, suspected

ಕೆಲಸದ ನೆಪದಲ್ಲಿ ಯುವತಿಯರನ್ನು ಕರೆಸಿ ವೇಶ್ಯಾವಾಟಿಕೆಗೆ ದೂಡುತ್ತಿದ್ದ ದಂಪತಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಅ. 12. ಇವೆಂಟ್ ಮ್ಯಾನೇಜ್ಮೆಂಟ್ ಕೆಲಸ ಕೊಡಿಸುವ ನೆಪದಲ್ಲಿ ಯುವತಿಯರನ್ನು ಕರೆತಂದು ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ದಂಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ಪಟ್ಟೆಗಾರ ಪಾಳ್ಯ ನಿವಾಸಿಗಳಾದ ಪ್ರಕಾಶ್ ಹಾಗೂ ಪಾರಿಜಾತ ಎಂದು ಗುರುತಿಸಲಾಗಿದೆ. ರಾಕೇಶ್, ಪೂಜಾ ಎಂದು ಹೆಸರು ಬದಲಿಸಿಕೊಂಡು ದಂಧೆ ನಡೆಸುತ್ತಿದ್ದರು ಇವರು, ಉದ್ಯೋಗ ಕೊಡಿಸುವ ನೆಪದಲ್ಲಿ ಉತ್ತರ ಕರ್ನಾಟಕದ ಬಡ ಹೆಣ್ಣು ಮಕ್ಕಳನ್ನು ಬೆಂಗಳೂರಿಗೆ ಕರೆದುಕೊಂಡು ಬಂದು ಕೆಲಸ ಕೊಡಿಸದೇ ಹಣದ ಆಮಿಷ ತೋರಿಸಿ

ಕೆಲಸದ ನೆಪದಲ್ಲಿ ಯುವತಿಯರನ್ನು ಕರೆಸಿ ವೇಶ್ಯಾವಾಟಿಕೆಗೆ ದೂಡುತ್ತಿದ್ದ ದಂಪತಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

9 ಮಂದಿ ಬಾಂಗ್ಲಾದೇಶಿಗರನ್ನು ವಶಕ್ಕೆ ಪಡೆದ ಮಲ್ಪೆ ಪೊಲೀಸರು

(ನ್ಯೂಸ್ ಕಡಬ) newskadaba.com ಅ. 12. ಒಂಭತ್ತು ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಮಲ್ಪೆ ಪರಿಸರದಲ್ಲಿ ನಡೆದಿದೆ. ನಕಲಿ ಆಧಾರ್ ಕಾರ್ಡ್ ನೊಂದಿಗೆ ಬಂದು ವಡಬಾಂಡೇಶ್ವರದ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ 9 ಮಂದಿಯನ್ನು ಮಲ್ಪೆ ಪೊಲೀಸರು ಶುಕ್ರವಾರದಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

9 ಮಂದಿ ಬಾಂಗ್ಲಾದೇಶಿಗರನ್ನು ವಶಕ್ಕೆ ಪಡೆದ ಮಲ್ಪೆ ಪೊಲೀಸರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಆಕ್ಟಿವಾ ಗೆ ಲಾರಿ ಢಿಕ್ಕಿ- ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಅ. 12. ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪಡೀಲ್ ಬಳಿ ಶುಕ್ರವಾರ ರಾತ್ರಿ ನಡೆದಿದೆ. ಸವಾರನನ್ನು ಅಡ್ಯಾರ್‌ ಪದವಿನ ಜೋಸೆಫ್ ಎಂದು ಗುರುತಿಸಲಾಗಿದೆ. ಪಡೀಲ್‌ನಿಂದ ಬಿ.ಸಿ‌.ರೋಡ್ ಕಡೆಗೆ ತೆರಳುತ್ತಿದ್ದ ಲಾರಿಯು ಆಗಷ್ಟೇ ಪೆಟ್ರೋಲ್ ತುಂಬಿಸಿ ಬಂಕ್‌ನಿಂದ ಹೊರಬರುತ್ತಿದ್ದ ಆಕ್ಟಿವಾಗೆ ಢಿಕ್ಕಿ ‌ಹೊಡೆದಿದ್ದು, ಪರಿಣಾಮ ಸವಾರ ಜೋಸೆಫ್ ಸ್ಥಳದಲ್ಲೇ ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ.

ಆಕ್ಟಿವಾ ಗೆ ಲಾರಿ ಢಿಕ್ಕಿ- ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಗೃಹಲಕ್ಷ್ಮೀ ಹಣದಿಂದ ಮಗನಿಗೆ ಬೈಕ್ ಕೊಡಿಸಿದ ತಾಯಿ..!

(ನ್ಯೂಸ್ ಕಡಬ) newskadaba.com ಅ. 12. ಸರಕಾರದ ಪಂಚ ಗ್ಯಾರಂಟಿಗಳ ಪೈಕಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಮೂಲಕ ದೊರೆತ ಹಣದಿಂದ ಮಹಿಳೆಯೊಬ್ಬರು ತನ್ನ ಮಗನಿಗೆ ಬೈಕ್‌ ಬುಕ್ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮದಲ್ಲಿ ನಡೆದಿದೆ. ಕೌಜಲಗಿ ಗ್ರಾಮದ ಬಾಗವ್ವಾ ಸಣ್ಣಕ್ಕಿ ಎಂಬ ಮಹಿಳೆಯೋರ್ವರು ತನ್ನ ಪುತ್ರನಿಗೆ ಬೈಕ್ ಖರೀದಿಸಲು ಕೂಡಿಟ್ಟಿದ್ದ ಗೃಹಲಕ್ಷ್ಮಿ ಹಣವನ್ನು ಡೌನ್​ ಪೇಮೆಂಟ್ ಆಗಿ ಕಟ್ಟಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಮಹಾನವಮಿ ಹಬ್ಬದಂದು ದ್ವಿಚಕ್ರ

ಗೃಹಲಕ್ಷ್ಮೀ ಹಣದಿಂದ ಮಗನಿಗೆ ಬೈಕ್ ಕೊಡಿಸಿದ ತಾಯಿ..! Read More »

ಕರ್ನಾಟಕ

ಲುಂಗಿ, ಬೆಡ್ ಶೀಟ್ ಬಳಸಿ ಪರಾರಿಯಾದ ಐವರು ಕೈದಿಗಳು..!

(ನ್ಯೂಸ್ ಕಡಬ) newskadaba.com ಅ. 12. ಬೆಡ್ ಶೀಟ್ ಮತ್ತು ಲುಂಗಿಯ ಸಹಾಯದಿಂದ 20 ಅಡಿಯ ಜೈಲು ಗೋಡೆಯನ್ನು ದಾಟಿ ಐದು ಮಂದಿ ಪೋಕ್ಸೋ ವಿಚಾರಣಾಧೀನ ಕೈದಿಗಳು ಪರಾರಿಯಾಗಿರುವ ಘಟನೆ ಗುವಾಹತಿಯಿಂದ ವರದಿಯಾಗಿದೆ. ಘಟನೆಗೆ ಸಂಸಂಬಂಧಿಸಿ ಜೈಲಾಧಿಕಾರಿ ಪ್ರಕಾಶ್ ಸೈಕಿಯಾ ಅವರನ್ನು ಅಮಾನತು ಮಾಡಲಾಗಿದೆ. ಗುವಾಹತಿಯಲ್ಲಿ ಸಹಾಯಕ ಜೈಲರ್ ಗಳಾಗಿದ್ದ ಇಬ್ಬರನ್ನು ತಾತ್ಕಾಲಿಕವಾಗಿ ಜೈಲು ನಿರ್ವಹಣೆಗೆ ನಿಯೋಜಿಸಲಾಗಿರುವುದಾಗಿ ತಿಳಿದುಬಂದಿದೆ. ಶುಕ್ರವಾರದಂದು ಮಧ್ಯರಾತ್ರಿ 1 ಗಂಟೆಯಿಂದ 2 ಗಂಟೆಯ ಅವಧಿಯಲ್ಲಿ ಈ ಕೈದಿಗಳು ಮೊರಿಗಾಂವ್ ಜಿಲ್ಲಾ ಕಾರಾಗೃಹದಿಂದ ಪರಾರಿಯಾಗಿದ್ದು,

ಲುಂಗಿ, ಬೆಡ್ ಶೀಟ್ ಬಳಸಿ ಪರಾರಿಯಾದ ಐವರು ಕೈದಿಗಳು..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೃದಯಾಘಾತ- ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಅ. 12. ಆಯಧ ಪೂಜೆಯ ಸಂದರ್ಭದಲ್ಲಿ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಮರತ ಯುವಕನನ್ನು ಅತ್ತಾಜೆ ರಮೇಶ್ ಭಟ್ ಮತ್ತು ಶಾರದಾ ದಂಪತಿಯ ಪುತ್ರ ಆದಿತ್ಯ ಭಟ್ (29) ಎಂದು ಗುರುತಿಸಲಾಗಿದೆ. ಆದಿತ್ಯರವರು ಶುಕ್ರವಾರದಂದು ತಮ್ಮ ನಿವಾಸದಲ್ಲಿ ನಡೆದ ಆಯುಧ ಪೂಜಾ ಆಚರಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ನಂತರ, ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಬಳಿಕ ಹೃದಯ ಸ್ತಂಭನಕ್ಕೆ ಕಾರಣವಾಯಿತು ಎನ್ನಲಾಗಿದೆ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಆದಿತ್ಯ ಅವರು ಜರ್ಮನಿಯಲ್ಲಿ ಸ್ವಂತ

ಹೃದಯಾಘಾತ- ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top