newskadaba

​B.Sc ನರ್ಸಿಂಗ್ ಮತ್ತು GNM ಮುಗಿದಿದೆಯೇ? 400 ಸ್ಟಾಫ್ ನರ್ಸ್ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ಜು. 21. ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸ್ಟಾಫ್ ನರ್ಸ್ ನೇಮಕಾತಿ ಅಧಿಸೂಚನೆಗೆ ಸಂಬಂಧಿಸಿ ಆದೇಶ ಹೊರಡಿಸಲಾಗಿದೆ. ​ನೇಮಕಾತಿ ವಿವರಗಳು ​ಇಲಾಖೆ: ಕರ್ನಾಟಕ ಸರ್ಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಂಗಳೂರು. ​ಹುದ್ದೆಯ ಹೆಸರು: ಸ್ಟಾಫ್ ನರ್ಸ್ / ನರ್ಸಿಂಗ್ ಆಫೀಸರ್ (Staff Nurse / Nursing Officer) ​ಒಟ್ಟು ಹುದ್ದೆಗಳು: 400 ​ಅರ್ಜಿ ಅವಧಿ: 1 ತಿಂಗಳು ​ಗರಿಷ್ಠ ವಯೋಮಿತಿ: 45 ವರ್ಷಗಳು ​ವಿದ್ಯಾರ್ಹತೆ: B.Sc […]

​B.Sc ನರ್ಸಿಂಗ್ ಮತ್ತು GNM ಮುಗಿದಿದೆಯೇ? 400 ಸ್ಟಾಫ್ ನರ್ಸ್ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ Read More »

ಉದ್ಯೋಗ, ಕರ್ನಾಟಕ

ಎಸ್.ಸಿ/ಎಸ್.ಟಿ ಪದವೀಧರರಿಗೆ ಡಿಜಿಟಲ್ ಮಾಧ್ಯಮ ಸ್ಥಾಪಿಸಲು ಧನ ಸಹಾಯ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 21. ಪತ್ರಿಕೋದ್ಯಮ ಪದವಿ ಪಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ ಯುವತಿಯರು ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಉದ್ಯಮವನ್ನು ಸ್ಥಾಪಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಹಾಗೂ ಅರ್ಜಿಯನ್ನು ಪಡೆಯಲು ಉರ್ವಸ್ಟೋರ್ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿರುವ ಸಮಾಜ ಕಲ್ಯಾಣ ಇಲಾಖೆ (ದೂರವಾಣಿ ಸಂಖ್ಯೆ: 0824-2451237 & 9480843030) ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ

ಎಸ್.ಸಿ/ಎಸ್.ಟಿ ಪದವೀಧರರಿಗೆ ಡಿಜಿಟಲ್ ಮಾಧ್ಯಮ ಸ್ಥಾಪಿಸಲು ಧನ ಸಹಾಯ- ಅರ್ಜಿ ಆಹ್ವಾನ Read More »

ಕರಾವಳಿ

ಖಾದಿ ವಸ್ತ್ರಗಳ ವಿಶೇಷ ರಿಯಾಯಿತಿ ಮಾರಾಟ

(ನ್ಯೂಸ್ ಕಡಬ) newskadaba.com ಜು. 21. ಸರ್ಕಾರದ ಆದೇಶದಂತೆ ಸರ್ಕಾರವು ಖಾದಿ ಬಳಕೆಯನ್ನು ಉತ್ತೇಜಿಸಲು ಒಂದು ಮಹತ್ವದ ನಿರ್ಧಾರವನ್ನು ಕೈಗೊಂಡು ರಾಜ್ಯದ ಎಲ್ಲಾ ಸರ್ಕಾರಿ/ ಅನುದಾನಿತ ಸಂಸ್ಥೆಗಳು/ ನಿಗಮ/ಮಂಡಳಿ/ಸ್ವಾಯತ್ತ ಸಂಸ್ಥೆಗಳು/ ವಿಶ್ವವಿದ್ಯಾಲಯಗಳ ಅಧಿಕಾರಿ/ನೌಕರರುಗಳು ಸ್ವಯಂ ಪ್ರೇರಣೆಯಿಂದ ಪ್ರತಿ ತಿಂಗಳ ಮೊದಲ ಶನಿವಾರದಂದು ಖಾದಿ ಉಡುಪನ್ನು ಧರಿಸುವುದು ಅಲ್ಲದೇ, ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವ ಸೇರಿದಂತೆ ಎಲ್ಲಾ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವಾಗ ಖಾದಿ ಉಡುಪನ್ನು ಧರಿಸುವಂತೆ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳಿಗೆ ಸೂಚಿಸಲಾಗಿದೆ. ಅದರಂತೆ ರೂರಲ್ ರಿಸೋರ್ಸಸ್ ಡೆವಲಪ್‍ ಮೆಂಟ್

ಖಾದಿ ವಸ್ತ್ರಗಳ ವಿಶೇಷ ರಿಯಾಯಿತಿ ಮಾರಾಟ Read More »

ಕರಾವಳಿ

ಎಲೆ ಚುಕ್ಕೆ ಸೇರಿ ಅಡಿಕೆ ರೋಗ ಬಾಧೆ- ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ ನಿಯಮ 377ರಡಿ ತಿದ್ದುಪಡಿಗೆ ಒತ್ತಾಯ

(ನ್ಯೂಸ್ ಕಡಬ) newskadaba.com ಜು. 20. ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಅಡಿಕೆ ಬೆಳೆಗಾರರನ್ನು ತೀವ್ರವಾಗಿ ಕಾಡುತ್ತಿರುವ ಎಲೆ ಚುಕ್ಕಿ, ಹಳದಿ ಎಲೆ ಹಾಗೂ ಕೊಳೆ ರೋಗಗಳಿಗೆ ವೈಜ್ಞಾನಿಕ ಪರಿಹಾರ ಒದಗಿಸಬೇಕು ಹಾಗೂ ತೋಟಗಾರಿಕಾ ಮಿಷನ್ (MIDH) ನಿಯಮಾವಳಿಗಳಿಗೆ ತಿದ್ದುಪಡಿ ತರಬೇಕೆಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಲೋಕಸಭೆಯಲ್ಲಿ ನಿಯಮ 377ರಡಿ ಒತ್ತಾಯಿಸಿದ್ದಾರೆ.   ಸದನದಲ್ಲಿ ಈ ಗಂಭೀರ ವಿಷಯವನ್ನು ಪ್ರಸ್ತಾಪಿಸಿದ ಸಂಸದರು, ಕರಾವಳಿ ಹಾಗೂ ಮಲೆನಾಡು ಭಾಗದ ಅಡಿಕೆ ತೋಟಗಳು ಪುನರಾವರ್ತಿತವಾಗಿ ಬರುವ ವಿವಿಧ ರೋಗಗಳಿಂದ ತೀವ್ರವಾಗಿ ಹಾನಿಗೊಳಗಾಗುತ್ತಿವೆ. ಈ ರೋಗಗಳ ನಿವಾರಣೆಗೆ ರೋಗ ನಿರ್ಣಯ, ತೋಟದ ನೈರ್ಮಲ್ಯ, ಪೋಷಕಾಂಶಗಳ ಪೂರೈಕೆ, ಸೂಕ್ತ ಡ್ರೈನೇಜ್ ವ್ಯವಸ್ಥೆ, ನಿರಂತರ ಮೇಲ್ವಿಚಾರಣೆ ಹಾಗೂ ವ್ಯಾಪಕವಾಗಿ ಬಾಧಿತಗೊಂಡ ತೋಟಗಳಲ್ಲಿ ರೀಪ್ಲಾಂಟೇಷನ್ ಮಾಡುವಂತಹ ಪೂರ್ಣ ಪ್ರಮಾಣದ ವೈಜ್ಞಾನಿಕ ನಿಯಂತ್ರಣ ಅಥವಾ ಚಿಕಿತ್ಸಾ ಕ್ರಮಗಳ ಅಗತ್ಯವಿದೆ. ಸದ್ಯ

ಎಲೆ ಚುಕ್ಕೆ ಸೇರಿ ಅಡಿಕೆ ರೋಗ ಬಾಧೆ- ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ ನಿಯಮ 377ರಡಿ ತಿದ್ದುಪಡಿಗೆ ಒತ್ತಾಯ Read More »

ಕರಾವಳಿ, ಕರ್ನಾಟಕ

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ- ಬಂಧನ

(ನ್ಯೂಸ್‌ ಕಡಬ) newskadaba.com ಜು. 21. ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ ಗರ್ಭಿಣಿಯಾಗಿರುವ ಪ್ರಕರಣದ ಸಂಬಂಧ ಬೆಳ್ತಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಉಪ್ಪಿನಂಗಡಿ ನಿವಾಸಿ ಶುಭರಾಜ್ ಎಂದು ಪೊಲೀಸರು ಗುರುತಿಸಲಾಗಿದೆ. ವರದಿಯ ಪ್ರಕಾರ, ಬೆಳ್ತಂಗಡಿಯ 16 ವರ್ಷದ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ್ದ ಆರೋಪಿಯು, ಈ ವಿಷಯವನ್ನು ಯಾರಿಗೂ ತಿಳಿಸದಂತೆ ಬೆದರಿಕೆಯೊಡ್ಡಿದ್ದ ಎನ್ನಲಾಗಿದೆ. ಇತ್ತೀಚೆಗೆ ಬಾಲಕಿಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಾಗ ಆಕೆಯ ತಾಯಿ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆಗೆ ಒಳಪಡಿಸಿದಾಗ ಬಾಲಕಿ

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ- ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಜಪಾನ್ ಓಪನ್ ಚಾಂಪಿಯನ್- ಟೋಕಿಯೋದಲ್ಲಿ ಸಿಂಧು ಹೊಸ ಇತಿಹಾಸ!

(ನ್ಯೂಸ್ ಕಡಬ) newskadaba.com ಜು. 20. ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಜಪಾನ್ ಓಪನ್ ಸೂಪರ್ 750 ಟೂರ್ನಿಯಲ್ಲಿ ಚಾಂಪಿಯನ್ ಆಗುವ ಮೂಲಕ ಭಾರತೀಯ ಬ್ಯಾಡ್ಮಿಂಟನ್ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದಿದ್ದಾರೆ. ಫೈನಲ್‌ ನಲ್ಲಿ ಆತಿಥೇಯ ಜಪಾನ್‌ ನ ವಿಶ್ವ ನಂ.3 ಆಟಗಾರ್ತಿ ಅಕಾನೆ ಯಮಗುಚಿ ಅವರನ್ನು 21-17, 21-17 ನೇರ ಗೇಮ್‌ ಗಳಲ್ಲಿ ಮಣಿಸಿದ ಸಿಂಧು, ಜಪಾನ್ ಓಪನ್ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಆಟಗಾರ್ತಿ ಎಂಬ ಅಪೂರ್ವ ಸಾಧನೆ ಮಾಡಿದ್ದಾರೆ.  

ಜಪಾನ್ ಓಪನ್ ಚಾಂಪಿಯನ್- ಟೋಕಿಯೋದಲ್ಲಿ ಸಿಂಧು ಹೊಸ ಇತಿಹಾಸ! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್

ಅರ್ಜೆಂಟೀನಾಗೆ ಶಾಕ್: ವಿಶ್ವಕಪ್ ಎತ್ತಿಹಿಡಿದ ಸ್ಪೇನ್!

(ನ್ಯೂಸ್ ಕಡಬ) newskadaba.com ಜು. 20. ರೋಚಕದಿಂದ ಕೂಡಿದ್ದ ಫಿಫಾ ವಿಶ್ವಕಪ್ 2026ರ ಫೈನಲ್ ಮಹಾಸಮರದಲ್ಲಿ ಹಾಲಿ ಚಾಂಪಿಯನ್ ಅರ್ಜೆಂಟೀನಾವನ್ನು 1-0 ಗೋಲುಗಳ ಅಂತರದಿಂದ ಮಣಿಸಿದ ಸ್ಪೇನ್ ತಂಡ ಹೊಸ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಭಾನುವಾರ ನಡೆದ ಈ ಹೈ–ವೋಲ್ಟೇಜ್ ಪಂದ್ಯದ ನಿಗದಿತ 90 ನಿಮಿಷಗಳ ಅವಧಿಯಲ್ಲಿ ಎರಡೂ ತಂಡಗಳು ಗೋಲು ಗಳಿಸಲು ಸಾಧ್ಯವಾಗದಿದ್ದಾಗ ಪಂದ್ಯವು ಹೆಚ್ಚುವರಿ ಸಮಯಕ್ಕೆ ಜಾರಿತು. ಹೆಚ್ಚುವರಿ ಸಮಯದ 106ನೇ ನಿಮಿಷದಲ್ಲಿ ಬದಲಿ ಆಟಗಾರ ಫೆರಾನ್ ಟೊರೆಸ್ ಬಾರಿಸಿದ ಏಕೈಕ ಗೋಲು

ಅರ್ಜೆಂಟೀನಾಗೆ ಶಾಕ್: ವಿಶ್ವಕಪ್ ಎತ್ತಿಹಿಡಿದ ಸ್ಪೇನ್! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್

ಬಂಟ್ವಾಳದಲ್ಲಿ ಅಗ್ನಿ ಅವಘಡ – ಹಸುವಿನ ಕೊಟ್ಟಿಗೆ ಸುಟ್ಟು ಭಸ್ಮ

(ನ್ಯೂಸ್ ಕಡಬ) newskadaba.com ಜು. 20. ಆಕಸ್ಮಿಕವಾಗಿ ಬೆಂಕಿ ಹೊತ್ತಿ ಉರಿದ ಪರಿಣಾಮ ಮನೆಯ ಹಿಂಭಾಗದಲ್ಲಿದ್ದ ಬಚ್ಚಲು ಮನೆ ಹಾಗೂ ಹಸುವಿನ ಕೊಟ್ಟಿಗೆ ಸಂಪೂರ್ಣ ಭಸ್ಮವಾದ ಘಟನೆ ಬೆಳ್ತಂಗಡಿ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು–ಕುಕ್ಕಾಜೆ ಎಂಬಲ್ಲಿ ಸೋಮವಾರ ಮುಂಜಾನೆ ಘಟನೆ ನಡೆದಿದೆ.     ಬೆಂಕಿಯ ಜ್ವಾಲೆ ಕ್ಷಣಾರ್ಧದಲ್ಲೇ ವ್ಯಾಪಿಸಿದ ಪರಿಣಾಮ ಬಚ್ಚಲು ಮನೆ ಹಾಗೂ ಹಸುವಿನ ಕೊಟ್ಟಿಗೆ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್ ಸ್ಥಳೀಯ ನಿವಾಸಿಗಳು ಸಮಯಪ್ರಜ್ಞೆ ಮೆರೆದು ಕೊಟ್ಟಿಗೆಯೊಳಗಿದ್ದ ದನಗಳನ್ನು ಸುರಕ್ಷಿತವಾಗಿ ಹೊರಗೆ ಕರೆತಂದಿದ್ದರಿಂದ ಜಾನುವಾರುಗಳಿಗೆ

ಬಂಟ್ವಾಳದಲ್ಲಿ ಅಗ್ನಿ ಅವಘಡ – ಹಸುವಿನ ಕೊಟ್ಟಿಗೆ ಸುಟ್ಟು ಭಸ್ಮ Read More »

ಕರಾವಳಿ, ಕ್ರೈಮ್ ನ್ಯೂಸ್

ವಂಶವೃಕ್ಷ ಪ್ರಮಾಣಪತ್ರ ವಿತರಣೆಗೆ ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ ಪ್ರಕಟ

(ನ್ಯೂಸ್ ಕಡಬ) newskadaba.com ಜು. 20. ಕರ್ನಾಟಕ ಸರಕಾರ ವಂಶವೃಕ್ಷ ದೃಢೀಕರಣ ಪತ್ರ ನೀಡುವ ಕುರಿತು ರಾಜ್ಯಾದ್ಯಂತ ಏಕೀಕೃತ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಸುತ್ತೋಲೆ ಹೊರಡಿಸಿದ್ದು, ಇನ್ನು ಮುಂದೆ ವಂಶವೃಕ್ಷ ದೃಢೀಕರಣ ಪತ್ರವನ್ನು ಆನ್‍ ಲೈನ್ ತಂತ್ರಾಂಶದ ಮೂಲಕ ಮಾತ್ರ ನೀಡಲಾಗುವುದು. ಅರ್ಜಿದಾರರು 100 ರೂ. ಛಾಪಾ ಕಾಗದದಲ್ಲಿ ನೋಟರಿ ದೃಢೀಕೃತ ಅಫಿಡವಿಟ್, ಆಧಾರ್ ಕಾರ್ಡ್ ಹಾಗೂ ಕುಟುಂಬದ ಸದಸ್ಯರ ಗುರುತಿನ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕಾಗಿದೆ. ಅರ್ಜಿಯನ್ನು

ವಂಶವೃಕ್ಷ ಪ್ರಮಾಣಪತ್ರ ವಿತರಣೆಗೆ ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ ಪ್ರಕಟ Read More »

ಕರ್ನಾಟಕ

ಬಾವಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ ಕೊಲೆ ಶಂಕೆಯಡಿ ಸಹೋದರನ ಬಂಧನ

(ನ್ಯೂಸ್ ಕಡಬ) newskadaba.com ಜು. 20. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೊಕ್ಕಬೆಟ್ಟುವಿನ ಕೃಷ್ಣಾಪುರ ಮಠ ಸಮೀಪದ ಬಾವಿಯಲ್ಲಿ 20 ವರ್ಷದ ಯುವಕನ ಮೃತದೇಹ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮೃತನನ್ನು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮಲ್ಲಿಕಾರ್ಜುನ (20) ಎಂದು ಗುರುತಿಸಲಾಗಿದೆ. ಇವರು ಉದ್ಯೋಗ ನಿಮಿತ್ತ ಮಂಗಳೂರಿಗೆ ಬಂದು ಬಾಡಿಗೆ ಮನೆಯಲ್ಲಿದ್ದುಕೊಂಡು ಕೂಲಿ ಕೆಲಸ ಮಾಡುತ್ತಿದ್ದರು. ಮೃತನೊಂದಿಗೆ ವಾಸವಿದ್ದ ಆತನ ಅಣ್ಣ ಸೋಮನಾಥ್ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಆತನೇ ಪ್ರಮುಖ ಶಂಕಿತನೆಂದು

ಬಾವಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ ಕೊಲೆ ಶಂಕೆಯಡಿ ಸಹೋದರನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top