newskadaba

“ವಿಶ್ವ ಹೃದಯ ದಿನ- ಸೆಪ್ಟೆಂಬರ್ 29” – ಹೃದಯ ತೊಂದರೆಗಳು ಮತ್ತು ದಂತ ಆರೋಗ್ಯ

(ನ್ಯೂಸ್ ಕಡಬ) newskadaba.com ಸೆ. 27. ಪ್ರತಿ ವರ್ಷ ಸೆಪ್ಟೆಂಬರ್ 29 ರಂದು ವಿಶ್ವ ಹೃದಯ ದಿನ ಎಂದು ಆಚರಿಸಿ ಹೃದಯ ಸಂಬಂಧಿ ರೋಗಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. 2000ನೇ ಇಸವಿಯಲ್ಲಿ ಈ ಆಚರಣೆ “ದೈಹಿಕ ಚಟುವಟಿಕೆ ಮತ್ತು ಹೃದಯದ ಆರೋಗ್ಯ” ಎಂಬ ಧ್ಯೇಯ ವಾಕ್ಯದೊಂದಿಗೆ ಈ ಆಚರಣೆ ಆರಂಭವಾಗಿತ್ತು. 2021ರಲ್ಲಿ ‘ಹೃದಯವನ್ನು ಜೋಡಿಸಿ’ ಎಂಬುದಾಗಿ ಆಚರಿಸಲಾಗಿದೆ. 2022 ರ ಧ್ಯೇಯವಾಕ್ಯ “Cardiovascular Health for Everyone” ಅಂದರೆ “ಎಲ್ಲರಿಗೂ ಹೃದಯದ ಆರೋಗ್ಯ” ಎಂಬುದಾಗಿದೆ. ವಾರ್ಷಿಕವಾಗಿ ಜಗತ್ತಿನಾದ್ಯಂತ ಸುಮಾರು […]

“ವಿಶ್ವ ಹೃದಯ ದಿನ- ಸೆಪ್ಟೆಂಬರ್ 29” – ಹೃದಯ ತೊಂದರೆಗಳು ಮತ್ತು ದಂತ ಆರೋಗ್ಯ Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಫ್ಲೆಕ್ಸ್, ಬ್ಯಾನರ್ ಗಳಿಗೆ ಅಕ್ರಮ ವಿದ್ಯುತ್ ಸಂಪರ್ಕ- ಮಹಾನಗರಪಾಲಿಕೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಸೆ. 25. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಸರಾ ಹಬ್ಬದ ಪ್ರಯುಕ್ತ ನಗರದ ಮುಖ್ಯ ರಸ್ತೆಗಳಲ್ಲಿ ಅಲಂಕಾರಿಕ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿರುತ್ತದೆ. ಹಲವಾರು ಸ್ಥಳಗಳಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಸಂಘ ಸಂಸ್ಥೆಗಳು ತಮ್ಮ ತಮ್ಮ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳನ್ನು ಅಳವಡಿಸಿದ್ದು, ಈ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳಿಗೆ ಅಲಂಕಾರಿಕ ದೀಪಗಳನ್ನು ಅಳವಡಿಸಲು ಮಂಗಳೂರು ನಗರ ಪಾಲಿಕೆಯಿಂದ ಅಳವಡಿಸಿರುವ ಕಂಬ ಮತ್ತು ವಿದ್ಯುತ್ ದೀಪಗಳ ಸಂಪರ್ಕದಿಂದ ಅತಿಕ್ರಮಣವಾಗಿ ವಿದ್ಯುತ್ ಸಂಪರ್ಕ ಪಡೆದಿರುವುದು ಕಂಡುಬಂದಿದೆ.

ಫ್ಲೆಕ್ಸ್, ಬ್ಯಾನರ್ ಗಳಿಗೆ ಅಕ್ರಮ ವಿದ್ಯುತ್ ಸಂಪರ್ಕ- ಮಹಾನಗರಪಾಲಿಕೆ ಎಚ್ಚರಿಕೆ Read More »

ಕರಾವಳಿ

ನಾಳೆ (ಸೆ.27) ಪಾಲಿಟೆಕ್ನಿಕ್ ಸಮ್ಮೇಳನ

(ನ್ಯೂಸ್ ಕಡಬ) newskadaba.com ಸೆ. 25. ISTE, ನವದೆಹಲಿ ಮತ್ತು ISTE ಕರ್ನಾಟಕ ಶಾಖೆ ಇವರ ಸಹಯೋಗದೊಂದಿಗೆ ಸೆಪ್ಟೆಂಬರ್ 27ರಂದು “4th ISTE State Level Student Convention for Polytechnics 2024” ಎಂಬ ಒಂದು ದಿನದ ರಾಜ್ಯ ಮಟ್ಟದ ಸಮ್ಮೇಳನವು ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ ಮಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಸಮ್ಮೇಳನಕ್ಕೆ ISTE ಕಾರ್ಯಕಾರಿ ಮಂಡಳಿಯ ಅಧ್ಯಕ್ಷರು ಮತ್ತು ಸದಸ್ಯರುಗಳು ಆಗಮಿಸುತ್ತಿದ್ದು, ರಾಜ್ಯದ ಸರ್ಕಾರಿ/ ಅನುದಾನಿತ/ ಅನುದಾನರಹಿತ ಪಾಲಿಟೆಕ್ನಿಕ್ ಗಳ  ವಿದ್ಯಾರ್ಥಿಗಳು ಸಮ್ಮೇಳನದಲ್ಲಿ ಭಾಗವಹಿಸಲಿರುವರು ಎಂದು ಕರ್ನಾಟಕ (ಸರ್ಕಾರಿ)

ನಾಳೆ (ಸೆ.27) ಪಾಲಿಟೆಕ್ನಿಕ್ ಸಮ್ಮೇಳನ Read More »

ಉದ್ಯೋಗ, ಕರಾವಳಿ

ಪಶು ಪಾಲನಾ ಚಟುವಟಿಕೆಗಳ ಕುರಿತು ತರಬೇತಿ

(ನ್ಯೂಸ್ ಕಡಬ) newskadaba.com ಸೆ. 25. ಹಾಸನದ ಪಶುಪಾಲನ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದಲ್ಲಿ ರೈತರಿಗೆ ಪಶು ಪಾಲನಾ ಚಟುವಟಿಕೆಗಳ ಕುರಿತು ವಿವಿಧ ತರಬೇತಿಯನ್ನು ಅಕ್ಟೋಬರ್ ತಿಂಗಳಿನಲ್ಲಿ ಹಮ್ಮಿಕೊಳ್ಳಲಾಗಿದೆ. ತರಬೇತಿಯ ವಿವರ ಆಧುನಿಕ ಕುರಿ ಮತ್ತು ಮೇಕೆ ಸಾಗಾಣಿಕೆ ತರಬೇತಿ ಅಕ್ಟೋಬರ್ 3ರಿಂದ 4ರವರೆಗೆ ನಡೆಯಲಿದೆ. ಆಧುನಿಕ ಹೈನುಗಾರಿಕೆ ಬಗ್ಗೆ ತರಬೇತಿ ಅಕ್ಟೋಬರ್ 8 ರಿಂದ 9ರ ವರೆಗೆ, ಕೋಳಿ ಸಾಕಾಣಿಕೆ ತರಬೇತಿ 18ರಿಂದ 19ರ ವರೆಗೆ, ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಪಶು ಪಾಲನಾ ಚಟುವಟಿಕೆಗಳ ಕುರಿತು ತರಬೇತಿ Read More »

ಕರಾವಳಿ

ಪರಿಷತ್ ಚುನಾವಣೆ- ಇಂದು ಅಧಿಸೂಚನೆ

(ನ್ಯೂಸ್ ಕಡಬ) newskadaba.com ಸೆ. 25. ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ವಿಧಾನ ಪರಿಷತ್ತು ಉಪಚುನಾವಣೆ 2024 ಘೋಷಣೆಯಾಗಿದ್ದು ಮಾದರಿ ನೀತಿಸಂಹಿತೆ ಜಾರಿಯಲ್ಲಿದೆ. ಸೆಪ್ಟೆಂಬರ್ 26ರಂದು ಗುರುವಾರ ಅಧಿಸೂಚನೆ ಪ್ರಕಟವಾಗಲಿದೆ. ಅಕ್ಟೋಬರ್ 3 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ. ಅಕ್ಟೋಬರ್ 4 ರಂದು ನಾಮಪತ್ರಗಳ ಪರಿಶೀಲನೆ, ಅಕ್ಟೋಬರ್ 7ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

ಪರಿಷತ್ ಚುನಾವಣೆ- ಇಂದು ಅಧಿಸೂಚನೆ Read More »

ಕರಾವಳಿ

ಜಿಲ್ಲಾಧಿಕಾರಿ ಕಚೇರಿ ಸುತ್ತ ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಸೆ. 25. ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ವಿಧಾನ ಪರಿಷತ್ ಉಪಚುನಾವಣೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುಗಮ ಮತ್ತು ಶಾಂತಿಯುತವಾಗಿ ನಡೆಯಬೇಕಿರುವುದರಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 7 ಸಂಜೆ 6 ಗಂಟೆಯವರೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳ ಕಚೇರಿ ಆವರಣದ 100 ಮೀಟರ್ ವ್ಯಾಪ್ತಿಯ ಸುತ್ತ ನಿಷೇಧಾಜ್ಞೆಯನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಜಾರಿಗೊಳಿಸಿದ್ದಾರೆ. ನಾಮಪತ್ರ

ಜಿಲ್ಲಾಧಿಕಾರಿ ಕಚೇರಿ ಸುತ್ತ ನಿಷೇಧಾಜ್ಞೆ ಜಾರಿ Read More »

ಕರಾವಳಿ

ಕೇಂದ್ರ ಪೆಟ್ರೋಲಿಯಂ ಸಚಿವರಿಂದ ದ.ಕ. ಸಂಸದ ಕ್ಯಾ. ಚೌಟ ಅವರ JBF-GMPL ಸಮಸ್ಯೆ ಬಗೆಹರಿಸಿದ ಅವಿರತ ಪ್ರಯತ್ನಕ್ಕೆ ಶ್ಲಾಘನೆ

(ನ್ಯೂಸ್ ಕಡಬ) newskadaba.com ಸೆ. 25. ಮಂಗಳೂರಿನ ವಿಶೇಷ ಆರ್ಥಿಕ ವಲಯ (ಎಂಎಸ್‌ಇಝೆಡ್‌) ದಲ್ಲಿ ಜೆಬಿಎಫ್‌ ಕಂಪೆನಿ ಸ್ಥಾಪನೆಗೆ ಜಮೀನು ಕೊಟ್ಟಿದ್ದ ಪಿಡಿಎಫ್‌ ಉದ್ಯೋಗಸ್ಥರನ್ನು ಜಿಎಂಪಿಎಲ್‌ (ಗೈಲ್‌) ಕಂಪೆನಿಯಲ್ಲಿ ಮುಂದುವರಿಸುವುದಕ್ಕೆ ಅವಕಾಶ ಕಲ್ಪಿಸಿ ಬಹುದಿನಗಳ ಗಂಭೀರ ಸಮಸ್ಯೆಯನ್ನು ತುರ್ತಾಗಿ ಬಗೆಹರಿಸಲು ಕಾರಣರಾದ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ಸತತ ಪ್ರಯತ್ನವನ್ನು ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಹರ್‌ದೀಪ್‌ ಸಿಂಗ್‌ ಪುರಿ ಅವರು ಶ್ಲಾಘಿಸಿದ್ದಾರೆ. ಜೆಬಿಎಫ್‌-ಜಿಎಂಪಿಎಲ್‌(ಗೈಲ್‌) ಸಮಸ್ಯೆಯನ್ನು ಕೇಂದ್ರ ಸರ್ಕಾರವು ಕೇವಲ 40 ದಿನಗಳಲ್ಲಿ

ಕೇಂದ್ರ ಪೆಟ್ರೋಲಿಯಂ ಸಚಿವರಿಂದ ದ.ಕ. ಸಂಸದ ಕ್ಯಾ. ಚೌಟ ಅವರ JBF-GMPL ಸಮಸ್ಯೆ ಬಗೆಹರಿಸಿದ ಅವಿರತ ಪ್ರಯತ್ನಕ್ಕೆ ಶ್ಲಾಘನೆ Read More »

ಕರಾವಳಿ

ಕಡಬ: ಇಂದು (ಸೆ.26) ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಸೆ. 26. ಕಡಬ ಪುತ್ತೂರು 33 ಕೆವಿ ಮಾರ್ಗ ಮತ್ತು 33/11ಕೆವಿ ಕಡಬ ವಿದ್ಯುತ್ ಉಪಕೇಂದ್ರದಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಇಂದು(ಸೆ.26) ಪೂರ್ವಾಹ್ನ 10:00 ರಿಂದ ಸಾಯಂಕಾಲ 5 ಗಂಟೆಯವರೆಗೆ ಪುತ್ತೂರು ಕಡಬ 33 ಕೆವಿ ಮಾರ್ಗ ಮತ್ತು 33/11ಕೆ.ವಿ. ಕಡಬ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು. 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಸೆ.26 ರಂದು ಪೂರ್ವಾಹ್ನ 10ರಿಂದ

ಕಡಬ: ಇಂದು (ಸೆ.26) ವಿದ್ಯುತ್ ನಿಲುಗಡೆ Read More »

ಕರಾವಳಿ
crime, arrest, suspected

ನಕಲಿ ಪ್ರೊಫೈಲ್ ಗಳ ಮೂಲಕ ಮಹಿಳೆಯರ ವಂಚನೆ: ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 25. ರಾಷ್ಟ್ರರಾಜಧಾನಿ ದಿಲ್ಲಿಯಲ್ಲಿ 20ಕ್ಕೂ ಹೆಚ್ಚು ಮಹಿಳೆಯರಿಗೆ ಪ್ರೀತಿಯ ಹೆಸರಿಲ್ಲಿ ಮೋಸ, ದುಬಾರಿ ವಸ್ತುಗಳನ್ನು ಸುಲಿಗೆ ಮಾಡಿ ಪರಾರಿಯಾಗುತ್ತಿದ್ದ ಆರೋಪಿ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಬಂಧಿತ ಆರೋಪಿಯನ್ನು ರಾಹುಲ್ ಚತುರ್ವೇದಿ ಎಂದು ಗುರುತಿಸಲಾಗಿದೆ. ರಾಹುಲ್ ಚತುರ್ವೇದಿ ಮ್ಯಾಟ್ರಿಮೋನಿ ಸೈಟ್ ಗಳಾದ ವಿವಿಧ ಹೆಸರುಗಳಲ್ಲಿ ನಕಲಿ ಪ್ರೊಫೈಲ್ ಗಳನ್ನು ರಚಿಸಿದ್ದಾನೆ. ಈ ಖಾತೆಗಳ ಮೂಲಕ ಆತ ಮಹಿಳೆಯರನ್ನು ಪರಿಚಯ ಮಾಡಿಕೊಳ್ಳುತ್ತಿದ್ದ. ಐಐಎಂ ಪದವೀಧರನಾಗಿರುವ ಈತನನ್ನು ಬಿಸ್ರಖ್ ಪೊಲೀಸರು ಬಂಧಿಸಿದ್ದಾರೆ.  

ನಕಲಿ ಪ್ರೊಫೈಲ್ ಗಳ ಮೂಲಕ ಮಹಿಳೆಯರ ವಂಚನೆ: ಆರೋಪಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಿಎಂ ವಿರುದ್ದ ಎಫ್ಐಆರ್ ದಾಖಲಿಸಿ ತನಿಖೆಗೆ ಆದೇಶಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ

(ನ್ಯೂಸ್ ಕಡಬ) newskadaba.com ಸೆ. 25. ಮುಡಾ ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರದಂದು ವಜಾಗೊಳಿಸಿದ ಬೆನ್ನಲ್ಲೇ ಇದೀಗ ಮುಡಾ ಹಗರಣ ಸಂಬಂಧ ಖಾಸಗಿ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಎಫ್ ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಆದೇಶ ನೀಡಿರುವುದಾಗಿ ತಿಳಿದುಬಂದಿದೆ. ದೂರುದಾರರಾದ ಸ್ನೇಹಮಯಿ ಕೃಷ್ಣ ಅವರ ಪರ ವಕೀಲ ಲಕ್ಷ್ಮೀ ಅಯ್ಯಂಗರ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹೈಕೋರ್ಟ್ ಪ್ರತಿ

ಸಿಎಂ ವಿರುದ್ದ ಎಫ್ಐಆರ್ ದಾಖಲಿಸಿ ತನಿಖೆಗೆ ಆದೇಶಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top