newskadaba

ವೈದ್ಯನ ನಿರ್ಲಕ್ಷ್ಯಕ್ಕೆ ಏಳರ ಬಾಲಕ ಬಲಿ – ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಸೆ. 28. ಖಾಸಗಿ ಕ್ಲಿನಿಕ್ ಒಂದರ ವೈದ್ಯ ನೀಡಿದ ಇಂಜೆಕ್ಷನ್​ನಿಂದಾಗಿ ತೀವ್ರ ಜ್ವರದಿಂದ ಬಳಲುತ್ತಿದ್ದ ಏಳು ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ ನಡೆದಿದೆ.   ಅಜ್ಜಂಪುರ ಸಮೀಪದ ಕೆಂಚಾಪುರ ಗ್ರಾಮದ ಅಶೋಕ್ ಎಂಬವರ 7 ವರ್ಷದ ಮಗ ಸೋನೇಶ್ ಕಳೆದ ನಾಲ್ಕು ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದ. ಪೋಷಕರು ಸೋನೇಶ್ ನನ್ನು ಅಜ್ಜಂಪುರ ಪಟ್ಟಣದ ಖಾಸಗಿ ಕ್ಲಿನಿಕ್ ವೈದ್ಯರ ಬಳಿ ಸೆಪ್ಟೆಂಬರ್ 24 ರಂದು ಚಿಕಿತ್ಸೆಗಾಗಿ […]

ವೈದ್ಯನ ನಿರ್ಲಕ್ಷ್ಯಕ್ಕೆ ಏಳರ ಬಾಲಕ ಬಲಿ – ಪ್ರಕರಣ ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಕಿ ಅವಘಡ – ಹೆದ್ದಾರಿ ಮಧ್ಯೆ ಹೊತ್ತಿ ಉರಿದ BMW ಕಾರು

(ನ್ಯೂಸ್ ಕಡಬ) newskadaba.com ಸೆ. 28. ಹೆದ್ದಾರಿ ಮಧ್ಯೆ ಬಿಎಂಡಬ್ಲ್ಯೂ ಕಾರೊಂದು ಹೊತ್ತಿ ಉರಿದ ಘಟನೆ ನಗರದ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕಾಲೇಜ್ ಬಳಿ ನಡೆದಿದೆ. ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ಕಾರಿನಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಚಾಲಕ ಕಾರಿನಿಂದ ಕೆಳಗಿಳಿದು ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ. ದೆಹಲಿ ನೋಂದಾಯಿತ ಬಿಎಂಡಬ್ಲ್ಯೂ ಕಾರು ಹೊತ್ತಿ ಬೆಂಕಿ ಅವಘಾತಕ್ಕೀಡಾಗಿರುವುದಾಗಿ ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಬೆಂಕಿ ಅವಘಡ – ಹೆದ್ದಾರಿ ಮಧ್ಯೆ ಹೊತ್ತಿ ಉರಿದ BMW ಕಾರು Read More »

ಕರಾವಳಿ

ಜಿಲ್ಲಾಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ವಿಜೇತರು

(ನ್ಯೂಸ್ ಕಡಬ) newskadaba.com ಸೆ. 28. ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಜಯಂತಿ ಅಂಗವಾಗಿ ನಡೆದ ಜಿಲ್ಲಾಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ಫಲಿತಾಂಶ ಪ್ರಕಟವಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ/ಸ್ನಾತಕೋತ್ತರ ಸೇರಿದಂತೆ 3 ಪ್ರತ್ಯೇಕ ವಿಭಾಗಗಳಲ್ಲಿ ನಡೆದ ಈ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಬಹುಮಾನ ವಿಜೇತರಿಗೆ ಅಕ್ಟೋಬರ್ 2ರಂದು ಮಂಗಳೂರು ಪುರಭವನ ಆವರಣದಲ್ಲಿ ಜಿಲ್ಲಾಡಳಿತ ವತಿಯಿಂದ ನಡೆಯುವ  ಗಾಂಧಿ ಜಯಂತಿ

ಜಿಲ್ಲಾಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ವಿಜೇತರು Read More »

ಕರಾವಳಿ

ವಿ.ವಿ. ನೇಮಕಾತಿ ಪರೀಕ್ಷೆ- ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಸೆ. 28. ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 29ರಂದು ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ಕನ್ನಡ ಭಾಷಾ ಪರೀಕ್ಷೆ-2024ರ ಪರೀಕ್ಷೆಗಳು ನಡೆಯಲಿರುವ 22 ಪರೀಕ್ಷಾ ಕೆಂದ್ರಗಳಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲಾ 22 ಪರೀಕ್ಷಾ ಕೇಂದ್ರಗಳ  200 ಮೀಟರ್ ಸುತ್ತಮುತ್ತಲಿನ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಮಂಗಳೂರು ನಗರ, ಉಪ ಪೊಲೀಸ್

ವಿ.ವಿ. ನೇಮಕಾತಿ ಪರೀಕ್ಷೆ- ನಿಷೇಧಾಜ್ಞೆ ಜಾರಿ Read More »

ಕರ್ನಾಟಕ

ಮೀನುಗಾರರ ಮಕ್ಕಳಿಗೆ ಮುಖ್ಯಮಂತ್ರಿ ವಿದ್ಯಾನಿಧಿ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಸೆ. 28. 2024-25ನೇ ಸಾಲಿನಿಂದ ಮುಖ್ಯಮಂತ್ರಿ ವಿದ್ಯಾನಿಧಿ ಕಾರ್ಯಕ್ರಮಕ್ಕೆ ಮೀನುಗಾರರ/ಮೀನುಕೃಷಿಕರ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 8 ರಿಂದ 10ನೇ ತರಗತಿಯವರಿಗೆ (ಹೆಣ್ಣುಮಕ್ಕಳಿಗೆ ಮಾತ್ರ) ಮತ್ತು ಎಸ್.ಎಸ್.ಎಲ್.ಸಿ. ಪೂರ್ಣಗೊಳಿಸಿದ (ಹೆಣ್ಣು/ಗಂಡು ಮಕ್ಕಳು) ಹಾಗೂ ಕರ್ನಾಟಕ ರಾಜ್ಯ ಯಾವುದೇ ಭಾಗದಲ್ಲಿರುವ ಅಧಿಕೃತವಾಗಿ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳು /ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್‍ ವರೆಗೆ (ಪಿ.ಯು.ಸಿ/ಐ.ಟಿ.ಐ/ಡಿಪ್ಲೋಮ/ಬಿ.ಎ./ಬಿ.ಎಸ್.ಸಿ/ಬಿ.ಕಾಂ.ಇತ್ಯಾದಿ/ಎಲ್.ಎಲ್.ಬಿ/ಪ್ಯಾರಾಮೆಡಿಕಲ್/ಬಿ.ಪಾರ್ಮ್/ನರ್ಸಿಂಗ್/ಎಂ.ಬಿ.ಬಿ.ಎಸ್/ ಬಿ.ಇ./ಬಿ.ಟೆಕ್ ಮತ್ತು ಎಲ್ಲಾ ವೃತ್ತಿಪರ : ಸ್ನಾತಕೋತ್ತರ ಕೋರ್ಸ್‍ಗಳು) ಪ್ರವೇಶವನ್ನು ಪಡೆದಿರುವ ಕರ್ನಾಟಕ ರಾಜ್ಯದ ಮೀನುಗಾರರ / ಮೀನು ಕೃಷಿಕರ

ಮೀನುಗಾರರ ಮಕ್ಕಳಿಗೆ ಮುಖ್ಯಮಂತ್ರಿ ವಿದ್ಯಾನಿಧಿ- ಅರ್ಜಿ ಆಹ್ವಾನ Read More »

ಕರಾವಳಿ

‘ಅನ್ನ’ ತಿನ್ನೋದ್ರಿಂದ ಸಣ್ಣಗಾಗುತ್ತಾ?? – ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

(ನ್ಯೂಸ್ ಕಡಬ) newskadaba.com ಸೆ. 28. ಯಾವುದೇ ಮನುಷ್ಯ ಅಂದ್ರೆ ಪುರುಷರಾಗಲಿ ಅಥವಾ ಮಹಿಳೆಯರಾಗಲಿ ಅವರೆಲ್ಲರಿಗೂ ಕೂಡ ತಾವು ಸುಂದರವಾಗಿರಬೇಕು, ಸ್ಮಾರ್ಟ್ ಆಗಿ ಕಾಣಬೇಕು ಅದರಲ್ಲೂ ಪ್ರಮುಖವಾಗಿ ಆರೋಗ್ಯವಂತರಾಗಿ ಸುದೃಢರಾಗಿದಬೇಕು ಎಂಬ ಆಸೆ ಇದ್ದೇ ಇರುತ್ತದೆ. ಆದರೆ ಅವರಿರುವ ಎತ್ತರ, ಬೆಳೆದ ಬೊಜ್ಜು, ದಡೂತಿ ದೇಹ ಇದೆಲ್ಲವೂ ಅಡ್ಡಿ ಬರುತ್ತದೆ. ಹೀಗಾಗಿ ಸಣ್ಣಗಾಗಲು ಅನೇಕರು ಹಲವು ವಿಧಧ ಪ್ರಯೋಗಗಳನ್ನು ಮಾಡುತ್ತಾರೆ. ಜಿಮ್ ಟ್ರೈನರ್ ಗಳ ಮಾರ್ಗದರ್ಶನದಂತೆ ಅನ್ನು ತಿನ್ನುವುದನ್ನು ಕೂಡಾ ಬಿಡುವುದನ್ನು ಹೆಚ್ಚಿನವರು ರೂಢಿಸಿಕೊಂಡಿದ್ದಾರೆ. ವಾಸ್ತವದ ಪ್ರಕಾರ

‘ಅನ್ನ’ ತಿನ್ನೋದ್ರಿಂದ ಸಣ್ಣಗಾಗುತ್ತಾ?? – ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ Read More »

ಆರೋಗ್ಯ ಮಾಹಿತಿ

ಶಾಸಕ ಮುನಿರತ್ನ ಮನೆ ಮೇಲೆ ಎಸ್​ಐಟಿ ದಾಳಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 27. ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ ವೈಯಾಲಿಕಾವಲ್ ನಿವಾಸದ ಮೇಲೆ ಎಸ್​ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸಿದೆ. ವೈಯಾಲಿಕಾವಲ್ ನ ನಿವಾಸ ಸೇರಿದಂತೆ ಒಟ್ಟು 15 ಕಡೆಗಳಲ್ಲಿ ಎಸ್​ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎಫ್​ಎಸ್​​ಎಲ್ ತಂಡದ ಜತೆಗೆ ಎಸ್​ಐಟಿ ಅಧಿಕಾರಿಗಳು

ಶಾಸಕ ಮುನಿರತ್ನ ಮನೆ ಮೇಲೆ ಎಸ್​ಐಟಿ ದಾಳಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್ ದಾಖಲು..!

(ನ್ಯೂಸ್ ಕಡಬ) newskadaba.com ಸೆ. 28. ಚುನಾವಣಾ ಬಾಂಡ್‌ ಗಳ ಮೂಲಕ ಸುಲಿಗೆ ಮಾಡಿದ ಆರೋಪದ ಪ್ರಕರಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಬೆಂಗಳೂರಿನ ವಿಶೇಷ ಪ್ರತಿನಿಧಿ ನ್ಯಾಯಾಲಯವು ಶುಕ್ರವಾರದಂದು ಆದೇಶಿಸಿದೆ. ಈ ಕುರಿತಂತೆ ಜನಾಧಿಕಾರ ಸಂಘರ್ಷ ಪರಿಷತ್ (ಜೆಎಸ್‌ಪಿ) ಸಹ ಅಧ್ಯಕ್ಷ ಆದರ್ಶ್ ಅಯ್ಯರ್ ಅವರು ಬೆಂಗಳೂರಿನ ವಿಶೇಷ ಜನಪ್ರತಿನಿಧಿ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಕ್ರಮ ಕೈಗೊಳ್ಳಲು ನಿರ್ದೇಶನ ನೀಡುವಂತೆ

ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್ ದಾಖಲು..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬ್ಯಾಂಕ್ ಸಿಬ್ಬಂದಿಗಳಿಗೆ ಬೆದರಿಕೆ ಪ್ರಕರಣ – ಶಸ್ತ್ರಾಸ್ತ್ರ ಕಾಯ್ದೆಯಡಿ ದೂರು ದಾಖಲು

(ನ್ಯೂಸ್ ಕಡಬ) newskadaba.com ಸೆ. 28. ಸಾಲ ಮರುಪಾವತಿ ವಿಚಾರವಾಗಿ ಉದ್ಯಮಿಯೊಬ್ಬರ ಮನೆಗೆ ಹೋಗಿದ್ದ ರಾಷ್ಟ್ರೀಕೃತ ಬ್ಯಾಂಕ್ ನ ರಿಲೇಶನ್ ಶಿಪ್ ಮ್ಯಾನೇಜರ್ ಮತ್ತು ಸಿಬ್ಬಂದಿಗಳಿಗೆ ಪಿಸ್ತೂಲ್ ತೋರಿಸಿ ಬೆದರಿಸಿದ ಆರೋಪಕ್ಕೆ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ. ದೂರಿನ ಪ್ರಕಾರ, ಪ್ರಕರಣದ ಪಿರ್ಯಾದುದಾರರಾದ ಚಿಕ್ಕಮಗಳೂರು ಕೊಪ್ಪ ತಾಲೂಕು ನಿವಾಸಿ ಚೈತನ್ಯ ಹೆಚ್.ಸಿ ನೀಡಿರುವ ದೂರಿನಂತೆ, ‘ಚೈತನ್ಯ ಎಂಬವರು ಪುತ್ತೂರಿನ ಕೋರ್ಟ್ ರಸ್ತೆಯ‍ಲ್ಲಿರುವ ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ

ಬ್ಯಾಂಕ್ ಸಿಬ್ಬಂದಿಗಳಿಗೆ ಬೆದರಿಕೆ ಪ್ರಕರಣ – ಶಸ್ತ್ರಾಸ್ತ್ರ ಕಾಯ್ದೆಯಡಿ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ರೇಷನ್ ಅಕ್ಕಿ ಪಡೆಯಲು ಬಂದ ಮಹಿಳೆಯ ಮಾನಭಂಗ ಯತ್ನ ಆರೋಪ- ದೂರು ದಾಖಲು

(ನ್ಯೂಸ್ ಕಡಬ) newskadaba.com ಸೆ. 28. ಪಡಿತರ ಅಕ್ಕಿ ಪಡೆಯಲು ಬಂದ ಮಹಿಳೆಯೋರ್ವರ ಮೇಲೆ ರೇಷನ್ ಅಂಗಡಿ ಸಿಬ್ಬಂದಿ ಮಾನಭಂಗಕ್ಕೆ ಯತ್ನಿಸಿರುವುದಾಗಿ ಆರೋಪಿಸಿ ಮಹಿಳೆಯೋರ್ವರು ಪೊಲೀಸ್ ಠಾಣೆಗೆ ದೂರು ನೀಡಿರುವ ಕುರಿತು ಕೆಯ್ಯೂರಿನಿಂದ ವರದಿಯಾಗಿದೆ. ಸೆ.27ರ ಶುಕ್ರವಾರದಂದು ಬೆಳಗ್ಗೆ ಸ್ಥಳೀಯ ಮಹಿಳೆಯೋರ್ವರು ಪಡಿತರ ಅಕ್ಕಿ ಪಡೆಯಲು ಕೆಯ್ಯೂರು ರೇಷನ್ ಅಂಗಡಿಗೆ ಬಂದಿದ್ದು ಈ ವೇಳೆ ಅಂಗಡಿ ಸಿಬ್ಬಂದಿ ಮಹಿಳೆಯ ಮೇಲೆ ಕೈ ಹಾಕಿ ಮಾನಭಂಗಕ್ಕೆ ಯತ್ನ ನಡೆಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಈ ಬಗ್ಗೆ ಮಹಿಳೆಯು ಸಂಪ್ಯ

ರೇಷನ್ ಅಕ್ಕಿ ಪಡೆಯಲು ಬಂದ ಮಹಿಳೆಯ ಮಾನಭಂಗ ಯತ್ನ ಆರೋಪ- ದೂರು ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top