newskadaba

ಬೆಳ್ತಂಗಡಿ: ಅರಣ್ಯ ಇಲಾಖೆಯ ಬೋನಿಗೆ ಸೆರೆಸಿಕ್ಕ 2ನೇ ಚಿರತೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 21. ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆ ಸೆರೆ ಹಿಡಿಯಲೆಂದು ಸವಣಾಲು ಗ್ರಾಮದ ಗುರಿಕಂಡ ಆನಂದ ಶೆಟ್ಡಿ ಎಂಬವರ ಮನೆ ಬಳಿಯಲ್ಲಿ ಇರಿಸಿದ್ದ ಬೋನಿಗೆ ಮತ್ತೊಂದು ಚಿರತೆ ಬಿದ್ದಿದ್ದು, ಈ ಗ್ರಾಮದಲ್ಲಿ ಒಂದೇ ತಿಂಗಳಲ್ಲಿ ಬೋನಿಗೆ ಬಿದ್ದ 2ನೇ ಚಿರತೆ ಇದಾಗಿದೆ. ಕಳೆದ ಕೆಲವು ತಿಂಗಳುಗಳಿಂದ ಗುರಿಕಂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷವಾದ ಬಗ್ಗೆ ಇಲ್ಲಿನ ನಿವಾಸಿಗಳು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಅದರಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿ ಪರಿಶೀಲನೆ ನಡೆಸಿ […]

ಬೆಳ್ತಂಗಡಿ: ಅರಣ್ಯ ಇಲಾಖೆಯ ಬೋನಿಗೆ ಸೆರೆಸಿಕ್ಕ 2ನೇ ಚಿರತೆ Read More »

ಕರಾವಳಿ

ಜೂನಿಯರ್ ವಿಶ್ವ ವೇಟ್ ಲಿಫ್ಟಿಂಗ್: ಧನುಷ್ ಗೆ ಕಂಚು

(ನ್ಯೂಸ್ ಕಡಬ) newskadaba.com ಲಿಯಾನ್, ಸ್ಪೇನ್. ಸೆ. 21: ಲಿಯಾನ್ ಸ್ಪೇನ್ ನಲ್ಲಿ ನಡೆದ ವಿಶ್ವ ಜೂನಿಯರ್ ವಿಶ್ವಕಪ್ ನಲ್ಲಿ ಭಾರತದ ಲೋಕನಾಥನ್ ಧನುಷ್ ಕಂಚಿನ ಪದಕ ಗಳಿಸಿದರು.ವಿಶ್ವ ಜೂನಿಯರ್ ವೇಟ್ ಲಿಫ್ಟಿಂಗ್ನಲ್ಲಿ ಪುರುಷದ ವಿಭಾಗದಲ್ಲಿ ಪದಕ ಸಾಧನೆ ಮಾಡಿರುವ ಭಾರತದ ಮೊದಲ ಲಿಫ್ಟರ್ ಎಂಬ ಕೀರ್ತಿಗೆ ಪಾತ್ರರಾದರು.17 ವರ್ಷದ ಧನುಷ್ ಒಟ್ಟು 231 ಕೆ.ಜಿ ತೂಕ ಎತ್ತಿದರು. ಕ್ಲೀನ್ ಮತ್ತು ಜರ್ಕ್ ನಲ್ಲಿ 124 ಕೆ.ಜಿ ಎತ್ತಿದರು.ಸ್ನ್ಯಾಚ್ ನಲ್ಲಿ 107 ಕೆ.ಜಿ ಎತ್ತಿದರು.  

ಜೂನಿಯರ್ ವಿಶ್ವ ವೇಟ್ ಲಿಫ್ಟಿಂಗ್: ಧನುಷ್ ಗೆ ಕಂಚು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಮೀನು ವಿಚಾರ- ತಮ್ಮನನ್ನು ಕೊಂದಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ಜಮೀನಿನ ವಿಚಾರದಲ್ಲಿ ಪಾಲು ಕೇಳಲು ಬಂದ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ಬಂಟ್ವಾಳ ತಾಲೂಕು ನಂದರಬೆಟ್ಟು ಗ್ರಾಮದ ಐತಪ್ಪ ನಾಯ್ಕ (45) ಎಂಬಾತನಿಗೆ ಮಂಗಳೂರಿನ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸುನೀತಾ ಎಸ್. ಜಿ ಅವರು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಈತ 2022ರ ಮೇ 10ರಂದು ಜಮೀನು ವಿಚಾರಕ್ಕೆ ಸಂಬಂಧಿಸಿ ತನ್ನ ತಮ್ಮ ಬಾಳಪ್ಪ ಯಾನೆ ರಾಮ ನಾಯ್ಕ (35)

ಜಮೀನು ವಿಚಾರ- ತಮ್ಮನನ್ನು ಕೊಂದಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ ಪ್ರಕಟ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಾಡಾನೆ ದಾಳಿ- ಅಪಾರ ಕೃಷಿ ನಾಶ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 21. ತೋಟಗಳಿಗೆ ನುಗ್ಗಿದ ಕಾಡಾನೆ ಬಾಳೆ, ತೆಂಗು ಹಾಗೂ ಅಡಿಕೆ ಕೃಷಿಯನ್ನು ಹಾನಿ ಮಾಡಿರುವ ಘಟನೆ ಸುಳ್ಯ ತಾಲೂಕಿನ ಪರಿವಾರಕಾನ ಎಂಬಲ್ಲಿ ನಡೆದಿದೆ. ಪರಿವಾರಕಾನದ ಉಪನ್ಯಾಸಕ ಕೇಪಣ್ಣ, ಸುರೇಶ್‌, ಸತ್ಯನಾರಾಯಣ ಮತ್ತಿತರರ ತೋಟಗಳಿಗೆ ನುಗ್ಗಿದ ಕಾಡಾನೆ ಅಪಾರ ಪ್ರಮಾಣದ ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿಯನ್ನುಂಟು ಮಾಡಿದೆ. ಸ್ಥಳಕ್ಕೆ ಸುಳ್ಯ ನಗರ ಪಂಚಾಯತ್‌ ಉಪಾಧ್ಯಕ್ಷ ಬುದ್ಧ ನಾಯ್ಕ, ಮಾಜಿ ಅಧ್ಯಕ್ಷ ವಿನಯ ಕುಮಾರ್‌ ಕಂದಡ್ಕ ಅವರು ಭೇಟಿ ನೀಡಿ ಪರಿಶೀಲಿಸಿರುವುದಾಗಿ

ಕಾಡಾನೆ ದಾಳಿ- ಅಪಾರ ಕೃಷಿ ನಾಶ Read More »

ಕರಾವಳಿ, ಕ್ರೈಮ್ ನ್ಯೂಸ್

ಕರಾವಳಿಯಲ್ಲಿ ಮೊದಲ ಗ್ರೀನ್ ಹೈಡ್ರೋಜನ್ ಘಟಕ ಸ್ಥಾಪನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ಭವಿಷ್ಯದ ಇಂಧನ ಎಂದೇ ಹೆಸರಾಗಿರುವ ಗ್ರೀನ್‌ ಹೈಡ್ರೋಜನ್‌ ಉತ್ಪಾದನೆಗೆ ಮಂಗಳೂರಿನಲ್ಲಿ ಘಟಕ ಸ್ಥಾಪನೆ ಅಂತಿಮಗೊಂಡಿದೆ. ಗ್ರೀನ್‌ ಹೈಡ್ರೋಜನ್‌ ಕ್ಲಸ್ಟರ್‌ ಆಗಿ ಗುರುತಿಸಲ್ಪಟ್ಟಿರುವ ಮಂಗಳೂರಿನಲ್ಲಿ ಎಂಆರ್‌ಪಿಎಲ್‌ ತನ್ನ ಪರಿಸರದಲ್ಲೇ 2026ರ ವೇಳೆಗೆ ವಾರ್ಷಿಕ 500 ಟನ್‌ ಲಿಕ್ವಿಡ್‌ ಹೈಡ್ರೋಜನ್‌ ಉತ್ಪಾದಿಸುವ ಸ್ಥಾವರ ನಿರ್ಮಾಣಕ್ಕೆ ಯೋಜನೆ ರೂಪಿಸಿದೆ. ಗ್ರೀನ್‌ ಹೈಡ್ರೋಜನ್‌ ನೀತಿಯನ್ವಯ ನವೀಕರಿಸಬಹುದಾದ ಇಂಧನದಿಂದ ನೀರಿನ ಎಲೆಕ್ಟ್ರಾಲಿಸಿಸ್‌ ನಡೆಸಿ ಪಡೆಯುವ ಹೆಡ್ರೋಜನ್‌ ಅನ್ನು ಹಸುರು ಹೆಡ್ರೋಜನ್‌ ಎಂದು ವ್ಯಾಖ್ಯಾನಿಸಲಾಗಿದೆ. ಇದೇ ನೀತಿಯ

ಕರಾವಳಿಯಲ್ಲಿ ಮೊದಲ ಗ್ರೀನ್ ಹೈಡ್ರೋಜನ್ ಘಟಕ ಸ್ಥಾಪನೆ Read More »

ಕರಾವಳಿ

ಮದ್ಯಪ್ರಿಯರಿಗೆ ಗುಡ್ ನ್ಯೂಸ್- ಅಕ್ಟೋಬರ್ 1ರಿಂದಲೇ ಹೊಸ ಮದ್ಯ ನೀತಿ ಜಾರಿ

(ನ್ಯೂಸ್ ಕಡಬ) newskadaba.com ಆಂಧ್ರಪ್ರದೇಶ, ಸೆ. 21. ಅಕ್ಟೋಬರ್ 1ರಿಂದಲೇ ಆಂಧ್ರಪ್ರದೇಶದಲ್ಲಿ ನೂತನ ಮದ್ಯ ನೀತಿ ಜಾರಿಗೆ ಬರಲಿದ್ದು, ಮದ್ಯಪ್ರಿಯರಿಗೆ ಗುಡ್ ನ್ಯೂಸ್ ನೀಡಿದೆ. ಹೊಸ ಮದ್ಯದ ನೀತಿ ಜಾರಿಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ನೇತೃತ್ವದ ಸಂಪುಟ ಸಭೆಯಲ್ಲಿ ಗ್ರೀನ್ ಸಿಗ್ನಲ್ ನೀಡಲಾಗಿದ್ದು, ಅಕ್ಟೋಬರ್ 1ರಿಂದಲೇ ಆಂಧ್ರಪ್ರದೇಶ ರಾಜ್ಯದ ಹೊಸ ಮದ್ಯ ನೀತಿ ಜಾರಿಗೆ ಬರಲಿದೆ. ಈ ಹೊಸ ಮದ್ಯ ನೀತಿಯಲ್ಲಿ ಎಲ್ಲಾ ಬ್ರಾಂಡ್ ಗಳ 180 ಎಂಎಲ್ ಮದ್ಯದ ಬಾಟಲಿಗಳಿಗೆ ಕೇವಲ 99

ಮದ್ಯಪ್ರಿಯರಿಗೆ ಗುಡ್ ನ್ಯೂಸ್- ಅಕ್ಟೋಬರ್ 1ರಿಂದಲೇ ಹೊಸ ಮದ್ಯ ನೀತಿ ಜಾರಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜ್ಯದ ದೇಗುಲದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸಿ – ಧಾರ್ಮಿಕ ದತ್ತಿ ಇಲಾಖೆ ಆದೇಶ

(ನ್ಯೂಸ್ ಕಡಬ) newskadaba.com ತಿರುಪತಿ, ಸೆ. 21. ತಿರುಪತಿ ಪ್ರಸಾದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಮಾಡಲಾಗುತ್ತಿರುವ ಕುರಿತು ಸ್ಫೋಟಕ ವಿಷಯ ಬಹಿರಂಗವಾಗುತ್ತಿದ್ದಂತೆಯೇ ಕರ್ನಾಟಕದ ದತ್ತಿ ಇಲಾಖೆ ಕೂಡಾ ಇದೀಗ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ಮಾಡುವಂತೆ ಆದೇಶ ಹೊರಡಿಸಿದೆ. ಈ ಕುರಿತು ಮುಜರಾಯಿ ಮತ್ತು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಸುತ್ತೋಲೆ ಹೊರಡಿಸಿದ್ದು, ಧಾರ್ಮಿಕ ದತ್ತಿ ಇಲಾಖೆ, ದೇವಸ್ಥಾನದ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆ ಮತ್ತು ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ

ರಾಜ್ಯದ ದೇಗುಲದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸಿ – ಧಾರ್ಮಿಕ ದತ್ತಿ ಇಲಾಖೆ ಆದೇಶ Read More »

ಕರ್ನಾಟಕ

50 ಲಕ್ಷಕ್ಕೂ ಅಧಿಕ ಕುಟುಂಬಗಳು ಖರೀದಿಸಿದ ವಿಶ್ವದ ಏಕೈಕ ಕಾರು ಇದು – ಬಜೆಟ್ ಫ್ರೆಂಡ್ಲಿ ಕೂಡಾ ಹೌದು

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 21. ಭಾರತವು ಆಟೋಮೊಬೈಲ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ಮುನ್ನುಗ್ಗುತ್ತಿದ್ದು, ಐಶಾರಾಮಿ ಕಾರು ಕಂಪೆನಿಗಳು ಕೂಡ ಇಂದು ಭಾರತದತ್ತ ಮುಖ ಮಾಡುತ್ತಿವೆ. ಆದರೆ ಯಾವ ಶ್ರೀಮಂತ ಕಾರುಗಳಿಗೂ ಕೂಡ ನಮ್ಮ ಭಾರತದ ಈ ಒಂದು ಚಿಕ್ಕ ಕಾರಿನ ದಾಖಲೆ ಮುರಿಯಲು ಇದುವರೆಗೂ ಸಾಧ್ಯವಾಗಿಲ್ಲ. ದೇಶದ ಹೆಸರಾಂತ ಮತ್ತು ಅತಿದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಭಾರತದಲ್ಲಿ ಬಿಡುಗಡೆಗೊಳಿಸಿರುವ ಅದೊಂದು ಕಾರಿನ ದಾಖಲೆಯನ್ನು BMW, ಬೆಂಝ್‌ ಅಂತ ಐಷಾರಾಮಿ ಕಾರಿಗೂ ಇವತ್ತಿಗೂ ಹಿಂದಿಕ್ಕಲು

50 ಲಕ್ಷಕ್ಕೂ ಅಧಿಕ ಕುಟುಂಬಗಳು ಖರೀದಿಸಿದ ವಿಶ್ವದ ಏಕೈಕ ಕಾರು ಇದು – ಬಜೆಟ್ ಫ್ರೆಂಡ್ಲಿ ಕೂಡಾ ಹೌದು Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ದೀಪಾವಳಿ ಹಬ್ಬ; ಪಟಾಕಿ ಮಾರಾಟ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ಸ್ಪೋಟಕ ಕಾಯ್ದೆ ಮತ್ತು ನಿಯಮದಡಿ ಮೈದಾನದಲ್ಲಿ, ತೆರೆದ ಪ್ರದೇಶದಲ್ಲಿ ಹಬ್ಬಗಳ ನಿಮಿತ್ತ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆ ನೀಡುವ ಬಗ್ಗೆ ಅರ್ಜಿಗಳನ್ನು ಈಗಾಗಲೇ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ವೀಕರಿಸಲಾಗುತ್ತಿದೆ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ಆಸಕ್ತ ಸಾರ್ವಜನಿಕರು ಅರ್ಜಿಯನ್ನು ಜಿಲ್ಲಾಧಿಕಾರಿಯವರ ಕಚೇರಿಗೆ ಸಲ್ಲಿಸುವಂತೆ ತಿಳಿಸಲಾಗಿದೆ. ಅಕ್ಟೋಬರ್ 30ರಿಂದ ನವೆಂಬರ್ 2ರವರೆಗೆ ದೀಪಾವಳಿ ಹಬ್ಬದ ಸಂದರ್ಭ ಮತ್ತು ನವೆಂಬರ್ 12ರಿಂದ 13ರ ತುಳಸಿ ಪೂಜೆ ಸಂದರ್ಭದಲ್ಲಿ ಸುಡುಮದ್ದು ಮಾರಾಟ

ದೀಪಾವಳಿ ಹಬ್ಬ; ಪಟಾಕಿ ಮಾರಾಟ- ಅರ್ಜಿ ಆಹ್ವಾನ Read More »

ಕರಾವಳಿ

ವಿಧಾನ ಪರಿಷತ್ ಚುನಾವಣೆ – ನೀತಿ ಸಂಹಿತೆ ಪಾಲಿಸಲು ರಾಜಕೀಯ ಪಕ್ಷಗಳಿಗೆ ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಸೂಚಿಸಿದ್ದಾರೆ. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚೆಕ್ ಪೋಸ್ಟ್ ಹೊರತುಪಡಿಸಿ ಉಳಿದಂತೆ ಸಾಮಾನ್ಯ ಚುನಾವಣೆಯಲ್ಲಿ ಪಾಲನೆಯಾಗಿರುವ ಎಲ್ಲಾ ನೀತಿ

ವಿಧಾನ ಪರಿಷತ್ ಚುನಾವಣೆ – ನೀತಿ ಸಂಹಿತೆ ಪಾಲಿಸಲು ರಾಜಕೀಯ ಪಕ್ಷಗಳಿಗೆ ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ
Scroll to Top