newskadaba

Crime

ಗಣೇಶ ವಿಸರ್ಜನೆಯ ವೇಳೆ ಮೂವರಿಗೆ ಚಾಕು ಇರಿತ

(ನ್ಯೂಸ್ ಕಡಬ) newskadaba.com ಬೆಳಗಾವಿ, ಸೆ. 18. ಗಣೇಶ ವಿಸರ್ಜನೆಯ ವೇಳೆ ನಡೆದ ಚಾಕು ಇರಿತದಿಂದಾಗಿ ಮೂವರು ಗಾಯಗೊಂಡ ಘಟನೆ ಚೆನ್ನಮ್ಮ ವೃತ್ತದ ಬಳಿ ನಡೆದಿದೆ. ಗಾಯಾಳುಗಳನ್ನು ಸಮಾಜ ಕಲ್ಯಾಣ ವಸತಿ ನಿಲಯದ ವಿದ್ಯಾರ್ಥಿಗಳಾದ ಪ್ರವೀಣ್ ಗುಂಡ್ಯಾಗೋಳ್, ದರ್ಶನ್ ಪಾಟೀಲ್ ಮತ್ತು ಸತೀಶ್ ಪೂಜಾರಿ ಎಂದು ಗುರುತಿಸಲಾಗಿದೆ. ಪ್ರವೀಣ್ ಗುಂಡ್ಯಾಗೋಳ್ ಎಂಬವರ ಸ್ಥಿತಿ ಗಂಭೀರವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದ ಇಬ್ಬರಿಗೆ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿರುವುದಾಗಿ ಮೂಲಗಳು ತಿಳಿಸಿವೆ. ಡ್ಯಾನ್ಸ್ ಮಾಡುವಾಗ ಕಾಲು ತಾಕಿದ್ದಕ್ಕೆ ಹುಡುಗರು […]

ಗಣೇಶ ವಿಸರ್ಜನೆಯ ವೇಳೆ ಮೂವರಿಗೆ ಚಾಕು ಇರಿತ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ವಿಶ್ವ ಹಿಂದಿ ದಿವಸ್ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 17. ಇಲ್ಲಿನ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ವಿಶ್ವ ಹಿಂದಿ ದಿವಸ್ ಕಾರ್ಯಕ್ರಮವನ್ನು ಮಂಗಳವಾರದಂದು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸರಸ್ವತೀ ವಿದ್ಯಾಲಯ ಪ್ರಾಥಮಿಕ ಶಾಲೆಯ ಹಿಂದಿ ಶಿಕ್ಷಕಿ ಶ್ರೀಮತಿ ಪ್ರೇಮಲತಾ ಎ ಆಗಮಿಸಿ ಹಿಂದಿ ಒಂದು ಭಾಷೆ ಅಲ್ಲ. ಸಂಸ್ಕೃತಿ, ವಿಚಾರ, ಅಭಿವ್ಯಕ್ತಿ ಹಿಂದಿಯನ್ನು ವ್ಯವಹಾರಿಕ ಕ್ಷೇತ್ರದಲ್ಲಿ ಬಳಸಲಾಗುತ್ತದೆ ಎಂದು ಅತಿಥಿ ನೆಲೆಯಲ್ಲಿ ಮಾತನಾಡಿದರು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿದ ಸರಸ್ವತೀ ಸಮೂಹ ಸಂಸ್ಥೆಯ ಸಂಚಾಲಕರಾದ ಶ್ರೀ ವೆಂಕಟರಮಣರಾವ್ ಮಂಕುಡೆ, ಭಾಷೆಯು

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ವಿಶ್ವ ಹಿಂದಿ ದಿವಸ್ ಆಚರಣೆ Read More »

ಕರಾವಳಿ

ಪ್ರತಿಯೊಂದು ವಿಮಾನದಲ್ಲೂ ಕನ್ನಡದಲ್ಲೇ ಮೊದಲ ಅನೌನ್ಸ್ ಮೆಂಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 17. ಬೆಂಗಳೂರಿನ ಏರ್ಪೋರ್ಟ್ ನಲ್ಲಿ ಲ್ಯಾಂಡಿಂಗ್ ಅಥವಾ ಟೇಕ್ ಆಫ್ ಆಗುವ ಪ್ರತಿಯೊಂದು ವಿಮಾನದಲ್ಲೂ ಮೊದಲ ಅನೌನ್ಸ್ ಮೆಂಟ್ ಕನ್ನಡದಲ್ಲೇ ಮಾಡಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ಅವರು ಮನವಿ ಸಲ್ಲಿಸಿದ್ದಾರೆ. ಈ ಸಂಬಂಧ ಮಹೇಶ್ ಜೋಶಿ ಅವರು ನಾಗರಿಕ ವಿಮಾನಯಾನ ಸಚಿವಾಲಯಕ್ಕೆ (MoCA) ಪತ್ರ ಬರೆದು ಮನವಿ ಮಾಡಲು ಮುಂದಾಗಿದ್ದಾರೆ. ಜೋಶಿ ಅವರು ಬಿಐಎಎಲ್‌ನ ಎಂಡಿ ಮತ್ತು ಸಿಇಒ ಹರಿ ಮರಾರ್ ಅವರನ್ನು ಭೇಟಿ

ಪ್ರತಿಯೊಂದು ವಿಮಾನದಲ್ಲೂ ಕನ್ನಡದಲ್ಲೇ ಮೊದಲ ಅನೌನ್ಸ್ ಮೆಂಟ್..! Read More »

ಕರ್ನಾಟಕ

ಶೀಘ್ರದಲ್ಲೇ ಜನಗಣತಿ ಕಾರ್ಯ ಆರಂಭ- ಅಮಿತ್ ಶಾ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 17. ಹತ್ತು ವರ್ಷಗಳಿಗೊಮ್ಮೆ ನಡೆಸಲಾಗುವ ಜನಗಣತಿಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಎನ್‌ಡಿಎ ಸರ್ಕಾರವು 100 ದಿನಗಳನ್ನು ಪೂರೈಸಿದ ಅಂಗವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅಮಿತ್ ಶಾ, ಜನಗಣತಿ ಕಾರ್ಯ ಶೀಘ್ರದಲ್ಲಿಯೇ ಆರಂಭವಾಗಲಿದೆ. ನಾವು ಜನಗಣತಿಯನ್ನು ಘೋಷಣೆ ಮಾಡಿದಾಗ ಎಲ್ಲಾ ವಿವರಗಳು ಅದರಲ್ಲಿ ಸಿಗಲಿವೆ. 1881ರಿಂದಲೂ ಭಾರತದಲ್ಲಿ ಪ್ರತಿ 10 ವರ್ಷಕ್ಕೊಮ್ಮೆ ಜನಗಣತಿ ನಡೆಸಲಾಗುತ್ತಿದೆ. ಜನಗಣತಿಯು 2020ರ ಏಪ್ರಿಲ್ 1ರಂದೇ ಆರಂಭವಾಗಬೇಕಿತ್ತು. ಆದರೆ,

ಶೀಘ್ರದಲ್ಲೇ ಜನಗಣತಿ ಕಾರ್ಯ ಆರಂಭ- ಅಮಿತ್ ಶಾ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

HSRP ನಂಬರ್ ಪ್ಲೇಟ್ ಅಳವಡಿಸದವರ ವಿರುದ್ದ ಸದ್ಯ ಕ್ರಮವಿಲ್ಲ- ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 17. ರಾಜ್ಯದಲ್ಲಿ ಹೆಚ್ಎಸ್ಆರ್.ಪಿ ನಂಬರ್‌ ಪ್ಲೇಟ್‌ ಅಳವಡಿಕೆಗೆ ಸಂಬಂಧಿಸಿ ಹೈಕೋರ್ಟ್‌ನಲ್ಲಿ ದಾಖಲಾಗಿರುವ ಪ್ರಕರಣದ ವಿಚಾರಣೆಯು ಸೆ.18ರಂದು ನಡೆಯಲಿದ್ದು, ಈ ಹಿನ್ನೆಲೆ ಕೋರ್ಟ್‌ ನಿರ್ದೇಶನ ನೀಡುವವರೆಗೆ HSRP ನೋಂದಣಿ ಫಲಕ ಹಾಕದವರ ವಿರುದ್ಧ ಕ್ರಮ ಕೈಗೊಳ್ಳದಿರಲು ಸಾರಿಗೆ ಇಲಾಖೆ ನಿರ್ಧರಿಸಿರುವುದಾಗಿ ತಿಳಿದುಬಂದಿದೆ. ಈಗಾಗಲೇ ರಾಜ್ಯ ಸರಕಾರ HSRP ನಂಬರ್‌ ಪ್ಲೇಟ್‌ ಅಳವಡಿಕೆಗೆ ನೀಡಲಾಗಿರುವ ಗಡುವನ್ನು 4 ಬಾರಿ ವಿಸ್ತರಿಸಿದೆ. ಹೆಚ್ಚಿನ ವಾಹನಗಳು ಇನ್ನು ಈ ನಂಬರ್‌ ಪ್ಲೇಟ್‌ ಅಳವಡಿಸದ ಕಾರಣ ಸೆ.16ರಿಂದ

HSRP ನಂಬರ್ ಪ್ಲೇಟ್ ಅಳವಡಿಸದವರ ವಿರುದ್ದ ಸದ್ಯ ಕ್ರಮವಿಲ್ಲ- ರಾಜ್ಯ ಸರಕಾರ Read More »

ಕರ್ನಾಟಕ

ಕಡಬ: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಕಡಬ, ಸೆ. 17. ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕುಂತೂರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂವರನ್ನು ಗ್ರಾಮದ ಬಾಚಡ್ಕ ನಿವಾಸಿ ಅಣ್ಣಿ ಗೌಡ (70) ಎಂದು ಗುರುತಿಸಲಾಗಿದೆ. ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅಣ್ಣಿ ಗೌಡರವರು ಸೆ.16ರ ಸೋಮವಾರದಂದು ಮಧ್ಯಾಹ್ನದ ವೇಳೆಗೆ ಮನೆ ಸಮೀಪದ ಹಲಸಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇದನ್ನು ಗಮನಿಸಿದ ಅವರ ಪುತ್ರರು ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಕಡಬ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು ಅಲ್ಲಿ

ಕಡಬ: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸುವ ವೇಳೆ ಹಳಿ ಮೇಲೆ ಬಿದ್ದ ಬಿಜೆಪಿ ಶಾಸಕಿ

(ನ್ಯೂಸ್ ಕಡಬ) newskadaba.com ಆಗ್ರಾ, ಸೆ. 17. ಇಲ್ಲಿನ ಆಗ್ರಾ-ವಾರಣಾಸಿ ವಂದೇ ಭಾರತ್‌ ಎಕ್ಸ್ ಪ್ರೆಸ್‌‍ಗೆ ಹಸಿರು ಧ್ವಜವನ್ನು ಬೀಸುವ ಸ್ಪರ್ಧೆಯಲ್ಲಿ ಬಿಜೆಪಿಯ ಇಟಾವಾ ಶಾಸಕಿ ಸರಿತಾ ಬದೌರಿಯಾ ಅವರು ರೈಲ್ವೆ ಹಳಿಗಳ ಮೇಲೆ ಬಿದ್ದ ಘಟನೆ ನಡೆದಿದ್ದು, ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಪ್ರಧಾನಿ ನರೇಂದ್ರ ಮೋದಿಯವರು ವಂದೇ ಭಾರತ್‌ ರೈಲಿನ ವರ್ಚುವಲ್‌ ಉದ್ಘಾಟನೆಯ ನಂತರ, 20175 ಸಂಖ್ಯೆಯ ರೈಲಿಗೆ ಆಗ್ರಾದಿಂದ ರೈಲು ಸಚಿವ ರವನೀತ್‌ ಸಿಂಗ್‌ ಬಿಟ್ಟು ಅವರು ಫ್ಲ್ಯಾಗ್‌ ಆಫ್‌ ಮಾಡಿದರು.ಈ

ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸುವ ವೇಳೆ ಹಳಿ ಮೇಲೆ ಬಿದ್ದ ಬಿಜೆಪಿ ಶಾಸಕಿ Read More »

ರಾಷ್ಟ್ರೀಯ ನ್ಯೂಸ್

ಹೃದಯಾಘಾತ- ಪೊಲೀಸ್ ಸಿಬ್ಬಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 17. ಉಡುಪಿ ಪೊಲೀಸ್‌ ವೈರ್‌ ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ(52) ಎಂಬವರು ಮಂಗಳವಾರದಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಉಡುಪಿ ಜಿಲ್ಲಾ ಪೊಲೀಸ್‌ನ ವೈರ್‌ ಲೆಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಇವರು ಮಲ್ಪೆಯ ಕರಾವಳಿ ಭದ್ರತಾ ಪೊಲೀಸ್‌ ನಲ್ಲಿ ಕೆಲಸ ಮಾಡುತ್ತಿದ್ದರು. ನಿತ್ಯಾನಂದ ಶೆಟ್ಟಿ ರಾತ್ರಿ ಪಾಳಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದು, ಪಾಳಿ ಮುಗಿಸಿ ಮನೆಗೆ ಮರಳಿದ್ದರು.  

ಹೃದಯಾಘಾತ- ಪೊಲೀಸ್ ಸಿಬ್ಬಂದಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಸಂಬಂಧಿಕರಿಗೆ ಲಿವರ್ ದಾನ ಮಾಡಿದ್ದ ಉಪನ್ಯಾಸಕಿ ಹಠಾತ್ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17. ಸಂಬಂಧಿ ಮಹಿಳೆಯೊಬ್ಬರಿಗೆ ಲಿವರ್ ದಾನ ಮಾಡಿ ಅವರ ಜೀವ ಉಳಿಸಿದ್ದ ನಗರದ ಉಪನ್ಯಾಸಕಿ ಅರ್ಚನಾ ಕಾಮತ್ (33) ಎಂಬವರು ಮೃತಪಟ್ಟಿರುವ ಕುರಿತು ವರದಿಯಾಗಿದೆ. ತನ್ನ ಪತಿಯ ಸಂಬಂಧಿ ಮಹಿಳೆಗೆ ಅನಾರೋಗ್ಯ ಉಂಟಾಗಿದ್ದು, ಅವರಿಗೆ ಲಿವರ್ ನ ಅಗತ್ಯವಿದ್ದ ಹಿನ್ನೆಲೆ ಅವರಿಗೆ ಲಿವರ್ ದಾನ ಮಾಡಲೆಂದು ಹಲವರನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ಆದರೆ ತಪಾಸಣೆಗೆ ಒಳಪಟ್ಟವರ ಪೈಕಿ ಯಾರೊಬ್ಬರ ರಕ್ತದ ಗುಂಪು ಕೂಡಾ ಹೊಂದಾಣಿಕೆಯಾಗದೇ ಇದ್ದು, ಉಪನ್ಯಾಸಕಿ ಅರ್ಚನಾರ ರಕ್ತದ ಗುಂಪು

ಸಂಬಂಧಿಕರಿಗೆ ಲಿವರ್ ದಾನ ಮಾಡಿದ್ದ ಉಪನ್ಯಾಸಕಿ ಹಠಾತ್ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

“ನಡುಕ ಹುಟ್ಟಿಸುತ್ತಿರುವ ನಿಫಾ ವೈರಾಣು” – ಡಾ. ಚೂಂತಾರು

(ನ್ಯೂಸ್ ಕಡಬ) newskadaba.com ಸೆ. 17. ನಿಫಾ ವೈರಸ್, ಆರ್.ಯನ್.ಎ(RNA) ಗುಂಪಿಗೆ ಸೇರಿದ ಪಾರಾಮಿಕ್ಸೊ ವೈರಾಣು ಪ್ರಭೇಧಕ್ಕೆ ಸೇರಿದ ವೈರಾಣು ಆಗಿರುತ್ತದೆ. 1999ರಲ್ಲಿ ಮಲೇಷಿಯಾದ ಒಂದು ಸಣ್ಣ ಹಳ್ಳಿಯಾದ ಸಂಗೈ ನಿಫಾ ಎಂಬ ಜಾಗದಲ್ಲಿ ಮೊದಲು ಕಾಣಿಸಿಕೊಂಡ ಕಾರಣದಿಂದ “ನಿಫಾ ವೈರಸ್” ಎಂದು ಕರೆಯಲ್ಪಡುತ್ತದೆ. ಈ ವೈರಸ್ ಹಳ್ಳಿಯ ಹಂದಿ ಸಾಕುವ ರೈತರಲ್ಲಿ ಮೊದಲು ಕಾಣಿಸಿಕೊಂಡು ಮೆದುಳಿನ ಊರಿಯೂತ ಮತ್ತು ಉಸಿರಾಟದ ತೊಂದರೆ ಉಂಟುಮಾಡಿ, ನೂರಾರು ಮಂದಿ ಅಸುನೀಗಿದ್ದರು. 300 ಮಂದಿಗೆ ರೋಗ ತಗುಲಿ 100 ಮಂದಿ

“ನಡುಕ ಹುಟ್ಟಿಸುತ್ತಿರುವ ನಿಫಾ ವೈರಾಣು” – ಡಾ. ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು
Scroll to Top