newskadaba

70 ವರ್ಷ ಮೇಲ್ಪಟ್ಟ ನಾಗರೀಕರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ – ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 13. ಇನ್ನುಮುಂದೆ 70 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡುವುದಾಗಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಪ್ರಕಟಿಸಿದೆ. ಈ ಕುರಿತು ಮಾತನಾಡಿದ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಮಾತನಾಡಿ, 70 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರನ್ನು ಸಾರ್ವತ್ರಿಕ ಆರೋಗ್ಯ ವ್ಯಾಪ್ತಿಯಾದ ಆಯುಷ್ಮಾನ್ ಭಾರತ್ ಪಿಎಂ ಜನ ಆರೋಗ್ಯ ಯೋಜನೆ […]

70 ವರ್ಷ ಮೇಲ್ಪಟ್ಟ ನಾಗರೀಕರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ – ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಸ್ ಫುಟ್ಬೋರ್ಡ್ ನಿಂದ ಬಿದ್ದ ವಿದ್ಯಾರ್ಥಿ..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ಬಸ್ಸಿನ ಫುಟ್ ಬೋರ್ಡಲ್ಲಿ ನೇತಾಡುತ್ತಿದ್ದ ವಿದ್ಯಾರ್ಥಿಯೊಬ್ಬ ರಸ್ತೆಗೆಸೆಯಲ್ಪಟ್ಟ ಘಟನೆ ತೊಕ್ಕೊಟ್ಟು ಮೇಲ್ಸೆತುವೆ ಬಳಿ ನಡೆದಿದೆ. ತಲಪಾಡಿಯಿಂದ ಮಂಗಳೂರಿಗೆ ಬರುತ್ತಿದ್ದ ಸಿಟಿ ಬಸ್ಸೊಂದು ಪ್ರಯಾಣಿಕರನ್ನು ತುಂಬಿಸಿಕೊಂಡು ಬರುತ್ತಿದ್ದಾಗ ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಚಾಲಕ ದಿಢೀರ್‌ ಬ್ರೇಕ್‌ ಹಾಕಿದ ಪರಿಣಾಮ ಫುಟ್‌ಬೋರ್ಡ್‌ನಲ್ಲಿ ನೇತಾಡುತ್ತಿದ್ದ ವಿದ್ಯಾರ್ಥಿ ಬಸ್ಸಿನಿಂದ ಕೆಳಕ್ಕೆ ಬಿದ್ದಿದ್ದಾನೆ ಎನ್ನಲಾಗಿದೆ. ಘಟನೆಯಲ್ಲಿ ವಿದ್ಯಾರ್ಥಿ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.

ಬಸ್ ಫುಟ್ಬೋರ್ಡ್ ನಿಂದ ಬಿದ್ದ ವಿದ್ಯಾರ್ಥಿ..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಮನೆ ಗೋಡೆ ಕುಸಿದು ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ನಗರದ ಜೈಲು‌ ರಸ್ತೆಯ ಬಳಿ ಹಳೆ ಮನೆಯೊಂದನ್ನು ಕೆಡವುತ್ತಿದ್ದ ವೇಳೆ ಗೋಡೆ ಕುಸಿದು ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಮೃತ ದುರ್ದೈವಿಗಳನ್ನು ಜೇಮ್ಸ್ ಸ್ಯಾಮುವೆಲ್ ಜತ್ತನ್ನ ಮತ್ತು ಅಡ್ವಿನ್ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಜೆಸಿಬಿ ಮೂಲಕ ಮನೆಯನ್ನು ಕೆಡವುತ್ತಿದ್ದ ವೇಳೆ ಕಾಂಕ್ರೀಟ್ ಲಿಂಟೆಲ್ ಸಹಿತ ಗೋಡೆ ಮೈಮೇಲೆ ಬಿದ್ದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ಮಂಗಳೂರು: ಮನೆ ಗೋಡೆ ಕುಸಿದು ಇಬ್ಬರು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಶಾಲೆಗಳಲ್ಲಿ ರಾಜಕೀಯ ಮಾಡುವ ಶಿಕ್ಷಕರ ವಿರುದ್ದ ಸೂಕ್ತ ಕ್ರಮ – ಸಚಿವ ಬಂಗಾರಪ್ಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 12. ಇನ್ನುಮುಂದೆ ಶಾಲೆಗಳಲ್ಲಿ ಪಾಠ ಮಾಡದೇ ಇತರೆ ಕೆಲಸ ಮಾಡುತ್ತಾ ತಿರುಗಾಡುವ ಶಿಕ್ಷಕರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಕರಾದವರು ಶಾಲೆಯಲ್ಲೇ ಇದ್ದು ಮಕ್ಕಳಿಗೆ ಶಿಕ್ಷಣ ನೀಡಲಿ. ಅದು ಬಿಟ್ಟು ರಾಜಕೀಯ, ಸಂಘಟನೆ, ವ್ಯವಹಾರ ಮಾಡುತ್ತ ತಿರುಗಾಡುತ್ತಿದ್ದಾರೆ ಎಂಬ ದೂರುಗಳಿವೆ. ಶಿಕ್ಷಣಾಧಿಕಾರಿಗಳ ನಿಯಂತ್ರಣದಲ್ಲೂ ಇಲ್ಲದಂತೆ ವರ್ತಿಸುತ್ತಿರುವುದು ಗಮನಕ್ಕೆ ಬಂದಿದೆ. ಅಂತಹ ಶಿಕ್ಷಕರ ವಿರುದ್ಧ ಕ್ರಮ

ಶಾಲೆಗಳಲ್ಲಿ ರಾಜಕೀಯ ಮಾಡುವ ಶಿಕ್ಷಕರ ವಿರುದ್ದ ಸೂಕ್ತ ಕ್ರಮ – ಸಚಿವ ಬಂಗಾರಪ್ಪ Read More »

ಕರ್ನಾಟಕ

ಬಿಎಂಟಿಸಿಯ ನೂತನ ಬಸ್ ಗಳಿಗೆ ಸಿಎಂ ಚಾಲನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 12. ವಿಧಾನಸೌಧದ ಮೆಟ್ಟಿಲುಗಳ ಬಳಿ ಬಿಎಂಟಿಸಿಯ ನೂತನ ಬಸ್‌‍ಗಳಿಗೆ ಚಾಲನೆ ನೀಡಿ ತಮ್ಮ ಪ್ರಯಾಣ ಆರಂಭಿಸಿದ ಸಿಎಂ ಸಿದ್ದರಾಮಯ್ಯ ರವರು, ಬಳಿಕ ರಾಜಭವನ ರಸ್ತೆ ಮೂಲಕ ಚಾಲುಕ್ಯ ಸರ್ಕಲ್‌, ಹೈಗ್ರೌಂಡ್ಸ್ ಸರ್ಕಲ್‌ ಮೂಲಕ ಬಳ್ಳಾರಿ ರಸ್ತೆಯಲ್ಲಿ ಪ್ರಯಾಣ ಮುಂದುವರೆಸಿ, ಮೇಕ್ರಿವೃತ್ತದ ಬಳಿಯಿಂದ ಹೆಬ್ಬಾಳಕ್ಕೆ ತೆರಳಿ ಅಲ್ಲಿ ಹೆಚ್ಚುವರಿ ಸೇತುವೆ ನಿರ್ಮಾಣ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು. ಜೊತೆಗೆ ಅಲ್ಲಿಯೇ ನಡೆಯುತ್ತಿರುವ ಕೆಳಸೇತುವೆ ಹಾಗೂ ಮೇಲ್ಸೇತುವೆಗಳ ನಿರ್ಮಾಣ ಕಾಮಗಾರಿಯನ್ನು ಖುದ್ದಾಗಿ ಪರಿಶೀಲಿಸಿದರು.

ಬಿಎಂಟಿಸಿಯ ನೂತನ ಬಸ್ ಗಳಿಗೆ ಸಿಎಂ ಚಾಲನೆ Read More »

ಕರ್ನಾಟಕ
crime, arrest, suspected

ಪಡಿತರ ಅಕ್ಕಿ ಅಕ್ರಮ ಸಾಗಾಟ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಸೆ. 12. ಅಕ್ರಮವಾಗಿ ಸಾಗಿಸುತ್ತಿದ್ದ 900 ಕೆ.ಜಿ. ಪಡಿತರ ಅಕ್ಕಿ ಸಹಿತ ಆರೋಪಿಗಳಿಬ್ಬರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಂಧಿತರನ್ನು ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಹಳೇ ನರಿಪುರ ಗ್ರಾಮದ ಇಮ್ರಾನ್ ಅಲಿ(39) ಹಾಗೂ ಗರ್ಗೇಶ್ವರಿಯ ಮುಹಮ್ಮದ್ ಸಲ್ಮಾನ್ (20) ಎಂದು ಗುರುತಿಸಲಾಗಿದೆ. ಆರೋಪಿಗಳು ಚಾಮರಾಜನಗರದ ಗಾಳಿಪುರ ಕಡೆಯಿಂದ ಬೈಪಾಸ್‌ ರಸ್ತೆಯಲ್ಲಿ ಟಿ.ನರಸೀಪುರಕ್ಕೆ ಟಾಟಾ ಏಸ್ ವಾಹನದಲ್ಲಿ 19 ಪ್ಲಾಸ್ಟಿಕ್ ಚೀಲಗಳಲ್ಲಿ ಸುಮಾರು 900 ಕೆ. ಜಿ.ಪಡಿತರ ಅಕ್ಕಿಯನ್ನು

ಪಡಿತರ ಅಕ್ಕಿ ಅಕ್ರಮ ಸಾಗಾಟ- ಇಬ್ಬರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರೆಫ್ರಿಜರೇಟರ್ ಸ್ಪೋಟ- ಯುವತಿಯರಿಬ್ಬರು ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಚೆನ್ನೈ, ಸೆ. 12. ಹಾಸ್ಟೆಲ್ ನಲ್ಲಿ ಫ್ರಿಡ್ಜ್ ಸ್ಪೋಟಗೊಂಡು ಇಬ್ಬರು ಯುವತಿಯರು ಸ್ಥಳದಲ್ಲೇ ಮೃತಪಟ್ಟ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ಮಧುರೈ ಜಿಲ್ಲೆಯ ಕಟ್ರಂಪಾಳ್ಯಂ ಪ್ರದೇಶದಲ್ಲಿನ ವಿಶಾಕಾ ಖಾಸಗಿ ಮಹಿಳಾ ಹಾಸ್ಟೆಲ್‌ ನಲ್ಲಿ ಇಂದು ಮುಂಜಾನೆ 4:30ರ ಸುಮಾರಿಗೆ ಫ್ರಿಡ್ಜ್ ಸ್ಫೋಟಗೊಂಡಿದ್ದು, ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು ಉರಿಯಲಾರಂಭಿಸಿದೆ. ಘಟನೆಯಲ್ಲಿ ಮಲಗಿದ್ದ ಇಬ್ಬರು ಯುವತಿಯರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ರೆಫ್ರಿಜರೇಟರ್ ಸ್ಪೋಟ- ಯುವತಿಯರಿಬ್ಬರು ಸ್ಥಳದಲ್ಲೇ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಾಲಾ ವಾಹನ ಹರಿದು ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com ಕಲಬುರಗಿ, ಸೆ. 12. ಶಾಲಾ ವಾಹನ ಹರಿದು ನಾಲ್ಕು ವರ್ಷದ ಮಗುವೊಂದು ಸ್ಥಳದಲ್ಲೇ ಮೃತಪಟ್ಟ ಘಟನೆ ಅಫಜಲಪುರ ಪೊಲೀಸ್ ಠಾಣೆ ವ್ಯಾಪ್ತಿಯ ಶಿವಪುರ ಗ್ರಾಮದಲ್ಲಿ ನಡೆದಿದೆ. ಮೃತ ಮಗುವನ್ನು ಶಿವಪುರ ಗ್ರಾಮದ ರಾಜಶೇಖರ್ ಎಂಬವರ ಪುತ್ರಿ ಖುಷಿ ಬನ್ನಟ್ಟಿ (4) ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿ ಶಾಲಾ ವಾಹನ ಚಾಲಕ ಶ್ರೀಶೈಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಶಾಲಾ ವಾಹನದಲ್ಲಿ ಬಂದಿಳಿದ ಮಗು ತನ್ನ ತಂದೆಯನ್ನು ಕಂಡು ವಾಹನದ ಹಿಂಬದಿಯಾಗಿ ಓಡಿತ್ತು. ಇದನ್ನು ಗಮನಿಸದ

ಶಾಲಾ ವಾಹನ ಹರಿದು ಮಗು ಮೃತ್ಯು..! Read More »

ಕರಾವಳಿ

ರಿವರ್ಸ್ ತೆಗೆಯುವ ವೇಳೆ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಕಾರು..!

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 12. ಇಲ್ಲಿನ ಕಿಲ್ಲೆ ಮೈದಾನದ ಗಣೇಶೋತ್ಸವದ ಚರುಂಬುರಿ ಅಂಗಡಿಗೆ ಕಾರೊಂದು ನುಗ್ಗಿ ಇಬ್ಬರು ಗಾಯಗೊಂಡ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ರಿವರ್ಸ್ ತೆಗೆಯುವ ವೇಳೆ, ಚಾಲಕನ ನಿಯಂತ್ರಣ ತಪ್ಪಿ ಚರುಂಬುರಿ ಅಂಗಡಿಗೆ ನುಗ್ಗಿದೆ ಎಂದು ತಿಳಿದುಬಂದಿದೆ.    

ರಿವರ್ಸ್ ತೆಗೆಯುವ ವೇಳೆ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಕಾರು..! Read More »

ಕರಾವಳಿ

ತಾಯಿಯ ರಕ್ಷಿಸಿದ ಬಾಲಕಿಗೆ ಪೊಲೀಸ್ ಆಯುಕ್ತರಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ ರಿಕ್ಷಾ ಢಿಕ್ಕಿಯಾಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತಕ್ಷಣ ಧಾವಿಸಿ ಬಂದು ರಕ್ಷಿಸಿದ್ದ 7ನೇ ತರಗತಿ ವಿದ್ಯಾರ್ಥಿನಿಯಾಗಿರುವ ಬಾಲಕಿ ವೈಭವಿಯನ್ನು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತನ್ನ ಕಚೇರಿಗೆ ಕರೆಸಿ ತಮ್ಮ ಕೊಠಡಿಯಲ್ಲಿ ಪೇಟ, ಹಾರ ತೊಡಿಸಿ ಸನ್ಮಾನಿಸಿ, ಬಾಲಕಿಯ ಸಮಯ ಪ್ರಜ್ಞೆ ಮತ್ತು ಧೈರ್ಯವನ್ನು ಶ್ಲಾಘಿಸಿದರು. ಈ ಸಂದರ್ಭ ಡಿಸಿಪಿಗಳಾದ ಸಿದ್ದಾರ್ಥ ಗೋಯೆಲ್, ದಿನೇಶ್ ಕುಮಾರ್ ಬಿ.ಪಿ., ಸಂಚಾರ ವಿಭಾಗದ ಎಸಿಪಿ ನಜ್ಮಾ

ತಾಯಿಯ ರಕ್ಷಿಸಿದ ಬಾಲಕಿಗೆ ಪೊಲೀಸ್ ಆಯುಕ್ತರಿಂದ ಸನ್ಮಾನ Read More »

ಕರಾವಳಿ
Scroll to Top