newskadaba

ಕಾಮಗಾರಿ ಹಿನ್ನೆಲೆ- ರೈಲು ಸೇವೆಯಲ್ಲಿ ವ್ಯತ್ಯಯ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 19. ಪಾಲಕ್ಕಾಡ್‌ ರೈಲ್ವೇ ವಿಭಾಗದ ವಿವಿಧ ಪ್ರದೇಶಗಳಲ್ಲಿ ಹಳಿ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಳ್ಳಲಾದ ಹಿನ್ನೆಲೆ ಹಲವು ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಸೆ. 19ರಂದು ಡಾ.ಎಂಜಿಆರ್‌ ಚೆನ್ನೈ ಸೆಂಟ್ರಲ್‌ನಿಂದ ಮಂಗಳೂರು ಸೆಂಟ್ರಲ್‌ಗೆ ಆಗಮಿಸುವ ನಂ. 22637 ವೆಸ್ಟ್‌ ಕೋಸ್ಟ್‌ ಸೂಪರ್‌ ಫಾಸ್ಟ್‌ ಎಕ್ಸ್‌ಪ್ರೆಸ್‌ ರೈಲನ್ನು 2 ಗಂಟೆ 10 ನಿಮಿಷಗಳ ಕಾಲ ನಿಯಂತ್ರಿಸಲಾಗಿದೆ. ಆದೇ ದಿನ ಚೆನ್ನೈ ಸೆಂಟ್ರಲ್‌ನಿಂದ ಮಂಗಳೂರು ಸೆಂಟ್ರಲ್‌ಗೆ ಆಗಮಿಸುವ ರೈಲು ಸಂಖ್ಯೆ 12685 ಸೂಪರ್‌ ಫಾಸ್ಟ್‌ ಎಕ್ಸ್‌ಪ್ರೆಸ್‌ […]

ಕಾಮಗಾರಿ ಹಿನ್ನೆಲೆ- ರೈಲು ಸೇವೆಯಲ್ಲಿ ವ್ಯತ್ಯಯ Read More »

ಕರ್ನಾಟಕ

ಪುತ್ತೂರು ಘಟಕದ ನಿವೃತ್ತ ಗೃಹರಕ್ಷಕ ಸುದರ್ಶನ್ ಜೈನ್ ಇವರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 19. ಇತ್ತೀಚಿಗೆ ಇಲಾಖೆಯಿಂದ ನಿವೃತ್ತರಾದ ಪುತ್ತೂರು ಘಟಕದ ಗೃಹರಕ್ಷಕ  ಶ್ರೀ ಸುದರ್ಶನ್ ಜೈನ್  ಇವರಿಗೆ ಬೀಳ್ಕೊಡುಗೆ ಮತ್ತು ಸನ್ಮಾನ ಸಮಾರಂಭವು ಜಿಲ್ಲಾ ಗೃಹರಕ್ಷಕ ದಳದ ಕಛೇರಿ ಮೇರಿಹಿಲ್ ನಲ್ಲಿ ನಡೆಯಿತು. 1964 ಆಗಸ್ಟ್ 10ರಂದು ಜನಿಸಿದ ಶ್ರೀ ಸುದರ್ಶನ್ ಜೈನ್ 1999ರ ಮಾರ್ಚ್ 01 ರಂದು ಗೃಹರಕ್ಷಕ ಇಲಾಖೆಗೆ ಸೇರಿಕೊಂಡು ಸತತವಾಗಿ ಸುಮಾರು 25 ವರ್ಷಗಳ ಕಾಲ ಗೃಹರಕ್ಷಕ ಇಲಾಖೆಯಲ್ಲಿ ನಿಷ್ಕಾಮ ಸೇವೆ ಸಲ್ಲಿಸಿ ಆಗಸ್ಟ್ 10ರಂದು ಸೇವಾ ನಿವೃತ್ತಿ

ಪುತ್ತೂರು ಘಟಕದ ನಿವೃತ್ತ ಗೃಹರಕ್ಷಕ ಸುದರ್ಶನ್ ಜೈನ್ ಇವರಿಗೆ ಸನ್ಮಾನ Read More »

ಕರಾವಳಿ

ಕಡಬ: ದ್ವಿಚಕ್ರ ವಾಹನಗಳ ಢಿಕ್ಕಿ- ಸವಾರರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಸೆ. 19. ಸ್ಕೂಟರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಕುಂತೂರು ಚರ್ಚ್ ಬಳಿ ನಡೆದಿದೆ. ಕುಂತೂರು ಕೆಮ್ಮಣ್ಣು ನಿವಾಸಿ ಶಶಿಧರ ಎಂಬವರು ಆಲಂಕಾರಿನಿಂದ ಕುಂತೂರಿಗೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ಎದುರುಗಡೆ ಹೋಗುತ್ತಿದ್ದ ಉಮೇಶ ಎಂಬವರು ತನ್ನ ಬೈಕನ್ನು ಯಾವುದೇ ಮುನ್ಸೂಚನೆ ನೀಡದೇ ಒಮ್ಮಲೇ ಬಲಭಾಗಕ್ಕೆ ತಿರುಗಿಸಿದ ಪರಿಣಾಮ ಹಿಂದಿನಿಂದ ಬರುತ್ತಿದ್ದ ಸ್ಕೂಟರ್ ಬೈಕ್ ಗೆ ಢಿಕ್ಕಿಯಾಗಿ ಸವಾರ ಸಹಿತ ರಸ್ತೆಗೆ ಬಿದ್ದಿದ್ದಾರೆ ಎನ್ನಲಾಗಿದೆ.

ಕಡಬ: ದ್ವಿಚಕ್ರ ವಾಹನಗಳ ಢಿಕ್ಕಿ- ಸವಾರರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಸೆ. 22ರಂದು ಕಾನೂನು ಅರಿವು ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 19. ಜಿಲ್ಲಾ ಮಟ್ಟದ ಐ.ಇ.ಸಿ ಚಟುವಟಿಕೆಗಳಡಿ ವಿವಿಧ ವರ್ಗದ ಕಾರ್ಮಿಕರಿಗೆ, ಸಂಘ ಸಂಸ್ಥೆಗಳಿಗೆ ಹಾಗೂ ಮಾಲೀಕರಿಗೆ ಕಾರ್ಮಿಕ ಕಾನೂನುಗಳ ಬಗ್ಗೆ ಮತ್ತು ಇಲಾಖೆಯ ಯೋಜನೆಗಳ ಸೆಪ್ಟೆಂಬರ್ 22ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಕಛೇರಿ, ನೇತ್ರಾವತಿ ಸಭಾಂಗಣದಲ್ಲಿ ಒಂದು ದಿನದ ಕಾನೂನು ಅರಿವು ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಮಂಗಳೂರು ವಿಭಾಗ,  ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆ. 22ರಂದು ಕಾನೂನು ಅರಿವು ಕಾರ್ಯಾಗಾರ Read More »

ಕರಾವಳಿ

ಕೇಜ್ರಿವಾಲ್ ರಾಜೀನಾಮೆ ರಾಷ್ಟ್ರಪತಿಗೆ ವರ್ಗಾವಣೆ..!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 18. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅರವಿಂದ ಕೇಜ್ರಿವಾಲ್‌ ಅವರ ರಾಜೀನಾಮೆ ಪತ್ರವನ್ನು ದೆಹಲಿ ಲೆಫ್ಟಿನೆಂಟ್ ಗವರ್ನರ್‌ ವಿ.ಕೆ.ಸಕ್ಸೇನಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬುಧವಾರದಂದು ವರ್ಗಾಯಿಸಿದ್ದಾರೆ. ಹಾಗೂ ಸಚಿವೆ ಆತಿಶಿ ಅವರು ಸೆಪ್ಟೆಂಬರ್‌ 21ರಂದು ಪ್ರಮಾಣ ಸ್ವೀಕರಿಸುವಂತೆ ಪ್ರಸ್ತಾಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ದೆಹಲಿ ಸರ್ಕಾರ ಸದ್ಯ ಹಿಂಪಡೆದಿರುವ ‘ಅಬಕಾರಿ ನೀತಿ’ ಜಾರಿ ವೇಳೆ ನಡೆದಿದೆ ಎನ್ನಲಾದ ಹಣದ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಸಿಬಿಐ ಕೇಜ್ರಿವಾಲ್‌

ಕೇಜ್ರಿವಾಲ್ ರಾಜೀನಾಮೆ ರಾಷ್ಟ್ರಪತಿಗೆ ವರ್ಗಾವಣೆ..! Read More »

ರಾಷ್ಟ್ರೀಯ ನ್ಯೂಸ್

SBI ನಲ್ಲಿ 1497 ಹುದ್ದೆಗಳು – ಅರ್ಜಿ ಸಲ್ಲಿಸಲು ಇಲ್ಲಿದೆ ??ಮಾಹಿತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.‌ 18. ವಿವಿಧ ಸ್ಪೆಷಲಿಸ್ಟ್ ಕೇಡರ್ ಆಫೀಸರ್ (SCO) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೋಂದಣಿ ಪ್ರಕ್ರಿಯೆಯನ್ನೂ ಪ್ರಾರಂಭಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್‌ಬಿಐನ ಅಧಿಕೃತ ವೆಬ್‌ಸೈಟ್ sbi.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 4 ಕೊನೆಯ ದಿನಾಂಕವಾಗಿರುತ್ತದೆ. ಎಸ್.ಬಿಐ 1,497 ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಹುದ್ದೆಗಳ ವಿವರ ಇಂತಿದೆ.

SBI ನಲ್ಲಿ 1497 ಹುದ್ದೆಗಳು – ಅರ್ಜಿ ಸಲ್ಲಿಸಲು ಇಲ್ಲಿದೆ ??ಮಾಹಿತಿ Read More »

ಉದ್ಯೋಗ

ಮರವೂರು ಸೇತುವೆ ಪರಿಶೀಲನೆ ನಡೆಸಿದ ತಾಂತ್ರಿಕ ತಜ್ಞರ ಸಮಿತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚಾರಕ್ಕೆ ಅಪಾಯಕಾರಿಯಾಗಿರುವ ಸೇತುವೆಗಳ ಪರಿಶೀಲನೆಗೆ ಬೆಂಗಳೂರಿನಿಂದ ಆಗಮಿಸಿರುವ ತಾಂತ್ರಿಕ ತಜ್ಞರ ಸಮಿತಿಯು ಮರವೂರು ಸೇತುವೆಯ ಪರಿಶೀಲನೆ ನಡೆಸಿದೆ. ಮರವೂರಿನ ಹಳೆ ಸೇತುವೆಯ ಪಿಲ್ಲರ್‌ಗೆ ಹಾನಿಯಾಗಿರುವ ಹಿನ್ನೆಲೆ ಜೂನ್ 14ರಿಂದ ಈ ಸೇತುವೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಬೃಹತ್‌ ಕ್ರೇನ್‌ ಮೂಲಕ ಸೇತುವೆಯ ಅಡಿಭಾಗಕ್ಕೆ ತೆರಳಿದ ತಾಂತ್ರಿಕ ತಜ್ಞರು ಮರವೂರು ಸೇತುವೆಯನ್ನು ಪರಿಶೀಲಿಸಿ, ಸೇತುವೆಯ ಪಿಲ್ಲರ್‌, ಗರ್ಡರ್‌ನ ಕಾಂಕ್ರೀಟ್‌ ಭಾಗಗಳನ್ನು ಸಂಗ್ರಹಿಸಿದ್ದಾರೆ. ಇದರ ಮೂಲಕ ಸೇತುವೆಯ ದೃಢತೆಯನ್ನು

ಮರವೂರು ಸೇತುವೆ ಪರಿಶೀಲನೆ ನಡೆಸಿದ ತಾಂತ್ರಿಕ ತಜ್ಞರ ಸಮಿತಿ Read More »

ಕರಾವಳಿ

ಡ್ರಗ್ಸ್ ಹಾವಳಿ ಮಟ್ಟಹಾಕಲು ಟಾಸ್ಕ್ ಫೋರ್ಸ್ ರಚನೆ- ಸಿಎಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18. ರಾಜ್ಯಾದ್ಯಂತ ಹೆಚ್ಚಾಗಿರುವ ಮಾದಕ ವಸ್ತುಗಳ ಹಾವಳಿಯನ್ನು ಮಟ್ಟಹಾಕಲು ರಾಜ್ಯಮಟ್ಟದಲ್ಲಿ ವಿಶೇಷವಾದ ಕಾರ್ಯಪಡೆ ರಚನೆಯ ಜೊತೆಗೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾದಕವಸ್ತುಗಳ ನಿಯಂತ್ರಣಕ್ಕೆ ಈಗಾಗಲೇ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ರಾಜ್ಯಮಟ್ಟದ ಉನ್ನತಾಧಿಕಾರಿಗಳ ಸಮಿತಿ ಹಾಗೂ ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ

ಡ್ರಗ್ಸ್ ಹಾವಳಿ ಮಟ್ಟಹಾಕಲು ಟಾಸ್ಕ್ ಫೋರ್ಸ್ ರಚನೆ- ಸಿಎಂ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

200 ಆನೆಗಳ ಸಹಿತ ಕಾಡು ಪ್ರಾಣಿಗಳನ್ನು ಕೊಲ್ಲಲು ಅನುಮತಿಸಿದ ಜಿಂಬಾಬ್ವೆ

(ನ್ಯೂಸ್ ಕಡಬ) newskadaba.com ನಮೀಬಿಯಾ, ಸೆ. 18. ನಮೀಬಿಯಾದ ಬಳಿಕ ಭೀಕರ ಬರಗಾಲಕ್ಕೆ ತುತ್ತಾಗಿರುವ ಆಫ್ರಿಕಾ ಖಂಡದ ಇನ್ನೊಂದು ದೇಶ ಅಲ್ಲಿನ ಕಾಡು ಪ್ರಾಣಿಗಳನ್ನು ಕೊಲ್ಲಲ್ಲು ಅನುಮತಿ ನೀಡಿದ್ದು, ನಾವು ಸುಮಾರು 200 ಆನೆಗಳನ್ನು ಕೊಲ್ಲುತ್ತೇವೆ. ಅವುಗಳ ಮಾಂಸವನ್ನು ಅವಶ್ಯವಿರುವ ಸಮುದಾಯಗಳ ಜನರಿಗೆ ಹಂಚುತ್ತೇವೆ ಎಂದು ಜಿಂಬಾಬ್ವೆ ತಿಳಿಸಿದೆ. ಜಿಂಬಾಬ್ವೆ ರಾಷ್ಟ್ರೀಯ ಉದ್ಯಾನವನ ಮತ್ತು ವನ್ಯಜೀವಿ ನಿರ್ವಹಣಾ ಪ್ರಾಧಿಕಾರದ ವಕ್ತಾರ ತಿನಶೆ ಫರವೊ ಪ್ರತಿಕ್ರಿಯಿಸಿ, ನಾವು ಅವಶ್ಯವಿರುವ ಸಮುದಾಯದ ಜನರಿಗೆ ಪ್ರಾಣಿಗಳನ್ನು ಬೇಟೆಯಾಡಲು ಅನುಮತಿ ನೀಡುತ್ತೇವೆ. ಅದೇ

200 ಆನೆಗಳ ಸಹಿತ ಕಾಡು ಪ್ರಾಣಿಗಳನ್ನು ಕೊಲ್ಲಲು ಅನುಮತಿಸಿದ ಜಿಂಬಾಬ್ವೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

‘ಒನ್ ನೇಷನ್, ಒನ್ ಎಲೆಕ್ಷನ್’ ವರದಿಗೆ ಕೇಂದ್ರ ಸರಕಾರ ಅನುಮೋದನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 18. ದೆಹಲಿಯಲ್ಲಿ ನಡೆದ ಪ್ರಧಾನಿ ಮೋದಿ ನೇತೃತ್ವದ ಸಂಪುಟ ಸಭೆಯಲ್ಲಿ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿಯು ‘ಒಂದು ದೇಶ ಒಂದು ಚುನಾವಣೆ’ ವರದಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಏಕಕಾಲದಲ್ಲಿ ಚುನಾವಣೆ ನಡೆಸುವ ಕುರಿತಾಗಿ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ 8,626 ಪುಟಗಳ ವರದಿಯನ್ನು ಸಲ್ಲಿಕೆ ಮಾಡಿತ್ತು. ಸಮಿತಿಯು ಸುಮಾರು ಏಳೆಂಟು ತಿಂಗಳುಗಳ

‘ಒನ್ ನೇಷನ್, ಒನ್ ಎಲೆಕ್ಷನ್’ ವರದಿಗೆ ಕೇಂದ್ರ ಸರಕಾರ ಅನುಮೋದನೆ Read More »

ರಾಷ್ಟ್ರೀಯ ನ್ಯೂಸ್
Scroll to Top