newskadaba

crime, arrest, suspected

ಮಾದಕ ವಸ್ತು ಸಹಿತ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 07. ನಿಷೇಧಿತ ಮಾದಕ ವಸ್ತು ಸೇವನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಡ್ರಗ್ಸ್ ಸಹಿತ ಯುವಕನೋರ್ವನನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನ್ನು ಅಶೋಕ ನಗರದ ಹಿಮಾನಿಷ್ (27) ಎಂದು ಗುರುತಿಸಲಾಗಿದೆ.  ಪೊಲೀಸರು ಸೆ. 03ರಂದು ಪಡೀಲ್ ಜಂಕ್ಷನ್ ಬಳಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ಸಂದರ್ಭ ಅನುಮಾನಗೊಂಡ ಕಾರನ್ನು ನಿಲ್ಲಿಸಿ ಅದರ ಚಾಲಕನನ್ನು ವಿಚಾರಿಸಿದಾಗ ಆತ ಕೇರಳ ಕಡೆಯಿಂದ ಬಂದಿದ್ದು ಡ್ರಗ್ಸ್ ಸೇವಿಸಿರುವುದಾಗಿ ತಿಳಿಸಿದ್ದಾನೆ. ಅದರಂತೆ ಕಾರನ್ನು ತಪಾಸಣೆ ನಡೆಸಿದ ಪೊಲೀಸರಿಗೆ ಕಾರಿನಲ್ಲಿ […]

ಮಾದಕ ವಸ್ತು ಸಹಿತ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಡೆಗೆ ಅಪ್ಪಳಿಸಿ ಮಗುಚಿಬಿದ್ದ ದೋಣಿ- ಮೀನುಗಾರರ ರಕ್ಷಣೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 07. ಆಳಸಮುದ್ರ ಮೀನುಗಾರಿಕೆಯ ಬೋಟೊಂದು ಮಲ್ಪೆ ಬಂದರಿನಿಂದ ಹೊರಟು ತೆಂಗಿನಗುಂಡಿ ಬಂದರಿನ ಬಳಿ ಬಂಡೆಗೆ ಬಡಿದು ಸಮುದ್ರದಲ್ಲಿ ಮುಳುಗಿದ ಘಟನೆ ಭಟ್ಕಳ ಸಮೀಪ ನಡೆದಿದೆ. ಕೊಡವೂರಿನ ಸವಿತಾ ಎಸ್ ಸಾಲಿಯಾನ್ ಒಡೆತನದ ಶ್ರೀ ಕುಲಮಹಾಸ್ತ್ರೀ ಫಿಶರೀಸ್ ಎಂಬ ಬೋಟ್, ಸೆಪ್ಟೆಂಬರ್ 5 ರಂದು ಮುಂಜಾನೆ 4 ಗಂಟೆಯ ಸುಮಾರಿಗೆ ಮಲ್ಪೆ ಬಂದರಿನಿಂದ ಹೊರಟು, ಬೈಂದೂರಿನಿಂದ ಸುಮಾರು 13 ನಾಟಿಕಲ್ ಮೈಲಿ ದೂರದಲ್ಲಿ, ಒಂದು ಟ್ರಾಲ್ ಮುಗಿಸಿ ಸೆಕೆಂಡ್ ಟ್ರಾಲ್ ಆರಂಭಿಸಿದ

ಬಂಡೆಗೆ ಅಪ್ಪಳಿಸಿ ಮಗುಚಿಬಿದ್ದ ದೋಣಿ- ಮೀನುಗಾರರ ರಕ್ಷಣೆ Read More »

ಕರಾವಳಿ, ಕ್ರೈಮ್ ನ್ಯೂಸ್

ನಟ ದರ್ಶನ್ ಸೆಲ್ ಗೆ ಟಿವಿ ಅಳವಡಿಕೆ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಸೆ. 07. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್‌ ಇರುವ ಸೆಲ್ ಗೆ ಟಿವಿ ಅಳವಡಿಸಲಾಗಿದ್ದು, ಈ ಮೂಲಕ ಮೂರನೇ ಬಾರಿಗೆ ದರ್ಶನ್ ಅವರ ಬೇಡಿಕೆಯನ್ನು ಜೈಲಾಧಿಕಾರಿಗಳು ಈಡೇರಿಕೆ ಮಾಡಿರುವುದಾಗಿ ವರದಿಯಾಗಿದೆ. ನಟ ದರ್ಶನ್ ಕಳೆದ ಐದು ದಿನಗಳ ಹಿಂದೆ ಟಿವಿಗಾಗಿ ಬೇಡಿಕೆ ಇಟ್ಟಿದ್ದರು. ಇದೀಗ ಕೊನೆಗೂ ಇಂದು ಬೆಳಗ್ಗೆ ದರ್ಶನ್ ಇರುವ ಸೆಲ್‌ಗೆ ಟಿವಿ ಅಳವಡಿಸಲಾಗಿದೆ.

ನಟ ದರ್ಶನ್ ಸೆಲ್ ಗೆ ಟಿವಿ ಅಳವಡಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Theft, crime, Robbery

ಮನೆ ಕೆಲಸಕ್ಕೆ ಬಂದವರಿಂದ ಕಳ್ಳತನ – ಯುವತಿಯರಿಬ್ಬರು ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಸರಗೊಡು, ಸೆ. 07. ಮನೆಕೆಲಸಕ್ಕೆ ಬಂದಿದ್ದ ಯುವತಿಯರಿಬ್ಬರು ಚಿನ್ನಾಭರಣ, ಐ ಫೋನ್ ಹಾಗೂ ಸ್ಮಾರ್ಟ್ ವಾಚ್ ಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಮನೆಯವರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕುಂಬಳೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತರನ್ನು ಪತ್ತನಂತ್ತಿಟ್ಟ ಮೂಲದ ಬ್ಲೆಸಿ (23) ಮತ್ತು ಜಿನ್ಸಿ (22) ಎಂದು ಗುರುತಿಸಲಾಗಿದೆ. ಕಯ್ಯಾರಿನಲ್ಲಿ ವಾಸ್ತವ್ಯ ಹೂಡಿ ಮನೆ ಕೆಲಸಕ್ಕೆ ತೆರಳುತ್ತಿದ್ದ ಇವರು ಒಂದು ತಿಂಗಳ ಹಿಂದೆ ಕುಬಣೂರಿನ ಸೈನುದ್ದೀನ್ ಎಂಬವರ ಮನೆಗೆ ಕೆಲಸಕ್ಕೆ ತೆರಳಿದ್ದ

ಮನೆ ಕೆಲಸಕ್ಕೆ ಬಂದವರಿಂದ ಕಳ್ಳತನ – ಯುವತಿಯರಿಬ್ಬರು ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಸ್ತೆ ಅಪಘಾತ- ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 07. ಲಾರಿ ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಮಂಜನಾಡಿಯ ಮಂಗಳಾಂತಿ ಮಸೀದಿ ಬಳಿ ನಡೆದಿದೆ.   ಮೃತರನ್ನು ಮಂಜೇಶ್ವರದ ಪೈವಳಿಕೆ ಕಲ್ಲೇಕರುಗುತ್ತು ನಿವಾಸಿ ಚಂದ್ರಹಾಸ್ ಶೆಟ್ಟಿ (67) ಎಂದು ಗುರುತಿಸಲಾಗಿದೆ. ಮೃತ ಚಂದ್ರಹಾಸ ಶೆಟ್ಟಿಯವರು ಹರೇಕಲ್ ದೆಬ್ಬೇಲಿಯಲ್ಲಿರುವ ತಮ್ಮ ಪತ್ನಿಯ ಮನೆಯಿಂದ ಕಲ್ಲೇಕರುಗುತ್ತು ಕಡೆಗೆ ಹೋಗುತ್ತಿದ್ದಾಗ ಅವರ ಸ್ಕೂಟರ್‌ಗೆ ಲಾರಿ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಈ ಕುರಿತು ಮಂಗಳೂರು

ರಸ್ತೆ ಅಪಘಾತ- ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕೆ.ಎಸ್.ಆರ್.ಟಿ.ಸಿ ಶಿಶಿಕ್ಷು ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 07. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗದಿಂದ ಶಿಶಿಕ್ಷು ವೃತ್ತಿಗಳಲ್ಲಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಅರ್ಜಿ ಸಲ್ಲಿಸಲು ಮೂಲ ದಾಖಲಾತಿಗಳೊಂದಿಗೆ ಶಿಶು ಆಯ್ಕೆ ಸಮಿತಿಯ ಮುಂದೆ ನೇರ ಸಂದರ್ಶನಕ್ಕೆ ಹಾಜರಾಗಲು ಸೆಪ್ಟೆಂಬರ್ 25 ರವರೆಗೆ ಅವಧಿ ವಿಸ್ತರಿಸಲಾಗಿದೆ. ಸೆಪ್ಟೆಂಬರ್ 25 ರಂದು ಬೆಳಿಗ್ಗೆ 10 ಗಂಟೆಗೆ ಮೂಲ ದಾಖಲಾತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗ, ವಿಭಾಗೀಯ ನಿಯಂತ್ರಣ ಅಧಿಕಾರಿ

ಕೆ.ಎಸ್.ಆರ್.ಟಿ.ಸಿ ಶಿಶಿಕ್ಷು ತರಬೇತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಎಚ್ಐವಿ, ಏಡ್ಸ್ ಬಗ್ಗೆ ಅರಿವು ಮೂಡಿಸಲು ಸೆಪ್ಟೆಂಬರ್ 8ರಂದು ಮ್ಯಾರಥಾನ್ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 07. ಜಿಲ್ಲೆಯಲ್ಲಿ ಎಚ್‍.ಐವಿ, ಏಡ್ಸ್ ಬಗ್ಗೆ ಅರಿವು ಸೇವಾ ಸೌಲಭ್ಯಗಳ ಮಾಹಿತಿ ಕಳಂಕ ಮತ್ತು ತಾರತಮ್ಯವನ್ನು ತಡೆಗಟ್ಟುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು 17 ರಿಂದ 25 ವರ್ಷದ ಕಾಲೇಜು ವಿದ್ಯಾರ್ಥಿಗಳಿಗೆ  ಸೆಪ್ಟೆಂಬರ್ 8ರಂದು ಭಾನುವಾರ ಬೆಳಿಗ್ಗೆ 6:00ಗೆ ಮ್ಯಾರಥಾನ್ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಮಂಗಳ ಕ್ರೀಡಾಂಗಣದಿಂದ ಮ್ಯಾರಥಾನ್ ಸ್ಪರ್ಧೆಯನ್ನು ಆರಂಭಿಸಿ ಕುದ್ರೋಳಿ ಮಾರ್ಗವಾಗಿ ಹಳೆ ಚಿತ್ರಮಂದಿರ ಮುಂಭಾಗದಿಂದ ಡೊಂಗರಕೇರಿ ಮಾರ್ಗವಾಗಿ ಪಿವಿಎಸ್ ವೃತ್ತದಿಂದ ಎಂಜಿ ರೋಡ್ ಮಾರ್ಗವಾಗಿ ಮಹಾನಗರ ಪಾಲಿಕೆ

ಎಚ್ಐವಿ, ಏಡ್ಸ್ ಬಗ್ಗೆ ಅರಿವು ಮೂಡಿಸಲು ಸೆಪ್ಟೆಂಬರ್ 8ರಂದು ಮ್ಯಾರಥಾನ್ ಸ್ಪರ್ಧೆ Read More »

ಕರಾವಳಿ, ಕರ್ನಾಟಕ

ಸೆಪ್ಟೆಂಬರ್ 19ರಂದು ಮನಪಾ ಮೇಯರ್ ಉಪಮೇಯರ್ ಚುನಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 07. ಮಂಗಳೂರು ಮಹಾನಗರ ಪಾಲಿಕೆ 25ನೇ ಅವಧಿಯ ಮೇಯರ್ ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರುಗಳ ಚುನಾವಣೆಯು ಸೆಪ್ಟೆಂಬರ್ 19ರಂದು ಗುರುವಾರ ಮಧ್ಯಾಹ್ನ 12 ಗಂಟೆಗೆ ಮಂಗಳೂರು ಮಹಾನಗರ ಪಾಲಿಕೆಯ ಮಂಗಳ ಸಭಾಂಗಣದಲ್ಲಿ ನಡೆಯಲಿದೆ.

ಸೆಪ್ಟೆಂಬರ್ 19ರಂದು ಮನಪಾ ಮೇಯರ್ ಉಪಮೇಯರ್ ಚುನಾವಣೆ Read More »

ಕರಾವಳಿ

ಸರಕಾರಿ ಮಹಿಳಾ ಐಟಿಐ- ಖಾಲಿ ಸೀಟುಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 07. ಮಂಗಳೂರಿನ ಸರ್ಕಾರಿ ಐಟಿಐ ಮಹಿಳಾ ಸಂಸ್ಥೆಯಲ್ಲಿ ತರಬೇತಿಗಾಗಿ ಎಸ್.ಎಸ್.ಎಲ್.ಸಿ ಪಾಸಾದ ಹಾಗೂ ಕರ್ನಾಟಕದಲ್ಲಿ 5 ವರ್ಷ ವ್ಯಾಸಂಗ ಮಾಡಿರುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಸೆಪ್ಟೆಂಬರ್ 30ರ ವರೆಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಇರುವ ಸೀಟುಗಳ ವಿವರ :- ಎಲೆಕ್ಟ್ರಾನಿಕ್ ಮೆಕ್ಯಾನಿಕ್ ತರಬೇತಿ- ಅವಧಿ 2 ವರ್ಷ, ಖಾಲಿ ಇರುವ ಸೀಟುಗಳು 18. ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್ – ತರಬೇತಿ ಅವಧಿ ಎರಡು ವರ್ಷ, ಖಾಲಿ ಇರುವ

ಸರಕಾರಿ ಮಹಿಳಾ ಐಟಿಐ- ಖಾಲಿ ಸೀಟುಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 07. ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಮಂಗಳೂರು (ನಗರ) ವ್ಯಾಪ್ತಿಯ 7 ಅಂಗನವಾಡಿ ಕೇಂದ್ರಗಳಿಗೆ ಕಾರ್ಯಕರ್ತೆ ಹಾಗೂ 38 ಅಂಗನವಾಡಿ ಕೇಂದ್ರಗಳ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಪಿ.ಯು.ಸಿ. ಉತ್ತೀರ್ಣರಾಗಿರಬೇಕು. ಅಂಗನವಾಡಿ ಸಹಾಯಕಿಯರ ಹುದ್ದೆಗೆ 10ನೇ ತರಗತಿ ಉತ್ತೀರ್ಣರಾಗಿರಬೇಕು. ಅರ್ಹ ಅಭ್ಯರ್ಥಿಗಳು ಆನ್‍ ಲೈನ್ ವೆಬ್‍ ಸೈಟ್ ವಿಳಾಸ: https://karnemakaone.kar.nic.in/abcd/ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 26 ಕೊನೆಯ ದಿನ. ಖಾಲಿಹುದ್ದೆಗಳ ವಿವರ

ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ
Scroll to Top