newskadaba

HSRP ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ಮುಕ್ತಾಯ – ಸೋಮವಾರದಿಂದಲೇ ದಂಡ ಫಿಕ್ಸ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 13. ರಾಜ್ಯ ಸರಕಾರ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಲು ನೀಡಿರುವ ಗಡುವು 15ರಂದು ಮುಕ್ತಾಯವಾಗಲಿದ್ದು, ಹಾಗಾಗಿ ಸೆಪ್ಟೆಂಬರ್ 16 ರಿಂದ ಹೆಚ್‌ಎಸ್‌ಆರ್ಪಿ ಅಳವಡಿಸದ ವಾಹನಗಳಿಗೆ ದಂಡ ವಿಧಿಸಲು ಸಾರಿಗೆ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಇನ್ನುಮುಂದೆ HSRP ಇಲ್ಲದ ವಾಹನಗಳಿಗೆ ಎರಡು ಬಾರಿ ದಂಡ ವಿಧಿಸಿ ಮೂರನೇ ಬಾರಿಗೆ ವಾಹನ ಜಪ್ತಿ ಮಾಡುವ ಬಗ್ಗೆಯೂ ಸಾರಿಗೆ ಇಲಾಖೆ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಕೇಂದ್ರ ಸರ್ಕಾರದ ನಿರ್ದೇಶನದನ್ವಯ 2019ರ ಏಪ್ರಿಲ್ 1ಕ್ಕಿಂತ […]

HSRP ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ಮುಕ್ತಾಯ – ಸೋಮವಾರದಿಂದಲೇ ದಂಡ ಫಿಕ್ಸ್..! Read More »

ಕರ್ನಾಟಕ

ಸಿಸಿಟಿವಿ ಆಫ್ ಮಾಡಿ ಅತ್ಯಾಚಾರಕ್ಕೆ ಯತ್ನ- ವೈದ್ಯನ ಮರ್ಮಾಂಗವನ್ನೇ ಕೊಯ್ದ ನರ್ಸ್..!

(ನ್ಯೂಸ್ ಕಡಬ) newskadaba.com ಬಿಹಾರ, ಸೆ. 13. ನರ್ಸ್‌ ಮೇಲೆ ವೈದ್ಯನೋರ್ವ ಅತ್ಯಾಚಾರಕ್ಕೆ ಯತ್ನಿಸಿದ್ದು, ಈ ವೇಳೆ ನರ್ಸ್ ಆತನ ಮರ್ಮಾಂಗಕ್ಕೆ ಬ್ಲೇಡ್ ನಿಂದ ಕೊಯ್ದು ಓಡಿಹೋಗಿರುವ ಘಟನೆ ಬಿಹಾರದ ಸಮಸ್ಟಿಪುರ ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಹೆದರುವ ಬದಲು ಧೈರ್ಯ ತೋರಿದ ನರ್ಸ್‌ ವೈದ್ಯನ ಮರ್ಮಾಂಗಕ್ಕೆ ಬ್ಲೇಡ್‌ನಿಂದ ಕೊಯ್ದು ಓಡಿ ಹೋಗುವ ಮೂಲಕ ತನ್ನನ್ನು ತಾನು ರಕ್ಷಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ವೈದ್ಯ ಹಾಗೂ ಆತನ ಇಬ್ಬರು ಸಹಚರರನ್ನು ಬಂಧಿಸಿದ್ದಾರೆ. ಈತ ಬರೀ ವೈದ್ಯ ಮಾತ್ರವಲ್ಲದೇ ಆ

ಸಿಸಿಟಿವಿ ಆಫ್ ಮಾಡಿ ಅತ್ಯಾಚಾರಕ್ಕೆ ಯತ್ನ- ವೈದ್ಯನ ಮರ್ಮಾಂಗವನ್ನೇ ಕೊಯ್ದ ನರ್ಸ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತಾಯಿ ಬೈಕ್ ಕೊಡಿಸಲಿಲ್ಲವೆಂದು ಮಗ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 13. ಹೊಸ ಬೈಕ್ ಕೊಡಿಸಲು ತಾಯಿ ನಿರಾಕರಿಸಿದ್ದಕ್ಕೆ ಮನನೊಂದ ಪದವಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಅಯ್ಯಪ್ಪ ಎಂದು ಗುರುತಿಸಲಾಗಿದೆ. ತಮಿಳುನಾಡು ಮೂಲದ ಕುಟುಂಬ ಬೆಂಗಳೂರಿನ ತಣಿಸಂದ್ರದಲ್ಲಿ ನೆಲೆಸಿತ್ತು. ಆರು ವರ್ಷಗಳ ಹಿಂದೆ ತಂದೆ ತೀರಿಕೊಂಡ ಬಳಿಕ ಯುವಕನ ತಾಯಿ ಹೌಸ್ ಕೀಪಿಂಗ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಹಣಕಾಸಿನ ಅಡಚಣೆಯಿಂದಾಗಿ, ಬೈಕ್ ಖರೀದಿಸಲು ಸಾಧ್ಯವಾಗಲಿಲ್ಲ. ಮತ್ತು ಸ್ವಲ್ಪ ಸಮಯ ಕಾಯುವಂತೆಯೂ

ತಾಯಿ ಬೈಕ್ ಕೊಡಿಸಲಿಲ್ಲವೆಂದು ಮಗ ಆತ್ಮಹತ್ಯೆಗೆ ಶರಣು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ದ್ವಿತೀಯ ಪಿಯು ಪರೀಕ್ಷಾ ಅವಧಿಯ 15 ನಿಮಿಷ ಕಡಿತಗೊಳಿಸಿ ಸರಕಾರ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 13. ಪರೀಕ್ಷಾ ಅವಧಿಯಲ್ಲಿ ಹದಿನೈದು ನಿಮಿಷ ಕಡಿತಗೊಳಿಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ನಿಗದಿಯಾಗಿದ್ದ ಸಮಯವನ್ನು ಈ ವರ್ಷದಿಂದ ಕಡಿತ ಮಾಡಲಾಗಿದ್ದು, ಈ ನಿಯಮ ಈ ವರ್ಷ ಅಂದರೆ 2024-25ನೇ ಸಾಲಿನ ಪರೀಕ್ಷೆಯಿಂದಲೇ ಜಾರಿಯಾಗಲಿದೆ. ಸಮಯ ಕಡಿತ ಮಾಡಿರುವ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ. ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಇಲಾಖೆ ವೆಬ್ ಸೈಟ್

ದ್ವಿತೀಯ ಪಿಯು ಪರೀಕ್ಷಾ ಅವಧಿಯ 15 ನಿಮಿಷ ಕಡಿತಗೊಳಿಸಿ ಸರಕಾರ ಆದೇಶ Read More »

ಕರ್ನಾಟಕ

ಬಾಲನ್ಯಾಯ ಕಾಯ್ದೆ ಮಂಡಳಿ ದ.ಕ. ಜಿಲ್ಲಾ ಸಮಿತಿ ಸದಸ್ಯರಾಗಿ ನ್ಯಾಯವಾದಿ ಸಾಹಿರಾ ಝುಬೇರ್ ನೇಮಕ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 13. ಪುತ್ತೂರು ಬಾಲನ್ಯಾಯ ಕಾಯ್ದೆ ಮಂಡಳಿ ಇದರ ದ.ಕ. ಜಿಲ್ಲಾ ಸಮಿತಿ ಸದಸ್ಯರಾಗಿ ನ್ಯಾಯವಾದಿ ನೋಟರಿ ಸಾಯಿರಾ ಝುಬೇರ್‌ರವರು ನೇಮಕಗೊಂಡಿದ್ದಾರೆ. ಪುತ್ತೂರು ದರ್ಬೆ ನಿವಾಸಿಯಾಗಿರುವ ಸಾಯಿರಾ ಝುಬೇರ್‌ ಪ್ರಸ್ತುತ ಹೈಕೋರ್ಟ್ ನ ವಕೀಲೆಯಾಗಿದ್ದಾರೆ. ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಹಿಳಾ ಸಮಿತಿ ಹಾಗೂ ಜಿಲ್ಲಾ ಕಾಂಗ್ರೆಸ್ ಮಹಿಳಾ ಸಮಿತಿಯ ಪದಾಧಿಕಾರಿಯಾಗಿದ್ದ ಇವರು, ಪ್ರಸ್ತುತ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪುತ್ತೂರು ದರ್ಬೆ ನಿವಾಸಿ, ಪ್ರಕಾಶ್

ಬಾಲನ್ಯಾಯ ಕಾಯ್ದೆ ಮಂಡಳಿ ದ.ಕ. ಜಿಲ್ಲಾ ಸಮಿತಿ ಸದಸ್ಯರಾಗಿ ನ್ಯಾಯವಾದಿ ಸಾಹಿರಾ ಝುಬೇರ್ ನೇಮಕ Read More »

ಕರಾವಳಿ

ಮುಡಾ ಹಗರಣ- ತೀರ್ಪು ಕಾಯ್ದಿರಿಸಿದ ಹೈಕೋರ್ಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 13. ಮುಡಾ ಹಗರಣಕ್ಕೆ ಸಂಬಂಧಿಸಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರ ನಿರ್ಧಾರದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಗುರುವಾರದಂದು ವಿಚಾರಣೆ ನಡೆಸಿತ್ತು. ವಾದಮಂಡನೆ ಮುಕ್ತಾಯವಾಗಿದ್ದು, ತೀರ್ಪನ್ನು ಕಾಯ್ದಿರಿಸಿರುವುದಾಗಿ ತಿಳಿದುಬಂದಿದೆ.  ಈ ಹಿನ್ನೆಲೆ ಹೈಕೋರ್ಟ್‌ ಏನು ತೀರ್ಪು ಕೊಡುತ್ತೆ ಎಂದು ಕೂತೂಹಲ ಮೂಡಿಸಿದೆ.  

ಮುಡಾ ಹಗರಣ- ತೀರ್ಪು ಕಾಯ್ದಿರಿಸಿದ ಹೈಕೋರ್ಟ್..! Read More »

ಕರ್ನಾಟಕ

ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್ – ಬಾಂಗ್ಲಾ ಪ್ರಜೆ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 13. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ ಆರೋಪದ ಮೇರೆಗೆ ಬಾಂಗ್ಲಾದೇಶದ ಪ್ರಜೆಯೋರ್ವನ ವಿರುದ್ದ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಿಸಿರುವ ಕುರಿತು ವರದಿಯಾಗಿದೆ. ಬಾಂಗ್ಲಾದೇಶದ ಪ್ರಜೆ ಸಲಾಲುದ್ದೀನ್ ಸುಹೇಬ್ ಚೌಧರಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ವರದಿಯ ಪ್ರಕಾರ ಸಲಾಲುದ್ದೀನ್ ಸುಹೇಬ್, ‘ಸೋನಿಯಾಗಾಂಧಿ ಅಂತರ್ ಧರ್ಮ ವಿವಾಹವಾಗಿದ್ದಾರೆ. ಕ್ರಿಶ್ಚಿಯನ್ ಧರ್ಮವನ್ನೇ ಪಾಲನೆ ಮಾಡುತ್ತಿರುವ ಅವರು ಅಂತರ್ ಧರ್ಮದಲ್ಲಿ ಮದುವೆಯಾಗಿ

ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್ – ಬಾಂಗ್ಲಾ ಪ್ರಜೆ ವಿರುದ್ದ ದೂರು ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇಜ್ರಿವಾಲ್ ಗೆ ಜಾಮೀನು ಮಂಜೂರುಗೊಳಿಸಿದ ಸುಪ್ರೀಂ..!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 13. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿತ್ತು. ಕೇಜ್ರಿವಾಲ್ ಅವರು ಸಿಬಿಐ ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ಅವರು ಸಲ್ಲಿಸಿರುವ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ತನ್ನ ತೀರ್ಪು ನೀಡಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾಮೀನು ಮಂಜೂರು ಮಾಡುವುದಕ್ಕೆ ಹೈಕೋರ್ಟ್ ತಡೆಯಾಜ್ಞೆ ಪ್ರಶ್ನಿಸಿ ಕೇಜ್ರಿವಾಲ್,

ಕೇಜ್ರಿವಾಲ್ ಗೆ ಜಾಮೀನು ಮಂಜೂರುಗೊಳಿಸಿದ ಸುಪ್ರೀಂ..! Read More »

ಕರಾವಳಿ

ಸೆ.17ರಂದು ವಿಶ್ವಕರ್ಮ ಜಯಂತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮವು ಸೆಪ್ಟೆಂಬರ್ 17ರಂದು ಮಂಗಳವಾರ ಮಧ್ಯಾಹ್ನ 3.30 ಗಂಟೆಗೆ ಮಂಗಳೂರಿನ ರಥಬೀದಿಯಲ್ಲಿರುವ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನದಲ್ಲಿ ನಡೆಯಲಿದೆ. ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಅವರ ಉಪಸ್ಥಿತಿಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು

ಸೆ.17ರಂದು ವಿಶ್ವಕರ್ಮ ಜಯಂತಿ ಕಾರ್ಯಕ್ರಮ Read More »

ಕರಾವಳಿ

ಉತ್ತಮ ಶಿಕ್ಷಕ ಪ್ರಶಸ್ತಿ- ಅಭಿನಂದನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ಶಿಕ್ಷಕರ ದಿನಾಚರಣೆಯ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪಡೆದ ಮಂಗಳೂರಿನ ಪಂಜಿಮೊಗರು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ವಾಣಿ ಅವರಿಗೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ  ದಕ್ಷಿಣ ಕನ್ನಡ ಜಿಲ್ಲಾ ಘಟಕ ಅಭಿನಂದಿಸಿದೆ.

ಉತ್ತಮ ಶಿಕ್ಷಕ ಪ್ರಶಸ್ತಿ- ಅಭಿನಂದನೆ Read More »

ಕರಾವಳಿ
Scroll to Top