newskadaba

ಸಾಯಲೆಂದು ಬಂದು ರೈಲ್ವೇ ಟ್ರ್ಯಾಕ್ ನಲ್ಲಿ ನಿದ್ರೆಗೆ ಜಾರಿದ ಯುವತಿ – ಅದೃಷ್ಟವಶಾತ್ ಪಾರು

(ನ್ಯೂಸ್ ಕಡಬ) newskadaba.com ಬಿಹಾರ, ಸೆ. 12. ಸಾಯಲೆಂದು ರೈಲ್ವೆ ಟ್ರ್ಯಾಕ್‌ ನಲ್ಲಿ ಮಲಗಿದ್ದ ಯುವತಿಯೋರ್ವಳು ರೈಲಿಗಾಗಿ ಕಾದುಕಾದು ಟ್ರ್ಯಾಕ್‌ನಲ್ಲೇ ನಿದ್ದೆಗೆ ಜಾರಿದ ವಿಚಿತ್ರ ಘಟನೆ ಬಿಹಾರದ ಮೋತಿಹಾರಿ ಜಿಲ್ಲೆಯಲ್ಲಿ ನಡೆದಿದೆ. ಮೊತಿಹಾರ್ ಜಿಲ್ಲೆಯ ರೈಲು ನಿಲ್ದಾಣವೊಂದಕ್ಕೆ ಬಂದಿದ್ದ ಯುವತಿಯೋರ್ವಳು ಅಲ್ಲೇ ಸಮೀಪವಿದ್ದ ರೈಲು ಹಳಿಗಳ ಮೇಲೆ ಮಲಗಿದ್ದಾಳೆ. ಆದರೆ ಎಷ್ಟು ಹೊತ್ತಾದರೂ ರೈಲು ಬಾರದೇ ಇದ್ದು, ಕಾದು ಕಾದು ಸುಸ್ತಾದ ಆಕೆ ಅಲ್ಲೇ ನಿದ್ದೆಗೆ ಜಾರಿದ್ದಳು. ಬಳಿಕ ತುಂಬಾ ಹೊತ್ತಿನ ನಂತರ ರೈಲು ಬಂದಿದ್ದು, ಆದರೆ […]

ಸಾಯಲೆಂದು ಬಂದು ರೈಲ್ವೇ ಟ್ರ್ಯಾಕ್ ನಲ್ಲಿ ನಿದ್ರೆಗೆ ಜಾರಿದ ಯುವತಿ – ಅದೃಷ್ಟವಶಾತ್ ಪಾರು Read More »

ರಾಷ್ಟ್ರೀಯ ನ್ಯೂಸ್

ನೆಲ್ಯಾಡಿ: ಭಾರೀ ಗಾಳಿ-ಮಳೆ ; 4 ಮನೆಗಳಿಗೆ ಹಾನಿ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ. 12. ಬುಧವಾರ ರಾತ್ರಿ ಬೀಸಿದ ಭಾರೀ ಗಾಳಿ ಮಳೆಗೆ 4 ಮನೆಗಳ ಛಾವಣಿ ಹಾನಿಗೀಡಾಗಿ 2 ವಿದ್ಯುತ್‌ ಕಂಬಗಳು ಮುರಿದುಬಿದ್ದ ಘಟನೆ ನೆಲ್ಯಾಡಿ ಜನತಾ ಕಾಲನಿಯಲ್ಲಿ ನಡೆದಿದೆ. ನೆಲ್ಯಾಡಿ ಸಂತ ಜಾರ್ಜ್‌ ಪದವಿ ಪೂರ್ವ ಕಾಲೇಜಿನ ಬಳಿ ಇರುವ ಕಾಲನಿಯ ನಿವಾಸಿಗಳಾದ ಐತ್ತಪ್ಪ, ಇಸುಬು, ಬಾಬು ಆಚಾರಿ ಹಾಗೂ ಲೋಕೇಶ್‌ ಎಂಬವರ ಮನೆ ಮೇಲ್ಛಾವಣಿಯು ಗಾಳಿಯ ವೇಗಕ್ಕೆ ಸಿಲುಕಿ ಹಾನಿಗೀಡಾಗಿದ್ದು, ಸಮೀಪದಲ್ಲಿದ್ದ ಎರಡು ವಿದ್ಯುತ್‌ ಕಂಬಗಳು ಮುರಿದು ಬಿದ್ದಿದೆ. ಘಟನಾ

ನೆಲ್ಯಾಡಿ: ಭಾರೀ ಗಾಳಿ-ಮಳೆ ; 4 ಮನೆಗಳಿಗೆ ಹಾನಿ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು…!

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 12. ಆ್ಯಕ್ಟೀವಾ ಅಪಘಾತದಲ್ಲಿ ಗಂಭೀರ ಗಾಯಗೊಂಡು, ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಕುರಿತು ತಿಳಿದು ಬಂದಿದೆ. ಮೃತ ಯುವಕನನ್ನು ಕೆಯ್ಯೂರು ಗ್ರಾಮದ ಎರಕ್ಕಳ ಬೆಳಿಯಪ್ಪ ಗೌಡರ ಪುತ್ರ ಕೀರ್ತನ್ ಗೌಡ ಎಂದು ಗುರುತಿಸಲಾಗಿದೆ. ಕೀರ್ತನ್ ಸೆ. 10ರಂದು ರಾತ್ರಿ ವೇಳೆ ತನ್ನ ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ಕೆದಂಬಾಡಿ ಗ್ರಾಮದ ತ್ಯಾಗರಾಜ ನಗರದಲ್ಲಿ ಅಪಘಾತ ಸಂಭವಿಸಿ, ಗಂಭೀರ ಗಾಯಗೊಂಡ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಯೂ ಚಿಕಿತ್ಸೆ

ಪುತ್ತೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು…! Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಗಾಂಜಾ ಮಾರಾಟಕ್ಕೆ ಯತ್ನ- ಪುತ್ತೂರು ಮೂಲದ ಯುವಕನ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 12. ಸಹೋದರಿಯ ಮದುವೆ ಮಾಡಲು ಒಡಿಶಾದಿಂದ ರೈಲಿನ ಮೂಲಕ ಗಾಂಜಾ ತಂದು ಬೆಂಗಳೂರಿನಲ್ಲಿ ಮಾರಾಟಕ್ಕೆ ಸಿದ್ಧತೆ ನಡೆಸಿದ್ದ ದ.ಕ ಜಿಲ್ಲೆಯ ಆರೋಪಿಯನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ದ.ಕ. ಜಿಲ್ಲೆಯ ಪುತ್ತೂರು ಮೂಲದ ಬದ್ರುದ್ದೀನ್‌ ಎಮದು ಗುರುತಿಸಲಾಗಿದೆ. ಆತನಿಂದ 1 ಲಕ್ಷ ರೂ. ಮೌಲ್ಯದ 5 ಕೆ.ಜಿ 20 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿರುವುದಾಗಿ ತಿಳಿದುಬಂದಿದೆ. ನಗರದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಯು ಪರಿಚಿತನೊಬ್ಬನ ಸಲಹೆಯಂತೆ ಒಡಿಶಾಕ್ಕೆ

ಗಾಂಜಾ ಮಾರಾಟಕ್ಕೆ ಯತ್ನ- ಪುತ್ತೂರು ಮೂಲದ ಯುವಕನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಮುಂಬೈ ವಾಲ್ಕೇಶ್ವರ ಶ್ರೀಕಾಶಿ ಮಠಕ್ಕೆ ಭೇಟಿ – ಜಿಎಸ್ಬಿ ಸೇವಾ ಮಂಡಲ ಶ್ರೀ ಗಣೇಶನ ದರ್ಶನ ಪಡೆದ ಸಂಸದ ಕ್ಯಾ.ಚೌಟ

(ನ್ಯೂಸ್ ಕಡಬ) newskadaba.com ಮುಂಬೈ, ಸೆ. 12. ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮಂಗಳವಾರದಂದು ಸಂಜೆ ಮುಂಬೈನಲ್ಲಿರುವ ವಾಲ್ಕೇಶ್ವರ ಶ್ರೀ ಕಾಶಿ ಮಠಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.. ವಾರಣಾಸಿಯ ಶ್ರೀ ಕಾಶಿಮಠ ಸಂಸ್ಥಾನದ ಶಾಖಾ ಮಠವಾಗಿರುವ ವಾಲ್ಕೇಶ್ವರ ಶ್ರೀ ಕಾಶಿ ಮಠವು ಅಗಾಧ ಅಧ್ಯಾತ್ಮದ ಶಕ್ತಿ ಕೇಂದ್ರವಾಗಿದೆ. ಜಿಎಸ್ಬಿ ಸಮುದಾಯದವರ ಪ್ರಮುಖ ಧಾರ್ಮಿಕ ಶಕ್ತಿಯ ಪವಿತ್ರ ನೆಲವಿದು. ಸುಮಾರು 5000 ವರ್ಷಗಳ ಹಿಂದಿನ ವೇದವ್ಯಾಸರ ವಂಶಕ್ಕೆ ಸೇರಿದ ಶ್ರೀ ಕಾಶಿಮಠ

ಮುಂಬೈ ವಾಲ್ಕೇಶ್ವರ ಶ್ರೀಕಾಶಿ ಮಠಕ್ಕೆ ಭೇಟಿ – ಜಿಎಸ್ಬಿ ಸೇವಾ ಮಂಡಲ ಶ್ರೀ ಗಣೇಶನ ದರ್ಶನ ಪಡೆದ ಸಂಸದ ಕ್ಯಾ.ಚೌಟ Read More »

ರಾಷ್ಟ್ರೀಯ ನ್ಯೂಸ್

ಇನ್ನುಮುಂದೆ ಅಂಡರ್- 19 ವನಿತೆಯರಿಗೂ ಟಿ20 ಏಷ್ಯಾಕಪ್- ಎಸಿಸಿ

(ನ್ಯೂಸ್ ಕಡಬ) newskadaba.com ಮಲೇಷ್ಯಾ, ಸೆ. 12. ಇನ್ನು ಮಹಿಳೆಯರಿಗೂ ಕೂಡಾ ಅಂಡರ್-19 ಟಿ20 ಏಷ್ಯಾಕಪ್ ಆಯೋಜಿಸುವುದಾಗಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥ ಜಯ್‌ ಶಾ ಘೋಷಿಸಿದ್ದಾರೆ. ಬುಧವಾರದಂದು ಮಲೇಶ್ಯಾದಲ್ಲಿ ನಡೆದ ನಡೆದ ಎಸಿಸಿ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿರುವುದಾಗಿ ತಿಳಿದುಬಂದಿದೆ. ಏಷ್ಯಾದ ಮಹಿಳಾ ಕ್ರಿಕೆಟಿಗರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಬೇಕು. ಈ ನಿಟ್ಟಿನಲ್ಲಿ ಅವರಿಗೆ ಅಂಡ‌ರ್ -19 ಟೂರ್ನಿ ಮೂಲಕ ಉತ್ತಮ ವೇದಿಕೆ ಒದಗಿಸಿಕೊಡುತ್ತೇವೆ ಎಂದು ಶಾ ತಿಳಿಸಿದ್ದಾರೆ. ಪ್ರತಿ ಬಾರಿ ಮಹಿಳಾ

ಇನ್ನುಮುಂದೆ ಅಂಡರ್- 19 ವನಿತೆಯರಿಗೂ ಟಿ20 ಏಷ್ಯಾಕಪ್- ಎಸಿಸಿ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಯನಾಡು- ಭೂಕುಸಿತದಲ್ಲಿ ಕುಟುಂಬ ಸದಸ್ಯರನ್ನು ಕಳೆದುಕೊಂಡ ಯುವತಿಗೆ ಬಿಗ್ ಶಾಕ್ – ಮದುವೆಯಾಗಲಿರುವ ಯುವಕ ಅಪಘಾತದಲ್ಲಿ ಮೃತ್ಯು…!

(ನ್ಯೂಸ್ ಕಡಬ) newskadaba.com ಕೇರಳ, ಸೆ. 12. ಇತ್ತೀಚೆಗೆ ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಇಡೀ ಕುಟುಂಬವನ್ನು ಕಳೆದುಕೊಂಡು ನೊಂದಿದ್ದ ಯುವತಿಯು ಇದೀಗ ಮದುವೆಯಾಗಬೇಕಿದ್ದ ವರನನ್ನೂ ಕಳೆದುಕೊಂಡು ಬರಸಿಡಿಲು ಬಡಿದಂತಾಗಿದೆ. ಕಳೆದ ಜುಲೈ ತಿಂಗಳಲ್ಲಿ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಇಡೀ ಕುಟುಂಬವನ್ನೇ ಕಳೆದುಕೊಂಡಿದ್ದ ಯುವತಿ ಇದೀಗ ಆಕೆ ಮದುವೆಯಾಗಬೇಕಿದ್ದ ವರ ಜೆನ್ಸನ್ ಕೂಡಾ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎನ್ನಲಾಗಿದೆ. ವರದಿಯ ಪ್ರಕಾರ, ಜೆನ್ಸನ್​ ಪ್ರಯಾಣಿಸುತ್ತಿದ್ದ ಕಾರು ಬಸ್​ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಶೃತಿ,

ವಯನಾಡು- ಭೂಕುಸಿತದಲ್ಲಿ ಕುಟುಂಬ ಸದಸ್ಯರನ್ನು ಕಳೆದುಕೊಂಡ ಯುವತಿಗೆ ಬಿಗ್ ಶಾಕ್ – ಮದುವೆಯಾಗಲಿರುವ ಯುವಕ ಅಪಘಾತದಲ್ಲಿ ಮೃತ್ಯು…! Read More »

ಕರಾವಳಿ

ಕುರಿದೊಡ್ಡಿಗೆ ನುಗ್ಗಿ 10 ಕುರಿಗಳನ್ನು ಬಲಿಪಡೆದ ಚಿರತೆ..!

(ನ್ಯೂಸ್ ಕಡಬ) newskadaba.com ಕೋಲಾರ, ಸೆ. 11. ರಾತ್ರಿ ವೇಳೆ ಕುರಿದೊಡ್ಡಿಗೆ ನುಗ್ಗಿದ ಚಿರತೆಯೊಂದು ಸುಮಾರು ಹತ್ತು ಕುರಿಗಳನ್ನು ತಿಂದು ಮುಗಿಸಿರುವ ಘಟನೆ ಕೋಲಾರ ತಾಲ್ಲೂಕು ಅಬ್ಬಣಿ ಗ್ರಾಮದಲ್ಲಿ ಜರುಗಿದೆ. ಕೋಲಾರ ತಾಲ್ಲೂಕಿನ ಅಬ್ಬಣಿ ಗ್ರಾಮದ ನಾರಾಯಣಪ್ಪ ಎಂಬವರಿಗೆ ಸೇರಿದ ಕುರಿಗಳಾಗಿದ್ದು, ಕಳೆದೊಂದು ವಾರದಲ್ಲಿ ಇದು ನಾಲ್ಕನೇ ಬಾರಿ ಚಿರತೆಯಿಂದ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ. ಗ್ರಾಮದಲ್ಲಿ ಸುಮಾರು 20ಕ್ಕೂ ಹೆಚ್ಚು ಕುರಿಗಳನ್ನು ಚಿರತೆ ತಿಂದಿದ್ದು, ಗ್ರಾಮಸ್ಥರಲ್ಲಿಆತಂಕ ಸೃಷ್ಟಿಸಿದೆ. ಚಿರತೆ ಹಿಡಿದು ಅರಣ್ಯಕ್ಕೆ ಬಿಡುವಂತೆ ಗ್ರಾಮಸ್ಥರು

ಕುರಿದೊಡ್ಡಿಗೆ ನುಗ್ಗಿ 10 ಕುರಿಗಳನ್ನು ಬಲಿಪಡೆದ ಚಿರತೆ..! Read More »

ಕರ್ನಾಟಕ

ಜೀವಂತ ಶ್ವಾನವನ್ನು ತ್ಯಾಜ್ಯ ವಾಹನಕ್ಕೆ ನೀಡಿದ ಮಾಲಕರು..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ಜೀವಂತ ನಾಯಿಯನ್ನು ಅದರ ಮಾಲಕರು ಪಾಲಿಕೆಯ ತ್ಯಾಜ್ಯ ಕೊಂಡೊಯ್ಯವ ವಾಹನಕ್ಕೆ ಕೊಟ್ಟಂತಹ ಹೇಯ ಕೃತ್ಯ ನಗರದ ಡೊಂಗರಕೇರಿಯಲ್ಲಿ ನಡೆದಿದೆ. ಇಲ್ಲಿ ವಾಸಿಸುವ ಒಂದು ಕುಟುಂಬದ ಸದಸ್ಯರು ಬೇರೆ ದೇಶದಲ್ಲಿ ವಾಸಿಸುತ್ತಿದ್ದು, ವೃದ್ಧ ಮಹಿಳೆ ಮಾತ್ರ ಈ ಮನೆಯಲ್ಲಿ ವಾಸವಾಗಿದ್ದರು. ಇಲ್ಲಿನ ಶ್ವಾನವೊಂದು ಇತ್ತೀಚೆಗೆ ಕೆಲವು ಕಡೆ ಉಪಟಳ ನೀಡಿರುವ ಹಿನ್ನೆಲೆ ಮನೆಗೆ ಬರುವ ತ್ಯಾಜ್ಯ ವಿಲೇವಾರಿ ವಾಹನಕ್ಕೆ ಜೀವಂತ ನಾಯಿಯನ್ನು ನೀಡಲಾಗಿದೆ. ಘಟನೆಯನ್ನು ಸ್ಥಳೀಯರು ಮೊಬೈಲಿನಲ್ಲಿ ವೀಡಿಯೊ ರೆಕಾರ್ಡ್

ಜೀವಂತ ಶ್ವಾನವನ್ನು ತ್ಯಾಜ್ಯ ವಾಹನಕ್ಕೆ ನೀಡಿದ ಮಾಲಕರು..! Read More »

ಕರಾವಳಿ

ಕಾಡಾನೆ ದಾಳಿ- ಅಪಾರ ಪ್ರಮಾಣದ ಭತ್ತದ ಪೈರು, ತೆಂಗು, ಅಡಿಕೆ, ಬಾಳೆಗಿಡ ನಾಶ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 11. ಗದ್ದೆ, ತೊಟಗಳಿಗೆ ನುಗ್ಗಿರುವ ಎರಡು ಕಾಡಾನೆಗಳು ದಾಳಿ ನಡೆಸಿ ಅಪಾರ ಪ್ರಮಾಣದ ಕೃಷಿ ಹಾನಿಯುಂಟು ಮಾಡಿರುವ ಘಟನೆ ತಾಲೂಕಿನ ಪುದುವೆಟ್ಟು ಗ್ರಾಮದ ನಡ್ವೈಲ್ ಬೈಲಿನಲ್ಲಿ ನಡೆದಿದೆ. ಸ್ಥಳೀಯರಾದ ಭಿರ್ನಾಲಿ ಚಂದಪ್ಪ ಗೌಡ, ಲಿಂಗಪ್ಪ ಸಾಲಿಯಾನ್ ಕೂಡೈ, ಆನಂದ ಗೌಡ ಹೊಸಮನೆ, ನಾರಾಯಣ ಗೌಡ ಗುತ್ತು, ಪಟ್ಲ ದೇಜಪ್ಪ ಗೌಡ ಮೊದಲಾದವರ ತೋಟ ಹಾಗೂ ಗದ್ದೆಗಳಿಗೆ ನುಗ್ಗಿರುವ ಆನೆಗಳು 8 ತೆಂಗಿನ ಮರಗಳು, 10 ಅಡಿಕೆ ಮರ ಹಾಗೂ 10

ಕಾಡಾನೆ ದಾಳಿ- ಅಪಾರ ಪ್ರಮಾಣದ ಭತ್ತದ ಪೈರು, ತೆಂಗು, ಅಡಿಕೆ, ಬಾಳೆಗಿಡ ನಾಶ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top