newskadaba

ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

(ನ್ಯೂಸ್ ಕಡಬ) newskadaba.com ಅ. 09. 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಸಮಾರಂಭ ದೆಹಲಿಯಲ್ಲಿ ನಡೆದಿದ್ದು, ರಿಷಬ್ ಶೆಟ್ಟಿ, ನಿತ್ಯಾ ಮೆನನ್ ಅವರು ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯಲ್ಲಿ ರಾಷ್ಟ್ರ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ. ಅತ್ಯುತ್ತಮ ಮನರಂಜನಾ ಚಿತ್ರ ‘ಕಾಂತಾರ’ ಮತ್ತು ಚಿತ್ರದ ನಟ ರಿಷಬ್ ಶೆಟ್ಟಿಗೆ ರಾಷ್ಟ್ರ ಪ್ರಶಸ್ತಿ ನೀಡಲಾಗಿದೆ. ಅದಷ್ಟೇ ಅಲ್ಲ, ಅತ್ಯುತ್ತಮ ಪ್ರಾದೇಶಿಕ ಸಿನಿಮಾ, ಅತ್ಯುತ್ತಮ ಸಾಹಸ ನಿರ್ದೇಶನ ವಿಭಾಗದಲ್ಲಿ ‘ಕೆಜಿಎಫ್ 2’ಗೆ ರಾಷ್ಟ್ರಪ್ರಶಸ್ತಿ ದಕ್ಕಿದ್ದು, […]

ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ

ಎಮೋಷನ್- ಹಾಡಲಾಗದೇ ಸ್ಟೇಜ್ ಮೇಲೆ ಕೈ ಮುಗಿದು ಕುಳಿತ ಬಾದ್ ಶಾ..!

(ನ್ಯೂಸ್ ಕಡಬ) newskadaba.com ಅ. 09. ಬಾಲಿವುಡ್ ಗಾಯಕ ಬಾದ್ ಶಾ ಅವರು ಅಕ್ಟೋಬರ್ 8 ರಂದು ಮೈಸೂರಿನಲ್ಲಿ ನಡೆದ ಯುವ ದಸರಾ ಕಾರ್ಯಕ್ರಮದಲ್ಲಿ ಕನ್ನಡದ ಒಂದು ಹಾಡನ್ನು ಕೇಳಿ ಹಾಡಲು ಆಗದೇ ಸ್ಟೇಜ್ ಮೇಲೆ ಒಂದು ಕಡೆ ಕೈ ಮುಗಿದು ಕುಳಿತ ಘಟನೆ ವರದಿಯಾಗಿದೆ. ಗಾಯಕ ಬಾದ್‌ಶಾ ಅವರು ‘ಯುವ ದಸರಾ’ ಕಾರ್ಯಕ್ರಮದಲ್ಲಿ ಕನ್ನಡದಲ್ಲಿ ಮಾತನಾಡಿದ್ದು, ‘ಯಾರೂ ಸ್ಟಾರ್ ಅಲ್ಲ, ಯಾರು ಸೂಪರ್ ಸ್ಟಾರ್ ಕೂಡಾ ಅಲ್ಲ. ನಾನು ಸಿಂಗರ್ ಅಲ್ಲ, ನಾನು ಬರಹಗಾರ. ನನಗೆ

ಎಮೋಷನ್- ಹಾಡಲಾಗದೇ ಸ್ಟೇಜ್ ಮೇಲೆ ಕೈ ಮುಗಿದು ಕುಳಿತ ಬಾದ್ ಶಾ..! Read More »

ಕರ್ನಾಟಕ

ರತನ್ ಟಾಟಾ ನಿಧನ- ಇಂದು ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

(ನ್ಯೂಸ್ ಕಡಬ) newskadaba.com ಮುಂಬೈ, ಅ. 09. ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಅನಾರೋಗ್ಯ ಹಿನ್ನೆಲೆ ಮುಂಬೈನ ಬ್ರೀಚ್ ಕಾಂಡಿ ಆಸ್ಪತ್ರೆಗೆ ದಾಖಲಾಗಿದ್ದ86 ವರ್ಷದ ಕೈಗಾರಿಕೋದ್ಯಮಿ ರತನ್ ಟಾಟಾ ಬುಧವಾರ ಕೊನೆಯುಸಿರೆಳೆದಿದ್ದಾರೆ. ಈ ಹಿನ್ನೆಲೆ ಅನೇಕ ಗಣ್ಯರು, ರಾಜಕಾರಣಿಗಳು ರತನ್ ಟಾಟಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಅನಾರೋಗ್ಯ ಹಿನ್ನೆಲೆ ಮುಂಬೈನ ಬ್ರೀಚ್ ಕಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಕೈಗಾರಿಕೋದ್ಯಮಿ ರತನ್ ಟಾಟಾ ಬುಧವಾರ ಕೊನೆಯುಸಿರೆಳೆದಿದ್ದಾರೆ. ಈ ಹಿನ್ನೆಲೆ ಅನೇಕ ಗಣ್ಯರು,

ರತನ್ ಟಾಟಾ ನಿಧನ- ಇಂದು ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ Read More »

ರಾಷ್ಟ್ರೀಯ ನ್ಯೂಸ್

ಶಾಂತಿನಗರ ಸರ್ಕಾರಿ ಶಾಲೆಯಲ್ಲಿ ತುಳುನಾಡ ಆಚರಣೆ; ಕೊರಳ ಪರ್ಬ, ಹೊಸ ಅಕ್ಕಿ ಊಟ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಅ. 09. ತುಳುನಾಡ ಸಂಪ್ರದಾಯಗಳು, ಆಚರಣೆಗಳು ತೆರೆಮರೆಗೆ ಸರಿಯುತ್ತಿದೆ ಎನ್ನುವ ಅಪವಾದದ ಕಾಲಘಟ್ಟದಲ್ಲಿ ತುಳುನಾಡ ಆಚರಣೆಗಳನ್ನು ಸಂಪ್ರದಾಯ ಬದ್ದವಾಗಿ ಕಡಬ ತಾಲೂಕು ಗೋಳಿತೊಟ್ಟು ಗ್ರಾಮದ ಶಾಂತಿನಗರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತುಳುನಾಡಿನ ವಿವಿಧ ಆಚರಣೆಗಳನ್ನು ಆಚರಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯ ನಡೆಯುತ್ತಿದೆ. ಅಂತೆಯೇ ಸೋಮವಾರ ಹೊಸ ಅಕ್ಕಿ ಊಟ, ಕೊರಳ ಪರ್ಬವನ್ನು ಗ್ರಾಮೀಣ ಸೊಗಡಿನಲ್ಲಿ ಆಚರಿಸಲಾಗಿದೆ. ಮಕ್ಕಳು ಕೃಷಿ ಪದ್ದತಿಯನ್ನು ಭವಿಷ್ಯದಲ್ಲಿ ಅಳವಡಿಸಿಕೊಳ್ಳುತ್ತಾರೆ ಎನ್ನುವ ಅಚಲ ನಂಬಿಕೆಯಿಂದ ಶಾಲಾಭಿವೃದ್ದಿ ಸಮಿತಿ,

ಶಾಂತಿನಗರ ಸರ್ಕಾರಿ ಶಾಲೆಯಲ್ಲಿ ತುಳುನಾಡ ಆಚರಣೆ; ಕೊರಳ ಪರ್ಬ, ಹೊಸ ಅಕ್ಕಿ ಊಟ ಆಚರಣೆ Read More »

ಕರಾವಳಿ

ಉಳಿಯ ದ್ವೀಪ- ಮರಳುಗಾರಿಕೆ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ಪಾವೂರು ಉಳಿಯ ಕುದ್ರು ಪರಿಸರದಲ್ಲಿ ವಾಸಿಸುತ್ತಿರುವ ನಾಗರಿಕರಿಗೆ, ಪರಿಸರಕ್ಕೆ ಹಾಗೂ ಇತರೆ ಸಂಪನ್ಮೂಲಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮತ್ತು ಅಕ್ರಮ ಗಣಿಗಾರಿಕೆ ತಡೆಗಟ್ಟುವ ನಿಟ್ಟಿನಲ್ಲಿ ಉಳಿಯ ದ್ವೀಪದ ಸುತ್ತಮುತ್ತಲಿನ 2 ಕಿ.ಮೀ ವ್ಯಾಪ್ತಿಯ ಪ್ರದೇಶದಲ್ಲಿ ಎಲ್ಲಾ ರೀತಿಯ ಮರಳುಗಾರಿಕೆಯನ್ನು ನಿಷೇಧಿಸಿ ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್ ಆದೇಶ ಹೊರಡಿಸಿದ್ದಾರೆ. ನಿಷೇಧಿತ ಪ್ರದೇಶದ ವ್ಯಾಪ್ತಿಯಲ್ಲಿ ಸಂಚಾರ ದೋಣಿಗಳ ಹೊರತಾಗಿ ಇತರೆ ಎಲ್ಲಾ ದೋಣಿ ಅಥವಾ ಯಂತ್ರಗಳ ಮೂಲಕ ಮರಳು ಉತ್ಪನ್ನದ ಸಾಗಾಟ

ಉಳಿಯ ದ್ವೀಪ- ಮರಳುಗಾರಿಕೆ ನಿಷೇಧ Read More »

ಕರಾವಳಿ

ಇಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ರಾಷ್ಟ್ರೀಯ ಸೇವಾ ಯೋಜನೆ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮವು  ಅಕ್ಟೋಬರ್ 10ರಂದು  ಬೆಳಿಗ್ಗೆ 10.30 ಗಂಟೆಗೆ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ, ಮಂಗಳೂರು ನಗರ ಪೊಲೀಸ್ ಆಯುಕ್ತ

ಇಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ Read More »

ಕರಾವಳಿ

ಧಾರ್ಮಿಕ ಸಭಾ ಕಾರ್ಯಕ್ರಮ ಹಿನ್ನೆಲೆ- ಮದ್ಯ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲದಲ್ಲಿ ಅಕ್ಟೋಬರ್ 11ರಂದು ನಡೆಯುವ ಆಯುಧ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬೆಳಿಗ್ಗೆ 6ರಿಂದ ಮಧ್ಯರಾತ್ರಿಯವರೆಗೆ ನೆಟ್ಟಣಿಗೆ ಮುಡ್ನೂರು ವ್ಯಾಪ್ತಿಯ ಮದ್ಯದಂಗಡಿಗಳನ್ನು ಮುಚ್ಚಲು ಹಾಗೂ ಈ ಸಮಯದಲ್ಲಿ ಎಲ್ಲಾ ಶೇಂದಿ ಅಂಗಡಿ ಮತ್ತು ಎಲ್ಲಾ ವಿಧದ

ಧಾರ್ಮಿಕ ಸಭಾ ಕಾರ್ಯಕ್ರಮ ಹಿನ್ನೆಲೆ- ಮದ್ಯ ನಿಷೇಧ Read More »

ಕರಾವಳಿ

2025ನೇ ಫೆಬ್ರವರಿ 18 ರಿಂದ 23ರ ತನಕ ಕುಂತೂರು-ಬೇಳ್ಪಾಡಿ ದರ್ಗಾ ಶರೀಫ್ ಉರೂಸ್ ಸಮಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ಸುಮಾರು 200 ವರ್ಷಗಳ ಇತಿಹಾಸವಿರುವ ಕುಂತೂರು-ಬೇಳ್ಪಾಡಿ ದರ್ಗಾ ಶರೀಫ್ ಎ.ಬಿ  ಜುಮ್ಮಾ ಮಸೀದಿಯ ಆಡಳಿತಕ್ಕೆ ಒಳಪಟ್ಟಿದ್ದು ಇಲ್ಲಿ ಮೂರು  ವರ್ಷಕ್ಕೊಮ್ಮೆ ನಡೆಯುವ ಅದ್ಧೂರಿ  ಉರೂಸ್ ಸಮಾರಂಭ 2025 ನೇ ಫೆಬ್ರವರಿ 18 ರಿಂದ 23 ತನಕ ಕುಂತೂರು-ಬೇಳ್ಪಾಡಿ ದರ್ಗಾ ಶರೀಫ್ ನ ವಠಾರದಲ್ಲಿ ನಡೆಯಲಿದೆ ಎಂದು ಉರೂಸ್ ಮಾರಂಭದ ವಕ್ತಾರ ಅಬ್ಬಾಸ್ ಕುಂತೂರು ಹೇಳಿದರು. ಅವರು  ಕಡಬದಲ್ಲಿ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜನವರಿ ಫೆಬ್ರವರಿ ತಿಂಗಳಲ್ಲಿ ಎಲ್ಲಾ ಕಡೆ ಊರೂಸ್‌ಗಳನ್ನು

2025ನೇ ಫೆಬ್ರವರಿ 18 ರಿಂದ 23ರ ತನಕ ಕುಂತೂರು-ಬೇಳ್ಪಾಡಿ ದರ್ಗಾ ಶರೀಫ್ ಉರೂಸ್ ಸಮಾರಂಭ Read More »

ಕರಾವಳಿ

ವಿಧಾನ ಪರಿಷತ್ ಚುನಾವಣೆ- ನಿಷೇದಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆಯುವ ಉಪಚುನಾವಣೆ ಗೆ ಮತದಾನವು ಅಕ್ಟೋಬರ್ 21 ರಂದು ನಡೆಯಲಿದ್ದು ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪತವಾದ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ ಅಕ್ಟೋಬರ್ 19ರಂದು ಸಂಜೆ 4ಗಂಟೆಯಿಂದ ಅಕ್ಟೋಬರ್ 21ರಂದು ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಜಿಲ್ಲೆಯ ಒಟ್ಟು 234 ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ

ವಿಧಾನ ಪರಿಷತ್ ಚುನಾವಣೆ- ನಿಷೇದಾಜ್ಞೆ ಜಾರಿ Read More »

ಕರಾವಳಿ

ಅ.18ರಂದು ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆಯುವ ಉಪಚುನಾವಣಾ ಕರ್ತವ್ಯಕ್ಕೆ ನೇಮಕಗೊಂಡ ಪಿಆರ್‍ಓ ಮತ್ತು ಎಪಿಆರ್‍ಓ ಗಳಿಗೆ ಮೈಕ್ರೋ ವೀಕ್ಷಕರ ತರಬೇತಿ ಕಾರ್ಯಕ್ರಮ ಅಕ್ಟೋಬರ್ 18ರಂದು ನಡೆಯಲಿದೆ. ಮೈಕ್ರೋ ವೀಕ್ಷಕರುಗಳಿಗೆ ತರಬೇತಿ ನೀಡುವ ಸಮಯ ಮತ್ತು ಸ್ಥಳ ಅಕ್ಟೋಬರ್ 18ರಂದು ಮಧ್ಯಾಹ್ನ 12 ರಿಂದ 1 ಗಂಟೆಯವರೆಗೆ ಚುನಾವಣಾ ಕರ್ತವ್ಯಕ್ಕೆ ನೇಮಕಗೊಂಡ ಜಿಲ್ಲೆಯ ಎಲ್ಲಾ ಮೈಕ್ರೋ ವೀಕ್ಷಕರುಗಳಿಗೆ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ತರಬೇತಿ ನಡೆಯಲಿದೆ.

ಅ.18ರಂದು ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ Read More »

ಕರಾವಳಿ
Scroll to Top