newskadaba

ಕಡಬ ತಾಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಎನ್.ಕರುಣಾಕರ ಗೋಗಟೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಅ. 09. ಕನ್ನಡ ಸಾಹಿತ್ಯ ಪರಿಷತ್ ಕಡಬ ತಾಲೂಕು ಘಟಕದ ನೇತೃತ್ವದಲ್ಲಿ ಕುಂತೂರು ಪದವು ಸಂತಜಾರ್ಜ್ ಅನುದಾನಿತ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ನ.30ರಂದು ನಡೆಯಲಿರುವ ಕಡಬ ತಾಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಬರಹಗಾರ, ಸಾಮಾಜಿಕ ಮುಂದಾಳು ಎನ್.ಕರುಣಾಕರ ಗೋಗಟೆ ಹೊಸಮಠ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ| ಎಂ.ಪಿ. ಶ್ರೀನಾಥ್ ತಿಳಿಸಿದ್ದಾರೆ. ಹಳ್ಳಿ ಬದುಕಿನ ಚಿತ್ರಣ ನೀಡುವ ಕೃತಿ ‘ಒಂದು ಸೇತುವೆಯ […]

ಕಡಬ ತಾಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಎನ್.ಕರುಣಾಕರ ಗೋಗಟೆ ಆಯ್ಕೆ Read More »

ಕರಾವಳಿ

ವಿಧಾನ ಪರಿಷತ್ ಚುನಾವಣೆ ಸಿದ್ಧತೆ- ವೀಕ್ಷಕರಿಂದ ಪರಿಶೀಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ವಿಧಾನಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆಯುವ ಉಪಚುನಾವಣೆಗಳ ಸಿದ್ಧತೆಗಳನ್ನು ಚುನಾವಣಾ ಆಯೋಗದ ವೀಕ್ಷಕರಾದ ಪಂಕಜ್ ಕುಮಾರ್ ಪಾಂಡೆ ಅವರು ಪರಿಶೀಲಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದ ಅವರು ಮತಗಟ್ಟೆಗಳ ಸಿದ್ಧತೆ, ಚುನಾವಣಾ ಸಿಬ್ಬಂದಿಗಳ ನೇಮಕ, ಮತ ಪತ್ರಗಳ ಮುದ್ರಣ, ಮತದಾರರ ಪಟ್ಟಿ ಹಾಗೂ ಇತರ ಚುನಾವಣೆ ಸಿದ್ಧತೆಗಳ ಮಾಹಿತಿ ಪಡೆದರು. ಮತಗಟ್ಟೆ ಸಿಬ್ಬಂದಿಗಳಿಗೆ ತರಬೇತಿ ಹಾಗೂ ಮತ ಎಣಿಕೆ ಕೇಂದ್ರದಲ್ಲಿ ಕೈಗೊಳ್ಳಬೇಕಾದ ವ್ಯವಸ್ಥೆಗಳ ಬಗ್ಗೆ ಅವರು

ವಿಧಾನ ಪರಿಷತ್ ಚುನಾವಣೆ ಸಿದ್ಧತೆ- ವೀಕ್ಷಕರಿಂದ ಪರಿಶೀಲನೆ Read More »

ಕರಾವಳಿ

ಬೃಹತ್‌ ಡ್ರಗ್ಸ್‌ ಜಾಲ ಮಟ್ಟ ಹಾಕಿದ ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆಗೆ ಸಂಸದ ಕ್ಯಾ. ಚೌಟ ಶ್ಲಾಘನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ಮಂಗಳೂರು ನಗರ ಸೇರಿದಂತೆ ವಿವಿಧ ರಾಜ್ಯಗಳಿಗೆ ಡ್ರಗ್ಸ್‌ ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಮೂಲದ ಪ್ರಜೆಯನ್ನು ಬಂಧಿಸಿ 6 ಕೋಟಿ ರೂ. ಮೌಲ್ಯದ ಎಂಡಿಎಂಎ ವಶಪಡಿಸಿಕೊಂಡಿರುವ ಮಂಗಳೂರಿನ ಸಿಸಿಬಿ ಪೊಲೀಸರ ಯಶಸ್ವಿ ಕಾರ್ಯಾಚರಣೆಗೆ ದ.ಕ. ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಮಾದಕ ವಸ್ತುಗಳನ್ನು ಪತ್ತೆ ಮಾಡಿ ನಟೋರಿಯಸ್‌ ಡ್ರಗ್ಸ್‌ ಪೆಡ್ಲರ್‌ ನನ್ನು ಬಂಧಿಸಿರುವುದರ ಹಿನ್ನೆಲೆ ಪ್ರತಿಕ್ರಿಯಿಸಿರುವ ಕ್ಯಾ.

ಬೃಹತ್‌ ಡ್ರಗ್ಸ್‌ ಜಾಲ ಮಟ್ಟ ಹಾಕಿದ ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆಗೆ ಸಂಸದ ಕ್ಯಾ. ಚೌಟ ಶ್ಲಾಘನೆ Read More »

ಕರಾವಳಿ

ಪರಿಶಿಷ್ಟ ಜಾತಿ: ಯುವಜನರಿಗೆ ತರಬೇತಿ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಯುವಜನರಿಗೆ ಹೊಲಿಗೆ ತರಬೇತಿ ಹಾಗೂ ವಿಡಿಯೋಗ್ರಾಫಿ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಪರಿಶಿಷ್ಟ ಜಾತಿ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಹೊಲಿಗೆ ತರಬೇತಿ ಶಿಬಿರ – (20 ದಿನಗಳು), ಅಕ್ಟೋಬರ್ 7ರಿಂದ 26ರ ವರೆಗೆ ನಡೆಯಲಿದ್ದು, ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ.(ಪಾಸ್/ಫೇಲ್) 18 ರಿಂದ 40ವರ್ಷ ವಯಸ್ಸಾಗಿರಬೇಕು. ವಿಡಿಯೋಗ್ರಾಫಿ ತರಬೇತಿ ಶಿಬಿರ – (12 ದಿನಗಳು) ನವೆಂಬರ್ 15ರಿಂದ 26ರ

ಪರಿಶಿಷ್ಟ ಜಾತಿ: ಯುವಜನರಿಗೆ ತರಬೇತಿ ಶಿಬಿರ Read More »

ಕರಾವಳಿ

ಅಲ್ಪಸಂಖ್ಯಾತರ ಹಾಸ್ಟೆಲ್ ಪ್ರವೇಶ- ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಅ. 09. 2024-25ನೇ ಶೈಕ್ಷಣಿಕ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪಿ.ಯು.ಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸಿನ, ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತ್ತಿಪರ ಕೋರ್ಸು ಮತ್ತು ಸ್ನಾತಕೋತ್ತರ ಕೋರ್ಸುಗಳ ವಿದ್ಯಾರ್ಥಿಗಳಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದಲ್ಲಿ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ನವೆಂಬರ್ 11 ರವರೆಗೆ ಅವಧಿ ವಿಸ್ತರಿಸಲಾಗಿದೆ. ಎಸ್.ಎಚ್.ಪಿ (ರಾಜ್ಯ ಹಾಸ್ಟೆಲ್ ಪೋರ್ಟಲ್) shp.karnataka.gov.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿಗಳನ್ನು ಸಲ್ಲಿಸುವ ವಿಧಾನ ಮತ್ತು

ಅಲ್ಪಸಂಖ್ಯಾತರ ಹಾಸ್ಟೆಲ್ ಪ್ರವೇಶ- ಅವಧಿ ವಿಸ್ತರಣೆ Read More »

ಕರಾವಳಿ

ಎನ್ಐಟಿಕೆ- ಎಸ್ಎ.ಐಇಂಡಿಯಾ ಕರಾವಳಿ ಕರ್ನಾಟಕ ವಿಭಾಗ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮಂಗಳೂರು,ಅ. 09. ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕದಲ್ಲಿ ಕರ್ನಾಟಕದ ಕರಾವಳಿ ಪ್ರದೇಶದ ಎಂಜಿನಿಯರಿಂಗ್ ಸಮುದಾಯಕ್ಕೆ ಮಹತ್ವದ ಉತ್ತೇಜನ ನೀಡುವ ನಿಟ್ಟಿನಲ್ಲಿ, ಎಸ್‍ಎಇ ಇಂಡಿಯಾ (ಸೊಸೈಟಿ ಆಫ್ ಆಟೋಮೇಟಿವ್ ಎಂಜಿನಿಯರ್ಸ್ ಇಂಡಿಯಾ) ಕರಾವಳಿ ಕರ್ನಾಟಕ ವಿಭಾಗವನ್ನು ಉದ್ಘಾಟಿಸಲಾಯಿತು. ಈ ಹೊಸ ವಿಭಾಗವು ರಾಜ್ಯದ ಕರಾವಳಿ ಪ್ರದೇಶದಾದ್ಯಂತ ಆಟೋಮೋಟಿವ್ ಮತ್ತು ಏರೋಸ್ಪೇಸ್ ಕ್ಷೇತ್ರಗಳಲ್ಲಿ ನಾವೀನ್ಯತೆ, ಸಹಯೋಗ ಮತ್ತು ತಾಂತ್ರಿಕ ಅಭಿವೃದ್ಧಿಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಸೈಇಂಡಿಯಾ ಕರಾವಳಿ ಕರ್ನಾಟಕ ವಿಭಾಗವನ್ನು ಸ್ಥಾಪಿಸುವುದು ಆಟೋಮೋಟಿವ್ ಮತ್ತು

ಎನ್ಐಟಿಕೆ- ಎಸ್ಎ.ಐಇಂಡಿಯಾ ಕರಾವಳಿ ಕರ್ನಾಟಕ ವಿಭಾಗ ಉದ್ಘಾಟನೆ Read More »

ಕರಾವಳಿ

ಹಜ್ ಯಾತ್ರೆ-2025: ಆಯ್ಕೆಯಾದ ಯಾತ್ರಿಕರ ತಾತ್ಕಾಲಿಕ ಪಟ್ಟಿ ಪ್ರಕಟ

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 08. ಭಾರತೀಯ ಹಜ್ ಕಮಿಟಿ ಮೂಲಕ 2025ರಲ್ಲಿ ಹಜ್ ಯಾತ್ರೆ ಕೈಗೊಳ್ಳಲು ರಾಜ್ಯ ಹಜ್ ಸಮಿತಿ ಮೂಲಕ ಅರ್ಜಿ ಸಲ್ಲಿಸಿದವರ ಪೈಕಿ ಆಯ್ಕೆಯಾದ ಯಾತ್ರಿಕರ ತಾತ್ಕಾಲಿಕ ಪಟ್ಟಿ ಪ್ರಕಟಗೊಂಡಿದೆ. ಆಯ್ಕೆಯಾದ ಎಲ್ಲಾ ಯಾತ್ರಿಕರು ಆರಂಭದಲ್ಲಿ ಮುಂಗಡ ಹಜ್ ಮೊತ್ತ ರೂ.1,28,000, ಮರುಪಾವತಿಸಲಾಗದ ಸಂಸ್ಕರಣಾ ಶುಲ್ಕ 300 ರೂ. ಮತ್ತು ಇತರ ವೆಚ್ಚಗಳಿಗೆ 2,000 ರೂ. ಸೇರಿದಂತೆ ಒಟ್ಟು 1,30,300 ರೂ.ಗಳನ್ನು 2024 ಅಕ್ಟೋಬರ್ 8 ರಿಂದ ಅ.21ರೊಳಗಾಗಿ ಪಾವತಿಸಬೇಕಾಗಿದೆ. 1,30,300 ರೂ.

ಹಜ್ ಯಾತ್ರೆ-2025: ಆಯ್ಕೆಯಾದ ಯಾತ್ರಿಕರ ತಾತ್ಕಾಲಿಕ ಪಟ್ಟಿ ಪ್ರಕಟ Read More »

ಕರಾವಳಿ

ರಾಜ್ಯ ಎಸ್ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ ರಾಜ್ಯ ನಿರ್ದೇಶಕರಾಗಿ ಅಬ್ದುಲ್ ಸಲಾಂ ಚಿತ್ತೂರು ನೇಮಕ

(ನ್ಯೂಸ್ ಕಡಬ)newskadaba.com ಕುಂದಾಪುರ, ಅ. 08. ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ಕೇಂದ್ರ ವೇದಿಕೆಯ ಇದರ ರಾಜ್ಯ ನಿರ್ದೇಶಕರಾಗಿ ಅಬ್ದುಲ್ ಸಲಾಂ ಚಿತ್ತೂರು ನೇಮಕ ಮಾಡಲಾಗಿದೆ. ಕುಂದಾಪುರ ತಾಲೂಕು ಉಡುಪಿ ಜಿಲ್ಲೆ ಇವರನ್ನು ಕರ್ನಾಟಕ ರಾಜ್ಯ ಎಸ್ಡಿಎಂಸಿ ಸಮನ್ವಯ ಕೇಂದ್ರ ವೇದಿಕೆಯ ಸಂಚಾಲಕ ಮೊಯಿದಿನ್ ಕುಟ್ಟಿ ಅವರು ಮುಂದಿನ ಅದೇಶದವರೆಗೆ ನೇಮಕ ಮಾಡಿ ಆದೇಶಿಸಲಾಗಿದೆ.  

ರಾಜ್ಯ ಎಸ್ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ ರಾಜ್ಯ ನಿರ್ದೇಶಕರಾಗಿ ಅಬ್ದುಲ್ ಸಲಾಂ ಚಿತ್ತೂರು ನೇಮಕ Read More »

ಕರಾವಳಿ

ವಿದ್ಯುತ್ ಆಘಾತಕ್ಕೆ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಅ. 05.  ವಿದ್ಯುತ್ ಆಘಾತಕ್ಕೊಳಗಾಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕೊಯಿಲ ಗ್ರಾಮದ ವಳಕಡಮದ ಕೆರಂತೇಳು ಎಂಬಲ್ಲಿ ಅ.4ರಂದು ನಡೆದಿದೆ. ಮೃತಪಟ್ಟವರನ್ನು ಬಾಬು (52) ಎಂದು ಗುರುತಿಸಲಾಗಿದೆ. ಮನೆಯಲ್ಲಿ ವಿದ್ಯುತ್ ಸ್ವಿಚ್ ಬೋರ್ಡ್‍ಗೆ ಕೈ ಹಾಕಿದಾಗ ಅದರಲ್ಲಿ ವಿದ್ಯುತ್ ಪ್ರವಹಿಸಿ, ಇವರು ವಿದ್ಯುತ್ ಆಘಾತಕ್ಕೊಳಗಾದರು. ತಕ್ಷಣವೇ ಇವರ ಸಂಬಂಧಿಕರು ಅವರನ್ನು ಉಪ್ಪಿನಂಗಡಿಯ ಸಮುದಾಯ ಆಸ್ಪತ್ರೆಗೆ ಕರೆ ತಂದಿದ್ದು, ಇಲ್ಲಿನ ಸಿಬ್ಬಂದಿ ಅವರನ್ನು ತಕ್ಷಣವೇ ಪುತ್ತೂರು ಆಸ್ಪತ್ರೆಗೆ ಸಾಗಿಸಿದ್ದು, ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು

ವಿದ್ಯುತ್ ಆಘಾತಕ್ಕೆ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಂದೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾಬು ಶೆಟ್ಟಿ ಆಯ್ಕೆ

(ನ್ಯೂಸ್ ಕಡಬ)newskadaba.com ಬೈಂದೂರು, ಅ. 04. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾಬು ಶೆಟ್ಟಿ ಅವರು ಇಂದು ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆಯಾಗಿದ್ದು ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ಇಂದು ದೇವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ, ಸಹಾಯಕ ಆಯುಕ್ತರಾದ ಮಹೇಶ್ಚಂದ್ರ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ವ್ಯವಸ್ಥಾಪನ ಸಮಿತಿ ಸದಸ್ಯರಾದ ಪ್ರಧಾನ ಅರ್ಚಕರಾದ ನಿತ್ಯಾನಂದ ಅಡಿಗ, ಮಹಾಲಿಂಗ ವೆಂಕನಾಯ್ಕ್, ಶ್ರೀಮತಿ ಧನಾಕ್ಷಿ, ಶ್ರೀಮತಿ ಸುಧಾ ಕೆ,

ಬೈಂದೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾಬು ಶೆಟ್ಟಿ ಆಯ್ಕೆ Read More »

ಕರಾವಳಿ
Scroll to Top